ಒಟ್ಟು 2261 ಕಡೆಗಳಲ್ಲಿ , 117 ದಾಸರು , 1677 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿಂತ ಭಾವದ ಬಗೆಯನೆಂತು ಬಣ್ಣಿಪೆನುಚಿಂತಾಯಕನೆ ನೀನು ಚಿತ್ಸ್ವರೂಪದಲಿ ಪಸಕಲ ಲೋಕವ ಸೃಜಿಸಿ ಸಕಲದೊಳು ನೀ ನೆಲಸಿಸಕಲವನು ನಿನ್ನೊಳಗೆ ಸಲೆ ಸೇರಿಸಿಪ್ರಕಟಿಸಿದ ಜಗವೆಲ್ಲ ಪರಿಪರಿಯ ಕಲ್ಪದಲಿಪ್ರಕೃತಿಯಲಿ ಲಯವಾಗೆ ಪರಮ ಸದ್ರೂಪದಲಿ 1ಚಿತ್ರಕರ್ಮಗಳಿಂದ ಚರಿಸಿ ನಾನಾತ್ವದಲಿಚಿತ್ರದಂದದಿ ತೋರಿ ಚೈತನ್ಯವಾಗಿಕರ್ತೃಭೋಕ್ತøತ್ವದಲಿ ಕರಣಾದಿ ರೂಪದಲಿಚಿತ್ರರಚನೆಗೆ ಸಾಕ್ಷಿ ಚಿತ್ಸ್ವರೂಪದಲಿ 2ಹರಿ ಹರ ಬ್ರಹ್ಮ ಯಮ ಹರಿ ವರುಣ ಧನದಾದಿಸುರಮುನಿಗಳೊಳಗಿರುವ ಸುಖವೆಲ್ಲ ನಿನ್ನನಿರತಿಶಯ ಸುಖದಲ್ಲಿ ಲೇಶನೀನಿತ್ತವರವರದರವರೆಂದೆನಿಸಿ ಮೆರೆದು ಸುಖರೂಪದಲಿ 3ಈ ವಿಧದ ದೇವತೆಗಳಿರವ ನೋಡಿದರವರುದೇವ ನೀನೊಲಿದು ದಯಮಾಡಿದವರುಭಾವಿಸುತ ನಿನ್ನಂಘ್ರಿಕಮಲವನು ಭಕ್ತಿಯಲಿಭಾವ ನಿನ್ನೊಳು ನಿಲಲು ಭುವನೇಶ ನಿತ್ಯದಲಿ 4ಪರಿಪೂರ್ಣ ಪರಮೇಶ ಪರಮ ಮಂಗಳರೂಪಪರನೆನಿಸಿ ದೇಶಕಾಲಾದಿಗಳಿಗೆಗುರುಮೂರ್ತಿ ಶ್ರೀ ವಾಸುದೇವಾರ್ಯರೆಂದೆನೆಸಿತಿರುಪತಿಯ ವೆಂಕಟನೆ ಹೃದಯಕಮಲದಲಿ 5ಓಂ ಸರ್ವತೀರ್ಥಾತ್ಮಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ಕಲ್ಯಾಣಿಗೆ | ಶರಣು ಶರಣು ಲೋಕ ಜನನಿಗೆ | ಶರಣು ಮುಂದಣ ವಾಣಿಗೆ ಪ ಶ್ರದ್ಧೆ ಭಾರತಿ ಭಾಗ್ಯ ಸಂಪನ್ನೆ | ಪದ್ಮ ಮಂದಿರ ನಂದನೆ | ಭದ್ರ ಫಲದಾಯಕಳೆ ಕರುಣಾಬ್ಧಿಯೇ ಭಕ್ತರಪ್ರಿಯೇ 1 ಖಗಪನ್ನಗ ನಗಮಗಳ ಪತಿಯಿಂದ ಮಿಗಿಲೆನಿಪೆ ಶತಗುಣದಲಿ | ಮೃಗನಾಭಿ ನೊಸಲಲ್ಲಿ ಶೋಭಿಸೆ | ಮೃಗಕುರುಹ ಸಿರಿಮೊಗದವಳೆ2 ವಿಪ್ರ ಕನ್ನಿಕೆ | ಚಂದ್ರದಿ ಸ್ಥಾನವಾಸಳೆ | ಸಿರಿ ವಿಜಯವಿಠ್ಠಲನ |ವಂದಿಸುವ ದ್ರೌಪದಿದೇವಿ 3
--------------
ವಿಜಯದಾಸ
ನಿತ್ಯ ನಿಜಾನಂದನಿರ್ಲೇಪ ನಿಗಮಾಂತವೇದ್ಯ ನರಸಿಂಹ 1ವಿಶ್ವನಿರ್ಮಾಣಾದಿ ವಿವಿಧ ಶಕ್ತ್ಯಾತ್ಮಕವಿಧಿಹರ ರೂಪ ಶ್ರೀ ವೀರನರಸಿಂಹ 2ಪರಿಭ್ರಾಜಮಾನಾರ್ಕ ಪಾವಕ ಶಶಿಯುಕ್ತಪದ್ಮ ಮಹಾಯೋಗಪೀಠ ನರಸಿಂಹ 3ಸಮ ಕಾಲೋದಿತ ಸೂರ್ಯಶಶಿಕೋಟಿಸಂಕಾಶಸರಸಿಜಜಾತಾಯುತೋತ್ಸಂಗ ಸಿಂಹ 4ಬ್ರಹ್ಮಾಮರೇಂದ್ರಾದಿ ಬೃಂದ ಕಿರೀಟಾಗ್ರಮಣಿ ನೀರಾಜಿತ ಪಾದಪದ್ಮ ನರಸಿಂಹ 5ಧೃತ ಶಂಖ ಚಕ್ರಾಬ್ಜ ದಿವ್ಯ ಚತುರ್ಭುಜಧರಣೀಧರಾಚ್ಯುತ ದೇವ ನರಸಿಂಹ 6ಪ್ರಹ್ಲಾದಖೇದಾಪಹಾರಕ ಪರಿಪೂರ್ಣಆಹ್ಲಾದ ಸುಕೃತಾಟ್ಟಹಾಸ ನರಸಿಂಹ 7ಆಂತ್ರಮಾಲಿಕಾಕಂಠ ಅಮಿತ ನಖಾಯುಧಅಂಕಾರೋಪತ ದೈತ್ಯಕಾಯ ನರಸಿಂಹ 8ಮಕುಟಮಂಡಿತ ಶುಭ ಮಕರಕುಂಡಲ ಧರಪ್ರಕಟಿತಕರುಣಾಕಟಾಕ್ಷ ನರಸಿಂಹ 9ಕೇಯೂರ ಹಾರ ಕೌಸ್ತುಭಮಣಿ ಭೂತಕಾಂಚನಚೇಲ ಕಲುಷಹರ ಸಿಂಹ 10ಸಕಲ ಲೋಕಾಧೀಶ ಸಾಧು ಸಂರಕ್ಷಕಸುರ ಸಿದ್ಧ ಮುನಿ ವಂದ್ಯ ಶ್ರೀ ನರಸಿಂಹ 11ತೂಲನಾಮಕ ಗ್ರಾಮ ನಿಕಟಾದ್ರಿ ಸ್ಥಿರವಾಸಪಾಲಿತಬಹುಭುವನೇಶ ನರಸಿಂಹ 12ದ್ವಿತೀಯ ಶ್ರೀ ತಿರುಪತಿ ಕ್ಷೇತ್ರಸಮಾನಾದ್ರಿ ವೆಂಕಟಪತಿ ಪ್ರತಿವೇಷ ನರಸಿಂಹ 13ಓಂ ಅನಾದಿ ಬ್ರಹ್ಮಚಾರಿಣೇ ನಮಃ
--------------
ತಿಮ್ಮಪ್ಪದಾಸರು
ನಿತ್ಯ ನಿಜಾಲಂಕಾರ ಶರೀರಾ | ಕ | ಳಂಕ ಮತಿದೂರಾ ಪ ವಿಭುವೆ ಇಭರಾಜಾ ವರದಾ ಸಾರಾ | ನಭರತುನ ತೇಜಾ | ಅಭಯ ಮೂರುತಿ ಸು | ಲಭ ದಾಯಕ | ವಿಬುಧವಂದಿತ ಸರ್ವಾ | ಶುಭಗುಣಶೀಲಾ 1 ಹೂವ್ವಿನಂಗಿಯ ತೊಟ್ಟು ಮೆರೆವಾ ಶ್ರೀವರ ಗಿರಿಯಾ | ಭಾವಕ್ಕೆ ಬಿಗಿದಪ್ಪಿ ತಾ ವೊಪ್ಪುತಿಹ | ಲೋಕ ಪಾವನ ಸ್ವತಂತ್ರ ಗೋವುಗಳ ಕಾಯ್ದಾ2 ವರಪರ್ವತ ವಾಸಾ ವಾಸುದೇವಾ | ಮಂಗಳವೀವ ವಿಜಯವಿಠ್ಠಲರೇಯಾ | ಗರುವ ದೇವರ ದೇವ ಜ್ಞಾನಾನಂದ ಪರಿಪೂರ್ಣ 3
--------------
ವಿಜಯದಾಸ
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ಶುದ್ಧನಾಪ ಲೋಕಂಗಳ ಮಾಡಿರುವ ಲೋಕಕೆ ತಾನೆ ಗುರುವಲೋಕವೇ ತಾನಾಗಿರುವ ಬಹುಲೋಕ ಲೋಕದ ಹೊರಗಿರುವ ದೇವನೇ 1 ದೃಶ್ಯವೇ ತಾನೆನಿಪ್ಪ ದೃಶ್ಯವ ನೋಡುತಲಿಪ್ಪದೃಶ್ಯಕೆ ಆನಂದಿಪ ಎಲ್ಲ ದೃಶ್ಯಕೆ ಆಧಾರವಿಪ್ಪನೇ 2 ಬೋಧನೆ ತಾನಾಗಿರ್ದ ಬೋಧಾಬೋಧದ ಸಿದ್ಧಬೋಧದಿ ತಾ ಬೆರೆದಿರ್ದಾ ಬರೆ-ಬೋಧಾ ಬೋಧಂಗಳ ಹೊದ್ದದ ದೇವನೇ 3 ನಾದದ ಮನೆಯಾಗಿಪ್ಪ ನಾದವ ಕೇಳುತಲಿಪ್ಪನಾದದಿಂ ನಲಿದಿಪ್ಪ ಮಹಾನಾದನಾದಕೆ ಬೆರೆದಿಪ್ಪ ದೇವನೇ 4 ನಿರುಪಮ ನಿರಾಲಂಬ ನಿರವಯ ನಿಶ್ಚಲಬಿಂಬಶರಣರೊಳು ಬಲಗೊಂಬ ವರಪರಮ ಗುರು ಚಿದಾನಂದ ದೇವನೇ 5
--------------
ಚಿದಾನಂದ ಅವಧೂತರು
ನಿತ್ಯ ಶ್ರೀಕರವು ಪ ಭೂಪತಿಯಂದದಿ ಭೂಮಿಯಾಳುವುದು ಕಾಪಾಡುತಿಹುದು ಲೋಕಿಗರಅ.ಪ ಆಳುವಾರುಗಳು ಆಚಾರ್ಯರುಗಳು ಪೇಳಿದರಿದರಾಂತರ್ಯವನು ಕೇಳುತ ಬಾಳಿದ ಬಹು ಭಾಗವತರ ಪಾಳಯವದು ತಾಂ ಪರಮಪದ 1 ಅಭಿಮತದಿಂದಲಿ ಮುನಿಗಳು ಮೂವರು ವಿಭವದಿಂದಲದ ಸಲಹಿದರು ಉಭಯ ವೇದಗಳ ಅಮೃತವರ್ಷದಿಂ ಸು ರಭಿತ ಕುಸುಮಗಳರಳಿದವು 2 ಶಂಖ ಸುದರ್ಶನ ಲಾಂಛನ ಭುಜಗಳಲ ಲಂಕಾರದ ಹನ್ನರೆಡು ನಾಮಗಳು ಪಂಕಜ ತುಳಸೀಮಣಿ ಪವಿತ್ರಗಳು ನಿಶ್ಶಂಕೆಯ ಮೂರು ಮಂತ್ರವೆ ಕಾಯ್ಗಳು 3 ಶಾಸ್ತ್ರ ಸಿದ್ಧವಾದರ್ಚಾಮೂರ್ತಿಯ ಕ್ಷೇತ್ರ ತೀರ್ಥಗಳು ಪಕ್ವಫಲ ಶ್ರೋತೃಗಳಿಗೆ ಮಧುರಾದತಿಮಧುರವು ಖ್ಯಾತಿಯ ವಿಜಯರಾಘವ ಕೃತಿ-ಪ್ರ- ಖ್ಯಾತಿಯ ಅಣ್ಣಂಗಾರ್ಯ ಕೃತಿ4 ನಿತ್ಯ ನೈಮಿತ್ತಿಕ ತಿರುವಾರಾಧದಿ ನವ್ಯ ತದೀಯದ ಕೈಂಕರ್ಯ ಸ್ತುತ್ಯಪ್ರಬಂಧ ಗೀತಾ ಶ್ರೀಭಾಷ್ಯ [ದರ್ಥಿ]ಪಾರಾಯಣ ಪರಮಾನಂದ 5 ಶ್ರೀರಂಗ ವೆಂಕಟ ವರದ ನಾರಾಯಣ [ರಾ ಶ್ರೀ] ಪದಯುಗ ಪೂಜನ ಪ್ರಾಪ್ತಿ ಫಲ ಓರಂತನುದಿನ ಧ್ಯಾನ ಗಾನಗಳು [ಬೀರುವವು] ತೃಪ್ತಿಕರ ಸುಧಾನಿಧಿ 6 ಜಾಜೀ ಕೇಶವ ಜಗವ ಪಾಲಿಸಲು ಮಾಜದೆ ಮಾಡಿದ ಉಪಕೃತಿಯು ರಾಜಿಪ ಚರಣಗಳಾಶ್ರಿತರಿಗೆ ಸವಿ ಭೋಜನವೀವುದು ಹರಿಯೆಡೆಯೊಳ್ 7
--------------
ಶಾಮಶರ್ಮರು
ನಿತ್ಯಂ ಪುರುಷೋತ್ತಮಂ ನ್ಯಾಯಂ - ಅಪಮೃತ್ಯುಂ ಸಂಕಟ ಹರಣಂ ಪ ಪರಲೋಕ ಸಾಧನ ಕರುಣಾಕರಂಶರಣಾಗತ ಜನಾಧಾರಂಸರಸಿಜಭವ ಭವರೋಗ ಸಂಹಾರಂಪುರುಷೋತ್ತಮ ಘೋರವಿಹಾರಂ1 ಜ್ಞಾನಭಕ್ತಿ ವೈರಾಗ್ಯ ಸುಜಾತಂಜನನ ಮರಣ ರಹಿತ ಜಲನಿಧಿ ಪೋತಂಘನ ದಾರಿದ್ರ್ಯ ರವಿ ತಾರಾನಾಥಂಅನುಶ್ರುತ ವೈಭವ ಮಂಗಲಗೀತಂ2 ಭೂರಿಭುವನ ಜೀವನಗುಣಂ - ಗಂಭೀರಸಾರ ಪಲ್ಲವ ನಿಕರಾಭರಣಂನಾರದ ವಾಲ್ಮೀಕ್ಯಂತಃಕರಣಂವರದಾದಿಕೇಶವ ನಾದ ನಿತ್ಯಸ್ಮರಣಂ3
--------------
ಕನಕದಾಸ
ನಿತ್ಯ ಶುಭ ಮಂಗಳಂ ಪ ಮತ್ಸ್ಯಾವತಾರಿಗೆ | ವೇದ ಉದ್ಧಾರಿಗೇ ಪೊತ್ತ ಬೆನ್ನಲಿ ಗಿರಿಯ | ಮುದ್ದು ಕೂರ್ಮನಿಗೇ1 ದನುಜ ಸಂಹಾರಿಗೇ | ಮಧು ಕೈಟಭಾರಿಗೇ ವನದಿ ವಸನೆಯ ಪೊತ್ತ | ವರಹಾವತಾರಿಗೇ 2 ಪೋರನ್ನ ಪೋಷಕಗೆ | ಧಾರುಣಿಯ ಬೇಡ್ಡವಗೆಮೂರು ಲೋಕವನಳೆದ | ಮೂರ್ವಿಕ್ರಮ ನಿಗೇ 3 ಮೃಡ ಸಖನು ಕಾಳೀಯ | ಹೆಡೆಯ ಮೆಟ್ಟಿದಗೇ 4 ಬೆತ್ತಲೆ ನಿಂತವಗೆ | ಬುದ್ದಾವತಾರಿಗೇಉತ್ತಮ ಕಲ್ಕಿ ಗುರು | ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ನಿತ್ಯ ಶುಭ ಮಂಗಳಂ ಪ. ವೈಕುಂಠವಾಸನಿಗೆ ವಾಣೀಶಗ್ವಲಿದವಗೆ ಲೋಕದಲಿ ಪ್ರಹ್ಲಾದಗ್ವಲಿದ ಲಕ್ಷ್ಮೀಶಗೆ ಪ್ರಾಕೃತದಲಿ ವಸುದೇವ ಪುತ್ರನೆಂದೆನಿಸಿ ಜೋಕೇಲಿ ಗೋಕುಲಕೆ ಜಾರಿ ಬಂದವಗೆ 1 ಪುಟ್ಟ ಮಗುವಾದವಗೆ ಪೂತಣಿಯ ಕೆಡಹಿದಗೆ ತೊಟ್ಟಿಲೊಳು ಮಲಗಿ ತೂಗಿಸಿಕೊಂಬಗೆ ದುಷ್ಟ ಶಕಟನÀ ಮುರಿದು ತೃಣಾವರ್ತನೆಂಬ ದೈತ್ಯನ ಮುಟ್ಟಿ ಪ್ರಾಣವ ತೆಗೆದ ಮುದ್ದುಕೃಷ್ಣನಿಗೆ 2 ಅಂಬೆಗಾಲಿಕ್ಕಿದಗೆ ಅಂಗಳದೊಳಾಡಿದಗೆ ತುಂಬಿದಾ ಪಾಲುಗಳ ತಾನೆ ಸವಿದು ಇಂಬಿಟ್ಟು ಬಾಲರಿಗೆ ಸವಿ ಇಕ್ಕಿ ಸವಿದವಗೆ ಅಂಬುಜಾಕ್ಷ ನಮ್ಮ ಹಯವದನಗೆ 3
--------------
ವಾದಿರಾಜ
ನಿತ್ಯ ಶುಭ ಮಂಗಳಂ ಪ. ಸರಸೀರುಹಾಕ್ಷಾಯ ದುರುಳಮದಶಿಕ್ಷಾಯ ಸುರಮೌನಿ ಪಕ್ಷಾಯಾಧೋಕ್ಷಜಾಯ ಶರಣನ ರಕ್ಷಾಯ ಕರುಣಾಕಟಾಕ್ಷಾಯ ಧರಣಿಜಾರಮಣಾಯ ರಾಮಭದ್ರಾಯ 1 ಕ್ರತು ಪಾಲಕಗೆ ಶಶಿವದನೆ ಜಾನಕಿಯ ಕೈಪಿಡಿದವಂಗೆ ಶಶಿಮೌಳಿಚಾಪಮಂ ಮುರಿದ ಅಸಮಬಲನಿಗೆ ದಶಕಂಠಕಾಲಂಗೆ ರಾಘವೇಂದ್ರನಿಗೇ 2 ಕಾಕುತ್ಸ್ಥಕುಲಮಂಡನಗೆ ಕಮಲಾಪ್ತ ಕುಲದೀಪಂಗೆ ಸಾಕೇತನಗರಾಧಿಪಗೆ ಲೋಕೇಶನಿಗೆ ಪಾಕಶಾಸನಮುಖ್ಯ ನಾಕಪೂಜಿತಚರಣ ವೈಕುಂಠನಾಯಕ ಶ್ರೀ ಶೇಷಗಿರಿವರಗೆ 3
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು