ಒಟ್ಟು 3512 ಕಡೆಗಳಲ್ಲಿ , 124 ದಾಸರು , 2504 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರೋ ರಾಘವೇಂದ್ರ ಭೋ ಸಾರ್ವಭೌಮ ಸದಾ ಪಾಲಿಸೆನ್ನ ಪ ಪರೀಸರಾ ನÀಮಿಪೆ ನಿನ್ನಾ ಅ.ಪ ಧರಾತಳದಿ ಧೇನು ವರಾನಂದದೀ ಚರಾಜನರ ಕಾಮಾ ಪರೀಪೂರ್ತಿಸಿ ದುರಾಳ ಸಂಗವ ತ್ವರಾ ಕಳಿವೊ ಭೀಮಾ 1 ಭಯಾಹರನೆ ಸದ್ದಯಾಕರನೆ ಆ - ಮಯಾದೂರ ನಿನ್ನ ಜಯಾ ಪಾಲಿಸೋ ಧಿಯಾ ಬೇಡುವೆನು ನಯಾ ಮತೀತ್ಯನ್ನಾ 2 ನೀತಾ ಗುರು ಜಗನ್ನಾಥಾ ವಿಠಲ ಪಾದ ಪಾಥೋಜಯುಗವನ್ನಾ ವ್ರಾತ ಪಾಲಿಸೊ ನಿಜ - ದೂತಾ ಜನಾರನ್ನಾ 3
--------------
ಗುರುಜಗನ್ನಾಥದಾಸರು
ಗುರ್ವಂತರ್ಗತ ಗೋಪಾಲ ಪಾಹಿ ಸರ್ವಪಾಲಕ ಶಿರಿಲೋಲ ಪ ಶರ್ವಸುರಗಂಧರ್ವ ಮುನಿಕುಲ Àಸರ್ವಸೇವಿತ ಗರ್ವರಹಿತನೆ ಅ.ಪ ರಾಮಾಕೃಷ್ಣ ವ್ಯಾಸರೂಪದಿಂದಾ ಮಾಮನೋಹರ ಮಾಡೆಕೃಪಾ ಶ್ರೀಮಧ್ವ ಮೊದಲಾದ ಆ ಮಹಾಮುನಿಗಳ ಸ್ತೋಮಸಂತತ ಮಹಾಪ್ರೇಮಮನದಲಿದ್ದು ಭೂಮಿತಳದೊಳಗಖಿಳಜನರಿಗೆ ಕಾಮಿತಾರ್ಥವ ಸಲಿಸಿ ತಾ ನಿ ಸ್ಸೀಮ ಮಹಿಮೆಯ ತೋರಿ ಇವರಿಗೆ ಆ ಮಹತ್ತರ ಕೀರ್ತಿಕೊಡುತಿಹ 1 ಆವಾವಜನುಮಗಳಲ್ಲಿ ಜಗಕೆ ಜೀವನಪ್ರದನಾಗಿ ಇಲ್ಲೀ ಶ್ರೀವರ ಸರ್ವೇಶ ಜೀವೇಶ ಸುರವಂದ್ಯ ದೇವ ನಿನ್ನಯ ಪಾದಸೇವಾವ ಸಲಿಸೆಂದೆ ಕೋವಿದರ ಕುಲಮಣಿಗಳೊಳಗೆ ಭಾವಿಪುದು ಸನ್ಮನವನಿತ್ತು ಗೋವಿದಾಂಪತೆ ಙÁ್ಞನಗಮ್ಯನೆ ಪಾವನಾತ್ಮಕ ಪರಮ ಪಾಲಿಸೋ 2 ದಾತ ಶ್ರೀ ಗುರುಜಗನ್ನಾಥವಿಠಲ ನೀ ಧಾತನಾಂಡಕೆ ಮುಖ್ಯನಾಥಾ ಧಾತಪ್ರಮುಖಸುರವ್ರಾತಸನ್ನುತಪಾದ ಪಾಥೋಜಯುಗಳ ಸಂಭೂತ ರಜೋದಿಂದ ಧೂತಪಾಪನ ಮಾಡುವದು ಅ ದ್ಭೂತ ಙÁ್ಞನ ವಿರಕುತಿ ಸಂಪ ದ್ಪ್ರಾತ ಪಾಲಿಸೊ ಹೇ ಮಹದ್ಭುತ ದಾತ ಎಂಬೆನೊ ನಮೋ ನಮೋ 3
--------------
ಗುರುಜಗನ್ನಾಥದಾಸರು
ಗೂಳ್ಯಾಗಿ ಮೆರೆಯಣ್ಣ ಶ್ರೀಹರಿ ಗೂಳ್ಯಾಗಿ ಮೆರೆಯಣ್ಣ ಪ ಗೂಳ್ಯಾಗಿ ಮೆರೆಯೆಲೊ ಮೂಳಮಾನವರ ಆಳಾಗಿ ಕೆಡದ್ಯಮದಾಳಿಯ ಗೆಲಿದು ಅ.ಪ ಅದ್ರಿಧರನಡಿಯ ಪ್ರೇಮವೆಂಬ ಮುದ್ರೆಯನ್ನು ಪಡೆಯೋ ಕ್ಷುದ್ರದಾನವ ಹರರುದ್ರಾದಿನುತ ಸ ಮುದ್ರಶಾಯಿಧ್ಯಾನ ಭದ್ರಮಾಡಿಟ್ಟುಕೊಂಡು 1 ಕುಜನರ ಸಂಗ ತಳ್ಳೋ ಸುಸಂಗ ಭುಜವ ಬೆಳೆಸಿಕೊಳ್ಳೋ ಭುಜಗಶಯನನ ನಿಜಚರಣದ ಮಹ ಭಜನೆವೆಂದೆಂಬುವ ಝಾಲ ಧರಿಸಿಕೊಂಡು 2 ತಾಮಸವನ್ನು ನೀಗಿ ಸುಜನರ ಪ್ರೇಮಪಾತ್ರನಾಗಿ ಶಾಮಸುಂದರ ಶ್ರೀರಾಮನಾಮ ತ್ರಿ ಭೂಮಿಗಧಿಕೆಂದು ನಿಸ್ಸೀಮ ಡುರುಕಿ ಹೊಡಿ 3
--------------
ರಾಮದಾಸರು
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ
ಗೋದಾ ಎನ್ನೊಳ್ವಿನೋದದಿಂದ ಪಾದ ಪ ಸಾಧು ಸಜ್ಜನರಿಗೆ ಸ್ನಾನದಫಲ ಕೊಟ್ಟು ಬೋಧಿಸಿ ಹರಿದಯ ಸಾಧಿಸಿ ಕೊಡಿಸುವಿ 1 ಅಕ್ಕ ತಂಗೇರು ಕೂಡಿ ಉಕ್ಕೋ ಉಲ್ಲಾಸದೆ ಲಕ್ಕುಮೀಶನ ಮುದ್ದು ಮಕ್ಕಳ ಮನೆಗೊಯ್ವೆ 2 ದೂರದಿ ಬಂದೆ ನಾ ಗೋದಾವರಿಯೆ ನೀನು ತೋರೆ ಭೀಮೇಶಕೃಷ್ಣನ್ನೂರು ದಾರಿಗಳ 3
--------------
ಹರಪನಹಳ್ಳಿಭೀಮವ್ವ
ಗೋದಾವರಿ ಎನಗೆ ಶ್ರೀಧರನ ತೋರೆ ಪ. ನೀ ದಯದಿ ಸಲಹೆನ್ನ ಮಾಧವಗೆ ಪ್ರಿಯೆ ಅ.ಪ. ಸ್ವಚ್ಛವರ್ಣಳೆ ಬಹು ಹೆಚ್ಚಾಗಿ ಪರಿಯುವಳೆ ಮುಚ್ಚಿರುವ ಮಲಗಳನು ದೂರಮಾಡೆ ಅಚ್ಯುತನ ಪದವೀವ ಹೆಚ್ಚಿನಾ ಜ್ಞಾನವನು ಸ್ವಚ್ಛತನದಲಿ ಕೊಟ್ಟು ಮೆಚ್ಚಿ ಎನ್ನನು ಸಲಹೆ 1 ಧರೆಯ ಜನರು ನಿನ್ನೊಳ್ ಬರುತ ಮಲಗಳ ತೊಳೆಯೆ ಅರಿತು ಅದನು ಮನದಿ ಪರಿಹರಿಸಿಕೊಳಲು ಪರಮ ಭಾಗವತರ ವರ ಮಂದಿರಕೆ ಪೋಗಿ ವರಹ ವೆಂಕಟಗಿರಿಯೊಳ್ ಸ್ಥಿರವಾಗಿ ನಿಂತೆ 2 ಬರುತ ದಾರಿಯೊಳೆನಗೆ ಸ್ವಪ್ನದಲಿ ತೋರಿದೆ ವರ ದಿವ್ಯರೂಪವನು ನಾರಿಮಣಿಯೆ ಸರಿಗೆ ಕಂಕಣ ಮುತ್ತಿನಾ ಬುಗುಡಿಯನೆ ಧರಿಸಿ ವರ ಮುತ್ತೈದೆಯರಿಬ್ಬರಂದದಲಿ ತೋರಿದೆ 3 ಮುಕ್ಕೋಟಿ ಗಂಧರ್ವ ದೇವರ್ಕಳೂ ಬರುತಿರಲು ಅಕ್ಕರದಿ ತಂಗಿಯನೆ ಒಡಗೂಡುತ ಲಕ್ಕುಮಿ ಸ್ವಾಮಿ ಶ್ರೀ ಪುಷ್ಕರಣಿ ಸಾರಿರಲು ಉಕ್ಕುವೋ ಉಲ್ಲಾಸದಿಂದ ತೆರಳಿದೆಯೆ 4 ಜಿಷ್ಣು ಸಖನ ದಿವ್ಯ ಪಟ್ಟಣವ ಸೇರಲು ಕೃಷ್ಣವೇಣಿಯ ಒಡಗೂಡಿ ವಿಷ್ಣುಪಾದೋದ್ಭವೆಗೆ ಸರಿಯೆನಿಸಿ ಗೋಪಾಲ ಕೃಷ್ಣವಿಠ್ಠಲನ ಬಹುನಿಷ್ಠೆಯಿಂ ಧ್ಯಾನಿಸುವೆ 5
--------------
ಅಂಬಾಬಾಯಿ
ಗೋಪಾಲ ದಾಸರಾಯ ನಿನ್ನಯ ಪಾದ ನಾ ಪೊಂದಿದೆನೊ ನಿಶ್ಚಯ ಪ ಈ ಪೀಡಿಸುವ ತ್ರಯತಾಪಗಳೋಡಿಸಿ ಕೈ ಪಿಡಿದೆÀನ್ನ ಕಾಪಾಡಿದ ಗುರುರಾಯ ಅ.ಪ. ಘೋರ ವ್ಯಾಧಿಯನೆ ನೋಡಿ | ವಿಜಯರಾಯ ಭೂರಿ ಕರುಣವ ಮಾಡಿ ತೋರಿದರಿವರೆ ಉದ್ಧಾರಕರೆಂದಂದಿ ಪಾದ ಸಾರಿದೆ ಸಲಹೆಂದು || ಸೂರಿಜನ ಸಂಪ್ರೀಯ ಸುಗುಣೋದಾರ ದುರುಳನ ದೋಷ ನಿಚಯವ ದೂರಗೈಸಿ ದಯಾಂಬುನಿಧೆ ನಿ ವಾರಿಸದೆ ಕರಪಿಡಿದು ಕರುಣದಿ ಅಪ ಮೃತ್ಯುಯವನು ತಂದೆ ಎನ್ನೊಳಗಿದ್ದ 1 ಅಪರಾಧಗಳ ಮರೆದೆ ಚಪಲ ಚಿತ್ತನಿಗೊಲಿದು ವಿಪುಲ ಮತಿಯನಿತ್ತು ನಿಪುಣನೆಂದೆನಿಸಿದೆ ತಪಸಿಗಳಿಂದಲಿ ಕೃಪಣ ವತ್ಸಲ ನಿನ್ನ ಕರುಣೆಗೆ ಉಪಮೆಗಾಣೆನೊ ಸಂತತವು ಕಾ ಶ್ಯಪಿಯೊಳಗೆ ಬುಧರಿಂದ ಜಗದಾ ಧಿಪನ ಕಿಂಕರನೆನಿಸಿ ಮೆರೆಯುವ 2 ಎನ್ನ ಪಾಲಿಸಿದಂದದಿ ಸಕಲ ಪ್ರ ಪನ್ನರ ಸಲಹೊ ಮೋದಿ ಅನ್ಯರಿಗೀಪರಿ ಬಿನ್ನಪ ಗೈಯೆ ಜ ಗನ್ನಾಥ ವಿಠಲನ ಸನ್ನುತಿಸುವ ಧೀರ || ನಿನ್ನ ನಂಬಿದ ಜನರಿಗೆಲ್ಲಿಯ ಬನ್ನವೋ ಭಕ್ತಾನು ಕಂಪಿಶ ರಣ್ಯ ಬಂದೆನೊ ಈ ಸಮಯದಿಅ ಹರ್ನಿಶಿ ಧ್ಯಾನಿಸುವೆ ನಿನ್ನನು 3
--------------
ಜಗನ್ನಾಥದಾಸರು
ಗೋಪಾಲ ಪಾಲಿಸೊ ನಿನ್ನ ಪಾದಸೇವಕನಿವನೆಂದು ನೀ ಭಾವಿಸಿ ಗೋಪಾಲ ಪಾಲಿಸೊ ಪ ನಾರಿಜನರುಟ್ಟ ಸೀರೆ ಸೆಳೆದು ತಾ ಭಾರಿ ಮರವನ್ನೇರಿ ವಿನೋದವ ತೋರಿದ ಸುರರಿಪು ವೈರಿಯೇ ಎನ್ನಯ ಕೋರಿಕೆ ನಡಸಲಿನ್ಯಾರಿಗೆ ಬೇಡಲೊ 1 ತುಂಗಫಣಿಫಣ ಶೃಂಗದೊಳು ಚರ ಣಂಗಳ ಕುಣಿಸು ಭುಜಂಗಮವರನಿಗೆ ಭಂಗಪಡಿಸಿ ಕೃಪಾಪಾಂಗದಿ ಸಲಹಿದ ಮಂಗಳಮಹಿಮ ರಥಾಂಗಧರ ಬಾಲ 2 ಬಂಧು ಬಳಗ ನೀನೆಂದು ತಿಳಿದು ಮ ತ್ತೊಂದನೆಣಿಸದೆ ಇಂದಿರಾರಮಣನೆ ಎಂದೆಂದಿಗೂ ಸಲಹೆಂದು ನಾ ಬೇಡುವೆ ಸಿರಿ 3 ಖಿನ್ನ ನಿಜ ಜನರನ್ನು ಸಲಹುವ ಪನ್ನಗಶಯನ ಪ್ರಸನ್ನ ಹೃದಯನಾಗಿ ಎನ್ನ ಮನೋರಥವ ಪೂರೈಸುವ ರನ್ಯರು ಯಾರಯ್ಯ ಚಿನ್ಮಯ ಮೂರುತಿ 4 ಕಾಮಜನಕನೆ ನಾಮಗಿರಿ ಸಿರಿ ಸ್ವಾಮಿ ನೃಸಿಂಹನೆ ಕಾಮಿತ ಕೊಡುವಂಥ ಕಾಮಧೇನು ಚಿಂತಾಮಣಿ ಎನ್ನಯೋಗ ಕ್ಷೇಮವು ನಿನ್ನದಯ್ಯ ಸೋಮಕುಲಾಧಿಪ 5
--------------
ವಿದ್ಯಾರತ್ನಾಕರತೀರ್ಥರು
ಗೋಪಾಲ ಬಾಲಾ ಏಳು ಏಳೈಯ್ಯಾ | ಶ್ರೀಪತಿ ಪರಮಾನಂದ ಸಜ್ಜನರಿಗೆ ಕೊಡುವೆಸ್ವಹಿತಾಶ್ರಯಾ ಪ ನಾಮವೇದೋಕ್ತದಲಿ | ವಿಮಲತರದಿ ಸ್ತುತಿಗೈಯ್ಯುತಲಿದೇ | ಕರಮುಗಿದು ಆನಂದದಲಿ 1 ಸಂಗದಿ ತುಂಬುರ ನಾ | ಜಾಣತನಗಳಿಂದ ಪಾಡುತಲಿದಕೋ | ಅಣುಗನು ಪದ್ಮಜನಾ 2 ರವಿಯನುದಯಿಸಿದಾ || ನೋಟದಿದಯದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಾಲವಿಠಲ ನೀ ಕಾಪಾಡೊ ಎನ್ನನುಅಪಾರ ಜನುಮದಿ ಪೊಂದಿ ಇಪ್ಪೆ ನಿನ್ನ ಪ. ಉದಿತ ತರಣೀನಿಭ ಪದಪದ್ಮ ನಿನ್ನಯಹೃದಯದೊಳಗಿರಿಸಿ ಮುದದಿಂದ ಧ್ಯಾನಿಪಸದಯುಗಳ ಪಾದಪದುಮಸೇವೆಯನುಒದಗಿ ಪಾಲಿಸೊ ಶಶಿವದನ ಸಂ(ಕಂ)ಸದನನೆ 1 ವಾಸುದೇವನೆ ಎನ್ನ ದೋಷಿಯೆಂತೆಂದರೆಆಸರಿನ್ನ್ಯಾರು ನಿನ್ನ ದಾಸರದಾಸಗೆದಾಸವಿನುತ ಹೀಗುದಾಸೀನ ಮಾಡಲುದಾಸಜನರು ನಿನ್ನ ಲೇಶವು ಮೆಚ್ಚರು 2 ಪಿರಿಯರೆಲ್ಲರು ನಿನ್ನ ಚರಣವ ಪೂಜಿಸಿಪರಮಾನುಗ್ರಹ ಪರಿಪಾಲಿಸಿಪ್ಪರೆನ್ನನಿರುತದಿಬೇಡುವೆ ಗೋಪಾಲವಿಠಲ ಶ್ರೀಲೋಲನೆದೊರೆಯೆ ನಿನ್ನ ಮೂರುತಿ ಬರವೆನ್ನ ಮನಸಿಗೆ 3
--------------
ಗೋಪಾಲದಾಸರು
ಗೋಪಿ ಚಂದನದಿಂದ ಎ ನ್ನೊಡೆಯ ಮಧ್ವಾರ್ಯ ಹೃದಯವಾಸಾ ಕೃಷ್ಣ ಪ. ಮೃಡಸಖ ನಿನ್ನಯ ರೂಹವ ತೋರೆ ಕಡಲಿಂದೊಡನೆ ಬಂದೆ ಆನಂದತೀರ್ಥರ ಮುಂದೆ ನಿಂದೆ ಅ.ಪ. ಗೆಜ್ಜೆ ಕಾಲ್ ಕಡಗ ಸಜ್ಜಿನಿಂದಿಟ್ಟು ಮಜ್ಜಿಗೆ ಕಡಗೋಲು ನೇಣು ಸಹ ಸಜ್ಜನರ ಸಲಹಲು ಮಧ್ವಾರ್ಯರ ಮುಂದೆ ಗೆಜ್ಜೆ ಧ್ವನಿ ಮಾಡಿ ಕುಣಿಯುತ ಕೃಷ್ಣ 1 ಉಟ್ಟ ಪೀತಾಂಬರ ಉಡಿಗೆಜ್ಜೆ ವಡ್ಯಾಣ್ಯ ಇಟ್ಟು ಕೌಸ್ತುಭಹಾರ ತುಳಸಿಮಾಲಾ ಕೊಟ್ಟು ಅಭಯ ಹಸ್ತ ಸಲಹುವೆನೆಂಬಾ ಬಿರುದಿಟ್ಟು ಕಂಕಣ ತೊಟ್ಟು ಶ್ರೀ ಕೃಷ್ಣ 2 ಮಕರಕುಂಡಲ ಕಿರೀಟ ಶೋಭಿಸುತಲಿ ಅಕಳಂಕ ಚರಿತ ಶ್ರೀ ಶ್ರೀನಿವಾಸ ನಿಖಿಲ ಬ್ರಹ್ಮಾಂಡದೊಳೆಲ್ಲೆಲ್ಲು ಕಾಣೆ ಸಕಲ ದೇವರ ದೇವಾ ಶ್ರೀ ಕೃಷ್ಣ ಪ್ರಭುವೆ 3
--------------
ಸರಸ್ವತಿ ಬಾಯಿ
ಗೋಪಿ : ವೇಣುಗೋಪಾಲ ನಿನ್ನ ಜಾಣತನವ ಬಿಡು ಬಿಡು ಮಾಡುವೇಜಾಣ ಪ ಕೃಷ್ಣ : ನೀರೆ ಗೋಪಿಯೆ ನಿನ್ನ ದ್ವಾರದೊಳಿರುವೆ ತೋರದೆನ್ನನು ನೀನು ಭಾರಿ ಬಳಲಿರುವೆ ನೀರೆ 1 ಗೋಪಿ : ಹತ್ತಿರದಲ್ಲಿದ್ದು ನೀನು ಇತ್ತೆನಗೆ ತೋರದಂತೆ ನಿನ್ನನು ``ವೇಣು 2 ಕೃಷ್ಣ : ಅಕ್ಷಿಯೊಳಗೆ ನಿನ್ನ ಸಾಕ್ಷಿಯಾಗಿರುವೆ ಕುಕ್ಷಿ ತುಂಬಿರುನೆ | ನೀರೆ 3 ಗೋಪಿ : ಆರು ಬಾಗಿಲು ನೀಗಿ ಜೋರಗಂಡಿಯೊಳ್ ಪೋಗಿ ಮಾಡುವೆ ||ವೇಣು|| 4 ಕೃಷ್ಣ : ಮನುಮುನಿ ಜನರೆಲ್ಲಾ ವಿನಯದಿಂ ಪಿಡಿದು ಘನಸುಖ ಪಡುವರು ಮನದೊಳಗರಿದು ||ನೀರೆ|| 5 ಗೋಪಿ : ಆಗಮ ಸಂಚಿತ್ತ ಭೋಗ ಸಂಸಾರವನ್ನೆಲ್ಲಾ ಜರೆನಿಸಿದೆಲ್ಲಾ ||ವೇಣು || 6 ಕೃಷ್ಣ : ನಿಮಿಷ ಮಾತ್ರದಿ ಸುಖವ ಮನದೇಸ್ಮರಿಸಿ ಅಮಮ ಘನಾನಂದ ರಮಿಸು ಸ್ವಸುಖವಿ ||ನೀರೆ|| 7 ಗೋಪಿ : ಕಣ್ಣ ಸನ್ನೆಯ ಮಾಡಿ ಅನ್ಯರ್ಮನ್ಮನೆಗಳಲ್ಯೋಡಿ ಮಾತುಗಳಾಡುವೆ ||ವೇಣು || 8 ಕೃಷ್ಣ : ಧೊರೆಯಾಗಿರುವೆ ನಾನು ತಿರಿದುಣ್ಣಲರಿಯೆ ಅರಿವಿನಿಂದರಿಯೆ || ನೀರೆ|| 9 ಕಂತು ಪಿತನೆ ನಿನ್ನ ಭ್ರಾಂತಿ ಹತ್ತಿತು ಎನಗೆ ಗುರುವರ ||ವೇಣು || 10
--------------
ಶಾಂತಿಬಾಯಿ
ಗೋಪಿ ಜನಪಾಲ ಪಾವನ ತರಲೀಲ ಲಕ್ಷ್ಮೀಲೋಲ ಕಾಲನಮಿತ ಸುರಜಾಲ ಸೇವಿತ ಶೌರಿ ಪ ವಂದಿತ ಸುರಮುನಿ ವೃಂದ ಭಕುತಜನ ಬಂಧುವಾಗಿರುವ ಗೋವಿಂದ ಗೋಪಾಲದೇವ ಮಂದಹಾಸ ಬಲಿ ಬಂಧನ ಮುರಹರ ಸಿಂಧು ಶಯನ ಗೋಪಿಕಂದ ಮುಕುಂದ 1 ಕಂಸಾರಿ ಕರುಣಾಭ್ದಿ ಶೃಂಗಾರಿ ಸುಜನ ಮನೋರಥ ಸುರತರು ಹಾರ ಹೀರ ಗಂಭೀರ ವೈಯಾರ 2 ಅಂಬುಜ ಭವನುತ ಶಂಬರಾರಿಯಪಿತ ಜಂಭಾರಿ ನಮಿತ ಹೇರಂಬ ಜನಕಪ್ರೀತ ಕಂದರ ಕಮಳಾಂಬಕ ರಮಣ 3 ರಾಗಿ ಜನರ ಭವರೋಗ ಹರಣಹರಿ ನಗಧರ ಸಗರ ವಂಶೋದ್ಧಾರ ಖಗವರ ಗಮನ ಸುಗುಣ ಗಂಭೀರ 4 ದುರಿತ ಸಂಹಾರಿ ಕರದಿ ಚಕ್ರಧಾರಿ ಸುರರ ಸಿರಿ ಧುರ ಧೀರ ಚಿಪ್ಪಳಿವಾಸ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು