ಒಟ್ಟು 6459 ಕಡೆಗಳಲ್ಲಿ , 126 ದಾಸರು , 3912 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕಂಡೆ ನಾನೊಂದು ಕೌತುಕವ ಧ್ರುವ ಆಯಿ ಅಜ್ಜನ ನುಂಗಿದ ಕಂಡೆ ನಾಯಿ ಲಜ್ಜೆಯ ಹಿಡಿದುದ ಕಂಡೆ ಕಾಯಿ ಹೆಜ್ಜೆಯನಿಕ್ಕುತ ಜಗದೊಳು ರಾಜ್ಯ ಪ್ರದಕ್ಷÀಣೆ ಮಾಡುದು ಕಂಡೆ 1 ಇರುವೆ ವಿಷ್ಣುನ ನುಂಗಿದ ಕಂಡೆ ನರಿಯು ರಾಜ್ಯನಾಳುದ ಕಂಡೆ ಅರಿಯು ಮರಿಯ ನುಂಗಿದ ಕಂಡೆ ಕುರಿಯಿಂದ ಪರಲೋಕಯೆಯ್ದಿದು ಕಂಡೆ 2 ಇಲಿಯು ಯುಕ್ತಿಯದೋರುದು ಕಂಡೆ ಹುಲಿಯು ಭಕ್ತಿಯು ಮಾಡುದು ಕಂಡೆ ಇಳೆಯೊಳು ಮಹಿಪತಿ ಕಳೆವರದೊಳಿನ್ನು ಮುಕ್ತಿ ಸಾಧನದೊಂದು ಬೆಡಗವು ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ನಾನೊಂದು ಕೌತುಕವ ಧ್ರುವ ಭೂಮಿಯ ವೇದನೋದುದ ಕಂಡೆ ರಾಗಭೆÉೀದ ಮಾಡುದಕಂಡೆ ಪಾಡುದು ನಾಕಂಡೆ 1 ಆಕಾಶ ಮಾತುಕೇಳುದು ಕಂಡೆ ಪುರಾಣ ದೃಷ್ಟಿಸುವದು ಕಂಡೆ ಶಬ್ದ ಭೇದಗ್ರಹಿಸುದು ಕಂಡೆ ಪುಣ್ಯ ಶ್ರವಣವು ಕೇಳುದುಕಂಡೆ 2 ಖಣಿಯವಾದುದು ಕಂಡೆ ನಿರ್ಮಿತವಾಗಿಹ ರೂಪವ ಕಂಡೆ 3 ಅಗ್ನಿ ದೃಷ್ಟಿಸುವದು ಕಂಡೆ ಸೃಷ್ಟಿನೆಲ್ಲ ನೋಡುವದು ಕಂಡೆ ದೈವದ್ಯಾವರ ನೋಡುದು ಕಂಡೆ 4 ಗಾಳಿ ಘ್ರಾಣಿಸುವದು ಕಂಡೆ ಪರಿಪರಿವಾಸನೆ ಕೊಂಬುದುಕಂಡೆ ಬೀಜಾಕ್ಷರವು ನುಡಿವದು ಕಂಡೆ 5 ಎರಗಿತು ಪುಣ್ಯಶ್ರೀ ಚರಣದಲಿ ತ್ರಾಹಿಯೆಂದು ಪೊಡವಿಯಲಿ 6 ಬೆರಗಾದನು ಗುರುಕರುಣದಲಿ ಬೆಡಗವ ಕಂಡಿನ್ನು ಬೆರದಾದೆನಯ್ಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಫಂಡರಿರಾಯನ ಸಿರಿಮನ ಪ್ರಿಯನಾ ಪ ಚಂಡವಿಕ್ರಮ ಕರದಂಡ ಮುನಿಪನೊಲಿ ದಂಡಜಾಧಿಪ ಪ್ರಕಾಂಡ ಸುಪೀಠನ ಅ.ಪ. ಮಣಿಮಯ ಮಕುಟ ಮಧುಪನವಿರಪ್ಯರೇ ಪಣೆಯೊಳಿಟ್ಟ ಕಸ್ತೂರಿ ತಿ¯ಕಾ ವನÀರುಹ ಉಪಮ ಲೋಚನಯುಗ ಚಂಪಕ ಸುನಾಸ ವಕುಂಡಲವ ವಿಕಾಸವ ಕದಪಿನ ವಿಲಾಸವ ಮೊಗದ ಮಂದಹಾಸವ 1 ಕುಂದ ಕೋರಕ ದಶನಾವಳಿಯ ಬಿಂಬಾ ಅಧರ ಕಳೆಯ ಕಂಧರ ತ್ರಿವಳಿ ಪುರಂದರ ಇಭಕರ ಪೋಲುವ ಭುಜಯುಗ ವಿಶಾಲವಾ ಕರತಳರಸಾಲವ ನಖರ ಮಲ್ಲಿಕಾಸವ 2 ಅತಿವಿಸ್ತøತ ವಕ್ಷಸ್ಥಳವಾ ಸಿರಿ ಸತಿ ಸದನಾರ್ಕನಂದದಿ ಪೊಳೆವಾ ಕೌಸ್ತುಭ ದೀಧಿತಿ ವಿಲಸಿತ ವೈಜಯಂತಿಯ ಉದರ ರೋಮ ಪಂಕ್ತಿಯಾ ಕುಕ್ಷಿತ್ರಿವಳಿ ಕಾಂತಿಯಾ ನಾಭಿವಲ್ಮೀಕ ದಂತಿಹ 3 ಮುಂಬಿಸಿಲಿನಂತೆ ಕನಕ ಚೈಲಾ ಸುನಿ ತಂಬದಿ ಪೊಳೆವ ಗೋಲಿಯ ಚೀಲಾ ಕುಂಬು ಕೋಕನದ ವಿಡಂಬ ಮೇಖಲ ಕದಂಬವ ಊರು ಕದಳೀ ಜಾನುಗಳಿಂದು ಬಿಂಬನಾ ಆಚರಿಪ ವಿಡಂಬನಾ 4 ಮಾತಂಗಕರವ ಜಂಘೆಗಳ ಗುಲ್ಫ ಜಾತಿಮಣಿಕಾಂಗುಲಿ ಸಂಘಗಳ ಜ್ಯೋತಿ ಬೆಳಗೆ ಜಗನ್ನಾಥ ವಿಠಲ ನಂಘ್ರಿ ಪುಷ್ಕರಾ ಉದಿತ ಶತ ಭಾಸ್ಕರಾ ಗಭಸ್ತಿ ತಿರಸ್ಕರ ಸುಜನರಿಗೆ ಶ್ರೇಯಸ್ಕರ 5
--------------
ಜಗನ್ನಾಥದಾಸರು
ಕಡೆಗಣ್ಣಲಿ ನೀ ನೋಡದಿರೆನ್ನಯ್ಯ ಬಿಡಬೇಡವೊ ಕೈಯ್ಯ ಬಡವರ ಬಂಧು ಬಹುಕೃಪಾಸಿಂಧು ಒಡೆಯ ನೀನಲ್ಲದೆ ಎನಗೆ ಬ್ಯಾರಿಲ್ಲವೊ ಪ. ಶತ ಅಪರಾಧವ ಮಾಡಿದೆನಯ್ಯ ಸೇರಿದೆ ನಾ ನಿನ್ನ ಬೆನ್ನ ಅತಿಪಾತಕಿ ಅಜಾಮಿಳನ ಉದ್ಧರಿಸಿದೆ ಪೃಥಿವಿಯೊಳಗೆ ಬಿರುದಾಂತ ಶ್ರೀಕಾಂತ 1 ನೆಲೆಗಾಣದೆ ನಾನಾಪರಿ ಚಿಂತೆಗೆ ಒಳಗಾದೆನೊ ನಾಹೀಗೆ ಬಳಲಿಸಬ್ಯಾಡವೊ ಭಕ್ತಕುಟುಂಬಿ ನಳಿನದಳಾಂಬಕ ನೀ ಸಲಹೆನ್ನನು 2 ಹೇರೊಪ್ಪಿಸಿದ ಮೇಲ್ಯಾತರ ಸುಂಕವು ಕಾರುಣ್ಯನಿಧಿ ಹೆಳವನಕಟ್ಟೆ ರಂಗಯ್ಯ 3
--------------
ಹೆಳವನಕಟ್ಟೆ ಗಿರಿಯಮ್ಮ
ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ
ಕಡೆಗೋಲ ತಾರೆನ್ನ ಚಿನ್ನವೆ- ಮೊಸರೊಡೆದರೆ ಬೆಣ್ಣೆಬಾರದು, ಮುದ್ದುರಂಗ (ಮಗುವೆ ಪಾ) ಅಣ್ಣನ ಒಡಗೊಂಡು ಬಾರೈಯ-ಸವಿಬೆಣ್ಣೆಯ ಮುದ್ದೆಯ ಮೆಲುವಿರಂತೆಬಣ್ಣದ ಸರವನ್ನು ಕೊರಳಲ್ಲಿ ಹಾಕುವೆಚಿಣ್ಣರೊಡನೆ ಆಡಕಳುಹುವೆ ರಂಗ 1 ಪುಟ್ಟ ಬಚ್ಚಿಯ ತಂದು ನಿನ್ನಯ ಚಿನ್ನದತೊಟ್ಟಿಲ ಕಾಲಿಗೆ ಕಟ್ಟಿಸುವೆಬಟ್ಟಲು ತುಂಬಿದ ಸಕ್ಕರೆ ನಿನಗೀವೆಕಟ್ಟಾಣಿ ಮುತ್ತಿನ ಸರವನೀವೆ 2 ಬಡವರ ಭಾಗ್ಯದ ನಿಧಿಯೆ ಗೋಕುಲ-ದೊಡೆಯನೆ ಮಾಣಿಕ್ಯದ ಹರಳೆಕಡುಮುದ್ದು ಉಡುಪಿನ ಬಾಲಕೃಷ್ಣಯ್ಯದÀುಡುಕು ಮಾಡುವರೇನೊ ಪೆಂಗಳೊಳುರಂಗ3
--------------
ವ್ಯಾಸರಾಯರು
ಕಂಡೆನಿಂದು ಕುಳಿತರಂಗನ ಪುಂಡರೀಕನಯನನ ಅಂಡಜಾರಿಶಯನ ಶ್ರೀರಂಗಪಟ್ಟಣದರಸನ ಪ ಏಳು ಏಳು ಎಂದೆ ತಾಳು ತಾಳೆನೆ ಮನದಿ ನೊಂದೆ ತೋಳ ಚಾಚಿ ವಂದನೆಗೈದೆ (ಅಪೂರ್ಣ) 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ಕೌತುಕವ ಏನೆಂದ್ಹೇಳಲಿ ಸೋಜಿಗವ ಧ್ರುವ ಅಜ ನುಂಗಿತು ಗಜನ ವಾಜಿ ನುಂಗಿತು ಈ ಮೂಜಗವ ಸಂಜೀವ ಸಂಜೀವ 1 ಇಲಿಯು ನುಂಗಿತು ಮೊಲವ ಹಲ್ಲಿ ನುಂಗಿತು ಹಲವು ಕುಲವ ಜಲ ನುಂಗಿತು ಜಲವ ಹುಲಿ ನುಂಗಿತು ಈ ಮಾರ್ಜಲವ 2 ನೊರಜು ನುಂಗಿತು ಗಿರಿ ಪರ್ವತವಇರಹು ನುಂಗಿತು ಸರ್ವ ಬೆರಗಾಯಿತು ಮಹಿಪತಿ ಜೀವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ನಾನೊಂದು ಕೌತುಕ ಕಲಿಯುಗದೊಳಗೊಂದು ಧ್ರುವ ಮೈಯೊಳಗಿಹುದು ಕೈಯೊಳಗೆಂದಿಗೆ ಸಿಲುಕದು ಇಂದು 1 ವೇದಕ ನಿಲುಕದು ಸಾಧಕರಿಗೆ ತಾ ಸಿಲ್ಕುವದು ಭೇದಿಸಿದರೆ ಹೊಳೆವುದು ಸಾಧು ಜನರಿಗೆ ತಿಳಿವುದು 2 ಭಾವಕ ಸುಲಭದೇವಾದಿಗಳಿಗೆ ದುರ್ಲಭ ಜೀವರ ನೆಲೆನಿಭü ಮಹಿಪತಿ ಪ್ರಾಣದೊಲ್ಲಭ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು ನೆಲೆಯಾದುದಿಲ್ಲ ಜವ್ವನವೆಂಬುದೂ ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು ಒಡಲು ನಿನಗೆ ಮರುಳೆ 1 ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ ನೆಟ್ಟನೈದುವರು ನಿನಗೇನಹರು ಮರುಳೆ 2 ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ ಏನಹರು ನಿನಗವರು ಮೃತವಾದ ಬಳಿಕಾ ದೀನನಹೆ ಬಯಲಮಮತೆಗಳೆಂದು ತಿಳಿದುಕೊ ನೀನೆತ್ತಲವರೆತ್ತಲಿಹರವರು ಮರುಳೆ 3 ಮಗನಾವ ತಂದೆಯಾವನು ಜೀವ ಜೀವರಿಗೆ ಮಗನು ತಂದೆಯು ಕರ್ಮವಾಸನೆಗಳಾ ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ ಜಗದೊಳಾಡುವರು ನಿನಗೇನಹರು ಮರುಳೆ 4 ಅತಿಭಕ್ತನೆಂದು ವೈಕುಂಠ ವೇಲಾಪುರದ ಪತಿ ಅರ್ಜುನಗೆ ನಿರೂಪಿಸಿದರ್ಥವ ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5
--------------
ಬೇಲೂರು ವೈಕುಂಠದಾಸರು
ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ದ್ರುವ ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆವು ಗುರುದಿವ್ಯ ಶ್ರೀ ಸುಚರಣ ಮಂಡಲದೊಳಾಯಿತು ಸುಭೂಷಣ ಧ್ರುವ ಇದೆ ನಿಜ ಪುಣ್ಯ ಪೂರ್ವಾರ್ಜಿತ ಇದರಿಟ್ಟು ಬಂತೆನಗಾಯಿತು ಒದಗಿ ಕೈಗೂಡಿತು ತ್ವರಿತ ಹೃದಯಲೆನ್ನಾಯಿತು ಉದಿತ 1 ಕಣ್ಣಾರೆ ಕಂಡೆವು ನಿಜ ಧನ ಜನುಮವೆನ್ನಾಯಿತು ಪಾವನ ಎನ್ನೊಳು ದೋರಿತಾನಂದ ಘನ ಧನ್ಯ ಧನ್ಯವಾಯಿತು ಜೀವನ 2 ಲೇಸು ಲೇಸಾಯಿತಯ್ಯ ನೋಡಿ ಭಾವಿಸಿದ ಸದ್ಗುರು ದಯಮಾಡಿ ವಾಸನೆ ಪೂರಿಸಿತು ಇಲ್ಲೆ ನೋಡಿ ದಾಸಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು - ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಪ ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು 1 ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರÉೂ 2 ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ ಏಳಬೀಳ ಕೊರಳ ಕೊಯ್ದುಬೀಳ ಬೇಡಿ ನರಕಕೆಂದು ಹೇಳ ಬಂದೆನೊ3 ಹೊಳ್ಳದ ಬಿಚ್ಚೇರು ಸಹಿತ ಸುಳ್ಳರೆಲ್ಲ ಕೂಡಿಕೊಂಡುಬೆಳ್ಳನ ಬೆಳತನಕ ನೀರ ತಡಿಯಲಿ ಕುಳಿತುಗುಳ್ಳೆ ಗೊರಜೆ ಕೂಡಿ ತಿಂದು ಕಳ್ಳು ಕೊಡನ ಬರಿದು ಮಾಡುವಂಥಪೊಳ್ಳು ದೈವದ ಗೊಡವೆ ಬೇಡ ನರಕ ತಪ್ಪದು4 ಪಾದ ಬಿಡದೆ ಭಜಿಸಿರೊಜಡದೈವಗಳ ಇಂಥ ಪೂಜೆ ಬೇಡ ಕಾಣಿರೋ 5
--------------
ಕನಕದಾಸ