ಒಟ್ಟು 13912 ಕಡೆಗಳಲ್ಲಿ , 138 ದಾಸರು , 7210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸ್ವತಿ ದೇಹಿಸನ್ಮತಿಪ.ವಿಧಿಸತಿ ಸುವ್ರತಿ ಶ್ರೀಮತಿಭಾರತಿಅ.ಪ.ನಿಗಮವೇದ್ಯನನುನಿತ್ಯಪೊಗಳುತಿಜಗದೀಶ್ವರಿ ಜಲಜಾಯತನೇತ್ರಿಭಗವತಿ ಪವಿತ್ರಿ ಸಾವಿತ್ರಿ ಗಾಯತ್ರಿಸರಸ್ವತಿ ದೇಹಿಸನ್ಮತಿ1ಶರ್ವೇಂದ್ರಪೂರ್ವ ಗೀರ್ವಾಣತತಿಸರ್ವದಾಚರಿಸುವುದು ತವ ಸ್ತುತಿಸದ್ಭಕ್ತಿ ವಿರಕ್ತಿ ತ್ರಿಶಕ್ತಿ ದೇವಕಿಸರಸ್ವತಿ ದೇಹಿಸನ್ಮತಿ2ಲಕ್ಷ್ಮೀನಾರಾಯಣನ ಮೂರುತಿಲಕ್ಷಿಸಿ ಮನದೊಳಾನಂದದೊಳಿರುತಿಗುಣವತಿಸುಗತಿಸುಧೃತಿ ವಿಧಾತ್ರಿಸರಸ್ವತಿ ದೇಹಿಸನ್ಮತಿ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸರಸ್ವತೀ ಶ್ರೀ ಗಾಯತ್ರೀ | ಪರಮೇಷ್ಟಿಜೆ ಸಾವಿತ್ರಿ ||ಸರುವ ವೇದಾತ್ಮಿಕೆ ಪ್ರೀತಿ | ಸರಸ್ವತಾ ದೇವೀ ಪವಾಣೀ ದೇವೀ ಸುವೀಣಾಪಾಣಿ ಕಾಯೆ |ಬ್ರಹ್ಮನ ರಾಣಿ ಗರುಡಾರಾದ್ಯಾರಾಧಿತೇ ||ಜಾಣೆ ತವ ಪದ ಕಂಜಾರೇಣು ಸೇವಿಪೆನಿತ್ಯಪೋಣಿಸಾಬೇಕೆ ಸನ್ಮತಿಯಾ 1ಹಂಸ ವರೂಢೆ ಮಾತೆಕಂಸಾರಿನಿಜದೂತೆಸಂಸೇವಿಸುವರ ದಾತೆ ||ದೋಷರಹಿತೆ ಯನ್ನಾ ಆಶಿ ಪೂರ್ತಿಸೆ ನಿನ್ನಾನಾ ಸೇವಿಸೂವೇನೆಯೆಮ್ಮಾ 2ಶಿರಿ ಪ್ರಾಣೇಶ ವಿಠಲನ ಚರಣಾಂಬುಜ ಷಟ್ಟಾದೆಕರವಮುಗಿದು ಬಿನ್ನೈಸುವೆ ||ಬರವ ನುಡಿಗೆ ವಿಘ್ನತೆ ಬರದಂತೆಪಾಲಿಸವ್ವಾ ಕರಣಾ ಸಾಗರೆ ಪವಿತ್ರೆ3
--------------
ಪ್ರಾಣೇಶದಾಸರು
ಸಲಹಯ್ಯಸ್ಮರಬೊಮ್ಮ್ಮರಯ್ಯವ್ಯಾಳಶಯ್ಯ ಪಿಡಿಕೈಯನೀಲಮೈಯ ನೀರಜಪ್ರಿಯ ಪ.ಭವಾರಣ್ಯದಿ ಬಲುತೊಳಲಿ ನಾಮಾನವನಾಗಿ ಮದಾಂಧಕನಾಗಿಹೇವಗೆಟ್ಟೆನಯ್ಯ ಹೇಯಬಿಟ್ಟೆನಯ್ಯತವ ಪಾದವ ತೋರೊಮಾಧವ1ಎನ್ನ ಭಕ್ತಿ ಗಹನ ವಿರಕ್ತಿ ನಿಧಾನ ತತ್ವನಿರ್ಣಯದ ಸತ್ವಹೀನ ಹೃದಯ ನಾ ಹಿತವನರಿಯೆ ನಾನೀನೆ ಕರುಣಿಸೊ ನಿಜರೊಳಿರಿಸೊ 2ನೆನೆವರ ನೆನಪಿನ ಚದುರದೀನತಮದಿನಕರರಾಮ ಶುಭಾನನ ಶರಣೆಂಬೆ ನಾ ಪ್ರಸನ್ನವೆಂಕಟೇಶ ಶ್ರೀ ಶ್ರೀನಿವಾಸ 3
--------------
ಪ್ರಸನ್ನವೆಂಕಟದಾಸರು
ಸಲಹು ಸಲಹು ಗುರುರಾಯನೆ ನನ್ನಾಲಸದೆ ಪಾವನ್ನಕಾಯನೆ ನಾನುಹಲವು ದಿವಸ ನಿನ್ನ ನಂಬಿರೆದ್ವಿಜಕುಲಮಣಿ ಜನಾರ್ದನಾಚಾರ್ಯನೆ ಪ.ನಿನ್ನ ಶರಣು ಹೊಕ್ಕ ಭೃತ್ಯರು ತತ್ವಪೂರ್ಣರಾದರು ಪೂತರಾದರುನನ್ನ ಮನ್ನಿಸಲಾಗದೆ ದಾತನೆ ವಿದ್ಯೋನ್ನತ ವಿಶ್ವಕೆ ಪ್ರೀತನೆ 1ಆ ಬಾಲ್ಯದೊಳು ರಘುಪತಿಪಾದಭಜನಾದರ ನಿನಗುಂಟುಕೋವಿದಈ ಮೇದಿನಿಯಲಿ ಸುಧಾಸುರಸದಬಹು ಸ್ವಾದವ ಬಲ್ಲ ಇಷ್ಟಾರ್ಥದ 2ಅಜ್ಞಾನ ಕತ್ತಲೆ ಕವಿದಿದೆ ಅಭಿಜÕನ ಮಾಡಲಿ ಬಾರದೆ ನಿನ್ನಪ್ರಜÕತನದ ಪ್ರಸವನಿತ್ಯಆಜ್ಞಾಧಾರಕಗೀಯೊ ಜ್ಞಾನವ 3ಭಕ್ತಿ ವೈರಾಗ್ಯ ಸುಜ್ಞಾನ ಸಂಯುಕ್ತ ಮಂಗಳ ಗುಣಾಲಂಕೃತಯುಕ್ತಿ ಸಾಲದು ಹರಿಸೇವೆಗೆ ಸ್ವಪ್ನವ್ಯಕ್ತ ಬೋಧಿಸೆನಗೆ 4ತಂದೆ ತಾಯಿ ಆಪ್ತಮಿತ್ರ ನೀಗತಿಹೊಂದಿಪ ದುರಿತಘಹರ್ತ ನೀ ಗೋವಿಂದ ಪ್ರಸನ್ವೆಂಕಟೇಶನ ಹೃದಯಮಂದಿರದೊಳು ಪೂಜಾಶೀಲನೆ 5
--------------
ಪ್ರಸನ್ನವೆಂಕಟದಾಸರು
ಸಲಹು ಸಲಹು ನನ್ನಯ್ಯನೆಸಲಹು ಸಲಹು ಪ.ಶ್ರೀಗಿರಿವಾಸ ನಾಗವಿಭೂಷಯೋಗಿಜನೇಶಾಘೌಘವಿನಾಶ 1ಗಜದ ಸುಚೈಲಿ ಅಜನ ಕಪಾಲಿದ್ವಿಜಮೌಳಿಅಂಗಜಹರಶೂಲಿ2ಸ್ಫಟಿಕ ಸುಗಾತ್ರ ಪಟೂಜ್ವಲ ನೇತ್ರಕುಟಿಲ ಪ್ರಸನ್ವೆಂಕಟಪತಿ ಪೌತ್ರ 3
--------------
ಪ್ರಸನ್ನವೆಂಕಟದಾಸರು
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು
ಸಂಸಾರ ನಂಬುವೆಯ ಹೆಡ್ಡ ಈಸಂಸಾರವಿಹುದು ಮುಕ್ತಿಗೆ ಅಡ್ಡಪಮನೆಯು ಎಂಬುದುವಸ್ತಿ ಮಳಿಗೆಸತಿತನಯಹೋಹರು ಹಾದಿಗಳಿಗೆಎನಿತು ಮಮತೆ ಇದರೊಳಗೆ ಯಮಮನಮುಟ್ಟಿ ಹಿಡಿದಿಹ ಗುದಿಗೆ1ಸುಳ್ಳುಗಳಾಡೋದು ಎಷ್ಟುಮಹಾತಳ್ಳಿಕಾರಿಕೆ ಬೆಟ್ಟದಷ್ಟುಬೆಳ್ಳಿಟ್ಟು ಬಗುಳೋದು ಯಷ್ಟು ಯಮ ಕಕ್ಕಲಿಹಶೀಳುಯಂಬಾಕೊಲ್ಲೆಯಿವನ ಕುಟ್ಟುಕುಟ್ಟು2ಮಕ್ಕಳು ಮನೆಗಿಲ್ಲವೆಂಬ ಎನಗೆತಕ್ಕ ಹೆಂಡತಿ ಅಲ್ಲವೆಂಬರೊಕ್ಕವ ದಿನ ನೋಡಿಕೊಂಬ ಯಮಕಕ್ಕರಲಿರು ಶೀಳುಯೆಂಬ3ಗುರುಹಿರಿಯರ ನಿಂದಿಪನುಸತಿಮರುಕಕೆ ಹಲ್ಲು ತೆರವನುಹೊರಡಿಪ ತಂದೆ ತಾಯಿಯನುಯಮನರಕಕೆ ಹಾಕುಯೆಂಬುವನು4ನಾನಾರುಯೆಂಬುದು ಅಣಕೆ ಹಿಂದಕ್ಕೆನಿದ್ದೆಯೆಂಬುದು ಒಣಗಿಏನೋಮುದೆಂಬುದು ಜಣಗಿ ಚಿದಾನಂದ-ನೆಂಬುದು ಮುಣಗಿ5
--------------
ಚಿದಾನಂದ ಅವಧೂತರು
ಸಂಸಾರ ಶರಧಿಯೊಳು ಮುಳುಗಿ ಮುಳುಗಿ ಸಂಶಯವಿಲ್ಲದೆಬಳಲುತಿಹ ಮರುಗಿ ಮರುಗಿಪಅಜ್ಞಾನ ತಿಮಿರವೆಂಬ ವ್ಯಾಪಾರದೊಳೋಡಾಡಿಸುಜ್ಞಾನ ಜ್ಯೋತಿಯ ಬಿಡುಗಡೆಯ ಮಾಡಿಭಗ್ನ ಮಾಡಿಯೆ ಶಾಂತ ಬುದ್ಧಿಗಳನೇ ನೋಡಿಪ್ರಾಜÕನಾಗದೆ ಕೆಡುವೆ ನರಕವನು ಕೂಡಿ1ಕಾಲವಿಪರೀತದಿಂದ ಕೇಡುಬರೆ ನೀನದನುಕಾಲಲೊದೆಯದೆ ಬಹಳ ಚಿಂತೆಯನು ಮಾಡಿಓಲಗಿಸಿ ಮನದೊಳಗೆ ತಾ ಕೆಟ್ಟೆಯೆನ್ನುವನುಪಾಲಿಸುವರಿಲ್ಲೆಂದು ಸೇರುವೆಯ ನರಕವನು2ಬೇಡ ಮನದೆ ಇನ್ನುಖುಲ್ಲಗುಣಗಳ ಬಿಟ್ಟುಖೋಡಿಸಂಸಾರವೆಂಬುದನು ಸುಟ್ಟುಗೂಢ ಚಿದಾನಂದಾವಧೂತನೊಳು ಅಳವಟ್ಟುಕೂಡು ಕೆಲಸಾರದಲೆ ದೃಷ್ಟಿ ಆತ್ಮನಲಿಟ್ಟು3
--------------
ಚಿದಾನಂದ ಅವಧೂತರು
ಸಂಸಾರ ಸಂಸಾರವೆಂಬೆರಿ ಸರ್ವದಿವಾರಾತ್ರಿಯಲಿಸಂಸಾರ ಎನಗೊಂದೆ ಅಲ್ಲದೆ ಸಂಸಾರ ಎನಗುಂಟೇನಯ್ಯಪಸತ್ಯವೆಂಬುದೆನ್ನಸತಿಯು ಶಾಂತವೆಂಬುದೆನ್ನಸುತನುಸತ್ಯವೆಂಬುದೆನ್ನ ಸೊಸೆಯು ನಿಜವಿದೀಗಅತ್ಯಧಿಕ ಗುಣಿಯೆಂಬ ಅಗಣಿತದ ಪಿತನಿರಲುಮಿಥ್ಯವಾದ ಸಂಸಾರದಲಿ ಮಗ್ನರಹರೇ1ಬುದ್ಧಿ ಎಂಬುದೆನ್ನಭ್ರಾತೃ ಭಾವನೆ ಎಂಬುದೆನ್ನಭಾವಅದ್ವೈತವೆಂಬ ಅತ್ತೆ ಅಂತಃಕರಣವೆಂಬ ಮಾವಶುದ್ಧಾತ್ಮವೆಂಬ ಬಂಧು ಸಂಬಂಧವೆನಗಿರಲಾಗಿಈ ದ್ವೈತಸಂಸಾರದಲ್ಲಿ ಮಗ್ನರಹರೇ2ಇಂತು ಸಂಸಾರ ಸುಖ ನಿಜದೊಳಗೆನಗಿರಲುಭ್ರಾಂತದಲ್ಲವೆ ನಿಮ್ಮ ಮಾತಿದೆಲ್ಲಚಿಂತಯಕ ಚಿದಾನಂದ ಚಿನ್ಮಯನೆ ತಾ ಬಲ್ಲಅಂತರಂಗದ ಮಾಟಕೆ ಅವನೆ ಸಾಕ್ಷಿ3
--------------
ಚಿದಾನಂದ ಅವಧೂತರು
ಸಂಸಾರದೊಳು ಸಾರದಾವುದು ಸಾರದಾವುದಯ್ಯ ಸುಖತೀರಥಗುರುಸಾರಿದ ಮತಸೇರಿ ತತ್ವ ವಿಚಾರಿಸದೆಪ.ದಾವಕಾಲಕೆದಾವಧರ್ಮವುಈ ವಿಚಾರದಿ ಜೀವಿಸುತ ಮತ್ತಾವ ತರತಮ ಭಾವದಲಿ ರಾಜೀವನೇತ್ರನ ಭಾವಿಸದೆ 1ಇಂದಿರಾಧವಗೆಂದು ಆತ್ಮಗೆಹೊಂದಿಸದೆ ಸ್ವಾನಂದ ಬಯಕೆಗೆಇಂದುನಾಳೆಗೆ ಎಂದು ಅಲಸದೆತಂದೆ ಕೃಷ್ಣಗೆ ವಂದಿಸದೆ 2ತನ್ನಗುರುಮತಿ ಸನ್ಮತದಿ ತಾಧನ್ಯನಾಗಿ ಚಿನ್ಮಯ ಪ್ರಸನ್ನವೆಂಕಟ ಎನ್ನಯ್ಯನವರಪೀಯೂಷವುಣ್ಣದ3
--------------
ಪ್ರಸನ್ನವೆಂಕಟದಾಸರು
ಸಂಸಾರವೆಂಬ ಸಾಗರವನುತ್ತರಿಸುವರೆಕಂಸಾರಿಯೆಂಬ ನಾಮವೊಂದೆ ಸಾಕು ಮರುಳೆ ಪ.ಯತಿಯಾಗಬೇಡ ವೈರಾಗ್ಯವರಿತು ಸಕಲವ್ರತವ ಮಾಡುವೆನೆಂಬ ನೇಮ ಬೇಡ ||ಶ್ರುತಿ - ಸ್ಮøತಿಗಳನರಿತು ನಡೆವೆನೆನಬೇಡ ಶ್ರೀ -ಪತಿಯ ಶ್ರೀನಾಮವೊಂದೆ ಸಾಕು ಮರುಳೆ 1ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡ ||ಅನುವರಿತು ನೀರೊಳಗೆ ಬಿಡದೆ ಮುಳುಗಲುಬೇಡ |ವನಜಾಕ್ಷ ನಾಮವೊಂದೇ ಸಾಕು ಮರುಳೆ 2ತೀರ್ಥಯಾತ್ರೆಗೆ ನೀನು ತಿರುಗಿ ಝೊಂಪಿಸಿ ಕೃ -ತಾರ್ಥನಾದೆನೆಂಬ ಹೆಮ್ಮೆ ಬೇಡ ||ಧೂರ್ತಭಂಜನ ನಮ್ಮ ಪುರಂದರವಿಠಲ ಸಂ -ಕೀರ್ತಿನೆಯ ಮಾಡಿ ಮೋಕ್ಷವನೈದು ಮರುಳೆ ** 3
--------------
ಪುರಂದರದಾಸರು
ಸಾಕು ಮಾಡಿರವ್ವ ರಂಗನ | ಏಕೆ ದೂರುವಿರೆ? ಪಬೆಟ್ಟು ಬಾಯೊಳಗಿಟ್ಟರೆ ರಂಗ - ಕಚ್ಚಲರಿಯನೆ |ಕಟ್ಟಿರುವೆಯನು ಕಂಡರೆ ಬವ್ವೆಂದು - ಚಿಟ್ಟನೆ ಚೀರುವನೆ ||ರಟ್ಟೆಯ ಹಿಡಿದು ನಡಸಲು ರಂಗ -ದಟ್ಟಡಿಇಕ್ಕುವನೆ |ಭ್ರಷ್ಟ ಮಾತುಗಳನೆಷ್ಟೋ ಕಲ್ಪಿಸಿ |ಪಟ್ಟ ಪಟ್ಟಿಗೆ ರಟ್ಟು ಮಾಡುವುದು 1ಅರಿಯದಂತೆ ನೊರೆಹಾಲನು ಕುಡಿವನೆ -ಕರೆಕರೆಮಾಡುವನೆ |ಇರಲು ಮನೆಯೊಳಗೆ ಬರುತ ನಿಮ್ಮ ಮನೆ - ಮೊಸರನು--------------------ಸುರಿಯವನೆ ||ಸರಸಿಜಾಕ್ಷಿಯರೆ ಪರಿಪರಿಯಿಂದಲಿ |ಹರಲಿ ಮಾಡುವುದಿದು ತರವೇನಮ್ಮ 2ಚಿಕ್ಕ ಚಿಕ್ಕ ಗೋವಕ್ಕಳ ಕೂಡ ಚೆಂಡನಾಡುವಾಗ |----------------------------------------ಸಿಕ್ಕಿತೆನುತ ಬಹು ಚಕ್ಕಂದಾಡುತ |ಗಕ್ಕನೆ ಹೋಗಿ ಕೈಯಿಕ್ಕಿ ತೆಗೆದನೆ 3ಮಾಲೆಗಂಬದೋಪಾದಿಯಲಿ ನೀವು ಬಹಳ ಬೆಳೆದಿರೀಗ |ನೀಲಕುಂತಳೆಯೆ ದಧಿಶೋಧಿಸಿ ಓಲಾಡುತ ಕಡೆವಾಗ ||ಬಾಲಕೃಷ್ಣನಿಗೆ ಜೋಲುವ ಕುಚಗಳು |ನಿಲುಕುವ ಬಗೆ ಹೇಗೆ? ||ಖೂಳಸೆಟವಿಯರು ಕಾಳವಾಗಿಹರು |ಕೇಳಿಕೇಳಿ ಬೇಸತ್ತಿಹೆನಮ್ಮ 4ಫುಲ್ಲನಾಭನಿವ ಒಲ್ಲದನಾದರೆ ಎಲ್ಲ ಒಯ್ದಿಡಬೇಕೆ? |ಖುಲ್ಲತನದಿ ನೀವ್ ನಿಲ್ಲಗೊಡದಿಹಿರಿ ಗುಲ್ಲುತನವು ಸಾಕೆ ||--------------------ಸಲ್ಲದು ಈ ನುಡಿ ಪುರಂದರವಿಠಲಗೆ |ಹಲ್ಲೊಳಗಾತನ ಇಟ್ಟಿರಬೇಡಿ 5
--------------
ಪುರಂದರದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಕು ಸಾಕು ಭವಸಂಗ ಚಿತ್ತ-ಪ್ರಾಕೃತರೊಡನೆ ಸಂಬಂಧ ಸುವಿ-ಬಿಟ್ಟದ್ದು ಬಯಸೋದು ಸಲ್ಲ ತಾಕ್ರೂರ ಕಾಮನದೊಂದು ಕಾಟ ಮ-ಚಲಿಸದೆ ಧ್ಯಾನವಮಾಡುಮನಎಲು ಮಜ್ಜಮಾಂಸದ ಪಿಂಡ ಇದುಭಿನ್ನ ಬುದ್ಧಿಯನೆರೆಮಾಣು ಇನ್ನುಕಪಟಕಲ್ಮಷವನೀಡಾಡು ಬಲುವ್ಯಾಪಾರಂಗಳ ತ್ಯಜಿಸು ಬಪ್ಪ
--------------
ಗೋಪಾಲದಾಸರು
ಸಾಕ್ ನಿನ್ನ ಸಂಸಾರವೂ ಓ ಮನವೇಯಾಕ್ ನಿನಗೀ ವ್ಯಾಪಾರವೂಪಬೇಕ್ ಬೇಕಾದುದ ತಂದುಹಾಕಿದುದೆಲ್ಲವ ತಿಂದು ಕಾಗೆ-ಯಂತೆ ಕೂಗುವರುಜೋಕೆಜೋಕೆಪೋಕಮನವೇಅ.ಪಯಜಮಾನ್ನೆ ಸಿಕ್ಕೀತೆಂದು ಪೌರುಷವ್ಯಾಕೋಅಜಪಟ್ಟಕ್ಕೊಡೆಯನೆಂದು ಟ್ರೆಜರಿ ಖಜಾನಿ ಕೀಲಿಕೈಸಿಕ್ಕಿತೆನುತ್ಹಿಗ್ಗಿಸುಜನಸಜ್ಜನರ ಮನ್ನಿಸದ ನಿ-ನ್ನೆಜಮಾನ್ಕೆ ಸುಡುವುದು ಮನವೇ1ಹೊಟ್ಟೆಗೂ ಸಮ ತಿನ್ನದೇ ಒಳ್ಳೆಯದೊಂದುಬಟ್ಟೆಸಹ ಹೊದೆದುಕೊಳ್ಳದೆಕಷ್ಟ ಪಟ್ಟು ಹಣ ಗಳಿಸಿಟ್ಟು ಮರುಗದೆದುಷ್ಟ ಮಕ್ಕಳು ಜುಗಾರಾಡಿ ಕಳೆದರೆಂದುಕೆಟ್ಟ ಪಾಪಿ ಮನವೇ2ಋಣ ರೂಪಸಂಸಾರಕೇ ನಿನಗೆ ಕೈಲಿ ಹಣಇಲ್ದೀ ವ್ಯಾಪಾರ್ಯಾಕೆ ಗುಣವಿಲ್ಲದ್ಹೆಂಡತಿಬಿನವಿಲ್ದ ನೆಂಟರುಬಣಗುಮಕ್ಕಳಿಗಾಗಿದಣಿವುದ್ಯಾತಕೊ ವ್ಯರ್ಥ ಹೆಣದತ್ತ ಮನವೇಬಂಧು ಬಾಂಧವರೆಲ್ಲರೂ ಸಂಪದವಿರೆಬಂದು ಸೇವಿಸಿ ಹೊಗಳ್ವರುಇಂದುನೀ ಗತಿಹೀನನೆನಿಸಲು ಜಗಳವಸಂಧಿಸಬೇಕಾಗಿ ನಿಂದಿಸುವರುಹಿಂದಿನಿಂದಲಿ ಪರಿಪರಿ ಮಂಗಬುದ್ಧಿ ಮನವೇ3ಯಾರಿಗೋಸುಗ ಬಂದಿಲ್ಲಿ ದಣಿವೆ ಸಂಗ-ಡ್ಯಾರೂ ಬರುವರ್ ಕಡೆಯಲಿಯಾರು ಯಮನ ಶಿಕ್ಷೆ ತಡೆವೆನೆಂಬರು ಪೇಳ್ವಾರಿಜನಾಭಗೋವಿಂದನಲ್ಲದೆ ಮುಂದೆಯಾರಿಗ್ಯಾರುಳಿಂಬ್ಹೇಳು ಮನವೇ4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ