ಒಟ್ಟು 18204 ಕಡೆಗಳಲ್ಲಿ , 138 ದಾಸರು , 7712 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮನವೇ ಕೇಳು ಕೇಶವನ ನಾಮವ ನುಡಿಸು |ಎಲೆ ಮನವೆ ಮುರವೈರಿಯಂಘ್ರಿಗಳ ಭಜಿಸು |ಎಲೆಲೆ ಕರಗಳಿರ ಶ್ರೀಧರನ ಸೇವೆಯ ಮಾಡಿ |ಎಲೆ ಕರ್ಣಗಳಿರ ಅಚ್ಯುತನ ಕಥೆಕೇಳಿ1ಎಲೆ ನೇತ್ರಗಳಿರ ಶ್ರೀ ಕೃಷ್ಣಮೂರ್ತಿಯ ನೋಡಿ |ಎಲೆ ಪಾದಗಳಿರ ಹರಿಯಾತ್ರೆಯನು ಮಾಡಿ ||ಎಲೆ ನಾಸಿಕವೆ ಮುಕುಂದನ ಚರಣಕರ್ಪಿಸಿದ |ತುಳಸೀ ಪರಿಮಳವನಾಘ್ರಾಣಿಸನುದಿನವು 2ಎಲೆ ಶಿರವೆ ನೀನಧೋಕ್ಷಜನ ಶ್ರೀ ಚರಣದ |ಜಲರುಹದೊಳಗಳಿಯುಂಟೆ ಲೋಲಾಡು |ಎಲೆ ತನುವೆ ನೀನು ಶ್ರೀ ಪುರಂದರವಿಠಲನ |ಸಲೆ ಭಕುತ ಜನರಂಗ ಸಂಗತಿಯಲಿ ಬಾಳು 3
--------------
ಪುರಂದರದಾಸರು
ಎಲೊ ರಮಾಪತಿ ಹಕ್ಕಿಗಳು ಬಾಯಿ ಬಿಡುವಂತೆಬಳಲುವೆವೊ ಈಗ ನಾವೆಲ್ಲ | (ನಾವೆಲ್ಲ) ಈ ಬ್ರಹ್ಮಕುಲದ ಅಭಿಮಾನ ನಿನದಲ್ಲೆ ಪಗೌಡ ಪ್ರಬಲಾಗೆ ತಲೆಗೂಡೆನಿಸಿತೆನಗೆ ನೋಡ ಮನೆಕಡೆಗೆ ಮಡಿವಾಳ | (ಮಡಿವಾಳ) ಮರ ಹಾಳುಮಾಡುವರು ದ್ವಿಜರೆಂಬನು ಜೀಯ 1ಗಡಿಗೆಗಳು ಒಂದನ್ನ ಕೊಡನು ಗ್ರಹಣಗಳು ಹನ್ನೆ-ರಡೂ ಆದರನ್ನಾ ಕುಂಬಾರ | (ಕುಂಬಾರ)ನಿದ ಸ್ಮರಿಸಿಅಡವಿಯೊಳು ಕುಳಿತು ಆ(ಅ ?)ಳಬೇಕು 2ಭಕ್ರಿಯೆಂಬುದು ತುಪ್ಪ ಸಕ್ರಿ ಮಾಡಿದ ಬಡಿಗಅಕ್ರೂರ ವರದ ದಯಾಸಿಂಧು | (ದಯಾಸಿಂಧು) ಎಂದು ಈಅಕ್ರಮವ ನಿನಗೇ ಉಸಿರುವೆ3ಕಾಲರಕ್ಷೆಯ ಹೊಲಿಯ ಧಾಳಾಯ ಕೊಡುಯೆಂದುಗೋಳಾಡಿಸುವನು ಅತಿಶೂದ್ರ | (ಅತಿಶೂದ್ರ) ಈ ದುಃಖಕೇಳುವರೇ ಇಲ್ಲೋ ಪರಮಾತ್ಮ 4ಯರಿಬೀಳು ಅದಕೂ ಮತ್ತೇರಿಸುವನೋ ಎಲ್ಲೋ ಎಂ-ದಿರುಳೆಲ್ಲ ನಿದ್ರಿಲ್ಲೋ ಮೇಲ್ಪøತ್ತಿ | (ಮೇಲ್ಪøತ್ತಿ)ಯೆಂಬುವದುಗುರುತಿಲ್ಲಧೋಯ್ತೋ ಗುರುವರ್ಯ 5ಇದ್ದ ಜ್ಞಾತಿಗಳಿಂದೆ ಮುದ್ದ್ಯಾಗಬೇಕೆಂಬಶ್ರದ್ಧೆಯನೇ ಬಿಟ್ಟು ಅವನನ್ನೇ | (ಅವನನ್ನೇ) ಕೊಂಡಾಡಿಹೊದ್ದಿ ದಿನಗಳದೂ ಬದುಕುವರು6ಈ ರೀತಿ ನೋಡಲ್ಕೆ ಮೂರನೆ ಕಾಲವೇಂತೋರುವದೊ ಯಮಗೆ ಪ್ರಾಣೇಶ | (ಪ್ರಾಣೇಶ) ವಿಠಲ ಉ-ದ್ಧಾರ ಮಾಡುವದು ನೀ ಬಲ್ಲೆ7
--------------
ಪ್ರಾಣೇಶದಾಸರು
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ಪ.ವೇದ ಶಾಸ್ತ್ರ ಪಂಚಾಗ ಓದಿಕೊಂಡು ಪರರಿಗೆಬೋಧನೆಯ ಮಾಡವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 1ಚಂಡ ಭಟರಾಗಿ ನಡೆದು ಕತ್ತಿಢಾಲು ಕೈಲಿ ಹಿಡಿದುಖಂಡ ತುಂಡು ಮಾಡುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2ಅಂಗಡಿಗಳನ್ನೆ ಹೂಡಿ ವ್ಯಂಗ್ಯ ಮಾತುಗಳಾಡಿಭಂಗಬಿದ್ದು ಗಳಿಸುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3ಕುಂಟಿ ತುದಿಗೆ ಕೊರಡುಹಾಕಿ ಹೆಂಟೆಮಣ್ಣು ಸಮಮಾಡಿರೆಂಟೆ ಹೊಡೆದು ಬೆಳೆಸುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5ಕೊಟ್ಟಣವ ಕುಟ್ಟಿಕೊಂಡು ಕಟ್ಟಿಗೆಯ ಹೊತ್ತುಕೊಂಡುಕಷ್ಟಮಾಡಿ ತಿಂಬುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6ತಾಳದಂಡಿಗೆ ಶೃತಿ ಮೇಳ ತಂಬೂರಿ ಹಿಡಿದುಕೊಂಡುಸೂಳೆಯಂತೆ ಕುಣಿಯುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7ಸನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಭೈರಾಗಿನಾನಾ ವೇಷ ಹಾಕುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8ಹಳ್ಳದಲ್ಲಿ ಕುಳಿತು ಕೊಂಡು ಕಲ್ಲು ದೊಣ್ಣೆ ಹಿಡುದುಕೊಂಡುಕಳ್ಳತನವ ಮಾಡುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10ಉನ್ನಂತಪುರಂದರ ರಾಯನ ಧ್ಯಾನವನುಮನಮುಟ್ಟಿ ಮಾಡುವುದುಮುಕ್ತಿಗಾಗಿ ಆನಂದಕಾಗಿ* 11
--------------
ಪುರಂದರದಾಸರು
ಎಲ್ಲಿ ಬೆಣ್ಣೆಯ ಬಚ್ಚಿಡುವೆನಾ-ಈ |ಕಳ್ಳ ಕೃಷ್ಣನ ಹಾವಳಿ ಘನವಾಯಿತು ಪನೆಲುವು ನಿಲುಕದೆಂದಿಡುವೆನೆ-ನೋಡೆ |ಬೆಳೆಯಬಲ್ಲನಿವ ಬ್ರಹ್ಮಾಂಡಕೆ ||ತಿಳಿಸದೆ ಕತ್ತಲೊರೆಳಿಡುವೆನೆ-ಅಕ್ಕ |ಬೆಳಕೆಲ್ಲವೀತನ ಕಂಗಳ ಢಾಳ 1ಎವೆಯಿಕ್ಕದಲ್ಲಿ ಕಾದಿಡುವೆನೆ-ನೋಡೆ |ದಿವಿಜರೆಲ್ಲ ಈತನಮಾಯೆ||ಅವರಬಳಿಗೆ ಮೊರೆಯಿಡುವೆನೆ-ಅಕ್ಕ |ಇವನಿಟ್ಟ ಬಂಟರಿಂದ್ರಾದಿಗಳೆಲ್ಲರು 2ಈಗಲೆ ಇಂತು ಮಾಡುವನು-ಮುಂದೆ |ಅಗಲಿಸುವನು ನಮ್ಮ ಒಗೆತನವಮ್ಮ ||ಕೂಗಿ ಹೇಳಲು ಮತ್ತೆ ಕೇಡಮ್ಮ-ಮುಂದೆ |ಹೇಗೆ ಪುರಂದರವಿಠಲನಟ್ಟುಳಿಗೆ? 3
--------------
ಪುರಂದರದಾಸರು
ಎಲ್ಲಿರುವನೋ ರಂಗನೆಂಬ ಸಂಶಯ ಬೇಡ |ಎಲ್ಲಿ ಭಕುತರು ಕರೆದರಲ್ಲಿ ಬಂದೊದಗುವನು ಪ.ತರಳ ಪ್ರಹ್ಲಾದ ಶ್ರೀಹರಿ ವಿಶ್ವಮಯನೆಂದು |ಬರೆದೋದಲವನ ಪಿತ ಕೋಪದಿಂದ ||ಸ್ಥಿರವಾದೊಡೀ ಕಂಬದಲಿ ತೋರು - ತೋರೆನಲು |ಭರದಿ ಬರಲಾಗ ವೈಕುಂಠವಲ್ಲಿಹುದೊ ? 1ಕುರುಪತಿಯು ದ್ರೌಪದಿಯ ಸೀರೆ ಸೆಳೆಯುತಿರೆ |ತರುಣಿ ಹಾ ಕೃಷ್ಣ ಎಂದೊದರೆಕೇಳಿ ||ಭರದಿಂದಲಕ್ಷಯಾಂಬರವೀಯೆ ಹಸ್ತಿನಾ |ಪುರವು ದ್ವಾರಾವತಿಗೆ ಕೂಗಳತೆಯೆ 2ಕರಿರಾಜನನುನೆಗಳು ನುಂಗುತಿರೆ ಭಯದಿಂದ |ಹರಿಯೆ ಕಾಯೆಂದು ಮೊರೆಯಿಡಲುಕೇಳಿ ||ಕರುಣದಿಂ ಬಂಧನವ ಬಿಡಿಸಲಾ ಗಜರಾಜ - |ನಿರುವ ಸರಸಿಗೆ ಅನಂತಾಸನ ಮುಮ್ಮನೆಯೆ 3ಪಾಪಕರ್ಮವ ಮಾಡಿದಜಮಿಳನ ಯಮಭಟರು ||ಕೋಪದಿಂದಲಿ ಸೆಳೆಯೆ ಭೀತಿಯಿಂದ ||ತಾ ಪುತ್ರನನು ಕರೆಯೆಕೇಳಿ ರಕ್ಷಿಸಿಶ್ವೇತ -ದೀಪವೀ ಧರೆಗೆ ಸಮೀಪವಾಗಿಹುದೆ ? 4ಅಣು - ಮಹತ್ತುಗಳಲ್ಲಿ ಪರಿಪೂರ್ಣನೆಂದೆನಿಸಿ |ಎಣೆಯಿಲ್ಲದ ಮಹಾಗುಣಪೂರ್ಣನು ||ಘನಮಹಿಮನಾದ ಶ್ರೀ ಪುರಂದರವಿಠಲನು |ನೆನೆದವರ ಮನದೊಳಗೆ ಇಹನೆಂಬ ಬಿರುದುಂಟು 5
--------------
ಪುರಂದರದಾಸರು
ಎಲ್ಲೆಲ್ಲಿ ಭಾಗವತಾಂಶ ಮತ್ತೆಲ್ಲೆಲ್ಲಿ ಹರಿಸನ್ನಿವಾಸಎಲ್ಲೆಲ್ಲಿ ಕರೆದರೆ ದಾಸರಲ್ಲಲ್ಲಿಗೆಬಾಹರಮೇಶಪ.ಆವೆಡೆ ಲಕ್ಷವಂದನೆಯು ಆವಾವೆಡೆಗೆ ಭಕ್ತ ನರ್ತನೆಯುಆವೆಡೆ ಸುಪ್ರದಕ್ಷಿಣೆಯು ಆವಾವೆಡೆ ರಂಗನಾರಾಧನೆಯು 1ಎಂತು ದಂಡಿಗೆ ತಾಳ ಘೋಷ ಎಂತೆಂತು ಕಥಾಮೃತ ವರುಷಎಂತು ತತ್ವಾರ್ಥ ಜಿಜ್ಞಾಸ ಅಂತಂತೆ ಶ್ರೀಕಾಂತನ ಹರುಷ 2ಎಷ್ಟು ತಂತ್ರಸಾರಾರ್ಚನೆಯು ಎಷ್ಟೆಷ್ಟುಶ್ರುತಿಸೂತ್ರಗಳ ಧ್ವನಿಯುಎಷ್ಟು ತಾತ್ಪರ್ಯ ವರ್ಣನೆಯು ಅಷ್ಟಷ್ಟು ಕೃಷ್ಣನಕಂಠ ಮಣಿಯು 3ಏಸುಶ್ರೀಹರಿವ್ರತ ಮೌನ ಏಸೇಸು ಶ್ರೀ ಹರಿರೂಪಧ್ಯಾನಏಸುಸದ್ವ್ಯಾಖ್ಯಾನ ದಾನ ಆಸನ್ನ ಕೈವಲ್ಯನಿದಾನ4ಎನಿತು ಗುರುಪಾದಗಳ ಸ್ಮರಣೆ ಎನಿತೆನಿತು ಮಧ್ವಯತಿಗಳ ಸ್ಮರಣೆಎನಿತೇಕಾದಶಿಯ ಜಾಗರಣೆ ಅನಿತನಿತು ಸುಲಭ ಹರಿಸ್ಮರಣೆ 5ಆರು ಆರೂರು ಮೆಟ್ಟಿಹರು ಮತ್ತಾರೂರರಸರ ಕಟ್ಟಿಹರುಆರೀರ್ವರ ಪೊರಮಟ್ಟಿಹರು ಆರಾರಾಗಲಿ ಕೃಷ್ಣನವರು 6ಹೇಗೆ ಸಜ್ಜನರ ಉಲ್ಲಾಸ ಹಾಗ್ಹಾಗೆ ಮಹಾಮಹಿಮರಭಿಲಾಷಹೇಗೆ ಬುಧರ ಪರಿತೋಷ ಹಾಗಾಗುವುದು ಪ್ರಸನ್ವೆಂಕಟೇಶ 7
--------------
ಪ್ರಸನ್ನವೆಂಕಟದಾಸರು
ಎಷ್ಟು ಮರುಗಿದರು ನಿನ್ನ ಹಣೆಯ ಬರೆಹಅಷ್ಟಲ್ಲದಿಲ್ಲ ಸ್ತುತಿ ವಚನದ ಫಲ ಕಂದಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಂಬರದೊಳಾಡುವ ಪಕ್ಷಿ ತನ್ನ ವಶವಹುದೇಉಂಬುವರ ಕರುಬಿದಡೆ ಉದರ ತುಂಬುವುದೇಕಂಬಳಿಯ ಕೊಡಲು ಕನಕಾಂಬರ ತನಗಹುದೆಹಂಬಲಿಸಿ ಹಲವ ಹಲುಬಿದಡೆಸಿರಿಬಹುದೆ1ಇಲ್ಲದುದ ಬಯಸಿ ಬೇಡಿದೊಡೆ ಭಂಗಬಹುದೊಬಲ್ಲೆನೆಂದೊಡೆ ಮಣಿಸದೆ ಬಿಡಳು ವಿಧಿಯುಬಲ್ಲಿದನು ಬಡವನಿವನೆಂದು ನೋಡರುಸಿರಿವಲ್ಲಭನ ಮಗಳ ಮೀರುವರಾರು ಕಡೆಗೆ2ಸಿರಿಗೆ ಹಿಗ್ಗದೆ ಬಡತನಕೆ ಬೆಂಡಾಗದಿರುಸೇರಿದ ನೆಲೆಯಲಾ ಸುಖ ಸಾವ ಕಾಲದಲಿಶರಣ ಜನಾಶ್ರಿತ ನೆಲೆಯಾದಿಕೇಶವನಚರಣಕಮಲವ ಭಜಿಸಿ ಸುಖಿಯಾಗು ಮನವೆ3
--------------
ಕನಕದಾಸ
ಎಷ್ಟು ಸುಖಿಗಳೊ ಗೋವು ಗೊಲ್ಲತಿ ಗೋಪರು ಶ್ರೀಕೃಷ್ಣನೊಡನೆ ಹಗಲಿರುಳು ಕ್ರೀಡೆಯಲಿ ಕಾಲವ ಕಳೆವರು ಪ.ಕೋಹೋ ಕೋಹೋ ತೃವ್ವೆ ತೃವ್ವೆ ಅಂಬೆ ಅಂಬೆ ಬಾರೆ ಎಂದುಮೋಹದಿಂದ ಕರೆಸಿಕೊಂಡು ಓಡಿ ಓಡಿ ಬಂದುಶ್ರೀಹರಿಯ ಹೆಗಲ ಮೇಲೆ ಗಳಗಳಿಟ್ಟುಕದಪುಕಂಠಲೇಹಿಸಿ ಮೊಗದಿರುದಿರುಹಿ ಸಿರಿನಖದಿಂ ತುರಿಸಿಕೊಂಬರು 1ತುಡುಗನೆಂದು ತುಡುವಿಡಿದು ಅಡಿಗಡಿಗೆ ಅಪ್ಪಿ ಚುಂಬಿಸಿಪಿಡಿಪಿಡಿದು ಗೋಪಿಯಡಿಗೆ ಒಪ್ಪಿಸಿ ಒಪ್ಪಿಸಿಮಡದೆರೆಲ್ಲ ಮಧುವೈರಿಯ ಸಂಗ ಸೊಬಗಿಲೋಲಾಡುತಲಿಒಡನೊಡನೆ ಗೋಪಾಲ ಮೂರುತಿಯ ಕಣ್ಣುಮನದಲಿಟ್ಟು ಸುಖಿಪರು 2ಸಣ್ಣವರಾಡಲೊಲ್ಲೆನೆನಲು ಗದ್ದವಿಡಿದು ಮುದ್ದಿಸಿ ನಮ್ಮಣ್ಣ ತಮ್ಮಗಳಿರಾ ಗೆಳೆಯರಿರಾ ಬನ್ನಿರೆಂದುಅಣ್ಣೆಕಲ್ಲೊಡ್ಡಿ ಗಜಗವಾಡಿ ಸೋಲಿಸಿಕೊಂಡಳುವಚಿಣ್ಣರ ಮನ್ನಿಪ ಪ್ರಸನ್ವೆಂಕಟೇಶನ ಉಣ್ಣುವೆಂಜಲಸೆಳೆದುಂಬುವರು 3
--------------
ಪ್ರಸನ್ನವೆಂಕಟದಾಸರು
ಎಷ್ಟು ಸೊಗಸು ಎಷ್ಟು ಸೊಗಸಕೃಷ್ಣರಾಯರು ಕುಳಿತ ಸಭೆಯುಅಷ್ಟದಿಕ್ಕು ಬೆಳಗಿಉತ್ಕøಷ್ಟವಾಗಿ ತೋರುವುದಮ್ಮ ಪ.ಚದುರೆ ರುಕ್ಮಿಣಿ ಭಾಮೆಹದಿನಾರು ಸಾವಿರದನೂರು ಸುದತೆಯರೊಪ್ಪುತಿಹರುಅದ್ಭುತವಾಗಿ ಸಖಿಯೆ 1ಜತ್ತಾದ ದೀವಿಗೆ ಎಷ್ಟುರತ್ನದ ಪ್ರಕಾಶ ಎಷ್ಟುಹಸ್ತಿಗಮನೆಯರÀ ಕಾಂತಿಚಿತ್ತಹರಣಮಾಡುವುದಮ್ಮ 2ಭ್ರಾಂತಿಗೈದು ಮುಯ್ಯ ಮರೆದುನಿಂತು ಕುಳಿತು ನೋಡೋರೆಷ್ಟಕಂತುನೈಯನ ಸಭೆಯಇಂಥ ಅಂದವ ಎಲ್ಲೆ ಕಾಣೆ 3ನಟ ನರ್ತಕರು ಎಷ್ಟುಚಟುಲಚಮತ್ಕಾರಿ ಎಷ್ಟುವಟ ಪತ್ರ ಶಾಯಿ ಕುಳಿತಸಭೆಗೆ ಸಾಟಿ ಇಲ್ಲವಮ್ಮ 4ವೀರ ಪಾಂಡವರ ಪುಣ್ಯಯಾರು ವರ್ಣಿಸಲೊಶವಶ್ರೀರಾಮೇಶ ಒಪ್ಪುತಿಹನುಮೂರುಲೋಕ ಮಿಗಿಲಾಯಿತಮ್ಮ 5
--------------
ಗಲಗಲಿಅವ್ವನವರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು
ಏಕೆ ಚಿಂತಿಪೆ ಬರಿದೆ ನೀ -ವಿಧಿಬರೆದ - |ವಾಕುತಪ್ಪದು ಪಣೆಯೊಳುಪಹುಟ್ಟುವುದಕೆ ಮೊದಲೆ ತಾಯ್ಮೊಲೆಯೊಳು |ಇಟ್ಟಿದ್ದೆಯೊ ಪಾಲನು ||ತೊಟ್ಟಿಲೊಳಿರುವಾಗಲೆ - ಗಳಿಸಿ ತಂ - |ದಿಟ್ಟು ಕೊಂಡುಣುತಿದ್ದೀಯಾ 1ಉರಗವೃಶ್ಚಿಕಪಾವಕ-ಕರಿಸಿಂಹ |ಅರಸು ಹುಲಿ ಚೋರ ಭಯವು ||ಹರಿಯಾಜೆÕಯಿಂದಲ್ಲದೆ - ಇವು ಏಳು - |ಶರಧಿಪೊಕ್ಕರು ಬಿಡವೊ- ಮರುಳೆ2ಇಂತು ಸುಖ - ದುಃಖದೊಳ್ಸಿಲುಕಿ - ಮರುಗಿ ನೀನು - |ಭ್ರಾಂತನಾಗಿ ಕೆಡಬೇಡವೊ ||ಸಂತೋಷದಿಂದ ಅರ್ಚಿಸಿ - ಭಜಿಸೋ ನೀ - |ಸಂತತಪುರಂದರವಿಠಲನ - ಮರುಳೆ3
--------------
ಪುರಂದರದಾಸರು
ಏಕೆ ಚಿಂತಿಸುತಿರುವೆ ಕೋತಿಮನವೆ |ಶ್ರೀ ಕೃಷ್ಣರಾಯನನು ಸ್ತುತಿಸಲೊಲ್ಲದಲೆ ಪ.ಹುಟ್ಟಿದಾಗುತ್ಪತ್ತಿಗಾರು ಚಿಂತಿಸಿದವರು |ಕಟ್ಟಕಡೆಯಲಿ ಲಯಕೆ ಏನು ಚಿಂತೆ ? ||ನಟ್ಟನಡುವಿನ ಬದುಕಿಗೇಕೆ ಚಿಂತಿಸುತಿರುವೆ ? |ಕಟ್ಟಕಡೆಯಲಿ ಮೂರುಬಟ್ಟೆತಾನಲ್ಲವೆ ?1ನವಿಲಿಂಗೆ ಚಿತ್ರಪತ್ರವನಾರು ಬರೆದವರು ? |ಪವಳಜಾತಿಗೆ ಕೆಂಪನಾರಿತ್ತರು ? ||ಸವಿಮಾತಿನರಗಿಳಿಗೆ ಹಸಿರಾರು ಬರೆದವರು ? |ಇವ ಮಾಡಿದವ ಕೃಷ್ಣ ನಮ್ಮ ಮರೆದಿಹನೆ ? 2ಬಸಿರೊಳಗೆ ಇದ್ದಾಗ ಶಿಶುವ ಹೊರೆದವರಾರು |ವಸುಧೆಯನು ಬಸಿರೊಳಗೆ ಹೆತ್ತರಾರು ?ವಸುದೇವಸುತ ನಮ್ಮ ಪುರಂದರವಿಠಲನ |ಪೆಸರ ಬಸಿರೊಳಗಿಟ್ಟು ಸ್ತುತಿಸುತಿರು ಮನವೆ 3
--------------
ಪುರಂದರದಾಸರು
ಏಕೆ ದಯಮಾಡಲೊಲ್ಲೆ - ಎಲೊ ಹರಿಯೆ |ಮೂಕನಾಗುವರೆ ಹೀಗೆ ಪಲೋಕವನು ರಕ್ಷಿಪ ಲಕ್ಷ್ಮೀಕಾಂತನು ನೀನೇ |ವಾಕುಮೊರೆಗಳಕೇಳಿಒಲಿದು ದಯಮಾಡಯ್ಯಅ.ಪಅರ್ಥವಿಲ್ಲದ ಬಾಳ್ವೆಯು - ಇರುವುದಿದು|ವ್ಯರ್ಥವಾಗಿದೆ ಶ್ರೀಪತಿ ||ಕರ್ತುನಿನ್ನೊಳು ನಾನು ಕಾಡಿ ಬೇಡುವನಲ್ಲ|ಸತ್ವರದಿ ದಯಮಾಡೊ ತುಳಸೀದಳಪ್ರಿಯ 1ಮನದೊಳಗಿನ ಬಯಕೆ - ಎಲೈಸ್ವಾಮಿ |ನಿನಗೆ ಪೇಳುವೆನು ನಾನು ||ಬಿನುಗುದೇವತೆಗಳಿಗೆ ಪೇಳಲಾರೆವೊ ಹರಿಯೆ|ತನುಮನ ನಿನ್ನ ಕೂಡ ಇಹವು ದಯಮಾಡೊ 2ಮೂರು ಲೋಕವ ಪಾಲಿಪ - ಎನ್ನಯ ಸ್ವಾಮಿ |ಭಾರವೆ ನಿನಗೆ ನಾನು ||ಕಾರುಣ್ಯನಿಧಿ ನಮ್ಮ ಪುರಂದರವಿಠಲ ಶ್ರೀ - |ದಾರಾಮನೋಹರ ಸಾಕಾರ ದಯವಾಗೊ3
--------------
ಪುರಂದರದಾಸರು
ಏಕೆ ದೇಹವನು ದಂಡಿಸುವೆ ವೃಥಾ - ಬಿಡ - |ದೇಕ ಚಿತ್ತದಿ ಲಕ್ಷ್ಮೀಕಾಂತಹರಿಎನ್ನದೆಪ.ಸ್ನಾನವನು ಮಾಡಿ ಧ್ಯಾನಿಸುವೆನೆನುತಲತಿ - |ಮೌನವನು ಪಿಡಿದು ಬಕಪಕ್ಷಿಯಂತೆ |ಹೀನ ಬುಧ್ಧಿಗಳ ಯೋಚಿಸಿ ಕುಳಿತು ಫಲವೇನು ||ದಾನವಾಂತಕನ ನಾಮಕೆ ಮೌನವುಂಟೆ ? 1ಜಪವ ಮಾಡುವೆನೆನುತ ಕಪಟಬುದ್ಧಿಯ ಬಿಡದೆ |ಗುಪಿತದಿಂದಲಿ ನೀನು ಕುಳಿತು ಫಲವೇನು ||ಅಪರಿಮಿತಮಹಿಮ ಶ್ರೀ ನಾರಾಯಣನೆಂದರೆ ||ಸಫಲವಲ್ಲದೆ ಬೇರೆ ಗತಿಯುಂಟೆ ಮರುಳೆ 2ಅಂದಜಾಮಿಳಗೆ ಸ್ಮರಣೆಯ ಮಾತ್ರದಲಿ ಮುಕುತಿ |ಹಿಂದೆ ಶ್ರೀಹರಿಯು ತಾ ಕೊಡಲಿಲ್ಲವೇ ? |ಸಂದೇಹವೇಕೆ ನೀನೊಂದು ಕ್ಷಣವಗಲದೆ |ತಂದೆ ಶ್ರೀ ಪುರಂದರವಿಠಲ ನೆನೆಮನವೆ 3
--------------
ಪುರಂದರದಾಸರು