ಒಟ್ಟು 1038 ಕಡೆಗಳಲ್ಲಿ , 93 ದಾಸರು , 800 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೇರಿ ಸುಖಿಸು ಮಾನವ ಗುರು ಚರಣ ಸರೋಜವ ಪ ಸೇರಿದ ಶರಣರ ಘೋರ ಪಾತಕವೆಂಬ ವಾರಿಧಿ ಭವಕೆ ಸಮೀರ ಜಗನ್ನಾಥ ಸೂರಿವರ್ಯ ದಾಸಾರ್ಯರಂಘ್ರಿಯನು 1 ತಾರತಮ್ಯವ ತಿಳಿಯದೆ ಕಲಿಯುಗದಿ ಮುಕ್ತಿ- ದಾರಿಕಾಣದೆ ಭವದಿ ಬಿದ್ದ ಜ- ನರುದ್ಧಾರ ಮಾಡಲು ದಯದಿ ಬ್ಯಾಗವಾಟದಿ ನರಸಿಂಗಾಖ್ಯ ವಿಪ್ರಗಾರ ದೋಳುದ್ಭವಿಸಿ ಚಾರು ಕಥಾಮೃತ ಸಾರವ ಧರೆಯೋಳು ಬೀರಿದಂಥವರ 2 ಮೇದಿನಿಯೊಳು ಚರಿಸಿ ವಾಕ್ಯಾರ್ಥದಿ ಬಹು ವಾದಿಗಳನೆ ಜಯಿಸಿ ಎನಿಸಿದರು ಪೂರ್ಣ ಬೋಧ ಮತಾಬ್ಧಿಗೆ ಶಶಿನೃಪ ಮಾನ್ಯರೆನಿಸಿ ಶ್ರೀದ ಪ್ರಹ್ಲಾದನನುಜ ಸಹ್ಲಾದರೆ ಇವರೆಂದು ಸಾದರ ಬಿಡದ ಪಾದಪಂಕಜಾರಾಧಕರಿಗೆ ಸುರಪಾದರೆನಿಪರ 3 ಕ್ಷೋಣಿ ವಿಬಂಧ ಗಣದಿ ಸೇವೆಯಗೊಂಡು ಮಾನವಿ ಎಂಬ ಕ್ಷೇತ್ರದಿ ಮಂದಿರ ಮಧ್ವ ಸ್ಥಾಣುವಿನೊಳು ಮುದದಿ ಕಾರ್ಪರವೆಂಬ ಕಾನನದಲ್ಲಿ ಕೃಷ್ಣವೇಣಿ ಕುಲದಿ ಮೆರೆವ ಶ್ರೀನಿಧಿ ನರಪಂಚಾನನಂಘ್ರಿಯುಗ ಧ್ಯಾನದಿ ಕುಳಿತ ಮಹಾನುಭಾವರನು 4
--------------
ಶ್ರೀನಿಧಿವಿಠಲರು
ಸೊಲ್ಲು ಕೇಳುತ ಈಗ ಮೆಲ್ಲನೆ ಎನ್ನ ಮನದಲ್ಲಿ ನಿಲ್ಲೊ ಪ. ಪುಲ್ಲಲೋಚನ ದೇವ ಎಲ್ಲಿಗು ಪೋಗದೆ ಉಲ್ಲಾಸಪಡಿಸುತ ನಿಲ್ಲೊ ಹೃದಯದಲಿ ಅ.ಪ. ಸ್ಥಾವರ ಜಂಗಮ ವ್ಯಾಪ್ತನಾಗಿಹ ದೇವ ದೇವ ಎನ್ನ ಮನದಿ ನಿಲುವುದು ಘನವೆ ಶ್ರೀವರ ನೀನೀಗ ಕಾವನೆಂದರಿತಿರೆ ಸಾವಕಾಶವಿದೇಕೆ ಭಾವಜನಯ್ಯನೆ 1 ಇಷ್ಟು ದಿನವು ನಿನ್ನ ಮುಟ್ಟಿ ಪೂಜಿಸಲಿಲ್ಲ ಸಿಟ್ಟೇನೊ ನಿನಗಿದರ ಗುಟ್ಟು ತಿಳಿಯದೆ ಬಿಂಕ ಕೊಟ್ಟು ಅಭಯ ಸಲಹೊ ಇಷ್ಟ ಸ್ಥಾನದಿ ನಿನ್ನ ಮುಟ್ಟಿ ಪೂಜಿಸಿರುವೆ 2 ಸರಿಯಲ್ಲ ನಿನಗಿದು ಕರೆದರೆ ಭಕ್ತರು ತ್ವರಿತದಿಂದಲಿ ಬರುವ ಬಿರುದಿಲ್ಲೆ ನನಗೆ ಸರಿ ಬಂದರೆ ಬಾರೊ ಬಾರದಿದ್ದರೆ ಬಿಡೊ ಅರಿತು ನಿನ್ನಯ ನಾಮ ಅರುಹುವ ಮತಿ ನೀಡೊ 3 ಕಾರ್ಯಕಾರಣಕರ್ತ ಪ್ರೇರ್ಯಪ್ರೇರಕರೂಪ ಉರ್ವಿಗೊಡೆಯ ಸರ್ವ ನಿರ್ವಾಹಕ ಗರ್ವರಹಿತಳ ಮಾಡಿ ಸರ್ವದಾ ಪೊರೆದರೆ ಸರ್ವಾಧಿಪತಿಯೆಂದು ಸಾರ್ವೆನೊ ನಾನಿಂದು 4 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತನೊಬ್ಬನೆ ನೀನು ಶ್ರೇಷ್ಠನಾಗಿರುವೆಯಾ ಸರ್ವರಿಗೆ ಬಿಟ್ಟಿರುವೆಯೊ ಜಗದ ಅಷ್ಟೂ ವಸ್ತುಗಳಿಂದ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲದೇವ 5
--------------
ಅಂಬಾಬಾಯಿ
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸ್ಮರಿಸಿ ಬದುಕಿರೊ ಗುರುವರರಾ ನರ- ಹರಿಸ್ಮರಣೆ ಮರೆಯದಲೆ ಕೀರ್ತಿಸಿ ನಲಿದವರ ಪ ದಾಸದೀಕ್ಷೆಯ ವಹಿಸಿದವರ ಹರಿ ದಾಸರ ಕೂಡಿ ನರ್ತಿಸಿ ನಲಿದವರ ಶ್ರೀಶನ ಮಹಿಮೆ ಬಲ್ಲವರ ಭವ ಪಾಶಗಳಳಿವ ಸನ್ಮಾರ್ಗಬೋಧಕರ 1 ಬಡತನದಲಿ ಬಳಲಿದವರ ಭಾಗ್ಯ ಬಿಡದೆ ಬಂದೊದಗೆ ಹಿಗ್ಗದೆ ತಗ್ಗಿದವರ ಮೃಡಸಖನೊಲುಮೆ ಪಡೆದವರ ಬಹು ಸಡಗರದಲಿ ಹರಿ ಭಜನೆ ಮಾಡ್ದವರ 2 ಪಂಕಜಾಕ್ಷನ ಪೊಗಳಿದವರ ತಂದೆ ವೆಂಕಟೇಶ ವಿಠ್ಠಲ ದಾಸರಿವರ ಬಿಂಕದಿ ಹರಿಯ ಮರೆತವರ ಗರ್ವ ಬಿಂಕಗಳಳಿಯ ಸನ್ಮಾರ್ಗಕೆಳದವರ3 ತಾಳ ತಂಬೂರಿ ಪಿಡಿದವರ ಗೆಜ್ಜೆ ತಾಳ ಮೇಳದಿ ನರ್ತಿಸಿ ನಲಿದವರ ವ್ಯಾಳ ಶಯನನ ಭಕ್ತರಿವರ ಸಂಜೆ ವೇಳೆ ಹರಿಭಜನೆ ಮಾಡಿ ನಲಿದವರ 4 ಮಡದಿ ಮಕ್ಕಳು ಬಂಧು ಜನರ ಕೂಡಿ ಕಡು ಸಂಭ್ರಮದಿ ಹರಿಭಜನೆ ಮಾಡ್ದವರ ಕಡಲ ಶಯನನ ಭಕ್ತರಿವರು ಭಾಗ್ಯ ಬಡತನ ಸಮವೆಂದು ತಿಳಿಯ ಹೇಳ್ದವರ 5 ಹರಿಗುಣ ಕೀರ್ತಿಸಿದವರ ನರ ಹರಿಯ ಮಹಿಮೆಗಳ ಶಿಷ್ಯರಿಗೊರೆದವರ ಹರಿಯೆ ಸರ್ವೋತ್ತಮನೆಂದವರ ನಮ್ಮ ಉರುಗಾದ್ರಿವಾಸ ವಿಠ್ಠಲನ ನಂಬಿದವರ6 ಮಮತೆಯ ಬಿಡಬೇಕೆಂದವರ ದೇಹ ಮಮತೆಯ ಬಿಡುತ ಹರಿಪುರ ಸೇರಿದವರ ಕಮಲಾಕ್ಷನ ಭಕ್ತರಿವರ ನಮ್ಮಕಮಲನಾಭನ ವಿಠ್ಠಲನ ನಂಬಿದವರ 7
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸು ಮನವೇ ನೀ ಪೂರ್ಣ ಕರುಣಾಸಾಗರ ದೇವನ್ನಾ ಪ ದಾವ ನಿಗಮಾಗಮ ಪೌರಣಿಕ ತಿಳಿಯದು ಮಹಿಮೆದಾವನ್ನ ಅವನ ನಖಕಾಂತಿಗೆ ಸರಿ ಪೊಲಿರು ಮಿತ್ರೆಂದು ಹವ್ಯವಾಹನ್ನಾ 1 ಭಕ್ತಿ ಭಾವಕ ಶಿಲ್ಕಅನುದಿನ ಬಲಿಬಾಗಿಲ ಕಾಯಿದಿಹನಾ| ಶಾಪದಿ ವಿರಹಿತ ಮಾಡಿದನಾ 2 ಹೋ ಹೋ ಎಂದು ಬಯಿವನಾ| ಎಣಿಕೆ ಇಲ್ಲದೆ ಪರಿಪರಿ ಯಿಂದಲಿ ಅಡಿಗಡಿಗೆ ರಕ್ಷಿಪನ್ನಾ 3 ಭಗದತ್ತನು ಗಜವೇರಿ ಬಾಣವ ಬಿಡಲಾಗಳೆ ಉರುವಾತನ್ನಾ | ಗೋಪಾಲರ ರಕ್ಷಿಸಲೋಸುಗ ಬೆರಳಲಿ ಗಿರಿ ಎತ್ತಿದನ್ನಾ 4 ಏಳದೆ ಗರ್ವದಿ ಕುಳಿತರೆ ದುರ್ಯೋಧನನ ಕೆಳಗೆಡಹಿದನ್ನಾ| ಶ್ರೀಲಲನೆಯ ಮನೋಭಾವನೆ ಪೂರಿತ ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಂತವ ತೊಳೆಯುತಲಿರಬೇಕು ಶಾಂತಿನಿಕೇತನವಾಗುವ ತನಕ ಪ ಶಾಂತ ಮೂರುತಿ ಶ್ರೀಶಾಂತನು ತನ್ನ ಏ ಕಾಂತ ಮಂದಿರವೆಂದೊಪ್ಪುವ ತನಕ ಅ.ಪ ಕಾಮ ಕ್ರೋಧವೆಂಬೊ ಕಸಗಳನು ನೇಮದಿಂದ ಗುಡಿಸುತಲಿರಬೇಕು ಪ್ರೇಮಜಲದ ಸೇಚನೆ ಮಾಡಿ ಹರಿ ನಾಮಸ್ಮರಣೆ ಧೂಪವ ಕೊಡಬೇಕು 1 ಕಲಿಪುರುಷನ ಓಡಿಸಬೇಕು ತಿಳಿಯ ವೈರಾಗ್ಯ ಭಕ್ತಿಗಳೆಂಬ ತಳಿರು ತೋರಣವ ಕಟ್ಟಲಿಬೇಕು ನಳಿನನಾಭನ ಮನ ಸೆಳೆಯುವ ತೆರದಿ 2 ಕಾಣಲು ಪರಮತತ್ವದ ದಿವ್ಯ ಜ್ಞಾನದ ಜ್ಯೋತಿಯ ಮುಡಿಸಲಿ ಬೇಕು ಜ್ಞಾನ ಸುಖಾದಿ ಸದ್ಗುಣ ನಿಧಿಯು ತಾನೆ ಪ್ರಸನ್ನನಾಗುತ ನೆಲೆಸುವ ಪರಿ3
--------------
ವಿದ್ಯಾಪ್ರಸನ್ನತೀರ್ಥರು
ಸ್ವಾಮಿ ತಪ್ಪಾರಿಸುವರೆ ನೀ ನಮ್ಮ ಸುಮ್ಮನುಂಡಾಡುವ ಬಾಲಕ ನಿಮ್ಮ ಅಮ್ಮ ಅಪ್ಪನೆಂದಾಡುದೆ ನಾ ತಮ್ಮ ಕಂ ಕಿಮೆಂದಾಡಕರಿಯೆ ನಾವಮ್ಮ 1 ಓದಿ ತಿಳಿಯಲರಿಯೆ ಶಾಸ್ತ್ರವೇದ ಭೇದಿಸಲರಿಯೆ ನಾ ನಿಮ್ಮ ಬೋಧ ಹಾದಿ ತಿಳಿಯುದೆ ಬಲು ತಾ ಅಗಾಧ ಇದೆ ಪಾಲಿಸಬೇಕಯ್ಯ ಸುಪ್ರಸಾದ2 ಭಕ್ತಿ ಮಾಡಲರಿಯೆ ನಿಮ್ಮ ದೃಢ ಯುಕ್ತಿ ತಿಳಿಯಲರಿಯದೆ ನಾ ಮೂಢ ಶಕ್ತಿ ಸಾಮಥ್ರ್ಯನ್ನೊಳು ನೋಡಬ್ಯಾಡ ಯುಕ್ತಾಯುಕ್ತ ನೋಡದಿರು ಎನ್ನ ಕೂಡ3 ಪತಿತಪಾವನನೆಂಬ ನಿನ್ನ ಬಿರುದು ಎತ್ತ ಓಡಿಹೋಗಬಲ್ಲದದು ಚಿತ್ತ ನೆಲೆಗೊಂಡು ಬಂದು ನಿಮ್ಮ ಬೆರೆದು ಮತ್ತ ಒರೆದು ನೋಡುವದಿದೆ ಅರೆದು 4 ಶರಣ ಹೊಕ್ಕ ಮ್ಯಾಲೆಲ್ಲಿಹುದೈಯ ಮರಣ ಚರಣಕಮಲಕ್ಕೊಪ್ಪಿಸಿಹೆ ನಾ ಹರುಣ ಅರಿತು ಮಾಡುವ ನಿಮ್ಮ ದಯ ಕರುಣ ತರಳ ಮಹಿಪತಿ ನಿಮ್ಮಣುಗ ಪೂರ್ಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುದಯವೆ ತಾ ನಿಜ ನೇಮ Pರಿಗಿದೇವೆ ಹಿತಗುಜ ಸಮಸ್ತ ಜನರಿಗಿದೆ ಸುಬೀಜ ಪ್ರೇಮವಿಟ್ಟವರಿಗ್ಹೊಳೆವದು ಸಹಜ 1 ಗುರು ಉಪಾಸನೆ ಎಲ್ಲಕೆ ಮೇಲು ಸುರಜನರಿಗಿದೊಂದೇ ಕೀಲು ಅರಿತವರಿಗೆ ಮುಕ್ತಿ ಬಾಗಿಲು ತ್ಯರ ತಿಳಿಯದವರಿಗಿದೇ ಸೋಲು 2 ನಂಬಿ ನಡೆಯಬೇಕು ಸದ್ಗುರುಪಾದ ಇಂದುದೋರಿಕೊಡುವದು ಸುಬೋಧ ಗುಂಭಗುರುತಾಗಿದೋರುದು ಸ್ವಾದ ಹಂಬಲಿಸಿಕೊಳಬೇಕು ಸುಪ್ರಸಾದ 3 ಗುರುಮಾರ್ಗವೆಂಬುದೆ ಸಾಕ್ಷಾತ್ಕಾರ ಸೂರೆಗೊಂಡು ಮ್ಯಾಲೆ ಸುಖಸಾಗರ ಮರುಳ ಬಲ್ಲವೇನಿದರ ವಿಚಾರ ಶರಣಜನರಿಗಿದೇ ಸಹಕಾರ 4 ಗುರುಕೃಪೆಯಾದವಗೆ ಪ್ರಾಂಜಳ ಸಾರಾಯ ಕೊಂಬುವನೆ ತಾ ವಿರಳ ಅರಿಯೋ ಮಹಿಪತಿ ನಿನ್ನೊಳು ಸಕಳ ಹರುಷವಾಗೆದಿಂತು ಈ ಸುಖಕಲ್ಲೋಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮನ ಮತದಲಿ ಅನುಮಾನ ಬೇಡವೊ ಮನಮುಟ್ಟಿ ಭಜಿಸಲೊ ಎಲೆ ಮನವೇ ಪ ಸನಕಾದಿ ವಂದಿತ ಮನಸಿಜ ಜನಕ ವನಜನಯನ ಹರಿಗನುಮತವಾದಂತ ಅ.ಪ ವಿಧಿ ಭವಾದಿಗಳಲ್ಲಿ ಅನುಚರರಿವನಿಗೆ ಪರತಂತ್ರರು ವಿವಿಧ ತಾರತಮ್ಯ ನಿರತ ಪೊಂದಿರುವರು ಸಕಲ ಜಗಂಗಳು ನಿಜವೆಂದು ಬೋಧಿಪ1 ಮುಕುತಿಯೆಂಬುದು ನಿಜಾನಂದದ ಅನುಭವ ಭಕುತಿಯೇ ಪಡೆಯಲು ಸಾಧನವು ಪ್ರಕೃತಿ ಸಂಯುತವಾದ ದೇಹವ ಕಳೆಯಲು ಯುಕುತಿ ಬೇರಿಲ್ಲವೆಂದು ಭರದಿ ಸಾರುವಂಥ 2 ನಯನಕೆ ಗೋಚರ ಒಣ ಊಹೆಯಿಂದಲಿ ತಿಳಿಯಲು ಹರಿಯನು ಅಳವಲ್ಲವು ನಿಗಮಗಳಿಂದಲೆ ಅರಿತ ಜ್ಞಾನಿಗೆ ಪ್ರ ಸನ್ನನಾಗುವನೆಂದು ದೃಢದಿಂದರುಹುವ 3
--------------
ವಿದ್ಯಾಪ್ರಸನ್ನತೀರ್ಥರು
ಹರಿ ಎನ್ನ ಕೇಳಿದಾ ಮಾತಾ ಶಿರಿಪತಿಯನಾಥಾ ಹರಿ ಎನ್ನ ಕೇಳಿದಾ ಮಾತಾ ಪ ಭೂಮಿಯ ದಾನವಾ ಬೇಡಿದಾ ವಾಮ ಮೂರು ಪಾದಾವಾ ಕಾಮಿತವಿನಿತೆಂದಾಡಿದಾ ಧಾಮುರಾಜ್ಯ ಬ್ಯಾಡೆಂದಾ 1 ವಟುಕೂಟದಿಟವೆಂದು ನಂಬಿದೆ ಕುಟಿಲನಡಿಗೆ ಮರುಳಾದೆ ನಟಿಸುವ ವಾಮನೆಂದಾಡಿದೆ ವಿಠಲರೂಪ ತಿಳಿಯದೆ 2 ಎರಡು ಪಾದದಿ ಭೂಮಿ ಮುಗಿಸಿದಾ ಇರಿಸಲೆಲ್ಲೆ ಮೂರನೆಂದಾ ಧರಿಸೀಗ ಶಿರದೊಳು ಎಂದಾ ನರಸಿಂಹವಿಠಲ ದಾಸಾ 3
--------------
ನರಸಿಂಹವಿಠಲರು
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು