ಸೀಸಪದ್ಯ
ಮಕರ ಭಾದೆಗೆ ಸಿಲುಕಿ
ಕರಿರಾಜ ತಾ ಕರೆಯೆ ಭರದಿ ನೀ ಬಂದೆ
ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು
ಸಂದೇಹವಿಲ್ಲದೆಲೆ ಬಂದು ಕಾಯ್ದೆ
ವಿಪಿನದಲಿ ಧ್ರುವರಾಯ ತಪವಗೈಯುತಲಿರಲು
ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ
ಮರಣ ಕಾಲದಿ ಮಗನ ಕರೆದಜಾಮಿಳನಂದು
ಕರುಣದಿಂದಲಿ ಪೊರೆದೆ ಕರುಣ ಶರಧೆ
ದುರುಳ ಸೆರಗ ಸೆಳೆಯುತಿರೆ
ನೊಂದು ಚೀರಿಡಲಕ್ಷಯಾಂಬರವನಿತ್ತೆ
ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು
ತಂದೆ ನೀ ಮೈದೋರು ಶ್ರೀ ಕರಿಗಿರೀಶ