ಒಟ್ಟು 1747 ಕಡೆಗಳಲ್ಲಿ , 114 ದಾಸರು , 1389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೈ ಬೇಗ ಶ್ರೀರಾಮ ನಮೊ ಭಾನುಕುಲಾಂಬುಧಿ ಸೋಮ ನಮೊತೊರಿಸು ತವಪದಕಮಲ ನಮೊ ನೀರದಶ್ಯಾಮಲವದನ ನಮೊ ಪ ಅಜಹರಪ್ರಾರ್ಥಿತಮೋದ ನಮೊ ಅಯೋಧ್ಯನಗರವತಾರ ನಮೊಸುಜನಪಾಲ ಕುಜನಾರಿ ನಮೊ ಸನ್ಮುನಿಯಾಶ್ರಮ'ಹರ ನಮೊ1 ಸರಯೂತೀರ ಸಂಚಾರ ನಮೊ ಸತ್ಯಪರಾಕ್ರಮ ಸ್ವಾ'ು ನಮೊಪರಮಪುರುಷ ಪದ್ಮಾಕ್ಷ ನಮೊ ಪತಿತೋದ್ಧರ ಪರಮಾತ್ಮ ನಮೊ 2ಕ್ರೂರತಾಟಕಧ್ವಂಸ ನಮೊ ಮಾರೀಚಾದಿ 'ಚ್ಛೇದ ನಮೊಕಾರ್ಮುಕ'ದ್ಯಧುರೀಣ ನಮೊ ಕೌಶಿಕಮಖಸಂರಕ್ಷ ನಮೊ 3ಗೌತಮಸತಿಯಘಭಂಗ ನಮೊ ಕಾಂತಯಹಲ್ಯಾಸ್ತೌತ್ಯ ನಮೊ ಮಾತಾಪಿತಗುರುವೇ ನಮೊ ಮಮುದ್ಧರಿಸು ಮಹಾತ್ಮ ನಮೊ 4ಕ್ರೂರನು ಕುಟಿಲನು ಕುಮತಿ ನಮೊ ಕಲುಷಾರ್ಚಿತ ದುಷ್ಕರ್ಮಿ ನಮಸಾರರ'ತ ಸಂಸಾರಿ ನಮೊ ಸರ್ವ ದೋಷಪರಿಹಾರ ನಮೊ 5ಕೌಸಲೇಯಕನಕಾಂಬ್ರ ನಮೊ ದಾಶರಥೆ ದನುಜಾರಿ ನಮೊಶ್ರೀಶಚನ್ನಪುರಿಧಾಮ ನಮೊ ದಾಸವೈಷ್ಣವಕುಲಪ್ರೇಮ ನಮೊ 6ರಾಮರಾಮಜಯರಾಮ ನಮೊ ರಾಮತುಲಸಿದಳಧಾಮ ನಮೊರಾಮತುಲಸಿಗುರಸ್ವಾ'ು ನಮೊ ರಂಗಸ್ವಾ'ುದಾಸೇಶ ನಮೊ 7
--------------
ಮಳಿಗೆ ರಂಗಸ್ವಾಮಿದಾಸರು
ಬಾರೊ ಬಾರೊ ರಂಗ-ಬಾರೊ ನಮ್ಮನೆಗೆ ಪ ಬೋರನ್ಹಾಕುವೆ ನಡೆಮುಡಿಯ ನಿಮ್ಮಡಿಗೆ ಅ.ಪ ಪರಿಮಳಾಂಬುವಿನಿಂದ-ಪದವ ತೊಳೆಯುವೆನೊ ವರಗಂಧಾಕ್ಷತೆಯನು-ಭರದಿ ಧರಿಸುವೆನೋ 1 ಹೊಸಪಟ್ಟೆಯನು ತಂದು-ಹೊಂದಿಸಿ ರಾಜಿಸುವೆ ಕುಸುಮದಿಂದರ್ಚಿಸಿ ಕೂಡೆ ಸಂತಸವ 2 ಕುಂಕುಮಾಗಿಲು ದಿವ್ಯ ಗುಗ್ಗುಲಹೊಗೆಯ ಬಿಂಕದಿಂದರ್ಪಿಸುವೆನು ಭೋಗಿಸಯ್ಯಾ 3 ಮೇಲೆ ಸದ್ಭಕ್ಷ್ಯ ತಾಂಬೂಲವರ್ಪಿಸುವೆ ಲಾಲಿತ ಮಹಮಂಗಳಾರತಿಯೀವೆ 4 ಬಿಡದೆ ಸಾಷ್ಟಾಂಗವ ನಿಡುವೆ ರಮೇಶ ಪೊಡವಿಯೊಳ್ ಮಹದೇವಪುರದ ಶ್ರೀಹರಿಯೆ5
--------------
ರಂಗದಾಸರು
ಬಾರೊ ಹರಿ ಬಾರೊ ದೊರಿ ಬಾಬಾ ಮುರಾರಿ ನೀ ಪ. ನಾರಿಯೇರು ಕರಿಯುವರು ಹೀರಾದ ಪೀಠಕೆ ಬೇಗಾ ಅ.ಪ. ಪದ್ಮಪಾದ ಪೊಳೆಯುತಲಿ ಪದ್ಮಾಕ್ಷಿಯ ಕೂಡುತಲಿ ಪದ್ಮಾದ ಪೀಠಕೆ ಬೇಗ ಶೌರಿ 1 ಪೀತಾಂಬರ ಧರಿಸುತಲಿ ಪೀತ ವಸ್ತ್ರ ವಲಿಯುತಲಿ ಜಾತಿ ಮುತ್ತಿನ್ಹಾರ ಹಾಕಿ ಸೀತಾಪತಿ ಶ್ರೀ ಕೃಷ್ಣನೆ 2 ಚಂದ್ರ ಸದೃಶಾನನ£ É ಇಂದಿರೇಯ ಪೊಂದಿದನೆ ಮಂದರಾದ್ರಿ ಎತ್ತಿದನೇ ಸುಂದರ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ಗೋಪಿಯ ಬಾಲಾ ಮಾನಸದೊಳುತೋರಿಸೋ ಮುಖಕಮಲಾ ಪ ಸೇರಿಸೊ ನಿನ್ನ ಪದ ಸಾರಸಯುಗಳ-ಪಾರ ಸದ್ಗುಣ ಶೀಲ ಅಪ್ಪಯ್ಯ ಕೃಷ್ಣಅ.ಪ. ವಕ್ತ್ರಲಂಬಿತವಾಲಾ ಮಣಿಮಯ ಚಿತ್ರಶೋಭಿತ ಭಾಲಾರತ್ನಕುಂಡಲ ನವಮೋಕ್ತಿಕ ಮಾಲಾ ಭೃತ್ಯಭಾಷಿತ ಪಾಲಾ 1 ಶುಭ ವೇಷಾಶಂಕರಮುಖ ಸುರಾತಂತಂ ವಿನಾಶ ಕಿಂಕರ ಜನ ಘೋಷ 2 ವೇದವನಿತ್ತವನೇ ವಾರಿಧಿಯೊಳು ಭೂಧರ ಪೊತ್ತವನೆಮೇದಿನಿಯನು ಕೋರಿಲ್ಯಾ ಧರಿಸಿದನೇ ನರ ಮೃಗದಾ ಮೊಗದವನೆ 3 ಧಾರುಣಿ ಅಳೆದವನೆ ಭಾರ್ಗವ ಸೀತಾ ಚೋರನ ಗೆಲಿದವನೆ ನಾರಿಮೋಹನ ಜಿನಾಚಾರ್ಯ ಸುತನೆ ಘೋರ ಮ್ಲೇಂಛರ ಹರನೇ 4 ಸಾಮಜ ಶರಣಾ 5
--------------
ಇಂದಿರೇಶರು
ಬಾರೋ ಬಾರೋ ರಂಗಾ ಬಾರೋ ಬಾರೋ ಪ ಮಾವನ ಮರ್ದನ ಬಾರೋ ಮಾವನ ಮಾವನೆ ಬಾರೋ | ಮಾವನೋಳು ಕಾದಿ ಮಾವನಿತ್ತ ಮಣಿಯ ನೀನು 1 ಮಗನ ಅತ್ಮನಲಿ ಬಂದ ಮಗನ ಮಾವನ ತರಿದೆ 2 ಮೈದುನನಾ ಧರಿಸಿದನಾ ಮೈದುನಾರಿಯಣ್ಣ ಬಾರೋ | ಮೈದುನ ಬೋವಾ ಮಹಿಪತಿ ಪದ ಭಜಿಪರೊಡಿಯಾ ಕೃಷ್ಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ವೆಂಕಟಗಿರಿನಾಥ| ದಯ- ದೋರೈ ಭಕುತರ ಪ್ರೀತ ಪ. ಮಾರಪಿತ ಗುಣಹಾರ ಮಂದರ- ಧಾರ ದೈತ್ಯಸಂಹಾರ ಸುಜನೋ ದ್ಧಾರ ಮಮಹೃದಯಾರವಿಂದಕೆ ಬಾರೋ ಕೃಪೆದೋರೋ ವೆಂಕಟ ಅ.ಪ. ವೃಷಭಾಸುರನೊಳು ಕಾದಿ ಸಾ- ಹಸವ ಮೆರೆಸಿದ ವಿನೋದಿ ವಶಗೈದು ದೈತ್ಯನ ಶಿರವ ಕತ್ತ- ರಿಸುತಲಿ ನೀನಿತ್ತೆ ವರವ ವಸುಧೆಯೊಳಗಿಹ ಸುಜನರನು ಮ- ನ್ನಿಸುತಲಿಷ್ಟವನಿತ್ತು ಕರುಣಾ- ರಸದಿ ಸಲಹುವ ಬಿಸಜನಾಭ ಶ್ರೀ- ವೃಷಭಾಚಲವೊಡೆಯ ವೆಂಕಟ 1 ಅಂಜನೆಯೆಂಬಳ ತಪಕೆ ಭಕ್ತ- ಸಂಜೀವನೆಂಬ ಶಪಥಕೆ ರಂಜಿಪ ಪದವಿತ್ತೆ ಮುದದಿ ಖಿಲ- ಭಂಜನಮೂರ್ತಿ ಕರುಣದಿ| ಮಂಜುಳಾಂಗ ಶ್ರೀರಂಗ ಸುರವರ ಕಂಜಭವವಿನುತಾದಿ ಮಾಯಾ- ರಂಜಿತಾಂಘ್ರಿ ಸರೋರುಹದ್ವಯ ಅಂಜನಾಚಲವೊಡೆಯ ವೆಂಕಟ 2 ಶೇಷನ ಮೊರೆಯ ತಾ ಕೇಳಿ ಬಲು ತೋಷವ ಮನಸಿನೊಳ್ತಾಳಿ ದೋಷರಹಿತನೆಂದೆನಿಸಿ ಕರು- ಣಾಶರಧಿಯ ತಾನೆ ಧರಿಸಿ ಶ್ರೀಶ ಹರಿ ಸರ್ವೇಶ ನತಜನ- ಪೋಷ ದುರ್ಜನನಾಶ ರವಿಶತ- ಭಾಸ ಕೌಸ್ತುಭಭೂಷ ವರ ಶ್ರೀ- ಶೇಷಾಚಲವಾಸ ವೆಂಕಟ 3 ಮಾಧವವಿಪ್ರ ವಿರಹದಿ ಭ್ರಷ್ಟ ಹೊಲತಿಗಳನು ಸೇರ್ದ ಮುದದಿ ಸಾದರದಲಿ ನಿನ್ನ ಬಳಿಗೆ ಬರೆ ನೀ ದಯಾನಿಧಿ ಕಂಡು ಅವಗೆ ಶೋಧಿಸುತ ಪಾಪಗಳೆಲ್ಲವ ಛೇದಿ ಬಿಸುಡುತ ನಿಂದು ವೆಂಕಟ- ಭೂಧರದ ನೆಲೆಯಾದ ನಾದವಿ- ಭೇದಬಿಂದು ಕಲಾದಿಮೂರುತಿ 4 ಧನಪತಿಯೊಳು ತಾನು ಸಾಲ ಕೊಂಡ ಘನಕೀರ್ತಿಯಿಂದ ಶ್ರೀಲೋಲ ವನಿತೆ ಪದ್ಮಾವತಿಪ್ರೀತ ಭಕ್ತ- ಜನಸುರಧೇನು ಶ್ರೀನಾಥ ವನಧಿಶಯನ ಮುರಾರಿ ಹರಿ ಚಿ- ಧ್ವನಿನಿಭಾಂಗ ಸುಶೀಲ ಕೋಮಲ ವನಜನಾಭ ನೀಯೆನ್ನ ಕೃಪೆಯೊಳ- ಗನುದಿನದಿ ಕಾಯೊ ಕೃಪಾಕರ 5 ಛಪ್ಪನ್ನೈವತ್ತಾರು ದೇಶದಿಂದ ಕಪ್ಪವಗೊಂಬ ಸರ್ವೇಶ ಅಪ್ಪ ಹೋಳಿಗೆಯನ್ನು ಮಾರಿ ಹಣ- ಒಪ್ಪಿಸಿಕೊಂಬ ಉದಾರಿ ಸರ್ಪಶಯನ ಕಂದರ್ಪಪಿತ ಭಜಿ- ಸಿರ್ಪವರ ಸಲಹಿರ್ಪ ಕುಜನರ ದರ್ಪಹರಿಸುತ ಕಪ್ಪಕಾಣಿಕೆ ಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6 ಚಾರುಚರಣತೀರ್ಥವೀಂಟಿ ನಿನ್ನೊ- ಳ್ಸಾರಿ ಬರುವ ಪುಣ್ಯಕೋಟಿ ಸೇರಿದೆ ಕೊಡು ಮನೋರಥವ ಲಕ್ಷ್ಮೀ- ನಾರಾಯಣನೆನ್ನೊಳ್ದಯವ ತೋರು ನಿರತ ಸಮೀರಭವ ವರ- ದಾರವಿಂದದಳಾಕ್ಷ ತಿರುಪತಿ ವೀರ ವೆಂಕಟರಮಣ ಮದ್ಬಹು-ಭಾರ ನಿನ್ನದು ಪಾಲಿಸೆನ್ನನು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಕೃಷ್ಣ ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ. ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ 1 ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು 2 ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ 3 ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು 4 ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ 5 ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಡೋ ಭ್ರಾಂತಿ ಜೀವಾ ಬಿಡೋ ಕಾಮ್ಯಸೇವಾ ಅಹಂತಾ ಮಮತ್ವ ಮಹಾಮೂಢಭಾವಾ ಪ ಜಗವನೆಲ್ಲ ಈಶ್ವರನೆ ಸೃಷ್ಟಿಸಿದ ಕೇಳೋ ಇದೋ ನಿನ್ನದೆಂಬುವದು ಏನಿಲ್ಲ ತಾಳೋ ಜಗವ ಸೃಷ್ಟಿಸಿದನಾತ ಪಾಲಿಸುವನಾತ ಇಗೋ ನಾನೆ ಪಾಲಿಸುವೆನೆನ್ನುವದು ವ್ಯರ್ಥ ಭಾರ 1 ನೀ ಧರಿಸಿರ್ದ ದೇಹವಿದ ನೀ ಸೃಷ್ಟಿಸಿದೆಯಾ ಇದೇ ರೀತಿ ಹೆರವರದು ಬಿಡು ನಿನ್ನ ಮಾಯಾ ಇದನು ಪಾಲಿಸುವನಾತನೀಶ್ವರನು ನೋಡಾ ಇದೇ ರೀತಿ ಪಾಲಿಸುವನೆಲ್ಲವನು ನೋಡಾ ಮಹಾ ವಿಶ್ವವೆಲ್ಲ ತಿಳೀ ಈಶಲೀಲಾ 2 ಜಗವ ನಾಶಗೊಳಿಸುವನು ಪ್ರಳಯದಲಿ ಈಶಾ ಮಗುಳೆ ಜಗ ಜೀವರನು ಸೃಷ್ಟಿಸುವ ತಾನೆ ಜಗದಿ ವರ್ಣವಾಶ್ರಮದ ಬಲುಕಾರ್ಯ ಪಾಶಾ ಬಗೆಯಲೀಗ ಪಶುವಿನೊಳು ತಿರುಗಿಸುವನೀಶ ಮಹಾಯೋಗಿ ಶಂಕರನ ಶರಣಾಗೋ ಜೀವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ ಕಾಶಿಯ ಪುರವಾಸಕಂದನ್ನ ತಡೆಯದೆ ಕಾಯನುದ್ಧರಿಸೊ ಪ. ಮೋಕ್ಷದಾಯಕ ರಕ್ಷಿಸೊ ಎನ್ನ ಲಕ್ಷ್ಮೀನಾಯಕಕುಕ್ಷಿಯೀರೇಳು ಭುವನವ ತಾಳ್ವನಭಿಕ್ಷಾಪಾತ್ರ ಶಿವನ ಧ್ಯಾನದೊಳಿರಿಸೊ 1 ಪಾಪನಾಶನ ಪಾಲಿಸೊ ಎನ್ನಸಪರ್Àಭೂಷಣ ತಾತನೆಂದೆನಿಸಿ ತವ-ನಾಮಸ್ಮರಣೆಯ ಪಾರ್ವತೀಪತಿ ಯತಿ ಧ್ಯಾನದೊಳಿರಿಸೊ 2 ಆದಿಮೂರುತಿ ವಿಶ್ವೇಶ ವಿಷ್ಣು-ಪಾದವೆ ಗತಿ ವೀರನೆಂದೆನಿಸುವಸೋದೆಯ ಪುರವಾಸ ವಾದಿರಾಜವರದವಂದೇ ಹಯವದನ 3
--------------
ವಾದಿರಾಜ
ಬಿದ್ದೆ ನಿಮ್ಮಯ ಪಾದದಲ್ಲಿ ನಾ ಪ ಮಧ್ವರಾಯರ ಮನದಲ್ಲಿ ಇದ್ದು ವಲಿವ ವೇದವ್ಯಾಸ ಅ.ಪ. ವೇದ ಓದದ ಶುದ್ಧ ಕಳ್ಳನಾ ಮೆದ್ದು ಮೆಲ್ಲುತ ವೃದ್ಧನಾದೆ ಭಲ್ ಗದ್ದ ದಾಸಗೆ ಕರುಣದಿ ತೋರಿ ಉದ್ಧರಿಸುವ ಬಗೆ ಬಲ್ಲೀ 1 ಅನ್ಯದೇವರ ನಾ ನೊಲ್ಲೆ ನಿನ್ನ ಪಾದವ ಬಿಡಲೊಲ್ಲೆ ಘನ್ನಕರುಣಿ ನೀನು ಬಲ್ಲೆ ನಿನ್ನ ಬಿಡಲು ಜಗಕಲ್ಲೇ 2 ಉತ್ತಮೋತ್ತಮ ದೇವ ಸತ್ಯ ಭೃತ್ಯಜೀವನು ಎಂಬೆನಿತ್ಯ ಭಕ್ತ ಪ್ರಥಮ ಪ್ರಾಣನೀನೇ ಮುಕ್ತಿನಿನ್ನಾಧೀನವೇನೇ 3 ವಿಧಿ ಪರಿವಾರ ಎಂದೆಂದಿಗೂ ಭಿನ್ನರೇನೇ ಎಂದೆಂದು ಅಧೀನರೇನೇ 4 ಶ್ರೀಕೃಷ್ಣವಿಠಲ ಏಕ ಸಕಲ ದೋಷ ವಿದೂರ ಪೊರೆಯೋ ಎಂದು ಕೂಗಿ 5
--------------
ಕೃಷ್ಣವಿಠಲದಾಸರು