ಒಟ್ಟು 29700 ಕಡೆಗಳಲ್ಲಿ , 137 ದಾಸರು , 8961 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿದಾಸರು ದಾಸೋತ್ತಮ ನೀನೆ ಶ್ರೀ ವೈಕುಂಠ-ದಾಸೋತ್ತಮ ನೀನೆ ಪ. ಮಕ್ಕಳುಗಳಿಗೆ ಮೊಮ್ಮಕ್ಕಳುಗಳಿಗೆ ದೇ-ವಕ್ಕಳಿಗೆ ಮನುಮುನಿಗಳಿಗೆಸಿಕ್ಕದ ಪರಬೊಮ್ಮನ ಕೂಸುಮಾಡಿ ತಂ-ದಿಕ್ಕಿ ತೊಡೆಯಮ್ಯಾಲೆ ಆಡಿಸಿ ಮುದ್ದ್ದಿಸುತಿ[ಹ]1 ಅಪರೋಕ್ಷ ಜ್ಞಾನಿಯಾ[ದೆ] 2 ಹರಿಸರ್ವೋತ್ತಮ ಹಯವದನ ಮೂರುತಿ ವೇಲಾ-ಪುರದರಸಗೆ ಪ್ರತಿಬಿಂಬನಾದವರ ವೈಕುಂಠ ದಾಸೋತ್ತಮ ಎನಗೆ ಹರಿಯತೋರಿಸಿ ಪರಮ ಧನ್ಯನಮಾಡಿದ 3
--------------
ವಾದಿರಾಜ
ಹರಿನಾಮ ಘೋಷ ಧ್ರುವ ಎಲ್ಲಿ ಶ್ರೀಹರಿನಾಮ ಘೋಷ ಅಲ್ಲಿ ಸಕಲ ಸುಖ ಸಂತೋಷ ಸುಲಭಲಿಹುದು ಭವಭಯದ ನಾಶ ಹರಿನಾಮ ಘೋಷ 1 ಹರಸುವದಾನಂದದ ಹರುಷ ಹರಿಸುವದು ಕಲಿಮಲ ಕಲುಷ ತ್ವರಿತೋಡಿಸುವದು ಮಹಾಪಾತಕ ದೋಷ ಹರಿನಾಮ ಘೋಷ 2 ಸ್ವಹಿತ ಸಾಧನದ ಸುಉಪದೇಶ ಬಾಹ್ಯಾಂತರದೋರುವ ಪ್ರಕಾಶ ಮಹಿಪತಿಗಿದೆ ನಿತ್ಯವನುಭವದುಲ್ಹಾಸ ಹರಿನಾಮ ಘೋಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿನಾಮ ಭಜನೆಯೊಳಿರು ಇರೂ ಶ್ರೀಹರಿ ಮಹಿಮೆಯ ಭುವಿ ತೋರುರೋರು ಪ ಸಜ್ಜನರ ಸಂಗವ ಮಾಡು ಮಾಡು ದುರ್ಜನರ ಸಂಗವ ಬಿಡೂ ಬಿಡೂ ಮೂಜ್ಜಗದೊಡೆಯನ ಪಾಡು ಪಾಡು ಇನ್ನು ಮುಕುತಿಯ ಬೇಕೆಂದು ಬೇಡು ಬೇಡು 1 ಪಾದ ಹಿಡಿ ಹಿಡಿ ಮನದಿರುವ ಕಾಮ ಕ್ರೋಧ ಕಡಿ ಕಡಿ ಶರಣರ ಕೂಟದೋಳ್ ಕೂಡಿ ಕೂಡಿ ಬೇಗ ನರಹರಿ ಮೂರ್ತಿಯ ನೋಡಿನೋಡಿ 2 ರಾಮನಾಮಾಮೃತ ಕುಡಿ ಕುಡಿ ಅತಿಕಾಮುಕ ದ್ರವ್ಯವ ಬಿಡಿಬಿಡಿ ಸ್ವಾಮಿ ನಾರಾಯಣನೆಂದು ನುಡಿನುಡಿ ಬಹು ಪ್ರೇಮದಿ ಹರಿಕರುಣ ಪಡಿಪಡಿ 3 ಸಕಲಶಾಸ್ತ್ರಗಳ ನೋಡು ನೋಡು ಅದರ ಸಾರಾಂಶ ತಿಳಿದು ಆಡೂ ಆಡೂ ಪ್ರಕಟಿತ ಭಕ್ತರಿಗನ್ನ ನೀಡು ನೀಡು ಇನ್ನು ಪರಮಾತ್ಮನ ಕೊಂಡಾಡು ಆಡು 4 ನರಹರಿಯು ಕಥೆಯ ಕಿವಿಲಿ ಕೇಳುಕೇಳು ಪರಮ ಭಕ್ತರ ಪಾದಕೆ ಬೀಳು ಬೀಳು ಶ್ರೀ ಪರಬ್ರಹ್ಮನ ಸೇವೆಗೆ ಏಳು ಏಳು 5 ಯೋಗ್ಯರ ಕಂಡರೆ ಹಿಗ್ಗೂ ಹಿಗ್ಗೂ ಅತಿ ಭಾಗ್ಯರ ಕಂಡರೆ ತಗ್ಗೂ ತಗ್ಗೂ ಸುಜ್ಞಾನಿಗಳಿಗೆ ಡೊಗ್ಗು ಡೊಗ್ಗು ಇನ್ನು ಶುದ್ಧಾತ್ಮಕರೊಳು ಜಗ್ಗು ಜಗ್ಗು 6 ಸನ್ಯಾಸಿಗಳನು ಸೇರು ಸೇರು ದುಷ್ಟದುರ್ಮಾಗರ ಕಂಡು ದೂರು ದೂರು ಮರ್ಮ ಬಲ್ಲವರಲ್ಲಿ ಜಾರು ಜಾರು ಶ್ರೀ ಮಹಾ 'ಹೆನ್ನ ವಿಠ್ಠಲನ’ ‘ಸಾರೂ ಸಾರೂ’ 7
--------------
ಹೆನ್ನೆರಂಗದಾಸರು
ಹರಿನಾಮ ಮರೆಯ ಬೇಡಯ್ಯ ಪರಿ ದುರಿತಗಳನ್ನು ಅದು ನೀಗುವುದಯ್ಯಾ ಪ ತರಳಪ್ರಲ್ಹಾದನಿಗೊಲಿದ ನಾಮವುಯಿದು ದುರುಳ ರಕ್ಕಸರನ್ನು ತರಿದ ನಾಮವೋ 1 ನಿರುತದಿ ಭಕ್ತರಿಗೊಲಿವ ನಾಮವುಯಿದು ಸರಸದಿ ಭಜಕರ ಪೊರೆವ ನಾಮವೋ 2 ಭಾಮೆಗಕ್ಷಯವಿತ್ತ ಪರಮನಾಮವುಯಿದು ಪ್ರೇಮದಿ ದಾಸರಿಗೊಲಿವ ನಾಮವೋ 3 ಕಾಮಿತ ವರಗಳನೀವ ನಾಮವುಯಿದು ನಿತ್ಯ ಭಜಿಪ ನಾಮವೋ 4 ದಶರೂಪ ಧರಿಸಿದ ದಿವ್ಯ ನಾಮವುಯಿದು ದಶಕಂಠನನು ಕೊಂದ ಶ್ರೀನಾಮವೋ 5 ಕೇಶವ ರೂಪದಿ ಮೆರೆವ ನಾಮವುಯಿದು ಪಾಶವ ಕಡಿಯುವ ನಿಜ ನಾಮವೋ 6 ವರ ದೂರ್ವಾಪುರದ ಶ್ರೀಹರಿಯ ನಾಮವುಯಿದು ಮರೆಯದೆ ಭಕ್ತರ ಪೊರೆವ ನಾಮವೋ 7 ಸಿರಿ ಚನ್ನಕೇಶವನೆಂಬ ನಾಮವೋ 8
--------------
ಕರ್ಕಿ ಕೇಶವದಾಸ
ಹರಿನಾಮದರಗಿಳಿಯು ದೊರಕಿತಿಂದು ವರ ಹಿರಿಯರಾ ಕರುಣದಿಂದೆನಗೆ ಪ. ಸಾರ ಹಾದಿಯಲಿ ವರದ ಮಾಧವನೆಂಬ ಸಾಧಿಸಿ ಕಂಸನ ಗೆದ್ದ ಗೋವಿಂದ 1 ದುಷ್ಟರನು ಶಿಕ್ಷಿಪ ವಿಷ್ಣುವಿನ ನಾಮವು ಕಷ್ಟವನು ಪರಿಹರಿಪ ಮಧುಸೂಧನ ಇಷ್ಟ ಮೂರುತಿ ತ್ರಿವಿಕ್ರಮನ ನಾಮವು ಉತ್ಕøಷ್ಟ ವಾಮನನೆಂಬ ಕಠ್ಠಾಣಿ ಮುತ್ತಿನ 2 ಭವ ಚಂದಿರಾನನನಾದ ದಾಮೋದರನಾ 3 ವಾಸುದೇವ ಎಂಬ ಸಂಕಟವ ಪರಿಹರಿಪ ಪ್ರದ್ಯುಮ್ನನೆಂಬುವನ ಎನ್ನ ಸಂಕುಚಿತ ಮಂಕನಳಿವ ಅನಿರುದ್ಧನ 4 ಪರಮ ಪದವಿಯನಿತ್ತು ಪೊರೆವ ಪುರುಷೋತ್ತಮನ ಪರರ ಬೇಡಿ ಸದ್ವಸ್ತು ಅಧೋಕ್ಷಜನಾ ವರ ಜ್ಞಾನಿಗಳ ಮಾನಸ ನಾರಸಿಂಹನ ಪರಮಪುರುಷನೆಂಬ ಅಚ್ಚುತನ್ನಾ 5 ಮುದ್ದು ಮುಖದೊಳು ತಿಲಕ ತಿದ್ದಿದ ಜನಾರ್ಧನನ ಹದ್ದುವಾಹನನಾದ ಉಪೇಂದ್ರನ ಮುದ್ದು ರಮೆಯರಸ ಶ್ರೀ ಶ್ರೀನಿವಾಸನೆಂಬುವನ 6
--------------
ಸರಸ್ವತಿ ಬಾಯಿ
ಹರಿನಾಮಾಮೃತವನು ಸುರಿದು ಪರಿಪಕ್ವರಾಗಿ ಜರೆಮರಣೆಂದೆಂಬ ಉರುಲನು ಗೆಲ್ಲಿರೊ ಪ ತರಳತನದಿ ಸುರಿದು ಪರಮ ಪ್ರಹ್ಲಾದನು ಪರಮಕಂಟಕ ಗೆಲಿದು ವರಮೋಕ್ಷಕೈದಿದ ನಿರುತದಿಂ ವಿಭೀಷಣ ಸುರಿದು ಈ ಅಮೃತ ಸ್ಥಿರಪಟ್ಟವೇರಿದ್ದು ಅರಿವಿಟ್ಟು ನೋಡಿ 1 ಅಮೃತ ಕರಿ ತನ್ನ ಭಾವದಿ ಪರಮಾಪತ್ತು ಗೆಲಿದದ್ದರಿದು ಸ್ಮøತಿಯಿಂದ ಅಮೃತ ನರನು ಧರೆಯನೆಲ್ಲ ತಿರುಗುತ ಪರತರಧುರವ ಜೈಸಿದರಿದು 2 ಸೇವಿಸಿಅಮೃತ ಪಾವನೆನಿಸಿ ಯುವತಿ ಕೇವಲಮಾನದಿಂ ಬುವಿಯೊಳ್ಬಾಳಿದಳು ದೇವ ಶ್ರೀರಾಮನ ಪಾವನ ನಾಮಾಮೃತ ಭಾವದೊಳ್ಸವಿಯುತ ಕೇವಲರೆನಿಸಿರೊ 3
--------------
ರಾಮದಾಸರು
ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ
ಹರಿನಿನ್ನ ಕರುಣವಿರಾಲಾವ ಭಯವು ಸ್ಮರಣಿ ಮಾತ್ರದಿ ಸಕಲದುರಿತಗಳ ಪರಿಹರಿಪ ಪ ಸಣ್ಣ ವಯದಲಿ ಶ್ರೀ ಜಗನ್ನಾಥದಾಸಾರ್ಯ ಬನ್ನ ಬಡುತಿರೆ ವ್ಯಾಧಿ ಪೀಡೆಯಿಂದ ಘನ್ನ ಕರುಣಾಭ್ದಿ ಶ್ರೀ ಗೋಪಾಲದಾಸರಾ - ಬಿನ್ನಪವನಾಲಿಸಿ ರೋಗಮೋಚನ ಗೈದ 1 ದಾಸಕುಲರತ್ನ ಪ್ರಾಣೇಶ ದಾಸಾರ್ಯರ ಆಸುವಂಶದ ತರುಳ ರೋಗದಿಂದಾ ಯಾಸ ಬಡುವದು ಕೇಳಿ, ಆಶೆಯನೆ ತೊರೆದಿಹನು ನೀ ಸಲಹ ಬೇಕಯ್ಯಾ ಕರುಣದಿಂದಲಿ ನೋಡಿ 2 ವರದೇಂದ್ರ ಗುರುವರರ ಸುರುಚಿರಾಲಯದಲ್ಲಿ ಇರಳ್ಹಗಲು ನಿಮ್ಮ ನಾಮ ಸ್ಮರಿಸುವಂಥ ಪರಿ ಪೀಡಿಸುವದುಚಿತವೇನೊ ಶ್ರೀ ಹರಿ ವಿಚಾರಿಸಿ ನೀನೆಸಿದಯದಿಂದ ನೋಡೊ 3 ವಾಸವಾದ್ಯಮರನುತ ವಾಸುದೇವನೆ ನೀನು ಈ ಸಮಯದೊಳಗಿವನ ಕರುಣದಿಂದ ಪೋಷಿಸಲು ನಿನ್ನ ಪೊಂದಿರುವ ಸದ್ಭಕ್ತರ ದಾಸನೆಂದೆನಿಸಿ ಜೀವಿಸಲಿಯನವರತ 4 ನಿನ್ನನೇ ನಂಬಿರುವೆ ನಿನ್ನನೇ ಪ್ರಾರ್ಥಿಸುವೆ ಧನ್ವಂತ್ರಿ ನೀನೆನ್ನ ಮೊರೆಯಾಲಿಸೊ ಬನ್ನ ಬಡಿಸಲು ಸಲ್ಲ ಇನ್ನು ನೀ ಕರುಣಿಪುದು ವರದೇಶವಿಠಲ 5
--------------
ವರದೇಶವಿಠಲ
ಹರಿಪಾದ ತೀರ್ಥವನು ಕರದಿ ಪಿಡಿದವರೆಲ್ಲ ತಿರುನಾಮದವರೆನಲು ನಂಬಬಹುದೇ ಪ ಪರವಾಸುದೇವನನು ಮರೆತು ಸತಿಸುತರ ವರಾಭರಣವೇ ಹಿರಿದೆಂಬ ನರರಿಲ್ಲವೇ ಅ.ಪ ಹರಿನಿವೇದನಕಾಗಿ ಕರದಿ ಫಲಪುಷ್ಪಗಳ ತರುವವರು ದಕ್ಷಿಣೆಯ ಇರಿಸಿಹರೋ ಎಂದು ಪರಿಪರಿಯ ದೃಷ್ಟಿಯಲಿ ಪರಿಕಿಸುತ ಅಲ್ಲವೆಂ ದರಿತಾಗ ಕೋಪ ನಿಷ್ಠುರ ಗೈಯುವರು 1 ಈಶಾಯನಮಃ ಓಂ ಶ್ರೀಶಾಯ ನಮಃ ಪ ರೇಶಾಯ ನಮಃ ಎಂಬುದಕೆ ಬದಲು ಆಶೋತ್ತರವನಾಂತು ಕ್ಲೇಶಪೂರಿತರಾಗಿ ನಾಶವಾಗಲಿ ಕುಡದಜನರೆಂಬರಕಟಾ 2 ಮಾನವೋತ್ತಮ ಮಾತ್ರ ತಿರುನಾಮಧಾರಿ ಜ್ಞಾನಿ ಇಂಥವನಿಂದ ತೀರ್ಥವನು ಪಡೆದವರು ಶ್ರೀನಾಥ ಮಾಂಗಿರಿಯ ಭಕ್ತರೆನಿಸುವರು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಪಾದ ಮರೆಹೊಕ್ಕು ಪರಿಭವವ ಗೆಲಿರೋ ಪರಮ ಪರತರ ಕರುಣಶರಧಿ ಸಿರಿವರಗೆ ಪ ಕುಲವನು ಗಣಿಸದೆ ಎಳೆಬಾಲನೆಂದಪ್ಪಿ ಬಲು ಉಗ್ರರೂಪದಿಂ ಬಲವಾಗಿ ಕಾಯ್ದ ಖಳನನುಜನೆಂಬುದನು ತಿಲಮಾತ್ರ ತಿಳಿಯದೆ ಒಲಿದು ಸ್ಥಿರಪಟ್ಟವನು ಸುಲಭದಿಂ ಕೊಟ್ಟ 1 ಬಡತನವ ಕಡೆಮಾಡಿ ಸಡಗರದಿ ಕಾಯ್ದ ಕಡುಮುಕ್ತಿಸಂಪದ ತಡೆಯದಲೆ ಕೊಟ್ಟ 2 ತರುಣಿ ದ್ರೌಪದಿಮಾನ ಪೊರೆದಿಂಬುಗೊಟ್ಟ ಕರುಣಾಳು ಶ್ರೀರಾಮ ಜರಹೇವ ಇಲ್ಲದಲೆ ಚರಣದಾಸರ ಮನೆಯ ತುರಗ ತಿರುವಿದನು 3
--------------
ರಾಮದಾಸರು
ಹರಿಪಾದಕಮಲಕ್ಕೆ ಮರೆಹೊಕ್ಕ ಬಳಿಕ ಮರಮರ ಮರುಗುವ ಪರಿಯು ಇನ್ನ್ಯಾಕೋ ಪ ಪರಮಪಾವನ ತನ್ನ ಚರಣದಾಸರ ಸ್ಥಿತಿ ಅರಿಯನೆನೆನ್ನುತ ಸ್ಥಿರವಾಗಿ ನಂಬಿ ಅ.ಪ ಕಂತುಪಿತನಧ್ಯಾನ ಚಿಂತಾಮಣಿಯೆಂದು ಚಿಂತಾದೂರನ ನಿಜಸ್ಮರಣೆಯೇ ಪರಷೆಂದು ಸಂತರೊಡೆಯ ಶ್ರೀಕಾಂತನ ಭಜನೆಯೇ ಭ್ರಾಂತಿನೀಗಿಸುವಂಥ ಕಲ್ಪತರುವಿದೆಂದು 1 ಸೃಷ್ಟಿಕರ್ತನ ಕಥನ ಕಷ್ಟನಿವಾರಣ ಅಷ್ಟಮೂರುತಿ ಕೀರ್ತನಷ್ಟಸಂಪದ ಪೂರ್ಣ ಎಷ್ಟು ಮಾತ್ರಕೆ ತನ್ನ ಇಷ್ಟ ಭಕ್ತರಿಗಿಹ್ಯ ಕಷ್ಟ ನಿವಾರಿಸಿದೆ ಬಿಡನೆಂದು ಗಟ್ಟ್ಯಾಗಿ 2 ಧ್ಯಾನಮೂರುತಿ ಎನ್ನ ಮಾನಾಪಮಾನವು ನಿನ್ನಗೆ ಕೂಡಿತು ಎನಗಿನ್ನೇನೆಂದು ಅನ್ಯಾಯವನು ತ್ಯಜಿಸಿ ಧ್ಯಾನವ ಬಲಿಸಿ ಜಾನಕೀಶನೆ ಭಕ್ತಧೇನು ಶ್ರೀರಾಮೆಂದು 3
--------------
ರಾಮದಾಸರು
ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಭಕುತರ ದರುಶನವು ಅತಿಹರುಷವು ಧ್ರುವ ಹರಿ ನೆನೆವರಾ ನೆರಿಯು ನಿಧಾನದಾ ಕೆರೆಯು ಹರಿ ಸ್ಮರಿಸುವರ ಮರಿಯು ವಜ್ರವರಿಯು ಹರಿ ಭಜಿಸುವರ ಸರಿಯು ನಿಜಘನಾತ್ಮದ ಝರಿಯು ಹರಿ ಮಹಿಪರ ಕರಿಯು ಪರಮಾನಂದದ ತೆರಿಯು 1 ಹರಿಶರಣರ ನುಡಿಯು ಕರುಣದಮೃತಧ್ವನಿಯು ಹರಿಯದಾಸರ ನಡೆಯು ನಿಲಕಡೆಯು ಹರಿಭಕ್ತರಿದ್ದೆಡೆಯು ಪುಣ್ಯಕ್ಷೇತ್ರದ ತಡಿಯು ಹರಿಮಹಿಮರ ಕಡಿಯು ಕ್ಯಾದಿಗ್ಹೊಡಿಯು 2 ಹರಿಭಕ್ತರ ಸಂಗ ಸ್ನಾನಗಂಗ ತುಂಗ ಹರಿಮಹಿಮರ ಅಂಗ ಅಂತರಂಗ ಹರಿಪರಮಾನಂದ ಗುರು ಕರುಣಾಕೃಪಾಂಗ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ