ಒಟ್ಟು 899 ಕಡೆಗಳಲ್ಲಿ , 92 ದಾಸರು , 761 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಹಿಹಳಿ- ಥೂಖೋಡಿಪಾಪಿ ಮನವೇ ಇಂಥ-|ಕುಹಕಬುದ್ಧಿಯ ನೀ ಬಿಡು ಕಾಣೋ ಮನವೇಪಬಣ್ಣದ ಬೀಸಣಿಕೆಯಂತೆ ಹೆಣ್ಣು ತಿರುಗುವುದು ಕಂಡು |ಕಣ್ಣ ಸನ್ನೆಮಾಡಿ ಕೈಯ ಹೊನ್ನ ತೋರಿಸಿ ||ತಣ್ಣೀರು ಹೊಯ್ದ ಹೊಸ ಸುಣ್ಣದಂದದಿ ಕುದಿದು ಕುದಿದು |ಕಣ್ಣಿನೊಳು ಮಣ್ಣ ಚೆಲ್ಲಿ ಕೊಂಬರೇ ಮನವೆ 1ಪಗಡೆ ಚದುರಂಗ ಲೆತ್ತವನಾಡೆ ಕರೆದರೆ |ನಿಗುರಿದುವು ಕರ್ಣಗಳು ಮೊಚ್ಚೆಯಂತೆ ||ಜಗದೀಶ್ವರನ ದಿನದಿ ಜಾಗರಕೆ ಕರೆದರೆ |ಮುಗಿಲ ಹರಿದು ಧರೆಗಿಳಿದಂತೆ ಮನವೇ 2ವಾಸುದೇವನ ಪೂಜೆ ಒಮ್ಮೆ ಮಾಡೆಂದರೆ |ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ||ಆ ಸಮಯದಲೊಬ್ಬ ಕಾಸು ಕೊಡಲು ಅವನ |ದಾಸಿಯ ಮಗನಂತೆ ಬೆಂಬಿಡದೆ ಮನವೇ 3ನೆರೆಮನೆ ಹೊರಮನೆ ಪ್ರಸ್ತವಾದರೆ ಅವರು |ಕರೆಯದ ಮುನ್ನವೆ ಹೊರೆಹೊರಟೆ ||ಬರಿಗಂಟು ಬರಿಮಾತು ಸುಳ್ಳುಸುದ್ದಿಯ ಹೇಳಿ |ಹಿರಿಯ ಮಗನಂತೊಡಲ ಹೊರಕೊಂಬೆ ಮನವೆ 4ಬಿಂದು ಮಾತ್ರವೆ ಸುಖ-ದುಃಖ ಪರ್ವತದಷ್ಟು |ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ||ಎಂದೆಂದಿಗೂ ನಮ್ಮ ಪುರಂದರವಿಠಲನ |ಹೊಂದಿಹೊಂದಿ ನೀ ಸುಖಬಾಳೊ ಮನವೆ 5
--------------
ಪುರಂದರದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಡಂಬಕ ಭಕುತಿಗೆ ಮೆಚ್ಚಿಕೊಳ್ಳನೊ ಕೃಷ್ಣ - ಹಾರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಡೊಂಬಲಾಗ ಹಾಕಿ ಹೊರಳಿದರಿಲ್ಲ ಪ.ವಟವಟನೆ ಕಪಿಯಂತೆ ಒದರಿಕೊಂಡರೆ ಇಲ್ಲ |ಬೆಟ್ಟದಿಂದಲಿ ಕೆಳಗೆ ಬಿದ್ದರಿಲ್ಲ ||ಬಿಚ್ಚಿಟ್ಟರೆ ಇಲ್ಲ ನಿರ್ಭಾಗ್ಯರ್ಗೆಂದೆಂದು |ಅಚ್ಯುತಾನಂತನ ದಯವಿಲ್ಲದೆ 1ಕೆಟ್ಟೆನೆಂದರೂ ಇಲ್ಲ ಕ್ಲೇಶಪಟ್ಟರೂ ಇಲ್ಲ |ಸುಟ್ಟ ಸಂಸಾರದೊಳು ಸುಖವು ಇಲ್ಲ ||ಕೋಟಲೆಗಂಜಿದರಿಲ್ಲ ಕೊಸರಿಕೊಂಡರು ಇಲ್ಲ |ವಿಠಲನ ದೂರಿದರಿಲ್ಲ ವಿಧಿಯ ಬೈದರಿಲ್ಲ 2ಕನ್ನಹೊಕ್ಕರು ಇಲ್ಲ ಕಡಿದಾಡಿದರು ಇಲ್ಲ |ಕುನ್ನಿಯಂತೆ ಮನೆಮನೆಯ ಕೂಗಿದರಿಲ್ಲ ||ಹೊನ್ನಿನಾಸೆಗೆ ಹೋಗಿ ಹೊಡೆದುಕೊಂಡರು ಇಲ್ಲ |ಪನ್ನಗಾದ್ರಿ ಪುರಂದರವಿಠಲನ ದಯವಿರದೆ 3
--------------
ಪುರಂದರದಾಸರು
ತಿಳಿಯನು ಎಂದೆಂದಿಗನ್ಯ | ರಂಗಒಲಿದ ದಾಸರು ಜಗನ್ಮಾನ್ಯ ||ಅಲವಮಹಾತ್ಮರೆಂಬ ಪುಣ್ಯ | ಕೀರ್ತಿಗಳನಿತ್ಯಕೇಳ್ವನರಧನ್ಯ ಪಹಿರಣ್ಯಕಶ್ಯಪುಜ ಸಹ್ಲಾದನೇವೇ |ಎರಡನೆ ಜನ್ಮ ಶಲ್ಯನಾದ ||ಗುರುವಾದಿರಾಜರನರ್ಚಿಸಿದ |ಪುರಂದರದಾಸರಾಯರಲ್ಲುದಿಸಿದ1ಅಯ್ದನೆಯ ರೂಪವೀಗಿಂದಂತೆ |ಬಹುದು ಏಳು ಜನ್ಮ ಮುಂದಂತೆ ||ಮೋದಾಭಿವೃದ್ಧಿಗೇನೋ ಅಂತೇ ಎಂಬ |ವಾದಿಗಿದೆಲ್ಲ ಅಂತಿಗಂತೆ 2ದಾಸಕೂಟಸ್ಥರಿಗೀ ಮಾತು ಕೆಲವು |ದೇಶಗಳಲ್ಲಿ ಅನುಭವವಾಯ್ತು ||ಈ ಸುಕಥಾಲಾಪ ವಲ್ಲ್ಯಾಯಿತು ಶ್ರೀ ಪ್ರಾ |ಣೇಶ ವಿಠಲನಲ್ಲಿಹನಾತು 3
--------------
ಪ್ರಾಣೇಶದಾಸರು
ತೋಳು ತೋಳು ತೋಳು ಕೃಷ್ಣ-ತೋಳನ್ನಾಡೈ |ನೀಲಮೇಘಶ್ಯಾಮ ಕೃಷ್ಣ ತೋಳನ್ನಾಡೈಪಗಲಿಕೆಂಬಂದುಗೆ ಉಲಿಯುವ ಗೆಜ್ಜೆಯ ತೋ-|ಅಲುಗುವ ಅರಳೆಲೆ ಮಾಗಾಯ್ಮಿನುಗಲು ತೋ-|ನೆಲುವು ನಿಲುಕದೆಂದೊರಳ ತಂದಿಡುವನೆ ತೋ-|ಚೆಲುವ ಮಕ್ಕಳ ಮಾಣಿಕ್ಯವೆ ನೀ ತೋ- 1ದಟ್ಟಡಿಯಿಡುತಲಿ ಬೆಣ್ಣೆಯ ಮೆಲುವನೆ ತೋ-|ಕಟ್ಟದ ಕರಡೆಯ ಕರುವೆಂದೆಳೆವನೆ ತೋ-||ಬೊಟ್ಟಿನಲ್ಲಿ ತಾಯ್ಗಣಕಿಸಿ ನಗುವನೆ ತೋ-|ಬಟ್ಟಲ ಹಾಲನು ಕುಡಿದು ಕುಣಿವನೆ ತೋ- 2ಅಂಬೆಗಾಲಿಲೊಂದೊರಳನ್ನೆಳೆವನೆ ತೋ-|ತುಂಬಿದ ಬಂಡಿಯ ಮುರಿಯಲೊದ್ದವನೆ ತೋ-|ಕಂಬದಿಂದಲವತರಿಸಿದವನೆ ನೀ ತೋ-|ನಂಬಿದವರನುಹೊರೆವಕೃಷ್ಣ ತೋ3ಕಾಲಕೂಟದ ವಿಷವ ಕಲಕಿದ ತೋ-|ಕಾಳಿಂಗನ ಹೆಡೆಯನು ತುಳಿದ ತೋ-||ಕಾಳೆಗದಲಿ ದಶಕಂಠನ ಮಡುಹಿದ ತೋ-|ಶಾಲಕ ವೈರಿಯೆ ಕರುಣಿಗಳರಸನೆ ತೋ 4
--------------
ಪುರಂದರದಾಸರು
ದಣಿಯ ನೋಡಿದೆನೋ ವೆಂಕಟನ ಮನದಣಿಯೆ ನೋಡಿದೆ ಶಿಖಾಮಣಿಯ ನಿರ್ಮಲನ ಪಕೇಸಕ್ಕಿಅನ್ನ ಉಂಬುವನ ದುಡ್ಡುಕಾಸು ಬಿಡದೆ ಹೊನ್ನುಗಳಿಸಿಕೊಂಬುವನ ||ದೋಸೆ ಅನ್ನವ ಮಾರಿಸುವನತನ್ನ ದಾಸರ ಮೇಳದಿ ಕುಣಿದಾಡುತಿಹನ 1ಗಂಟಿನೊಲ್ಲಿಯ ಹೊದ್ದಿಹನ-ಹೊರಹೊಂಟು ಹೋಗಿ ಬೇಟೆಯಾಡುತಲಿಹನ ||ಗಂಟೆ ನಾದಕೆ ಒಲಿಯುವನ ಭೂವೈ-ಕುಂಠವಿದೆಂದು ಹಸ್ತವ ತೋರಿದವನ 2ಬೆಟ್ಟದೊಳಗೆ ಇದುತಿಹನ ಮನಮುಟ್ಟೆ ಭಜಿಪ ಭಕುತರಿಗೊಲಿದವನ ||ಕೊಟ್ಟ ವರವ ತಪ್ಪದವನ ಈಸೃಷ್ಟಿಗಧಿಕಪುರಂದರವಿಠಲನ3
--------------
ಪುರಂದರದಾಸರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ದೇವಿವರಲಕ್ಷ್ಮಿ ಭಕ್ತರ ಕಾಯ್ವಿಕರುಣದಿ ವರವ ನೀಡಿ ಪ.ಸಿಂಧುಶಯನನ ದಯೆಎಂದೆಂದು ಬಿಡದಂತೆಚಂದದಿ ಕರುಣಿಸೆ ಇಂದಿರೆÉ ನಮಗೆ 1ಮಂದಗಮನೆಯರು ತಂದಮಂದಾರಮಲ್ಲಿಗೆಗಂಧ ಕುಂಕುಮದಿಂದ ಚಂದಾಗಿ ಅರ್ಚಿಸೆದೇವಿ 2ಮಿತ್ರವಿಂದಾದಿಗಳಿಂದಮತ್ತೊಮ್ಮೆ ಲಕುಮಿಯೆಮುತ್ತು ರತ್ನದ ವಸ್ತ ವಸ್ತ್ರ ವೀಳ್ಯವ ಕೊಳ್ಳದೇವಿ 3ನಗಧರರಾಮೇಶನುಅಗಲದಂತೆ ನಮ್ಮಮುಗಿದೇವ ಕರಗಳ ನಗೆಮುಖದ ಗೌರಿ ನೀ ದೇವಿ 4
--------------
ಗಲಗಲಿಅವ್ವನವರು
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನಮೋ ನಮೋ ರಾಮ ಕಳುಹಿಸಿದನಮ್ಮಾ |ಮಮ ಸ್ವಾಮಿ ಬದುಕಿಹನೆ ಪೇಳೋ ತಮ್ಮ ಪವಾಸುದೇವನು ಜಗದ ಸೃಜಿಸುವನು ಕೆಡಿಸುವನು |ನಾಶವೆಲ್ಲಿಹದು ರಘುವರ್ಯಗಮ್ಮಾ ||ವಾಸವಾಗಿರೆ ವನದಿಮೃಗತರಲು ಪೋಗಿ ಜಗ- |ದೀಶ ನುಡಿದನು ಕಡೆಯ ಮಾತು ತಮ್ಮ 1ಖಳಮಾಯೆಯಲಿ ಬರಲು ರಾಘವನು ಸಂಹರಿಸೆ |ನೆಲಕುರುಳಿ ಕೂಗಿದನು ಅವನೇ ಅಮ್ಮಾ ||ಬಲುವಿಂದ ಲಕ್ಷ್ಮಣನ ಬೈದು ಅಟ್ಟಿದೆ ನಾನು |ಜಲಜಾಕ್ಷನೋರ್ವನಿಹನೇನೋ ತಮ್ಮ 2ಅನುಜಯುಕ್ತದಿ ದೇವ ಕಪಿದಂಡು ನೆರಹಿಹನು |ಹನುಮಂತ ನಾ ರಾಮದೂತನಮ್ಮಾ ||ಇನಿತು ಸತ್ಯವೊ ಅನೃತವೊ ನಂಬಿಗ್ಯಾಗದು |ಮನದ ಅನುಮಾನ ಬಿಡುವಂತೆ ಮಾಡೋ ತಮ್ಮ 3ಸಿರಿಕಾಂತ ಶ್ರೀಮಂತ ಕರುಣದಲಿ ಕೊಟ್ಟಿಹನು |ಗುರುತಿನುಂಗುರವನಿದು ನೋಡಿರಮ್ಮಾ ||ಪರಮಾತ್ಮನಿಗೆ ದೂತನಹುದುಶುಭವಾರ್ತೆಗಳೆ |ಇರುವನೆಲ್ಲೆದು ವಿಸ್ತರಿಸೆಲೊ ತಮ್ಮಾ 4ಕಾನನದೆ ಚರಿಸುತ ರವಿಸುತಗೊಲಿದು ಶುಕ್ರಜನ |ಹಾನಿ ಮಾಡಿದನಲ್ಲೇ ಇರುವನಮ್ಮಾ ||ಜಾನಕಿಯೆಂದೆನ್ನನು ನಿತ್ಯದಲಿ ನೆನೆಸಿ |ಏನು ಮಾಡುವನೊ ಪೇಳುವದೋ ತಮ್ಮ 5ನಿನ್ನಗಲಿ ವ್ಯಾಕುಲದಿ ನರರಂತೆ ಕೇಶವನು |ಅನ್ನ ಉದಕವನೆಲ್ಲಾ ಜರಿದನಮ್ಮಾ ||ಪನ್ನಗಾರಿ ಧ್ವಜನು ದನುಜರ ಗೆಲಿದು |ಯನ್ನ ಕೂಡುವದು ನಾ ಕಾಣೆ ತಮ್ಮ 6ತಾಯೆ ರಾವಣನಳಿದು ನಾನೊಯ್ವೆ ನಿನ್ನೀಗ |ನೋಯಿಸದೆ ಹರಿಗೀಡು ಆವನಮ್ಮಾ ||ನಾಯಕನು ನೀಂ ಭೃತ್ಯರೊಳು ತ್ವರಿತ ಬಹುದೆಂದು |ಕಾಯಜಪಿತನಿಗೆ ಬಿನ್ನೈಸೊ ತಮ್ಮ 7ಪೋಗಿ ಬರುವೆನು ನಿಮ್ಮ ಗುರುತು ಏನಿದೆ ಕೊಟ್ಟು |ಬೇಗನಪ್ಪಣೆಯೆನಗೆ ಈವದಮ್ಮಾ ||ನಾಗಶಯನಗೆ ರಾಗಟೆಯನಿತ್ತು ಪದಕೆ ತಲೆ |ಬಾಗಿರುವಳೇಳದಲೆಯೆನ್ನೋ ತಮ್ಮ 8ನಳಿನಮುಖಿಯೆ ನಮೋ ನಮೋ ದಯೆಯಿರಲಿ ಸ್ವಲ್ಪ ದಿನ |ದೊಳಗೆ ಬರುವೆವು ಚಿಂತೆ ಬೇಡವಮ್ಮ ||ಭಳಿ ಭಳಿರೆ ಪ್ರಾಣೇಶ ವಿಠ್ಠಲನ ಪೂರ್ಣ ದಯೆ |ಗಳಿಸಿ ಅಜಪಟ್ಟವನು ಆಳೋ ತಮ್ಮ 9
--------------
ಪ್ರಾಣೇಶದಾಸರು
ನರರ ವಂಚಿಸಿದನೆಂದೆಂಬ | ಪೌರುಷವೇಕೋ |ಹರಿಯ ವಂಚಿಸಲಸಾಧ್ಯವು | ನಿನಗೆ ಮರುಳೆ |ದುರುಳರೊಡನಾಟದಲಿ ದುಷ್ಟ ಕಾರ್ಯವಮಾಡು|ನರಕದಲಿ ಮುಳುಗಿಸುವ ಯಮನುನೋಡುಪಮೂಢ ಮತಿ ಕೇಳ್ ನರಗೆ ನೋಡಲೆರಡೇ ಕಣ್ಣು |ಗಾಢ ನಿದ್ರೆಯೊಳದನು ಮುಚ್ಚಿ ಮಲಗುವನೂ |ಗಾಢಾಂಧಕಾರದಲಿ | ಸೊಡರ ಹೊರತು ಕಾಣದದು |ರೂಢಿಯೊಳು ಸಹಸ್ರಾಕ್ಷ | ನನು ಮೋಸಗೊಳಿಸುವಾ |ಪಾಡೇನ ಬಲ್ಲೆ ಮರುಳೇ1ಎರಡೇಳು ಜಗವನ್ನು ಧರಿಸಿರುವ ಹೃದಯದಲಿ |ಗರುಡ ವಾಹನನಾಗಿ ಧರೆಯೊಳ್ ಚರಿಸುವನು |ತರಣಿಶಶಿನೇತ್ರನೆಂದೆನಿಸಿ ಸರ್ವವನೋಳ್ಪ |ಪರಮಾತ್ಮನಾಗಿ ಪ್ರಾಣಿಗಳ | ಹೃದಯದಲಿ |ಹರಿಯು ನೆಲೆಸಿರ್ಪ ಕೇಳು2ಇಂದೋರ್ವನನು ಮೋಸಗೊಳಿಸಿದಾ ದೋಷವಿದು |ಎಂದೆಂದಿಗೂ ನಿನ್ನ ಬೆನ್ನ ಬಿಡದೂ |ನಿಂದಿಗನು ನರಜನಕೆ ಗೋವಿಂದನಿಗೆ ದ್ರೋಹೀ |ಎಂದೆನಿಸಿ ಯಮನ ಹಂಗಿಗನಾಗಬೇಡ ನಾಳೆ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಾರಾಯಣ ಪಂಜರನಾರಾಯಣಾಯ ನಮೊ ನಾರಾಯಣಾಯ ನಮೊನಾರಾಯಣಾಯ ನಮೊ ನಾರಾಯಣನಾರದರ ಮುಖದಿಂದ ನರಕಸ್ಥರೆಬ್ಬಿಸಿದೆನಾರಾಯಣಾಯ ನಮೊ ನಾರಾಯಣ ಪ.ಮತ್ತಕರಿಯವಸಾನಕಂಜಿ ಹರಿಯೆ ನೀ ಕಾಯ್ದೆ *ಭಕ್ತ ಪ್ರಹ್ಲಾದನೇಕಾಂಗ ನಿಷ್ಠೆಗೆ ಒಲಿದೆ 1ಪೃಥುವಿಗಳ್ಳನನಿರಿದು ಸತಿಯನುದ್ಧರಿಸಿದೆಪೃಥುಚಕ್ರವರ್ತಿಗೆ ಪ್ರತ್ಯಕ್ಷನಾಗ್ಯೊಲಿದೆ2ಶೂಲಿಯನು ಬೆಂಬತ್ತಿ ಸುಡುವೆನೆಂಬನ ಸುಟ್ಟೆಶೀಲವಿಡಿದಂಬರೀಷನ ಮತವ ಗೆಲಿಸಿದೆಯೊ 3ಮಕರರೂಪದಿ ಸತ್ಯವ್ರತಗೆ ತತ್ವವನೊರೆದೆಮುಖದಿಶ್ರುತಿಪಿಡಿತಂದು ವಾರಿಜಾಸನಗಿತ್ತೆ4ಪುರುಹೂತಗಖಿಳ ಪರಮಾರ್ಥವನು ಅರುಹಿದೆಸುರಪನ್ನ ಭಯವಟ್ಟಿ ಧ್ರುವಗೆ ಧ್ರುವಪದವಿತ್ತ್ತ್ತೆ 5ಮಹಾಪಾಪನಿರತ ಅಜಾಮಿಳನಿಷ್ಟ ಕರಿಸಿದೆಮಹಿದಾಸನಾಗಿ ತಾಯಿಗೆ ತತ್ವವನು ಪೇಳ್ದೆ 6ಮುನಿ ಕಾಲಲೊದೆಯೆ ಎದ್ದು ಕರುಣಿಸಿದೆ ಕರುಣಾನಿಧಿಮುನಿವೆಂಗಳರೆಯಾಗೆ ಪದಸೋಂಕಿಸ್ಯೆತ್ತಿದೆಯೊ 7ಮಖವ ರಕ್ಷಿಸಿ ರಾಜಋಷಿಗಭೀಷ್ಟೆಯನಿತ್ತೆಮಕರಧ್ವಜಾರಿ ಧನು ಮುರಿದವನಿಜೇಶ8ಶುಭಕಪೀಶಗೆ ಅಭಯವರವಿತ್ತು ಕೈಪಿಡಿದೆಶುಭಕಂಠನಂಜಿಕೆಯ ಹನುಮ ಹೇಳಲು ಕಳೆದೆ 9ಶರಣು ಹೊಕ್ಕಿರೆ ವಿಭೀಷಣಗರಸುತನ ಕೊಟ್ಟೆಶರದಿ ರಾವಣನರಿದು ಸುರರ ಸಂಕಟ ಹರಿದೆ 10ಅನುಜನಗ್ನಿಗೆÉ ಧುಮುಕಲವಧಿ ಮೀರದೆ ಪೊರೆದೆಅನಿಮಿಷರ ನಿಕರಕತಿ ಆಹ್ಲಾದ ಬೆಳೆಯಿಸಿದೆ 11ಉರಿನುಂಗಿ ಗಿರಿನೆಗಹಿ ವ್ರಜವ ಪಾಲನೆ ಮಾಡ್ಡೆಉರಗನೆಳೆತಂದವನ ರಾಣಿಯರ ಸ್ತುತಿಗೊಲಿದೆ 12ಕ್ರತುನಾರಿಯರನ್ನ ಸವಿದುಂಡು ಸುಖವಿತ್ತೆಕ್ರತುಭೋಕ್ತø ಕ್ರತುಗಾತ್ರ ಕ್ರತುಪಾಲ ಕ್ರತುಶೀಲ13ಗೋಪ ಸ್ತ್ರೀಯರ ಕುಚದಿ ನ್ಯಸ್ತ ಚರಣಾಬ್ಜಯುಗಗೋಪೀ ಜನಜಾರನವನೀತದಧಿಚೋರ14ವಂಶಗಾಯನ ಪ್ರಿಯ ವಿಧುಕುಲೋದ್ಭವ ಕೃಷ್ಣವಂಶವರ್ಧಕಸುಜನವಂಶಮರ್ದಕ ಕುಜನ15ಅಕ್ರೂರವಂದ್ಯಕಂಸಾರಿಕುಬ್ಜಾರಮಣಆಕ್ರಂದಿಸಿದ ತಂದೆ ತಾಯಿಯರ ಭಯವಳಿದೆ 16ಅದಿತಿ ಕುಂಡಲದಾತ ಭಗದತ್ತವರದನೆಅಧಿಪತಿಗಳಧಿಪತಿಯೆ ಭೈಷ್ಮಿ ಸತ್ಯಾರಮಣ 17ಶಂಭುವಂದಿತಪಾದ ಸಾಂದೀಪೋದ್ಧವ ಪ್ರಿಯಶಂಬರಾರಿಯ ಜನಕ ಯಜÕಪೂಜಾಗ್ರಣಿಯೆ 18ಪಾಂಡವರ ಪ್ರಾಣ ದ್ರೌಪದಿ ಮಾನರಕ್ಷಕನೆಪೌಂಡ್ರಕಶೃಗಾಲಕೌರವ ಭೂಮಿ ಭಾರಹರ19ಅಭಿಮನ್ಯುನಾತ್ಮಜನ ಬಸುರೊಳಗೆ ಸಲಹಿದೆಯೊಅಭಯದಲಿ ಪಾಂಡವರ ಸಂತತಿಯ ಬೆಳೆಸಿದೆಯೊ 20ಗರುಡ ಗಂಧರ್ವಕಿನ್ನರಗೀತ ಸಂಪ್ರೀತಗರುವೆ ಲಕುಮಿಯ ಕೂಡ ಕ್ರೀಡಾದ್ರಿಯಲ್ಲಿರುವೆ 21ಶಂಖ ಚಕ್ರ ಗದಾಬ್ಜ ಶ್ರೀವತ್ಸ ಶೋಭಿತನೆಸಂಖ್ಯೆರಹಿತಾಭರಣ ಭೂಷಣಾವ್ಯಾಕೃತನೆ 22ಮೀನ ಕಶ್ಯಪ ಪೋತ್ರಿ ನೃಹರಿ ವಾಮನ ಭಾರ್ಗ್ವಮಾನವಪ ಕೃಷ್ಣಬುದ್ಧಕಲ್ಕಿ ಕಪಿಲಾತ್ರೇಯ23ಸ್ವಾಮಿ ತೀರ್ಥಾಂಬು ಅಂತರ್ಗಂಗಾಭಿಷಿಕ್ತಸ್ವಾಮಿ ಭೂವರಾಹ ವೈಕುಂಠನಾಥ ವಿಶ್ವೇಶ 24ಷಟ್ಕೋಟಿ ತೀರ್ಥಯುತಚರಣ ಶ್ರೀಭೂರಮಣಷಟ್ಕಮಲನಿಲಯ ಚಿನ್ಮಯ ಚಿದ್ಗುಣಾರ್ಣವನೆ 25ಭಕ್ತಾಭಿಮಾನಿ ಭವದೂರ ಭಕ್ತರ ಪ್ರಭುವೆಭಕ್ತವತ್ಸಲ ಕೃಪಾಂಬುಧಿಪರಾತ್ಪರಕೃಷ್ಣ26ವಸುಧೆವೈಕುಂಠ ಮಂದಿರವಾಸ ಶ್ರೀನಿವಾಸವಸುಪ್ರೀತ ವಸುಕರ್ತ ವಸುದಾತ ವಸುಪೂರ್ಣ 27ಆದಿನಾಥÀಪ್ರಮೇಯಾದಿ ಪುರುಷೋತ್ತಮನೆಆದಿಮಧ್ಯಾಂತ ರಹಿತಾದ್ಯಮೂರುತಿ ವಿಷ್ಣು 28ಬದುಕಿಪ್ಯಾದರೆ ನಿನ್ನ ಹೊಗಳಿಕೆಲಿ ಬದುಕಿಸೈಬುಧರ ಸಂಗತಿ ಕೊಟ್ಟು ಮನ್ನಿಸೆನ್ನನು ತಂದೆ 29ಕಿವಿಯಲ್ಲಿ ಮುಖದಲ್ಲಿ ನಾಮಾಮೃತವÀ ತುಂಬುಕವಲಾಗದೆ ಮನೋಳಿ ಮಿಗೆ ಪದಾಬ್ಜವ ತೋರು 30ಭವಭವದಿ ತೊಳತೊಳಲಿ ಬಳಬಳಲಿ ಬಲುದಣಿದೆಭವವಿರಿಂಚ್ಯಾದಿ ಕರಿಗಭಯದನೆ ನೀ ಸಲಹು31ನೀ ತಾಯಿ ನೀ ತಂದೆ ನೀ ಬಂಧು ನೀ ಬಳಗನೀತಿಗಳನರಿಯೆ ನಿನ್ನಯ ನಾಮವೆ ಗತಿಯು 32ತನು ನೆಚ್ಚಿಕಿಲ್ಲ ಚಿತ್ತದ ಗತಿಯು ನೀಟಿಲ್ಲತನಯತರುಣಿ ಕೊನೆಯ ಸಂಗತಿಗೆ ಆರಿಲ್ಲ33ದೋಷಗಳನರಸದೆನ್ನನು ಸಾಕು ಸಾಕಯ್ಯದಾಸಪಾಲಕ ದೇವ ಡಿಂಗರರ ಸಂಜೀವ 34ನಿನ್ನ ಮೂರುತಿ ನೋಡಿ ನೋಡಿ ನೋಡಿ ನೋಡಿನಿನ್ನ ಬಿಂಬವನೆಂದು ಕಂಡು ಕೊಂಡಾಡುವೆನೊ 35ನಿನ್ನ ಮೈ ಬೆಮರ್ಹೊಳೆಯಲ್ಲೆನ್ನ ಮುಳುಗಿಸಿನಿನ್ನವ ನಾ ನಿನ್ನವರ ಕೈಲಿ ಕೊಡು ಗಡಗಡ 36ವಾರಿಯಲಿ ಸ್ಥಳದಲ್ಲಿ ಅಡವಿಲೆಲ್ಲೆಲ್ಲಿ ಕಾಯೊವಾರಾಹ ವಾಮನ ನೃಸಿಂಹ ಕೇಶವ ಸ್ವಾಮಿ 37ಸತ್ಕುಲೋದ್ಭವನಾದೆ ಸನ್ಮಾರ್ಗರಿಯಲಿಲ್ಲಸತ್ಕರ್ಮಗಳಿಗೆ ಬಹಿಷ್ಕøತನಾಗಿ ಬಾಳುತಿಹೆ 38ಒಂದು ಜಾವದ ತಪ್ಪನೆಂದೆಂದಿಗುಣಲಾರೆವಂದಿಸುವೆ ಸಾಷ್ಟಾಂಗತ್ರಾಹಿತ್ರಾಹಿಪಾಹಿತ್ರಾಹಿ39ಮಧ್ವೇಶ ಮಧ್ವಪ್ರಿಯ ಮಧ್ವಮತ ಪ್ರತಿಪಾಲಮಧ್ವಗುರು ಸ್ತುತ್ಯ ಮಧ್ವಾರ್ಚಿತ ಪದಾಬ್ಜಹರಿ40ಏನರಿಯೆನೇನರಿಯೆ ನೀನೆ ನೀಗೆಲೆಲೆಎನ್ನಘವ್ರಜ ಪ್ರಸನ್ನವೆಂಕಟ ಕೃಷ್ಣ 41
--------------
ಪ್ರಸನ್ನವೆಂಕಟದಾಸರು