ಒಟ್ಟು 734 ಕಡೆಗಳಲ್ಲಿ , 90 ದಾಸರು , 657 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತವನಲ್ಲೊ ಮುರಾರಿ ನಿನಗೆ ನಾಮತ್ತವನಲ್ಲೊ ಮುರಾರಿ ನಿನ್ನಭೃತ್ಯರ ಭೃತ್ಯರ ಭೃತ್ಯರ ಭೃತ್ಯನಿಗೆತ್ತಣ ಸ್ವಾತಂತ್ರ್ಯ ಸಲಹಯ್ಯಶೌರಿಪ.ರಂಗಾ ನೀ ಕೊಳ್ಳದ ಬಂಗಾರ ತಳಿಗ್ಯೂಟನುಂಗುವ ಮತ್ತವನಲ್ಲೊರಂಗಾ ನಿನ್ನ ಮರೆದಂಗನೆಯರನಾಲಂಗಿಸಿ ಮತ್ತವನಲ್ಲೊರಂಗಾ ನಿನ್ನೊಲುಮೆಯ ಡಿಂಗರರಂಘ್ರಿಗೆರಂಗದೆ ಮತ್ತವನಲ್ಲೊರಂಗಾ ನಿನ್ನೆಂಜಲೆನ್ನಂಗೈಯೊಳುಂಡು ರಾಜಂಗಳನುಡುಗುವ ಬಡವ ನಾನಲ್ಲದೆ 1ನಾಥನೆ ನಾನೆಂದು ಮಾತು ಕಲಿತುಖಳವ್ರಾತಸಂಗದಿ ಮತ್ತವನಲ್ಲೊನಾಥ ನಿನ್ನ ಮೀರಿದಾತನುಂಟೆಂದು ನಿರ್ಭೀತಿಲಿ ಮತ್ತವನಲ್ಲೊನಾಥ ನಿನ್ನ ಗುಣಖ್ಯಾತಿ ಹೊಗಳದನ್ಯಸ್ತೌತ್ಯದಿ ಮತ್ತವನಲ್ಲೊನಾಥ ನಿನ್ನಡಿಯ ತೀರಥವೆ ಗತಿಯೆಂದುಯಾತನೆಗಂಜುವ ಬೆದರುಗುಳಿಯಲ್ಲದೆ 2ತಂದೆ ನೀ ಮಾರಿದರೊಂದೊಪ್ಪು ಕೊಂದರೊಪ್ಪೆಂದಿಗೆ ಮತ್ತವನಲ್ಲೊತಂದೆ ನಿನ್ನ ಮನೆ ಹೊಂದಿದಟ್ಟಣೆಗೈದಿಬಂಧಿಸು ಮತ್ತವನಲ್ಲೊತಂದೆ ನಿನ್ನಾಯುಧ ಸಂದು ಸಂದಿಗೆ ಕಾಸಿತಂದಿಡು ಮತ್ತವನಲ್ಲೊತಂದೆ ಪ್ರಸನ್ನವೆಂಕಟಿಂದಿರೇಶನೊಬ್ಬ ಅಹುದೆಂದ ಸೊಕ್ಕೊಂದುಳ್ಳವನಲ್ಲದೆ 3
--------------
ಪ್ರಸನ್ನವೆಂಕಟದಾಸರು
ಮಾನಹೀನರಿಗೆ ಅಭಿಮಾನವೇಕೆ - ಪ್ರಧಾನಿಯಿಲ್ಲದ ಅರಸುತನವೇಕೆ ಕೃಷ್ಣಾ ? ಪ.ಕಾಡಿನೊಳು ತಿರುಗುವಗೆಕನಕ ಭೂಷಣವೇಕೆ ?ಓಡಿನಲಿ ಉಂಬುವಗೆ ಹರಿವಾಣವೇಕೆ ?ಬೇಡಿದರೆ ಕೊಡದ ಲೋಭಿಗೆ ಬಿಂಕವೇಕೆ ?ಪಾಡಲರಿಯದೆ ಪ್ರೌಡತನವೇಕೆ ಕೃಷ್ಣಾ ? 1ಪತಿ ಮೀರಿ ನಡೆವಳ ವ್ರತ ನೇಮತನವೇಕೆ ?ಸತಿಗಳುಕಿ ನಡೆವವಗೆ ಸ್ವಾತಂತ್ತ್ಯವೇಕೆ ?ಮತಿಗೆಟ್ಟು ತಿರುಗುವಗೆ ಮಂತ್ರ - ತಂತ್ರಗಳೇಕೆ ?ಅತಿಯಾಸೆ ಬಿಡದ ಸಂನ್ಯಾಸಿ ತಾನೇಕೆ 2ಕಾಮವಿಲ್ಲದವರಿಗೆ ಕಾಂತಿಯರ ಗೊಡವೇಕೆ ?ಪ್ರೇಮವಿಲ್ಲದ ಬಂಧು - ಬಳಗವೇಕೆ ?ಸ್ವಾಮಿ - ಶ್ರೀ ಪುರಂದರವಿಠಲ ನೆನೆಯದತಾಮಸದ ಜನರಿಂಗೆ ಕೈವಲ್ಯವೇಕೆ ? 3
--------------
ಪುರಂದರದಾಸರು
ಮಾಯೆಎನ್ನ ಕಾಯವನ್ನುಪಾಯದಿಂದ ಮೋಹಿಸಿ |ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಪಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ |ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು ||ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು |ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ 1ಎಲವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು |ಒಳಗೆ ರಕ್ತದಿಂದ ಮೆತ್ತಿ ಹೊಸೆ ಪಾಪದಿಂದ ನಿಂದೆ ||ನೆಲೆಯ ಮನೆಯ ಮಾಡಿ ಚರ್ಮಹೊಲಿzಯ ಹೊದಿಕೆ ಹೊದಿಸಿದಂಥ |ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ 2ಎನ್ನ ಸತಿಯು ಎನ್ನ ಸುತರು ಎನ್ನ ಬಂಧು - ಬಳಗವು |ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು ||ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ |ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ 3ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ |ಹರಿದು ಪಾಪಕರ್ಮದಿಂದೆ ತೊಪಳಲಿಬಳಲಿ ನೊಂದೆ ನಾ ||ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ |ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ 4ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ |ಅಕ್ಷಯ- ಅನಂತ ನನ್ನನೇಕೆ ಹೊರಗೆ ಮಾಡಿದೆ ||ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು |ರಕ್ಷಿಸಯ್ಯ ಲಕ್ಷೀಪತಿಪುರಂದರವಿಠಲನೆ5
--------------
ಪುರಂದರದಾಸರು
ಮಾರನೈಯ್ಯನೆ ಕೇಳಾಕಲಿವ್ಯಾಪ್ತಿ ಆದದ್ದು |ಆರಾ ಮುಂಧೇಳಿ, ಎನ್ನುಬ್ಬಸ ಕಳಕೊಳ್ಳಲ್ಯೋ ಪನಳ ಪ್ರಮುಖರು ತೋಟಕ ಬೀಜ ಬಿತ್ತಿ ನೀರೆರ |ಧಾಳು, ನಾಟಲಿಲ್ಲೆಂದವರಾಸಿ ಗೊರವ ಬಾಳು1ನಳ ಪ್ರಮುಖರು ಪೂಜಿಸಿದ ಗುಡಿ ಹಾಳು |ಹಲವರು ಬಳಸಲು ಈಚಲ ಹಾಳು 2ಜಲ ತೃಣ ದುರ್ಲಭ ವೈದನ ಹಾಳು |ಬೆಳದೀತೆ ಭೂಪುರಾ ಎಂಬಾಸಿ ಹಾಳು 3ಹೊನ್ನಹಳ್ಳಿ ದೊಡ್ಡವು ಕಲ್ಲೂರು ಮಣ್ಣೂರು |ಅನ್ನಿಲ್ಲ ದ್ವಿಜರಿಘೊಟ್ಟಿ ತುಂಬಾ ಹೆಸರೂರು 4ಊರ ಮುಂದಿದ್ದಷ್ಟೆವೆ ಅಡವಿ ಭಾವಿ ಮೀರಿ |ದೂರ ಹೋದರೆ ಹಾಳ್ಕೇರಿ ನೀರಲಕೇರಿ 5ಅಧಮರು ಹೊನ್ನಾಕುಪ್ಪಿ ಛತ್ರವ ಪಡವರು |ಬುಧರ ಸದನಗಳಾದವು ತಿಪ್ಪಿ ತೆವರೂ 6ಕನಸವಿ ರಳಮತ ಕೈಯೋಳಗಲಗೂ |ಅನುಚಿತದಿಂದ ವಿಪ್ರರಾದರು ಭಣಗೂ 7ಸುಳ್ಳೆಷ್ಟು ಹಾಳಭಾವಿ ಗುಂಡಸಾಗರೆಂಬೋರು |ಎಲ್ಲೆಲ್ಲಿ ನೋಡೆ ಗುಡ್ಡಾ ಇಲ್ಲ ಕಲ್ಲೆಂಬೋರು8ಸೊನ್ನವೆಂಬಾರೂರೀಗೆ ಭಂಗಾರ ಗೊಂಡೆಂಬರೂ |ಸಣ್ಣ ಹಳ್ಳಿಗೆ ಚನ್ನ ಪಟ್ಟಣೆಂಬುವರೂ9ಬೆಲ್ಲಾದ ಮೊರಡಿ ಹತ್ತಿಗುಡ್ಡಾ ಯಮ್ಮಿಗುಡ್ಡೆಂಬೋರು |ಅಲ್ಲೆಲ್ಲಿ ವ್ರಾತ್ಯರೇವೆ ಬಲುಗಿಂಚರಿಹರು 10ಹುಲಿಗುಡ್ಡಾ ಕರಡಿ ಚಿರ್ಚಾ ದೇಶದೊಳೆಲ್ಲಾ |ಸಲಹೋದು ನೀ ಬಲ್ಲಿ ಪ್ರಾಣೇಶ ವಿಠಲಾ 11
--------------
ಪ್ರಾಣೇಶದಾಸರು
ಮಾರಮದಘನಸಮೀರಮಧ್ವಮತೋ-ಮುನಿ ನಿಮ್ಮ ಮಹಿಮೆಯನು ತಿಳಿಯದಲೆ ದಂಡೆತ್ತಿಕುಸುಮಾಸ್ತ್ರಾನÀಂಗನಾಗಲು ಉಡುಸಹಿತ (ಹಿಮಗು-ಮಾರನಪಜಯಕಂಡು ಕ್ರೋಧಾದಿವರ್ಗಗಳು
--------------
ಗೋಪಾಲದಾಸರು
ಯಾಕೆ ಬೆಟ್ಟವನೇರಿ ನಿಂದೆಅವನಿವೈಕುಂಠವೆಂದೆ ಆವಿಧಿಸ್ಮರರ ತಂದೆಪ.ತಮನೆಂಬರಿಯ ತರಿದು ತರಿದು ನಿಗಮವ ತಂದುಕ್ರಮದಿ ಕಮಲೋದ್ಭವಗೆ ಕೊಡುವೆನೆಂದೇರಿದೆಯೊಕಮಲವ್ವೆ ಬರೆ ಕಂಡು ಕಲ್ಲ ಭಾರವನಿಳುಹಿಭ್ರಮಿಸಿರುವಭಾವತೋರಿದೆಯೊ ಖಳೋತ್ತಮನ ದಾಡೆಯಲರಿದು ಈ ತಾಣವೇರಿದೆಯೊ 1ಧೀರ ಶಿಶುವಿನಹಗೆವಿದಾರಿಸುತ ದಶದಿಶದಿಸಾರಿದ ನಿಜರ ನೋಡಿ ಸಲಹಲಿಲ್ಲೇರಿದೆಯೊಮೀರಿ ಮೆರೆವನ ತಲೆಯ ಮೆಟ್ಟಿ ಪಾತಾಳಕಿಳುಹಿತೋರಿದೆಯೊ ತ್ವತ್ಪಾದದಿರವ ಧರೆಯಪಾರುವರಿಗೊಲಿದಿತ್ತ ಪರಿಯಲೇರಿದೆಯೊ 2ಅಸುರ ನೊಯಿದರಸಿಯಳ ಅರಸ ತಂದೇರಿದೆಯೊಪಶುಗಾವಿ ಯೋಗಗಳ ಪುರವ ಪೊಗಲೇರಿದೆಯೊಹೊಸಧರ್ಮಹೊಲಬುತೋರಿದೆಯೊ ಇದರಪೆಸರರುಹಿ ಪೊರೆಯೆನ್ನ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಯೋಗಿಯ ನೋಡಿರೋ ಸದ್ಗುರು ಯೋಗಿಯ ನೋಡಿರೋಯೋಗಿಚಿದಾನಂದಾವಧೂತ ಗುರುದೊರೆಯ ಸದ್ಗುಣ ಚರಿತನಪಆಶಾಪಾಶಗಳೆಂಬುವನೆಲ್ಲವಜರಿದುವಾಸನೆತರಿದುದೋಷದುರ್ಗ ಜನನಾದಿಗಳನು ಬಳಿದು ಸಂಶಯ ತುಳಿದುಕ್ಲೇಶಪಂಚಕ ಕಾಮಕ್ರೋಧವ ಕಡಿದು ಮುಂದಕೆ ನಡೆದುಭಾಸುರತೇಜದಿ ತೋರುವ ಪ್ರಭೆಯನುಕೂಡುವ ತಲೆಯೊಲಿದಾಡುವ1ಬಲಿದಾಧಾರವ ಕುಂಭಕದಿಂದಲಿ ಬಲಿಸಿ ವಾಯುವ ನಿಲಿಸಿನೆಲೆಯನೆ ಹತ್ತಿ ಆ ನೆಲೆಯನೆ ನಿಲುಕುತ ಮತ್ತಾನೆಲೆಯ ಹೊಲಬಲಿ ತೋರುವಭಾಸ್ಕರಕೋಟಿಯ ಮೀರಿಕಳೆಗಳ ತೋರಿ ಥಳಥಳ ಥಳಿಸಿಯೆ ಮೆರೆವಾ ಆತ್ಮನ ನೋಡುವ ಸಂತಸಪಡುವ2ಆರು ಚಕ್ರಗಳಲಿ ತೋರುವ ದಳಗಳನರಿದು ಅದರೊಳು ಬೆರೆತುಭೋರಿಡುತಿಹ ದಶನಾದದ ಬೊಬ್ಬೆಯಕೇಳಿಹರುಷವ ತಾಳಿ ಚಾತುರದಿ ಮೆರೆಯುತಲಿಹ ಜ್ಯೋತಿಯಸಾರಸೇವಿಪ ಶೂರಧಿರ ಚಿದಾನಂದಾವಧೂತಾತ್ಮ ಗುರುವಾ ಎನ್ನನು ಪೊರೆವಾ3
--------------
ಚಿದಾನಂದ ಅವಧೂತರು
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ರಕ್ಷಿಸಲರಿಯಾ ರಂಗಯ್ಯ ರಕ್ಷಿಸಲರಿಯಾ ಪ.ರಕ್ಷಿಸಲರಿಯೇನೊ ಲಕ್ಷ್ಮೀಪತಿ ಎನ್ನಈಕ್ಷಿಸಿ ಕರುಣಕಟಾಕ್ಷದಿ ಭಕ್ತನ ಅ.ಪ.ಭಾರವಾಗಿಹೆನೇನೊ ರೋಮಕುಳಿಗಳೊಳುಭೂರಿಬ್ರಹ್ಮಾಂಡಗಳನಿಟ್ಟಿಹಗೆಮೀರಿದವನೇನಯ್ಯ ಬೆಲೆ ಪೇಳಿ ಕೈಗಟ್ಟಿಮಾರುವ ಭಟರಲ್ಲಿ ನಾ ಪೇಳುವೆನು 1ಜಿತಮನನಲ್ಲೆಂದು ಹತ ಮಾಡೋದುಚಿತವೆಪ್ರತಿಕ್ಷಣಕೊದಗೊ ತಂದೆ ಜಿಹ್ವೆಗೆಅತಿತನಕಘ ಮುತ್ತೇಳದಿದ್ದರೆ ನಿನ್ನಪತಿತ ಪಾವನನೆಂಬೋರೆ ಚೀರುವರೆ 2ಆಚಾರವಿಹೀನನೆಂದೋಕರಿಸಲಿ ಬೇಡನೀಚೋದ್ಧಾರಕ ಬಿರುದು ನೀ ತಳೆದೆಪ್ರಾಚೀನ ಕರ್ಮದಿಂದಲಿ ನಾ ದಣಿದಮೇಲೆನಾಚಿಕಿನ್ಯಾರಿಗಯ್ಯ ಹೇಜೀಯ3ದೋಷಿ ನಾನೆಂದು ದೂರಿಡದಿರೊ ತವನಾಮಘೋಷಣೆಗುಳಿವುದೇನೊ ಪಾಪೇನೊಹೇಸಿ ದರಿದ್ರನೆಂಬುವರದ್ಯಾರೊ ನಿನ್ನಭಿಲಾಷೆವಿಡಿದ ಬಳಿಕ ಹೇ ಶ್ರೀಶ 4ಡೊಂಕುನಡೆವರ ಕೊಂಕು ತಿದ್ದುವೆ ನೀಸಂಖ್ಯೆಗಾಣೆನೊ ಕೊನೆಗೆ ಕೃಪೆಗೆಲೆಂಕರಲಿ ಮನವಿದ್ದರೆ ಸಾಕು ಪ್ರಸನ್ನವೆಂಕಟ ಸಾರ್ವಭೌಮನಿಷ್ಕಾಮ5
--------------
ಪ್ರಸನ್ನವೆಂಕಟದಾಸರು
ರಸಿಕರವರ ಪ್ರಿಯರಸ ಕಾವನು ಭಕ್ತಿಕುಶಲನಿಗಿಹಪರಕುಶಲಾಘ ದೂರ ಪ.ಪಥಮನೆ ವನದಿ ಶ್ರೀಪತಿ ಮಹಿಮೆ ಘೋಷಿಸಿಪ್ರಥಮ ಯಾಮದಿ ಹರಿಪ್ರತಿ ಮುದವೇರಿಸ್ತುತಿಸಿ ತಾರತಮ್ಯದ ಸ್ಥಿತಿ ಸನ್ಮತದೊಳಿದ್ದುಸತಿತನುಜಸೌರಂಭ ಸತತ ಹರಿಯದೆಂಬ1ಹಿತಾಹಿತವರಿದು ವಿಹಿತಹೇತು ಬಲಿದು ವಿರತಿಭಕ್ತಿ ಜ್ಞಾನ ನಿರುತ ಭೇದ ನಿರತನಾಗಿ ಕುಜನವಾರತೆಯ ಕೇಳದಿರುವಚತುರರಸುಕೃತಸಂಚಿತದಿರವೇ ಲೇಸು2ವಿಷಮೀರೈದಿಂದ್ರಿಯ ವಶಮಾಡಿ ಮನೋರಿಯೋಲ್ಸುಸುಖಾವಿಡಿದುಕೊಂಬಾ ಸುಸುಖಾವುಂಬಭೈಷಜ್ಯ ಭವರೋಗ ಭೇಷಜನೆನಿಪ ಜಗಪ್ರಸನ್ನ ವೆಂಕಟೇಶಾಂಘ್ರಿ ಸ್ಪøಶ್ಯನಾದಾರೋಗ್ಯ 3
--------------
ಪ್ರಸನ್ನವೆಂಕಟದಾಸರು
ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು
ರಾಮ ರಾಮ ಸೀತಾರಾಮ ರಘುರಾಮ ಪ.ರಾಮ ರಾಮ ರಘುನಂದನ ತೋಷನಆಮಿಷ ಪಾದಾಂಬುಜ ಪಾವನನಾಮ ವಿಮಲ ಕಮಲಾಯತ ಲೋಚನಭೂಮಿಜಾರಮಣ ಸದಾ ಶುಭಮಹಿಮನೆ 1ದಂಡ ಕುಖರಹರ ವಂದಿತ ಸುಜಟಾಮಂಡಿತಮೌಳಿಮುನೀಂದ್ರ ಕರಾರ್ಚಿತಚಂಡಕುಲೇಶಖಳನಿಶಾಚರದಂಡನವರಕೋದಂಡವಿದಾರಿ2ವಾರಿದಶಾಮ ದಯಾಂಬುಧಿ ಭಕ್ತ ಸಮೀರಜಸೇವ್ಯವಿಭೀಷಣವರದ ಸುಸ್ಮೇರವದನ ಸಾಮ್ರಾಜ್ಯ ಪಾರಾಯಣಭೂರಿಪ್ರಸನ್ವೆಂಕಟ ಕೃಷ್ಣ ನಮೊ3
--------------
ಪ್ರಸನ್ನವೆಂಕಟದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ಲಕ್ಷ್ಯವ ಹಿಡಿದೆ ಅಂದವಳಲಕ್ಷ್ಯನಿಂತೆ ನೀನೇ ಬ್ರಹ್ಮವಾಗಿ ಹೊಳೆಯೋಪಸುಣ್ಣದ ಬಟ್ಟಿಸುಟ್ಟಂತೆಕೆಂಗಣ್ಣಲಿ ತಂಬಾಕವ ನೊಣ ನೋಡಿದಂತೆನಿನ್ನೊಳಾಪರಿ ಲಕ್ಷ್ಯನಿಂತೇತೇಜತಾನಾಗಿಯೇ ಬೆಳಗೋದು ಚಿಕ್ಕೆಯಂತೆ1ಒಡವೆಯ ಅಮರಿಸಿದಂತೆಕಾಲಡಿ ಮುಳ್ಳ ಚಿಮ್ಮಟಿಗೆಯು ಹಿಡಿದಂತೆದೃಢದಲೀಪರಿಲಕ್ಷ್ಯನಿಂತೇಕಿಡಿಕಿಡಿಯ ಕೆಂಕರಿಗೆದರಿ ಹರಡುವ ಕಾಂತಿಯಂತೆ2ಕಳೆಗಳು ಬಹುತೇಜತೋರಿ ನೋಡೆಕಳೆಯಡಗಿದ ಶುದ್ಧಮಂಡಲದಪರಿಥಳಥಳರವಿಕೋಟಿ ಮೀರಿಬಲು ಸುಲಭ ಚಿದಾನಂದ ಕಾಣುವುದೀಪರಿ3
--------------
ಚಿದಾನಂದ ಅವಧೂತರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು