ಒಟ್ಟು 5585 ಕಡೆಗಳಲ್ಲಿ , 130 ದಾಸರು , 3539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡಿರೇನೇ ರಂಗನಾ ನಿಮ್ಮ ಮನೆಗಳಲ್ಲಿ ಕಂಡರೆ ಹೇಳಿರಮ್ಮಾ ಒಂದು ಮಾತಿನಲಿ ಬೆಂಡಾದೆನೇ ಅರಸುತ ನಾನಾದಾರಿಗಳಲ್ಲಿ ಪುಂಡರೀಕಾಕ್ಷನು ದೋರನು ಎಲ್ಲಿ ಮಣಿ ಕುಂಡಲ ಮಂಡಿತ ಗಂಡ ಕಪೊಲ ಪ್ರಚಂಡನ ಲೀಲೆ 1 ಒಮ್ಮೆ ಭಾವಿಕ ಗೋವಳರಾ ಆಟ ಪಾಟದಲಿರುವಾ ಒಮ್ಮೇ ಕಾಮುಖ ಗೊಲ್ಲತೇರಾ ಚಿತ್ತಕಾನಂದ ನೀವಾ ಒಮ್ಮೆ ಯಜ್ಞ ಪತ್ನಿಯರಾ ಸವಿಯಾಟ ಕವಲಿವಾ ಅಮ್ಮ ಒಂದೇ ಠಾರ್ವೆನೇ ಹೇಳುವಾ ಅವ ನಿಮ್ಮವನೇ ತಮ್ಮನೇ ಸುಮ್ಮನೇ ತಿರುಗುತ ಘಮ್ಮನೇ ಝುಮ್ಮನೇ ಹೊಳೆವಾ 2 ಪುಲ್ಲ ನಾಭನ ಕಾಣದಿರೇ ಕಣ್ಣು ಕುರುಡವು ನಮ್ಮ ಸೊಲ್ಲ ವಾಲಿಸದಿಹ ಹರಿಯಾ ಕಿವಿಬಧಿರವು ನಮ್ಮ ಅಲ್ಲಿ ಮನುಜ ಮಹಿಪತಿಸುತ ಪ್ರಭು ಪರಬೊಮ್ಮ ನಿಲದಪ್ಪಿ ಕೊಳಲು ಸಂಭ್ರಮಾ ಅವನೆಲ್ಲೆಲ್ಲ ನೋಡಲು ಅಲ್ಲಲ್ಲಿ ನಿಂದಿಹ ಇಲ್ಲದ ಸ್ಥಳವಿಲ್ಲವಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಕಾಣಬೇಕು ಪಿಂಡ ಬ್ರಹ್ಮಾಂಡದೊಡೆಯನ ಧ್ರುವ ಹಿಂದು ಮಾತಾಡಿನ್ನೇನು ಕಂಡು ಕಾಣುವದೇ ಖೂನ ಮಂದಿಯ ಮರೆಯಲಿಹ್ಯ ಮಂಡಲೇಶನ 1 ಷಡರಸನ್ನದ ಖೂನ ಬಡಿಸಿಟ್ಟದೆ ನಿಧಾನ ಒಡಲು ತುಂಬಿದ ಪೂರ್ಣ ಒಡಂಬಡದು ಪ್ರಾಣ 2 ದಿಂಡಿಲಿಟ್ಟದೆ ವಸ್ತ್ರ ಥಂಡಥಂಡಾದ ವಿಚಿತ್ರ ಗಾತ್ರ ಬಡದು ಸಂತೃಪ್ತಿ 3 ಸಂದುಕದಲ್ಲಿಟ್ಟದೆ ವಸ್ತು ಸುಂದರವಾದ ಸಮಸ್ತ ಸಂಧಿ ಸಿಡದೆ ಸಾಭ್ಯಸ್ತ ಹೊಡೆದು ಮನ ಸ್ವಸ್ತ 4 ತುಂಬಿ ನಿಧಾನ ಕೊಟ್ಟು ಕೊಂಡಾದರೆ ಪೂರ್ಣಕಟ್ಟಿದು ಕಾಮನ 5 ಕೂಪಲ್ಯಾದೆ ಉದಕ ಅಪೂರ್ವದ ಅಮೋಲಕ ಅರ್ಪಿಸಿಕೊಳ್ಳದನಕ ತೃಪ್ತಿಹೊಂದದು ಲೋಕ 6 ಕೊಂಡಾಡು ಮಹಿಪತಿ ಪೂರ್ಣ ಉಂಡುಟ್ಟು ಘನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡು ಧನ್ಯನಾದೆ ನಂದತನಯನ ಕಣ್ಣಾರ ಕಂಡು ಧನ್ಯನಾದೆ ನಂದ ತನಯನ ಕಂಡು ಧನ್ಯನಾದೆ ದಣಿಯವೆನ್ನವೆರಡು ಕಂಗಳೀಗ ತಿರುಗಿ ಪೋಗಲಾರೆ ತಿಮ್ಮಲಾಪುರೀಶ ದೊರೆಯ ಬಿಟ್ಟು ಪ ಸಾಲುದೀವಿಗೆ ಸಣ್ಣನಾಮ ಸರದ ಮಧ್ಯೆ ವೈಜಯಂತಿ ಸೂರ್ಯನಂತೆ ಹೊಳೆವ ಮುದ್ದು ಮುಖವು ಮಹಾದ್ವಾರದಲ್ಲೆ 1 ಶಂಚಕ್ರ ಶ್ಯಾಮವರ್ಣ ಅಂಕಿತವುಳ್ಳ ನಾಮಗಳಿಂದ ಪಂಕಜಾಕ್ಷ ಪರಮಪುರುಷ ವೆಂಕಟನೆಂಬೊ ನಾಮಾಂಕಿತದವನ 2 ಆ ಮಹಾ ವೈಕುಂಠದಲ್ಲಾವಾಸವಾದ ನಮ್ಮ ಕುಲ- ಸ್ವಾಮಿ ಎನಿಸಿಕೊಂಡ ಭೀಮೇಶ ಕೃಷ್ಣನ ದಯದಿಂದೀಗ 3
--------------
ಹರಪನಹಳ್ಳಿಭೀಮವ್ವ
ಕಂಡು ಧನ್ಯನಾದೆ ಭೂಮಂಡಲದೋಳ್ ಪ ಶ್ರೀ ಗುರುಸಾರ್ವಭೌಮ ರಾಘವೇಂದ್ರರಾ 1 ಕಲಿಯುಗದೋಳ್ ಭಕ್ತಜನರಾ ಉದ್ಧರಿಸಬೇಕು ಎಂಬ ಮನದಿ ವರಮಂತ್ರಾಲಯದೊಳ್ ಬಂದು ನಿಂದಿಹ ಯತಿವರರಾ 2 ಮಂಗಳಮೂರುತಿ ರಾಘವೇಂದ್ರರ ಬೃಂದಾವನ ಮನದಣೆಯೆ 3 ವಿಶಿಷ್ಟ ಜನರ ಕಷ್ಟಗಳನು ನಿಮಿಷಮಾತ್ರದಿ ಕಳೆದು ಸಲಹುವ ಶ್ರೇಷ್ಟ ಗುರುಗಳ ದಿವ್ಯವಾದ ದರ್ಶನ ಭಾಗ್ಯಾ ದೊರೆಕಿತಿಂದು 4 ಆದಿವ್ಯಾಧಿಗಳೆಲ್ಲ ಹರಿಸಿ ಅಂಧ ಬಧಿರ ಮೂಕತ್ವ ತೊಲಗಿಸಿ ಬಂದ ದುರಿತಗಳೆಲ್ಲ ಓಡಿಸಿ ಕಂದನಂದದಿ ಸಲಹುವ ಗುರುಗಳಾ5 ದಿನದಿನದೊಳ್ ಇವರ ಮಹಿಮೆ ಅಧಿಕವಾಗುತಿರಲು ಕಂಡು ಹಿಂಡು ಹಿಂಡಾಗಿ ಬರುತಲಿಹರೂ 6 ಹೆಜ್ಜೆ ಹೆಜ್ಜೆಗೆ ವಂದಿಸುತಲೀ ದಂಡೆ ಮುಡಿ ಉರುಳುತಲೀ ಮಂಡೆಬಾಗಿ ನಮಿಸತಲಿ ಬಿಡದೆ ರಾಯರ ಕೊಂಡಾಡುತಲೀ 7 ಜನರೆನರವ ಕೊಡುತಾ ಕೊಡುವ ದಾತಾ 8 ನಿತ್ಯ ನಿತ್ಯದಿ ಬ್ರಾಹ್ಮಣರ ವೇದ ಪುರಾಣ ನಡೆಯುತಿರುವುದು ಕೇಳಿ ಭಕ್ತಿಯಿಂದ ಜನರಾನಂದ ಭರಿತರಾಗುತಿಹರು 9 ಕೇಳುತಿಹುದು ಮಂತ್ರಘೋಷ ಪೇಳುತಿಹ ಪುರಾಣ ರಹಸ್ಯ ನೀಡುತಿಹರು ಗುರೂಪದೇಶ ಎಮಗಾಯಿತಿಂದು ಬಹುಸಂತೋಷ10 ಗುರುಗಳ ಮನಸಾರಾ11 ಬಂದ ಭಕ್ತಬೃಂದಕೆಲ್ಲ ಬೇಡಿ ದೊರಗಳ ನೀಡುತ ಸಲಹಿ ಉಣಿಸಿದಣಿಸಿ ಹರಸಿ ಅವರ ಆನಂದದಿಂದ ಕಳುಹುತಿಹರು 12 ಭಕ್ತರಸವ ಪಾನಮಾಡಿಸಿ ಮುಕ್ತಿ ಮಾರ್ಗಕೆ ದಾರಿ ತೋರಿಸಿ ಕರ್ತೃ ಶ್ರೀಹರಿ ಹೊರತುಯಿಲ್ಲೆಂದು ಸತ್ಯವಾಕ್ಯ ವ್ಯಾಕ್ತಪಡಿಸುತಿಹರು13 ಭಕ್ತಜನರ ಪೊರೆಯಲಿವರ ಸರಿಗಾಣೆನೀಧರೆಯೊಳಗೆ ತಂದೆಯಂದದಿ ಬಿಡದೆ ಕಾಯ್ವರು ಸಾರ್ವಭೌಮ ಶ್ರೀ ರಾಘವೇಂದ್ರರು 14 ಎಷ್ಟು ಜನ್ಮದ ಸುಕೃತದ ಫಲವೋ ಶ್ರೇಷ್ಟಗುರುಗಳ ದರ್ಶನವಾಯಿತು ಕಂಗಳಿಂದಲಿ ಕಂಡು ಮನದ ಕ್ಲೇಶವೆಲ್ಲ ಪರಿಹಾರವಾಯಿತು 15 ಹಿಂದೆ ಪ್ರಹ್ಲಾದರಾಜರೆನಿಸಿ ಬಂದು ಮಂಚಾಲೆಯಾಂಬಿಕೆ ದರ್ಶನ ಕೊಂಡು ಗುರುಗಳ ದರ್ಶನ ಮಾಡಿಸೆಂದು ಭಕ್ತಿಲಿಜನ ಬೇಡುತಿಹರು 16 ದೇಶ ದೇಶದ ಜನರಿಗೆಲ್ಲ ವಿಸ್ತಾರದಿಂದ ಎಲೆಗಳ್ಹಾಕಿ ಭಕ್ಷ್ಯ ಪಾಯಸಾನ್ನಗಳನು ತೃಪ್ತಿಯಿಂದ ಉಣಿಸುತಿಹರು 17 ಶ್ರೀ ರಾಘವೇಂದ್ರಾಯ ನಮಃ ಎಂದರೆ ದುರಿತಗಳೆಲ್ಲವದೂರಮಾಳ್ವರು ಸ್ಮರಣ ಮಾತ್ರದಿ ಸಕಲಪಾಪಗಳೆಲ್ಲ ನಾಶಗೊಳಿಸೋರು18 ಗುರುವಾರ ಪೂಜಾ ಸಂಭ್ರಮದಿಂದ ನಮಗಾಯಿತು ಇಂದು ಮುಂದೆ ನಮಿಸಲು ಭಕ್ತವೃಂದಾ 19 ಜಯ ಜಯತು ಗುರುರಾಜ ಜಯ ಜಯತು ಸುರಭೂಜ ಜಯತು ಶ್ರೀ ರಾಘವೇಂದ್ರಾ ಜಯ ಜಯತು ಜಯ ಜಯತು ಜಯ ಜಯಾ 20
--------------
ರಾಧಾಬಾಯಿ
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಂಡು ಮನ ಹಿಗ್ಗೋದು ರಂಗಯ್ಯನ ಕೊಂಡಾಡಿಮನ ಉಬ್ಬೋದು ಪ. ಎಂಟು ದಿಕ್ಕಿಗೆ ದಿವ್ಯ ಮಂಟಪ ಮಣಿಯುಎಸೆಯೆ ಕಂಠದಿ ಸ್ವರವ ಕುಣಿಸುತಕಂಠದಿ ಸ್ವರವ ಕುಣಿಸುತಸಭೆಯೊಳು ನಟನೆ ಮಾಡುವರು ಕಡೆಯಿಲ್ಲ 1 ಛÀತ್ರ ಚಾಮರ ದಿವ್ಯ ಉತ್ತಮ ವ್ಯಜನವಸುತ್ತ ಬೀಸುವ ಸುಗುಣಿಯರುಸುತ್ತ ಬೀಸುವ ಸುಗುಣಿಯರುಸಭೆಯೊಳು ನರ್ತನ ಮಾಡೋರಮ್ಮ ಐವರು 2 ಕುಂದಣವುಳ್ಳ ಇಂದಿರೆರಮಣನಒಂದೊಂದು ಗುಣವ ವಿವರಿಸಿಒಂದೊಂದು ಗುಣವ ವಿವರಿಸಿಸಭೆಯೊಳು ವಂದಿಗರು ಬಂದು ಹೊಗಳೋರು3 ಭಾಗೀರಥಿ ಜಲವ ಬ್ಯಾಗ ಗಿಂಡಿಯ ತುಂಬಿಸಾಗರಶಯನನ ಅಭಿಷೇಕಸಾಗರಶಯನನ ಅಭಿಷೇಕ ಮಾಡುವಪನ್ನಂಗವೇಣಿಯರು ಕಡೆಯಿಲ್ಲ 4 ಮಲ್ಲಿಗೆ ತುರುಬಿನ ಮಲ್ಲಮುಷ್ಠಿಕರೆಲ್ಲಗುಲ್ಲು ಮಾಡುತಲೆ ಸಭೆಯೊಳು ಗುಲ್ಲು ಮಾಡುತಲೆ ಸಭೆಯೊಳು ಅಲ್ಲಲ್ಲೆಬಿಲ್ಲನೆತ್ತುವರು ಕಡೆಯಿಲ್ಲ 5 ಬಾಲೆಯರು ಅಂಗಾಲು ಲಾಲಿಸಿ ಒರೆಸುತಮ್ಯಾಲೆ ಪನ್ನೀರು ಎರೆಯುತ ಮ್ಯಾಲೆ ಪನ್ನೀರು ಎರೆಯುತ ರಂಗಯ್ಯನಕಾಲಿಗೆ ಎರಗುವರು ಐವರು 6 ಹರದೆಯರು ಅಂಗಾಲು ಸೆರಗಿಲೆ ಒರೆಸುತ ಕಿರುಗೆಜ್ಜೆ ರುಳಿಯ ಸರಿಸುತಕಿರುಗೆಜ್ಜೆ ರುಳಿಯ ಸರಿಸುತ ರಾಮೇಶನ ಎರಕಿ ನಿಂತವರು ಕಡೆಯಿಲ್ಲ7
--------------
ಗಲಗಲಿಅವ್ವನವರು
ಕಡುಮುದ್ದು ಮೋಹನನಾದ ಈ ಸೊಬಗ ನ-ಮ್ಮುಡುಪಿನ ಕೃಷúರಾಯನ ನೋಡು ನೋಡುಪ. ಬೊಮ್ಮರುದ್ರಾದಿಗಳ ಕಣ್ಗೆಗೋಚರಿಸದನಿರ್ಮಲ ಚಿನ್ಮಯ ಬೊಮ್ಮವೆÉನಮ್ಮ ಚರ್ಮದೃಷ್ಟಿಗಳಿಗೆ ಗಮ್ಯವಾಯಿತ-ಮ್ಮಮ್ಮ ಇನ್ಯಾರ ಪುಣ್ಯವೊ ನೋಡು ನೋಡು 1 ಶುದ್ಧ ಸಿದ್ಧಾಂತವ ಜಗಕೆ ತೋರಿಸಿದಮಧ್ವಮುನಿಗೊಲಿದು ಬಂದಅಬ್ಧಿಜೆಯರಸನೀತನು ತನ್ನಹೊದ್ದಿದರಿಗರ್ಧ ಶರೀರವನೀವನೆ ನೋಡು ನೋಡು 2 ಪಾದ ಕಟಿ ವಕ್ತ್ರ ನೇತ್ರ ಮೌಳೀಯ ನಲ್ಲಗೊಲ್ಲಪಳ್ಳಿಯ ನೊಲ್ಲದೆ ಬಂದÀನೆ 3 - - - - - - - - - - ಅಲ್ಲಿ ಬೆಣ್ಣೆಗಳ್ಳನೆಂಬೊರಿವನೆಲ್ಲಇಲ್ಲದಿದ್ದರೆಲ್ಲಿಂದೆಲ್ಲಿಗಿಲ್ಲಿಯ ವಾಸ ನೋಡು ನೋಡು 4 ಶ್ರುತಿಗಗೋಚರನೆನಿಪ ಯತಿತತಿಮತಿಗೆ ಮೈಗೊಡದ ಬೊಮ್ಮಪತಿತ ಪಾತಕಿಗಳಿಗೆ ಕ್ಷಿತಿಯೊಳ-ಗತಿ ಸುಲಭವಾಯಿತಿನ್ನು ನೋಡು ನೋಡು 5 ಬಲ್ಲವರೆ ಬಲ್ಲರಿವನ ಈ ಮಹಿಮೆಯದುರ್ಲಭಕ್ಕೆ ದುರ್ಲಭನವಚೆಲ್ವ ಹಯವದನನಾದ ಭಕುತ ಯತಿ-ವಲ್ಲಭನಿಂದಿಲ್ಲಿ ಸುಲಭ ನೋಡು ನೋಡು 6
--------------
ವಾದಿರಾಜ
ಕಂಡೆ ಕಂಗಳಲೆನ್ನ ಮಂಗಳಾತ್ಮನ ಕಂಡೆ ಕಂಡೆ ಮಂಗಳಾಂಗ ಶ್ರೀ ಗುರುರಂಗನ ಕಂಡೆ ಧ್ರುವ ಬಾಲ ಲೀಲೆ ತೋರಿದ ನೀಲವರ್ಣನ ಕಂಡೆ ಪಾಲಗಡಲಲಿಹ್ಯ ಗೋಪಾಲನ ಕಂಡೆ ಮೂಲರೂಪದಲಿ ಫಲ್ಗುಣಗೊಲಿದನ ಕಂಡೆ ಕುಲಕೋಟಿ ಬಂಧುವಾದ ಬಳಗನ ಕಂಡೆ 1 ಮೂರ್ತಿ ನಳಿನನಾಭವ ಕಂಡೆ ಪಾದ ಹೊಳೆವನ ಕಂಡೆ ಕಳ್ಳ ಮೊಸರ ಬೆಣ್ಣೆ ಮೆಲುವ ಚೆಲುವನ ಕಂಡೆ ಇಳೆಯೊಳು ಗೋಕುಲದಿ ಸುಳಿದನ ಕಂಡೆ 2 ಕಿರೀಟ ಕುಂಡಲಕರ್ಣ ಕೌಸ್ತುಭಧರನ ಕಂಡೆ ಪರಿಪರಿ ಭೂಷಣ ಸರ್ವಾಂಗನ ಕಂಡೆ ವಾಹನ ಸ್ವಾಮಿ ಉರಗಶಯನ ಕಂಡೆ ಸಿರಿಯ ಲೋಲಲಿಹ ಸರ್ವೋತ್ತಮನ ಕಂಡೆ 3 ಮದನ ಮೋಹನನ ಕಂಡೆ ಆದಿ ಅವಿನಾಶ ಶ್ರೀಧರನ ಕಂಡೆ ಯದುಕುಲೋತ್ತಮ ಮಧುಸೂದನನ ಕಂಡೆ ಸಾಧು ಹೃದಯ ಪ್ರಾಣ ಶ್ರೀಮಾಧವನ ಕಂಡೆ 4 ತುರುಗಳ ಕಾಯ್ದ ಶ್ರೀಹರಿ ಗಿರಿಧರನ ಕಂಡೆ ಮುರಹರನೆನಿಸಿದ ಸುರಾಧೀಶನ ಕಂಡೆ ಕರಿಯ ವರದಾಯಕ ಹರಿ ದಯಾಳುನ ಕಂಡೆ ನರಹರಿ ಶ್ರೀನಾರಾಯಣನ ಕಂಡೆ 5 ದುಷ್ಟಮರ್ದನ ದೂರ ವಿಷ್ಣುದೇವನ ಕಂಡೆ ಶಿಷ್ಟ ಜನ ಪಾಲಕ ಸೃಷ್ಟೀಶನ ಕಂಡೆ ದೃಷ್ಟಿಯೊಳು ಸುಳಿದು ದೃಷ್ಟಾಂತಾದವನ ಕಂಡೆ ಕಷ್ಟ ಪರಿಹರಿವ ಶ್ರೀಕೃಷ್ಣನ ಕಂಡೆ 6 ಗುರು ಶಿರೋಮಣಿ ತ್ರೈಲೋಕ್ಯನಾಥನ ಕಂಡೆ ಪರಮಭಕ್ತರ ಸಂಜೀವನ ಕಂಡೆ ಶರಣ ರಕ್ಷಕ ನಮ್ಮ ಕರುಣ ಸಿಂಧುನ ಕಂಡೆ ತರಳ ಮಹಿಪತಿ ಪ್ರಾಣಹೊರೆವ ಕಂಡೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಕಂಡೆ ನನ್ನನು ಕಾಯ್ವನೆಂಬುದ ಕಂಡೆ ಪಾವನನಾದುದಪುಂಡರೀಕದಳಾಯತಾಕ್ಷನೆ ಗಂಡುಮಾಡುವ ಗೂಢವ ಕಂಡೆಕಂಡೆ ಪ.ಮಲಿನವೆಂಬುದು ಮನಕೆ ತೋರಲು ಮಲಿನ ಹೇತುವು ಮೂಡಲುಮಲಿನಕಳುಕುತಲಿದ್ದ ಸಮಯಕೆ ಬಲುಹಿನರಿಕೆಯ ಬೀರಲುಮಲಿನವೇ ಹುಸಿಯೆಂಬ ನಿಶ್ಚಯ ಬಲಿದು ಬಲು ಹುರಿಯಾಗಲುಕಲಕಿ ಸಂಶಯ ಕಡೆಗೆ ಜಾರಲು ನಿಲುಕಿ ನೀನಿದಿರಾಗಲು 1ಶುದ್ಧವೆಂಬುದಶುದ್ಧವೆಂಬುದು ಬುದ್ಧಿಕಲ್ಪಿತಮಾತ್ರವುಇದ್ದು ಸುತ್ತಲು ಈಶನಂತಿರೆ ಹೊದ್ದುವನ್ಯವದಾವದುಶುದ್ಧ ಶ್ರೀಹರಿ ಪೂರ್ಣ ಮಿಕ್ಕಿನ ಬದ್ಧನೆಂಬುದೆ ಭ್ರಾಂತಿಯುಅದ್ವಯಾನಂದಾಬ್ಧಿ ಯೆಂಬೀ ನಿರ್ಧರವ ನೆರೆ ತೋರಲು 2ಅಳುಕದಿರು ನಾ ವಿಶ್ವವಾಗಿಯೆ ಹೊಳೆದು ತೋರಿದೆನೊಬ್ಬನೇಬಳಸಬೇಡತಿಭೀತಿಯೆಂಬುದ ತಿಳಿದು ನೋಡೆಂದರುಹಿದೆಹುಳುಕು ತಾನದು ಹೊಂದದೆಂದಿಗು ಸುಳಿದು ಶುದ್ಧನ ಮಾಡಿದೆಒಳಗೆ ನೀನಿಹೆ ನಲಿದು ತಿರುಪತಿ ನಿಳಯ ವೆಂಕಟನಾಥನೆ 3ಕಂ||ಇಂತೀ ಭಾವನೆಗೈಯುವುದೆಂತೊದಗಿದುದೆನಲು ಸದ್ಗುರುವ ಕರುಣವು ತಾಬಂತೆನಗೆ ತಿರುಪತೀಶನೆಸಂತೋಷದಿ ವಾಸುದೇವ ಯತಿಯಾರ್ಗೀಯಲ್‍ಓಂ ದಯಾನಿಧಯೇ ನಮಃ
--------------
ತಿಮ್ಮಪ್ಪದಾಸರು
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕಂಡೆÀನೀಗ ರಂಗನಾಥನ ಕಾರುಣ್ಯನಿಧಿಯ ಪ. ಮಂಡಲದೊಳುದ್ದಂಡ ಮೂರುತಿ ಹಿಂಡು ದೈತ್ಯರ ತಂಡ ತಂಡದಿ ತುಂಡು ತುಂಡು ಮಾಡಿದ ಸ್ವಾಮಿಯ ಅ.ಪ. ಕೌಸ್ತುಭ ನಾಮವ ನೇಮದಿಂದ ಧರಿಸಿದಾತನ ಹೇಮ ಮಂಟಪದೊಳಗೆ ಕುಳಿತು ಕಾಮಿಸಿದ ಭಕ್ತರಿಗೆ ಕಾಮಿತಾರ್ಥ ಕೊಡುವ ಸ್ವಾಮಿಯ 1 ಗರುಡವಾಹನವೇರಿ ಗಗನದಿ ಚರಿಸುತ್ತ ಬಂದು ಸರಸಿಯೊಳು ಕರಿಯ ಸಲಹಿದೆ ಪರಮಭಕ್ತರ ಕಾವದೇವ ಕರುಣವಾರಿಧಿ ಕಮಲನಯನ ಉರಗಶಯನ ಉದ್ಧಾರಿ ನಿನ್ನ ಮರೆಯಹೊಕ್ಕೆ ಕಾಯೊ ಎನ್ನ2 ಇಂದುಧರನ ಸಖನೆ ಕೇಳಯ್ಯ ಬಂದಂಥ ದುರಿತ ಹಿಂದು ಮಾಡಿ ಮುಂದೆ ಸಲಹಯ್ಯ ಇಂದು ಹೆಳವನಕಟ್ಟೆ ರಂಗ ಆ-ನಂದ ಪಡಿಸೊ ರಾಮಲಿಂಗ ಹೊಂದಿದೆನು ನಿನ್ನ ಚರಣ3
--------------
ಹೆಳವನಕಟ್ಟೆ ಗಿರಿಯಮ್ಮ
ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ