ಒಟ್ಟು 2455 ಕಡೆಗಳಲ್ಲಿ , 118 ದಾಸರು , 1899 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಾಮ ನಿಜ ಸುಖ ಪಾಲಿಸೈ ದೊರೆಯೆ ಪ ಧಾಮ ಭುವನ ಸ್ತೋಮ ಮಂಗಲ-|| ಕಾಮಧೇನು ರಮಾವರನೆ ಹರಿ ಅ.ಪ ಸನ್ನುತ ರಾಜೀವ ಸುತೆ ಶ್ರೀಲೋಲ ರಾಘವ 1 ಮುಕುಂದ ರಕ್ಷಿಸು 2 ಕೂರ್ಮ ವರಾಹ ನಿತ್ಯ ಸದಾನಂದಾತ್ಮ ಶ್ರೀಗುರು 3
--------------
ಸದಾನಂದರು
ನಾಮತ್ರಯ ನೆನೆಯಿರೊ ಕಾಮಕ್ರೋಧವು ಹರಿದು ಬೈಲಾಗಿ ಪೋಗುವುದು ಪ ಅಚ್ಯುತಾ ಅಚ್ಯುತಾ ಎಂದು ಸ್ಮರಣೆಯನು ಮಾಡಿದರೆ ದುಶ್ಚರಿತವೆಂಬ ಮಹ ಕಾನನಕ್ಕೆ ಕಿಚ್ಚಾಗಿ ದಹಿಸುವುದು ನಿಮಿಷದೊಳಗೆ ಶುದ್ಧ ನಿಚ್ಚಳವಾಗಿದ್ದ ಸುಜ್ಞಾನ ಪಾಲಿಪದು1 ಅನಂತ ಅನಂತ ಎಂದು ಮನದಲ್ಲಿ ನೆನೆಯೆ ನಾನಾ ಭವಬಂಧ ದುಷ್ಕರ್ಮದಿ ಹೀನಾಯವನು ಕಳೆದು ಹಿತದಿಂದಲಿ ವೊಲಿದು ಆನಂದ ಆನಂದವಾದ ಫಲ ಕೊಡುವುದು. 2 ಗೋವಿಂದ ಗೋವಿಂದ ಎಂದು ಧ್ಯಾನವ ಮಾಡೆ ಗೋವಿಂದ ಕಡೆಹಾಕಿ ಸಾಕುವದು ದೇವೇಶ ಶಿರಪತಿ ವಿಜಯವಿಠ್ಠಲೇಶನ ಸೇವೆ ಸತ್ಕಾರ್ಯದಲಿ ಪರಿಪೂರ್ಣವಾಗಿಹುದು 3
--------------
ವಿಜಯದಾಸ
ನಾರಸಿಂಹ ನಾರಸಿಂಹ ನಾರಸಿಂಹ ಪ ನಿತ್ಯದಲಿ ಬರುವ ಅಪಮೃತ್ಯುವಿನ ಬಾಧೆಯ ಕೃತ್ತಿ ಒತ್ತಿ ಪರಿಹರಿಸಿ ಭೃತ್ಯನಾದ ಜೀವನ್ನ ತೃಪ್ತಿಪಡಿಸುವ ದೇವ ಭಕ್ತವತ್ಸಲ ನಾರಸಿಂಹ 1 ಅಂದು ಸ್ವಪ್ನದಿ ಬಂದೆ ದ್ವಂದ್ವ ಪಾದಕ್ಕೆರಗಿ ನಿಂದು ನಾ ನಿನ್ನ ಬೇಡೆ ಸಂಧಿಸಿ ಕ್ರೂರ ದೃಷ್ಟಿಯಿಂದ ನೋಡಿ ಮಂದೀಗೆ ಕುಂದು ಮಾಡಬ್ಯಾಡೆಂದೆ 2 ಅಂದಿನಾರಭ್ಯ ಬಲು ಬಂಧನಕೆ ಸಿಲ್ಕಿ ನಾ ಪರಿ ಪೇಳಲಾರೆ ಹಿಂದಿನ ಅಘವೆಣಿಸದೆ ಬಂದು ನಾರಿ ಸಹಿತ ತಂದೆ ಈ ಸುತನ ಕಾಯೋ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಎಂದು ಎನ್ನಗಲದೆ ಬಂದು ನೆಲಸೆನ್ನಲ್ಲಿ ಅಜ್ಞಾನ ಕೊಡದಿರು ವಂದಿಸುವೆನು ನಾರಸಿಂಹ 4 ಮುಂದಾದರು ಹೃನ್ಮಂದಿರದಿ ನೆಲೆಗೊಂಡು ಸಂದರ್ಶನವನೀಯೊ ದೇವ ಕಂದರ್ಪಹರ ವಿಜಯ ರಾಮಚಂದ್ರವಿಠಲರೇಯ ವಂದೆ ಭಕ್ತಿಯ ಪಾಲಿಸು 5
--------------
ವಿಜಯ ರಾಮಚಂದ್ರವಿಠಲ
ನಾರಸಿಂಹ ಶ್ರೀ ನಾರಸಿಂಹ ಪಾರುಗಾಣಿಸಿ ದುರಿತೌಘಹರಿಸಿ ಕಾಯೊ ಪ ನರಹರಿ ಜ್ವರಹರ ಘೋರವ್ಯಾಧಿಯ ಪರಿಹಾರಗೈಸಿ ಪರಿಪಾಲಿಸಬೇಕಯ್ಯಾ ಅ.ಪ ಘುಡು ಘುಡಿಸುತ ಪಲ್ಕಡಿದು ಚೆಂಡಾಡುತ ಮೃಡನೆ ಪರನು ಎಂದು ನುಡಿದ ಕಶಿಪುವಿನ ಒಡನೆ ಕಂಭದಿ ಬಂದು ಒಡಲ ಬಗೆದು ನಿನ್ನ ಧೃಡ ಭಕುತಗೆ ಬಂದೆಡರ ಬಿಡಿಸಿದೆ1 ತುಷ್ಟಿಪಡಿಸೊ ಪರಮೇಷ್ಟಿಯ ಪಿತ ನಿನ್ನ ದೃಷ್ಟಿಯಿಂದ ಅನಿಷ್ಟ ನಿವಾರಣ ಅಷ್ಟಕರ್ತೃತ್ವದ ಪ್ರಭೋಕಷ್ಟಹರಿಸಿಭಕ್ತ- ರಿಷ್ಟ ಪಾಲಿಪ ಸರ್ವಸೃಷ್ಟಿಗೊಡೆಯ ದೇವ2 ಸಂಕಟ ಬಿಡಿಸೊ ಭವಸಂಕಟದಿಂದ ಶ್ರೀ ವೇಂಕಟೇಶಾತ್ಮಕ ಭೀಕರ ರೂಪ ಶಂಕರಾಂತರ್ಗತ ಸಂಕರುಷಣ ಮೂರ್ತೇ ಮಂಕುಹರಿಸಿ ಪಾದಪಂಕಜ ತೋರಯ್ಯ 3
--------------
ಉರಗಾದ್ರಿವಾಸವಿಠಲದಾಸರು
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ನಾರಾಯಣ ತನ್ನ ನಂಬಿದ ಭಕುತರ ಕಾರುಣ್ಯದಿ ಕಾವ ಪ ಮಾರುತಿ ಸಹಿತನಾಗಿ ತಾನೀ ಶರೀರದೊಳಿಹ ದೇವ ಅ.ಪ ಅನಿರುದ್ಧನು ತಾ ಸಕಲ ಚರಾಚರ ಸೃಷ್ಟಿಯ ಗೈವ ವನಧಿಶಯನ ಪ್ರದ್ಯಮ್ನನು ಬ್ರಹ್ಮಾಂಡವ ಪಾಲಿಸುವ ತ್ರಿನಯನನಂತರ್ಗತ ಸಂಕರ್ಷಣ ತಾನು ಲಯವನು ಗೈವ ವಾಸುದೇವ ಸುಜೀವರಿಗೆ ಮೋಕ್ಷವನೀವ 1 ನರಸಿಂಹ ರೂಪದಿ ಹರಿಯು ಭಕುತ ಪ್ರಹ್ಲಾದನ ಕಾಯ್ದ ಸಿರಿ ರಾಮನು ತಾನಾಗಿ ಬಂದು ದಶಶಿರನ ಭಂಜಿಸಿದ ದುರುಳ ಕಂಸನ ನಿಗ್ರಹಿಸಲು ಯದು ವಂಶದೊಳುದಿಸಿ ಬಂದ ಪರಾಶರಾತ್ಮಜನಾಗಿ ವರವೇದ ವಿಭಾಗವ ಗೈದ 2 ವರಾಹ ನರಹರಿರೂಪವ ತಾ ಕೊಂಡ ಇಚ್ಛೆಯಿಂದಲಿ ವಟುವಾಗಿ ಕೊಡಲಿಯ ಪಿಡಿದ ಪ್ರಚಂಡ ಸಿರಿ ಕೃಷ್ಣ ದಿಗಂಬರನಾಗಿ ಕಂಡ ಸ್ವಚ್ಛ ಅಶ್ವವೇರಿದ ರಂಗೇಶವಿಠಲ ಬಿನಗು ದೈವರ ಗಂಡ 3
--------------
ರಂಗೇಶವಿಠಲದಾಸರು
ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನರಹರಿ ಪರಬ್ರಹ್ಮನಿರ್ವಿಕಾರಿ ಪ ದ್ರುಕ್ ದೃಶ್ಯ ಮಧ್ಯದಲ್ಲಿ ಚೊಕ್ಕಟ್ಟಾಗಿರುವನಲ್ಲಿ ಪ್ರಕಟವಾಗಿ ತ್ರಿಕೊಟ ನಿಜ ಸ್ಥಾನದಲ್ಲಿ ತೋರುವನಲ್ಲಿ 1 ಏನೊಂದು ತಿಳಿಯದದನೆ ತಾನೆಂದು ತಿಳಿಯಲವನೆ ಧ್ಯಾನದರುವಿನಲ್ಲಿ ಮನ ತಾನೆ ಚಿನ್ಮೂರ್ತಿ ಘನ 2 ತನುವಿನೊಳ ಹೊರಗಿರ್ಪ ತನ್ನ ತಾನೆ ಕಾಣುತಿರ್ಪ ಮೂರ್ತಿ 3 ಅಂತರಾತ್ಮ ಗುರು ಪೂರ್ಣನಂತ ಮಹಿಮ ನಾರಾಯಣ ಸಂತ ಸಾಧು ಸಾಧ್ಯ ಜ್ಞಾನ ಶಾಂತಿ ಪಾಲಿಪ ಘನ 4
--------------
ಶಾಂತಿಬಾಯಿ
ನಾರಾಯಣ ನರಹರಿ ಪರಮಾತ್ಮ ನೀ ಪಾಲಿಸೋ ಪ ಆರು ಮೂರಾರೊಳೆನ್ನ ಬಿಡಿಸೊ ಪಾರುಗಾಣಿಸೋ ಮುನ್ನಾ ಪರ ತೋರೋ ನಿಜ ನರಹರಿ 1 ಬಾಲಪ್ರಹ್ಲಾದನಾರ್ತನಾಗಿ ಶ್ರೀಲೋಲನೆಂದು ಕರೆಯೆ ಕಂಬದಿ ಬೇಗಾ ನೀಲಮೇಘಶ್ಯಾಮನೆನಿಸಿದ ನರಹರಿ 2 ಧರಣಿಗಧಿಪ ಮದ್ಗುರುವು ತುಲಸೀರಾಮದಾಸನೆನ್ನುತ ಬಂದೆ [ವರದ] ಪಾರಾ ಮಹಿಮ ಪರಾತ್ಪರ ನರಹರಿ 3
--------------
ಚನ್ನಪಟ್ಟಣದ ಅಹೋಬಲದಾಸರು
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಾರಾಯಣ ನಿನ್ನ ನಂಬಿದೆ ಲಕ್ಷ್ಮೀ-ನಾರಾಯಣ ನಿನ್ಹೊರತು ಪೊರೆವ ದೈವವೆಲ್ಲಿದೆ ಪ ನಾ ಮೀರಿ ದುಷ್ಕರ್ಮವ ಮಾಡಿದೆಅಪಾರಮಹಿಮ ದಯಾನಿಧೇ ಅ.ಪ ನಾನಾ ಯೋನಿಗಳಿಂದ ಬಂದೆನೋಮಾನತಾಳಲಾರದೆ ಬಲು ನೊಂದೆನೋದೀನರಕ್ಷಕ ಎನ್ನ ಗತಿ ಮುಂದೇನೋಮಾನದಿಂದಲಿ ಪಾಲಿಸುವಂಥ ದೊರೆ ನೀನೋ1 ದಾಸರ ಮನ ಉಲ್ಲಾಸನೆಶ್ರೀಶ ಆಶ್ರಿತ ಜನರ ಪೋಷನೆಸಾಸಿರ ಅನಂತಮಹಿಮನೆಕ್ಲೇಶನಾಶ ಮಾಡಿಸೋ ಶ್ರೀನಿವಾಸನೆ 2 ರಂಗನಗರ ಉತ್ತುಂಗನೆಗಂಗಾಜನಕ ಗರುಡತುರಂಗನೆ ಉ-ತ್ತುಂಗ ಗುಣಗಳಂತರಂಗನೆ ಅ-ನಂಗನ ಪೆತ್ತ ರಂಗವಿಠಲನೆ 3
--------------
ಶ್ರೀಪಾದರಾಜರು
ನಾರಾಯಣ ನಿನ್ನ ಸ್ಮರಣೆಯಲಿ ಮನ ಬೇರು ವೂರಿರುವಂತೆ ಕಾರುಣ್ಯದಲಿ ಕಾಯೊ ಪ ವೇದನಾಲ್ಕರ ಕದ್ದಂಥಾ ದೈತ್ಯನ ಕೊಲ್ವಾ ಶದಿ ಮತ್ಯಾವತಾರ ಧರಿಸಿದೆ ಹರಿಯೇ 1 ಮಂದರ ಪೊತ್ತೆ ಭಾವಕಿಯಳ ಮೋಹಿಸಿ ಮೋಹಿನಿಯಾದೆ 2 ವರಹರೂಪದಿ ಪೋಗಿ ಧರೆಯನು ಧರಿಸಿದೆ ದುರುಳ ಹಿರಣ್ಯಕನಕರದಿಂದ ಸೀಳಿದೆ 3 ಕಂದನ ನುಡಿಕೇಳಿ ಕಂಬದಿಂದುದಿಸಿದೆ ತಂದೆಯ ಬಗೆದವನಾ ಛಂದದಿ ಸಲಹಿದೆ 4 ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ತುಳಿದು ಆತನ ಮನೆ ಬಾಗಿಲ ಕಾಯ್ದೆಯೊ 5 ತಾತನ ಮಾತನು ಕೇಳಿ ಮಾತೆಯ ಕೊಂದೆ ಖ್ಯಾತಿಯಿಂದಲಿ ಕ್ಷತ್ರಿಯರನು ಸಂಹರಿಸಿದೆ 6 ಮಾತೆಯ ವರ ಕೇಳಿ ನೀತಿಯಿಂದಲಿ ಪೋದೆ ಸೇತುವೆ ಕಟ್ಟಿ ನೀಖ್ಯಾತರಾವಣನಕೊಂದೆ 7 ಪುಟ್ಟ ಶಿಶುವಾಗಿ ಗೋಪಿಗೆ ಮುದ್ದು ತೋರಿದೆ ಬೊಟ್ಟಿಲಿ ಗಿರಿಯನು ನೆಗಹಿದೆ ಶ್ರೀ ಕೃಷ್ಣಾ 8 ತ್ರಿಪುರರ ಸತಿಯರ ವ್ರತವಗೆಡಿಸುವಂಥಾ ಅಪರಿಮಿತದಿ ಮೋಹಿಸುವಾ ಮೂರ್ತಿಯಾದೆ 9 ಭಕ್ತವತ್ಸಲ ದೇವಾ ಯುಕ್ತಿಯಿಂದಲಿ ಕಾಯ್ವ ವ್ಯಕ್ತಿ ಕಲ್ಕ್ಯಾವತಾರ ಧರಿಸಿದ ಹರಿಯೇ 10 ಶಬ್ದವ ನುಡಿಸುವ ಅಬ್ದಿನಿನ್ನದೊ ದೇವಾ ಶಬ್ದವಾಲಿಸದ ನಿಶ್ಯಬ್ದದೊಳಿರಿಸೆನ್ನಾ 11 ಅಂತರದೊಳಗೆನ್ನಾ ಕಂತುನಾರಾಯಣಾ ಸಂತಸದೊಳು ನಿಜ ಶಾಂತಿ ಪಾಲಿಪ ಗುರು 12
--------------
ಶಾಂತಿಬಾಯಿ