ಒಟ್ಟು 2964 ಕಡೆಗಳಲ್ಲಿ , 122 ದಾಸರು , 2123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯ ಮಾಡೋ ಗುರುವೇ ದಯ ಮಾಡೋ ಪ ದಯ ಮಾಡೋ ಗುರುವೇ ನಿನಗೆದುರಾರೀ ಧರೆಯೊಳಗೆ ಸದಮಲ ಮೂರುತೀ ಶ್ರೀ ರಾಗವೇಂದ್ರಾ ಅ.ಪ ಭಕ್ತರ ಪೊರೆಯಬೇಕೆಂಬೀಕಾರಣದಿಂದ ಸಿದ್ಧ ಹಸ್ತಾನಾಗಿ ಬಂದು ನಿಂತಿರುವೇ ಕಂಡ ಕಂಡಾ ದೈವಂಗಳ ಪೂಜಿಸಿ ಪರಿಪರಿಸ್ತುತಿಸುತ ಬಳಲಿ ಬೆಂಡಾದೆನೈ ಸದ್ಗುರುವೇ 1 ಭಕ್ತಿಯಾ ಲಿಟ್ಟು ಮಾಡಿದಪರಾಧಂಗಳ ಒಂದೆಣಿಸಾದೆ ಎನ್ನನು ಮನಿಸು ಪ್ರಭುವೇ 2 ಶ್ರೀ ರಾಘವೇಣದ್ರಾ ದಾರಿಯಕಾಣೆ ಸಂತೈಸು ಜೀಯಾ 3 ಧೊರೆ ರಾಘವೇಂದ್ರಾ ಕಾಯೋ ಶ್ರೀ ಗುರು ರಾಘವೇಣದ್ರಾ 4
--------------
ರಾಧಾಬಾಯಿ
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ದಯವಿರಲಿ ಎನ್ನಲ್ಲಿ ಧರಣಿಧರನೆ ಭಯಗಳನು ಪೋಗಾಡು ಭಕ್ತಜನ ಪ್ರೀಯಾ ಪ ಎರಗಿಸುವದು ಚರಣದಲಿ ಶಿರಸು ಎರಗಲಿ ನಿನ್ನ ಧ್ಯಾನದಲಿ ಮನಸು ಎರವೆರವು ಮಾಡದಲೆ ನಿನ್ನ ನಾಮಾಮೃತವ ಎರದು ಸಾಕುವದು ಸಂತತ ಎನ್ನ ಬಿಡದೆ 1 ಮತಿಗೆಟ್ಟ ಮಾನವಗೆ ಗತಿ ನೀನೆ ಆವಾವಾ ಶ್ರುತಿಗಳೊಳು ಪೇಳುತಿದೆ ವರದೊರದೂ ಕ್ಷಿತಿಯೊಳಗೆ ರವಿ ಶಶಿಯ ಗತಿ ತಪ್ಪಿದರೇನು ಪತಿತ ಪಾವನ ನಿನ್ನ ಕೃಪೆಗೆ ಎಣೆಗಾಣೆ 2 ಕೊಡುವಲ್ಲಿ ಕೊಳುವಲ್ಲಿ ಯಡಿಯಡಿಗೆ ಭಕುತಿರಸ ಕುಡಿಸುವಲಿ ಕಲಕಾಲ ಸಂತೋಷವ ಬಡಿಸಿ ಪೊರೆವಲ್ಲಿ ನಿನಗಾವಲ್ಲಿ ಸರಿಗಾಣೆ ಸಿರಿ ವಿಜಯವಿಠ್ಠಲ ತಿರುಮಲೇಶಾ 3
--------------
ವಿಜಯದಾಸ
ದಶವಿಧ ಬ್ರಹ್ಮರ ಮನೆಯಲಿ ಭಿಕ್ಷವ ಕೊಳುತಿಹ ಅವಧೂತದಶವಿಧ ಬ್ರಹ್ಮರ ವಿವರವನೀಗಲೆ ಪೇಳುವೆ ಪ್ರಖ್ಯಾತ ಪ ಸತ್ಯವು ಶೌಚವು ಸಮಸ್ತ ಬ್ರಹ್ಮವು ಸರ್ವದಿ ದಯವಿಟ್ಟಿಹನುನಿತ್ಯವು ತತ್ವವು ಈತನು ಬ್ರಾಹ್ಮಣರೊಳಗೆ ಬ್ರಾಹ್ಮಣನು 1 ಮಾಯೆಯು ಇಲ್ಲವು ಸ್ನಾನಕರ್ಮದಲಿ ದೇವಗೋವು ಪ್ರಿಯನುಆಯುಧದಿಂ ರಣ ಜಯಿಸುವನೀತನು ಬ್ರಾಹ್ಮಣ ಕ್ಷತ್ರಿಯನು2 ಸಿದ್ಧವು ಕರ್ಮದಿ ದೇವಗೋವುಗಳ ಪೂಜಿಸುತಿಹನೀತಉದ್ದಿಮೆ ಮಾಡುವ ನಾನಾ ಬ್ರಹ್ಮರೊಳು ವೈಶ್ಯನೆ ಇವನೀತ 3 ಚಲ್ಲಣ ಹಾಕಿಯೆ ಮಿಣಿನೊಗ ಹೊತ್ತಿಹನೀತಎಲ್ಲ ಕೃಷಿಯ ವ್ಯವಹಾರವನು ಮಾಡುವ ಬ್ರಾಹ್ಮಣರೊಳು ಇವ ಶೂದ್ರ 4 ಹಲಬರು ಇಹೆವೆಂದು ಸ್ವಯಂಪಾಕಕೆತ್ತುವ ಮಾಡುತ ಬಹುಜಾಲಆಚಾರದ ಸೋಗಿನಲಿ ಹೊರಗುಂಬುವರು ಬ್ರಾಹ್ಮಣಮಾರ್ಜಾಲ 5 ಎಡಗೈ ಅರಿಯನು ಬಲಗೈ ಅರಿಯನು ನುಡಿವನು ಬಿರುಮಾತಉಡುವನು ಹಬ್ಬಕೆ ಧೋತ್ರವ ಬ್ರಾಹ್ಮಣರೊಳಿವನೀಗ ಕುರುಬ 6 ಚೋರರ ಕೂಡಿಯೆ ಪಾಲನೆಕೊಂಬನು ಮಾಡುತ ಬಲು ಘಾತಆರಾದರನು ಅರಿಯನು ಬ್ರಾಹ್ಮಣರೊಳವ ಕಿರಾತ 7 ಕಾಣನು ಭೇದವ ತಂದೆ-ತಾಯಿಯಲಿ ಜೀವರುಗಳ ನೋಡಪ್ರಾಣವ ಕೊಂಬನು ಬ್ರಹ್ಮೆಂತೆನ್ನದೆ ಬ್ರಾಹ್ಮಣರೊಳಿವ ಕಟುಕಾ 8 ಬಗೆ ಬಗೆ ನಾಮವು ನಿರಿವುಡಿಧೋತ್ರವು ಸಂಧ್ಯಾಧಿಗಳವ ದೃಶ್ಯಸೊಗಸನೆ ಮಾಡಿಯೆ ಕಣ್ಣನೆ ಹಾರಿಪ ಬ್ರಾಹ್ಮಣರೊಳಿವ ವೇಶ್ಯಾ9 ಸಹೋದರಿ ರಜಕೀಪರಿಭಾಳಾಮಾಯಾದಿ ಸ್ವಪಚಳ ಹೋಗುವ ಬ್ರಾಹ್ಮಣರೊಳಿವ ಚಂಡಾಲ10 ಪರಿ ದಶವಿಧ ಬ್ರಹ್ಮರುಗಳಲಿ ಭಿಕ್ಷೆಯ ಬೇಡುತಭೂಪ ಚಿದಾನಂದ ಅವಧೂತ ಸದ್ಗುರು ಮನವೊಪ್ಪಿಯೆ ಉಂಬ 11
--------------
ಚಿದಾನಂದ ಅವಧೂತರು
ದಶಾವತಾರ ನೀರೊಳಗೆ ನಿಂತು ನಡುಗಿ ನಾರುವಂಗೆ ಗಂಬೂರಿಕಸ್ತೂರಿ ಲೇಪನದ ಮದುವೆಭಾರ ನಿನ್ನಲಿ ಪೊಳಲು ಕಲ್ಲು ಕೈ ಮುಸುಡಿದಂಗೆಧೀರ ಶೇಷನ ಶಯನದ ಮದವೋಮೋರೆಯಲ್ಲಿ ಯಲ್ಲಾ ಕೆದರಿ ಬೇರು ಮೆಲುವನಿಗೆಸಾರಷಡ್ರಸನ್ನ ಭೋಜನದ ಮದವೋಕರುಳ ವನಮಾಲೆ ಹಾಕಿದವಂಗೆ ಹಾರಪದಕ ಹಾಕಿದ ಮದವೋಮೂರಡಿಯ ಭೂದಾನ ಬೇಡಿದವನಿಗೆ ಸಾರಿದವಂಗಭೀಷ್ಟಗಳ ಪೂರೈಪ ಮದವೋಧರಣಿ ವಿಪ್ರರಿಗಿತ್ತು ಕುಳಿಪುದಕೆ ಸ್ಥಳವಿಲ್ಲವಗೆ ಭುವನಕೀಳುವ ಮದವೋಊರ ಬಿಟ್ಟು ವನ ಚರಿಸುವಂಗೆ ಮೂರು ಧಾಮದಮನೆಯ ಭೋಗದ ಮದವೋಪುರನಾರಿಯ ಬಯಸಿ ಕೊಂಬುವಂಗೆ ವಾರಿಜಭವ ಸುರರವಂದ್ಯಾನೆ ಮದವೋಘೋರ ತುರಗವನೇರಿ ಹಾರಿಸ್ಯಾಡುವಂಗೆ ವೀರಸಿಂಹಾಸನದಲ್ಲಿಕುಳಿತ ಮದವೋಮೂರು ದಿನ ಅರಸುತನ ಸ್ಥಿರವೆಂದು ನೆಚ್ಚಿ ಸಾರಿದವನ್ನಮರೆವದುಚಿತವೆಬಾರದೆ ತಪ್ಪದು ಹಿಂದಿನ ಭವಣೆ ನಿನಗೆ ದೂರ ವಿಚಾರಿಸಿನೋಡೊ ಕರುಣಾ ನಿಧಿಶ್ರೀರಂಗ ರಾಜಗೋಪಾಲ ವಿಠಲ ನಿನ್ನ ಪಾರಿದವರ ಪೊರೆದು ಕೀರ್ತಿಪಡಿಯೊ
--------------
ರಾಜಗೋಪಾಲದಾಸರು
ದಾತ ಸನ್ಮುನಿಗಣ - ನಾಥ ಕಾಮಿತ ಕಲ್ಪವೃಕ್ಷಾ - ಕಲ್ಪವೃಕ್ಷಾ ಆಶ್ರಿತಜನದಕ್ಷಾ ಪ ಧಾತ ಮುಖ ಸುರಮುನಿಯ ಸಂತತಿ ಪ್ರೀತಿ ಪೂರ್ವಕದಿಪ್ಪ ಕಾರಣ ಜೋತಿ ವೃಂದಾವನದಿ ತಾ ನಿ - ರ್ಭೀತ ಮಹಿಮೆಯ ತೋರ್ಪಜಗದಿ ಅ.ಪ ಬಿಕ್ಷುನಾಯಕ ಸರ್ವಾಪೇಕ್ಷದಾಯಕನೆಂಬ ಬಿರಿದು ನೆಂಬ ಬಿರಿದು ಪೊತ್ತಿಹ ಪಾಪ ತÀರಿದು ಪಾದ ಪದುಮವ ವಕ್ಷೋಮಂದಿರದೊಳಗೆ ತಾನಪ - ರೋಕ್ಷಕರಿಸೀ ಸರ್ವಜನರಾ - ಪೇಕ್ಷ ಪೂರ್ತಿಸಿ ಮೆರೆವ ಗುರುವರ 1 ಕ - ಮಂಡುಲಧರ ಹಂಸರೂಪಾ ಅಮಿತ ಪ್ರತಾಪ ಕರ ಮಾ - ತ್ರಿಜಗ - ಸುಜನ ಮನ್ಮನೋ - ಪುಂಡರೀಕ ನಿವಾಸ ನಿರ್ಮಲ 2 ಕಿಟಜ ಸರಿದ್ವರ - ತಟವಾಸ ಗುರುಜಗನ್ನಾಥ ಜಗನ್ನಾಥ ವಿಠಲ ಗುಣಗಾಥ ತಟನಿ ಲಹರೀ ಮಧ್ಯ ತನ ಹೃ ತ್ಪುಟ ಸುನಾವಿಯ ಮಾಡಿ ಸಂತತ ಅಟನಗೈಯುತ ಜಗದಿರಾಜಿಪ ಚಟುಲ ವಿಕ್ರಮ ಕರುಣಸಾಗರ 3
--------------
ಗುರುಜಗನ್ನಾಥದಾಸರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ದಾರಿಯ ತೋರೊ ಮುರಾರಿ ಮುಂದಣ ದಾರಿಯ ತೋರೊ ಮುರಾರಿಪ. ಕಂಸಾರಿ ಭವಾಂಜನ ಪಾರಾವಾರ ಉತ್ತಾರಣಗೈಯುವಅ.ಪ. ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ- ಪಾಯಭೇದಂಗಳ ಮರತೆನಲ್ಲೊ ಕಾಯಜಪಿತ ಕಮಲಾಯತಲೋಚನ ಕಾಯದೊಳಗೆ ಸನ್ನಾಯದಿ ನೋಡುವ 1 ದುಃಖವಿಲ್ಲದೆ ಸುಖವಿಲ್ಲ ಇದ ಒಕ್ಕಣಿಪರೆ ತುದಿಬುಡವಿಲ್ಲ ಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳು ಸಿಕ್ಕಿದೆನಲ್ಲವೊ ರಕ್ಕಸವೈರಿಯೆ2 ಬಲ್ಲೆನೆಂಬರೆ ಬಲವಿಲ್ಲ ಭವ ಬಲ್ಲೆಯೊಳಗೆ ಸಿಲುಕಿದೆನಲ್ಲ ಕಲ್ಲೊಳಗ್ನಿ ಕಲಕಿರುವಂದದಿ ಮನ ದಲ್ಲಿ ನಿನ್ನ ಪದಪಲ್ಲವ ಭಜಿಸುವ3 ಸಾರರಹಿತ ಸಂಸಾರದಿ ಮಾಯಾ ನಾರಿ ಗೈದ ಮಮಕಾರದಿ ಘೋರ ದುರಿತವಪಹಾರಗೈವ ಲಕ್ಷ್ಮೀ ನಾರಾಯಣನು ಸೇರಿ ಸೇವಿಸುವಂಥ 4
--------------
ತುಪಾಕಿ ವೆಂಕಟರಮಣಾಚಾರ್ಯ
ದಾರಿಯ ತೋರೋ ಗೋಪಾಲ ಪ. ವಾರಿಜನಾಭ ವೈಕುಂಠÀಲೋಲಅ.ಪ. ಸಿಕ್ಕಿದೆ ಭವಕಾಡಿನೊಳಗೆಲೆಕ್ಕವಿಲ್ಲದ ಜಂತುಗಳಿಗೆದಿಕ್ಕೊಬ್ಬರಿಲ್ಲವೊ ಎನಗೆಕಕ್ಕಸವ ಕಳೆದು ನಿನ್ನಯ ಪಾದಗಳಿಗೆ1 ಗಜರಕ್ಷಕನು ನೀನೆಂದುಅಜರುದ್ರಾದಿಗಳಂದುನಿಜವಾಗಿ ಪೇಳಿದರೆಂದುಸುಜನÀರೊಡೆಯನೆ ಕೇಳಿದೆ ನಾನಿಂದು 2 ವರದ ಶ್ರೀಹಯವದನ ಬಾರೈಕರೆದೆನ್ನ ದಾರಿಯ ತೋರೈಪರಮ ಭಕ್ತರೊಳಿನ್ನಾರೈಪರಮಪುರುಷ ನೀನಲ್ಲದೆ ಗತಿಯಾರೈ 3
--------------
ವಾದಿರಾಜ
ದಾಸ ಪಟ್ಟವೋ ಸನ್ಯಾಸ ಪಟ್ಟವೋ ಪ ಆಸೆಯಿಂದ ನೆಲೆಯಾದಿಕೇಶವನ್ನ ನೆನೆಯದವಗೆಅ ಮಂಡೆ ಬೋಳು ಮಾಡಿ ನಾಮದುಂಡೆಯನ್ನು ಬರೆದು ಕೆಡಿಸಿಕಂಡಕಂಡವರನು ಕೂಡಿಭಂಡ ಜನ್ಮ ಹೊರೆಯುವವಗೆ 1 ಅವರಿವರ ಕೈಯ ನೋಡಿ ಹ-ಲವು ಕೆಲವು ಮಾತನಾಡಿ ಹ-ಲವ ಹಂಬಲಿಸಿ ದಿ-ನವ ಕಳೆದು ಉಳಿದು ಬಾಳುವಗೆ 2 ಬೆಂದ ಸಂಸಾರವೆಂಬಬಂಧನದೊಳಗೆ ಸಿಲುಕಿಕೊಂಡುಚೆಂದಾದಿಕೇಶವನ್ನಒಂದು ಬಾರಿ ನೆನೆಯದವಗೆ 3
--------------
ಕನಕದಾಸ
ದಾಸನ ಮೇಲಿಷ್ಟು ಬೇಸರವ್ಯಾಕೋ ಶೇಷಶಯನನೆ ನಿನ್ನ ಧ್ಯಾಸದೊಳಿರುವ ಪ ನಶಿಸಿಹೋಗುವ ಕಾಯದ್ವ್ಯಸನವನು ಪರಿಹರಿಸಿ ಹಸನಾದ ಮತಿಯೆನಗೆ ಒಸೆದು ನೀಡೆಂದು ನಿಶಿದಿವದಿ ನಿನ್ನಡಿಕುಸುಮಗಳನಂಬಿ ಮಾ ನಸದಿ ಭಜಿಸಲು ಎನಗೊಶನಾಗದಿರುವಿ1 ಜಡತನದ ಸಂಸಾರ ತೊಡರೆಡರು ಕಡಿದು ಗಡ ಜಡಮತಿಯ ತೊಡೆದೆನಗೆ ದೃಢ ನಿಶ್ಚಯವನು ಕೊಡುಯೆಂದು ದೃಢದಿ ನಿನ್ನಡಿಗೆರಗಿ ಬೇಡಿದರೆ ಒಡಲೊಳಗೆ ನಿಂದೆನ್ನ ಜಡತನಳಿವಲ್ಲಿ 2 ಶ್ರೀಶ ಶ್ರೀರಾಮ ನಿನ್ನ ಧ್ಯಾನಮಾಡಲು ಒಮ್ಮೆ ಅಘ ನಾಶನಲ್ಲೇನು ದಾಸಜನಕರುಣಾಬ್ಧಿ ದಾಸನೊಳ್ದಯವಾಗಿ ಪೋಷಿಸೈ ತವಪಾದ ನಿಜಧ್ಯಾಸವಿತ್ತು 3
--------------
ರಾಮದಾಸರು
ದಾಸನಾದರರೂ ಆದ ಘಟಿಕನಾದ ಸೋಜಿಗಾ ವಾಸುದೇವನ ಬಿಡದೆ ಭಜಿಸಿ ಸುಖಿಪ ಮತ್ತೀಗಾ ಪ ಮಂದಿ ಒಳಗೆ ಶೇರದಾಗಿ ನೊಂದು ಬಳಲಿದಾ ಭವ ತಾಪಂಗಳ ಹೊಂದಿ ಅಳಲಿದಾ ಮಂದಿರವೆಲ್ಲೆ ಗೃಹಿಣಿ ಸುತರೆಲ್ಲೆಂದ್ಹಲುಬಿದಾ ಪಾದ ಪಿಡಿದಾನಂದ ತಾಳಿದಾ 1 ಪಿಡಿದ ಕಾರ್ಯ ಬಿಡದೆ ... ಒಡನೆ ಪೀಡೆ ರಾಶಿಯಾಗಿ ಒಡಲ ಮುಸುಕಿತು ಕಡು ಬಡತನದುರಿಯು ಅಡರಿ ಒಡಲ ಸುತ್ತಿತು ಜಡಜನಾಭನೊಲುಮೆಯಿಂದ ಎಡರು ಪೋಯಿತು 2 ಭರದಿ ಸತೀ ಸುತರು ದುಃಖ ಶರದಿ ವಿಹ್ವಲಾ ಇರದೆ ವ್ಯಾಧಿ ಜಲಂಗಳಾ ಉರಿಯ ಉಮ್ಮಳಾ ತೆರೆಯ ಕಂಗಳಿಲ್ಲಾ ಗತಿಯು ಧರೆಯ ಕತ್ತಲಾ ಪೊರೆದ ನರಸಿಂಹವಿಠಲಾ ನಿರುತ ನಿರ್ಮಲಾ 3
--------------
ನರಸಿಂಹವಿಠಲರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು