ಒಟ್ಟು 19041 ಕಡೆಗಳಲ್ಲಿ , 136 ದಾಸರು , 7982 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಾದಿಕರನು ಪರಬ್ರಹ್ಮದಿಚ್ಛಿಲಿ ಪಡೆದಳಮ್ಮಪರಂಜ್ಯೋತಿ ಪರಬ್ರಹ್ಮಿಣೀಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಣಿ ಕಲ್ಯಾಣಿಫಣಿವೇಣಿ| ರುದ್ರಾಣಿಶರ್ವಾಣಿಸುವಾಣಿ ಗೀರ್ವಾಣಿ ವರದೆ | ಗಾಣಿತ್ರಿನಯನ ಅಜನ ರಾಣಿ ಶಂಕರ ಪ್ರಾಣಿ ಪುಸ್ತಕಪಾಣಿನಾರಾಯಣೀ1ಅಂಬೆ ಲೋಕಾಂಬೆ ಭ್ರಮರಾಂಬೆ ಮೂಕಾಂಬೆಹರಡಿಂಬೆ ಪ್ರತಿಬಿಂಬೆ ಕುಚಕುಂಭೆ ಸಾಂಬೆ |ರಂಭೆ ಹೇರಂಬೆ ಶರಣೆಂಬೆ ವರಗೊಂಬೆ ಭಕ್ತರಬೊಂಬೆ ಹೊಳೆವ ಗೊಂಬೆ2ಕಾಳೆ ಹಿಮ ಬಾಳೆ ಭೂ ಪಾಳೆ ಕುಸುಮಾಳೆವನಮಾಳೆಕಂದರಮೌಳೆ ಕುಟಿಲ ಕುರುಳೆ |ಕೇಳಿನಿನ್ನಯ ಲೀಲೆ ಕಾಲಿಗೆರಗುವರಘವ ಮೂಲಕೆತ್ತೆತ್ತಿಬಿಸುಟುವ ಕೃಪಾಳೆ3ಬೇಕೆಂಬೊ ಬಯಕಿತ್ತು ಸಾಕು ಸಾಕೆನಿಸುವರುಲೋಕದೊಳಗ್ಯಾರುಂಟು ನಿನ್ನ ಬಿಟ್ಟು |ಏಕೆ ವಿವೇಕೆ ಎನ್ನೀ ಕುಟಿಲಗುಣನೋಡ ಬೇಕೆಕ್ಷಮೆಮಾಡಿದರೆ ಮೈಯುಳಿಯುವದು4ಕಾಯಜನ ಮಾತೆ ಸಿತಕಾಯನರ್ಧಾಂಗಿ ಜಗಕಾರ್ಯನಿರ್ಮಿಸುವ ನರರುದಿಸಿ ಮೂರು || ಕಾಯಡಗಿ ಹೋದನಿಷ್ಕಾಯ ಪರಶಕ್ತ್ಯೆನ್ನ ಕಾಯ್ದುಕೊಳ್ಳೆಲೆತಾಯಿ ಸ್ತ್ರೀಯರನ್ನೆ5ಸಾರಿದರಹೊರೆವಸಂಸಾರದೊಳು ಮುಳುಗಿದರೆತಾರಿಸುವ ತವಕದಿಂತರುಳೆತರುಣೀ |ಸೇರಿಸುತ ತಿರುಗಿ ತನು ಬಾರದ್ಹಾದಿಗೆ ಒಯ್ದುತಾರಿಸುವ ಸ್ಥಿರದಿ ನೀ ತೋಯಜಾಕ್ಷಿ6ಕುಸುಮಸರ್ಪಾದಿಗಳು ಕುಸುಮಗಂಧಿಯ ಪದಕೆಕುಸುಮವೃಷ್ಟಿಗವು ದೇವಿಯ ಸುಕೃತಿಗಳೂ |ಕುಸುಮದೊಳು ಕರಕಂಜ ಕುಸುಮದೊಳುವರವಿಡಿದ ಕುಸುಮಶರರಿಪುಶಂಕರನ ಶಂಕರೀ7
--------------
ಜಕ್ಕಪ್ಪಯ್ಯನವರು
ಭಕುತ ಜನ ಮುಂದೆ ನೀನವರ ಹಿಂದೆ - ಇದಕೆ |ಯುಕುತಿ ಕೈಕೊಳದಯ್ಯ ಗಯಾಗದಾಧರನೆ ಪಕಟ್ಟೆರಡು ಕೂಡಿ ತಾ ನದಿಸೂಸಿ ಹರಿವಾಗ |ಕಟ್ಟುಕ್ಕಿದಾಗ ಹರಿಗೋಲ ಹಾಕೆ ||ನೆಟ್ಟನೆ ಜಿಗಿಜಿಗಿದು ದಾಟಿ ತಾ ಪೋಪಾಗ |ಹುಟ್ಟು ಮುಂದಲ್ಲದಲೆ ಹರಿಗೋಲು ಮುಂದೆ? 1ಕಾಳೆಹೆಗ್ಗಾಳೆದುಂದುಭಿನಾನಾ ವಾದ್ಯದಿಂ |ಓಲಗದಿಂದೈದೆ ಅರಸು ತಾ ಬರುವಾಗ ||ಸಾಲಾಗಿ ಬಳಿವಿಡಿದು ಸಂಭ್ರಮದಿ ಇರುವಾಗ |ಆಳು ಮುಂದಲ್ಲದೆ ಅರಸು ತಾ ಮುಂದೆ 2ಉತ್ಸವ ಮೂರುತಿಯು ಬೀದಿ ಮೆರೆಯುತ ಬರಲು |ಸತ್ಸಂಗತಿಗೆ ಹರಿದಾಸರೆಲ್ಲ ||ಅಚ್ಚ ಸಿರಿಯರಸು ಸಿರಿಪುರಂದರ ವಿಠಲನೆ |ವತ್ಸಮುಂದಲ್ಲದೆಧೇನುತಾ ಮುಂದೆ?
--------------
ಪುರಂದರದಾಸರು
ಭಕುತಸಂಸಾರಿಹರಿಶಕಟಸಂಹಾರಿಸಕಲಾಂತರ್ಯಾತ್ಮಕ ಗಿರಿಧಾರಿ ಪ.ಅಂತರ್ಬಹಿವ್ರ್ಯಾಪ್ತಾನಂತಾವತಾರಿಸಂತಜನರ ಮನೋಭ್ರಾಂತಿನಿವಾರಿ 1ನಿಖಿಲ ಬ್ರಹ್ಮಾದಿ ಸುರನಿಕರಕೈವಾರಿಪ್ರಕೃತಿನಿಯಾಮಕ ಪ್ರಭುಕಂಸಾರಿ2ಘನಕೃಪಾಸಾಗರ ಪ್ರಣತಾರ್ತಿಹಾರಿಅನಘಲಕ್ಷ್ಮೀನಾರಾಯಣ ನಿರ್ವಿಕಾರಿ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಕ್ತರೆಂದರೆ ನೈಜ ಭಕ್ತರವರು ಪ.ಚಿತ್ತಜನಯ್ಯನ ಚರಿತಾಮೃತಕೆ ಮನವಿಟ್ಟು ಅ.ಪ.ಅಧಿಯಾತ್ಮ ತಾಪಗಳುಅಧಿಭೂತ ಕ್ಲೇಶದನುಭವಅಧಿದೈವದಟ್ಟುಳಿಯನೆಣಿಸರತಿ ಬಲವಂತರ್ಮಧು ಮಥನಗಲ್ಲದರ ಬಗೆಗಂಜರು 1ವೇದತಂತ್ರವಾಕ್ಯದಿಂದುಪದೇಶಮಾಡಿದರೆ ಮೋಹನಕೊಳಗಾಗರುವದಿಸಿ ಬಲವತ್ಸ್ನಾನವ ಮಾಡಿ ಬೆದರಿಸಲುಕದಲದಂತಃಕರಣದ್ಹರಿದಾಸರು 2ಬದಿಗೆ ಬಂದಡಲಾವದುರಿತಕೋಟಿಗಳನ್ನುತುದಿಗಾಲಿಲೊದ್ದು ಸಲೆ ತಲೆವಾಗರುಹುದುಗೊಂಡು ಷಡುವರ್ಗ ರಿಪುಗಳನು ಗೆದ್ದುಹರಿಪದಲಂಪಟ ಜ್ಞಾನಾಂಬುಧಿಗಳು 3ವಿಧಿಭವೇಂದ್ರಾದಿ ಸುರರಾಳ್ದ ಲಕುಮೀಪತಿಯಸುದಯಾರಸನುಂಬುವ ಬೋಧನವರುಸದಮಲ ಗುಣಾನಂತ ಪ್ರಸನ್ವೆಂಕಟಪತಿಯಹೃದಯವಲ್ಲಭರೆನಿಪಅಚಲಮತಿಯವರು4
--------------
ಪ್ರಸನ್ನವೆಂಕಟದಾಸರು
ಭಕ್ತವತ್ಸಲ ಬಂದು ಬಾಗಿಲಲಿ ನಿಂತುಎತ್ತ ಹೋದನೆಂದು ಧಿಗಿಲು ಎನುತಮತ್ಯಾಕೆ ಬರಲಿಲ್ಲವೊ ಅರ್ಜುನರಾಯ ಪ.ವೀರರಾಯರÀ ಸೇವೆ ಪರಿಪರಿ ಮಾಡಿದ್ದುಮರೆತುಕೊಂಡು ಧರ್ಮ ದೊರೆಯಾಗಿ ಕುಳಿತ 1ಪಾಂಚಾಲಿ ರಮಣನು ಪಂಚ ಪಗಡೆಯನಾಡಿವಂಚನೆ ಮಾಡದೆ ಹಂಚಿಕೆಯಲಿಕುಳಿತ 2ಧಿಟ್ಟ ಭೀಮರಾಯ ಹುಟ್ಟು ಬಚ್ಚಿಟ್ಟುಕೊಂಡುಸಿಟ್ಟಿಲಿಂದ ಮೈ ಮುಟಿಗ್ಯಾಗಿ ಕುಳಿತ 3ಪುಂಡ ಭೀಮರಾಯ ಮಂಡಿ ಕೆದರಿಕೊಂಡುಖಂಡಗನ್ನವ ಉಂಡು ದಿಂಡೆನ್ಹಾಂಗ ಕುಳಿತ 4ಚಲ್ವ ಅರ್ಜುನರಾಯ ಬಿಲ್ಲು ಮೂಲೆಗೆ ಇಟ್ಟುಒಲ್ಲಿಯ ಮುಸುಕು ಹಾಕಿ ಎಲ್ಲೋ ಹೋಗಿ ಕುಳಿತ 5ಹೆÀಚ್ಚಿನ ಗಾಂಡೀವ ಬಚ್ಚಿಟ್ಟು ಕೋಣ್ಯಾಗೆಹುಚ್ಚನ್ಹಾಂಗೆಮಾರಿಮುಚ್ಚಿಕೊಂಡು ಕುಳಿತ6ಚದುರ ನಕುಲರಾಯ ಎದುರಿಗೆ ಬಾರದೆಹೆದರಿಕೊಂಡು ತಾನು ಕುದುರೆ ಮನೆಯ ಹೊಕ್ಕ 7ಧನವೆತ್ತಿಸಹದೇವಘನವಿದ್ಯಾನರಿಯದೆದನಕರುಗಳನ್ನೆಲ್ಲ ಅನುಸರಿಸಿ ಇರುವ 8ಪಾಂಡವರೆ ಶ್ರೇಷ್ಠರು ಧೈರ್ಯವೆ ಇರಲೆಂದುಶೌರಿಕುರುರಾಯಗೆ ತಾ ನುಡಿದನು9ಇಷ್ಟೂರು ಹರಿಗಂಜಿ ಬಿಟ್ಟರು ಕೈಕಾಲುಧಿಟ್ಟ ಬಲರಾಮ ತಾ ‌ಘಟ್ಯಾಗಿ ಕೈ ಹೊಯಿದನು 10ಇಷ್ಟೊಂದು ಗಾಬರಿ ದಿಟ್ಟೆಯರೆ ಆಗದಿರಿಕೊಟ್ಟನುಅಭಯದಿಟ್ಟ ರಾಮೇಶ11
--------------
ಗಲಗಲಿಅವ್ವನವರು
ಭಕ್ತವತ್ಸಲನಹುದೊ ವೆಂಕಟರೇಯಭಕ್ತವತ್ಸಲನಹುದೊ ಪ.ಕರಿಯ ಮೊರೆಯನರಿದು ಸಿರಿಯಜರಿದುಗರುಡನ ಕರೆಯದೆ ಭರದೊಳರಿಯಿಂದರಿ ಬಾಯ ಮುರಿಗೆಯ ಹರಿದ್ಯೆಂದುನಾರದಾದ್ಯರು ನಿನ್ನ ಬಿರುದು ಸಾರುವರೊ 1ಅಂಬುಜಾಂಬಕನಂಬಿದೆನೆಂಬೆ ದಯಾಂಬುಧಿಹರಿನಿನ್ನಿಂಬುದೋರೆ ನಲವಿಲಂಬಲದಿ ಕಂಬದಿ ಬಿಂಬಿಸಿ ಡಂಬನಡಿಂಬವ ಬಿಗಿದೆ ಪೀತಾಂಬರಧರನೆ 2ಚಿನ್ನ ತನ್ನ ತಾತನ್ನ ಜರಿದವನನ್ನವನುಣ್ಣದೆ ನಿನ್ನ ಬಣ್ಣಿಸಲವನುನ್ನತ ಭಕುತಿಗೆ ಮನ್ನಿಸಿ ಪೊರೆದೆ ಪ್ರಸನ್ನವೆಂಕಟರನ್ನ ಮೋಹನ್ನ 3
--------------
ಪ್ರಸನ್ನವೆಂಕಟದಾಸರು
ಭಜಿಸಿ ಬಹು ಭಕುತಿಯಿಂದತ್ಯಜಿಪ ಭವಬಂಧನವ ಹರಿಯ ಪದವ ಪ.ಮನವೈರಿಯಂ ಪಿಡಿದು ಮಿತ್ರನಂ ಮಾಡಿ ಕೊಂಡನುನಯದಿ ವೈರಾಗ್ಯ ಘನಸಿರಿಯೊಳುದಿನದಿನಕೆ ಮುದವೇರಿ ತಾತ್ವಿಕರೊಡನೆ ಮಧ್ವಮುನಿರಾಯನೊರೆದಪರಿಹರಿಯ ಪಾದವ1ತುದಿಮೊದಲೆ ಸರ್ವಕಾಲಕೆ ಚಿಂತನೆಯ ಬಲಿದುಪದುಮಾಕ್ಷನಾಕೃತಿಯ ನೋಡಿ ದೃಢದಿಕದಲಗುಡದಂತಃಕರಣ ಸ್ನೇಹ ಸಾರವನುಹೃದಯ ಮಂಟಪದೊಳಗೆ ಹರಿಯ ಪದವ 2ಹರಿಪರಾತ್ಪರ ಲಕುಮಿ ಅರಸಿ ಅಜಕುವರ ಹರವರಪೌತ್ರ ಸುರಮುನಿಜನರು ದಾಸರುತರತಮದ ತಂತ್ರಸಾರ್ಥದಿಂನೆರೆನಂಬಿಅರಸ ಪ್ರಸನ್ವೆಂಕಟ ಶ್ರೀಹರಿಯ ಪದವ 3
--------------
ಪ್ರಸನ್ನವೆಂಕಟದಾಸರು
ಭಯ ನಿವಾರಣವು ಶ್ರೀ ಹರಿಯ ನಾಮ |ಜಯಪಾಂಡುರಂಗವಿಠಲ ನಿನ್ನ ನಾಮ ಪಧಾರಿಣೀದೇವಿಗಾಧಾರವಾಗಿಹ ನಾಮ |ನಾರದರು ನಲಿನಲಿದು ನೆನೆವ ನಾಮ |ಘೋರಪಾತಕಿ ಅಜಾಮಿಳನ ಸಲಹಿದ ನಾಮ |ತಾರಕವು ಬ್ರಹ್ಮ - ಭವರಿಗೆ ನಿನ್ನ ನಾಮ 1ಮೊರೆಯಲಾಲಿಸಿ ಮುನ್ನ ಗಜವ ಸಲಹಿದ ನಾಮ |ಕರುಣದಿಂ ದ್ರೌಪದಿಯ ಕಾಯ್ದ ನಾಮ |ಮರುಗುತಿಹ ಧ್ರುವನ ಉನ್ನತನ ಮಾಡಿದ ನಾಮ |ಪರತತ್ತ್ವ ಇಹಕಲ್ಲವೇ ನಿನ್ನ ನಾಮ 2ಚರಣದಲಹಲ್ಯೆಯನು ಸೆರೆಯ ಬಿಡಿಸಿದ ನಾಮ |ಕರುಣದಲಿ ಪ್ರಹ್ಲಾದನನು ಕಾಯ್ದ ನಾಮ |ತೊರೆಯಲಕ್ರೂರನಿಗೆ ನಿಜವ ತೋರಿದ ನಾಮ |ಸ್ಮರಿಸ ಜನರಿಗೆ ಸಮಸ್ತವನಿತ್ತ ನಾಮ 3ಚಂದ್ರಶೇಖರ ಗಿರಿಜೆಗೊರೆದ ಸಿರಿಹರಿನಾಮ ||ಬಂದಾ ವಿಭೀಷಣನ ಪಾಲಿಸಿದ ನಾಮ |ಕಂದಮುಚುಕುಂದನಿಗೆ ಕಾಮಿತವನಿತ್ತ ನಾಮ |(ಸಂದ ಪಾಂಡಪಕ್ಷ ಪಾವನವು ನಾಮ ) 4ಅಖಿಳವೇದಪುರಾಣ ಅರಸಿಕಾಣದ ನಾಮ |ಸಕಲಯೋಗಿ - ಜನಕೆ ಸೌಖ್ಯ ನಾಮ ||ಪ್ರಕಟಿಸಲು ಜಗವ ಪಾವನವ ಮಾಡಿದ ನಾಮ |ರುಕುಮಿಣೀಯರಸ ವಿಠಲ ನಿನ್ನ ನಾಮ 5ಭಕ್ತಿಯಲಿ ನೆನೆವರನು ಎತ್ತಿ ಸಲಹುವ ನಾಮ |ಮುಕ್ತಿ ಮಾರ್ಗಕೆ ಯೋಗ್ಯಹರಿ ನಿನ್ನ ನಾಮ |ಎತ್ತರಕೆ ಏರಿಪುದು ಸ್ವಾಮಿ ನಿನ್ನಯ ನಾಮ |ಚಿತ್ತಜನ ಪೆತ್ತ ಶ್ರೀ ಹರಿಯ ನಾಮ 6ವಾರಿಜಾನನೆ ತುಳಸಿಗೊಲಿದ ಹರಿನಾಮ ಕಾ - |ವೇರಿ ಮಧ್ಯದಲಿ ನೆಲಸಿದ ನಿನ್ನ ನಾಮ ||ಕ್ಷೀರಸಾಗರದಲ್ಲಿ ಶಯನವಾಗಿಹ ನಾಮ |ನಾರಾಯಣಾ ಕೃಷ್ಣಹರಿ ನಿನ್ನ ನಾಮ7ಹೊಂದಿದ್ದ ಭಕ್ತವೃಂದವ ಸಲಹಿದಾ ನಾಮ |ತಂದು ಅಮೃತವ ಸುರರಿಗೆರೆದ ನಾಮ ||ಅಂದಂಬರೀಷನನು ಕಾಯ್ದ ಶ್ರೀ ಹರಿನಾಮ |ತಂದೆ ಪುರಂದರವಿಠಲಹರಿ ನಿನ್ನ ನಾಮ8
--------------
ಪುರಂದರದಾಸರು
ಭಳಿ ಭಳಿರೆ ಭಳಿರೆ ಹನುಮಭಳಿ ಭಳಿರೆ ಋಜುನಿಕರ ಮಕುಟಮಣಿ ಪ.ಅಂಜನಿಜಠರಸಂಜನಿತಪ್ರಾಜÕಮೌಂಜಿಯುತಕೋದಂಡಧೃತಕರಕಂಜನೆದುರಲಿ ಪ್ರಾಂಜಲಿತ ಬಹುಭಕುತಿ ಅಭಿನಯಅಚ್ಛಿನ್ನ ಅಚ್ಚಿನೊಳು ಶುಭಚಿಹ್ನಪಾವನ್ನಗುಣರನ್ನ ಪರಿಪೂರ್ಣಅ.ಪ.ತಾಟಕಾಂತಕ ಭಟರೊಳು ನೀಮೀಟೆನಿಸಿ ಧೀಂಕಿಟ್ಟು ಶರಧಿಯದಾಂಟಿದವನಿಜೆ ತೋಷಕಾರಿ ಅಶೋಕವನಹಾರಿಕೋಟಿ ಕೋಟಿ ನಿಶಾಟ ಹೃದಯಸ್ಫೋಟಕಕ್ಷಯ ಪಾಟವಕರಿತ್ತಟಕೇಸರಿಕಟಿತಟದಿ ಕರವಿಟ್ಟ ಹನುಮದಿಟ್ಟ ವಿಕಟ ಖಳಕಳ ಪಟಾರ್ಭಟಪಟು ಹರಿದ್ವಿಟ್ಟದ್ವಿಟ್ಟು ಚಟುಲವಟು 1ವೀರ ಸಮೀರಕುಮಾರ ಪಾರಾವಾರ ಚರಿತ ಮಾರಜಿತಘನವಾರಿಜೋದ್ಭವಶರಕೆ ಮನ್ನಿಸಿದೇರಿದೌದಾರಿಈರೈದು ಮುಖದವನ ಪುರಪ್ರಸರಾಗಾರವನುರುಹಿ ರಘುಜನಚಾರುಚರಣವ ಕಂಡ ಪ್ಲವಗಪ್ರಚಂಡಶುಭತುಂಡಬಾಲದಂಡಅಗಣಿತಲೆಂಡರ ಖಂಡಪುಂಡರಗಂಡಗಂಡಭೈರುಂಡುದ್ದಂಡ2ಜೀವಜಾಲರ ಜೀವ ವಿಪ ಮಹಾದೇವ ಮುಖ್ಯರ ದೇವ ಚತುರ್ದಶಭುವನಾಶ್ರಿತ ಭೂತಭರ್ಗಸದಾವಿರತಿಭರಿತಾಆವಜನುಮಜ್ಜನುಮ ಎನಗೆನೀ ಒಡೆಯನಾಗ್ಯಾಳುತ ನನಗೀವುದೆಲೆಗುರುಪರಮಭಾಗವತಾರ್ಯ ಆಚರಿಯಹರಿಯ ಕಾರ್ಯಕಕ್ಕರದ ಹಿರಿಯಪರಮವೀರ್ಯಾಚ್ಚರಿಯ ಸಚ್ಚರಿಯ3ಹರಿಸೇವ್ಯಂಗೀಕರಿಸಿ ಒಡನವತರಿಸಿ ಆಜÕಂವೆರಸಿ ಅಟ್ಟಿದಹರಸಿ ಮದಮತ್ತರಿ ಸಮೂಹ ಭಯಹರಿಸ್ಯಭಯ ಧರಿಸಿಹರಿಶುಭಚರಣ ಸರಸಿಜದಿ ಶಿರವಿರಿಸಿ ಸುಗಿರೋಚ್ಚರಿಸಿ ಅಖಿಳೊಪ್ಪಿರಿಸಿ ವಿಷಯ ಸ್ಪರ್ಶವಿಲ್ಲದ ಅರಸ ನೀನೆ ಕಣಾ ಜಾಣರೊಳು ಜಾಣ ಪ್ರಾಣಮುಖ್ಯಪ್ರಾಣಕೇಣಿಗರಗಂಟಲಗಾಣ ಪ್ರವೀಣ ಹನುಮ4ವಾಸವಾರಿಯ ಘಾಸಿಗಂದು ಕಪೀಶರಳಿದಿರಲಾಸಮಯದೊಳೌಷಧವ ತಂದಾಸಮರ್ಥರ ಪೊರೆದ ಕಪಿವರದಶ್ರೀಶ ವರದ ಪ್ರಸನ್ನವೆಂಕಟಾಧೀಶ ಭೃತ್ಯೋಲ್ಲಾಸ ಅಜಪದಧೀಶ ಮೂರವತಾರಿ ಸುಖಕಾರಿ ಸದಾಶೂರಿ ಸಮೀರ ಕುಮಾರ ಭಾರತ ಧೀರಸಾರಯಂತ್ರೋದ್ಧಾರ ತತ್ವವಿಚಾರ5
--------------
ಪ್ರಸನ್ನವೆಂಕಟದಾಸರು
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು
ಭಾಪು ಹರಿಮತನೆ ಪ.ಭಾಪು ಹರಿಮತಸ್ಥಾಪಿತನೆ ಮೂರುರೂಪಿನಲಿ ಬಂದು ಶ್ರೀಪತಿಯು ಮೆಚ್ಚುವಾ ಪರಾಕ್ರಮ ವ್ಯಾಪಿಸಿದೆ ಭಾರತೀಪತೆ ತೇ ನಮೊ ಅ.ಪ.ಆದಿಯಲಿ ಅಂಜನಾದೇವಿಯ ಮಂಗಳೋದರದಿ ಪುಟ್ಟಿ ಶ್ರೀದ್ಯುಮಣಿಕುಲಮೇದಿನೀಶನ ಪಾದಕೆರಗಿ ಅಂಬೋಧಿದಾಟ್ಯಾಜÕದಿಆ ದಶಾಸ್ಯನ ಲಂಕಾ ದಹಿಸಿ ಜಾನಕೀದೇವಿಯ ಸುದ್ದಿ ಶ್ರೀಧರಗರುಹಿಯೋಧ ಬಾಧಿತರಾದ ಕಪಿಚೇತನದಾಯಕ ತೇ ನಮೊ 1ತುಂಗಗಿರಿ ಶತಶೃಂಗಕೃತ ಸುವಜ್ರಾಂಗ ಅಗ್ನಿಜಾಸಂಗಮತ್ತನೃಪಂಗಳನು ಭುಜದಿಂ ಗೆಲಿದು ಯಜÕ ಸಂಗ್ರಹವ ಪೂರಿಸಿಸಂಗಡಿಸಿದರಿ ಸಂಗರವ ಪೊಕ್ಕುಸಿಂಗಗರ್ಜನೆಯಿಂ ಗದೆಯ ಕೊಂಡುಭಂಗಿಸಿದೆಯೊ ಯುಗ್ಮಾಂಗ ಕೃಷ್ಣ ಸೇವಾಂಗೀಕೃತ ತೇ ನಮೊ 2ತುಚ್ಛರಿಳೆಯೊಳು ಪೆಚ್ಚಿ ಬಗೆ ಬಗೆಕುಚ್ಛಿತಾರ್ಥ ವಿರಚ್ಚಿಸ್ಯಾತ್ಮಗೆಅಚ್ಚುತೈಕ್ಯವ ಉಚ್ಚರಿಸುತಿರೆ ಸ್ವಚ್ಛ ಯತಿರೂಪದಿಮಚ್ಚರಿಪರನು ಕೊಚ್ಚಿ ತಂತ್ರಸಾರಾರ್ಚನೆಯಭೇದ ನಿಶ್ಚೈಸಿದೆ ಶಿರಿಸಚ್ಚಿದಾತ್ಮ ಶ್ರೀವತ್ಸ ಪ್ರಸನ್ವೆಂಕಟೇಚ್ಛಮತ ತೇ ನಮೊ 3
--------------
ಪ್ರಸನ್ನವೆಂಕಟದಾಸರು
ಭಾರತಿನೀ ಪರಿಪಾಲಿಸೆ ವಾರಿಜಾಂಬಕಿ ಮಾತ ಲಾಲಿಸೆಆರಾದ ಭವವೆಂಬ ಮಾರಿಯ ಹೊಯ್ಲಿಗೆಭಕ್ತಾಭಿಮಾನಿ ಸದ್ಯುಕ್ತಿಯುತಹರಿವೇದಾಂತವೇದ್ಯ ಗೋಪಾಲವಿಠಲನ
--------------
ಗೋಪಾಲದಾಸರು
ಭಾರತಿಭರತನ ರಮಣಿಶಿರಬಾಗುವೆ ತ್ರಿಜಗಜ್ಜನನಿ ಪ.ಭಾರತ ಭಾಗವತಾರ್ಥ ಬೋಧಿನಿಶಾರದೇಂದುನಿಭವದನಿ ಅ.ಪ.ಹರಿಗುರುಗಳಲಿ ಸದ್ಭಕ್ತಿ ದೃಢಕರುಣಿಸು ಸರಸಿಜನೇತ್ರಿಗಿರೀಶಾದಿ ಸರ್ವಸುರೌಘಪ್ರಣೇತ್ರಿಶರಣು ಶರಣು ಸುಪವಿತ್ರಿ 1ಕಾಳಿ ದ್ರೌಪದಿ ಸುನಾಮೆ ನಮ್ಮಪಾಲಿಸು ಭೀಮಪ್ರೇಮಶ್ರೀ ಲಕ್ಷ್ಮೀನಾರಾಯಣನ ಭೃತ್ಯೆಕಾಲತ್ರಯ ಕೃತಕೃತ್ಯೆ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಾರತೀ ರಮಣಾ ಪವಮಾನಾ ಜಗದೊಳುಸುತ್ರಾಣ|ಘೋರದುರಿತಾರಣ್ಯ ದಹನ |ಮಾರಕದನಜಿತವಾರವಾರಕೆ ಶ್ರೀ ನಾರಾಯಣನ ಪದ ಆರಾಧನೆ ಕೊಡು ಪಮೈಗಣ್ಣಪದವಾಳ್ದವಾತ | ಲೋಕ ವಿಖ್ಯಾತ |ನಾಗಜನಕ ಭಜಕ ಪ್ರೀತ ||ಯೋಗೇಶ ಜಡಜಂಗಮ ವಿತತ | ಅದ್ಭುತ ಚರಿತ |ಬಾಗುವೆ ಲಾಲಿಸೋ ಮಾತ ||ಹೋಗುತಲಿದೆ ಹೊತ್ತೀಗಲೆ | ತವಕದಲಿಭಾಗವತರೊಳಗೆ ||ಭಾಗೀರಥೀ ಪಿತನಾಗುಣಪೊಗಳಿಸೊ |ಜಾಗುಮಾಡದಲೆ |ನಾಗಾದಿ ರೂಪನೆ ಗರುಡಾರ್ಚಿತ 1ಗೀರ್ವಾಣವಂದ್ಯ ಹರಿದಶ್ವ |ತೇಜಪೃಷದಶ್ವ |ದೂರ್ವಾಸಾರ್ಚಿತಮಾತರಿಶ್ವ||ಪಾರ್ವತೀಪತಿ ವಂದ್ಯ | ದುಸ್ವಭಾವಗತನಭಸ್ವ |ತ್ಪೂರ್ವಿಕಾ ದೇವ ಹಂಸಾಶ್ವ ||ತೋರ್ವುದು ಜ್ಞಾನವ | ಬೀರ್ವುದು ಕರುಣವ |ಪೂರ್ವದೇವ ಸಾರ್ವೆ ನಿನ್ನನು ಯನ್ನ ||ಚಾರ್ವಾಕ ಮತಿಯನು | ಬೇರೂರೆ ಸಳಿಯಾಲು |ಉರ್ವಿಯೊಳಗೆ ಮತ್ತೋರ್ವರ ಕಾಣೆ2ತ್ರಿಗುಣ ವರ್ಜಿತ | ಪ್ರಾಣೇಶ ವಿಠಲನ ದಾಸ |ನಗಪಾಲಾ ಕೊಡು ಯನಗೆ ಲೇಸ ||ಅಗಣಿತಮಹಿಮನೆ | ಕಾಷಾಯವಸನಭೂಷ |ನಿಗಮವೇದ್ಯನೆ ನಿರ್ದೋಷ ||ನಗಸ್ತೋಮಗಳಿಗೆ | ಪಗೆಯಾಗಿರ್ಪನ |ಮಗನ ಧ್ವಜದಿ ನಿಂದಿ ಗಡಕುರುಜರೆದೆ ||ಭುಗಿಲೆಂಬುವ ತೆರ ಮೃಗಧ್ವನಿ ಮಾಡಿದನಘ |ಪೊರೆವುದುಕರವಮುಗಿವೆ ಚರಣಕೆ 3
--------------
ಪ್ರಾಣೇಶದಾಸರು
ಭಾರತೀರಮಣ ನಂಬಿದೆ ಪಾದವಾರಿಜಾಕರುಣಾ ವಾರಿಧೆ ಯನ್ನನು |ದೂರ ನೋಡದೆ ನಿನ್ನ ಸಾರೆಗರೆದುಭಯ ನಿವಾರಿಸಿ ಸಲಹೋ ಪನೀಲಲೋಹಿತನ ಪಿತನೇ ಗೋಪಾಲನ ಸುತಾ |ಕಾಳಕೂಟ ಪಾನಿ ವಿಶಾಲಾಂಬಕಾ ಮಾರರಿಂದ ||ವೇಳೆ ವೇಳೆಗಳಲ್ಲಿ ವೋಲಗವ ಕೈಕೊಂಬುವ |ಕಾಳೀವಲ್ಲಭಭೇಶಭಾಸ್ಕರರೋಲು ಸನ್ನಿಭ ||ಈ ಲೌಕಿಕ ನರರಾಲಯ ಕಾಯಿಸದೆ |ವಾಲಯ ಸುಮತಿಯ ಪಾಲಿಪುದೊಲಿದು 1ಜಾನಕೀಪತಿ ಸೇವೆ ಮಾಡಿದೈ ಕಾಣೆನೋಪ್ರತಿ|ಯಾ ನಿನಗಾರಾರಾ ಭುವನದೊಳಗೆ ಗಂಧವಹನೆ ||ಮುದ್ರಿಯ ಕೊಂಡು ಕ್ಷಣದೊಳಗೆ ಜಲಧಿಯನ್ನೆ ಹಾರಿದೆ |ಸೀತೆಗುಂಗುರವನ್ನೆ ತೋರಿದೆ ||ಆ ನಗರವನು ದಹನಗೈಸಿ ಬಹು |ದಾನವರನಳಿದು ದಶಾನನನೊದ್ದೆ 2ಪಾಪದೂರನೆ ವೃಕೋದರ ಶ್ರೀ ದ್ರೌಪದೀಶನೇ |ವಿಪಿನಚರಿಸಿ ಕುರುಪತಿಯ ತರಿದು ||ಕ್ಷಿತಿಪರನ್ನು ಬಿಡಿಸಿದೆಯೈ ಪಾಂಡವರ (ಪರಿ) ಪಾಲಕ |ಕೋಪನಾಶನ ಉದ್ಧರಿಸೆನ್ನ ಚಾಪಭಂಜನ ||ಶ್ರೀಪತಿ ದ್ವಯ ಪದ ಆಪಜ ಭಜಿಸುವ |ನೇ ಪರಮೇಷ್ಠಿಯರೂಪಗುಣಾಢ್ಯ 3ದೇಶಿಕೋತ್ತಮ ಮಾರುತಿ ಇಂದಿರೇಶನ ಪ್ರೇಮ |ಸಂಪಾದಿಸಿಕೊಂಡತಿಶಯ ಭಕುತಿಯಿಂದಲೀ ಸಮೀಚೀನವಾಗಿ ||ತ್ರಿಂಶತಿ ಸಪ್ತ ಸಂಖ್ಯಾ ದರುಶನ ಗ್ರಂಥ ವಿರಚಿಸಿ ದು |ರ್ಭಾಷ್ಯವ ಸಂತರಾ ಸಲಹುವರನಾಭಾಸ ಮಾಡಿದೆ ||ವ್ಯಾಸಭಜಕ ನಿನ್ನ ದಾಸನೆನಿಸಿಕೊಳ್ಳೋ4ಅಂಜನಾಸುತ ಪ್ರಾಣೇಶ ವಿಠಲನೆಂಜಲನೊಯ್ಯುತ |ಭುಂಜಿಸಿದಿಯಲೊನಿರಂಜನಕಪಿ ಪ್ರ- ||ಭಂಜನಕೊಡು ಕೃತಾಂಜಲಿಯಿಂ ಬೇಡುವೆ |ಕಂಜನಾಭನ ಸ್ಮರಣೆ ದಿವಾ ಸಂಜೆಯಲಿಘನ||ಪುಂಜ ಸುಗುಣಮಣಿ ಮಂಜರಿ ಅರ್ಥ ಪ- |ರಂಜಳ ತಿಳಿಸೋ ಧನಂಜಯ ರಕ್ಷ 5
--------------
ಪ್ರಾಣೇಶದಾಸರು