ಒಟ್ಟು 1432 ಕಡೆಗಳಲ್ಲಿ , 103 ದಾಸರು , 1184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಭಾಗವತರ ಭಾಗ್ಯೋದಯ ಭೋಗಿಶಯನ ಭಜಕ ಪ್ರಿಯ ಪ ಪಾಲಸಾಗರ ಕನ್ಯಾರಮಣ ನೀಲಶ್ಯಾಮ ಲೋಲಗಾನ ಕಾಳಿಮರ್ದನ ಕಾಲಹರಣ ಪಾಲಬಾಲೆ ಶೀಲಮಾನ 1 ಮೂರುಲೋಕ ಸೂತ್ರಧಾರಿ ವಿನುತ ಶೌರಿ ವಾರಿಧಿಮಥನ ಮುರಸಂಹಾರಿ ಧಾರಿಣಿ ಪಾಲಿಪ ದಶಾವಾತಾರಿ2 ಶೂಲಪಾಣಿಸಖ ಸುನಾಮ ಮಾಲಕೌಸ್ತುಭ ಸತ್ಯಭಾಮಾ ಲೋಲ ಭಜಕರಘ ನಿರ್ನಾಮ ಮೇಲುಮಂದಿರ ಶ್ರೀರಾಮ ನಮೋ 3
--------------
ರಾಮದಾಸರು
ಭಾಗವತರಿಗೇ ನಮೋ ನಮೋ ಹರಿ | ಯೋಗವುಳ್ಳವರಿಗೆ ನಮೋ ನಮೋ ಪ ನಂದನದೊಳಗ ಅಳಿಕುಳಗಳು ಪುಳಕುತ | ನಲುವ ಪರಿಲಿ ಗುರುವಲುವಿನಲಿ | ಕಳವಳದಳಕವಗಳದುಳದಿಳೆಯೊಳು | ಹೊಳೆಯುತಲಿಹರಿಗೆ ನಮೋ ನಮೋ 1 ಸಿರಿ ಮದಜರಿದರಿಹರಿಯಂಕುರಮುರಿ | ದರಿಸಖರನು ಸರಿಯರಿದಿರುತಾ | ಪರಿಪರಿ ಮುಮ್ಮುಳಿ ತರುತರಿತರಿವುತ | ಚರಿಪರಿಗ್ಹರುಷದಿ ನಮೋ ನಮೋ | 2 ಸುಜನ ಕುಜನರೊಳಗ | ಘನವನು ಸಮತಿಳಿದನು ಭವದೀ | ಅನುದಿನ ಮಹಿಪತಿ ನಂದನ ಪ್ರಭುವಿನ | ನೆನೆಯುತಲಿಹರಿಗೆ ನಮೋ ನಮೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾಮಾರಮಣನೆ | ಶ್ಯಾಮಸುಂದರನೆ ಓ ಮಹಾಮಹಿಮ ಕೇಶವನೆ ಪ ಪ್ರೇಮಾನಂದ ಸುಧಾಮಾರ್ಚಿತ ಪದ ಶ್ರೀಮಹಿಜಾ | ಮಹಿಜಾ ಸಂಜೀವನೇ ಅ.ಪ ದೈತ್ಯಭಯಂಕರ ಮುನಿನಿಕರಾ ಸ್ತುತ್ಯದಿವಾಕರ ಭಕ್ತನಿಶಾಕರ ಮೌಕ್ತಿಕರುಚಿರಾ ಅಭಯಕರಾ 1 ಸುರಮುನಿಪಾಲಾ ಕರುಣಾಲವಾಲಾ ಮುರಳೀಲೋಲಾ ವನಮಾಲಾ ಮುರ ಬಕಕಾಲಾ ಹೃದಯವಿಶಾಲ ವರಮಾಂಗಿರಿಬಾಲಾ ಗೊಪಾಲಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಭಾರತೀಯ ರಮಣ ಪ್ರಾಣಾ | ಜಗಭಾರ ನಿನ್ನದಯ್ಯ ಪವನಾ ಪ ಘೋರದುರಿತ ಅಟವಿ ದಹನಾ | ಮಾರನಯ್ಯನ ತೋರೊ ಕರುಣ ಅ.ಪ. ಪಾದ ಪಾದ ಬಿಸಜ ಭವ ವಾರಿಧಿ ಮುರ | ವೈರಿಯ ಪದ | ತೋರುತ ಉ | ದ್ಧಾರವಗೈ 1 ದಿವಿಜ ವಿನುತಾ | ನೀ ಸಲಹೊ ಸಕಲ ವ್ಯಾಪ್ತಾ ||ವೀಶ ಶೇಷ | ಈಶಾ ಸುರ | ಪೇಶಾ ರವಿ | ಭಾಸಾ ಸ್ವಪ್ರಕಾಶಕ ಜಗ | ಪೋಷಕ ಚಿ | ತ್ತಾಕಾಶದಿ | ಭಾಸಿಸನಿಲ 2 ಕರಿ ಪರಿ ಪರಿಯಲಿ | ನಿರಂತರ 3
--------------
ಗುರುಗೋವಿಂದವಿಠಲರು
ಭಿಕ್ಷಾಂ ದೇಹಿಮೇ ಸ್ವಾಮಿನ್ ಕುಕ್ಷಿಯು ತುಂಬುವ ತೆರದಲಿ ಭಕ್ತಿಯ ಪ ಭಿಕ್ಷೆಯ ಬೇಡಲು ಶಿಕ್ಷಿತನಲ್ಲವೊ ಕುಕ್ಷಿಯು ಬರಿದಾಗಿಹುದು ಭಕ್ತಿಯ ಅ.ಪ ಆರುಮಂದಿ ಶತ್ರುಗಳಿರುವರು ಬಲು ಕ್ರೂರರಿವರು ಎನ್ನನು ಬಿಡರೊ ದೂರ ಕಳುಹಲಾಹಾರವು ಸಾಲದು ಶಮ ದಮ 1 ನಮ್ಮವರಿರುವರು ಹತ್ತುಮಂದಿಗಳು ಸುಮ್ಮನಿರರು ಒಂದರಘಳಿಗೆ ಸಮ್ಮತಿಗೊಡದಿರೆ ಬಳಲಿಸುವರು ಇವ ರ್ಹಮ್ಮನು ಮುರಿಯುವೆ ವಿಷಯ ವಿರಕ್ತಿಯ 2 ಕತ್ತಲೆಯಲಿ ಬಂದಿರುವೆನು ಹೊಟ್ಟೆಯು ಹತ್ತಿ ಹೋಯಿತೊ ಹಸಿವಿನಲಿ ಎತ್ತ ಸುತ್ತಿದರೂ ತುತ್ತನು ಕಾಣೆನೊ ಭಕ್ತ ಪ್ರಸನ್ನ ದಯಾಜಲನಿಧೇ ಜ್ಞಾನ 3
--------------
ವಿದ್ಯಾಪ್ರಸನ್ನತೀರ್ಥರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭುಜಂಗಶಯನಗೆ ಶೃಂಗಾರದಿಂದಲಿ ಪ ಶ್ರೀಧರಗೆ ಭೂಧವಗೆ ಯಾದವ ಗೋಕಾಯ್ದವಗೆ | ಮೋದದಿ ಮಧುಸೂದಗೆ | ಜಗದಾದಿ ಮೂರ್ತಿಗೆ | ಅಗಾಧಮಹಿಮಗೆ 1 ದಧಿ ಚೋರಗೆ | ಭವದೂರನಿಗೆ | ಶೌರಿಗೆ ಮುರವೈರಿಗೆ | ಗಿರಿಧಾರಿ ರಂಗಗೆ | ಅಪಾರ ಮಹಿಮಗೆ 2 ರಾಮಗೆ ತ್ರಿಧಾಮಗೆ | ಸಖಪ್ರೇಮಗೆ | ಗುಣಧಾಮನಿಗೆ | ಶಾಮಸುಂದರ ಸ್ವಾಮಿಗೆ | ಸುತ್ರಾಮನನುಜಗೆ ಸುಧಾಮಸಖನಿಗೆ 3
--------------
ಶಾಮಸುಂದರ ವಿಠಲ
ಮಂಗಳ ಮಂಗಳಾರತಿ| ಬೆಳಗುವೆನೀಗ| ಶೃಂಗರಿಸುತ ಸುಮ| ಸಂದೋಹದಿ ಪ ಮಂಗಲವನು ಹಾಡಿ| ಇಂಗಿತವನು ಬೇಡಿ| ಮಂಗಳಾತ್ಮಕಿ ದೇವಿಯ ಪಾದಕೆ ಅ.ಪ ಅಜಭವ ಸುರನರ| ತ್ರಿಜಗಪೂಜಿತ ಪಾದ| ಭಜಿಸುತ ಮನದೊಳು| ಮೊದಲೊಂದಿಸಿ|| ಪಾದ ಪೂಜೆಯ ಮಾಡಿ| ನಿಜಭಕ್ತಿಯಿಂದಲಿ| ಜಯ ಜಯವೆನ್ನುತ 1 ಮಂದರಧರ ನಿನ್ನ| ದ್ವಂದ್ವಪಾದಗಳನ್ನ| ಚಂದದಿ ಪೂಜಿಸಿ| ಭಜಿಸುತಲಿ|| ಕಂದರ್ಪನಯ್ಯನೆ| ಸಿಂಧುಶಯನನೆ| ಇಂದಿರೇಶನಿಗಾ| ನಂದದಿಂದಲಿ 2 ಮತ್ಸ್ಯವ ತಾರಿಗೆ| ಕೂರ್ಮಗೆ ವರಾಹಗೆ| ನರಹರಿ ರೂಪಗೆ| ವಾಮನಗೆ|| ಯಾದವಕುಲದೀಪ| ಮುರಲಿ ಕೃಷ್ಣಗೆ3 ಕಲ್ಕಿಸ್ವರೂಪದಿ| ಮೆರೆವವಗೆ|| ದಶವಿಧರೂಪದಿ| ಧರೆಯನು ಪೊರೆದ| ವಿಜಯವಿಠಲ ನಮ್ಮ| ಗುರುವೆಂಕಟೇಶಗೆ 4
--------------
ವೆಂಕಟ್‍ರಾವ್
ಮಂಗಳಂ ಜಯ ಮಂಗಳಂ ಜಯರುಕ್ಮ ಕಿರೀಟಿಗೆ ಮಂಗಳಂ ಪ ಮುರಹರ ರಾಣಿಗೆ | ಸುಖಕರ ವಾಣಿಗೆ |ಮುಖರಿತ ವೇಣಿಗೆ ಮಂಗಳಂ 1 ಕಿಸಲಯ ಪಾಣಿಗೆ | ರಸಲಯ ಜಾಣೆಗೆ |ಬಿಸರುಹ ಬಾಣಿಗೆ ಮಂಗಳಂ 2 ಮಂದರ ಸದನಿಗೆ | ಕುಂದರ ರದನಿಗೆ |ಚಂದಿರ ವದನಿಗೆ ಮಂಗಳಂ 3 ಸುರದರಶ ಮುನಿಗೆ | ಹರಗಿರ ಮುನಿಗೆ |ಕರಿವರ ಗಮನಿಗೆ ಮಂಗಳಂ4 ಕೃತಮತಿವಶಳಿಗೆ | ಶ್ರುತಿನುತಿ ಯಶಳಿಗೆ |ದ್ಯುತಿ ತತಿ ದಿಶಗಳಿಗೆ ಮಂಗಳಂ 5
--------------
ರುಕ್ಮಾಂಗದರು