ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಣ್ಣು ಕೊಂಬುವ ಬನ್ನಿರಿ ಹರಿದಾಸರುಹಣ್ಣು ಕೊಂಬುವ ಬನ್ನಿರಿ ಪ.ಚೆನ್ನ ಬಾಲಕೃಷ್ಣನೆಂಬಕನ್ನೆಗೊನೆಬಾಳೆಹಣ್ಣು ಅಪಸುತ್ತೇಳು ಲೋಕದಿಸುರರು ಬಿತ್ತಿದ ಹಣ್ಣುಭಕ್ತರ ಬಾಯೊಳು ನೆನೆವ ಹಣ್ಣುಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆನಿತ್ಯಮಾಧವನೆಂಬ ಅಚ್ಚಮಾವಿನ ಹಣ್ಣು1ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣುನಿಜಮುನಿಗಳಿಗೆ ತೋರಿಸಿದ ಹಣ್ಣುತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣುಸುಜನಭಕ್ತರೆಲ್ಲಕೊಳ್ಳಬನ್ನಿರಿ ಹಣ್ಣು2ತುರವ ಕಾಯ್ದ ಹಣ್ಣು ಉರಗನ ತುಳಿದಾ ಹಣ್ಣುಕರೆದರೆ ಕಂಬದೊಳು ಓಯೆಂಬ ಹಣ್ಣುಮರುಗುವ ಧೃವನಿಗೆ ಪಟ್ಟಗಟ್ಟಿದ ಹಣ್ಣು
--------------
ಪುರಂದರದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು
ಹನುಮ - ಭೀಮ - ಮಧ್ವ ಮುನಿಯನೆನೆದು ಬದುಕಿರೊಅನುಮಾನಂಗಳಿಲ್ಲದಲೆ ಮನದಭೀಷ್ಟಂಗಳನೀವ ಪಪ್ರಾಣಿಗಳ ಪ್ರಾಣೋದ್ದಾರ ಪ್ರಾಣರಲ್ಲುತ್ತಮ ಮತ್ತೆಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕøಷ್ಟ ||ಕಾಣಿರೇನೋ ಕಾಯಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಕೊಟ್ಟು ಸಲಹುವ ಜಾಣಗುರುಮುಖ್ಯಪ್ರಾಣ1ಕಾಮಧೇನು ಚಿಂತಾಮಣಿ ಕಲ್ಪವೃಕ್ಷನಾದ ಸ್ವಾಮಿಪ್ರೇಮದಿಂದ ನೆನಯುವವರ ಭಾಗ್ಯಕ್ಕೆಣೆಯುಂಟೇ ? ||ಸಾಮಾನ್ಯವಲ್ಲವೊ ಈಗ ಮೋಕ್ಷಾದಿ ಸಂಪದದಾತಆ ಮಹಾ ಪರೋಕ್ಷಜ್ಞಾನ ದಾಢ್ರ್ಯ ಭಕುತಿ ಕೊಡುವ 2ಅವತಾರ ತ್ರಯಗಳಿಂದ ಶ್ರೀಹರಿಯ ಸೇವಿಸುವತವಕದಿ ಪೂಜಿಪ ಮಹಾಮಹಿಮೆಯುಳ್ಳವನು ||ಕವಿತೆವಾಕ್ಯವಲ್ಲವಿದು ಅವಿವೇಕವೆಂದೆಣಿಸಬೇಡಿಭವಬಂಧನ ಕಳೆದುಕಾವಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹನುಮಂತ ದೇವ ನಮೋ ಪವನಧಿಯನು ದಾಟಿ ರಾವಣನ ದಂಡಿಸಿದೆ ಅ.ಪಅಂಜನೆಯ ಆತ್ಮದಿಂದುದಿಸಿ ನೀ ಮೆರೆದೆಯೋಕಂಜಸಖಮಂಡಲಕೆ ಕೈ ದುಡುಕಿದೆ ||ಭುಂಜಿಸೀರೇಳು ಜಗಂಗಳನು ಉಳುಹಿದೆ ಪ್ರ-ಭಂಜನಾತ್ಮಜ ಗುರುವೆ ಸರಿಗಾಣೆ ನಿನಗೆ 1ಹೇಮಕುಂಡಲಹೇಮಯಜೊÕೀಪವೀತಖಿಳಹೇಮಕಟಿಸೂತ್ರಕೌಪೀನಧಾರೀ ||ರೋಮ ಕೋಟಿ ಲಿಂಗ ಸರ್ವಶ್ಯಾಮಲ ವರ್ಣರಾಮಭೃತ್ಯನೆ ನಿನಗೆ ಸರಿಗಾಣೆ ಗುರುವೆ 2ರಾಮ-ಲಕ್ಷನರ ಕಂಡಾಳಾಗಿ ನೀ ಮೆರೆದೆ |ಭೂಮಿಜೆಗೆ ಮುದ್ರೆಯುಂಗುರವನಿತ್ತೆ ||ಆ ಮಹಾ ಲಂಕಾ ನಗರವೆಲ್ಲವನು ಸುಟ್ಟುಧೂಮ ಧಾಮವ ಮಾಡಿ ಆಳಿದೆಯೊ ಮಹಾತ್ಮ 3ಆಕ್ಷಯ ಕುಮಾರಕನ ನಿಟ್ಟೊರಸಿ ಬಿಸುಟು ನೀರಾಕ್ಷಸಾಧಿಪ ರಾವಣನು ರಣದಲಿ ||ವಕ್ಷಸ್ಥಳದಲ್ಲಿ ಶಿಕ್ಷಿಸಲು ಮೂರ್ಛೆಯ ಬಗೆಯರಕ್ಷಿಸಿದೆ, ರಕ್ಷಿಸಿದೆ ರಾಯ ಬಲವಂತ 4ಶ್ರೀಮದಾಚಾರ್ಯ ಕುಲದವನೆಂದೆನಿಸಿದೆಯೈಶ್ರೀ ಮಹಾಲಕುಮಿ ನಾರಾಯಣಾಖ್ಯ ||ಶ್ರೀ ಮನೋಹರಪುರಂದರವಿಠಲ ರಾಯನಸೌಮ್ಯಮನದಾಳು ಹನುಮಂತ ಬಲವಂತ 5
--------------
ಪುರಂದರದಾಸರು
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮದ್ಭೀಮ ಮಧ್ವನಾಮ ಪ್ರಣತಕಲ್ಪದ್ರುಮಘನಕೃಪಾಳು ಭಕ್ತಚಿಂತಾಮಣಿ ಯೋಗೀಂದ್ರಲಲಾಮ ಪ.ಭಾರತಿಪತಿ ನಿಖಿಲವಿಶ್ವಾಧಾರ ಭಾವೀಬ್ರಹ್ಮಸಾರತತ್ತ್ವ ವೇದಾರ್ಥಕೋವಿದ ಧೀರಜೀವೋತ್ತಮ1ಭರ್ಗವಾಸವಾದಿ ದಿವಿಜವರ್ಗಸುಖಧಾಮನಿರ್ಗುಣೋಪಾಸಕ ಮೋಕ್ಷಮಾರ್ಗದರ್ಶಿನಿಷ್ಕಾಮ2ಸೂತ್ರನಾಮಕ ವಾಯುದೇವ ವಿಚಿತ್ರಕರ್ಮನಿಸ್ಸೀಮಕರ್ತಲಕ್ಷ್ಮೀನಾರಾಯಣನಭೃತ್ಯಸಾರ್ವಭೌಮ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹನುಮನ ಮತವೆ ಹರಿಯ ಮತವು |ಹರಿಯ ಮತವೇ ಹನುಮನ ಮತವು ಪಹನುಮನು ಒಲಿದರೆಹರಿತಾನೊಲಿವನು |ಹನುಮನು ಮುನಿದರೆ ಹರಿಮುನಿವ ಅ.ಪಹನುಮನ ನಂಬಿದ ಸುಗ್ರೀವ ಗೆದ್ದ |ಹನುಮನ ನಂಬದ ವಾಲಿಯು ಬಿದ್ದ 1ಹನುಮನು ಒಲಿದ ವಿಭೀಷಣ ಗೆದ್ದಹನುಮನು ಮುನಿಯಲು ರಾವಣ ಬಿದ್ದ 2ಹನುಮನುಪುರಂದರವಿಠಲನ ದಾಸ|ಹನುಮನೊಳ್ಪುರಂದರವಿಠಲನಾವಾಸ3
--------------
ಪುರಂದರದಾಸರು
ಹಮ್ಮುನಾಡಲಿಬೇಡಹಮ್ಮು ಈಡೇರದು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಮ್ಮಿನಿಂದಲಿ ನೀವು ಕೆಡಬೇಡಿರಯ್ಯ ಪ.ಮುನ್ನೊಮ್ಮೆ ರಾವಣನು ಜನಕನಾ ಸಭೆಯಲ್ಲಿತನ್ನಳವನರಿಯದಲೆ ಧನುವೆತ್ತಲುಉನ್ನತದ ಆ ಧನು ಎದೆಯ ಮೇಲೆ ಬೀಳಲುಬನ್ನಬಟ್ಟುದ ನೀವು ಕೇಳಿಬಲ್ಲಿರಯ್ಯ1ಕುರುಪತಿಯ ಸಭೆಯಲ್ಲಿ ಕೃಷ್ಣ ತಾ ಬರಲಾಗಿಕರೆದು ಮನ್ನಣೆಯನ್ನು ಮಾಡಿದಿರಲುಧರೆಗೆ ಶ್ರೀ ಕೃಷ್ಣನಂಗುಟವನಂದೊತ್ತಲುಅರಸುಆಸನ ಬಿಟ್ಟು ಉರುಳಾಡಿದ2ಅತಿ ವೇಗದಲಿ ಕೃಷ್ಣ ಸತ್ಯಭಾಮೆಯ ಕರೆದುಸೀತೆ ನೀನಾಗೆಂದು ನೇಮಿಸಿದನುಮತಿವಂತೆ ಬಗೆಬಗೆಯ ಶೃಂಗಾರವಾದರೂಸೀತಾ ಸ್ವರೂಪ ತಾನಾಗಲಿಲ್ಲ 3ಹನುಮನನು ಕರೆಯೆಂದು ಖಗಪತಿಯನಟ್ಟಲುಮನದಲಿ ಕಡುಕೋಪದಿಂದ ನೊಂದುವಾನರನೆ ಬಾಯೆಂದು ಗರುಡ ತಾ ಕರೆಯಲುಹನುಮ ಗರುಡನ ತಿರುಹಿ ಬೀಸಾಡಿದ 4ಇಂತಿಂತು ದೊಡ್ಡವರು ಈ ಪಾಡು ಪಟ್ಟಿರಲುಪಂಥಗಾರಿಕೆ ತರವೆ ನರಮನುಜಗೆ ?ಚಿಂತಾಯತನು ಚೆಲ್ವ ಪುರಂದರವಿಠಲನಸಂತತವು ನೆನೆ ನೆನೆದು ಸುಖಿಯಾಗೊ ಮನುಜ 5
--------------
ಪುರಂದರದಾಸರು
ಹರನೆ ನಾ ನಿನ್ನ ಪರಿಸರನಯ್ಯಾ77 ಅಸುರವರ ಸ್ಮರಮುಖ ನುರಗಣಸೇವ್ಯನೆ ಪನರವರನಿಗೆ ನೀ ಹರಿಮಹಿಮೆಯ ಪೇಳಿದೆ ಅ.ಪಅಂಬಾಧವ ಹೇರಂಬನತಾತಶರಜನ್ಮನ ಪಿತನಂಬಿದೆ ನಿನ್ನನು ತ್ರ್ಯಂಬಕ ಪಾಲಿಸೊ 1ತಂದೂತಂದರ ಚಂದ್ರದ್ಯುಮಣಿಪಾವಕನೇತ್ರ ತ್ರೀಣಿಇಂದುಶೇಖರಭವಕಂಧರಮಾಲಿಯೆದಂದಶೂರ ನಿಜಛಂದ ಕಲಾಪನೆ 2ತುಂಗಮಹಿಮ ಭಸಿತಾಂಗ ಶುಭಾಂಗ 3ಧನವನು ಪಾಲಿಸು ಧನಪÀನ ಸಖನೆ 4ದಾತಾಗುರುಜಗನ್ನಾಥಾ - ವಿಠಲದೂತಾಪಾತಕಕಾನನವೀತಿಹೋತ್ರಶುಭವ್ರಾತವ ಪಾಲಿಸ್ಯನಾಥನ ಪೊರಿಯೋ 5
--------------
ಗುರುಜಗನ್ನಾಥದಾಸರು
ಹರಿ - ಹರರು ಸರಿಯೆಂಬ ಅರಿಯದಜ್ಞಾನಿಗಳು |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರನ ಹೃದಯದೊಳಿರುವ ಹರಿಯ ತಾವರಿಯರು ಪ.ಶರಧಿ ಮಥನದಲಂದುಸಿಂಧುಸುತೆ ಬಂದಾಗ |ಹರಿ - ಹರ -ವಿರಂಚಿ ಮೊದಲಾದ ಸುರರ ||ನೆರೆ ಒರೆದು ನೋಡಿ ಶಂಕೆಯ ಬಿಟ್ಟು ಸಿರಿದೇವೀಹರಿಸರ್ವಪರನೆಂದು ಮಾಲೆ ಹಾಕಿದಳು1ಹರಿನಾಮ ಕ್ಷೀರವದು ಹರನಾಮ ನೀರು ಅದು |ಕ್ಷೀರ ನೀರೊಂದಾದುದಂತೆ ಇಹುದು ||ಒರೆದಾಡಿ ಪರತತ್ತ್ವವರಿಯದಾನರ ತಾನು |ಹರಿ- ಹರರು ಸರಿಯೆಂದು ನರಕಕೆಳಸುವನು2ಕ್ಷೋಣಿಯೊಳು ಬಾಣನ - ತೋಳುಗಳ ಕಡಿವಾಗ |ಏಣಾಂಕಧರ ಬಾಗಿಲೊಳಗೆ ಇರಲು |ಕಾಣರೇ ಜನರೆಲ್ಲಹರಿ ಪರನು ತಾನೆಂದು |ಪೂರ್ಣಗುಣ ಪುರಂದರವಿಠಲನೇ ಪರನು 3
--------------
ಪುರಂದರದಾಸರು
ಹರಿ ಕೊಟ್ಟಕಾಲಕ್ಕೆ ಉಣಲಿಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರಿಕೊಡದ ಕಾಲಕ್ಕೆ ಬಾಯಿಬಿಡುವೆಯೊ ಪ್ರಾಣಿಪ.ಉಡಲಿಲ್ಲ ಉಣಲಿಲ್ಲ ಕೊಡಲಿಲ್ಲ ಧರ್ಮವ |ಅಡಗಿಸಿ ಇಟ್ಟಿಹೆ ಮಣ್ಣೊಳಗೆ ||ಬಡತನ ಬಂದು ಕಂಬಳಿ ಹೊದೆವಾಗ |ತುಡುಗು ನಿನ್ನ ಜನ್ಮ ಸುಡು ಕಾಣೊಖೋಡಿ1ಹುಗ್ಗಿಯು ತುಪ್ಪವು ಮನೆಯೊಳಗಿರಲಿಕ್ಕೆ |ಗುಗ್ಗರಿಯನು ಮಾಡಿ ತಿನ್ನುವಿಯೊ ||ವೆಗ್ಗಳವಾದ ಯಮಧೂತರು ಎಳೆವಾಗ |ಬುಗ್ಗೆಯ ಹೊಯ್ಕೊಂಡು ಹೋದೆಯೊ ಖೋಡಿ 2ನಂಟರು - ಬಂಧುಗಳೂರೊಳಗಿರಲಿಕ್ಕೆ |ಕುಂಟು ಸುದ್ದಿಗಳನು ಆಡುವೆ ನೀ ||ಕಂಟಕರಾದ ಯಮದೂತರು ಎಳೆವಾಗ |ನಂಟ ಪುರಂದರವಿಠಲನ ದ್ರೋಹಿ 3
--------------
ಪುರಂದರದಾಸರು
ಹರಿ ನಿನ್ನೊಲುಮೆಯು ಆಗುವತನಕ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅರಿತು ಸುಮ್ಮಗಿರುವುದೆ ಲೇಸು ಪ.ಮರಳಿ ಮರಳಿ ತಾ ಪಡೆಯದ ಭಾಗ್ಯವು |ಮರುಗಿದರೆ - ತನಗಾದೀತೆ ? ಅಪದೂರು ಬರುವ ನಂಬಿಗೆಯನು ಕೊಟ್ಟರೆ |ದುರ್ಜನ ಬರುವುದು ತಪ್ಪೀತೆ ||ದೂರ ನಿಂತು ಮೊರೆಯಿಟ್ಟು ಕೂಗಿದರೆ |ಚೋರರಿಗೆ ದಯ ಪುಟ್ಟೀತೆ |ಜಾರನಾರಿ ತಾ ಪತಿವ್ರತೆ ಎನ್ನಲು |ಜಾಣರಿಗೆ - ನಿಜ ತೋರೀತೆ ||ಊರ ಬಿಟ್ಟು ಬೇರೂರಿಗೆ ಹೋದರೆ |ಪ್ರಾರಬ್ಧವು ಬೇರಾದೀತೆ 1ಪಾಟುಪಡುವುದು ಪಣೆಯಲ್ಲಿರಲು |ಪಟ್ಟಮಂಚ ತನಗಾದೀತೆ ||ಹೊಟ್ಟೆಯಲ್ಲಿ ಸುತರಿಲ್ಲೆಂದು ಹೊರಳಲು |ಹುಟ್ಟು ಬಂಜೆಗೆ ಮಕ್ಕಳಾದೀತೆ ?||ಬೆಟ್ಟದ ನವಿಲಿಗೆ ಕಣ್ಣೀರು ಬಂದರೆ |ಬೇಟೆಗಾರಗೆ ದಯ ಪುಟ್ಟೀತೆ ||ಕೆಟ್ಟ ಹಾವು ತಾ ಕಚ್ಚಿದ ವಿಷವದು |ಬಟ್ಟೆಯಲೊರಸಲು ಹೋದೀತೆ 2ಧನಿಕನ ಕಂಡು ಪಾಡಿ ಪೊಗಳಿದರೆ |ದಾರಿದ್ರ್ಯವು ತಾ ಹಿಂಗೀತೆ ||ದಿನದಿನ ನೊಸಲೊಳು ನಾಮವನಿಟ್ಟರೆ |ದೇವರಿಗೆ ತೃಪ್ತಿಯಾದೀತೆ ||ಎಣಿಸಿಕೊಂಡು ಎಳ ಹಂಜಿಯ ನೂತರೆ |ಅಣೆಯದ ಸಾಲವು ತೀರೀತೆ |ಅನುದಿನದಲಿ ಶ್ರೀ ಪುರಂದರವಿಠಲನ |ನೆನೆಯದಿದ್ದರೆಭವಹಿಂಗೀತೆ3
--------------
ಪುರಂದರದಾಸರು
ಹರಿಕಥಾ ಶ್ರವಣ ಮಾಡೊ - ನಿರಂತರಪರಗತಿಗಿದು ನಿರ್ಧಾರ ನೋಡೊ ಪ.ಸರಸಿಜನಾಭನ ಸರ್ವದಾ ಹೊಗಳುತದುರಿತದೊರಕೀಡಾಡೊ -ಮನುಜಾ1ಜಾÕನ - ಭಕುತಿ - ವೈರಾಗ್ಯವೀವ ನಮ್ಮಆನಂದತೀರ್ಥರ ಪಾಡೊ ಮನುಜಾ 2ಪರಮ ಪುರುಷ ಶ್ರೀ ಪುರಂದರವಿಠಲನಚರಣ ಕಮಲಗಳ ಕೂಡೊ - ಮನುಜಾ 3
--------------
ಪುರಂದರದಾಸರು
ಹರಿಕಥಾ ಶ್ರವಣ ಸಾಧನವೆ ಮುಕುತಿ ಇದಕೆಸರಿ ಧರ್ಮವಿಲ್ಲೆಂದು ಪೇಳ್ವವು ಶ್ರುತಿತತಿ ಪ.ಶ್ರವಣದಿಂದಲಿ ಸಕಲ ಸದ್ಧರ್ಮ ಸಾಧನವುಭುವಿಯಲ್ಲಿ ಪೂಜ್ಯರಾಹೋರು ಸುಜನರುಸವೆಯದಾನಂದಮಯ ಭಕುತಿಸಿರಿದೊರಕುವುದುಅವರೇವೆ ಸೂಜÕರಾಗ್ವರು ಹರಿಯ ದಯದಿ 1ಅನವರತಶ್ರವಣವೆ ಮನನ ಮೂಲವು ಗಡಮನನದಲಿ ಹರಿಧ್ಯಾನ ಖಚಿತಾಹುದುಘನಪರಾತ್ಪರ ತತ್ವ ತಿಳುಹಿ ವಿರಕುತಿ ಭಾಗ್ಯವನು ಕೊಟ್ಟು ಶ್ರೀ ವಿಷ್ಣು ತೋರ್ವಗತಿಈವ2ಶ್ರವಣದಲಿ ನಾರದಗೆ ಗತಕಲ್ಪದ್ಯಪರೋಕ್ಷಸವಿಯಾದ ಸಾಮ್ರಾಜ್ಯ ಲೆಕ್ಕಿಸದ ಪ್ರಿಯವ್ರತಅವನಿಪರುವನಪೊಕ್ಕು ಹರಿಯನಾಶ್ರಯಸಿದರುದಿವಸೇಳರಲಿ ವಿಷ್ಣುರತನಿಗೆ ಮೋಕ್ಷ 3ದಿವಿಜಋಷಿ ಗಂಧರ್ವ ನೃಪರು ಮನುಜೋತ್ತಮರುವಿವಿಧ ತಿರ್ಯಗ್ಜಾತಿ ಸಜ್ಜೀವರುಶ್ರವಣಮಾತ್ರದಲಿ ಕಂಡರು ಸದ್ಗತಿಯನವರುದಿವಸಗಳೆಯದಲೆ ಆದರದಿಂದ ಬುಧರು 4ಹರಿಕಥಾಶ್ರೋತರಿಗೆ ಕರತಲವು ಮೋಕ್ಷ ಗಡಗುರುದ್ವಾರದಲಿಹರಿದೊರಕುವನು ಸತ್ಯಗುರುಮಧ್ವವರದ ಶ್ರೀಪ್ರಸನ್ವೆಂಕಟ ಕೃಷ್ಣಕರವಿಡಿದು ಪೊರೆವ ಸದ್ಗುರು ಪ್ರಿಯಜನಕೆ 5
--------------
ಪ್ರಸನ್ನವೆಂಕಟದಾಸರು