ಒಟ್ಟು 29700 ಕಡೆಗಳಲ್ಲಿ , 137 ದಾಸರು , 8961 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ದಯಮಾಡೊ ಕರುಣದಿ ನೋಡೊ ತರಳನ್ನ ಮನ್ನಿಸಿ ಅಭಯವ ನೀಡೊ ಪ ನೆರೆನಂಬಿ ನಿನ್ನ ಮರೆಹೊಕ್ಕೆ ಕರುಣಾ ಭರಣನೆ ನಿಮ್ಮಯ ತೆರೆ ಕೃಪಾನಯನ1 ಹೆಜ್ಜೆ ಹೆಜ್ಜೆಗೆ ಘೋರ ಸಜ್ಜಿಲ್ಲ ಸಂಸಾರ ಸಜ್ಜನಸಂಪದನೆ ನಿರ್ಜರೇಶನೆ ಬಾರೊ2 ಮಾಯಾಮೋಹವ ಬಿಡಿಸಿ ಕಾಯೊ ಶ್ರೀರಾಮ 3
--------------
ರಾಮದಾಸರು
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿ ನಿನ್ನ ರೋಮ ಕೂಪದಲಿ ಜೀವಿಪಸರಸಿಜ ಭವಾಂಡ ಕೋಟಿಯಲಿ ಪ ತುರುಗಿಪ್ಪ ಬ್ರಹ್ಮರುದ್ರಾದಿ ಜೀವರುಗಳುಹರಿ ನಿನ್ನ ಮಹಿಮೆಯ ಪೇರ್ಮೆಯ ಬಲ್ಲರೆ ಅ.ಪ. ಅತ್ತಿಯ ಮರದಿಂದುದುರುವ ಫಲಂಗಳಮೊತ್ತದಲಿರುತಿಪ್ಪ ಮಶಕಂಗಳುಕತ್ತೆಯ ಬಳಗಗಳೆಲ್ಲವು ಕೂಡಿಕೊಂಡುಅತ್ತಿಯ ತರುವಿನಾದ್ಯಂತವ ಬಲ್ಲವÉ 1 ಐವತ್ತು ಕೋಟಿ ಯೋಜನ ವಿಸ್ತರವಾದಭೂವಲಯದ ತಮ್ಮ ಗೂಡಿನಲಿಆವಾಸವಾಗಿಪ್ಪ ಕ್ಷುದ್ರ ಪಿಪೀಲಿಕಜೀವರು ಧರಣಿಯ ಮೇರೆಯ ಬಲ್ಲರೆ 2 ನೊರಜು ಮೊದಲಾಗಿ ಗರುಡ ಪರಿಯಂತಪರಿಪರಿ ಜಾತಿಯ ಪಕ್ಷಿಗಳು ತೆರದಲಿ ಹಾರುವರಲ್ಲದೆ ಗಗನದ ಪರಿಣಾಮವೆಂತೆಂದು ಬಲ್ಲವೆ ಶ್ರೀ ಕೃಷ್ಣ3
--------------
ವ್ಯಾಸರಾಯರು
ಹರಿ ನಿಮ್ಮ ಪದಕಮಲ ನಿರುತ ಧ್ಯಾನದಿ ಎನಗೆದೊರಕಿತೀ ಗುರುಸೇವೆ ಹರಿಯೆ ಪ ಮೂರ್ತಿ ನೀನಾಗಿಕರೆಯ ಸೇರಿಸಿದೆ ಶ್ರೀಹರಿಯೆಅ ಭವ ಬಂಧನವ ಬಿಡಿಸಿಹದನಕ್ಕೆ ನಿಲ್ಲಿಸಿದೆ ಹರಿಯೆ 1 ದೊರೆತನವ ಬಿಡಿಸಿ ಸುಸ್ಥಿರ ಮಾರ್ಗ ತೋರಿಸಿದೆನರಮಾತ್ರದವನೆನದೆ ಹರಿಯೆಗರುವದೊಳಗಿಹನೆಂದು ಅರಿತು ತವದಾಸರಿಗೆಇರದೆ ಅಡಿಯಾಗಿಸಿದೆ ಹರಿಯೆ 2 ಕನಕ ದಳದಲಿ ಬಂದು ಕಲೆತನೆಂದರೆ ಫೌಜುಕನುಕುಮನುಕಾಗುವುದು ಹರಿಯೆಮೊನೆಗಾರತನವೆಂಬ ಶನಿ ಬಿಡಿಸಿ ತವಪಾದವನಜವನು ಸೇರಿಸಿದೆ ಹರಿಯೆ 3 ಮನದೊಳಗೆ ಎರಡಿಲ್ಲ ಮದದಾನೆ ಮೇಲ್ಕಡಿವಮನವ ಹಿಮ್ಮೆಟ್ಟಿಸಿದೆ ಹರಿಯೆಘನವು ತಾಮಸಾಹಂಕಾರ ದುರ್ಮತಿ ದುರಿತಕನಜವನು ಕಿತ್ತೆಸೆದೆ ಹರಿಯೆ4 ಮದರೂಪು ಬಿಡಿಸಿ ಸನ್ಮುದ ರೂಪು ಧರಿಸೆಂದುಹೃದಯದೊಳು ನೀ ನಿಂತೆ ಹರಿಯೆಇದು ರಹಸ್ಯವು ಎಂದು ಹಿತವ ಬೋಧಿಸಿ ಎನಗೆಬದುಕಿಸಿದೆ ಬದುಕಿದೆನು ಹರಿಯೆ5 ದುರದಲ್ಲಿ ನಾಲ್ಕು ದಿಕ್ಕಲಿ ಹೊಕ್ಕು ಹೊಳೆವಂಥಬಿರುದು ಬಿಂಕವ ಕಳೆದೆ ಹರಿಯೆಪರಬಲವ ಕಂಡರೆ ಉರಿದು ಬೆಂಕಿಯಹ ಮನವಸೆರೆ ಹಾಕಿ ನಿಲ್ಲಿಸಿದೆ ಹರಿಯೆ6 ಪರಮ ಮೂರ್ಖನು ನಾನು ವರ ವೀರ ವೈಷ್ಣವರಚರಣವನು ಸೇರಿಸಿದೆ ಹರಿಯೆಕರೆ ಕಳಿಸಿ ಎನ್ನಲ್ಲಿ ಅಳವಿಲ್ಲದಿಹ ನಾಮಸ್ಮರಣೆ ಜಿಹ್ವೆಗೆ ಬರೆದೆ ಹರಿಯೆ 7 ಸ್ವಾರಿ ಹೊರಡಲು ಛತ್ರ ಭೇರಿ ನಿಸ್ಸಾಳಗಳುಭೋರೆಂಬ ಭೋಂಕಾಳೆ ಹರಿಯೆಧೀರ ರಾಹುತರಾಣ್ಯ ಭಾರಿ ಪರಿವಾರದಹಂ-ಕಾರ ಭಾರವ ತೊರೆದೆ ಹರಿಯೆ8 ಪಾದ ಹರಿಯೆಆರಿಗಂಜೆನು ನಾನು ಅಧಿಕಪುರಿ ಕಾಗಿನೆಲೆಸಿರಿಯಾದಿಕೇಶವ ದೊರೆಯೆ 9
--------------
ಕನಕದಾಸ
ಹರಿ ನಿಮ್ಮ ಮಹಿಮೆ ಅರಿಯರಾರಾರು ನರ ಮನುಜರ ಪಾಡೇ ಸುರಮುನಿಗಳೆ ನಿನ್ನರಸಿ ಕೊಂಡಾಡಲು ದೊರೆಯದಿರುವಿ ಘನ ಪರತರಮಹಿಮ ಪ ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆಯುತ ಸೃಷ್ಟಿಗೊಳಿಸುತಿರುವಿ ಇಷ್ಟಭಕುತರ ಕಷ್ಟ ನಿವಾರಿಸಿ ಇಷ್ಟಪೂರೈಸುತಿರುವಿ ನಿಷ್ಠೆಯಿಂದ ಮನಮುಟ್ಟಿಭಜಿಪರನು ಬಿಟ್ಟಗಲದೆ ದೃಷ್ಟಿಯಿಂ ನೋಡುವಿ 1 ಲಾಷೆಯ ನೀಡುತಲಿ ಘಾಸಿ ಮಾಡದೆ ದೋಷರಾಶಿಯ ಕಳೆಯುತಲಿ ಪೋಷಿಸಿ ತ್ರಿಜಗದೀಶನೆ ಈ ಭವ ಪಾದವ ಖಂಡಿಸಿ ವಾಸುಕಿಶಯನ 2 ಮನಸಿಜಾರಿಯಂ ಘನಸಂಕಟದಿಂದ ಕನಿಕರದಿಂ ಕಾಯ್ದಿ ದನುಜಕುಲವನು ಹಣಿದು ಸುರರಿಗೆ ಘನಸೌಖ್ಯವನ್ನಿತ್ತಿ ತನುಮನ ಧನದಿಂ ನೆನೆಯುವ ಭಕುತರ ನೆನವಿಗೆ ಸಿಲುಕದಿ ಚಿನುಮಯ ರಾಮ 3
--------------
ರಾಮದಾಸರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಪರದೈವ ಚತುರ್ದಶ ಲೋಕಕೆ | ಉರಗನ ಮುಂಡಿಕೆ ತುಳುಕಿ ಪೇಳುವೆ ನಾನು ಪ ಮುನಿಗಳೆಲ್ಲ ನೆರೆದು ಸದ್ವರವ ಮಾಡುತಲಿ | ಮನ ಬಂದ ಹಾಗೆ ಅರ್ಪಿಸುತಿರಲು | ಮುನಿ ನಾರದನು ಕೇಳೆ ಭೃಗು ಮುನಿಯನು ಕಳುಹಿ | ವನಜನಾಭನೆ ದೈವವೆಂದು ನಿರ್ಣೈಸಿದರು1 ದುರ್ವಾಸ ಮುನಿಪಗೆ ಚಕ್ರ ಎಡೆಗೊಂಡಿರಲು | ಅಜ ಗಿರೀಶಾ || ಗೀರ್ವಾಣರಾದ್ಯರು ಪರಿಹರಿಲಾರದಿರೆ | ಸರ್ವೋತ್ತಮನೆ ಒಬ್ಬ ಹರಿಯೆಂದು ಸಾರಿದರು 2 ಕರಿ ಬಾಧೆಯನು ಬಡುತಲಿ | ಕಾವವಾತನೆ ದೈವ ಎಂದು ಕೂಗೆ || ನಾವು ತಾವು ಎಂದು ಎಲ್ಲರು ಸುಮ್ಮನಿರೆ | ತಾವ ಕಾಕ್ಷನೆ ಕಾಯ್ದಾ ಪರದೇವತೆ ಎಂದು 3 ಹÀಯಮುಖನು ವೇದಗಳು ಕದ್ದೌಯೆ ಸಕಲರು | ಭಯಬಿದ್ದು ನಿತ್ರಾಣರಾಗಿರಲು || ಜಯದೇವಿ ರಮಣನು ವೇದವನು ತಂದು ಜಗ | ತ್ರಯಕೆ ಒಡೆಯನೆನೆಸಿಕೊಂಡ ಪರನೆಂದು 4 ಮೊದಲು ನಿರ್ಣಯವಾಗಿ ಇರಲಿಕ್ಕೆ ಮಂದಮತಿ | ಮದಡ ಮನುಜರೆಲ್ಲ ನೆಲೆಗಾಣದೆ || ಮದನ ಪಿತ ವಿಜಯವಿಠ್ಠಲನ ಒಲಿಸಿಕೊಳ್ಳದೆ | ಮದ ಗರ್ವದಲಿ ನುಡಿದು ನರಕದಲ್ಲಿ ಬೀಳುವರೂ5
--------------
ವಿಜಯದಾಸ
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ವಲಿಯಾ ನಮ್ಮ ಹರಿವಲಿಯಾ ಪ ಮರುತನ ಪೊಂದದ ಅಸುರರಿಗೆಂದಿಗು ಅ.ಪ. ಹರಿಕಥೆ ಕೇಳದೆ ಹರಟೆಗಳಾಡುತ ಸಿರಿಮದ ವಿಷಯದಿ ಮೆರೆಯುವ ನರರಿಗೆ 1 ಮಾನಿನಿ ಮನೆಯಭಿಮಾನವ ತೊರೆಯದೆ ಜ್ಞಾನವ ಘಳಿಸದ ಶ್ವಾನನಿಗೆಂದಿಗು 2 ತಾನುಡಿ ವಂದದಿ ತಾನೇ ನಡೆಯದ ಜ್ಞಾನಿಯ ತೆರದಿಹ ಹೀನನಿ ಗೆಂದಿಗು 3 ನಾನೇ ಕರ್ತನು ನಾನೇ ಭೋಕ್ತನು ನಾನೇ ಯೆಂಬೀ ದನುಜರಿಗೆಂದಿಗು 4 ದೋಷವಿವರ್ಜಿತ ಶ್ರೀಶನೆದೊರೆ ಸರಿ ದಾಸನು ನಾನಿಹೆ ಪೋಷಿಸುಯೆನ್ನದೆ 5 ಗುರುಗಳ ಪಿಡಿಯದೆ ಹರಿಯಡಿ ಬೀಳದೆ ತರಿಯದವಿದ್ಯೆಯ ಅರಿಯದೆ ವಿದ್ಯೆಯ 6 ವೇದವ ನೊಡದೆ ಸಾಧುಗಳ್ಪಡಿಯದೆ 7 ನನ್ನದು ನಿನ್ನದು ನಿನ್ನದೆ ಸಕಲವು ನೀನೇ ಧನಗತಿ ನನಗೈಯನ್ನದೆ 8 ಸಿರಿಕೃಷ್ಣವಿಠಲನೆ ವರಪುರುಷೋತ್ತಮ ಉರುತರ ಭಕ್ತಿಲಿ ಪೊರೆಯನ್ನದೆ 9
--------------
ಕೃಷ್ಣವಿಠಲದಾಸರು
ಹರಿ ಸಂಕಲ್ಪದ ಕೃಪೆಯಲ್ಲದೆ ಬೇರಿನ್ನಿಲ್ಲವಯ್ಯ ಪ. ಈ ನರವೆಂಬ ದೇಹಕ್ಕೆ ದೃಢ ಭಕುತಿ ಬರಲಿಕೆ ಅ.ಪ. ಸುಕೃತ ಚನ್ನಿಗ ಹರಿ ಬನ್ನ ಬಡಿಸಿ ಅಜಮಿಳನ ತನ್ನ ಸುತನ ನಾರಗನೆಂದು ಕರೆಸಿ ಉನ್ನಂತ ಪದವಿತ್ತ ಚನ್ನಕೇಶವ ಹರಿ1 ರುಕ್ಮಾಂಗದನೇಕಾದಶಿ ವ್ರತವನ್ನು ಚಕ್ರಧರನು ನೇಮದಿ ಮಾಡಿಶಿ ತಕ್ಕ ,ಮಾನಿನಿ ಗಂಟಿಕ್ಕೆ ಜಗದಲವನ ಪ್ರಖ್ಯಾತಿಗೊಳಿಸಿದ ಲಕ್ಕುಮಿರಮಣ ಹರಿ 2 ಮಾನುನಿ ದ್ರೌಪದಿಯನು ಸಭೆಗೆಳಸಿ ಕೃಷ್ಣಾ ನೀನೇ ಗತಿಯೆಂದಾ ತರುಣಿಯೊಳ್ ನುಡಿಸಿ ಅನುಮಾನವಿಲ್ಲದೆ ಜಗದಿ ಪಾಂಡವರಕ್ಷ ನಾನೆಂದಕ್ಷಯವಿತ್ತ ಶ್ರೀ ಶ್ರೀನಿವಾಸ ಹರಿ3
--------------
ಸರಸ್ವತಿ ಬಾಯಿ
ಹರಿ ಹರಿ ಕೃಷ್ಣ ಗೋವಿಂದ ಪ ಮಾಧವ ಗೋವಿಂದ ಅ.ಪ ಕೇಶವ ನಾರಾಯಣ ಗೋವಿಂದ ವಾಸುದೇವ ಶ್ರೀ ಗೋವಿಂದ ಶ್ರೀಶ ಜನಾದರ್Àನ ಗೋವಿಂದ | ಹರಿ ದಾಸ ಜನಾವನ ಗೋವಿಂದ1 ವಾಮನ ದಾಮೋದರ ಗೋವಿಂದ ಕಾಮಿಕದಾಯಕ ಗೋವಿಂದ ರಾಮ ರಘೂತ್ತಮ ಗೋವಿಂದ | ಗುಣ ಧಾಮ ದಯಾನಿಧೇ ಗೋವಿಂದ 2 ಶ್ರೀಧರ ಭೂಧರ ಗೋವಿಂದ ಆದಿಮೂಲ ಶ್ರೀ ಗೋವಿಂದ ವೇದ ವೇದ್ಯ ಹರಿ ಗೋವಿಂದ | ನಿಜ ಪಾದ ಭಜಕಪ್ರಿಯ ಗೋವಿಂದ 3 ಪದ್ಮದಳಾಂಬಕ ಗೋವಿಂದ ಪದ್ಮನಾಭ ಶ್ರೀ ಗೋವಿಂದ ಪದ್ಮಿನಿ ಅರಸನೆ ಗೋವಿಂದ | ಕರ ಪದ್ಮದಿ ಪಿಡಿ ಎನ್ನ ಗೋವಿಂದ4 ಕರಿಗಿರೀಶ ನರಹರಿ ಗೋವಿಂದ ಪರತರ ಮುರಹರ ಗೋವಿಂದ ಗರುಡಗಮನ ಶ್ರೀ ಗೋವಿಂದ | ಹರಿ ಹರಿ ಹರಿ ಹರಿ ಹರಿ ಗೋವಿಂದ 5
--------------
ವರಾವಾಣಿರಾಮರಾಯದಾಸರು
ಹರಿ ಹರಿ ತಾರಿಸೆನ್ನ ಸಹಕಾರಿ | ದಯಬೀರಿ | ಸಿರಿ ಮನೋಹಾರಿ | ಶೌರಿ | ನರಹರಿ ಮರೆಯದೆ ಹೊರಿ ಮನ ಹರಿವಾರು | ಪರಿ ಪರಿ 1 ಸ್ಪುರಿತಾ ಚಕ್ರಗೋಗದಾಬ್ಜ ಭರಿತಾ | ಯುಧನಿರುತಾ | ಶೋಭಿತಾ | ನಿರ್ಜರ ಸರಿತಾ | ಗುರುತದನವರತ ದಲರಿತರ ದುರಿತಪ | ಹರಿ ಚಿದಾನಂದ ಭರಿತ ಸುಚರಿತಾ 2 ಸನ್ನುತ ಮಹಿಪತಿ | ಅಣುಗನೊಡಿಯಾ ಫಣಿವರ ಶಾಯೀ | ಎಣೆಗಾಣದಗಣಿತ | ಗುಣಗಣ ಮಣಿಖಣಿ | ಅಣುರೇಣು ತೃಣಕಣ ವ್ಯಾಪಕ ಪೂರಣ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ನರಹರಿ ಎನ್ನಿಜನರು ಹರಿ ಹರಿ ಎಂದು ಕೊಂಡಾಡಿ ಸಜ್ಜನರು ಪ ನಂದನಂದನನಾ ಮಂದರಧರನಾ ಇಂದ್ರಾದಿ ಸನಕ ಸನಂದನ ವಂದಿತನಾ 1 ತಾಳಭಂಜನನಾ ವ್ಯಾಳಶಯನನÀ ಕಾಳಿಯ ಪೆಡೆಯ ಮೇಳ್ ಕುಣಿದ ಗೋವಳನ 2 ಶರಧಿ ಶಯನನ ವರ ಶಂಖಚಕ್ರಗದಾಬ್ಜ ಶ್ರೀಧರನ 3 ಮಾವ ಮರ್ದನನ ರಾವಣಾಂತಕನ ಗೋವರ್ಧನವನೆತ್ತಿ ಗೋವಕಾಯ್ದವನ 4 ಮಕರ ಕುಂಡಲನ ಮುಕುತಿದಾಯಕನ ಬಕನ ವೈರಿಯ ಕೋಣೆ ಲಕ್ಷ್ಮೀ ರಮಣನ 5
--------------
ಕವಿ ಪರಮದೇವದಾಸರು
ಹರಿ ಹರಿ ಯನ್ನಿರೋ | ಹರಿ ಹರಿಯಂದು ಸ್ಮರಣಗೆ | ತಂದು ಪರಗತಿ ಪಡೆಯಿರೋ ಪ ಸಾಧಾಕಗೆರಗೀ ಬೋಧಕವದಗೀ ಭೇದಿಸಿ ನಿಮ್ಮೊಳು ತಿರುಗಿ | ಸಾಧಕನಾಗಿ ಕ್ರೋಧಕ ಬಾಗಿ ವಾದ ವಿವಾದವ ನೀಗಿ 1 ಎಚ್ಚರ ವಿಡಿದು ಮತ್ಸರ ಕಡಿದು ತುಚ್ಛರ ಸಂಗದಿ ಸಿಡಿದು | ನಿಚ್ಚಟ ಜಡಿದು ಮೆಚ್ಚಿನ ಭಕ್ತಿಯ ಪಡೆದು 2 ಮಹಿಪತಿಸುತ ಪ್ರಭುಕೂಡಿ | ಇಹಪರಿ ಸುಖವ ಸೂರ್ಯಾಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಹರಿಯೆನ್ನಿ ಹರಿಯ ನೆನವಿಗೊಮ್ಮೆ ತನ್ನಿ ಧ್ರುವ ಹಿಡಿದು ನಿಜ ಒಂದು ¥ಥ ಪಡೆಯಬೇಕು ಸ್ವಹಿತ ನೋಡಿ ಗೂಢಿನೂಳು ಗುರುತ ಕೊಡುವ ನೋಡಿ ಗುರುನಾಥ ಒಡಯನಹುದಯ್ಯನೀತ ಪೊಡವಿಯೊಳು ಶ್ರೀನಾಥ ಮಾಡಿ ಭಕ್ತಿ ಏಕಚಿತ್ತ ಕೂಡಿ ಜ್ಞಾನಸನ್ಮತ 1 ಹಿಡಿದು ನೀವು ಗುರುಪಾದ ಮಾಡಬ್ಯಾಡಿ ಭೇದ ಕಡಿಯಬೇಕು ಕಾಮಕ್ರೋಧ ಕೂಡಿ ನಿಜಸುಭೋದ ಬೋಧ ಗೂಢಗುಪ್ತವಾಗಿಹ್ಯದ ಕೊಂಡಾಡುತಿಹ್ಯ ವೇದ ಬಿಡದೆ ಮಹಿಮೆ ನಿರ್ಗುಣದ 2 ನಾವು ನೀವುವೆಂಬ ನುಡಿ ಗೋವಿಸುವದೀಡ್ಯಾಡಿ ಹ್ಯಾವ ಹೆಮ್ಮೆಹಿಡಿಯಬ್ಯಾಡಿ ಭಾವ ಬಲಿದು ಪೂರ್ಣ ನೋಡಿ ಕಾವ ಕರುಣನ ಕೂಡಿ ಭವಬಂಧನ ನೀಗಿ ಬಿಡಿ ಪಾವನ್ನವಾದ ನೋಡಿ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು