ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿಯರು ಮನುಜರು ಅರಿತೂ ಅರಿಯರುಧರೆಗೆ ಒಡೆಯ ಶ್ರೀ ಹರಿಯಲ್ಲದಿಲ್ಲವೆಂದು ಪಶಿವಬಲ್ಲ ಧ್ರುವಬಲ್ಲ ದ್ರೌಪದಿ ಬಲ್ಲಳುಅವನಿ ಪಾಲಿಪ ಜನಕನೃಪ ಬಲ್ಲನು ||ಯುವತಿಗೆ ಶಾಪವಿತ್ತ ಗೌತಮ ಬಲ್ಲನುಭವರೋಗ ವೈದ್ಯ ಶ್ರೀಹರಿಯಲ್ಲದಿಲ್ಲವೆಂದು 1ನಾರದ ಮುನಿ ಬಲ್ಲವಾರಿಜೋದ್ಭವ ಬಲ್ಲಪಾರಾಶರನು ಬಲ್ಲ ಮನು ಬಲ್ಲನು ||ಧೀರ ಭೀಷ್ಮನು ಬಲ್ಲ ಪಾರ್ವತಿ ಬಲ್ಲಳುಕಾರಣಕರ್ತ ಶ್ರೀಹರಿಯಲ್ಲದಿಲ್ಲವೆಂದು 2ದಿಟ್ಟ ಪ್ರಹ್ಲಾದ ಮೊರೆಯಿಟ್ಟ ಗಜೇಂದ್ರ ಬಲ್ಲದೃಷ್ಟಾಂತ ಕಂಡ ಭೃಗುಮುನಿ ಬಲ್ಲನು ||ಕೊಟ್ಟ ಬಲಿಯು ಬಲ್ಲ ಕೆಟ್ಟಜಾಮಿಳ ಬಲ್ಲಸೃಷ್ಟಿಗೆ ಪುರಂದರವಿಠಲನಲ್ಲದಿಲ್ಲವೆಂದು 3
--------------
ಪುರಂದರದಾಸರು
ಅರ್ಚನೆ ಮಾಡಿರಯ್ಯ ಶ್ರೀ ಭಗವದರ್ಚನೆ ಮಾಡಿರಯ್ಯಅರ್ಚನೆ ಮಾಡುವ ಅರ್ಚಕ ಬುಧರಿಗೆಅರ್ಚಿಪ ಪದದಲ್ಲಿಅಚ್ಯುತದೊರೆವನೆಂದುಪ.ಅಂತರಂಗದ ಶುದ್ಧಿಲಿ ತನ್ನ ಬಾಹ್ಯಂತರ ಪರಿಪೂರ್ಣನಚಿಂತಿಸಿ ಸರ್ವಸ್ವತಂತ್ರ ಶ್ರೀ ಹರಿವೇದತಂತ್ರೋಕ್ತ ಪಥದಿ ನಿರಂತರ ಮರೆಯದೆ 1ಪೃಥುಧ್ರುವ ಅಂಬರೀಶ ಸುಧರ್ಮಜ ದಿತಿಜೋದ್ಭವ ಅಕ್ರೂರಕೃತವರ್ಮ ಸಾತ್ಯಕಿ ಯದುಕುಲ ಸುರಖಷಿಯತಿತತಿ ಅರ್ಚಿಸಿ ಅತಿಧನ್ಯರಾದರೆಂದು 2ಅನಂತಮೂರ್ತಿಯೊಳು ತನಗೊಂದು ಧ್ಯಾನಕ್ಕೆ ತಂದುಕೊಂಡುಆನಂದತೀರ್ಥರ ಸಂತತಿಗಳಿಂದತಾನು ಇಷ್ಟನಾಗಿ ನಾರಾಯಣನಾತ್ಮನೆಂದು 3ಬ್ರಹ್ಮಸ್ತೋತ್ರದಿ ಸಹಸ್ರ ಸನ್ನಾಮಪೂರ್ವಕ ಸ್ತೋತ್ರದಿಶ್ರೀಮತ್ಪಂಚಸೂಕ್ತ ಪಂಚಾಮೃತ ಸ್ನಾನರಮ್ಯಾಯುಧ ಕೌಸ್ತುಭಮಣಿ ಮಾಲೆಯಿಂದ 4ಧ್ಯಾನಾವಾಹನ ಸ್ನಾನ ಸುಪಾದ್ಯಾಚಮನಾಘ್ರ್ಯ ಧೂಪದೀಪ ಪ್ರಸೂನ ತುಳಸಿ ಗಂಧಮೋಘ ನೈವೇದ್ಯದಿಂಮಾನಸಾರ್ಚನೆ ಪ್ರತ್ಯಕ್ಷಾಗಲಿ ಎಂತೆಂದು 5ವೀರಾವರ್ಣದ ಮಧ್ಯದಿ ಶ್ರೀ ಮಧುಕೈಟಭಾಂತಕ ಕೃಷ್ಣನಕೋಟಿಕಾಂಚನ ರತ್ನಾಭರಣವೈಜಯಂತಿಕಿರೀಟಕುಂಡಲದಾಮಹಾರ ನೂಪುರಗಳಿಂದ6ದಿವ್ಯಾಂಬರ ಭೂಷಣ ನವರತುನ ಭವ್ಯ ಮಂಟಪವಸನಅವ್ಯಾಕೃತಾಧ್ಯಕ್ಷ ಶ್ರೀಭೂಮುಕ್ತಾಮುಕ್ತಸೇವ್ಯಮಾನನಾಪಾದ ಮೌಳ್ಯಾಂತ ವೀಕ್ಷಿಸಿ7ಬಹು ನೀರಾಂಜನಗಳಿಂದ ಸದ್ವೇದೋಕ್ತ ಗಹಗಹನ ಸೂತ್ರಂಗಳಿಂದಅಹಿವರಶಯನಜ ಭವಾಹಿಪ ವಿಪ್ರವಂದ್ಯಮಹಿಮನನಂತನೆಂತೆಂದು ಪರವಶದಿಂದ 8ತಾಳದಂಡಿಗೆ ಜಾಗಟೆ ಶಂಖ ಮದ್ದಳೆ ಕಂಸಾಳೆಭೇರಿಆಲಾಬುತಂಬೂರಿಭಾಗವತಗಾನಮೇಳೈಸಿ ತುತೂರಿ ವಾಜಂತ್ರಿ ಘೋಷದಿಂದ 9ಅಲವಬೋಧರು ಪೇಳಿದ ಪೂಜಾವಿಧಿಗಳ ಪ್ರದಕ್ಷಿಣೆ ಪ್ರಮಾಣಲಲಿತ ಗೀತ ನೃತ್ಯ ಬಲು ಪ್ರೇಮದಲಿ ಮಾಡಿಹೊಳೆವ ಬಿಂಬಾತ್ಮನ ಕಾಂಬ ಲವಲವಿಕೆಯಿಂದ 10ಆತ್ಮ ಕರ್ತೃತ್ವನೀಗಿಸರ್ವಾಂತರಾತ್ಮ ಪರಮಾತ್ಮನೆಂದುಆತ್ಮ ಮತ್ತೆ ಜಾÕನಾತ್ಮ ಪ್ರೇರಕ ಪ್ರೇರ್ಯಾತ್ಮ ನಿವೇದನ ಭಕ್ತಿ ನವಕಗಳಿಂದ 11ಸರ್ವೇಂದ್ರಿಯ ಮನಸ್ಥ ಮುಖ್ಯಪ್ರಾಣನೋರ್ವ ನಿಯಂತ್ರಹರಿಸರ್ವ ಪ್ರೇರಕನೆಂಬೊ ವಿಜ್ಞಾನಮಾರ್ಗದಿಸರ್ವಕಾಲದಲಿ ಸರ್ವಸಮರ್ಪಣೆಯೆಂದು 12ಮಂದಜನರು ಭಕ್ತಿಲಿ ದೂರ್ವನೀರಿಂದೆ ಪೂಜೆಯ ಮಾಡಲುತಂದೆ ಪ್ರಸನ್ವೆಂಕಟಕೃಷ್ಣ ಕಾರುಣ್ಯಸಿಂಧುಪ್ರಸನ್ನಾತ್ಮಬಂಧು ಮುಕ್ತಿಯನೀವ13
--------------
ಪ್ರಸನ್ನವೆಂಕಟದಾಸರು
ಅವನೆ ಜೀವಾಂಕಿತ ಪ್ರೇತ ನೋಡಿಭುವಿಗೆ ಭಾರನು ಅವನುಹರಿಹಗೆಯನುಪ.ಹರಿಕಥೆಗೆ ಬೇಸತ್ತು ಹರಟೆಯನೆ ಕೇಳುವವಹರಿಯಗುಣ ಹೊಗಳದೊಣಪಂಟ ಬಡಿವವಹರಿಮರೆದು ಮಲಭಾಂಡವನು ತುಂಬಿಕೊಳುವವಹರಿಭಟರ ನಡೆನುಡಿಗೆ ಸೈರಿಸದವ 1ಹರಿಪ್ರಿಯರ ನೆರೆಗಾರದತ್ತತ್ತ ಜಾರುವವಹರಿಯವರಿಗುಣಿಸದೆ ಧನ ಕಳೆವವಹರಿಯಾತ್ರೆಗಂಜಿ ಬಲವನೆ ಕೊಳುವವಹರಿವ್ರತವ ಬಿಟ್ಟಿತರ ವ್ರತ ಕೊಳುವವ 2ಹರಿಪದಾಂಬುಜವಜರಿದುಹಲವು ನೀರ್ಕುಡಿವವಹರಿಲಾಂಛನಿಲ್ಲದ ಚೆಲುವಿಕೆಯವಹರಿಪ್ರಸನ್ವೆಂಕಟೇಶನ ಪಾದಾಬ್ಜವ ಭಜಿಸಿಹರಿಪರದೈವವೆನ್ನದ್ಹೊಲೆಮನದವ3
--------------
ಪ್ರಸನ್ನವೆಂಕಟದಾಸರು
ಅಳದಿರೊ ಸುಮ್ಮನಿರಮ್ಮ ನೀಅಳದಿರೊ ಬವ್ವ ಬಂದಾವಮ್ಮ ಕೃಷ್ಣಮ್ಮ ಪ.ನಾಲ್ಕು ಮೊಗವುಳ್ಳ ಬವ್ವ ಹದಿನಾಲ್ಕು ಜಗವ ಜೋಳಿಯಲ್ಲಿಟ್ಟ ಬವ್ವಗೋಳಿಟ್ಟಿಸುತಿದೆ ಬವ್ವ ನಿನ್ನಕಾಲು ಕಂಡರೆ ಕಚ್ಚಿ ಕೊಂಡೊಯ್ವ ಬವ್ವ 1ಗಗನ ತುಂಬ್ಯಾಡುವ ಬವ್ವ ಪ್ರಾಣಿಗಳ ದೇಹವ ಪೊಕ್ಕು ಚೇಷ್ಟಿಪ ಬವ್ವಜಗವನಲ್ಲಾಡಿಪ ಬವ್ವ ನಿನ್ನಮೊಗವರಿತು ದೂರಲಿ ದಿ? ನಿಂತಿಪ್ಪ ಬವ್ವ 2ಮೊಗವೈದು ಪಣೆಗಣ್ಣ ಬವ್ವ ಪುಲಿದೊಗಲು ಕೆಂಜೆಡೆ ರುಂಡಮಾಲೆಯ ಬವ್ವಬಗೆಯಿಂದ ಪೆಣ್ಣೆತ್ತಿ ಬವ್ವ ತಾಸೊಗಸಿಲೆ ರಾಮರಾಮೆನುತಿದೆ ಬವ್ವ 3ಮೈಯೆಲ್ಲ ಕಣ್ಣಿನ ಬವ್ವÀ ತನ್ನಕೈಯಲ್ಲಿ ವಜ್ರವ ಬೀಸುವ ಬವ್ವಉಯ್ಯಲಾಡುತಲಿದೆ ಬವ್ವ ನಿನ್ನಒಯ್ವೆನೆನುತ ಬಂತು ಹಲಕಾಲ ಬವ್ವ 4ಒಂದಲ್ಲ ನೂರಲ್ಲ ಬವ್ವ ನಿನ್ನಮಂದಿರ ಸುತ್ತುತವನಂತ ಬವ್ವಪೊಂದೊಟ್ಟಿಲೊಳು ನಿದ್ರೆಗೆಯ್ಯೈ ಎನ್ನತಂದೆ ಪ್ರಸನ್ವೆಂಕಟ ಸಿರಿದೊರೆಯೆ 5
--------------
ಪ್ರಸನ್ನವೆಂಕಟದಾಸರು
ಆ ರಣಾಗ್ರದಿ ಭೀಮಗಡ್ಡಯಿಪರಾರು? |ವಾರಿಧಿಮೇರೆದಪ್ಪಲು ನಿಲ್ಲಿಸುವವರಾರು?ಪನಾನಾ ದೇಶದ ಭೂನಾಯಕರಿದ್ದರಲ್ಲವೆತಾನು ದುಶ್ಯಾಸನನ ತತ್ತರಿವಾಗ ||ಮೌನಗೊಂಡರಲ್ಲದೆ ಮುಂಕೊಂಡು ಬಿಡಿಸಿದರೆಆನೆಯ ಕೈಯ ಕಬ್ಬಿಗೆ ಅಂಗಯಿಸುವರಾರು? 1ಘುಡುಘುಡಿಸುತ ರಾಯ ಕುರುಪತಿಯನು ಕೆಡಹಿತೊಡೆಗಳನು ಗದೆಯಿಂದ ತುಂಡಿಸುವಾಗ ||ಕಡುಕೋಪದವ ಹಲಧರನೇನ ಮಾಡಿದ?ಬಡವನ ಕೋಪ ದವಡೆಗೆ ಮೃತ್ಯುವಲ್ಲವೆ? 2ಸಂದಿಗೆ ಸಾವಿರ ಸಿಂಹಸತ್ತ್ವದ ಕೀಚಕನಕೊಂದು ಬಿಸುಡುವಾಗ ಮುಂಕೊಂಡರುಂಟೆ? ||ಚೆಂದದಿಪುರಂದರವಿಠಲದಾಸರು ಮನದಂದಕೆ ಬಂದಂತೆ ನಡೆದುದೆಮಾರ್ಗ3
--------------
ಪುರಂದರದಾಸರು
ಆಗಬಲ್ಲದೆ ಹೀಗಾಗಬಲ್ಲದೆಯೋಗಿಜನವಂದ್ಯನವರಿಗ್ಹೀಗೆ ಯಮನ ಮನೆಯ ಬಾಧೆ ಪ.ಕಾಮನಯ್ಯನರಮನೆಯಪ್ರೇಮದ ದಾಸಿಗೆ ಮಹಾಪಾಮರರಾಕ್ಷಸ ಕ್ರೂರಕಾಮುಕರ ಸಂಯೋಗವಾಗಬಲ್ಲದೆ 1ಸಜ್ಜನರರಸನÀ ಮನೆಯವಜ್ರಪಂಜರದ ಗಿಣಿಯುಮಜ್ಜಿಗೆ ಕಾಣದ ಮುದಿಮಾರ್ಜಾಲನ ಬಾಯಿತುತ್ತಿಗಾಗಬಲ್ಲದೆ 2ರಾಜಾಧಿರಾಜನ ಮನೆಯರಾಜಹಂಸವು ಕುಣಪಭೋಜಕನಾದ ವೃಕನಭೋಜಕನ ಅನುಕೂಲವಾಗಬಲ್ಲದೆ 3ಹರಿಯ ಬೇಂಟೆಯ ಮನೆಯಹರಿಣಗಣಗಳಿಗೆಗಿರಿಯ ಹಳುವದ ಹುಲಿಯಗರಜರದ ಘಸಣೆಯಾಗಬಲ್ಲದೆ 4ಪ್ರಸನ್ನವೆಂಕಟನ ಮನೆಯಕಸಕಡ್ಡಿಯೆಲ್ಲವುವಜ್ರವಿಷಮ ಯಮಬಂಟರೆಂಬಮುಸಲಕೆ ಹುಡಿ ಹಿಟ್ಟು ಆಗಬಲ್ಲದೆ 5
--------------
ಪ್ರಸನ್ನವೆಂಕಟದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಗಲಿ ಹರಿಕೃಪೆ ಭಾಗವತರ ಸಂಗನೀಗುವೆ ನಿಮ್ಮ ದುರಿತಗಳಿರ ಪ.ಹರಿನಂಟರೋಲೈಸಿ ಜ್ಞಾನಾಸ್ತ್ರ ಗಳಿಸುವೆಹರಿನಾಮ ವಜ್ರಕವಚ ತೊಡುವೆಹರಿನಿರ್ಮಾಲ್ಯದ ಉತ್ತಮಾಂಗಾಭರಣವಿಟ್ಟುನೆರೆನಿಮ್ಮ ನಾಮ ನಿರ್ನಾಮವ ಮಾಳ್ಪೆ1ಶ್ರೀಲೋಲನಂಘ್ರಿ ಸಮ್ಮದ ಸೈನ್ಯವ ಕೂಡಿತಾಳ ದಂಡಿಗೆ ಗೀತಾಯುಧಗಳಿಂದಕಾಲಕಾಲಕೆ ನಿಮ್ಮ ಮೇಳವ ಮುರಿದಾಡಿಹಾಳು ಮಾಡುವೆ ಕೈಯಲಿಕಡ್ಡಿಕೊಡುವೆ2ಇಕ್ಷುಸ್ವಾದಾದರೆ ಬೇರಸಹಿತ ನೀವುಭಕ್ಷಿಸಬೇಡಿ ಬಾರದೆ ಮರಳಿಪಕ್ಷಿಗಮನ ಪ್ರಸನ್ನವೆಂಕಟೇಶನಪಕ್ಷದವರಹಗೆಹೊಲ್ಲಸಲ್ಲ3
--------------
ಪ್ರಸನ್ನವೆಂಕಟದಾಸರು
ಆಗಲೆ ಕಾಯಬೇಕು ಅಂಬುಜಾಕ್ಷನೆ ಎನ್ನ |ಈಗ ನೀ ಕಾಯ್ದರೇನು ಕಾಯದಿದ್ದರೇನು ಪಹೊನ್ನು ಹಣ ಎನಗುಂಟು ಹೆಸರಾದ ಮನೆಯುಂಟು |ಚಿನ್ನ-ಚೀನಾಂಬರವುಂಟು ಚೆಲುವುಪ್ಪರಿಗೆಯುಂಟು ||ಮೊನ್ನೆ ಹುಟ್ಟಿದ ಗಂಡು ಮಗು ಒಂದು ಎನಗುಂಟು |ಸನ್ನೆ ಶಕ್ತಿಗುಂದಿದಾಗ ಸಂಗಡಲೊಬ್ಬರ ಕಾಣೆ 1ನಂಟರಿಷ್ಟರು ಉಂಟು ನೆರೆ-ಹೊರೆ ಎನಗುಂಟು |ಎಂಟು ಭಾಗ್ಯಗಳುಂಟು ಬಂದು ಹೋಗುವರುಂಟು ||ಕಂಠಕೆ ಹೊದ್ದಿದ ಕಾಂತೆಯರೆನಗುಂಟು |ಒಂಟಿಯಾಗಿ ಹೋಗುವಾಗ ಸಂಗಡೊಬ್ಬರನು ಕಾಣೆ 2ಒಂದು ಕ್ಷಣ ಮೊದಲಾದವಾತಘಾತಗಳಿಂದ |ಅಂದಿನ ವ್ಯಾಧಿಗಳು ಬಾಧಿಸುತಿರಲು ||ಇಂದಿರೇಶನೆ ನಿನ್ನ ಸಂಗವೆಲ್ಲವೆ ಬಿಟ್ಟೆ |ಬಂದಿನ್ನು ಕಾಯಬೇಕೊ ಪುರಂದರವಿಠಲ 3
--------------
ಪುರಂದರದಾಸರು
ಆಚಾರವಿಲ್ಲದ ನಾಲಿಗೆನೀಚಬುದ್ದಿಯ ಬಿಡು ನಾಲಿಗೆವಿಚಾರವಿಲ್ಲದೆ ಪರರ ದೂಷಿಪುದಕ್ಕೆಚಾಚಿಕೊಡಿರುವಂತ ನಾಲಿಗೆಪ್ರಾರ್ಥಕಾಲದೊಳೆದ್ದು ನಾಲಿಗೆಸಿರಿಪತಿ ಎನ್ನ ಬಾರದೆ ನಾಲಿಗೆಪತಿತ ಪಾವನನಮ್ಮ ರತಿಪತಿ ಜನಕನಸತತವು ನುಡಿಕಂಡ್ಯ ನಾಲಿಗೆ| 1 |ಚಾಡಿ ಹೇಳಲಿ ಬೇಡ ನಾಲಿಗೆ ನಿನ್ನಬೇಡಿಕೊಂಬುವೆನು ನಾಲಿಗೆರೂಢಿಗೊಡೆಯ ಶ್ರೀರಾಮನ ನಾಮವಪಾಡುತಲಿರು ಕಂಡ್ಯ ನಾಲಿಗೆ| 2 |ಹರಿಯ ಸ್ಮರಣಿ ಮಾಡೊ ನಾಲಿಗೆನರಹರಿಯ ಭಜಿಸು ಕಂಡ್ಯ ನಾಲಿಗೆವರದಪುರಂದರವಿಠಲರಾಯನಚರಣಕಮಲವ ನೆನೆ ನಾಲಿಗೆ| 3 |
--------------
ಪುರಂದರದಾಸರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು
ಆಟಪಾಟವ ನೋಡಿ ಧನ್ಯರು ರಂಗಯ್ಯನಾಡ್ವಆಟಪಾಟವ ನೋಡಿ ಧನ್ಯರು ಪ.ಹೊಕ್ಕಳಲ್ಲಿರೊ ಮಗನು ಕಂಡರೆನಕ್ಕಾನೆಂಬ ಹೇಯ ಬಿಟ್ಟುಚಿಕ್ಕರೊಡನೆ ನಂದವ್ರಜದಿಮಕ್ಕಳಂತಲಿಪ್ಪ ರಂಗನಾಟ 1ಅಂಗಳದಲ್ಲಿದ್ದ ಪಂಕದಲ್ಲಿಮುಂಗೈಯ ಮುರಾರಿ ಕೃಷ್ಣಸಂಗದೆಳೆಯ ಮಕ್ಕಳೊಡನೆಹಿಂಗದೆ ಬೈಯ್ಯಾಟವಾಡುವಾಟ 2ಚಿನ್ನ ಬಾ ನೀ ಹಸಿದೆಯೆಂದುಚೆನ್ನ ನೀ ಉಣಿಸಿದರೊಲ್ಲದೆಕನ್ನವಿಕ್ಕಿ ಗೊಲ್ಲರ ಮನೆಯಬೆಣ್ಣೆಮೊಸರಸೂರ್ಯಾಡಿಮೆಲ್ಲುವಾಟ3ರಂಬಿಸಿಗೋಪಿನೀಲವರ್ಣದಬೊಂಬೆ ಬಾಲ ತೋಟಿ ಬೇಡೆನೆಕೊಂಬು ಕೊಳಲು ಸೆಳೆದು ಹೆಟ್ಟಿಕುಟ್ಟುವಡೆÉೂಂಬಿಕಾರ ವೀರಧೀರನಾಡುವಾಟ 4ಅಡಗಿದರ್ಭಕರ ಬಲ್ಪಿನಿಂದಲೆಹಿಡಿದುತಂದು ಚಿಣ್ಣಿ ಚಂಡನಾಡುತಬಡಿದು ಸೋಲಿಸಿ ದೂರು ಬರುವ ಮುನ್ನೆಹುಡಿಯ ಹೊರಳೇಳುವ ತೊಂಡೆಕಾರ ದೇವನಾಟ 5ಮೃತ್ತಿಕೆಯನುಂಬ ಮಗನ ಕಂಡುಮತ್ತೆಶೋದೆ ಅಕ್ಕಟೆಂದುತುತ್ತಿಸಿದ ಮಣ್ಣ ತೆಗೆಯಲಾಗಳೆಮತ್ರ್ಯನಾಕವಿಸ್ತಾರ ತೋರಿದ6ಹಲವು ಹಗ್ಗದಿಂ ಕಟ್ಟಿದಗೋಪಿಲಲನೆಗಚ್ಚರಿಯಾಗಿ ಉಲೂಖಲನ ಎಳೆದು ಮತ್ತಿಯ ಮರಗಳಛಲದಿ ಮುರಿದ ವಿಚಿತ್ರ ಚರಿತ್ರನ 7ಕರುಣದೋರಿ ಗೋಪಾಂಗನೇರತೋರದ ಮೊಲೆಯುಂಡ ವರಶಿಶುಗಳಉರುಳಗೆಡಹ್ಯವರೊಳು ನಲಿವದುರುಳಮಾಯಕಾರಖಿಳರೊಡೆಯನ8ಆರ ಪುಣ್ಯವೆಂತಂತೆ ಲೀಲೆಯತೆÉೂೀರಿ ಮುದ್ದು ಮೋಹವ ಬೀರಿದಸಾರಿದ ಭಕ್ತವತ್ಸಲ ನಮ್ಮಜಾರಚೋರ ಪ್ರಸನ್ವೆಂಕಟೇಶನಾಡುವ ಆಟ 9
--------------
ಪ್ರಸನ್ನವೆಂಕಟದಾಸರು
ಆಣಿಮುತ್ತಿನ ದುಂಡುಮಕರಕುಂಡಲನ |ಬಾನುಪ್ರಭೆಯ ಭುಜಕೀರ್ತಿಯೊಪ್ಪುವನ ||ಕಮಲಾಮನೋಹರ ಕಮಲಜ ಪಿತನ |ರಮಣಿಗೆ ಪಾರಿಜಾತವನೇ ತಂದವನ ||ಕ್ರಮದಿಂದ ಭಸ್ಮಾಸುರನ ಕೊಂದವನ |ರಮೆಯಾಣ್ಮನೆನ್ನಲು ಇಹಪರವೀವನ 3ಶುಕ್ರವಾರ ಪುಲಕು ಪೂಜೆಗೊಂಬವನ |ಸಕ್ಕರೆ-ಹಾಲು-ಬೆಣ್ಣೆಯ ಮೆಲ್ಲುವವನ ||ಗಕ್ಕನೆ ಸುರರಿಗೆ ಅಮೃತವಿತ್ತವನ |ರಕ್ಕಸದಲ್ಲಣ ರಾವಣಾಂತಕನ 4ಪಾಪವಿನಶಾದಿ ಸ್ನಾನವ ಮಾಡಿ |ಪಾಪಗಳೆಲ್ಲ ಬೇಗನೆ ಬಿಟ್ಟು ಓಡಿ ||ಈ ಪರಿಯಿಂದಲಿ ಮೂರುತಿ ನೋಡಿ |ಶ್ರೀಪತಿ ಪುರಂದರವಿಠಲನ ಪಾಡಿ 5
--------------
ಪುರಂದರದಾಸರು
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು
ಆತ್ಮನಿವೇದನ ಭಕುತಿ ತನ್ನಾತ್ಮವನೀವ ಪರಮಾತ್ಮ ವಿಶ್ವಾತ್ಮಗೆ ಪ.ಸರ್ವಕರ್ಮಕರ್ತ ಸರ್ವಕಾಲವರ್ತಸರ್ವಕಾರ್ಯಕೆಹರಿಸ್ವತಂತ್ರನುಸರ್ವಾರ್ಥದಲಿ ಪೂರ್ಣಸರ್ವೇಂದ್ರಿಯ ನಿಯಂತ್ರಸರ್ವದೇಶ ಕಾಲವ್ಯಾಪ್ತ ಗೋಪ್ತನೆಂದು 1ಕಾಸು ಕೋಶಗೇಹದೇಹೇಂದ್ರಿಯ ಪ್ರಾಣಸ್ತ್ರೀ ಸುತ ಪ್ರಿಯ ದಾಸಿ ದಾಸರನುಈಶಗರ್ಪಣೆ ಮಾಡಿ ದಾಸದಾಸನಾಗಿಲೇಶವು ತನಗೆನ್ನದೆ ಸರ್ವಾರ್ಪಿಸುವುದು 2ಜನ್ಮ ಜನ್ಮಾಂತರ ಧರ್ಮ ಕರ್ಮಂಗಳುನಿರ್ಮಲ ಜ್ಞಾನ ವೈರಾಗ್ಯ ಭಕ್ತಿಸ್ವರ್ಮಂದಿರ ಭವಯಾತ್ರೆ ಗರ್ಭಯಾತ್ರೆರಮೆಯ ರಮಣಗರ್ಪಣವೆಂಬ ನಿಷ್ಠೆಯ 3ಅಹರ್ನಿಶಿಶ್ವಾಸೋಚ್ಚ್ವಾಸಾವಸ್ಥಾತ್ರಯಬಹು ಜಪತಪ ಅರ್ಚನೆಸಂಭ್ರಮಬಹುಭಿ:ಶ್ರವಣ ಬಹುಧಾಶ್ರವಣ ಮನನಶ್ರೀಹರಿ ಧ್ಯಾನ ಧ್ಯಾಸಾತ್ಮಾಥರ್Àದಿ 4ಅಲಂಬುದ್ಧಿಯನು ಬಿಟ್ಟು ಅಲಸಮತಿಯನು ಸುಟ್ಟುಅಲಸಲಕ್ಷಣ ವಿಸ್ಮøತಿಯನುನೀಗಿಅಲವಬೋಧಾಚಾರ್ಯ ಮತದವರನು ಪೊಂದಿಲಲಿತ ಪ್ರಸನ್ವೆÉಂಕಟ ಚತುರಾತ್ಮಗೆ 5
--------------
ಪ್ರಸನ್ನವೆಂಕಟದಾಸರು