ಒಟ್ಟು 29424 ಕಡೆಗಳಲ್ಲಿ , 137 ದಾಸರು , 9577 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಲಕುಮಿ ಕರುಣಿಸೌ ಕರುಣಾಕರಳೆ ಎನ್ನೊಳು ಪ ಮರೆಹೊಕ್ಕ ದಾಸರ ದಾರಿದ್ರ್ಯ ಖಂಡಿಸು ಪರಮಪಾವನೆ ನಿನ್ನನರಸಿ ಬೇಡುವೆನವ್ವ 1 ಗರುವಕ್ಕೆ ಬಾರದ ಸಿರಿಯ ಕರುಣಿಸಿ ಮತ್ತೆ ಹರಿಸ್ಮರಣೆ ಸೌಭಾಗ್ಯ ವರ ಪಾಲಿಸೆನ್ನವ್ವ 2 ಕ್ಷೇಮ ಪಾಲಿಸು ತಾಯಿ ಕಾಮಿತ ಜನ ಮಹ ಪ್ರೇಮಮಂದಿರೆ ಶ್ರೀರಾಮನರ್ಧಾಂಗಿಯೆ 3
--------------
ರಾಮದಾಸರು
ವರವ ಕೊಡೆ ತಾಯೆ ವರವ ಕೊಡೆ ಪ. ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆ ಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆ ನೆರೆ ನಂಬಿದೆನು ನಿನ್ನ ಚರಣಕಮಲವನು ಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ1 ಹೊಳೆವಂಥ ಅರಸಿನ ಹೊಳೆವ ಕರಿಯ ಮಣಿ ಸ್ಥಿರವಾಗಿ ಕಟ್ಟುವಂಥ ವರವ ಕೊಡೆ ತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆ ಯಾವಾಗಲಿರುವಂಥ ವರವ ಕೊಡೆ 2 ಬಾಗಿಲ ತೋರಣ ಮದುವೆ ಮುಂಜಿ ನಾಮಕರಣ ಯಾವಾಗಲಾಗುವಂಥ ವರವ ಕೊಡೆ ಬಂಧುಬಳಗ ಹೆಚ್ಚಿ ಹೆಸರುಳ್ಳ ಮನೆ ಕಟ್ಟಿ ಉಂಡಿಟ್ಟಿಡುವಂಥ ವರವ ಕೊಡೆ 3 ಹಾಲ ಕರೆಯುವ ಮೇಲಾದ ಸರಳೆಮ್ಮೆ ಸಾಲಾಗಿ ಕಟ್ಟುವಂಥ ವರವ ಕೊಡೆ ಕಂಡಕಂಡವರಿಗೆ ಕರೆದು ಮೃಷ್ಟಾನ್ನವ ತಿಳಿ ನೀರು ಕೊಡುವಂಥ ವರವ ಕೊಡೆ 4 ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿ ಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿ ಅಷ್ಟೈಶ್ವರ್ಯವು ಪುತ್ರಸಂತಾನವ ಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ವರವ ಕೊಡೆ ವಾರಿಜಾಕ್ಷಿ ನೀರೆ ತುಳಸಿಯೆ ಕರಕರೆಯಗೊಳಿಸಬೇಡೆ ಕರುಣ ಪೂರ್ಣಳೆ ಪ. ಸಿರಿವರನ ಸಹಿತ ನಿನ್ನ ಪೂಜಿಪೆ ಮುನ್ನ ಪರಿಪರಿಯ ಧೂಪ ದೀಪ ಗಂಧಾಕ್ಷತೆಗಳಿಂ 1 ವಾರಿಜಾಕ್ಷಿ ಷಡ್ರಸಗಳ ಆರೋಗಣೆ ಕೊಳ್ಳೆ ನಾರಿ ನಿನಗೆ ಸರ್ವವಿಧದಿ ನಾನು ಎರಗುವೆ 2 ಸಿರಿವರ ಗೋಪಾಲಕೃಷ್ಣವಿಠ್ಠಲನರಸಿಯೆ ಕರದು ಎನಗೆ ಸರ್ವಾಭೀಷ್ಟ ಕೊಟ್ಟು ಪಾಲಿಸೆ 3
--------------
ಅಂಬಾಬಾಯಿ
ವರಾಹ | ವಿಠಲ ಪೊರೆ ಇವನ ಪ ಮೋದ ಮುನಿ ಸನ್ನುತನೆ | ಆದಿ ಮೂರುತಿಯೇ ಅ.ಪ. ಸ್ವೋಚಿತಸು ಕರ್ಮದಲಿ | ಊಚ ದೀಕ್ಷೆಯನಿತ್ತುನೀಚೋಚ್ಚತರತಮವ | ವಾಚಿಸಿವನಲ್ಲೀಪ್ರಾಚೀನ ದುಷ್ಕರ್ಮ | ಮೋಚನೆಯಗೈಸವ್ಯಸಾಚೀ ಸಖನೆ ಹರಿಯೆ | ಕೀಚಕಾರಿ ಪ್ರೀಯಾ 1 ಸತಿ ಸುತರು ಬಂಧುಗಳು | ಹಿತ ಅಹಿತರಿವರಲ್ಲಿವ್ಯಾಪ್ತ ಶ್ರೀ ಹರಿಯೆಂಬ | ಮತಿಯ ಕೊಟ್ಟವಗೇ ||ಸತತ ತವನಾಮಾ | ಮೃತದ ಸವಿದೋರೋವಿತತ ಮಹಿಮೋ ಪೇತ | ಪ್ರತಿ ರಹಿತ ದೇವಾ2 ಪಥ ಚಾರು ಭವ ಕೂಪಾರ | ಪಾರು ಮಾಡಯ್ಯಾ3 ಸಾರ | ವಾರವಾರಕೆ ಉಣಿಸಿದಾರಿ ದೀಪಕನಾಗೊ | ಮಾರಮಣನೆ ದೇವಾತಾರಕನು ನಿನ್ಹೊರತು | ಆರು ಇಲ್ಲವುಯೆಂದುಪ್ರಾರ್ಥಿಸುವೆ ನಿನ್ನಡಿಗೆ | ವೀರರಘು ಪತೆಯೇ4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರಾಹ ಹರಿ ವಿಠಲ | ಕಾಪಾಡೊ ಇವನಾ ಪ ನಿರುತ ತವನಾಮ ಸ್ಮøತಿ | ಕರುಣಿಸುತ ಕಾಯೋಅ.ಪ. ತಾರಕವು ತವನಾಮ | ಸ್ಮರಣೆ ಮಾತ್ರದಿ ಎಂದುಒರಲುತಿದೆ ವೇದಗಳು | ಕರಿವರದ ಹರಿಯೇತರುಳ ಸಾಧ್ವೀ ಯುವಕ | ಮೊರೆಯಿಡುವನಂಕಿತಕೆಒರೆದಿಹೆನು ಅದರಿಂದ | ಕರೆದು ಕೈ ಪಿಡಿಯೋ 1 ಕಾಮವರದನೆ ದೇವ | ಕಾಮಿತಾರ್ಥಗಳಿತ್ತುನೇಮದಿಂ ಪೊರೆಯುವುದು | ಕಾಮಪಿತ ಹರಿಯೇ |ನೇಮ ನಿಷ್ಠೆಯಲಿಂದ | ಧೀಮಂತ ಪದಕೆರಗಿಸೌಮನಸ್ಯದಿ ಸೇವೆ | ಸಲ್ಲಿಸುವನಯ್ಯಾ 2 ಹರಿಯೆ ಸರ್ವೋತ್ತಮನು | ಸಿರಿವಾಯು ಮೊದಲಾದಸುರರೆಲ್ಲ ಕಿಂಕರೆಂಬ ಮತಿಯ ಕೊಟ್ಟುವರಜ್ಞಾನ ಭಕುತಿಯನೆ ಕರುಣಿಸುತ ಪೊರೆಯಯ್ಯಾವರದ ಗುರು ಗೋವಿಂದ ವಿಠಲ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ವರಾಹ ಹರಿ ವಿಠಲ | ಪೊರೆಯ ಬೇಕಿವಳ ಪ ಕರ ಪಿಡಿಯ ಬೇಕೋ ಅ.ಪ. ಕರ್ಮ ಅಘ | ಕಾನನಗೆ ದಾವಾಗ್ನಿನೀನೆ ಕೃಪೆ ನೋಟದಲಿ | ಮಾನಿನಿಯ ಸಲಹೋ 1 ತೀರ್ಥ ಪದ ನಿನ್ನ ಗುಣ | ಕೀರ್ತನೆಯ ನೊದಗಿಸುತಆರ್ತಳುದ್ಧರ ಕಾರ್ಯ | ಪ್ರಾರ್ಥಿಸುವೆ ಹರಿಯೇ |ಮೂರ್ತಿ ನಿನ್ನದು ಹೃದಯ | ಪಾತ್ರದಲಿ ಕಾಣಿಸುತಗೋತ್ರ ಉದ್ಧರಿಸಯ್ಯ | ಪೃಥ್ವಿ ಧರ ದೇವಾ 2 ಭವ ಶರಧಿ | ಪೋತನೀನೆನಿಸೋ 3 ನಿತ್ಯ ಮಂಗಳವಾ 4 ಸೃಷ್ಟೀಶ ಕ್ರೋಡೇಂದ್ರ | ಅಷ್ಟ ಸೌಭಾಗ್ಯದನೆಪ್ರೇಷ್ಟ ನೀನಾಗಿರಲು | ಕಷ್ಟವೆಲ್ಲಿಹುದೋವಿಷ್ಟರಶ್ರವ ಇವಳ | ಸುಷ್ಟು ಪೊರೆವುದು ಎನುತದಿಟ್ಟ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವರ್ಣಿಸಲು ಸಾಧ್ಯವೆ ಧರೆಯೊಳಿನ್ನು ಗುರುವರ್ಯಸುಶೀಲೇಂದ್ರ ತೀರ್ಥರ ಮಹಿಮೆಯನ್ನು ಪ ಭಾನುನಂದನನಂತೆ ದೀನ ಮಾನವರಿಗೆ ಸಾನುರಾಗದಿ ಕೊಡುವ ದಾನ ನೋಡಿ || ಏನು ಹೇಳಲಿ ದಿವಿಜಧೇನು ಭೂರುಹಮಣಿ ಕ್ಷೋಣಿಯೊಳು ಜಡಪಶು ರೂಪ ತಾಳಿದವು 1 ಪರಮಠಾಧೀಶರು ಪರಿಪರಿಯಲಿಂದವರ ಪರಮ ಔದಾರ್ಯಗುಣ ಪರೀಕ್ಷಿಸುತಲಿ ಬೆರಳು ಕಚ್ಚುತಲಿ ಬೆರಗಾಗಿ ಜಗದೊಳಗೆ ಸರಿ ಇವರಿಗಿಲ್ಲೆಂದು ಶಿರದೂಗಿ ಹೊಗಳಿದರು 2 ಧೀಮಂತ ಜನರೊಡೆಯ ಶ್ರೀಮಂತಮಂದಿರದ ಸ್ವಾಮಿಗಳ ಪೂರ್ಣ ಪ್ರೇಮ ಪಡೆದು | ತಾಮರಸ ಭಾವ ಪೂಜ್ಯ ಶಾಮಸುಂದರ ಮೂಲ ರಾಮ ಮೂರ್ತಿಯನು ಭೂಮಿಯೊಳು ಮೆರೆಸಿದರು 3
--------------
ಶಾಮಸುಂದರ ವಿಠಲ
ವರ್ಣಿಸಲು ಸಾಧ್ಯವೇ ಧರೆಯೊಳಿನ್ನ ವರದೇಂದ್ರಗುರು ನಿನ್ನವರ ಮಹಿಮೆಯ ಪ ದಶಪ್ರಮತಿ ಸುಮತಾಖ್ಯ | ಬಿಸಜನಿಧಿಗೆ ಉಡುನಾಥ ವಸುಧಿ ಸುಮನಸವ್ರಾತ | ನಮಿತ ಖಾತ | ವಸುಧೀಂದ್ರ ಕರಜಾತ | ಸುಶರಣರ ಸುಖದಾತ | ವಸುಧೀಶ ಪಸರಿಸಿದ | ಅಸಮ ತವ ಚರಿತೆಯನು 1 ಸಾರ ಕನ್ನಡದಲಿ ನೀರಚಿಸುತಲಿ ತಂತ್ರ | ಸಾರ ಮಂತ್ರವ ಪರಮ ಕಾರುಣ್ಯದಿ || ಶ್ರೀರಂಗನೋಲಿಸಿದ ಧಾರುಣಿಪ ದಾಸರಿಗೆ ಸಾರಿ ಪೇಳಿದ ಪರಮೋಧಾರ ಜಿತಮಾರ 2 ಗುಣನಿಧಿ ಪ್ರಾಣೇಶದಾಸಾರ್ಯರ ಮನೆಯ ಹಿತ್ತಲದೊಳಗೆ ಬಣವಿ ಬುಡದಲಿ ಬಂದು ಘನ ತುಲಸಿ ರೂಪದಲಿ ಜನಕೆ ತೋರಿಸಿ ಚಿತ್ರ 3 ವಾದದಲಿ ರಾಮಾಖ್ಯ ವಾದಿಯಪ ಜಯ ಪೊಂದಿ ಗಜ ಭೂಷಣಾದಿಗಳನು || ಮೋದ ಬಡಿಸಿ ನಿನ್ನ ಔದಾರ್ಯ ಗುಣವ 4 ಶಾಮಸುಂದರ ಮೂಲ ರಾಮಚಂದ್ರನ ಚರಣ ತಾಮರಸ ಷಡ್ಜಪರಮ ಸುಗಣ ಧೀಮಂತ ಶ್ರೀಮಂತ್ರಧಾಮ ನಿಲಯರ ಪೂರ್ಣ ಪ್ರೆಮ ಸತ್ವಾತ್ರ ಮಮ ಸ್ವಾಮಿ ಸುಚರಿತ್ರ 5
--------------
ಶಾಮಸುಂದರ ವಿಠಲ
ವರ್ಷ ವರ್ಧಂತಿಗಳು (ಆಚಾರ್ಯರ 21ನೇ ವರ್ಷದ ವರ್ಧಂತಿ ಸಮಯ) ನಿನ್ನ ನಂಬಿದೆ ಶರದಿಂದುವದನ ಎನ್ನ ಪಾಲಿಸು ವರಕುಂದರದನ ಮುನ್ನ ಪಾತಕಿಯಾದಜಾಮಿಳನು ತನ್ನ ಚಿಣ್ಣನ ಕರೆದರೆ ಮನ್ನಿಸಿದವನೆಂದು ಪ. ನರ ಧ್ರುವಾಂಬರೀಷ ಪ್ರಹ್ಲಾದ ಮುಖ್ಯರನ- ವರತ ನಿನ್ನನಾಧರಿಸಿದರವರ ಪೊರೆದನೆಂಬೀ ಮದಗರುವ ಭಾರದಲತಿ- ಕಿರಿದಾಗಿಹ ಎನ್ನ ಮರೆವುದುಚಿತವೆ 1 ಹತ್ಯ ಪ್ರಮುಖ ದುಷ್ಕøತ್ಯಗಳಿರಲಿ ನಿತ್ಯ ಪರಧನಾಸಕ್ತನಾಗಿರಲಿ ಭಕ್ತವತ್ಸಲ ನಿನ್ನ ಸ್ಮರಣೆ ಮಾತ್ರದಿ ಪಾಪ ಮುಕ್ತಿದೋರಲು ಪೂರ್ಣಶಕ್ತಿಯಾಗಿಹೆ ಎಂದು 2 ತುರುಗಳೆಣಿಸಿದಂತೆ ಕರುಗಳ ಗುಣವ ಮರೆದಂತೆ ಜನನಿ ತನ್ನಯ ಬಾಲನನುವ ಕರುಣಾಳು ನೀ ಮುನಿಸಿಂದ ಕರುಣಿಸದಿರೆ ಎನ್ನ ಪೊರೆವರಿನ್ಯಾರಿಹರುರಗಾದ್ರಿಯರಸ ಕೇಳ್ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಲ್ಲಭೆ ಬಲು ಸುಲಭೆ ಪ ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ 1 ಕೋಲ ಮುನಿಗೊಲಿದಮಲ ಮೃಗನಾಭಿ ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ2 ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ ರವರವ ನರಕದಲ್ಲಿ ಬವಣೆಪಟ್ಟ ಮೇಲೆ ಸವಿಯದಂತೆ ತಮಸುನಿವಹದೊಳಗೆ ಇಪ್ಪನು 3 ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ 4 ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ ನಿತ್ಯ ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ 5
--------------
ವಿಜಯದಾಸ
ವಲ್ಲೀದೇವಿಯ ವಲ್ಲಭನೆ ಬಲ್ಲಿದ ಭಕ್ತರ ಸುಲ್ಲಭನೆ ಪ. ಸಲ್ಲಲಿತ ಪಾದಪಲ್ಲವ ಭಜಿಸುವ- ರೆಲ್ಲರ ಮನಸಿನೊಳುಲ್ಲಸನೆಅ.ಪ. ವೃಂದಾರಕಮುನಿವಂದಿತನೆ ಕಂದರ್ಪಾಮಿತಸುಂದರನೆ ಸ್ಕಂದನೆ ಸಚ್ಚಿದಾನಂದನೆ ಪಾರ್ವತೀ- ನಂದನ ಸದ್ಗುಣಮಂದಿರನೆ 1 ತಾರಕದೈತ್ಯ ಸಂಹಾರಕನೆ ಸೇರಿದ ಭಕ್ತೋದ್ಧಾರಕನೆ ಮಾರಾರಿಯ ಸುಕುಮಾರನೆ ಧೀರನೆ ಚಾರು ಮಯೂರ ತುರಂಗಮನೆ2 ಲಕ್ಷುಮಿನಾರಾಯಣ ಪ್ರಿಯನೆ ರಕ್ಕಸರಿಂಗತಿದುಃಖದನೆ ಕುಕ್ಕುಟವಜ್ರಾಭಯಶಕ್ತಿಹಸ್ತನೆ ಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು