ಒಟ್ಟು 160 ಕಡೆಗಳಲ್ಲಿ , 33 ದಾಸರು , 144 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಥ ನಡೆಯದಯ್ಯ ಪರಲೋಕ ಸಾಧನಕೆ - ಮ-ನ್ಮಥನೆಂಬ ಖಳನು ಮಾರ್ಗವ ಕಟ್ಟಿ ಸುಲಿಯುತ್ತಿರೆ ಪ ಗಜ ಕಾಯ ಕಾಂತಾರವೆಂಬ ಮಾರ್ಗದಿಸ್ತನದ್ವಯ ಕಣಿವೆಯ ಮಧ್ಯೆ ಸೇರಿಹನು 1 ಮದನ ಮಾರ್ಗವ ಕಟ್ಟಲುಬಲವುಳ್ಳ ಭಕ್ತ ಮುನಿ ಸಂನ್ಯಾಸಿ ಯೋಗಿಗಳುಸುಲಿಸಿಕೊಂಡರು, ಕೆಲರು ಸಿಕ್ಕಿದರು ಸೆರೆಯ 2 ಸುರರು ದಾನವರು - ಕ-ಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವೆ ಬಡದಾದಿಕೇಶವರಾಯ-ನಾಳ ಸಂಗಡ ಹೋದರಾವ ಭಯವಿಲ್ಲ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಪದ್ಮೇಶ ವಿಠ್ಠಲನೆ | ಪೊರೆಯ ಬೇಕಿವನಾ ಪ ಸನ್ಮುದವ ನೀನಿತ್ತು ಪ್ರೇಮದಲಿ ಸಲಹೋ ಅ.ಪ. ಮನೊಮಾನಿ ಒಡೆಯನೇ | ಮನಸಿನಲಿ ನೀನಿದ್ದುಮನೊ ವಿಕಾರಕ್ಕೆಡೆಯು | ಉಚಿತವೇ ಹರಿಯೇ |ಮನಶಾಂತಿ ಕರುಣಿಸುತ | ಘನ್ನ ಸಾಧನಗೈಸೆಗುಣ ಉಳ್ಳವನು ಇವನು | ಅನಿಲಾಂತರಾತ್ಮಾ 1 ಆದಿ ಮೂರುತಿ ಹರಿಯೆ ಭೇಧ ಪಂಚಕತಿಳಿಸಿಮೋದ ತೀರ್ಥರ ಶಾಸ್ತ್ರ | ಭೋಧ ವದಗಿಸುತಾಸಾಧನ ಸುಮಾರ್ಗದಲಿ | ನೀದಯದಲಿಡು ಇವನವೇದಾಂತ ವೇದ್ಯ ಹರಿ | ಬಾದರಾಯಣನೇ 2 ತೈಜಸನು ನೀನಾಗಿ | ಯೋಜಿಸಿದ ಅಂಕಿತವಮಾಜದಲೆ ಇತ್ತಿಹೆನೊ | ಕಾರುಣ್ಯಮೂರ್ತೇಮೂಜಗಜ್ಜನ್ಮಾದಿ | ಕಾರಣನೆ ಸಂಸಾರಗೋಜುಗಳ ಬಿಡಿಸೊ ನಿ | ವ್ರ್ಯಾಜ ಮೂರುತಿಯೇ 3 ಸಾಧು ಸತ್ಸಂಗಗಳ | ನೀ ದಯದಿ ಕೊಟ್ಟವಗೆಕಾದುಕೋ ಕೈ ಬಿಡದೆ | ಯಾದವರೊಡೆಯಾಬಾಧೆ ಮನಸಿಗೆ ಬಂದಿ | ಹುದ ಕಳೆದು ಸಂತವಿಸುಮೋದ ಮುನಿ ಸಂಪ್ರೀಯ | ಧನ್ವಂತ್ರಿ ದೇವಾ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪರಮ ಕರುಣಾಳುಗಳು ಈ ಗುರುಗಳು ಶ್ರೀ ವರತಂದೆ ಮುದ್ದುಮೋಹನವಿಠಲಾಖ್ಯರು ಪ. ಶಾಂತರು ದಾಂತರು ಸಂತೋಷ ಸುಖಿಗಳು ಅಂತರಂಗದಿ ಹರಿಯ ಧ್ಯಾನಿಸುವರು ಕಂತುಜನಕನ ಧ್ಯಾನ ಸತ್ಪಾಂಥರಿಗೆ ಬೀರುತಲಿ ಎಂತೆಂತೊ ಸುಜನರಿಂ ಸ್ತುತಿಸಿಕೊಳುತಿಹರು 1 ನಿರಪೇಕ್ಷೆಯಿಂದಲಿ ಪರರಿಗುಪಕಾರವನು ತೆರವಿಲ್ಲದೆಲೆ ಸತತ ಮಾಡುತಿಹರು ಅರಿಯೆನಿವರಾ ಮಹಿಮೆ ಪರದೇಶಿ ನಾನಿನ್ನು ಕರುಣೆಯಿಂದೆನಗೆ ಹರಿ ಅಂಕಿತವನಿತ್ತರು 2 ಸುಪ್ರೀತರಾಗಿನ್ನು ಈ ಶರೀರದ ಒಳಗೆ ಶ್ರೀಪತೀ ತೈಜಸನ ವ್ಯಾಪಾರದಿ ಶ್ರೀ ಪರಮ ಗುರುಗಳೆಂದ್ಹರಿಯ ನಿರ್ಮಾಲ್ಯವನು ಕೃಪಾತಿಶಯದಿ ಕೊಡಿಸಿ ಎನ್ನನುದ್ಧರಿಸಿದರು3 ಎಲ್ಲರೂ ದÉೀವಾಂಶರೆನ್ನುವುದು ಕೇಳುತಲಿ ನಿಲ್ಲದೇ ಮನಸು ಬಹು ತಲ್ಲಣಿಸುತಿರಲು ಪಲ್ಲವಿಸಿ ಎನ್ನ ಮನ ಮಂದಿರದಿ ಅನುಗಾಲ ಪುಲ್ಲಾಕ್ಷನನು ತೋರಿ ಉಲ್ಲಾಸಕೊಡುತಿಹರು 4 ಶ್ರೇಷ್ಠಗುರುಗಳು ಇವರು ಸೃಷ್ಟಿಯೊಳಗೆನಗಿನ್ನು ಎಷ್ಟು ಯೋಚಿಸೆ ಮನವು ಮಹಿಮೆಯರಿಯೆ ವೃಷ್ಟಿವಂಶಜ ರುಕ್ಮಿಣೀರಮಣ ಗೋಪಾಲ- ಕೃಷ್ಣವಿಠಲನ ಬಹು ದಿಟ್ಟಾಗಿ ತೋರುವರು 5
--------------
ಅಂಬಾಬಾಯಿ
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಸೌಖ್ಯ ಪ್ರದ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ಅಚ್ಯುತ ಕ್ಷಿತಿ ರಮಣ ಸೇವಾ 1 ಸಾಧನಕೆ ಸಹಕಾರಿ | ಸಾಧು ಜನ ಸತ್ಸಂಗನೀ ದಯದಿ ಒದಗಿಸುತ | ಕಾಪಾಡೊ ಹರಿಯೇ |ಮೋದ ತೀರ್ಥರ ಮತವ | ಭೋಧಿಸುತ ಇವಳೀಗೆಮೋದ ಪಾಲಿಸಿ ಹರಿಯೆ ಉದ್ಧಾರ ಮಾಡೋ2 ಮಾತೃದತ್ತವು ಎನ್ನೆ | ವೆಂಕಟೇಶನ ಪೂಜೆಸಾರ್ಥಕೆನಿಪುದು ಹರಿಯೆ | ಪಾರ್ಥ ಸಾರಥಿಯೇಕಾರ್ತಸ್ವರ ಮೊದಲಾದ | ಅರ್ಥಗಳ ಯೋಚಿಸಳುವಾರ್ತೆ ಎನ್ನನು ಭವವು ಆರ್ತರುದ್ಧರಣಾ 3 ತಂದೆ ಮುದ್ದು ಮೋಹನ್ನ | ಗುರುವನುಗ್ರಹವಿಹುದುಇಂದು ನಿಮ್ಮದಿ ನಮಿಸಿ | ಅಂಕಿತದ ಪದವಾಛಂದದಲ್ಯುದ್ಧರಿಸಿ | ಉಪದೇಶಿಸುತ್ತಿಹೆನುಮಂದನುದ್ಧಟ ತನವ | ತಂದೆ ಮನ್ನಿಪುದೋ 4 ಇಂದು ಮುಖಿ ಹೃದಯದಾ | ಅಂಬರದಿ ಪ್ರಕಾಶಿಸೆನೆನಂದ ತೀರ್ಥಸುವಂದ್ಯ | ಪ್ರಾರ್ಥಿಸುವೆ ನಿನಗೇತಂದೆ ಮುದ್ದು ಮೋಹನ್ನ | ವಿಠ್ಠಲನೆ ಗುರು ಗೋ-ವಿಂದ ವಿಠ್ಠಲ ಎನ್ನ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು
ಪಾಂಡು ರಂಗ ವಿಠಲ | ಪೊರೆಯ ಬೇಕಿವಳ ಪ ಕುಂಡಲಿಯ ಶಯ್ಯ ಬ್ರ | ಹ್ಮಾಂಡದೊಡಿಯಾ ಅ.ಪ. ಹಸುಳೆ ತನ ಸ್ವಾಪದಲಿ | ಎಸೆವ ನಂಜುಡೇಶದರ್ಶನಾಕಾಂಕ್ಷಿಸುತ | ನುಸುಳಿ ಗುಡಿ ಪೊಗಲೂಅಸಮ ಗುರು ಸುಧೀಂದ್ರ | ಶಿಷ್ಯರನು ತಾ ತೋರಿಎಸೆವ ಸದ್ಗತಿಗೆ ಗುರು | ದರ್ಶನವೆ ಪಥವೆಂದೇ 1 ಲೀಲೆಯೊಳ್ ತೈಜಸನು | ಮಾಲೆಧರ ದಂಪತಿಯಶೀಲ ರೂಪವ ತಾಳಿ | ಬಾಲಕಿಯ ಬಯ್ದೂ |ಏಳಲನ ಮಾಡದಲೆ | ಶೀಲ ಗುರು ಬಳಿ ಪೋಗಿಬಾಲಕಿಯು ಪರಮಾನ್ನ | ಮೆಲುವಂತೆ ಮಾಡ್ಡಾ 2 ಗುರು ಹಿರಿಯರಾ ಸೇವೆ | ಹರಿಯಲ್ಲಿ ಸದ್ಭಕುತಿವರಜ್ಞಾನ ಪಾಲಿಸುತ | ಮೆರೆಸೊ ಈ ಶಿಶುವವರ ಪ್ರದಯಕನಾಗಿ | ಸರುವ ಸದ್ಧಭಿಲಾಷೆಗರೆನು ಹರ್ಷವನೀಯೋ | ಮರುತಾಂತರಾತ್ಮಾ 3 ಕಲಿಹೆಚ್ಚದಾ ಯುಗವು | ಸತಿಮಂತ್ರ ತಂತ್ರಗಳುಫಲಿಸಲಾರವು ಹರಿಯೆ | ಜಲಜನಾಭಾಚೆಲುವ ತವನಾಮ ಸ್ಮøತಿ | ಘಳಿಗೆ ಬಿಡದಲೆ ಕೊಟ್ಟುಒಲಿಯೊ ಕಾರುಣ್ಯನಿಧಿ | ಬಾಲ ಗೋಪಾಲ4 ಪಾವನದ ಅಂಕಿತವ | ಓದಿ ಸೂಚಿಸಿದಂತೆತಾವಕಳಿಗಿತ್ತಿಹೆನು | ಶ್ರೀ ವರನೆ ಹರಿಯೇ |ದೇವ ದೇವೇಶಗುರು | ಗೋವಿಂದ ವಿಠ್ಠಲನೆನೀ ವೊಲಿದು ದಾಸತ್ವ | ಭಾವ ಸಿದ್ಧಿಪುದೋ 5
--------------
ಗುರುಗೋವಿಂದವಿಠಲರು
ಪಾಲಿಸೆನ್ನ ಪಾವನ ಮೂರ್ತಿಯೇ ಪ ಸತ್ಯಜ್ಞಾನಾನಂದತೀರ್ಥ ನಿನ್ನಯ ಉತ್ತಮ ಹಸ್ತವನಿಟ್ಟು ಅಭಯಾ ಭಕ್ತಗೆ ಅಂಕಿತವಿತ್ತು ಕಾಯೋ ಕರುಣಾನಿಧಿಯೇ 1 ಆನಂದತೀರ್ಥರ ಗ್ರಂಥಶ್ರವಣ ನೀನೆ ಮಾಡಿಸೆನ್ನೊಳಿಟ್ಟು ಕರುಣಾ ಮಾನಾಭಿಮಾನವು ನಿನ್ನ ಈ ದಾಸನಾ 2 ತಡವ್ಯಾಕೆ ತ್ವರಾ ಪಡೆಯೋ ಹನುಮೇಶವಿಠಲ ಪ್ರಿಯ ಕುವರಾ 3
--------------
ಹನುಮೇಶವಿಠಲ
ಪಾಹಿ ಮೋಹನ ವಿಠಲ ಪರಮಕರುಣಾಜಲಧಿ ಮಹದಾದಿ ದೇವ ವಂದ್ಯ | ಮೋಹಪಾಶವ ಬಿಡಿಸಿ ನಂಬಿದವನಿಗೆ ಒಲಿದು ರಹಸ್ಯಮತಿ ಕೊಡುವುದು ಸ್ವಾಮಿ ಪ ನೀನಿತ್ತ ಮಾತುಗಳು ಪೊಳ್ಳಾಗಬಲ್ಲವೆ ಅನಂತ ಜನುಮವಾಗೆ ಆನೊಬ್ಬನೆನ್ನದಿರು ಕೀರ್ತಿಸುವ ನರನೆಂದು ಜ್ಞಾನಿಗಳಿಗರಿವಾಗಿದೆ ಏನಯ್ಯ ನಿನ್ನಂಘ್ರಿ ಭಜಿಸದಲೆ ಇರುತಿಪ್ಪ ಮಾನವನ ಕ್ಲೇಶಕೆಣಿಯೆ ಆನಂದ ನಂದನನೆ ತೃಣವ ಪಿಡಿದು ರುತುನ ವನು ಮಾಡಿ ತೋರುವ ಸ್ವಾಮಿ 1 ನಿನ್ನಧೀನ ಕರ್ಮಸ್ವಭಾವ ಮೊದಲಾಗಿ ಅನ್ಯಥಾ ಯಲ್ಲಿ ಕಾಣೆ ಮನ್ನಿಪುದು ಮುದದಿಂದ ಮುಂದನೆನ್ನದೆ ಎನ್ನ ಬಿನ್ನಪವ ಬರಿದೆನಿಸದೆ ಅನ್ಯನಿವನಲ್ಲವೊ ಎನ್ನನ್ನೆ ಪೊಂದಿದ ನಿನ್ನ ದಾಸನ ದಾಸನು ಉನ್ನಂತ ಗುಣವಿತ್ತು ಉರುಕಾಲ ಒಲಿದು ಪ್ರ ಸನ್ನನಾಗೋ ಪಾವನ್ನರನ್ನ 2 ನರರಿಗೆ ಸಾಧನ ಸತ್ಕೀರ್ತನೆ ಎಂದು ಪರಮೇಷ್ಠಿ ಒರೆದನಿದಕೊ ಪರಿಪರಿ ಬಗೆಯಿಂದ ಕರ್ಮಗಳ ಮಾಡಿದರೆ ದುರಿತ ಬೆಮ್ಮೊಗವಾಗವು ಪಿರಿದಾಗಿ ಬೇಡಿದೆನೊ ವಿಜಯವಿಠ್ಠಲ ನಿನ್ನ ಶರಣರೊಳಗಿಟ್ಟು ಕಾಪಾಡು ಸ್ಥಿರವಾಗಿ ಅಂಕಿತವ ಪ್ರೇರಿಸಿ ಕೊಡಿಸಿದ್ದು ಧರೆಯೊಳಗೆ ಪರಿಪೂರ್ಣವಾಗಿ ಇರಲಿ ಸ್ವಾಮಿ3
--------------
ವಿಜಯದಾಸ
ಪಾಹಿಮಾಂ ತೀರ್ಥಧಾಮಾ | ಪಾಹಿಮಾಂತ್ರಿಜಗಾದಿ | ಪಾಹಿಮಾಂ ತನುಜಧವ | ಹೇಹಿಮರಾಚೂಡ | ದೇಹಿ ಮನೋಭೀಷ್ಮ | ಮಹೀಶಾಯಿಸುಖ ಆಕಾಶ | ವಾಹಿನಿ ಧರಾ | ಮೋಹನ ಚರಿತ ರಜತಗೇಹ ಸಾಂಬಾ ಪ ಈಶ ಅಘನಾಶ ಸರ್ವೇಶ ಸುರಕೋಶ ಮುನಿ | ತೋಷಗಜಾಸುರ ವಿನಾಶ ಭವಪಾಶ ಹರ | ವಾಸವಾದ್ಯನುತ ನಿರ್ದೋಷ ಶ್ರೀ ಭಸಿಶಿತ | ವಿ ಭೂಷಿತ ವಿನಾಶ ರಾಮೇಶ ಶಿವಶಂಭೋ 1 ವೀರ ರಣಧೀರ ಗಂಭೀರ ಸಾಕಾರವರ | ಪ್ರಾರ ಸಂಹಾರ ಭಯ ಪೂರಿತ ಪುರಾರಿ | ಮೌ ದಾರ ಚಿರಚಿರಂಡ ಜಾರಿವಿಹಾರಿ | ಶ್ರೀ ಹೇರಂಬ ತಾತದಯ ಪಾರಾವಾರ ಶಂಭೋ 2 ದುರಿತ | ಕಾಲಹರ ಗೋಗಮನ ಭಾಲನಯನಾರ್ತಜನ | ಪಾಲ ವಿಶಾಲಾ ತ್ರಿಶೂಲಧೃತನಿರುತ ಶುಭ ಲೀಲ ಶ್ರೀ ಗುರುಕೃಷ್ಣ ಬಾಲಕ ಪ್ರಭು ಶಂಭೋ3 ಅಂಕಿತ-ಶ್ರೀಗುರುಕೃಷ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪುರಂದರ ಗುರುವರ ಇನ್ನು ಭಾಳ ಹೊತ್ತಾಯಿತು ಭಕುತ ಜನಪ್ರಿಯ ಪ. ಶ್ರೀಶನಪ್ಪಣೆಯಿಂದ ಭೂಲೋಕದಲಿ ಪುಟ್ಟಿ ಆಶೆಯಿಂದಲಿ ಧನ ಗಳಿಸಿ ಕೋಟಿ ವಾಸುದೇವನು ಎಚ್ಚರಿಸಲು ವೈರಾಗ್ಯ ದಾಸತ್ವದಲಿ ಜಗದಿ ಮೆರೆಯಬೇಕು 1 ವ್ಯಾಸ ಮುನಿಯಿಂದುಪದೇಶಕೊಳ್ಳಲುಬೇಕು ದಾಸತ್ವ ಜಗದಲಿ ಸ್ಥಾಪಿಸಬೇಕು ದೋಷರಹಿತ ಮಧ್ವಶಾಸ್ತ್ರ ತತ್ವಗಳ ಪ್ರ ಕಾಶಗೈಸುತ ಕವನಗೈಯ್ಯಬೇಕು 2 ಸತಿಸುತ ಪರಿವಾರ ಭೂ ಸಂಚರಿಸಬೇಕು ಸ್ತುತಿಸುತ್ತ ಹರಿಯನ್ನು ಕುಣಿಸಬೇಕು ಜತನದಿ ನಿಜತತ್ವಗಳನರಿಯಲಿಬೇಕು ಕ್ಷಿತಿಗೆ ಅಚ್ಚರಿ ಮಹಿಮೆಯ ತೋರಬೇಕು 3 ಪುಷ್ಯದಮಾವಾಸೆ ಹರಿಪುರ ಸೇರಲು ಶಿಷ್ಯಕುಲವು ಜಗದಿ ಬೆಳೆಯಲೆಂದು ಶಿಷ್ಯ ವಿಜಯದಾಸರಿಗೆ ಅಂಕಿತವನಿತ್ತು ಶಿಷ್ಯ ಪ್ರಶಿಷ್ಯ ಸಂತತಿ ಬೆಳಸಬೇಕು 4 ಪಾಪಿ ಜನಗಳ ಪಾವನಗೈಯಲಿಬೇಕು ತಾಪಪಡುವರ ಪೊರೆಯಲೆತ್ನಿಸಬೇಕು ಶ್ರೀಪತಿ ದಾಸತ್ವ ಜಗದಿ ನಿಲ್ಲಿಸಬೇಕು ಗೋಪಾಲಕೃಷ್ಣವಿಠ್ಠಲನ ಸ್ಮರಿಸಬೇಕು 5
--------------
ಅಂಬಾಬಾಯಿ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪ್ರಹ್ಲಾದ ವರದ ವಿಠಲ | ಕಾಪಾಡೊ ಇವಳಾ ಪ ಆಹ್ಲಾದವನೆ ಕೊಟ್ಟು | ಸಂತೈಸೊ ಹರಿಯೇ ಅ.ಪ. ಮಣಿ | ಉಪದೇಶ ಬೇಡುವಳೋಬೋಧಿಸಿಹೆ ಅಂಕಿತವ | ಶೀದ ಪೊರೆ ಇವಳಾ 1 ಕಾಮ ಮದ ಮಾತ್ಸರ್ಯ | ಸ್ತೋಮವನೆ ಕಳೆದುಸತ್‍ಕಾಮಗಳ ಪೂರೈಸು | ಸೋಮಧರವಂದ್ಯಾ |ಕಾಮ ಜನಕನೆ ತಾರ | ತಮ್ಯವನೆ ತಿಳಿಸುತ್ತನೇಮದಿಂ ಭೇದಗಳ ಪ್ರೇಮದಲಿ ತಿಳಿಸೋ 2 ಭಕ್ತ ಭಕ್ತರ ಅಸದ್ | ಭಕ್ತಿ ಮಾಡಲಿ ಇವಳುಮುಕ್ತಿ ಮಾರ್ಗದ ಹಾದಿ | ಯುಕ್ತಿಯಲಿ ಅರಿತೂಗೋಪ ಗುರು ಗೋವಿಂದ | ವಿಠ್ಠಲನ ಕೀರ್ತಿಸುತೆಉತ್ತರಿಸಲೀ ಭವವ | ಉತ್ತಮೋತ್ತಮನೇ3
--------------
ಗುರುಗೋವಿಂದವಿಠಲರು
ಪ್ರಾಣ ಗುರು ರಾಮ ವಿಠಲ | ನೀನೆ ಪೊರೆ ಇವಳಾ ಪ ಮೌನಿ ಸದ್ವಂದ್ಯಗೆ | ಶ್ರೀನಿವಾಸದೇವ ಅ.ಪ. ಅರುಹಳೆನ್ನಳವಲ್ಲ | ಗುರುಕರುಣ ಸತ್ಪಾತ್ರೆವರಸುತ್ಯೆಜಸನಿತ್ತ | ಪಾನಕವ ಕೊಂಡುಸಿರಿ ರಮಣ ಮಂದಿರವ | ಸೇರಿ ನಾರಿಳ ಫಲವುಕರಗತವು ಆಗಲದು | ವರಮೂರ್ತಿಎನಿಸೆ 1 ಸುಪ್ತೀಶನಾಜ್ಞೆಯಲಿ | ಇತ್ತಿಹೆನೊ ಅಂಕಿತವಕತೃಸಿರಿ ರಾಮನೆ | ವ್ಯಕ್ತ ತೆರನಾದಾಮಕ್ತಗೊಡೆಯನೆ ದೇವ | ಭಕ್ತವತ್ಸಲಹರಿಯೆಆರ್ತರುದ್ಧರತಾ ಹರಿ | ಅರ್ಥಿಯಲಿಸಲಹೊ 2 ಹರಿದಾಸ್ಯದೊರಕಲ್ಕೆ | ಪೂರ್ವಸುಕೃತವೇ ಮಾರ್ಗತರಳೆ ಅದ ಪಡೆದಿಹಳು | ಕಾರುಣ್ಯ ಮಾರ್ತೆಮರುತಮತದಲ್ಲಿರುವ | ಕಾರುಣದಿ ಪೊರೆ ಇವಳಸರ್ವಜ್ಞಸರ್ವೇಶ | ಸುರ ಸಾರ್ವ ಭೌಮ3 ಭ್ರೂತ ಪಂಚಕದೇಹ | ಸುಸ್ಥಿರವು ಅಲ್ಲೆಂಬಖ್ಯಾತ ಮತಿಯನೆ ಕೊಟ್ಟು | ಸಲಹ ಬೇಕಿವಳಾಮಾತುಮೂತಿಗೆ ನಿನ್ನ | ನಾಮ ಸಂಸೃತಿಯಿತ್ತುಈ ತರಳೆನುದ್ದರಿಸು | ಮಾತಳಾಂತಕನೆ4 ಹಲವು ಮಾತೇಕೆ ಹರಿ | ಕಲಿಯುಗದಿ ತವನಾಮಬಲುಮಂದಿ ಜಪಿಸುತ್ತ | ಭವವ ದಾಂಟಿಹರೊಒಲಿಮೆಯಿಂದವಳನ್ನು | ಸಲಹಲ್ಕೆ ಪ್ರಾರ್ಥಿಸಿಹೆಎಲರುಣಿ ಶಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರಿಯ ಹಯಾಸ್ಯವಿಠಲ | ದಯದಿ ಪೊರೆ ಇವನಾ ಪ ನಯವಿನಯದಿಂ ಬೇಡ್ವ | ದಾಸತ್ವ ದೀಕ್ಷಾ ಅ.ಪ. ದಾಸರಾಯರ ಕರುಣ | ಪಾತ್ರ ನಿರುವನು ಈತಸೂಸಿದತಿಭಕುತಿಯಿಂ | ಸೇವೆಯನು ಗೈವಾ |ಏಸೊ ಜನ್ಮದ ಪುಣ್ಯ | ರಾಶಿ ಬಂದೊದಗುತಲಿಆಶಿಸುತ್ತಿರುವನೂ | ದಾಸದೀಕ್ಷೆಯನು 1 ಅಂಕಿತವ ನಿತ್ತಿಹೆನೊ | ಪಂಕಜಸನ ವಂದ್ಯಶಂಕೆಯಿಲ್ಲದೆ ಸ್ವಪ್ನ | ಸೂಚ್ಯದಂತೇವೆಂಕಟೇಶನೆ ಇವನಾ | ಮಂಕುಮತಿಯನೆ ಕಳೆದುಬಿಂಕದಿಂ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 2 ಶ್ರದ್ಧೆಯಿಂದಲಿ ಇವನು | ಮಧ್ವಮತ ದೀಕ್ಷೆಯಲಿಬದ್ಧವಾಗಲಿ ಹರಿಯೆ | ಸಿದ್ದ ಮುನಿವಂದ್ಯಾಶುದ್ದ ತತ್ವಗಳೆಲ್ಲ | ಬುದ್ದಿಗೇ ನಿಲುಕಿಸುತಶುದ್ದೋದ ನೀನು ತವ | ಪ್ರಧ್ವಂಸಗೊಳಿಸೊ 3 ಹರಿಯರಲಿ ಸದ್ಭಕ್ತಿ | ಕರುಣಿಸುತ ತೋಕನಿಗೆ ಪರಿಪರಿಯಲಿಂ ಕೀರ್ತಿ | ಸಂಪನ್ನನೆನಿಸೋಮರುತಂತರಾತ್ಮ ಹರಿ | ದುರಿತಾಳಿ ಪರಿಹರಿಸಿಕರುಣದಿಂ ಕೈಪಿಡಿದು | ಉದ್ದರಿಸೊ ಹರಿಯೇ 4 ಕೈವಲ್ಯದರಸಾಗಿ | ಭಾವಮೈದುನಗೊಲಿದುಬೋವ ಬಂಡಿಗೆ ಆದೆ | ಶ್ರೀವರನೆ ಹರಿಯೇಗೋವತ್ಸದನಿ ಕೇಳಿ | ಆವು ಧಾವಿಸುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು