ಒಟ್ಟು 1130 ಕಡೆಗಳಲ್ಲಿ , 96 ದಾಸರು , 956 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಹಯಗ್ರೀವ ವಿಠಲ | ಮೋಹ ಕಳೆದಿವನಾ ಪ ಸಾಹಸಿಗಗಾಭೀಷ್ಟ | ದೋಹನನು ಆಗೋ ಅ.ಪ. ಮಾಣವಕ ಭಕ್ತಿಯಲಿ | ಮಾನ್ಯರನು ಸೇವಿಸುವಜ್ಞಾನವಂತನ ಮಾಡಿ | ಪ್ರಾಜ್ಞನೆಂದೆನಿಸೋ ಜ್ಞಾನ ನಿಧಿ ನಿನ್ನೊಲಿಮೆ | ಕಾಣದಲೆ ಪರಿತಪಿಸಿಜ್ಞಾನದಂಕುರಕಾಗಿ | ಬಿನೈಸುತಿಹೆನೋ 1 ಸುಜನ ಸಂಗದಿ ಹರಿಯ | ಭಜನೆಯೊದಗಲಿ ಇವಗೆಋಜು ವಾದಿರಾಜರಲಿ | ನಿಜ ಭಕ್ತಿ ಬರಲೀಗಜ ವರದನಂಘ್ರಿಗಳ | ನಿಜ ಮನದಿ ಕಾಂಬಂಥಯಜನ ಭಜನೆಗಳೊದಗಿ | ಪ್ರಜೆಗಳಲಿ ಮೆರೆಸೋ 2 ಭೃತ್ಯ ವತ್ಸಲನೇ 3 ನಾನು ನನ್ನದು ಎಂಬ | ಹೀನ ಭಾವವ ಕಳೆದುಏನೇನು ತಾ ಮಾಳ್ಪ | ಮಾನಸಾದಿಗಳಾಪ್ರಾಣಾಂತರಾತ್ಮಕಗೆ | ದಾನ ಮಾಳ್ಪಂತೆಸಗಿಜ್ಞಾನಾಯು ರೂಪಕನ | ಮಾನ್ಯಮತ ತಿಳಿಸೋ 4 ಕೈವಲ್ಯ ಪ್ರದನೇತಾವಕನ ಸಲಹೆಂಬ | ಆವ ಭಿನ್ನಪ ಸಲಿಸೆಓವಿ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಕರಾರ್ಚಿತ ವಿಠಲ | ಸಾಕ ಬೇಕಿವಳಾ ಪ ವಾಕು ಮನ್ನಿಸುತಾ ಅ.ಪ. ಕಂಸಾರಿ ತವಪಾದಪಾಂಸು ಸೇವಾ ಸಕ್ತೆ | ಸಂಶಯ ನಿರಹಿತಾಅಂಶ ಆವೇಶ ಅವ | ತಾರಗಳ ತಿಳಿಸುತಲಿಶಂಸನದಿ ತವನಾಮ | ಸಂಪ್ರೀತನಾಗೊ 1 ದುಷ್ಕರ್ಮಗಳ ಭಾದೆ | ದೂರಾಗುವಂತೆಸಗೊನಿಷ್ಕಾಮ ಕರ್ಮಕ್ಕೆ | ಮಾರ್ಗವನೆ ತೊರೋ |ಶುಷ್ಕ ಆಚಾರಗಳ | ತ್ಯಜಿಸುತ್ತ ತವನಾಮಅಕ್ಕರದಿ ಭಜಿಪಂಥ | ಚೊಕ್ಕಮನವೀಯೊ 2 ಶರ್ವವಂದ್ಯನೆ ದೇವ | ತವನಾಮ ಸಂಸ್ಕøತಿಯಸರ್ವದಾ ಸರ್ವತ್ರ | ಇವಳಿಗೊದಗಿಸುತಾಭವವನದಿ ಉತ್ತರಿಸೊ | ಭವರೋಗ ಭೇಷಜನೆದರ್ವಿಜೀವಿಯ ಕಾಯೊ | ಪವನಂತರಾತ್ಮ 3 ಸೃಷ್ಟಾದಿಕರ್ತನೇ | ಸುಗುಣಮೂರುತಿ ದೇವಕಷ್ಟಂಗಳ ಪರಿಹರಿಸಿ | ಕಾಪಾಡೊ ಹರಿಯೇಕೃಷ್ಣಮೂರುತಿ ದೇವ | ಕಾರುಣ್ಯ ಸಾಗರನೆಸುಷ್ಠಮನ ನಿಲಿಸೊ ತವ | ಚರಣದೊಳು ಹರಿಯೆ 4 ಸೂಚಿಸಲು ತೈಜಸನು | ಯೋಚನೆಯ ಕೈಕೊಂಡುವಾಚಿಸಿಹೆ ಅಂಕಿತದಿ | ದಾಸ ಸದ್ವೀಕ್ಷಾ |ಮೋಚ ಕೇಚ್ಛೆಯ ಮಾಡಿ | ಕೈಪಿಡಿಯೊ ಈಕೆಯನುಖೇಚರಾಂತಕ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಕೃಷ್ಣ ಹರಿ ವಿಠಲ | ಕಾಪಾಡೊ ಇವಳಾ ಪ ಹೇ ಕೃಪಾಕರ ಮೂರ್ತೆ | ಪ್ರಾರ್ಥಿಸುವೆ ಇದನಾ ಅ.ಪ. ಪತಿತ ಪಾವನರಂಗ | ಮತಿಮತಾಂವರರಂಘ್ರಿಶತಪತ್ರ ಸೇವೆಗಳ | ಸತತ ದೊರಕಿಸುತಾಸತತ ತವ ಸ್ಮರಣೆ ಸುಖ | ರತಿ ಪಾಲಿಸಿವಳೀಗೆಗತಿಗೋತ್ರ ನೀನೆಂದು | ಪ್ರಾರ್ಥಿಸುವೆ ಹರಿಯೇ 1 ಪತಿಸೇವೆ ದೊರಕಿಸುತ | ಕನನಗಭಯದನಾಗಿಪಥತೋರೋ ಸದ್ಗತಿಗೆ | ಕೃತಿರಮಣ ದೇವಾಹಿತವಹಿತ ದ್ವಂದ್ವಗಳ | ಸಮತೆಯಲಿ ಕಾಂಬಂಥಮತಿಯ ನೀ ಕರುಣಿಸುತ | ಕಾಪಾಡೊ ಹರಿಯೇ 2 ಪವನ ಮತ ಸುಜ್ಞಾನ | ದ್ರುವ ವರದ ಭಕ್ತಿಯನುದಿವಸ ದಿವಸದಿ ಕೊಟ್ಟೆ | ಉದ್ದರಿಸೊ ಇವಳಾಪವನಂತರಾತ್ಮ ಗುರು | ಗೋವಿಂದ ವಿಠಲನೆಇವಳ ಕೈಯನೆ ಪಿಡಿಯೆ | ಭಿನ್ನವಿಪೆ ಹರಿಯೇ 3
--------------
ಗುರುಗೋವಿಂದವಿಠಲರು
ಶ್ರೀಕೇಶವ ನಾಮವ ಭಜಿಸುವವರಿಗೆ ಪ ಬೇಕಾದವರೀ ವ್ರತವನಾಚರಿಸೆ ಆ ಕಾಲಾಂತಗೆ ಅಗಣಿತವಾಗಿಹುದು1 ಭಕ್ತನು ರುಕ್ಮಾಂಗದ ಮಹರಾಯನೂ ಮುಕ್ತಿಗೆ ಮಾಡಿದ ಶುಭಕರದಿನವಿದು 2 ಸುಜನರ ಗೋಷ್ಠಿಯೊಳ್ ರಾತ್ರಿಯೊಳಾ ಭುಜಗ ಶಯನನಂ ಭಜಿಸಲ್ಕೂಡಿದ 3 ಕಲಿಯೋಳು ಕಾಣುವ ಅಸ್ಮದ್ದೇಶಿಕ ರೊಲುಮೆಯ ತುಳಶೀ ರಾಮನು ತೋರಿದ 4
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀಗುರುವಿಟ್ಟಂತಿರಿರೋ ವ್ಯರ್ಥಸ್ಯ ಭ್ರಮೆಗೊಳ್ಳಬೇಡೀ ಪ ಕೊಟ್ಟರೂಟವ ಮಾಡಿ ಕೊಡದಿದ್ದರವನ ಪಾಡಿ ಸಿಟ್ಟಾಗಿ ಶಿವನ ಬೈಬೇಡೀ 1 ಸಂತೆಯ ಕೂಟವಿದು ಸಟೆಯ ಸಂಸಾರವಿದು ಅಂತರಾತ್ಮನ ಧ್ಯಾನಿಸುವನೇ ಸಾಧು 2 ಯಾರಿಗೆ ಯಾರಿಲ್ಲಾ ನರದೇಹ ಸ್ಥಿರವಲ್ಲಾ ವಸ್ತು ಮೀರಿದ ಬಳಿಕ ಇರಲಿಲ್ಲಾ 3 ಒಂದೇ ಜನ್ಮದ ನಂಟು ಸುಖದುಃಖಕ್ಕೋಂದೇ ಗಂಟು ಸಂದೇಹವಿಲ್ಲ ಕೊಟ್ಟ ಋಣ ಉಂಟು 4 ವರಮಂಗೀಶಾತ್ಮಾರಾಮಾ ಇರಿಸಿದಂತಿರುವ ನೇಮಾ ಗುರು ವಿಮಲಾನಂದ ಸುಖಧಾಮಾ 5
--------------
ಭಟಕಳ ಅಪ್ಪಯ್ಯ
ಶ್ರೀಗೋಪಾಲ ಕೃಷ್ಣಾತ್ಮಕ ಶ್ರೀರಾಮ ಭಜನೆ ರಾಮ ರಾಮ ಜಯರಾಮ ಪರಾತ್ಪರ | ನೌಮಿ ಪದಾಂಬುಜ ಶ್ರೀರಾಮಸೋಮ ಕುಲೋದ್ಭವ ಭೂಮ ಗುಣಾರ್ಣವ | ಕಾಮ ಪಿತನೆ ಶ್ರೀಕೃಷ್ಣ 1 ಖೂಳರ ಬಾಧೆಗೆ ಸುಜನರು ಮೊರೆಯಿಡೆ | ಪಾಲುಂಬುಧಿ ಶಯ ಶ್ರೀರಾಮಪಾಲಿಪೆನೆಂದ್ವರ ಪಾಲಿಸಿದನು | ಪಾಲಾಂಬುಧಿಶಯ ಶ್ರೀಕೃಷ್ಣ 2 ದಶಮುಖ ದೈತ್ಯನು ಲೋಕವ ಬಾಧಿಸೆ | ದಶರಥಗುದಿಸಿದ ಶ್ರೀರಾಮವಸುಧೆಯ ಭಾರವ ನೀಗುವೆನೆಂ | ದ್ವಸುದೇವ ಸುತನಾದ ಶ್ರೀಕೃಷ್ಣ 3 ಅನುಜರು ಲಕ್ಷ್ಮಣ ಭರತ ಶತೃಘ್ನರ | ಅನುಮೋದಿಸುತಲಿ ಶ್ರೀರಾಮಅನುಜನು ತಾ ಬಲರಾಮನಿಗಾಗುತ | ಅನುಜೆಯಳೊಂದಿಗೆ ಶ್ರೀಕೃಷ್ಣ4 ಶಿಶುತನ ಲೀಲೆಯ ದಶರಥಗೇ | ಕೌಸಲ್ಯಗೆ ತೋರಿದ ಶ್ರೀರಾಮಶಿಶುತನ ಲೀಲೆ ಯಶೋದೆಗೆ ನಂದೆಗೆ | ಸಂತೋಷವು ಶ್ರೀಕೃಷ್ಣ 5 ಯಾಗವ ರಕ್ಷಿಸೆ ಕರೆದೊಯ್ದನು | ಆ ಗಾಧಿಜ ನಿನ್ನನು ಶ್ರೀರಾಮಬಾಗುತ ಬಂದ ಕ್ರೂರನು ಧನು | ರ್ಯಾಗಕೆ ಒಯ್ದ ನಿನ್ನ ಶ್ರೀಕೃಷ್ಣ 6 ಮಾರ್ಗದಿ ಮಂತ್ರಗಳುಸುರಿದ ಮುನಿ | ನೈರರ್ಗಳದೀ ಶ್ರೀರಾಮಗರ್ಗಾಚಾರ್ಯನು ಭೋದಿಸೆ ಮಂತ್ರವ | ನಿರ್ಗಮಿಸಿದೆಯೋ ಶ್ರೀಕೃಷ್ಣ 7 ಪ್ರಥಮದಲಾಹುತಿ ಇತ್ತೆಯೊ ಕ್ರತುವಿಗೆ | ದಿತಿಜೆಯ ತಾಟಕಿ ಶ್ರೀರಾಮದಿತಿಜೆಯು ಪೂಥಣಿ ಅಸುವನು ಹೀರಿದೆ ಪ್ರಥಮದಿ | ಕವಳಕೆ ಶ್ರೀಕೃಷ್ಣ 8 ಅಸುರ ಸುಬಾಹುವನಳಿಯುತಲಬ್ದಗೆ | ಎಸೆದೆ ಮಾರೀಚನ ಶ್ರೀರಾಮ |ಉಸಿರನು ಹೀರಿದೆ ತೃಣವರ್ತನ ನೀ | ಅಸುರ ಶಕಟನ ಅಳಿದೆಯೊ ಶ್ರೀಕೃಷ್ಣ 9 ಚಾರು ಸುಂದರನೇ ಶ್ರೀರಾಮತೋರಿದೆ ವದನದಿ ವಿಶ್ವವ ಮಾತೆಗೆ | ಚಾರ್ವಾಂಗನೆ ಶ್ರೀಕೃಷ್ಣ 10 ವರಪದ ಶಿಲೆ ಸೋಕಲಹಲ್ಯಾ | ಶಾಪ ವಿಮೋಚನೆ ಶ್ರೀ ರಾಮವರಳೆಳೆಯುವಾಗ ಮಣಿಗ್ರೀವರ | ಶಾಪ ವಿಮೋಚನೆ ಶ್ರೀಕೃಷ್ಣ 11 ವ್ಯಾಕುಲರಾಗಿದ್ದಾ ಋಷಿಕುಲ ನಿ | ರಾಕುಲರಾದರು ಶ್ರೀರಾಮಗೋಕುಲವೂ ತವ ಲೀಲೆಗಳಿಂ ನಿ | ರಾಕುಲ ವಾಯಿತು ಶ್ರೀಕೃಷ್ಣ 12 ವೃಂದಾರಕ ವೃಂದವ ಸಲಹಿದನೂ | ಸುಂದರ ಮೂರುತಿ ಶ್ರೀರಾಮವೃಂದಾವನ ವೃಂದವ ಸಲಹೆ ದು | ರ್ವೃಂದವನಳಿದನು ಶ್ರೀಕೃಷ್ಣ 13 ಭಾಮಿನಿ ಸೀತೆಯ ಸ್ವಯಂವರ ನೇಮದಿ | ಪ್ರಾಣಿ ಗ್ರಹಣ ಶ್ರೀರಾಮಭೈಷ್ಮೀ ರುಕ್ಮಿಣಿ ಸ್ವಯಂವರ ನೇಮದಿ | ಪಾಣಿ ಗ್ರಹಣ ಶ್ರೀಕೃಷ್ಣ 14 ಭಾರ್ಗವನೂ ತಾ ನೊಂದೆಂಬುದ ನೈ | ರರ್ಗಳ ತೋರ್ದನು ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ |ಏಕ ಮೇವ ತಾ ಶ್ರೀಕೃಷ್ಣ 15 ಏಕಮೇವ ತಾನೇಕ ಪತ್ನಿತ್ವವ | ಲೋಕಕೆ ತೋರಿದ ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ | ಏಕಮೇವ ತಾ ಶ್ರೀಕೃಷ್ಣ 16 ರಾಜ್ಯವ ಬಿಟ್ಟನ ರಾಜ್ಯವ ಸಾರ್ದ ನಿ | ರ್ಲಜ್ಜರ ಸದೆಯಲು ಶ್ರೀರಾಮರಾಜ್ಯವ ಕಟ್ಟಿ ಸ್ವರಾಜ್ಯವ ಮಧುರೆಲಿ ನಿ | ರ್ಲಜ್ಜರ ಹನ ಶ್ರೀಕೃಷ್ಣ 17 ಭಂಜನ ಶ್ರೀಕೃಷ್ಣ 18 ದಂಡಕ ವನದಲಿ ಪುಂಡರ ದಂಡಿಸೆ | ದಂಡವ ಪಿಡಿದನು ಶ್ರೀರಾಮ |ಮಂಡೆಯ ಪಿಡಿದು ಕಂಸನ ಶಿರ | ಚೆಂಡಾಡಿದನು ಶ್ರೀಕೃಷ್ಣ 19 ಶಬರಿಯ ಭಕ್ತಿಗೆ ಎಂಜಲ ಮೆ | ದ್ದಬುಜಾಂಡೋದರ ಶ್ರೀರಾಮ |ಕುಬುಜೆಯ ಭಕ್ತಿಗೆ ವಕ್ರವ ತಿದ್ದಿದ | ಅಬುಜಾಂಡೋದರ ಶ್ರೀಕೃಷ್ಣ 20 ಕಾಯ ಛೇದ ಉ | ಪಾಯದ ಗೈದೆಯೊ ಶ್ರೀಕೃಷ್ಣ 21 ವಾಹನ ಗೈಯುತ | ಮೋಕ್ಷವನಿತ್ತನು ಶ್ರೀಕೃಷ್ಣ 22 ಸೀತೆಯ ಕಳಕೊಂಡ್ವೆಥೆಯನೆ ನಟಸಿದ | ಪೃಥ್ವೀಪತಿಯು ಶ್ರೀರಾಮಕೌತುಕ ತೋರಿದ ನಾರದಗೇ ಬಹು | ಪತ್ನಿಯರಲ್ಲಿ ಶ್ರೀಕೃಷ್ಣ 23 ಮಾಯಾ | ವೈಭವ ಪೊಗಳಿರಿ ಶ್ರೀಕೃಷ್ಣ 24 ಜೋಡಿಸಿ ಬಹು ಸೈನ್ಯವ ಹೂಡಿದ | ರಾವಣ ಸಂಗರ ಶ್ರೀರಾಮಜೋಡಿಸಿ ಬಹು ಸೈನ್ಯವ ಜರೆ ಜನು | ಹೂಡಿದ ಯುದ್ಧವ ಶ್ರೀಕೃಷ್ಣ 25 ಮುರ ನಬಕರು ಮಡಿದರು | ದೇವ ನೀ ಬಾಣವ ಬಿಡೆ ಶ್ರೀಕೃಷ್ಣ 26 ಸೀತೆಯನಗ್ನಿ ನಿವೇಶವ ಗೈಸುತ | ಪೂತಳು ಎನಿಸಿದ ಶ್ರೀರಾಮ |ಕೌತುಕಳು ವೇದ್ವತಿಯಳ ನೀ | ನಾಂತೆಯೊ ಶ್ರೀ ವೆಂಕಟ ಕೃಷ ್ಣ 27 ಪ್ರಥಮಾಂಗನು ಮಾರುತನಿಂ | ಪೃಥ್ವೀ ಭಾರವನಿಳುಹಿದೆ ರಾಮ |ಪ್ರಥಮಾಂಗನು ಭೀಮನಿಂ | ಪೃಥ್ವೀ ಭಾರವನಿಳುಹಿದೆ ಕೃಷ್ಣ 28 ಭರತನಿಂ ವಾರ್ತೆಯ ಕಳುಹಿ | ಭರತನ ಉಳುಹಿದೆ ಶ್ರೀರಾಮ |ಅರದಿ ರವಿ ಮರೆ ಮೌಡುತ ನೀ | ನರನನು ಉಳುಹಿದೆ ಶ್ರೀಕೃಷ್ಣ 29 ಸೀತೆಯ ಸಹ ಪುರಿ ಕೋಸಲೆಗೆ ನೀ | ಮಾತುಳಹಲು ಬಂದೆ ಶ್ರೀರಾಮ |ನೀತರು ನರಕನಿಂದಾ ತರುಣಿಯರ | ಪ್ರೀತಿಲಿ ತಂದೆಯೊ ಶ್ರೀಕೃಷ್ಣ 30 ಪಟ್ಟವಗಟ್ಟಲಯೋಧ್ಯಾಪುರಿಲಿ | ಶಿಷ್ಟರ ಸರ್ವರ ಮಾಡಿದೆ ರಾಮಪಟ್ಟ ಭದ್ರ ಪ್ರಭು ದ್ವ್ಯಷ್ಟಸಾಸಿರ ಪ | ತ್ನ್ಯಷ್ಟರನಾಳಿದೆ ಶ್ರೀಕೃಷ್ಣ 31 ಕುಶಲವರ್ಹ ಸುಳೆಗಳಾ ಮಗೆ | ಅಸಮ ಸಾಹಸಿಗಳ್ ಶ್ರೀರಾಮ |ಶಿಶುಗಳ್ಕøಷ್ಣಗೆ ಗಣನೆಗಸಾಧ್ಯವು | ಅಸಮ ಸಾಹಸಿಗಳ್ ಶ್ರೀಕೃಷ್ಣ 32 ರಾಜ್ಯ ಸುಭೀಕ್ಷವು ಪತಿವ್ರತೆರೆಲ್ಲರು | ವ್ಯಾಜ್ಯ ರಹಿತ ಸ್ವರಾಜ್ಯದಿ ಶ್ರೀರಾಮಪರ್ಜನ್ಯವರ್ಷಿಸಿ ರಾಜ್ಯ ಸುಭಿಕ್ಷವು | ಆರ್ಜವರು ಪ್ರಜೆ ರಾಜ್ಯದಿ ಕೃಷ್ಣ 33 ಪಾಲನ ಪಾಲನ ಶ್ರೀಕೃಷ್ಣ 34 ಭಕ್ತಲಿ ರಾಮನ ಚರಿತೆಯ ಕೇಳಿ | ಮುಕ್ತಿದನು ಕೃಷ್ಣಾತ್ಮಕ ರಾಮಭಕ್ತಿಯಿಂದಾಲಿಸೆ ಭಾಗವತಾ ಕಥೆ | ಮುಕ್ತಿದನು ಗುರು ಗೋವಿಂದ ವಿಠಲ 35
--------------
ಗುರುಗೋವಿಂದವಿಠಲರು
ಶ್ರೀಜಗನ್ನಾಥದಾಸರಾಯರಸ್ತೋತ್ರ ದಾಸಾರ್ಯರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಏಸು ಜನ್ಮದ ದುಷ್ಕøತ ಪರಿಹರಿಪೆ ಕರುಣವನು ಪಡೆದು ಭೂಸುರಜನ್ಮವ ಸಾರ್ಥಕಗೊಳಿಪೆ ಕೃತಕೃತ್ಯನೆಂದೆನಿಪೆ ದೋಷರಾಶಿಗಳ ನಾಶಗೈಸಿ ವಿ ಶೇಷ ಮಹಿಮದಿಂಭೂಷಿತ ಜಗನ್ನಾಥ ಪ ಗಾಂಗೇಯ ವಸನಸಂಜಾತ ಪ್ರಲ್ಹಾದನಭ್ರಾತ ಮತಿಮಾನಸಹ್ಲಾದ ಸುನಾಮಕನೀತ ನರಹರಿಸಂಪ್ರೀತ ದ್ವಿತಿಯ ಶಲ್ಯಾಖ್ಯನೃಪತಿ ವಿಖ್ಯಾತ ಪುರಂದರ ಸುತನೆನಿಸಿದ ದಸ ದ್ಯತಿ ವಾದೇಶ್ವರನ್ಹಿತದಲಿ ವಲಿಸಿದ 1 ನರಸಂಬಂಧಿತ ಪ್ರಾಂತದ ಕ್ಷೇತ್ರದಲಿ ಬÁ್ಯಗವಟದ ಕರಣಿಕ ಜನಿಸಿದ ಬಾಲಾರ್ಕನು ವರದೇಂದ್ರ ಗುರುವರ್ಯರ ಕರುಣದಲಿ ಶಾಸ್ತ್ರಾಖ್ಯಾಗಸದಿ ವರವಸಂತ ಋತತÀರುಣಿ ಕಿರಣದೊಲ್ ಪರಮತಗಳ ಧಿ:ಕರಿಸಿ ಮೆರೆಯುತಿಹ 2 ಮೂರು ಭಾಷಾತ್ಮಕ ವಿದ್ಯಾಧ್ಯಾತ್ಮ ಸಂಪಾದಿಸಲೋಸುಗ ಮಾರಾರಿನಾಮಕದಾಮಹಾತ್ಮರಡಿಯುಗಳನು ಸೇವಿಸಿ ಮೂರು ರೂಪಾತ್ಮಕನ ವಿಙÁ್ಞನಾತ್ಮ ಅಂಶಗಳನು ತೋರಿಪ ಮೂರು ಮೂರು ಮೂರು ಮೂರು ಮೂರು ವಂದುಸಾರವ ಗೃಹಿಸಿದ ಸೂರಿವರಾಗ್ರÀಣಿ 3 ವರದೇಶ ಶಾಸ್ತ್ರಾತ್ಮಕಪಯದಿಂದ ಸಂಪೂರಿತವಾದ ಮರುತಮತ ತತ್ವತರಂಗಗಳಿಂದ ಸಂಶೋಭಿಸುತಿಹ ಶ್ರೀ ಭೂಸುರರನು ಪಾಲಿಪ ಹರಿಯಭಕುತಿಸುರಮಣಿ ತರುವನೀವಪಯ ಶರಧಿಯನಿಪ ಹರಿ 4 ಸೂರ್ಯ ಸದ್ಭುಕುತರೆನಿಸುವ ಶರಣಜನ ಹೃತ್ಸಂತಾಪಹಭಾರ್ಯ ಕಾಮಕ್ರೋಧಾದಿ ಅರಿಷಡ್ವರ್ಗವ ಭರ್ಜಿಪಹರಿ ಶೌರ್ಯ ಸತ್ಕವಿಕುಲವರ್ಯ ವರದೇಶ ವಿಠಲನ ಚರಣಸೇವಕರ ಸುರತರುವಿನ ತೆರಪೊರೆಯುಂತ ಮೆರೆಯುವ 5
--------------
ವರದೇಶವಿಠಲ
ಶ್ರೀದ ನರಹರಿ ವಿಠಲ | ಕಾದುಕೊ ಇವಳಾ ಪ ಸಾಧು ವಂದಿಯ ಹರಿಯೆ | ವೇದಗೋಚರನೆಅ.ಪ. ವಾಹನ ಹರಿಯ | ನಿರ್ಧಾರವನು ಸರಿಸಿಬದ್ದೆಳೆನಿಸಿಹೆ ದಾಸ | ಪದ್ದತಿಯ ಅವಳಾ 1 ಕರ್ಮನಿಷ್ಕಾಮನದಿ | ಪೇರ್ಮೆಯಲಿ ಗೈಯುತ್ತಭರ್ಮಗರ್ಭನ ಪಿತನ | ನಾಮ ಸುಧೆಯುಣುತಾಕರ್ಮಕ್ಷಯವನು ಪೊಂದಿ | ನಿರ್ಮಲಾತ್ಮಕಳಾಗಿಧರ್ಮಾಖ್ಯ ತವಪಾದ | ಪದ್ಮರತಳೇನಿಸೋ 2 ಪತಿ ಸೇವೆ ಹಿಂದೇಈತರದ ಸುಜ್ಞಾನ | ಮತಿಯಿತ್ತು ಪಾಲಿಸುತಕೃತಕಾರ್ಯಳೆಂದೆನಿಸೊ | ನತಜನ ಸುಪಾಲ 3 ವಜ್ರ ಕವಚವನೆಕರುಣಾದಿಂ ತೊಡಿಸೊ ಹರಿ | ಮರುತಂತರಾತ್ಮ 4 ಮೃಡ ವಂದ್ಯ ಹರಿಯೇಕಡು ಕರುಣಿಮನ್ಮಾತ | ಬಿಡದೆ ನೀ ಸಲಹಯ್ಯಬಡವಿಪ್ರಗೊಲಿದ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀದ ವಿಠಲ ಸರ್ವಾಂತರಾತ್ಮಾ ನೀ ದಯದಿ ಒಲಿದು ನಿತ್ಯದಲಿ ಕಾಪಾಡುವುದು ಪ ಚಿಕ್ಕ ತನದಲಿ ತಂದೆತಾಯಿಗಳು ಒಲಿದು ಪೆಸ ರಿಕ್ಕಿ ಕರೆದರು ನಿನ್ನ ದಾಸನೆಂದೂ ಮಕ್ಕಳನು ತಾಯ್ಸಲಹುವ ತೆರದಿ ಸಂತೈಸು 1 ಶುಕನಯ್ಯ ನಿನ್ನ ಪದಭಕುತಿ ತ್ವತ್ಕಥಾಶಾಸ್ತ್ರ ಯುಕುತಿವಂತರ ಸಂಗಸುಖವನಿತ್ತು ವಕಿತನಯ ನಿನ್ನವರ ಮುಖದಿಂದ ಪ್ರತಿದಿನದಿ 2 ಮಾತರಿಶ್ವಪ್ರಿಯ ಸುರೇತರಾಂತಕನೆ ಪುರು ಹೂತನಂದನಸಖ ನಿರಾತಂಕದಿ ನೀ ತೋರು ಮನದಿ ಸಂಪ್ರೀತಿಯಿಂದಲಿ ಒಲಿದು ಹೋತಾಹ್ವಗುರು ಜಗನ್ನಾಥ ವಿಠಲ ಬಂಧು 3
--------------
ಜಗನ್ನಾಥದಾಸರು
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀಮತ್ಕಾಂಚನ ಕೋಟಿರನ್ನತನಯಾ | ಕ್ಷೀರಾಂಬುನಿಧಿ ಮಧ್ಯದಿ | ನೇಮದಿಂ ನಿಜಧಾಮದಲ್ಲಿ ರಮೆಯಾ | ಒಡಗೂಡಿ ಸುರಸಿದ್ಧದೀ | ಸಾಮಗಾಯನ ಪ್ರಿಯನಾಗಿನಿರುತಾ | ಪಾಲಿಪ ಲೋಕಂಗಳಂ | ಮಾಧವ ದಯಾನಿಧೇ ವಧುವರಾ | ಕುರ್ಯಾತ್ಸದಾ ಮಂಗಳಂ | 1 ಭಾನುಕೋಟಿಯ ತೇಜದಿಂ ಬೆಳಗುವಾ | ಮುಕಟವು ಮಸ್ತಕದಿ | ಶ್ರೀ ನೀಲಾಳಕ ಭಾಲಮಧ್ಯಮೆರೆವಾ | ಕೇಶರ ಪೌಂಡ್ರಕದಿ | ಸೂನಾಸಿಕದಿ ವಾರಜಾಕ್ಷಅಧರಿಂ | ದೊಪ್ಪುವ ಕರ್ಣಂಗಳಂ | ತಾನೀಕುಂಡಲ ಭೂಷಣಾ ವಧುವರಾ | ಕುರ್ಯಾತ್ಸದಾ ಮಂಗಳಂ 2 ಶ್ರೀ ಲಕ್ಷ್ಮೀ ನಿಜಶಾರದಾಗಿರಿಸುತೇ | ಭಾರತೀ - ಶಚಿ- ಭಾಮಿನೀ | ಕಾಲಿಂದೀವರ ನರ್ಮದಾ ಸರಸ್ವತೀ | ಗಂಗಾ ತ್ರಿಪಥಗಾಮಿನೀ | ಪಾಲಿಸುವ ಗೋದಾವರೀ ಭೀಮರಥೀ | ಶ್ರೀ ಕೃಷ್ಣ ವೇಣಿಂಗಳಂ | ಮೇಲೆ ಕಾವೇರಿತುಂಗೆ ತಾವಧುವರಾ | ಕುರ್ಯಾತ್ಸದಾ ಮಂಗಳಂ 3 ವಾರಿಜಾಸನ ವಾಯು ಶಂಕರಗುರು | ತ್ವಂಹೇಂದ್ರ ವಸಿಷ್ಠನು | ಭಾರದ್ವಾಜ ಪರಾಶರಾತ್ರಿ ಭೃಗು ಕ- ಶ್ಯಪ ಕೌಶಿಕ ಶ್ರೇಷ್ಠನು | ಕಾರುಣೀ ಜಮದಗ್ನಿ ರಾಮ ಮರಿಚೀ | ವ್ಯಾಸಾದಿ ಋಷಿ ಪುಂಗಳಂ | ನಾರದಾದಿ ಮುನೀಂದ್ರರೀ ವಧುವರಾ | ಕುರ್ಯಾತ್ಸದಾ ಮಂಗಳಂ 4 ಇಂದ್ರೋವಹ್ನಿ ಪಿತೃಪತಿ - ನಿಋಋತಿ | ಮಕರೇಶ ಪ್ರಭಂಜನಾ | ಸಾಂದ್ರೈಶ್ವರ್ಯ ಕುಬೇರ ಈಶದಿಕ್ಪಾ ಲಾದಿತ್ಯಶಶಿರಂಜನಾ | ಚಂದ್ರಾತ್ಮಜನುಭೌಮದೇವಗುರುತಾ | ಕವಿಮಂದ ಗ್ರಹಂಗಳಂ | ಸಾಂದ್ರಾಗೀಹ ಸಮಸ್ತಗಿರೀ ವಧುವರಾ | ಕುರ್ಯಾತ್ಸದಾ ಮಂಗಳಂ 5 ಶ್ರೀ ಮತ್ಸ್ಯಾಕೃತಿ ಕೂರ್ಮನಾಗಿ ವರಹಾ | ನರಸಿಂಹನೆಂದೆ ನಿಸಿದಾ | ವಾಮನಾಭೃಗುವರ್ಯರಾಮರಘುಪಾ | ಯದುವಂಶದಲಿ ಜನಿಸಿದಾ | ತಾ ಮತ್ತೇ ನಿಜ ಬೌದ್ಧಕಲ್ಕಿ ಎನಿಸೀ | ತಾಳ್ದಾವತಾರಂಗಳಂ | ಶ್ರೀ ಮನೋಹರ ದೇವಕೀ ವಧುವರಾ | ಕುರ್ಯಾತ್ಸದಾ ಮಂಗಳಂ 6 ಕಾಶೀ ಕಂಚಿ ಅವಂತಿಕಾ ವರಪುರೀ | ದ್ವಾರಾವತೀ ಮಥುರಾ | ದೋಷನಾಶಿಕ ಪುಣ್ಯಕ್ಷೇತ್ರ ಬದರೀ | ಶೇಷಾದ್ರಿವರ ಸೇತುಬಧ ತುಹಿನಾ | ರಜತಾದ್ರಿ ಸೈಲಂಗಳಂ | ಈ ಸಪ್ತಾಂಬುಧೀ ಸರ್ವದೀ ವಧುವರಾ | ಕುರ್ಯಾತ್ಸದಾ ಮಂಗಳಂ 7 ದಶರಥಾತ್ಮಜನಾದ ರಾಮಜಗದೀ | ಜನಕಾತ್ಮಜಾ ಸೀತೆಯಾ | ಕುಶಲದೀ ನರಲೀಲೆಯಿಂದ ಮೆರೆವಾ ವೈಭವ ಸಂಗsತಿಯಾ ಉಸರೀದಾ ಗುರುಮಹಿಪತಿಸುತ ಕ- ನ್ನಡ ಭಾಡೆ ಶ್ಲೋಕಂಗಳಂ | ವಸುಧೆಯಲಿ ಸ್ಮರಿಸುವವರಿಂಗೆ ಕೊಡುವಾ | ರಘುನಾಥ ಜಯಮಂಗಳಂ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಮುರಳೀಧರ ಕೃಪಾಕರ ಜೀಮೂತನೀಲಾಂಗ ಶೃಂಗಾರ ಪ ಸಾಮಜಭಯಪರಿಹಾರ ಕಾಮಿತ ಫಲದಾತಾರ ಸಾಮದಾನಾದಿ ಚತುರ ಪರಾತ್ಪರಾ ಶುಭಂಕರಾ ಅ.ಪ ಶಾಂತಿ ಸುಗುಣ ಪೂರಣ ಭವತರಣ ಆಂತರ್ಯ ಸಂಚಾರಣ ಭಯಹರಣ ಪೂತನೀ ಪ್ರಾಣಹರಣ ಪಾಂಡುಪುತ್ರಸಮೀಕ್ಷಣ ನೀತಿ ನಿಯಮ ಸಂತ್ರಾಣ ಮಾಂಗಿರೀಶ ಚರಣ ವಿಹರಣ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಯದುಕುಲತಿಲಕ ದೇವ ಕಾಯಬೇಕು ನೀ ಕರುಣಾವಾಲ ಪ ಶ್ರೀಯಶೋಧೆಯಮಾಯೆಯತನಯ ರಾಯನೆ ದಯೆದೋರು ಅ.ಪ ದೇವಕೀವಸುದೇವ ಜಾತ ನೀ ವಿನೋದದೆ ನಂದನೊಳಿರುತ ಆವ ಪೂತನಿಶಕಟರಸುವದೇವಹರಿಸಿದೆಭಕ್ತಭಯಹರಶ್ರೀ ಗೋವಕಾಯ್ದ ಗೋವಿಂದ ವಿಧಿಪುರಂದರಾದಿವಂದ್ಯ ಪಾವನ ಯಮನಾನಂದ ಫಣಿತರ ಫಣಿಯೊಳುನಿಂದ 1 ನಳಿನನಾಭಗೋಪಾಲ ಪುಳಿನ ಕ್ರೀಡೆಯಾಡಿಬಾಲ ರೊಳಗೆ ಮೇಲೆನಿಪ ಸುಶೀಲ ತುಳಿದೆ ಬಕ ಆಘಪ್ರಲಂಬಾದಿ ದೈತ್ಯಜಾಲ ಕಳವಳಗೊಳ್ಳುತ ಸೆರೆಯೊಳ್ ಬಳಲುವ ವನಿತಾಜನದೊಳ್ ಒಲಿಯುತ್ತಲಿ ನರಕಾಸುರ ಶಿರವರದಿನೆ ದುರಿತಶಯನ 2 ಬೃಂದಾವನ ಸಂಚಾರ ಬೆಳ್ದಿಂಗಳೊಳು ಗೋಪಿಯರ ಬಂಧುರ ವೇಣುಗಾನತೋರಿ ಹೊಂದುತಾನಂದ ನಿಧಿ ತೋರಿದ ಪರಾತ್ಪರ ತಂದೆ ತಾಯ್ಗಳ ಪೊರೆಯುತ ನಿಂದು ಕಂಸನಕೊಂದು ಅಪ್ರಮೇಯ ಜಾಜೀಶ್ವರ 3
--------------
ಶಾಮಶರ್ಮರು