ಒಟ್ಟು 11788 ಕಡೆಗಳಲ್ಲಿ , 134 ದಾಸರು , 6185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟೇಕೆ ನಿರ್ದಯ ಶ್ರೀಹರಿಯೇ ಸೃಷ್ಟೀಪತಿಯೆ ಪ. ಮುಟ್ಟಿ ಭಜಿಪರ ನಿಟ್ಟಿಸಿ ನೋಡದೆ ನಿಷ್ಠುರವಾಗಿಹುದಿಷ್ಟವೆ ನಿನಗಿದು ಅ.ಪ. ಸಣ್ಣ ಮಾತುಗಳಾಡಿದೆನೇನೊ ದೆನ್ನ ತಲೆಯ ಮೇಲಿನ್ನೊಗೆಯದಿರು 1 ಕೋರೆಯ ತೋರುತ ಕೊಸರುವುದೇಕೋ ಶ್ರೀಹರಿ ನೀ ನೀರೀತಿ ಮಾಡುವ ಬಗೆಯಿನ್ನೇಕೋ ನೀರಜಭವಪಿತ ನೀನೇನಗೈದರು ಸೇರಿದೆ ನಿನ್ನನು ಸಾರೆನದಾರನು 2 ಸಿಂಗನ್ನ ಪೋಲುವ ಮುಖ ಧರಿಸಿ ಕಂಗೆಡೆ ಭಯದಿ ಜಗಂಗಳ ನಡುಗಿಪ ನುಂಗಲು ಬರುವಾಸಿಂಗನ ಬಗೆ ಸಾಕೋ 3 ಮುನ್ನಾ ಶುಕ್ರನ ಕಣ್ಣನು ತಿವಿದಾ ಪುಲ್ಲಿನತುದಿಯಿಂ ಎನ್ನೀ ಕಣ್ಣನ್ನು ತಿವಿಯದಿರಣ್ಣಾ ನಿನ್ನೀಕರದೊಳಿಹ ಘನ ಕೊಡಲಿಗೆ ನೀ ನಿನ್ನಾರನು ಗುರಿಗೈಯದಿರೆಂಬೆನು 4 ಶಿಲೆಯಾಗಿದ್ದವಳ ಕಲುಷವ ಕಳೆದು ಪಾವನೆಯೆನಿ ಕಾಳಿಂಗನ ಫಣೆಯೊಳು ಕುಣಿಕುಣಿದೇ ಭಳಿರೆನೆ ಬಾಲ ಗೋಕುಲ ಬಾಲೆಯರೆಲ್ಲರ ಜಾಲವಿದ್ಯೆಯಿಂ ಮರುಳುಗೊಳಿಸಿದೆ 5 ತುರುಗವನೇರುತ ತರುಬಲು ಬೇಡೈ ಧರೆಯೊಳು ನೀನೆತ್ತಿದ ಪರಿಪರಿ ರೂಪವ ಸ್ಮರಿಸಿ ಸ್ಮರಿಸಿ ಮನಬೆರಗಾಗಿದೆ ಹರಿ6 ಶರಣಾಭರಣನೇ ನೀನೆಂದು ಮನದೆಂದು ಮರೆಬೇಡುವೆನೈ ಬಳಿಸಂದು ವರಶೇಷಗಿರಿ ದೊರೆನೀನಿಂದು 7
--------------
ನಂಜನಗೂಡು ತಿರುಮಲಾಂಬಾ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಇಹಸುಖ ಮೊದಲೇಯಿಲ್ಲ | ಕೃಷ್ಣ ಅಹಹ ಪರಸುಖವಾಗುವುದ್ಹ್ಯಾಗೊ ಪ ಸಾಹಸಿನಾನೆನುತ ಜನರ ಮೆಚ್ಚಿಸುವೊಡೆ ಕುಹಕ ಮಾತುಗಳ ಕೂಗಿ ಬಾಯಾರಿದೆ ಅ.ಪ ಶ್ರವಣ ಮನನ ನಿಧಿ ಧ್ಯಾಸನ ವೊಂ- ದೆವೆ ಮಾತ್ರವು ನಿಜವಾಗಿ ಕಾಣೆನುನಾ ಬವನಾಶಿ ಧರಿಸಿ ದಾಸನೆಂದು ನಾ ಬರಿದೆ ದೇಶಗಳ ತಿರುಗಿ ಬೆಂಡಾದೆನು 1 ಯಮನಿಯಮಾಸನ ಯೋಗ | ಗಳ ಭ್ರಮೆಯ ಪಡುತ ಬಳಲುವೆಯಾವಾಗ ಮಮಯೆಂಬುದರಿಂ ಬಂದಿತು ರೋಗ 2 ಶಂಕರ ಮುಖ ಸುರವಂದ್ಯ | ಅರಿ ಶಂಖ ಗದಾಧರ ಶ್ರೀಶ ಮುಕುಂದ ಸಂಕಟ ಬಂದಾಗ ವೆಂಕಟರಮಣೆಂದು ಮಂಕುಜನರು ಪೇಳ್ವಗಾದೆಯಂತಾಯಿತು 3 ಕಾಸಿಗೆ ತಿರುಗಿದೆನಲ್ಲದೆ | ದಿವ್ಯ ಕಾಶಿಗಯಾಯಾತ್ರೆಯ ಮಾಡಿದೆನೇ ಘಾಶಿಪಟ್ಟಿ ಸಾಕು ಸಾಕಿದರ ಗೊಡವೇ 4 ಕೊಟ್ಟದ್ದರೆ ಹರಿಕೊಡುವ | ಯಂ ಕೊಟ್ಟರುವದಕು ಕೊಡದಿರುವದಕೂ ಕೃಷ್ಣ ನೀನರಿಯದೆ ನಾನು ಸ್ವತಂತ್ರನೇ 5 ಕಣ್ಣಿಲ್ಲದ ಚಿಂತೆವಂದು | ಸದಾ ಬನ್ನ ಬಡುವದು ಯೋಚನೆಯೆರಡು ನಿನ್ನವನೆನಿಸೀ ಕಷ್ಟ ಬಿಡಿಸಿ ಒಳ- ಕಣ್ಣು ಕೊಟ್ಟು ನಿನ್ನ ಸೇವೆಯ ಪಾಲಿಸೋ 6 ಛಳಿ ಜ್ವರದ ಯಾತನೆ ಪಡುವೆ | ನಿನ್ನ ಕರೆಕರೆ ಪಡಿಸುವುದು ನಿನಗೆ ತರವೇ 7 ಆರು ಜನರ ಸೇವೆ ಕೊಡಿಸೋ | ಯೀ ಆರು ಜನರ ಸಂಘವ ಪರಿಹರಿಸೋ ಮೂರು ಜನದ ಕೂಟ ಮೊದಲೇ ಬಿಡಿಸೋ ತಾಳಲಾರೆಯಿವರು ಬಲು ಕ್ರೂರಾತ್ಮರು 8 ಆಸೆಯ ಪರಿಹರಿಸಯ್ಯಾ | ನಿಜ ದಾಸನೆನಿಸಿ ನೀ ಪಿಡಿಯೆನ್ನ ಕೈಯ್ಯಾ ಈಸಲಾರೆ ಗುರುರಾಮ ವಿಠ್ಠಲ ಜೀಯಾ 9
--------------
ಗುರುರಾಮವಿಠಲ
ಈ ತನುವಿನೊಳಗೆ ಅನುದಿನವಿದ್ದು ಎನಗೊಂದು ಮಾತ ಹೇಳದೆ ಹೋದಿ ಹಂಸ ಪ. ಜಾಳಂಧರಯೆಂಬೊ ಮಾಳಿಗೆ ಮನೆಯಲ್ಲಿ ನೋಳ್ಪರೆ ಒಂಬತ್ತು ಬಾಗಿಲು ಬೇರಿಗೆ ಹೇಳಿ ಹೋಯಿತೆ ಒಂದು ಮಾತ 1 ಏರಿಯು ನೀರನು ತೆಗೆದುಕೊಂಡಿದ್ದೇನೊ ಭೋರೆಂಬೋ ಮಳೆ ಹೊಯ್ದು ಭೋರೆಂಬೊ ಮಳೆ ಹೊಯ್ದು ಬಣವೆದ್ದು ಹೋಗುವಾಗ ಈ ಏರಿಗೆ ಹೇಳಿಹೋಯಿತೆ ಒಂದು ಮಾತ 2 ಗಟ್ಟಿ ಬೆಟ್ಟಗಳಲ್ಲಿ ಅಟ್ಟಡವಿಯಲ್ಲಿ ಇಕ್ಕಿತ್ತು ಇಟ್ಟಿತ್ತು ಜೇನು ತನ್ನ ಸುಖಕಾಗಿ [ಇಟ್ಟ]ತುಪ್ಪವನುಂಡು ನೊಣ ಹಾರಿಹೋಗುವಾಗ ಈ ಬೆಟ್ಟಿಗೆ ಹೇಳಿ ಹೋಯಿತೆ ಒಂದು ಮಾತ 3 ಹೆಸರು ಹೇಳುವೆ ನಾನನುದಿನವು ರಸಭೋಜನವವುಂಡು ಜೋತಿತಾಹೋಗುವಾಗ ಪ್ರಣತಿಗೆ ಹೇಳಿ ಹೋಯಿತೆ ಒಂದು ಮಾತ 4 ಸಪರ್Àಶಯನ ಹಯವದನನಾಡಿದ ಮಾತು ಪಣೆ ಲಕ್ಷ್ಯವ ತೊಡೆದು ಮ್ಯಾಲಿರಲಾಗಿ ಸುಪ್ಪಾಣಿಮುತ್ತು ಬಾಯ್ಬಿಟ್ಟು ಹೋಗುವಾಗ ಈ ಚಿಪ್ಪಿಗೆÀ ಹೇಳಿ ಹೋಯಿತೆ ಒಂದು ಮಾತ 5
--------------
ವಾದಿರಾಜ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈ ನೀಚಮನಸಿಗೆ ಮಾಡಲಿನ್ನೇನು ಥೂ ನಾಚಿಕಿಲ್ಲದಕೆ ಉಪಾಯವೇನು ಪ ಹರಿಚರಣ ಸ್ಮರಿಸುವುದು ಹರಿದಾಟ ಮರಿವಲ್ಲದು ಪಿರಿದುನುಡಿಯಾಡುವುದು ಕಿರಿಗುಣವ ಬಿಡದು ಪರಲೋಕ ಬಯಸುವುದು ನಿರುತದಿಂ ನಡಿವಲ್ಲದು ಶರಣರೊಡನೆನದಿಹ್ಯದು ಪರನಿಂದೆ ಬಿಡದು 1 ಜ್ಞಾನನುಡಿ ಪೇಳುವುದು ನಾನೆಂಬುದಳಿವಲ್ಲದು ಧ್ಯಾನದೊಳಗಿರುತಿಹ್ಯದು ಶ್ವಾನಕಲ್ಪನ್ಹಿಂಗದು ದಾನಗುಣ ಬೋಧಿಪುದು ಜೀನತ್ವ ತೊರಿವಲ್ಲದು ಆನಂದ ಬೇಡುವುದು ಹೀನಭ್ರ್ರಾಂತಿ ಬಿಡದು 2 ಸಾದುಪಥದಾಡುವುದು ಭೇದ ಕಡಿವಲ್ಲದು ವೇದಾಂತ ಕೇಳುವುದು ಸಾಧನಕೆ ಒಲ್ಲದು ಪಾದಭಕ್ತಿ ಬೇಡುವುದು ಕ್ರೋಧ ತೊಡಿವಲ್ಲದು 3 ನಾಮಭಜನೆ ಮಾಡುವುದು ತಾಮಸವ ತುಳಿವಲ್ಲದು ಸ್ವಾಮಿಯೊಲುಮೆ ಕೋರುವುದು ಪಾರತ್ವ ಬಿಡದು ಕಾಮಿತೊಲ್ಲೆನೆನ್ನುವುದು ಭಾಮೆ ಭೂಮಿಪ್ರೇಮ ಬಿಡದು ಕ್ಷೇಮ ಸದಾ ಬೇಡುವುದು ನೇಮನಿತ್ಯ ಒಲ್ಲದು 4 ಶಾಸನವ ಪೇಳುವುದು ತಾಸು ಸ್ಥಿರ ನಿಲ್ಲದು ನಾಶಜಗವೆನುತಿಹ್ಯದು ಕಾಸು ಒಲ್ಲೆನ್ನದು ದೋಷನಾಶನ ಜಗದೀಶ ಶ್ರೀರಾಮನಡಿ ದಾಸನಾನೆಂಬುವುದು ವಾಸನೆಯ ಬಿಡದು 5
--------------
ರಾಮದಾಸರು
ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು
ಈ ಮಹಿಮೆಗೆ ಏನೆನಬಹುದು ಧ್ರುವ ರೂಪವಿಲ್ಲದೆ ರೂಪಾಗಿ ರೂಪಕ ಅರೂಪನಾದ ಅಪಾ ಮೂರು ಲೋಕಕ ಚಿದ್ರೂಪನಾದ ಮೂರ್ತಿಗೆ 1 ಸರ್ವರೊಳು ಸಾಕ್ಷವಾಗಿ ನಿರ್ವಿಕಲ್ಪ ನಿರ್ಗುಣಿ ತಾ ನಿರ್ವಿಕಾರನಾದ ನಿರ್ಭರ ನಿರ್ವಿಶೇಷಗೆ 2 ಭಾವಕ ಸ್ವಭಾವನಾದ ಪವಿತ್ರಪಾವನನೀತ ಭವನಾಶಗೈಸಿದ ಮಹಿಪತಿ ಗುರುಮೂರ್ತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈ ರಂಗಧಾಮ ಈ ಸುಂದರನು ಈ ರಂಗಧಾಮ ಪ. ಕಂಚಿವರದ ರಾಜನಂತಿಹ ಮಿಂಚಿನಂತ್ಹೊಳೆವ ಸಂಚಿತಾರ್ಥವೀವ ದೇವ 1 ಪರಮ ಪುರುಷ ಪಾವನಾಂಗ ಭರದಿ ಭಕ್ತರನು ಪೊರೆವಾ ಕರವ ಪಿಡಿದು ಪೊರೆವ 2 ಸರ್ವತೋಮುಖ ಸರ್ವರಂಗ ಸಂಗದಲ್ಲಿರುವಾ ಗರ್ವಾರಹಿತ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಈ ವಿಬುಧರ ಸಂಗವೆ ಮಹಾಪ್ರಮೋದ ದುರ್ಲಭ ಜ್ಞಾನಿಯ ನಿಜಾತ್ಮಬೋಧ ಭಾಗ್ಯವಿದೇ ಬಹುಜನ್ಮದ ಪುಣ್ಯ ಯೋಗ್ಯರಬೋಧಾ ದೊರಕುವುದಣ್ಣ ಬೋಗ್ಯದಿ ಲಂಪಟನಾದವಗಿನ ಅಗ್ಗದಿ ಸಿಗುವದೆ ಸಜ್ಜನರನ್ನಾ ಸ್ವರ್ಗದಿ ಸಿಗದಿಹ ಸಂತರ ಬೋಧ ದುರ್ಲಭ ಜ್ಞಾನಿಯ ನಿಜಾತ್ಮಬೋಧ 1 ಉಪದೇಶದಿ ಈ ಭವವನು ಕಡಿವಾ ಬಾಧೆಯ ಸುಡುವಾ ಮುಕುತಿಯ ಕೊಡುವಾ ಹೃದಯದೊಳಿರುವಾ ಆತ್ಮಸ್ವರೂಪ ಜ್ಞಾನದಿ ತಿಳುಹಿನಿ ಮೋದವ ಕೊಡುವಾ ಸ್ವಾನು ಭವಾನಂದಾನ್ವಿತರೂಪ ಸನ್ನುತ ಶಂಕರಗುರುಸ್ವರೂಪ2
--------------
ಶಂಕರಭಟ್ಟ ಅಗ್ನಿಹೋತ್ರಿ
ಈ ವೇಳೆಯಲಿ ಸಲಹದಿರುವರೆಯನ್ನ ಶ್ರಿ ವತ್ಸಲಾಂಛನ ಶ್ರಿತಕಲ್ಪತರು ಹರಿ ಪ ರತಿ ರಮಣಜನಕ ಭಾರತೀರಮಣ ಸನ್ನುತನೆ ದಿತಿ ತನಯ ಸಂಹಾರಾಚ್ಯುತ ಮುಕುಂದ ಪತಿತಪಾವನ ಭವದುರಿತ ಪಾಶ ಪರಿಹರಿಸೆ- ನ್ನುತ ನಿನ್ನ ಸ್ತುತಿಸೆ ಸದ್ಗತಿ ತೋರಿ ಗೋವಿಂದ 1 ಅಕಲಂಕ ಚರಿತ ತಾರಕರೂಪ ಸರ್ವೇಶ ಸಕಲಲೋಕ ಶರಣ್ಯ ಪ್ರಕಟ ಮಹಿಮಾ ವಿಕಸಿತಾಂಬುಜ ನೇತ್ರ ಪ್ರಕಟದಾನವ ಜೈತ್ರ2 ಮೊರೆ ಹೊಕ್ಕವರನು ಕಾಯ್ವ ಬಿರುದು ನಿನ್ನದು ಕೃಪಾ ಕರ ಗರಡಗಮನ ಕರಿವರದ ಶೌರಿ ಧರಣಿಧರ `ವರಹೆನ್ನೆ ಪುರನಿಲಯ’ ಶ್ರೀಮ ನೃಹರಿ ಪರಮ ಪುರುಷ ಶಿರಿಯರಸ ಹರುಷದಲಿ 3
--------------
ಹೆನ್ನೆರಂಗದಾಸರು
ಈ ಸಾಧನೆಯ ಈ ಧರ್ಮಗಳ ಗುರಿಯೊಂದÉ ಕೇಳಿರಿ ಇಂದೇ ಪರಮಾತ್ಮಪ್ರಾಪ್ತಿ ಇದರಿಂದೇ ಪ ನಿಷ್ಕಾಮ ಕರ್ಮವ ಮಾಡುವನು ನಿಷ್ಕಾಮ ಬಕುತಿಯ ಮಾಡುವದು ಆ ವೈರಾಗ್ಯ ಆ ಸುವಿವೇಕ ಮನದಲ್ಲಿ ಮೂಡುವದಿಂದೇ ಪರಮಾತ್ಮಪ್ರಾಪ್ತಿ 1 ವಿಷಯಾಭಿಲಾಷಾ ಬಿಡುವುದಕೆ ಮನದಲ್ಲಿ ಸ್ಥಿರತೆಯು ನಿಲುವುದಕೆ ಗುರು ಬೋಧೆಯಲಿ ಮನ ರಮಿಸುತಲಿ ಜಿಜ್ಞಾಸೆ ಮೂಡುವದಿಂದೇ ಪರಮಾತ್ಮಪ್ರಾಪ್ತಿ 2 ಹಗುರಾದ ಸಾಧನವಿದಕೆಲ್ಲ ಜಗದಲ್ಲಿ ಇರುವ ಜನಕೆಲ್ಲ ಅಘನಾಶಕ ಶ್ರೀಶಿವಶಂಕರನೋಳ್ ಘನಪ್ರೇಮ ಬಕುತಿಯಿದೋಂದೇ ಪರಮಾತ್ಮಪ್ರಾಪ್ತಿ 3
--------------
ಶಂಕರಭಟ್ಟ ಅಗ್ನಿಹೋತ್ರಿ