ಒಟ್ಟು 907 ಕಡೆಗಳಲ್ಲಿ , 89 ದಾಸರು , 729 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಕ್ಕು ನೋಡಿ ಯೋಗೀಶನ ಸೊಕ್ಕು ನೋಡಿಮಿಕ್ಕು ಮೀರಿ ಮೂರಕ್ಕರಗಳಕಂಡುನಕ್ಕು ಪಶ್ಚಿಮಗಿರಿ ಪೊಕ್ಕು ಬೆಳಗಿ ಜನಪಮೂರಕಟ್ಟಿಮೂರನು ಅರಶೀರಗುಟ್ಟಿಆರು ಎಂಟನೆ ಅಟ್ಟಿ ಐದು ಏಳನು ಮೆಟ್ಟಿತೋರುವ ಎರಡು ನಾಲ್ಕನು ತೊಲಗಿಸಿದಾತನ1ಲೋಕದ ಕೂಡ ಕೂಡಿಯೆ ವಿವೇಕ ಬೇಡಏಕವೆಂಬುದು ಬಿಡ ಅನೇಕವೆಂಬುದ ನಾಡಮೂಕ ಪದಗಳೆಂದು ನಿರಾಕರಿಸುತಲಿಹನು2ಅಕ್ಷಯಮುಚ್ಚಿ ತೆರದು ತೆರದಕ್ಷಯ ಮುಚ್ಚಿರಕ್ಷಿಸುತಿಪ್ಪ ಭಾಳೇಕ್ಷಣ ತಾನೆಂದು-ಪೇಕ್ಷೆಮಾಡುತ ಸರ್ವವ ನಿರೀಕ್ಷಿಸುತಿರುವವನ3ಮತಗಳ ನೆನೆದು ಶಾಸ್ತ್ರಗಳ ಗೆಲಿದುಪಾತಾಳಕಿಟ್ಟ ಮತಿ ಮೋಕ್ಷಗಳ ಬಿಟ್ಟ ತಿರುಗಿಸಿ ತಿರುಗಿಸಿ ಹುಟ್ಟಸತತ ಕಾಲದಿ ತನ್ನ ಮತಿ ಹಿಡಿಯೆಂಬನ4ಏನುಪಾಯ ಈ ಯೋಗಿಗೆ ಇನ್ನೇನು ನ್ಯಾಯತಾನಾಗದಗುರುಚಿದಾನಂದನ ತಾ ಕಂಡುತಾನೆ ತಾನಾಗಿ ತೋರುವ ನಿಜ ಯೋಗಿಯ5
--------------
ಚಿದಾನಂದ ಅವಧೂತರು
ಸ್ಮರಣೆಯೊಂದಿರೆ ಸಾಲದೆ ಶ್ರೀಹರಿನಾಮ ಪ.Àರುಣಾಕರ ನಿಜ ಶರಣ ರಕ್ಷಾಮಣಿತರಣಿಕೋಟಿಭಾಸುರ ಶ್ರೀನಾರಾಯಣನ 1ಕಾಲನವರ ಕಂಡು ಬಾಲನ ಕರೆದಗೆಸಾಲೋಕ್ಯವಿತ್ತ ಶ್ರೀನಾರಾಯಣನ 2ತರಳಪ್ರಹ್ಲಾದನು ಕರೆಯೆ ಕಂಬದಿ ಬಂದುನರಮೃಗೇಂದ್ರನಾಗಿ ಪೊರೆದ ನಾರಾಯಣನ 3ಮಾತೆಯ ಸವತಿಯ ಮಾತಿಗಾಗಿ ಬಂ-ದಾತನ ಕಾಯ್ದ ಶ್ರೀನಾಥ ನಾರಾಯಣನ 4ಮೊಸಳೆಯ ಬಾಧೆಗೆ ಹಸಿದು ಕೂಗಲಾಗಿಬಸವಳಿದಿಹನ ರಕ್ಷಿಸಿದ ನಾರಾಯಣನ 5ಕಾದೆಣ್ಣೆಯೊಳು ಕರುಣೋದಯದಿ ಸುಧನ್ವ-ಗಾದರಿಸಿ ರಕ್ಷಿಸಿದಾದಿನಾರಾಯಣನ 6ಮಾರಜನಕರಮಾರಮಣ ಲಕ್ಷ್ಮೀ-ನಾರಾಯಣನ ಪಾದಾರವಿಂದಯುಗ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸ್ವಾಮಿ ನೀ ಮಾಡಿದುಪಕಾರಾ ಕಿಂತು ಪಾಮರನಪ್ರತಿಉಪಕಾರಾ | ಭೀಮಾಶಂಕರ ಗುರುವಾಗುವ ಪ್ರಕಾರಾ |ಈ ಮನಕೆ ಎಂದಿಗೆ ತೋರದಾಕಾರಾ ||ಸ್ವಾಮಿ||ಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲಕ್ಷ ಎಂಬತ್ತು ಮೂರೊಂದನು |ಯೋನಿಕುಕ್ಷಿಯೊಳಗೆಹೊಕ್ಕು ಬಂದೆನೊ | ಭಕ್ಷ್ಯಾಭಕ್ಷ್ಯವ ಮೆದ್ದೆನು |ಅನುಪೇಕ್ಷಿಯೊಳಗೆ ಮುಳುಗಿದ್ದೆನೋ | ಭಿಕ್ಷುಕರೊಡೆಯನಿರೀಕ್ಷಿಸಿ ಕೃಪಾ ಕಟಾಕ್ಷದಿ ಸದ್ಗುರು ರಕ್ಷಿಸಿದಂಥಾ1ನೀರೊಳು ಜೀವಿಸುತಿದೆ ಮೀನಾ |ನೀರು ಕಾರಣವರಿಯದು | ಆ ಮೀನಾ |ಪಾರವಿಲ್ಲದಂಥದೀ ಮೀನಾ |ಪರವಸ್ತುಖೂನನರಿಯದು ಮನ ಮೀನಾ |ನಾರೇರ ನೋಟಕ್ಕೆ ಸೇರಿ ತಾ ಹೋದೀತು |ಸಾರವಸ್ತುವ ತಂದು ತೋರಿಸಿದಂಥ2ತನುವು ತನ್ನೊಳಗೆ ತಾ ತೋರದು |ತನು ಮನದ ವೃತ್ತಿಗೆ ತಾ ಬಾರದು |ಜನನ ಮೃತ್ಯಂಗಳು ದೋರದು |ಎನಗೆ ಸಾಧು ಸಜ್ಜನ ಸಂಗ ದೊರಕದು |ಘನಗುರುಶಂಕರ ಚಿನುಮಯರೂಪ- |ದನುಭವಕೆ ತಂದು ಎನಗೆ ನೀ ಕೊಟ್ಟಂಥ3
--------------
ಜಕ್ಕಪ್ಪಯ್ಯನವರು
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯಕಾಮಿತಪ್ರದ ಸುರಸ್ತೋಮಾಗ್ರಗಣ್ಯ ಪ.ಜನ್ಮ ಜನ್ಮಾಂತರದ ಕರ್ಮಾನುಸಾರದಿಂದುರ್ಮತಿಗೆಳಸಿಯಹಮ್ಮಮತೆಯಲಿದುರ್ಮದಾಂಧನಾದೆದುರಿತದೂರವಿರಿಸುನಿರ್ಮಲಜ್ಞಾನೋಪದೇಶವನಿತ್ತೆನ್ನ 1ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತಭಕ್ತಿಸೌಭಾಗ್ಯವಿರಕ್ತಿಯ ನೀಡುಭೃತ್ಯವತ್ಸಲ ಭವಭಯಹರ ಗಿರಿಜಾ-ಪುತ್ರನೆ ಪರಮಪವಿತ್ರ ಸುಚರಿತ್ರನೆ 2ಸುರಲೋಕವನುಕಾವಧುರಧೀರ ಪ್ರಭು ನಿನಗೀನರಲೋಕವನು ಕಾವದುರು ಕಷ್ಟವೇನುಪರಿಶುದ್ಧ ಸ್ಥಾನಿಕಧರಣೀಸುರಕುಲ-ಗುರುವೆಂದು ಚರಣಕ್ಕೆ ಶರಣಾಗತನಾದೆ 3ಸಾಕುವಾತನು ನೀನೆ ಸಲಹುವಾತನು ನೀನೆಬೇಕು ಬೇಡೆಂಬುವರ ನಾ ಕಾಣೆ ದೊರೆಯೆಲೋಕೇಶ ಸುಕುಮಾರ ಶೋಕಮೋಹವಿದೂರನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ 4ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆಸುತ್ರಾಮಾದಿ ಸುರಮೊತ್ತ ಪೂಜಿತನೆಕರ್ತಲಕ್ಷ್ಮೀನಾರಾಯಣನ ಸಾರೂಪ್ಯನೇದೈತ್ಯದಲ್ಲಣ ವಲ್ಲೀದೇವಿ ಮನೋಹರನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹನುಮಂತ ದೇವ ನಮೋ ಪವನಧಿಯನು ದಾಟಿ ರಾವಣನ ದಂಡಿಸಿದೆ ಅ.ಪಅಂಜನೆಯ ಆತ್ಮದಿಂದುದಿಸಿ ನೀ ಮೆರೆದೆಯೋಕಂಜಸಖಮಂಡಲಕೆ ಕೈ ದುಡುಕಿದೆ ||ಭುಂಜಿಸೀರೇಳು ಜಗಂಗಳನು ಉಳುಹಿದೆ ಪ್ರ-ಭಂಜನಾತ್ಮಜ ಗುರುವೆ ಸರಿಗಾಣೆ ನಿನಗೆ 1ಹೇಮಕುಂಡಲಹೇಮಯಜೊÕೀಪವೀತಖಿಳಹೇಮಕಟಿಸೂತ್ರಕೌಪೀನಧಾರೀ ||ರೋಮ ಕೋಟಿ ಲಿಂಗ ಸರ್ವಶ್ಯಾಮಲ ವರ್ಣರಾಮಭೃತ್ಯನೆ ನಿನಗೆ ಸರಿಗಾಣೆ ಗುರುವೆ 2ರಾಮ-ಲಕ್ಷನರ ಕಂಡಾಳಾಗಿ ನೀ ಮೆರೆದೆ |ಭೂಮಿಜೆಗೆ ಮುದ್ರೆಯುಂಗುರವನಿತ್ತೆ ||ಆ ಮಹಾ ಲಂಕಾ ನಗರವೆಲ್ಲವನು ಸುಟ್ಟುಧೂಮ ಧಾಮವ ಮಾಡಿ ಆಳಿದೆಯೊ ಮಹಾತ್ಮ 3ಆಕ್ಷಯ ಕುಮಾರಕನ ನಿಟ್ಟೊರಸಿ ಬಿಸುಟು ನೀರಾಕ್ಷಸಾಧಿಪ ರಾವಣನು ರಣದಲಿ ||ವಕ್ಷಸ್ಥಳದಲ್ಲಿ ಶಿಕ್ಷಿಸಲು ಮೂರ್ಛೆಯ ಬಗೆಯರಕ್ಷಿಸಿದೆ, ರಕ್ಷಿಸಿದೆ ರಾಯ ಬಲವಂತ 4ಶ್ರೀಮದಾಚಾರ್ಯ ಕುಲದವನೆಂದೆನಿಸಿದೆಯೈಶ್ರೀ ಮಹಾಲಕುಮಿ ನಾರಾಯಣಾಖ್ಯ ||ಶ್ರೀ ಮನೋಹರಪುರಂದರವಿಠಲ ರಾಯನಸೌಮ್ಯಮನದಾಳು ಹನುಮಂತ ಬಲವಂತ 5
--------------
ಪುರಂದರದಾಸರು
ಹರಿಗೆ ಸರಿ - ಮಿಗಿಲೆನಿಪರಿಲ್ಲ ದೈವಂಗಳೊಳು |ಗುರುಮಧ್ವರಾಯರಿಗೆ ಸರಿಯಿಲ್ಲ ರಾಯರೊಳು |ಪರಮವೈಷ್ಣವರಿಗೆಣೆಯಿಲ್ಲ ಲೋಕದೊಳೆಂದುಬಿಡದೆ ಡಂಗುರವ ಹೊಯಿಸಿ ||ಬಿರುದ ಪಸರಿಸಿ ಢಕ್ಕೆಯವ ನುಡಿಸಿ ಎನ್ನುತಲಿ |ಶರಣು ಹೊಕ್ಕರ ಪಣೆಯ ದುರ್ಲೇಖಮಂ ತೊಡೆದು |ಬರೆದು ವೈಷ್ಣವಲಿಪಿಯ ಶುದ್ಧಾತ್ಮರಂಮಾಳ್ವ ಗುರುರಾಯರನು ಭಜಿಸಿರೈ 1ಭುವನಪಾವನರಪ್ಪ ಪೂರ್ಣಪ್ರಜÕರ ಸ್ತೋತ್ರ |ನವರತ್ನಮಾಲೆಯಿದು ಶ್ರೀ ವಿಷ್ಣುದಾಸರಿಗೆ |ಶ್ರವಣಮಂಗಳವಪ್ಪ ತತ್ತ್ವಾಮೃತದಸಾರಜನ್ಮ ಮೂಲೋತ್ಪಾಟನ ||ಜವನ ಗಂಟಲನೊಡೆದು ತನ್ನ ನಿಜದಾಸರಿಗೆ |ಧ್ರುವವಾಗಿ ಪರಮಪದವಿಯನಿತ್ತು ರಕ್ಷಿಸುವ |ಪವನನಂತರ್ಯಾಮಿಪುರಂದರವಿಠಲನತವಕದಿಂದಲಿ ಭಜಿಸಿರೈ 9
--------------
ಪುರಂದರದಾಸರು
ಹರಿನಾಮವೆ ಜಯ ಮಂಗಳವು |ಶ್ರೀ ಹರಿನಾಮವೆಶುಭಮಂಗಳವು ||ಹರಿನಾಮವ ದಿನ ಸ್ಮರಿಸುವ ಸುಜನರ-ದುರಿತರಾಶಿಗಳೆಲ್ಲ ತರಿಯುವಮಾಧವ1ಉರಗಶಯನವರಪರಮೇಶನಸಖ|ಗರುಡಗಮನಸಿರಿಯರಸನೆಂದೆನಿಸಿದಹರಿ2ನಾರದಮುನಿ ಹರಿನಾರಾಯಣನೆಂದು |ಭಾರಿ ಭಜನೆ ಗೈವ | ಮಾರಜನಕನೆಂಬಹರಿ3ಅಜಾಮಿಳನಂತ್ಯದಿ | ಭುಜಗಶಯನನೆಂದು |ಭಜಿಸಲು ಸಲಹಿದವಿಜಯಸಾರಥಿಯಾದಹರಿ4ಸರಸಿಯೊಳ್ ಮೊರೆಯಿಟ್ಟು | ಮರುಗುವ ಗಜವನು |ಗರುಡನ ಹೆಗಲೇರಿ ಪಿಡಿದು ರಕ್ಷಿಸಿದಂಥ5ಶೇಷಗಿರಿಯ ಮೇಲೆ ವಾಸವಾಗಿರುತಿಹ |ದಾಸ ಜನರ ಪ್ರಿಯ | ದೋಷರಹಿತನೆಂಬ6ವೃಂದಾವನದೊಳಾ | ನಂದದೊಳಾಡುವ |ಸುಂದರಕರಗೋವಿಂದನೆಂದಿನಿಸಿದಹರಿ7
--------------
ಗೋವಿಂದದಾಸ
ಹರಿಹರಿಯೆನಲಿಕ್ಕೆ ಹೊತ್ತಿಲ್ಲ-ರಂಗಯ್ಯ |ಹರಿಹರಿಯೆನಲಿಕ್ಕೆ ಹೊತ್ತಿಲ್ಲ ಪಧಾರಣೆಯ ಮಾಡುವಾಗ ಪಾರಣೆಯ ಚಿಂತೆ |ದೂರಯಾತ್ರೆ ಮಾಡುವಾಗ ಧಾರಣೆಯ ಚಿಂತೆ 1ನಿತ್ಯಯಾತ್ರೆ ಮಾಡುವಾಗ ಪುತ್ರರ ಮೇಲಿನ ಚಿಂತೆ |ಎತ್ತ ನೋಡಿದರತ್ತ ಉದರದ ಚಿಂತೆ 2ಸ್ನಾನವನ್ನು ಮಾಡುವಾಗಮಾನಿನಿಮೇಲಿನ ಚಿಂತೆದಾನವನ್ನು ಕೊಡುವಾಗಧನದಮೇಲಿನ ಚಿಂತೆ3ದೇವತಾರ್ಚನೆ ಮಾಡುವಾಗ ಸಂಸಾರದ ಚಿಂತೆ-ಅ-|ದಾವಾಗ ನೋಡಿದರು ಪರರ ಕೇಡಿನ ಚಿಂತೆ 4ಗಂಗೆಯ ಮೀಯುವಾಗ ತಂಬಿಗೆ ಮೇಲಿನ ಚಿಂತೆ |ಸಂಗಡ ಬಂದವರೆಲ್ಲ ಹೋಗುವರೆಂಬ ಚಿಂತೆ 5ಡಂಭಕತನಕೆ ಸಿಕ್ಕಿ ಭಂಗವ ಪಡುವೆ ತಂದೆ |ಇಂಬನಿತ್ತು ರಕ್ಷಿಸೈ ಪುರಂದರವಿಠಲನೆ 6
--------------
ಪುರಂದರದಾಸರು
ಹೇಮದ ತೊಟ್ಟಿಲ ಭಾಮೆಯರ್ಹೂಡಿಕೋಮಲ ಕಾಂಚನಧಾಮವ ಮಾಡಿಕಾಮಜನಕನೊಳು ಕಾಮಿತ ಬೇಡಿಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1ಚೆನ್ನಿಗರರಸ ಮೋಹನ್ನ ಸುಶೀಲಕನ್ನಡಿ ಕದಪಿನಕಮನೀಯಬಾಲಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2ಕೆಂದಾವರೆಯಂತೆ ಚೆಂದುಳ್ಳಚರಣಚಂದಿರವದನ ಗೋವಿಂದನ ಶರಣಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣಕಂದ ಕಂದರ್ಪನ ಸುಂದರಾಭರಣ ಜೊ ಜೋ 3ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣನ್ಯಾಯ ನೀತಿ ಸದುಪಾಯ ಸಂಪನ್ನಪ್ರೀಯನೆ ಕರ್ಣಾಂತಾಯತನಯನಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ