ಒಟ್ಟು 1522 ಕಡೆಗಳಲ್ಲಿ , 97 ದಾಸರು , 1368 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ರಂಗಾ ಪ ಬಾರೈಯ್ಯಾ ಯದುವೀರಾ | ಈರೇಳು ಭುವನಾಧಾರಾ | ಶ್ರೀ ರಮಣಿಯ ಮನೋಹರಾ | ವಾರಣ ಭಯ ನಿವಾರಾ | ಕರುಣಾಕರಾ | ದೀನೋದ್ಧಾರಾ | ಸರ್ವಾಧಾರಾ | ಪರಮ ಉದಾರಾ | ಸುರಸಹತಾರಾ | ದಯಾಸಾಗರ 1 ಒದಗುವೆ ಸ್ಮರಣೆಗೆ ನೇಮಾ | ಮದನಜನಕ ಮಹಮಹಿಮಾ | ಜೀಮೂತ ಶಾಮಾ | ಸದ್ಗುಣ ಧಾಮಾ | ಪೂರಿತ ಕಾಮಾ | ತ್ರಿವಿಕ್ರಮಾ | ಅನಂತ ನಾಮಾ | ಲೋಕಾಭಿರಾವi 2 ಅಸುರ ಕುಲ ಸಂಹರಣಾ | ಬಿಸರುಹ ಸಖ ಶತ ಕಿರಣಾ | ಅಸಮನೆ ಮಹಿಪತಿ ಸುತನಾ | ಪೋಷಿಸುವೆ ನೀ ಪರಿಪೂರ್ಣ ಖಗವರ ಗಮನಾ | ಮೃದುತರ ಚರಣಾ | ಅಹಲ್ಯೋದ್ಧರಣಾ | ಕನPsÀರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ತಾಭೂರಿ ದೃಷ್ಟಿಯ ಮಾಲಿಯನ್ಹಾಕಿದಾಪಾರ ಮಹಿಮ ಬಾ ಪ ಐದು ವರುಷ ಬಾ ಎನಗೆ ಬೋಧವ ನೀಡಿದಿ ಬಾಸಾಧು ಸೇವಿತ ಶ್ರೀಧರ ಭೂಧರ ಗೋಧರಧರನೇ ಬಾ 1 ಗೌರ ಮುಖನೆ ಬಾ ಕರುಣಾವಾರಿ ನಿಧಿಯೇ ಬಾಆರ ಮಾತನು ಹಚಿಕೋ ಬ್ಯಾಡೆಲೆ ಸಾರಿದ ಕೃಷ್ಣ 2 ಗೋಪಿ ಬಂಧನ ಹರಣಾ ಬಾಮುಂದೆ ನಿಲ್ಲುತ ಮಾತುಗಳಾಡಿಸಿ ಇಂದಿರೇಶ ಬಾ 3
--------------
ಇಂದಿರೇಶರು
ಬಾರೋ ಮನೆಗೆ ಬಾರೋ ವೆಂಕಟರಮಣಾ ಪ ಕಂಸಾಸುರಮರ್ದನನೆ ಬಾರೊ | ಕೌಶಿಕಯಜ್ಞಪ ಬಾರೊ | ಹಂಸಡಿಬಿಕನಂತಕ ಬಾರೊ | ಹಂಸವಾಹನನ ಪಿತನೆ ಬಾರೊ 1 ಸಾಸಿರ ಮುಖನ ಪೆತ್ತವನೆ ಬಾರೊ | ಅನುಜ ಬಾರೊ | ಸಾಸಿರ ವದನ ಶಯನ ಬಾರೊ | ಭೂಸುರರಿಗೆ ಪ್ರಿಯನೆ ಬಾರೊ 2 ವಾರಿಧಿಯೊಳು ಪೊಕ್ಕವನೆ ಬಾರೊ | ವಾರಿಧಿಯ ಮಾನಭಂಗನೆ ಬಾರೊ | ವಾರಿಧಿಸುತೆಯ ಪಡೆದ ಕರುಣಾ - | ಸಿರಿ ವಿಜಯವಿಠ್ಠಲ ಬಾರೊ 3
--------------
ವಿಜಯದಾಸ
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ವಾರಿಜ ಚರಣಾ ಪ ಭೂರಿ ದುರಿತ ಹರಣಾ 1 ಕ ರುಣಾ 2 ದ್ವಿಜರಾಜ ಕುಲಾಭರಣಾ 3 ಸುರಪಾರಿ ನಂದನನ ಕಾಯಿದೇ ಹರಿಣಾ | ಸುರಪಾದಿ ಮುನಿ ಸ್ಪುರಣಾ 4 ಗುರು ಮಹಿಪತಿ ಸುತ ಪ್ರಭು ಕೇಯೂರಾಭರಣಾ | ಇಹಪರಾನಂದ ಪೂರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ವೆಂಕಟಗಿರಿನಾಥ| ದಯ- ದೋರೈ ಭಕುತರ ಪ್ರೀತ ಪ. ಮಾರಪಿತ ಗುಣಹಾರ ಮಂದರ- ಧಾರ ದೈತ್ಯಸಂಹಾರ ಸುಜನೋ ದ್ಧಾರ ಮಮಹೃದಯಾರವಿಂದಕೆ ಬಾರೋ ಕೃಪೆದೋರೋ ವೆಂಕಟ ಅ.ಪ. ವೃಷಭಾಸುರನೊಳು ಕಾದಿ ಸಾ- ಹಸವ ಮೆರೆಸಿದ ವಿನೋದಿ ವಶಗೈದು ದೈತ್ಯನ ಶಿರವ ಕತ್ತ- ರಿಸುತಲಿ ನೀನಿತ್ತೆ ವರವ ವಸುಧೆಯೊಳಗಿಹ ಸುಜನರನು ಮ- ನ್ನಿಸುತಲಿಷ್ಟವನಿತ್ತು ಕರುಣಾ- ರಸದಿ ಸಲಹುವ ಬಿಸಜನಾಭ ಶ್ರೀ- ವೃಷಭಾಚಲವೊಡೆಯ ವೆಂಕಟ 1 ಅಂಜನೆಯೆಂಬಳ ತಪಕೆ ಭಕ್ತ- ಸಂಜೀವನೆಂಬ ಶಪಥಕೆ ರಂಜಿಪ ಪದವಿತ್ತೆ ಮುದದಿ ಖಿಲ- ಭಂಜನಮೂರ್ತಿ ಕರುಣದಿ| ಮಂಜುಳಾಂಗ ಶ್ರೀರಂಗ ಸುರವರ ಕಂಜಭವವಿನುತಾದಿ ಮಾಯಾ- ರಂಜಿತಾಂಘ್ರಿ ಸರೋರುಹದ್ವಯ ಅಂಜನಾಚಲವೊಡೆಯ ವೆಂಕಟ 2 ಶೇಷನ ಮೊರೆಯ ತಾ ಕೇಳಿ ಬಲು ತೋಷವ ಮನಸಿನೊಳ್ತಾಳಿ ದೋಷರಹಿತನೆಂದೆನಿಸಿ ಕರು- ಣಾಶರಧಿಯ ತಾನೆ ಧರಿಸಿ ಶ್ರೀಶ ಹರಿ ಸರ್ವೇಶ ನತಜನ- ಪೋಷ ದುರ್ಜನನಾಶ ರವಿಶತ- ಭಾಸ ಕೌಸ್ತುಭಭೂಷ ವರ ಶ್ರೀ- ಶೇಷಾಚಲವಾಸ ವೆಂಕಟ 3 ಮಾಧವವಿಪ್ರ ವಿರಹದಿ ಭ್ರಷ್ಟ ಹೊಲತಿಗಳನು ಸೇರ್ದ ಮುದದಿ ಸಾದರದಲಿ ನಿನ್ನ ಬಳಿಗೆ ಬರೆ ನೀ ದಯಾನಿಧಿ ಕಂಡು ಅವಗೆ ಶೋಧಿಸುತ ಪಾಪಗಳೆಲ್ಲವ ಛೇದಿ ಬಿಸುಡುತ ನಿಂದು ವೆಂಕಟ- ಭೂಧರದ ನೆಲೆಯಾದ ನಾದವಿ- ಭೇದಬಿಂದು ಕಲಾದಿಮೂರುತಿ 4 ಧನಪತಿಯೊಳು ತಾನು ಸಾಲ ಕೊಂಡ ಘನಕೀರ್ತಿಯಿಂದ ಶ್ರೀಲೋಲ ವನಿತೆ ಪದ್ಮಾವತಿಪ್ರೀತ ಭಕ್ತ- ಜನಸುರಧೇನು ಶ್ರೀನಾಥ ವನಧಿಶಯನ ಮುರಾರಿ ಹರಿ ಚಿ- ಧ್ವನಿನಿಭಾಂಗ ಸುಶೀಲ ಕೋಮಲ ವನಜನಾಭ ನೀಯೆನ್ನ ಕೃಪೆಯೊಳ- ಗನುದಿನದಿ ಕಾಯೊ ಕೃಪಾಕರ 5 ಛಪ್ಪನ್ನೈವತ್ತಾರು ದೇಶದಿಂದ ಕಪ್ಪವಗೊಂಬ ಸರ್ವೇಶ ಅಪ್ಪ ಹೋಳಿಗೆಯನ್ನು ಮಾರಿ ಹಣ- ಒಪ್ಪಿಸಿಕೊಂಬ ಉದಾರಿ ಸರ್ಪಶಯನ ಕಂದರ್ಪಪಿತ ಭಜಿ- ಸಿರ್ಪವರ ಸಲಹಿರ್ಪ ಕುಜನರ ದರ್ಪಹರಿಸುತ ಕಪ್ಪಕಾಣಿಕೆ ಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6 ಚಾರುಚರಣತೀರ್ಥವೀಂಟಿ ನಿನ್ನೊ- ಳ್ಸಾರಿ ಬರುವ ಪುಣ್ಯಕೋಟಿ ಸೇರಿದೆ ಕೊಡು ಮನೋರಥವ ಲಕ್ಷ್ಮೀ- ನಾರಾಯಣನೆನ್ನೊಳ್ದಯವ ತೋರು ನಿರತ ಸಮೀರಭವ ವರ- ದಾರವಿಂದದಳಾಕ್ಷ ತಿರುಪತಿ ವೀರ ವೆಂಕಟರಮಣ ಮದ್ಬಹು-ಭಾರ ನಿನ್ನದು ಪಾಲಿಸೆನ್ನನು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಶ್ರೀರಂಗ ಕೀರ್ತಿ ತರಂಗ ಬಾರೋ ರಿಪುಮದಭಂಗ ನೀಲಾಂಗ ಬಾಬಾ ಪ ತಿಮಿರ ಪತಂಗ ಬಾರೋ ನರಸಿಂಗ ಗರುಡ ತುರಂಗ ಬಾಬಾ ಅ.ಪ. ಪುರಹರ ಸಂಗ ಬಾರೋ ಕಾಳಿಂಗ ಮರ್ಧನರಂಗ ಬಾರೋ ಸರ್ವಾಂಗ ಸುಂದರರಂಗ ಬಾಬಾ 1 ಬಾರೋ ಸಾಷ್ಟಾಂಗ ವೆರಗುವೆರಂಗ ಭಂಗ ಬಾಬಾ ಬಾರೋ ಸಾರಂಗ ವರದ ಶ್ರೀರಂಗ ಬೀರೋ ಭಕ್ತಿಯ ನಿಗಮಾಂತರಂಗ ಬಾಬಾ 2 ಬಾರೋ ಶ್ರೀರಂಗ ತೋರೋ ಆನಂದ ಬೀರೋ ಜ್ಞಾನತರಂಗ ಕೃಪಾಂಗ ಬಾಬಾ ಬಾರೋ ಕೇಶವ ಕರುಣಾಂತರಂಗ ಬಾಬಾ 3 ಬಾರೋ ಅಂಗಧ ವರದ ಶ್ರೀರಂಗ ಬಾರೋ ಗಂಗೆಯ ಪಿತನೆ ಶ್ರೀ ರಂಗ ಬಾಬಾ ಬಾರೋ ದೂರ್ವೇಶ ಬಲಚದುರಂಗ ಬಾರೋ ಶ್ರೀ ಚನ್ನಕೇಶವರಂಗ ಬಾಬಾ 4
--------------
ಕರ್ಕಿ ಕೇಶವದಾಸ
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಿಟ್ಟನೋ ಆತಂಕಗಳನು ನಾ ಕೃಷ್ಣ ನಿನ್ನ ಕರುಣಾ ನಂಬಿ ಪ ಸೃಷ್ಟಿ ಸ್ಥಿತಿ ಲಯಾದಿ ಕರ್ತ ಅಷ್ಟವಿಭವಪೂರ್ಣ ನಿನ್ನ ಇಷ್ಟದಂತೆ ನಡೆಯುವುದೇ ಶ್ರೇಷ್ಠವೆಂಬೊ ಬುದ್ಧಿ ಬಂದು 1 ಬೆಟ್ಟದಂತೆ ಇದ್ದುದಲ್ಲಿ ಘಟ್ಟಿಮಂಜಿನಂತೆ ಕರಗಿ ಕಷ್ಟರಾಶಿಯೆಲ್ಲಾ ಸ್ವಪ್ನ ದೃಷ್ಟದಂತೆ ಆದಮೇಲೆ 2 ತಲೆಯಮೇಲೆ ಕೈಯ್ಯನಿಟ್ಟು ಇಳೆಯ ಮೋರೆ ಮಾಡಿ ನೊಂದು ನೆಲವ ಕಚ್ಚಿ ಬಿದ್ದರೇನು ಫಲವೊ ಧೀರಜನ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಬಿಡದಿರೆನ್ನ ಕಡಲನಡುವೆ ಪ ತಡಬಡಿಪುದ ನೋಡಿ ನೋಡಿ ಅ.ಪ ಸರಸ ಕರುಣಾಭರಣ ಶರಣ ನಿರುತ ಸೇವಿತ ವರ ಸುಚರಣ ಮರೆಯದಿರು ದಾಸಾನುದಾಸನ ಲೋಕಕಾರಣ 1 ಕರಿ ಬಲಿ ಪಾಂಚಾಲಿಯರನು ಹರುಷದಿಂದ ಪೊರೆದೆಯಲ್ತೆ ಕರುಣದಿಂದ ಬಾರೊ ಹರಿಯೆ ಸರಸಿಜಾಕ್ಷನೇ 2 ದೇವ ದೇವ ಪಾವನಾತ್ಮ ಭಾವಜಾತಪಿತ ಪರಮಾತ್ಮ ದಿವಿಜ ಸನ್ನುತಾ 3 ಕಾವರನ್ಯರಿಲ್ಲವಯ್ಯ ಪಾವನಾತ್ಮ ಮಾರನಯ್ಯ ಸಾವಕಾಶವೇಕೋ ಜೀಯ ಮಾವಿನಕೆರೆಯರಸ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ ಪ ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ ಅ.ಪ. ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆ ವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿ ಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರ ಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು 1 ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವು ಧನ್ಯ ಧನ್ಯರು ಮಾತೆ ಭಕ್ತಿಮೂರ್ತೆ ವಿಧಿ ರುದ್ರಸೇವ್ಯ ಪದ ಪುಷ್ಕರಳೆ ಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ 2 ನೀನೊಲಿಯದ ಜೀವ ಏನು ಸಾಧನೆ ಮಾಡೆ ಪ್ರಾಣವಿಲ್ಲದ ದೇಹ ಶೃಂಗರಿಸಿದಂತೆ ವಾನರ ಪ್ರತಿಬಿಂಬ ಜಯೇಶವಿಠಲ ತಾನೊಲಿಯ ಅವಗೆಂದು ನಿನ್ನವರ ಕರವಶನು 3
--------------
ಜಯೇಶವಿಠಲ
ಬೃಂದಾವನವಿದೆಕೊ ಯತಿವರ ಪ ನಂದ ನಂದನ ಗೋವಿಂದನ ಪಾದಾರ ವಿಂದವ ಪೂಜಿಪ ಶ್ರೀರಾಘವೇಂದ್ರನ ಅ.ಪ ಮಂತ್ರಾಲಯದಿ ಸ್ವತಂತ್ರ ಭೂಮಿಕೆಯಲ್ಲಿ ಯಂತ್ರ ಸ್ಥಾಪನೆಗೈದು ಸಂತೃಪ್ತಿಯಾಂತು ಮಂತ್ರಾರ್ಥ ತತ್ವಗಳನುಪದೇಶ ಗೈಯುವ ಮಂತ್ರ ಸ್ವರೂಪನು ಸೇವಿಪ್ಪ ಪುಣ್ಯದ1 ಗುರುರಾಜರಾಜನು ಕರುಣಾಪಯೋಧಿಯು ನಿರುತ ಭಕ್ತರಿಗೆಲ್ಲ ವರವೀವ ದೊರೆಯು ಸರಸೀರುಹಾಕ್ಷ ಮಾಂಗಿರಿವಾಸ ರಂಗನ ಚರಣವ ತೋರುವ ಕೃಪೆಮಾಡುವಾತನ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೆಳಕಾ ತೋರಿಸೊ ಯೋಗಿಂದ್ರರ ಜನಕಾ |ಮಂತ್ರಾಲಯ ಪುರ ಪಾಲಕ ಪ ಫಾಲನಯನ ಪ್ರಿಯ | ಪಾಲಾಬ್ಭಿ ಶಾಯಿಯಶೀಲ ಮೂರುತಿ ತೋರೊ | ಮೇಲು ಕರುಣದಿ ಅ.ಪ. ಪತಿ ಭ್ರಾತೃ | ಪೇರ್ಮೆಯಿಂದಲಿ ನಿನ್ನನಿರ್ಮಮತಗೆ ಮೆಚ್ಚಿ | ಪರ್ಮನ ಮಾಡಿದ 1 ಕ್ಷಿತಿ ದೇಶವು 2 ಸಿರಿಗುರು ಗೋವಿಂದ ವಿಠ್ಠಲನಾ | ಭವ್ಯ ಸುಚರಣಾಸರಸಿಜ ಹೃದ್ವಾರಿಜದಲಿ ಪವನಾ | ನಲಿ ಸ್ಥಿತನಾಗಿಹನಾ |ತೋರಿ ಪೊರೆಯೊ | ಕರುಣಾಕರ ಗುರು ಸಾರಿ ಭಜಿಪೆ ತವ | ಚರಣಾಂಬುರುಹವ 3
--------------
ಗುರುಗೋವಿಂದವಿಠಲರು