ಒಟ್ಟು 1033 ಕಡೆಗಳಲ್ಲಿ , 92 ದಾಸರು , 864 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಕುಮಾಡಿಸಭವ ಕಾಕುಜನರ ಸಂಗವ ಬೇಕು ನಿಮ್ಮ ಚರಣಧ್ಯಾನ ಲೋಕದವರ ಗೊಡವಿನ್ನೊಲ್ಲೆ ಪ ಖ್ಯಾತಿವಂತರೆಂದು ಬರಿದೆ ಮಾತಿನಿಂದ ಪೇಳುತಿನಿತು ನೀತಿಮಾರ್ಗವರಿಯಧಮ ಜಾತೀಹೀನರ ಜತೆ ಜನ್ಮಕೆ 1 ಕೆಟ್ಟಗುಣದ ರಾಶಿ ಮೊಟ್ಟೆ ಹೊಟ್ಟೆಯೊಳಗೆ ಇಟ್ಟುಕೊಂಡು ಶ್ರೇಷ್ಠರಂತೆ ನಟಿಸಿ ಪರರಿಗರಿಷ್ಟವರಿಪದುಷ್ಟರ ಗೋಷ್ಠಿ 2 ನಿತ್ತು ಕಾಯೋ ಕರುಣದೆನ್ನ ಮುಕ್ತಿದಾತೆನ್ನಯ್ಯ ರಾಮ 3
--------------
ರಾಮದಾಸರು
ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ಪ ಮೇದಿನಿ ಅ.ಪ ಎಂದಿಗೆ ನಂದಿ ನಾನೊಂದುವೆನೆಂದು ನೀ ಸಂದೇಹ ಸಂವರಿಪನೊಲಿದು ತಾ 1 ತಾನಾದರೆ ತನ್ನದೇನು ಜಾಣ ತಾ ನೋಡುತಂ ಪ್ರಾಣನಾಥ ನೀನೆಂದಾಡುತಂ ಪಾಡುತ 2 ವಿಶ್ವದೊಳು ರಾಜಿಪ ಸಸ್ವರೂಪಾ ಗುರು ಅಸ್ಮದಾರ್ಯ ತುಲಸಿರಾಮದಾಸನಿತ್ತ 3
--------------
ಚನ್ನಪಟ್ಟಣದ ಅಹೋಬಲದಾಸರು
ಸಾಮಜಾದ್ರಿ ನಿವಾಸ | ಮಮ ಹೃದಯ | ಸದ್ದಾಮದಲಿ ಆವಾಸ |ಸೌಮನಸ್ಯವ ಕಾಮಿಸುವೆ ಮನಕೀಶ | ನಾ ನಿಮ್ಮ ದಾಸಾ ಪ ಶ್ರೀ ಮನೋಹರನಂಘ್ರಿ ಕಮಲವ | ಯಾಮ ಯಾಮಕೆ ಭಜಿಸಿ ಹಿಗ್ಗುವ ಆಮಹಾತ್ಮರ ಚರಣ ರಜವನು | ಕಾಮಿಸುವೆ ಕರುಣಾಳು ಗುರುವರ ಅ.ಪ. ಘಾಸಿ ಪಡುತಲಿ ಬಂದ | ಪಾಪಾತ್ಮಯೆನ್ನಯಕ್ಲೇಶ ಹರಿಸಲು ಛಂದ | ಅಂಕಿತವನುಪದೇಷಿಸಿದೆ ನೀ ನಲವಿಂದ | ಕರುಣಾಳು ನಿನ್ನಯದಾಸ ಜನಗಳ ವೃಂದ | ಸೇವೆ ಕೊಡು ಆನಂದ || ವಿಷಯ ದಾಸೆಯ ಹರಿಸೊ ಗುರುವರ | ಬಿಸುರುಹಾಂಬಕನಂಘ್ರಿ ಕಮಲವ ಒಸೆದು ಸ್ಮರಿಸುವ ಮತಿಯನಿತ್ತು | ಎಸೆವ ಹರಿಯಪರೋಕ್ಷ ಪಾಲಿಸೊ 1 ವತ್ಸರ ಸುವಿಕ್ರಮವರ ನವಮಿ ಮಧ್ಯದಿನಂದೂ | ನಿಶ್ಚಯಿಸಿ ಮನದಲಿನರನಟನೆ ಉಪರಮಿಪೆನೆಂದೂ | ತನುವ ತ್ಯಜಿಸಿದೆ ಅಂದೂ ||ಸಾರ ಭಕುತರು ಸೇವೆ ಗೈಯಲು | ಕರಿಗಿರೀಯಲಿ ಒಂದು ಅಂಶದಿವರವ ಪಾಲಿಪುದಕ್ಕೆ ನೆಲೆಸಿದೆ | ಧೀರ ಕರುಣಾಪಾರ ಗುರುವೇ 2 ಚಾರು ಚರಣವ ತೋರು ಗುರುವೇ 3
--------------
ಗುರುಗೋವಿಂದವಿಠಲರು
ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸಿರಿ ಮನುಜಕೇಸರಿ ಧರಣಿ ಸುಮನಸಗೇಯ | ಮೊರೆಹೊಕ್ಕೆ ನಿನ್ನನು ತರಣಿ ಸನ್ನಿಭಗಾತ್ರ | ಕೀರಾಬ್ಧಿಶಯ್ಯ ಪ ಸರಸಿಜಾನನ ನಜಕ ತವಪದ ಮರೆದ ಪಾಮರನಾಗಿ ನಾ ಭವ ಶರಧಿಯೊಳು ಬಿದ್ದು ಪರಿದು ಪೋಗುವೆ ಎರಗರಿಪುಧ್ವಜನಾಗಿ ನೀ ಬಂದು ಸೂನು | ಸರ್ವೇಶ ರಾಘವ ಭಜಕಜನ ಸುರಧೇನು | ಸ್ವರತ ಸುಖಮಯ ಸುಜನ ವಾರಿಜ ಭಾನು ಖಳವನ ಕೃಶಾನು ತ್ರಿಜಗ ಪೋಷಕ ಪರಮ ಸುಲಭ ನೀ ನಿಜದಯದಿ ಹರಿಮದವ ಖಂಡ್ರಿಸಿ ವೃಜದ ತುರುಗಳ ಕಾಯ್ದ ಸಜನುತ ದ್ವಿಜಪ ಸುತೆ ಪತಿಧ್ವಜನ ಸುತನೆ 1 ಪತಿತ ಪಾವನ ರಂಗ | ಸಂತತದಿ ನಿನ್ನನು ಸ್ತುತಿಪ ಸುಜನರ ಸಂಗ | ನೀನಿತ್ತು ಪಾಲಿಸು ದಿಜ ತತಿ ಮಾತಂಕ ಮರಿಗಳಿಗೆ ಸಿಂಗ ಸಿತ ತುರಂಗನ ರಥದಿ ಶೋಭಿಪ ಅತುಳ ಮಹಿಮನ ಜನನಿ ಅನುಜನಿಗೆ ಹಿತದಿ ಭ್ರಾತದಿ ಭೀತಿ ಬಿಡಿಸಿದ ಶೃತಿಗೆ ನಿಲುಲದ ಚ್ಯುತ ವಿದೂರನೆ 2 ಸಾಮಗಾನ ವಿಲೋಲ ಸುರರಾಜ ಪೂಜಿತ ಕಾಲ | ಕರಿದನುಜ ಹರನುತ ಸ್ವಾಮಿ ಶ್ರೀವನಮಾಲಧರ ಸುಗುಣಶೀಲ ಕಾಮಪಿತ ಹಿಮಧಾಮ ವದನ ಸು ಧಾಮಸಖ ಸುರಸ್ತೋಮ ವಂದಿತ ಯಾಮಿನೀ ಚರವೈರಿ ವಾಮನ ಶ್ರೀಮನೋಹರ ಶಾಮಸುಂದರ 3
--------------
ಶಾಮಸುಂದರ ವಿಠಲ
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುತೀರ್ಥರು ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ. ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1 ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2 ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3
--------------
ತಂದೆವರದಗೋಪಾಲವಿಠಲರು
ಸುಮನಪ್ರಿಯ ಗೋಪ ವಿಠಲ | ಕಾಪಾಡೊ ಇವಳಾ ಪ ಗೋಪಿ ವೃಂದ | ಆಲ್ಲಾದಕರನೇ ಅ.ಪ. ಪತಿ ಹರಿಯ | ವ್ಯಕುತ ಲೀಲಾತ್ಮ 1 ನೀಕೂಗಿದಂಕಿತವ | ನಾಕೊಟ್ಟು ಹರಿಸಿಹೆನೊಶ್ರೀಕಾಂತ ಪತಿಕರಿಸಿ | ಕಾಪಾಡೊ ಇವಳಾಬೇಕಾದಭಿಷ್ಟಗಳ | ಸಾಕೆನಿಸಿ ನೀಡುವುದುಕಾಕುಮತಿಗಳ ಕಳೆಯೊ | ಶ್ರೀ ಕರಾರ್ಚಿತನೇ 2 ಪತಿ ಸುಪ್ರೀಯಶ್ರದ್ಧೆ ಭಕುತಿಯನಿತ್ತು | ಉದ್ಧರಿಸೊ ಇವಳಾ 3 ಕಲಿಯುಗದಿ ಹರಿನಾಮ | ಒಲಿಸೆ ಭಕುತೀಯಿಂದಕಳೆವುದು ಭವರೋಗ | ವೆಂಬ ಸನ್ಮತಿಯೂನಿಲುಕಲೀಕೆಯ ಮನಕೆ | ಅಕಳಂಕ ಸುಚರಿತ್ರವಿಖನ ಸಾಂಡದ ಪತಿಯೆ | ಗೋಕುಲ ಸುದೀಪ್ತಾ 4 ಭಾವಜ್ಞ ನೀನಿರುವೆಒವಿನಾ ಪೇಳಲ್ಕೆ | ಆವನೊ ನಾನುನೀವೊಲಿದು ಇವಳಿಗೆ | ಕೈಪಿಡಿದು ಸಲಹುವುದುದೇವ ಬಿನ್ನವಿಸೆ | ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸುಮ್ಮನಿಹುದು ನ್ಯಾಯವೇ ಪ ದಮ್ಮಯ್ಯ ಪೊರೆಯೆನಲು ಒಮ್ಮೆಯಾದರೂ ಎನ್ನ ದುಮ್ಮಾನವೇನೆಂದು ನಮ್ಮಯ್ಯ ಕೇಳಲಿಲ್ಲ ಅ.ಪ ಸಣ್ಣ ಬಾಲಕನೊಬ್ಬ ಕಣ್ಣೀರ ಸುರಿಸಲು ಪುಣ್ಯ ಲೋಕವನಿತ್ತಮ್ಮಾ ಕಣ್ಣುಕಾಣದೆ ಗೊಂಡಾರಣ್ಯಮಧ್ಯದಿ ನಾನು ಬಣ್ಣಿಸಿ ಕರೆದರೂ ಕಣ್ಣೆತ್ತಿ ನೋಡಲಿಲ್ಲವಮ್ಮಾ 1 ಪರಿದೋಡಿದನಮ್ಮ ನಮ್ಮಯ್ಶ ದುರಿತವಾರಿಧಿಯಲಿ ಕೊರಗುತಲಿಹ ಎನ್ನ ಅರಿತು ಅರಿಯದಂತೆ ಇರುವನಲ್ಲ ಇಂದಿರಮ್ಮ 2 ಮೃತಿಯ ವೇಳೆಯೊಳೊಬ್ಬ ಸುತನಕರೆಯಲಾಗ ಹಿತದಿ ಸೌಖ್ಯವನಿತ್ತನು [ಕೇಳಮ್ಮಾ] ಮಾಂಗಿರಿರಂಗ ಪತಿತಪಾವನಾಯೆಂದು ನುತಿಸಿ ಬೇಡಿದರೂ ಸಂಗತಿಯೇನೊ ಎನಲಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸೃಷ್ಟಿಯೊಳಗೆ ಶ್ರೀ ಕೃಷ್ಣಮೂರುತಿ ಇನ್ನೆಷ್ಟು ಸ್ತುತಿಸಲಿ ನಾನು ದೃಷ್ಟಿಯಿಂದಲಿ ನೋಡು ಮನಮುಟ್ಟಿ ಭಜಿಸುವೆನು ಸೃಷ್ಟ್ಯಾದಷ್ಟ ಕರ್ತಾ ವಿಠಲಗುಣಶೀಲ ಅಷ್ಟಯತಿಗಳಿಂದ ಇಷ್ಟದಿ ಪೂಜೆಗೊಂಡ ಮದವೋ ಅಟ್ಟಹಾಸದಿಂದಲಿ ಬೆಟ್ಟ ಬೆರಳಿನಿಂದಲಿನೆತ್ತಿದ ಮದವೊ ದಿಟ್ಟಮೂರುತಿ ನಮ್ಮ ಕಾಳೀಮರ್ಧನಕೃಷ್ಣ ಮನೋಭೀಷ್ಟೆಯ ಕೊಡೋ 1 ಇಂದಿರೇಶನೆ ನಿನ್ನ ಒಂದಿನವು ನಾನು ಗೋವಿಂದ ನಿನ್ನಯ ಪಾದಾರವಿಂದವ ಭಜಿಸಲಿಲ್ಲ ಆನಂದ ಮೂರುತಿ ನಿನಗಿಂತ ಸಮಾನ ಅನಿಮಿತ್ತ ಬಂಧುಗಳು ಯನಗಿಲ್ಲ ಎನ್ನಂಥ ಭಕುತರು ನಿನಗನಂತರರಿರುವರು ನಿನ್ನಂಥ ಕರುಣೆ ಇನ್ನಿಲ್ಲ ಜಗದೊಳು ಸರ್ಪಶಯನ ನಮ್ಮ ಕಾಳೀಮರ್ಧನಕೃಷ್ಣ ನಿರುತದಿ ವೊಲಿಯೇ 2 ಸುಂದರಿಯರ ಸೇರಿ ಆನಂದದಿಂದ ಕಳೆದ ಮದವೋ ಸೇವೆಗೊಂಬುವ ಮದವೋ ಸೋಳಸಾಸಿರ ಸುದತಿಯರೊಪ್ಪುವ ಮದವೊ ಮುರಳೀಧರ ನಮ್ಮ ಕಾಳೀಮರ್ಧನಕೃಷ್ಣ ಇಷ್ಟದಿ ಒಲಿಯೆ 3 ಪಾದ ಎಂದಿಗೆ ಲಭ್ಯವೊ ಕಂದನ ನುಡಿ ಕೇಳಿ ಆನಂದ ಪದವಿಯನಿತ್ತು ಮಾನವ ಕಾಯ್ದು ವಸುದೇವ ದೇವಕಿಯ ಬಂಧನವ ಬಿಡಿಸಿದಿ ಆನಂದದಿಂದಲಿ ಅಜಮಿಳಗೊಲಿದು ಮಡುವಿನೊಳಗಿರಲು ಗಜರಾಜ ಮಡದಿಗೆ ಹೇಳದೆ ಗರುಡವಾಹನನಾಗಿ ಬಂದು ಮಕರಿಯನ್ನು ಕೊಂದ ಸಿಂಧುಶಯನ ನಮ್ಮ ಕಾಳೀಮರ್ಧನಕೃಷ್ಣ ಆಪತ್-ಬಂಧೋ 4 ಬಾಲಕತನದಲ್ಲಿ ಏನೇನು ಲೀಲೆಯ ಮಾಡಿದ್ಯೊ ಗೋಪಾಲಕೃಷ್ಣ ಮೂರುತಿ ಎಂದು ವರ್ಣಿಸಲೋ ನಿನ್ನ ಕೀರುತಿ ಗೋವುಗಳ ಕಾಯ್ದುಕೊಂಡು ಎಂದಿಗೆ ಬರುತಿ ನಿನಗೇಕೋ ಇಂಥಾ ಮದವು ಪಾರ್ಥಸಾರಥಿ ಕ್ಷೀರಸಾಗರದಲ್ಲಿ ಲಕ್ಷ್ಮೀ ಸಹಿತವಾಗಿ ಆಲದೆಲೆಯ ಮೇಲೆ ಮಲಗಿರುತ್ತೀ ಥರವಲ್ಲವೋ ನಿನಗಿಂಥ ಮದವು ಬ್ರಹ್ಮಾದ್ಯಮರ ಒಂದಿತ ಮದವು ಜಾರಚೋರ ನಮ್ಮ ಕಾಳೀಮರ್ಧನಕೃಷ್ಣ ಕರುಣಾಸಾಗರ 5
--------------
ಕಳಸದ ಸುಂದರಮ್ಮ
ಸೃಷ್ಟೀಶ ಕೃಪೆದೋರಿದ ಬಾಲನಮಾನನಷ್ಟವ ಜಾರಿಸಿದ ಪ ನ್ಯಾಯಕೆ ಪೋಪಕಾಲದಿ ಪುಟ್ಟಯಾಖ್ಯನ ಸ್ವಪ್ನದಲಿ ತಾಂ- ಬಿಟ್ಟು ಬನ್ನಿರಿಯೆನುತಪೇಳ್ದಾ ಅ.ಪ ಎಲ್ಲಾರ ನಿನ್ನೊಳಗೆ ಸೇರಿಸಿ ಮುಂದೆ- ಉಲ್ಲಾಸಕೊಡುವೆ ನಿನಗೆ ಕಲ್ಲಿನಂದದಿ ಮೌನಧರಿಸುತ- ಖುಲ್ಲಮನುಜರ ಸಂಗವರ್ಜಿಸಿ ನಿಲ್ಲಿಸು ಮನವನೆನುತಲಿ 1 ಗುರುತು ಕಾಣುವದೆಂದಿಗೆ ಪರಮ ತಿರುಮಂತ್ರಾರ್ಥ ಅಷ್ಟಾ- ಕ್ಷರಿಯ ಜಪತಪಧ್ಯಾನಮಾಡುವ ದೊರಯದೆಂದಿಗು ಕೀರ್ತಿ ಎನುತಲಿ 2 ಮತಧರ್ಮಜ್ಞಾನಿಗಳು ಪೇಳಿರುವಂತ ಮತಶಾಸ್ತ್ರವೀಕ್ಷಿಸದೆ ಸತತದೂಷಣೆಗೈದು ಸುಜನರ - ಕ್ಷಿತಿಯ ಭೋಗವನಂಬಿ ಗರ್ವದಿ ಹಿತವತಪ್ಪಿಸಿ ಕರವಪಿಡಿಯುತ 3 ಸ್ಥಿರವಲ್ಲಕಾಯವೆಂದು ಸಾತ್ವಿಕಶೃತಿಯೊ- ಳಿರುವ ಸತ್ಯ ನೋಡೆಂದು ನಿರುತಬೋಧಿಸಿ ಜನನಮರಣವ ತರಿದು ಎನ್ನನೆ ಯಜಿಸು ಯೆನುತಲಿ- ಹರಸಿ ಮೋಕ್ಷವನಿತ್ತ ಆರ್ಯನು 4 ಬಿಟ್ಟು ಸತಿಸುತರೆಲ್ಲರ ಎನ್ನೊಳುಮನವ ನಿಟ್ಟುನಂಬಿದಭಕ್ತರ ಬಿಟ್ಟುಕೊಡೆನಾನೆಂದು ಹೃದಯಾ- ಧಿಷ್ಟಿತನು ತಾನಾಗಿ ಅಭಯವ ಇಷ್ಟಶ್ರೀಗುರುರಂಗನೀಕ್ಷಿಸಿ 5
--------------
ರಂಗದಾಸರು