ಒಟ್ಟು 70 ಕಡೆಗಳಲ್ಲಿ , 21 ದಾಸರು , 70 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಗನ ಲೂಟಿ ಘನವಮ್ಮ-ಕರೆದು |ಚಿಣ್ಣಗೆ ಬುದ್ಧಿಯ ಹೇಳೇ ಗೋಪಮ್ಮ ಪಶಿಶುಗಳ ಕೈಲಿದ್ದ ಬೆಣ್ಣೆಗೆ ಉಳಿವಿಲ್ಲ |ಪಸು-ಕರುಗಳಿಗೆ ಮೀಸಲುಗಳಿಲ್ಲ ||ಮೊಸರ ಮಡಕೆಯಲಿಮಾರಿಹೊಕ್ಕಂತಾಯ್ತು |ಶಶಿಮುಖಿಯರು ಗೋಳಿಡುತಿಹರಮ್ಮ1ಮರೆತು ಮಲಗಿದ್ದವರ ಮೊಲೆಗಳ ತಾನುಂಬ |ಕಿರಿಯ ಮಕ್ಕಳಿಗೆ ಮೊಲೆಹಾಲಿಲ್ಲವೊ ||ಹೊರಗೆ ಲೂಟಿ ಒಳಗೆ ಈ ಲೂಟಿ-ಎ-|ಚ್ಚರದ ಬಟ್ಟೆಯ ಕಾಣೆವಮ್ಮ ಗೋಪಮ್ಮ 2ಊರೊಳಗಿರಲೀಸ ಊರ ಬಿಟ್ಟು ಹೋಗಲೀಸ |ಈರೇಳು ಭುವನಕೆ ಒಡೆಯನಂತೆ ||ವಾರಿಜನಾಭಶ್ರೀ ಪುರಂದರವಿಠಲನ |ಕೇರಿಯ ಬಸವನ ಮಾಡಿ ಬಿಟ್ಟೆಯಮ್ಮ 3
--------------
ಪುರಂದರದಾಸರು
ಫಣಿವೇಣಿ ಶುಕಪಾಣಿ ವನಜಾಕ್ಷಿ ರುಕ್ಮಿಣಿ ಪ.ಈರೇಳುಲೋಕದ ಮಾತೆ ಭೂಲೋಲಭೀಷ್ಮ ಕಜಾತೆಗುಣಶೀಲೆ ಗುಣಾತೀತೆ ತ್ರಿದಶಾಲಿಸನ್ನುತೆ 1ಶ್ರೀವಾಸುದೇವನ ರಾಣಿ ಲೋಕೇಶಮುಖ್ಯರಜನನಿಸುಪ್ರಕಾಶಿನಿ ಕಲ್ಯಾಣಿ ಕಲಹಂಸಗಾಮಿನಿ 2ಸುವಿಲಕ್ಷಣೈಕನಿಧಾನಿ ಮೀನಾಕ್ಷಿ ಪಲ್ಲವಪಾಣಿಸುಕ್ಷೇಮಸುಖದಾಯಿನಿ ಲಕ್ಷ್ಮೀನಾರಾಯಣಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ
ಮಂಗಳ ಮಹಿಮೆಗೆ ಮಂಗಳಶುಭಮಂಗಳದೇವಿಗೆ ಮಂಗಳ ಪ.ನಾರಾಯಣನರ್ಧಾಂಗಿಗೆ ಮಂಗಳನೂರಸುಖನ ತಾಯಿಗೆ ಮಂಗಳಮೂರು ಅಂಬಕÀನಜ್ಜಿಗೆ ಮಂಗಳಈರೇಳು ಲೋಕೇಶಳಿಗೆ ಮಂಗಳ 1ಅಗಣಿತಚಂದ್ರಾರ್ಕಾಭೆಗೆ ಮಂಗಳನಗೆಮೊಗದರಸಿಗೆ ಮಂಗಳಸುಗುಣಗಣಾನಂತಾಬ್ಧಿಗೆ ಮಂಗಳಝಗಝಗಿಪಾಭರಣೆಗೆ ಮಂಗಳ 2ಬೇಡಿದ ಭಾಗ್ಯಪ್ರದಾತ್ರೆಗೆ ಮಂಗಳನಾಡೊಳರ್ಚಕ ನಾಥೆಗೆ ಮಂಗಳಪ್ರೌಢಜನೇಶ್ವರಿ ಪವಿತ್ರೆಗೆ ಮಂಗಳೆಗೂಡಪ್ರಸನ್ವೆಂಕಟಗೆ ಮಂಗಳ 3
--------------
ಪ್ರಸನ್ನವೆಂಕಟದಾಸರು
ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನಖಗಕುಲರನ್ನ ಮನೋರಮಣಮನೋರಮಣ ಕಾಂತ ಶ್ರೀರಾಮನಅಗಲದಿರು ಕಾಣೆ ಮರಿಯಾನೆ ಶೋಭಾನೆ 1ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ-ಕೃತ್ಯಕೆಲ್ಲಕ್ಕನುಸರಿಸಿಅನುಸರಿಸಿ ನಡೆ ನೀ ಮಗಳೆಹಿತವಾಗಿ ಬಾಳು ಪತಿಯೊಳು ಶೋಭಾನೆ 2ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆಗಂಡನುಣ್ಣದ ಮೊದಲು ನೀಮೊದಲು ನೀನುಣ್ಣದಿರುಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3ಮುಗುಳು ನಗೆಯ ಬೀರು ಜಗಳವ ಮಾಡದಿರುಜಗದೊಳು ಕೀರ್ತಿಯುತಳಾಗುಯುತಳಾಗು ಬಂಧುಗಳಲಿ ನೀಹಗೆಯ ಮಾಡದಿರು ಕೃಪೆದೋರು ಶೋಭಾನೆ 4ವೃದ್ಧ ಮಾವನಪಾದಹೊದ್ದಿ ಸೇವೆಯಮಾಡುಸುದ್ಧ ಭಾವದೊಳು ನಡೆ ಮಗಳೆನಡೆ ಮಗಳೆ ನಿತ್ಯಸುಮಂಗಲೆಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರುಪ್ರತ್ಯೊಬ್ಬಳೆ ಸ್ಥಳದಿ ನಿಲದಿರುನಿಲದಿರು ನೀರಜಗಂಧಿಸತ್ಯ ವಚನವನೆ ಸವಿಮಾಡು ಶೋಭಾನೆ 6ಮೈದುನರನ್ನು ತನ್ನ ಮಕ್ಕಳೆಂಬಂತೆನೋಡುಸಾಧುಭಾವದದಲಿ ನಡೆ ಮಗಳೆನಡೆ ಮಗಳೆ ಪಂಕ್ತಿಯಲಿಭೇದ ಮಾಡದಿರು ಕೃಪೆದೋರು ಶೋಭಾನೆ 7ಕಂಡರೆ ಶಿಷ್ಟರ ದಂಡ ನಮಸ್ಕರಿಸುಹಿಂಡುದಾಸಿಯರ ದಣಿಸದಿರುದಣಿಸದಿರು ಉತ್ತಮಳೆಂದು ಭೂ-ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ 8ಚಂಡಿತನವ ನಿನ್ನ ಗಂಡನೊಳ್ಮಾಡದಿರುಗಂಡಸರ ಮುಂದೆ ಸುಳಿಯದಿರುಸುಳಿಯದಿರು ಸಂತತ ಸೌಖ್ಯ-ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆಸುರತಸಮಯದಿ ವೇಶ್ಯಾ ತರುಣಿಯಳತರುಣಿಯಳ ತೆರದಿ ರಾಮನ ಸತಿಯಂ-ತೆ ಮಾಡವ್ವ ಸುಖಂ ಜೀವಾ ಶೋಭಾನೆ 10ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವುಕುಕ್ಷಿಈರೇಳು ಜಗವನ್ನುಜಗವನ್ನು ನಮ್ಮನ್ನು ಸರ್ವರರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವೇಣುನಾದ ಬಾರೊ, ವೆಂಕಟರಮಣನೆ ಬಾರೊ |ಬಾಣನ ಭಂಜಿಸಿದಂಥ ಭಾವಜನಯ್ಯನೆ ಬಾರೊ ಪಪೂತನಿಯ ಮೊಲೆಯುಂಡ ನವ-|ನೀತ ಚೋರನೆ ಬಾರೊ ||ದೈತ್ಯರಾವಣನ ಸಂಹರಿಸಿದ |ಸೀತಾನಾಯಕ ಬಾರೊ 1ಹಲ್ಲು ಮುರಿದು ಮಲ್ಲರ ಗೆದ್ದ |ಘುಲ್ಲನಾಭನೆ ಬಾರೊ ||ಗೊಲ್ಲತಿಯರೊಡನೆ ನಲಿವ |ಚೆಲ್ವ ಮೂರುತಿ ಬಾರೊ 2ಮಂದಾರವನೆತ್ತಿದಂಥ |ಇಂದಿರಾ ರಮಣನೆ ಬಾರೊ ||ಕುಂದದೆ ಗೋವುಗಳ ಕಾಯ್ದ |ನಂದನಂದನನೆ ಬಾರೋ 3ನಾರಿಯರ ಮನೆಗೆ ಪೋಪ |ವಾರಿಜಾಕ್ಷನೆ ಬಾರೋ ||ಈರೇಳು ಭುವನವ ಕಾಯ್ವ |ಮಾರನಯ್ಯನೆ ಬಾರೊ 4ಶೇಷಶಯನ ಮೂರುತಿಯಾದ |ವಾಸುದೇವನ ಬಾರೊ ||ದಾಸರೊಳು ವಾಸವಾದ |ಶ್ರೀಶಪುರಂದರವಿಠಲ ಬಾರೊ5
--------------
ಪುರಂದರದಾಸರು
ಶರಣು ಶರಣೂ ಪ.ಮಹಾದೇವರಾ ಗರ್ಭದಲಿ ಉದ್ಭವಿಸಿದಿಯೊ ನೀನುಸಾಧುಮಾತೆಯ ಶಾಪವನ್ನು ಕೈಗೊಂಡುಆದಿಪೂಜೆಗೆ ಅಭಿಮಾನಿದೇವತೆಯಾದಿಮಾಧವನಮ್ಮ ಹಯವದನನ್ನ ಪ್ರಿಯ1ಹಿಮಗಿರಿಗೆ ಮಗಳಾಗಿ ಜನಿಸಿ ತಪವನು ಗೈದುಕಮಲಸಂಭವಸುತನ ಒಲಿಸಬೇಕೆಂದುರಮಣಿ ರಾಮಮಂತ್ರ್ರ ದಿನಸಹಸ್ರವು ಜಪಿಸೆಕಮಲಾಕ್ಷನೆಮ್ಮ ಹಯವದನನ್ನ ಪ್ರಿಯೆ 2ಮಡದಿ ಹೋದಾಗ್ರಹಕೆ ಜಡೆಯ ಕಿತ್ತಪ್ಪಳಿಸಿಕಡುಘೋರ ತಪಗೈಯೆ ಮನ್ಮಥನು ಬರಲುಕಿಡಿಗಣ್ಣಿನಲಿ ಅವನ ಭಸ್ಮವನು ಮಾಡಿದಿಕಡಲೊಡೆಯ ನಮ್ಮ ಹಯವದನನ್ನ ಪ್ರಿಯ 3ಮತ್ಸ್ಯದೇಶಕೆ ಪೋಗಿ ಮನದ ಚಿಂತೆಯಲಿರಲುತುಚ್ಛರಕ್ಕಸನು ನಿಮ್ಮನು ಪಿಡಿಯ ಬರಲುಚಿತ್ತದೊಲ್ಲಭಗ್ಹೇಳಿ ಕೊಚ್ಚಿಸಿದಿ ಅವನ ಶಿರಅಚ್ಯುತನಮ್ಮ ಹಯವದನನ್ನ ಪ್ರಿಯೆ4ಕೇಸರಿಯ ಗರ್ಭದಲಿ ಉದ್ಭವಿಸಿದಿಯೊ ನೀನುತ್ರೇತೆಯಲಿ ರಾಮರ ಸೇವೆಯನು ಮಾಡಿಭೂತಳದೊಳು ಭೀಮ ಕಡೆಗೆ ಯತಿಯಾಗಿ ನೀಶ್ರೀಪತಿ ಹಯವದನ ದೂತ ಪ್ರಖ್ಯಾತ 5ಈರೇಳು ಲೋಕದ ಜನರ ನಾಲಗೆಯಲ್ಲಿಬೀಜವನು ಬಿತ್ತಿ ಅನ್ನವ ಕೊಡುವ ತಾಯೆವಾರಿಜಸಂಭವನ ಹಿರಿಯ ಪಟ್ಟದ ರಾಣಿನೀರಜಾಕ್ಷನಮ್ಮ ಹಯವದನನ್ನ ಪ್ರಿಯೆ6ಜನನಿಹುಟ್ಟಿದ ನಾಳದಲ್ಲಿ ಜನಿಸಿದಿ ನೀನುಜನರ ಸೃಷ್ಟಿ ಸ್ಥಿತಿಗೆ ಕಾರಣನೆಂದುಅನಿಮಿಷರೆಲ್ಲರೂ ಸ್ತುತಿಸಿ ಕೊಂಡಾಡಲುವನಜಾಕ್ಷ ನಮ್ಮ ಹಯವದನನ್ನ ಪ್ರಿಯ 7ಪದ್ಮದಲ್ಲುದ್ಭವಿಸಿ ರಾಮರ ಕೈಹಿಡಿದುಪದ್ಮಾಕ್ಷನ ರಥಕ್ಕೆ ಕೈ ನೀಡಿ ಬಂದೆಪದ್ಮಾವತಿ ಎಂದು ಖ್ಯಾತಿ ಮೂರ್ಲೋಕದೊಳುಪದ್ಮಾಕ್ಷ ನಮ್ಮ ಹಯವದನನ್ನ ಪ್ರಿಯೆ 8ಅನಂತ ನಾಟಕಾನಂತ ಸೂತ್ರಧಾರಿಅನಂತ ಚರಿತ ನಿತ್ಯಾನಂದಭರಿತಅನಂತಾಸನ ಶ್ವೇತದ್ವೀಪ ವೈಕುಂಠಅನಂತಗುಣಭರಿತ ಹಯವದನ ಚರಿತ 9ಶರಣುಮತ್ಸ್ಯಕೂರ್ಮವರಾಹನಾರಸಿಂಹಶರಣು ವಾಮನಭಾರ್ಗವರಾಮಚಂದ್ರಶರಣು ಕೃಷ್ಣ ಬೌದ್ಧ ಕಲ್ಕ್ಯಸ್ವರೂಪನೆಶರಣು ಹಯವದನನ್ನ ಚರಣಗಳ ನುತಿಪೆ 10
--------------
ವಾದಿರಾಜ
ಶ್ರೀ ಕಾಶಿವಿಶ್ವನಾಥ ಶಿಷ್ಟ ಜನ ಪ್ರೀತಲೋಕ ರಕ್ಷಕ ವರದಾತ ಪ್ರಖ್ಯಾತಏಕಾನೇಕ ವಿವೇಕಶರಧಿಶರಪಾಕಾರಿ ಪ್ರಿಯ ಪಾಹಿಮಾಂ ಶಂಭೋಪಕರಿಮುಖಪಿತ ಈಶ ಕಲಿವಿನಾಶಕಕರಿಚರ್ಮ ವಸ್ತ್ರಧಾರಿಕದನಕಂಠೀರವಉರಗಭೂಷಣ ದೇವ ಉತ್ತಮಭಾವಕರದಿ ಬ್ರಹ್ಮಕಪಾಲ ಶಿರರುಂಡಮಾಲಧರದುರಿತನಿವಾರ ಗುಣಸಾರ ಗಂಭೀರಸಾರರಹಿತ ಸಂಸಾರ ವಿದೂರಆರಾಧಿತ ಪ್ರಜ್ಞಾಂಬುಜಭವನುತಸಾರಾಸಾರ ವಿಚಾರಪಿನಾಕಿ1ಶಶಿಯ ಶಿರದೊಳಿಟ್ಟ ಸುರಮುನಿ ಶ್ರೇಷ್ಠಅಸಮ ಅಂಧಕಾಸುರ ಸಂಹಾರಭಸಿತ ಮೈಯೊಳು ಪೂಸಿ ಭುಜಗನ ವಿಷತಾಳ್ದವೃಷಭವಾಹನಲೋಲಉರ್ವಿಜನ ಪಾಲಈಶ ಸುರೇಶ ಉಮೇಶಭೂತೇಶಭಾಸುರಕೋಟಿಸವಿತಸಂಕಾಶ ವಿನು-ತಸುರಜನ ಪಾಲಿತ ಶುಭಾಂಗಕಪರ್ದಿ2ಮೆರೆದೆಭುವನಈರೇಳು ಧರಿಸಿ ಕುಕ್ಷಿಯೊಳುನರರ ರಕ್ಷಿಸಿ ಪೊರೆದು ನಾದದೊಳ್ಬೆರೆದುಧರಣಿಯೊಳೆ ಪೆಸರ್ವಡೆದವರಕಾಶಿಪುರದಮೆರವ ವಿಶ್ವೇಶದೇವ ಸುರನಿಕರ ವಂದಿತಹರ ಅಸುರಹರ ಭವದೂರ ವೀರ ಚಿದಾನಂದಅವಧೂತಕಾರಣ ನಿರ್ಮಲ ಚಾರುಪರಾತ್ಮಕಮಾರಭಸ್ಮಾಂಕಿತ ಗೌರಿಯ ರಮಣ3
--------------
ಚಿದಾನಂದ ಅವಧೂತರು
ಸೀತೆ ಸದ್ಗುಣ ಗಣ | ವ್ರಾತೆ ಈರೇಳು ಲೋಕ |ಮಾತೆ ಪ್ರಣತ ಜನ | ಪ್ರೀತೆ ಸಾಗರ ಜಾತೆ ||ಮಾತು ಮಾತಿಗೆ ರಘು | ನಾಥನ ಸ್ಮರಣೆಯ |ಆತುರದಲಿ ಕೊಡು | ಸಿತಾಂಶು ವದನೆ ||ಪಲ್ಲ||ಶ್ರೀ ಭೂ ದುರ್ಗಾಂಭ್ರಣೀ ಸ್ವ | ರ್ಣಾಭೆ ರಾಮನ ರಾಣೀ |ಸಾಭಿಮಾನ ನಿನ್ನದ | ಮ್ಮಾ ಬಾಲಕನ ಕರ- ||ವ ಬಿಡದಲೆ ಸರ್ವ | ದಾ ಬಾದರಾಯಣನಂ- |ಘ್ರಿಬಿಸಜದ್ವಯವ | ನೇ ಭಜಿಸಲು ಜ್ಞಾನ- ||ವ ಒಲಿಸುವದತಿ | ಶೋಭನ ವಿಗ್ರಹೆ |ಹೇ ಬಡವನು ಗೈ | ಯ್ವಾ ಬಿನ್ನಪವನು |ನೀ ಬಿಸುಟದೆ ಬಹ | ಳಾ ಭಯ ಪರಿಹರಿ |ಸೀ ಭಕುತ ಜನರೊ | ಳು ಬೆರಸುವದೇ 1ಮಾಕಂಜದಳನೇತ್ರೆ | ಶ್ರೀ ಕುಂಭಿಣೀಜೆ ದಾತೆ |ನೀ ಕರುಣದಿ ನೋ | ಡೀಕಕುಲಾತಿಹಿಂಗಿಸೆ |ಬೇಕು ಸತ್ಸಾಧನವು | ಸಾಕು ದುರ್ವಿಷಯಗಳು |ಲೌಕಿಕಗಳೆಲ್ಲಾ ವೈ | ದಿಕವಾಗಲೆನಗೆ ||ನಾಕು ಮೊಗನ ಜನ | ನೀ ಕರಿಗಮನೆ ಪ- |ರಾಕುದಿವಿಜನುತೆ | ಶೋಕರಹಿತೆ ದನು- |ಜಾ ಕುಲ ಸಂಹರೆ | ಈ ಕಠಿಣ ಭವದೊ- |ಳೇಕೆ ದಣಿಸುತಿಹೆ | ನೀ ಕಡೆಗೆತ್ತಲೆ 2ದಾತಪ್ರಾಣೇಶ ವಿಠಲ | ಸೋತೆನೆಂದು ನಗಲು ನೀ- |ನಾತನ ದಾಯದಿಂ ಪುರು | ಹೂತನ ಸೋಲಿಸಿ ಪ್ರ- |ಖ್ಯಾತೆಯಾದೆ ಉದರೌ | ಜಾತ ಸದನೆ |ಸತ್ರಾಜಿತೆ ಲಕ್ಷ್ಮೀಯಾದಿ ದೇ | ವತೆಭಾಸ್ಕರಕಾಂತೆ ||ಭೂತಳದೊಳಗೆ ಅ | ನಾಥರಿಗೆವರಪ್ರ- |ದಾತೆ ಕೃಪಾ ನಿಧಿ | ಯೇ ತಡೆ ದುರ್ಮತಿ |ಧೌತ ವ್ರಜನಿ ಧರಿ | ಪೋತನಕನಲದೆ |ವಾತಪೂಜಿತೆ ರಮೆ | ಪಾತು ಪ್ರತಿಕ್ಷಣದಿ 3
--------------
ಪ್ರಾಣೇಶದಾಸರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು