ಒಟ್ಟು 6772 ಕಡೆಗಳಲ್ಲಿ , 131 ದಾಸರು , 3884 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರವ ಮುಗಿದ ಮುಖ್ಯಪ್ರಾಣದುರುಳರ ಸದೆದು ಶರಣರ ಪೊರೆಯೆಂದು ಪ. ಜೀವೇಶರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳಳಿಯೆಂದು 1 ಪಂಚಭೇದ ಸತ್ಯವೆಂದುಮಾರುತಮತ ಪೊಂದಿದವರನು ಪೊರೆಯೆಂದು 2 ಇಲ್ಲಿ ಮಾತ್ರವು ಭೇದ ಅಲ್ಲಿ ಒಂದೆ ಎಂಬೊಕ್ಷುಲ್ಲಕರ ಹಿಡಿದ್ಹಲ್ಲು ಮುರಿಯೆಂದು3 ಕರ್ಮ ಶ್ರೀಹರಿಗೆ ಅರ್ಪಿತವೆಂದು 4 ಹರಿ ಮಾಡೊ ವ್ಯಾಪಾರ ಬಲ್ಲಕಾರಣದಿಂದಸಿರಿ ಗೋಪಾಲವಿಠಲಗೆರಗಿ ನಿಂದು 5
--------------
ಗೋಪಾಲದಾಸರು
ಕರಿ ಬಲಿ ಧ್ರುವ ಪ್ರಹ್ಲಾದನಲ್ಲಿ ಬಂದಂತೆ ಎನ್ನಲ್ಲಿ ಪ ನಿನ್ನಾಗಮನಕೆ ಹೃದಯ ಮನ ಬುದ್ಧಿ ಅರಳುವುದು ಸರ್ವದಾ ನಿನ್ನಾಗಮನಕೆ ಸರ್ವ ಮಾನಿಗಳೆಲ್ಲ ಕಾದು ನಿಂದಿಹರು ನಿನ್ನಾಗಮನಕೆ ಸರ್ವ ಕಾಲಾಕರ್ಮ ಅನುಕೂಲವಾಗಿಹವು ನಿನ್ನಾಗಮನಕೆನೇನೆ ಸರ್ವತ್ರ ಅನುಕೂಲ1 ಸೊಲ್ಲು ಲಾಲಿಸಬೇಕು ಶೀಲರುಕ್ತಿಬಲ್ಲಿದ ಮಹದೇವನೊಡೆಯ ಶುಕತಾತ ಹಲ್ಲಲ್ಲು ಕಿರಿದು ಕಾದು ನಿಂದಿಹರೊ2 ಕರಿಗಿರಿ ಮುದಮಯ ಗುರುತಂದೆವರದಗೋಪಾಲವಿಠಲಹೆದ್ದೈವ ಪಾಂಡುರಂಗಾ ವೆಂಕಟತಡವ್ಯಾಕೆ ಬರಲು ಯೋಚಿಪುದು ಏಕೆ ಬಾರಯ್ಯ ಭಕ್ತ ಬಂಧು ನಿನ್ನವರೆ ನಿಜ ಬಂಧೊ 3
--------------
ಗುರುತಂದೆವರದಗೋಪಾಲವಿಠಲರು
ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕರಿಗಿರೀಶ ನಿನ್ನ ಬೇಡುವೆನೀಗ ಪರಿಪಾಲಿಸೊ ಸತತ ಪ. ನರಹರಿ ಭಕ್ತರ ಪೊರೆಯುವೆ ನೀನೆಂ- ಇಂದು ಅ.ಪ. ನಾರಸಿಂಹ ನಿನ್ನ ಸಾರಿ ಭಜಿಸುವೆನು ತೋರೊ ನಿನ್ನ ಪದವ ಬಾರಿಬಾರಿಗೆ ಸ್ತುತಿಸಲು ಬಾಲನು ಘೋರ ದೈತ್ಯನ ಸೀಳಿ ಪೊರೆದೆಯೊ 1 ಶೇಷಾಂತರ್ಗತ ನಾರಸಿಂಹ ವಿ- ಶೇಷ ಮಹಿಮೆ ತೋರೊ ಶೇಷಶಯನ ಮಹರುದ್ರಾಂತರ್ಗತ ಪೋಷಿಸೊ ಭಕ್ತರ ಶಾಂತರೂಪದಿ 2 ಲೀಲೆಯಿಂದ ಶ್ರೀ ಲಕುಮಿ ಹಿತದಿ ವ್ಯಾಳಶಯನನಾಗಿ ಪಾಲಿಸಬೇಕೆನ್ನನು ಸತತದಿ ಗೋ- ಪಾಲಕೃಷ್ಣವಿಠ್ಠಲ ನೀ ದಯದಿ 3
--------------
ಅಂಬಾಬಾಯಿ
ಕರಿಗೊರಳಾ ಪಾಲಿಸೋ ಪ ಕರಿವರದನ ದಯ | ನಿರುತ ನಿನ್ನೊಳಗಿದೆಸುರಜೇಷ್ಠಾನುಜ | ಶರಣನ ಕರಪಿಡಿಅ.ಪ. ಪಶುಪತಿ ಎನಿಸಿಹೆ 1 ಆರು ನಿನಗೆ ಸರಿ | ವೈರಾಗ್ಯಾಧಿಪಕೋರುವೆನೋ ತವ | ಕರುಣಾ ರಸವನುಭೂರಿ ದಯದಿ ಮಮ | ಕಾರವ ಹರಿಪುದುಬೇರೊಂದನೊಲ್ಲೆ | ಕಾರುಣ್ಯಾಂಬುಧಿ 2 ದೇವ ದೇವ ಹರಿ | ದಾವಾಗ್ನಿಯ ಭಯತೀವರ ಹರಿಸುತ | ಗೋವ್ಗಳನುಳುಹಿದ |ಭಾವಜ ಪಿತ ಗುರು | ಗೋವಿಂದ ವಿಠಲನಪಾವನ ಪದ ದ್ವಯ | ಭಾವದಿ ತೋರಿಸಿ 3
--------------
ಗುರುಗೋವಿಂದವಿಠಲರು
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರಿಯ ಮೋಚಿಸಿದ ಸಿರಿವರ ಬಂದ ಪ ಗೋವುಗಳ ಕಾವ ಕೃಪಾಸಿಂಧು ಬಂದ 1 ವಾತಸುತ ಭೀಮಸೇನಪ್ರಿಯ ಬಂದ 2 ಭಾನುಕೋಟಿಸುಪ್ರಕಾಶ ವ್ಯಾಸ ಬಂದ 3 ರಾಜ ಬಂದ ದಶರಥಸುತ ಬಂದ | ತೇಜಿಯೇರಿ ಮೆರೆದ ಕಲ್ಕಿದೇವ ಬಂದ 4 ಭಾಸುರಾಂಗ ದೇವ ಶ್ರೀನಿವಾಸ ಬಂದ 5 ನೀಲ ಬಂದ ಬಾಲಕೃಷ್ಣ ಬಂದ ಬಾಲಧ್ರುವರಾಯಗೊಲಿದ ರಂಗ ಬಂದ 6 ರಾಜೇಶ ಶ್ರೀಹಯಮುಖ ದೇವ ಬಂದ 7
--------------
ವಿಶ್ವೇಂದ್ರತೀರ್ಥ
ಕರಿಯನೆರಿರೇ ಮುರಾರಿಗೆ ಪ ಹಂಸವಾಹನ ಶಿವರಂಶಗಳನು ಕೂಡಿಕಂಸ ಶಾಸ್ತ್ರವ ತ್ರಿವಂಶ ಬೆಳೆಸಿದಾ 1 ಗೋಪಿ ಪುತ್ರನ ಪಾಡಿ2 ಕರಿಪುದಸರಾಧ್ವರ ಧನುರ್ದನು ತನ್ನಕರದಿ ಮುಟ್ಟುತ ಮೃತ ತರುಳನ ಕಾದಾ 3 ರಾಮನಾಮದಿ ಭೂಪ ಧಾಮದೊಳಗೆ ಪುಟ್ಟಿಕಾಮಿನಿ ಸಹ ಕೂತ ಪ್ರೇಮ ಪುರುಷಗೆ 4 ಕರ ಕರದೊಳು ಸುರಭಿ ಕುಸುಮವೆತ್ತಿಪರಮ ಪುರುಷ ವಿಪತ್ ಪರಿಹರಿಸಿದನು 5 ಕರ ಕತ್ತರಿಸುವೆನೆಂಬೋ-ನ್ಮತ್ತನಾಸ್ತ್ರವ ಕರೆ ಕಿತ್ತು ರಕ್ಷಿಸಿದಾ 6 ಪೇಸಿಯಿಂದಲಿ ಪುಂಸ್ತ್ರೀ ಕೂಸುಗಳನೆ ಮಾಡಿತೋಷಿಸಿದನು ಬದರೀಶ ಮೌನಿಜನು 7 ಇಂಥ ಮಹಿಮೆಗಳಾನಂತ ಮಾಡಿದ ಲಕ್ಷ್ಮೀ-ಕಾಂತಗಬ್ದಾಪತ್ತಿ ಶಾಂತಿ ಮಾಡುವುದೇ 8 ಸುಂದರ ಭೂಷಣಗಳಿಂದ ಶೋಭಿಪ ಬಾಲಇಂದಿರೇಶನ ಕೃಪಾ ಪೊಂದಿ ಸುಖಿಸುತಿರೆಕುಂದಣದಾರತಿ ನಿಂದು ಬೆಳಗಿರೆ 9
--------------
ಇಂದಿರೇಶರು
ಕರಿವರದ ಗೋಪಾಲ ವಿಠಲ ಸಲಹೋ ಪ ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ. ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1 ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2 ನಿತ್ಯ ಮಂಗಳದಾ 3 ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4 ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5
--------------
ಗುರುಗೋವಿಂದವಿಠಲರು
ಕರುಣ ಬಾರದೆ ವಿಠ್ಠಲಾ | ಶ್ರೀ ಪಾಂಡುರಂಗ ಪ. ಸ್ಮರಣೆ ಮಾಡುತ ಪೊರೆ ಎಂದೆನ್ನುತ ವರಲುವಾ ಧ್ವನಿ ಕೇಳದೇ ಈ ಪರಿಯ ಗರ್ವವಿದೇನೊ ಹರಿಯೆ ಅ. ದೂರದಿಂದಲಿ ಬಂದೆನೋ | ಇಲ್ಲಿಂದ ಮುಂದೆ ದಾರಿ ಕಾಣದೆ ನಿಂದೆನೋ ದ್ವಾರಕಾಪತಿ ನೀನಲ್ಲದಿ ನ್ನಾರು ಕಾಯುವರೀಗ ಪೇಳು ಸಾರಿದೆನು ನಿನ್ನಂಘ್ರಿ ಕಮಲವ ಚಾರು ಚರಿತನೆ ಮಾರನೈಯ್ಯ 1 ತನುಸುಖ ಬೇಡಲಿಲ್ಲಾ | ನಿನ್ನ ನಾನು ಘನವಾಗಿ ಕಾಡಲಿಲ್ಲ ಮನದ ಹಂಬಲ ನೀನೆ ಬಲ್ಲೆಯೊ ಮನಕೆ ತಾರದೆ ಸುಮ್ಮನಿಪ್ಪೆಯೋ ಎನಗೆ ಪ್ರೇರಕ ನೀನೆ ಅಲ್ಲವೆ ನಿನಗೆ ದಾಸಳು ನಾನು ಅಲ್ಲವೆ 2 ಕರೆಕರೆ ಪಡಿಸುವುದೂ | ಸರಿಯಲ್ಲ ನಿನಗೆ ಕರಿವರದ ಕೇಳು ಇದೂ ನರಸಖನೆ ದಯದಿಂದ ನಿನ್ನ ಚರಣ ದರುಶನವಿತ್ತೆ ಒಲಿದು ಕರಪಿಡಿದು ಸಲಹೆಂದರೀಗ ತೆರೆದು ನೋಡದೆ ನೇತ್ರವಿರುವರೆ 3 ಜ್ಞಾನಿ ಹೃತ್ಕಮಲವಾಸ | ಶ್ರೀ ರುಕ್ಮಿಣೀಶ ಭಾನುಕೋಟಿ ಪ್ರಕಾಶ ನೀನೆ ಗತಿ ಇನ್ನಿಲ್ಲ ಅನ್ಯರು ಸಾನುರಾಗದಿ ಸಲಹೊ ಎನ್ನಲು ಆನನದಿ ಈಕ್ಷಿಸದೆ ನಿಂತರೆ ಮಾನ ಉಳಿವುದೆ ಭಕ್ತವತ್ಸಲ 4 ಇಟ್ಟಿಗೆ ಕೊಟ್ಟವನೊ ಕೊಟ್ಟನಿನ್ನೇನು ಅಷ್ಟು ಭಾಗ್ಯವನೂ ಕೊಟ್ಟೆ ಬಡ ಬ್ರಾಹ್ಮಣನ ಅವಲಿಗೆ ದೃಷ್ಟಿ ಬಿದ್ದರೆ ಕಷ್ಟ ಉಂಟೆ ಕೊಟ್ಟು ಅಭಯ ಪೊರೆ ಗೋಪಾಲ- ಕೃಷ್ಣವಿಠ್ಠಲ ಮನದಿ ತೋರೋ5
--------------
ಅಂಬಾಬಾಯಿ
ಕರುಣ ಬಾರದೇ ಗುರುವೇ ಕರುಣ ಬಾರದೇ ಪ ಅಕಟ ನಿನ್ನ ಚರಣ ನಂಬಿದ ಶರಣನ ಮೇಲೆ ಅ.ಪ. ಭವ ಕಷ್ಟದಿಂದ ಕಡಿಗೆ ಮಾಡಿ ಕೃಷ್ಣ ಪದ್ಮವನ್ನು ತೋರುತುತ್ಕøಷ್ಟ ಪದವಿ ಪಾಲಿಸೊ ಗುರುವೇ 1 ಸ್ಮರಣೆ ಒಂದೇ 2 ಅಖಿಳ ಸುರರ ಸಲಹುವ ಸೀಲ ತಂದೆವರದಗೋಪಾಲವಿಠ್ಠಲಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಕರುಣ ವಂದಿರೆ ಸಾಕಿನ್ನು ಪ. ಕರುಣ ವಂದಿರೆ ಸಾಕು ಸಿರಿಯರಸನೆ ನಾನಾ ಪರಿಯೊಳನ್ಯರ ಬೇಡಿ ತಿರುಗಲಾರೆನು ಕೃಷ್ಣ ಅ.ಪ. ಪರಮಾಣು ತ್ರುಟಿಲವ ನಿಮಿಷ ಮಾತ್ರ ಯುಗ ಗುರು ಪ್ರಾಣ ಒಳನಾಡಿ ಮುಹೂರ್ತ ಪ್ರಹರ ಮಾಸ ಋತ್ವಯನ ವ- ತ್ಸರಯುಗ ಮಾನವೆಂಬ ಉಪಾದಿಗ ಳಿರಿಸಿ ಭೋಗಗಳನುಂಬ ಮಹಾಕಾಲ ಧುರವಹ ತಾನೆಯೆಂಬಾ ಧೀರತೆಯಿಂದ ಲಿರುವಿ ಲೋಕದಲಿ ತುಂಬಾ ಪಾದ ಪದ್ಮ 1 ತೃಣತರು ಕ್ರಿಮಿಪಕ್ಷಿ ಪಶುನರ ದೇವಕ್ಕ ಳೆಣಿಕಿಯಿಲ್ಲದ ದಿತಿಜಾರಿ ಜೀವರನೆಲ್ಲ ಕುಣಿಸುವ ಬೊಂಬೆಯಂದದಲಾಡಿಸುತ ಲೇಶ ದಣಿವಿಲ್ಲದೆ ಭಕ್ತ ಜನರಿಗೆ ಸುಖಸಾರ ಉಣಿಸಿ ಮದಾಂಧರ ಹಣಿದು ಹಣಿದು ಕುಟ್ಟಿ ಒಣಗಿಸಿ ಬಿಸುಟು ತಿನ್ನುವತ್ತಿದುವಿ ಮೇಲಣ ದುರ್ಗಪತಿಗಳನು ಮನ್ನಣೆಯಿಂದ ತಣಿಸಿ ಕಾಪಾಡುವನು ನೀನಹುದೆಂದು ಮಣಿದು ಬೇಡುವೆ ನಿನ್ನ ಮುರಹರ ಸಲಹಿನ್ನು 2 ಮಾಧವ ಮಂಗಲದಾಯಕ ತವ ಪದ್ಮ ಪಾದ ಸೇವೆಯ ಮಾಡುವಲ್ಲಿಗೆ ಜಾಹ್ನವಿ ಗೋದಾವರಿ ತುಂಗ ಕಾವೇರಿ ಕಲುಷಾವ ನೋದದಿ ಕೃಷ್ಣ ಸರಸ್ವತಿ ಗೋಮತಿ ವೇದವತಿ ಮೊದಲಾದ ನದಿಗಳೆಲ್ಲ ಸಾದರದಲಿ ಸೇರುತ ಬಂದಿಹರೆಂಬ ಗಾಧವಚನ ನಂಬುತ ನಿಂದಿಹೆನು ಕ್ಷೀ ರೋದಧಿ ಗೃಹನಿರತ ಸಾಕಿದೆ ಮುಂದಿ- ನ್ಹಾದಿ ತೋರಿಸು ಸ್ವರತ ಶ್ರೀದ ವೆಂಕಟರಾಜ ಸೇವಕನಾನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಕಾಯೊ ಗೋಪಾಲಾಚರಣವ ಸ್ಮರಿಸುವೆ ಶರಣರ ಪಾಲಾ ಪ ಹರಣ ಹೋಗದ ಮುನ್ನ | ಹರಿ ನಿನ್ನ ಹಂಬಲನ್ನಕರುಣಿಸಿ ಕಾವುದೆನ್ನ | ಕರುಣ ನಿಧಿಯೆ ಘನ್ನಮೊರೆಯಿಡುವೆನು ನಿನ್ನ | ಚರಣ ಸರೋಜವನ್ನಶಿರದೊಳಗಿರಿಸೆನ್ನ | ಪರಮ ಪಾವನ್ನ 1 ಮರುತನ ಮತದಲ್ಲಿ | ಕರೆ ತಂದು ಎನ್ನನುತರತಮ ಜ್ಞಾನವ | ಅರುಹುವುದೊಳಿತಲ್ಲೆ |ಹರಿಯೆ ಸರ್ವೋತ್ತಮ | ಮರುತ ಜೀವೋತ್ತಮಹರ ವೈಷ್ಣವೋತ್ತಮ | ವರ ಜ್ಞಾನ ಪಾಲಿಸಿ 2 ಪನ್ನಗಾಚಲವಾಸ | ಪ್ರಸನ್ನರಘನಾಶನಿನ್ನ ನಾಮವ ಅನಿಶ | ಎನ್ನಿಂದ ನುಡಿಸೀಶ |ಅನ್ನಂತ ಗುಣ ಗುರು | ಗೋವಿಂದ ವಿಠಲನೆಎನ್ನ ಬಿನ್ನಪ ಸಲಿಸು | ಮನ್ನಿಸಿ ಕುಂದುಗಳ 3
--------------
ಗುರುಗೋವಿಂದವಿಠಲರು
ಕರುಣದಿ ಕಾಯೋ ಗೋವಿಂದಾ ಯಂವ ದುರಿತಗಳಿಂದ ನೀನೀಗೊ ಮುಕುಂದ ಪ ಹರಿಸೇವೆ ಮಾಡುತ್ತ ಬಂದೆ ಮುಂದೆ ಚಿರ ಸಾಯುಜ್ಯವನ್ನು ನೀಡೋ ಶರಣಂದೆ ಅ.ಪ. ಲಕ್ಷಯೆಂಬತನಾಲ್ಕು ಜನ್ಮಯೆತ್ತಿ ಭಕ್ಷಿಸಿ ಬಂದೆನು ಕೋಟಿ ದುಃಖಗಳಾ 1 ಸಾಕ್ಷಿಯಾಗಿರುವಂಥ ಜೀವಾತ್ಮನನು ಲಕ್ಷಕೆ ತಂದೆ ಮನುಜ ಜನ್ಮದಲೀ 2 ಪಾಪ ಪುಣ್ಯಕೆ ಕರ್ತೃವಾಗಿ ಭವದಿ ಕೂಪದಿ ನಿಂದೆನು ಬೋಕ್ತøವು ಆಗೀ 3 ಪಾಪವ ಕ್ಷಮಿಸೋ ಸರ್ವಾತ್ಮಯಂನ ತಾಪವ ನೀಗುತ್ತ ಜನ್ಮ ಪರಿಪರಿಸೋ4 ಜನ್ಮ ತಾಳಲಾರೆ ಹರಿಯೇ ತಾಳಿ ಜನ್ಮದಿ ಹರಿಪಾದ ನಾ ಬಿಡಲಾರೆ 5 ಸನ್ನುತವರ ದೂರ್ವಾಪುರದ ನಂಮ ಚನ್ನಕೇಶವನೇ ಭಕ್ತಿಯನು ನೀ ಕೊಡೆಲೋ6
--------------
ಕರ್ಕಿ ಕೇಶವದಾಸ