ಒಟ್ಟು 135 ಕಡೆಗಳಲ್ಲಿ , 37 ದಾಸರು , 119 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರ ಉಪಕಾರವ ಮರೆಯದಿರೆಚ್ಚರಿಕೆ ಪ ಕೇಡು ನೆನೆಯ ಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ಅ ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ 1 ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ 2 ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ 3 ಹೆಣ್ಣು ಹೊನ್ನು ಮಣ್ಣು ನಿನ್ನನ್ನಗಲಿ ಹೋಗುವರೆಚ್ಚರಿಕೆಮುನ್ನ ಮಾಡಿದ ಪುಣ್ಯ ಬೆನ್ಹತ್ತಿ ಬರುವುದು ಮುಂದೆ ನೋಡೆಚ್ಚರಿಕೆ 4 ಒಬ್ಬರಂತೆಲ್ಲರ ನೋಡು, ಸತ್ಕರ್ಮದಿ ಉಬ್ಬಬೇಡೆಚ್ಚರಿಕೆಕಬ್ಬುಬಿಲ್ಲನ ಪಿತನ ಏಕಾಂತ ಭಾವದಿ ನೆರೆನಂಬು ಎಚ್ಚರಿಕೆ 5 ತಿಂದೋಡಿ ಬಂಧುಬಳಗ ತಪ್ಪಿಸಿಕೊಂಬರೆಂದು ನೋಡೆಚ್ಚರಿಕೆಎಂದೆಂದು ಅಗಲದ ಬಂಧು ಶ್ರೀಹರಿ ನಮಗೆಂದು ನೋಡೆಚ್ಚರಿಕೆ 6 ಕಾಲನ ದೂತರು ಯಾವಾಗ ಎಳೆವರೊ ಕಾಣದು ಎಚ್ಚರಿಕೆಬೇಲೂರ ಪುರವಾಸ ನೆಲೆಯಾದಿಕೇಶವನಾಳಾಗು ಎಚ್ಚರಿಕೆ 7
--------------
ಕನಕದಾಸ
ಪಾಲಿಸೈಯ್ಯ ಇವಳಾ ಶ್ರೀ ಭೂತರಾಜರ ಹೃನ್ಮಂದಿರ ನಿಲಯ ಧವಳ ಗಂಗಾವಾಸಿ ಹಯಮುಖನ ತನಯ ವಾಗೀಶಗುರು ಅರ್ಚಕಾ ಪ ನಿತ್ಯ ನಿನ್ನಲ್ಲಿಶ್ರೀಹರಿಯು ಅನುಗಾಲ ಕೋಲಾಹಲದೆ ಮಾಳ್ಪ ಆನಂದ ಕ್ರೀಡೆಗಳ ಕಾರುಣ್ಯರೂಪದಲಿ 1 ಸತಿ ಭಾರತಿಯು ಪರುಶುಕ್ಲಳೊ ಸತತ ಧ್ವನ್ತದುರಾಗಮಾ ನೀನೆಂದು ಸಾರುತಿದೆ ಶೃತಿಯು ಶೃತಿವೇದ್ಯ ನೀನೈಯ್ಯ ಶೃತಿಯಿಂದ ನೀ ಗಮ್ಯ ಶೃತ್ಯರ್ಥರೂಪ ನೀನೆನಗೆ ಸತತಾ 2 ನಾ ಪಾಮರಕೆ ಪಾಮರನು ಎಂದೆಂದು ಮಮಸ್ವಾಮಿ ನಾನು ತುತಿಸಲಾಪೆನೆ ನಿನ್ನ ನಿರ್ದೋಷಗುಣರಾಶಿಯಾ ಗಾನಮಾಡಿ ವೈರಾಗ್ಯ ಶಕ್ತಿ ಭಕ್ತ ಯುಕ್ತಿ ರಾಘವ ಎಮಗಿಲ್ಲವೆನುತಾ ಬಾಗಿ ಬಗ್ಗಿ ಹಾರುವುದು ಪೀಠಕೆ ಸತತ ಶಿವಶೇಷ ಗುರುತಾದಿ ಸುರಕೋಲಿನಿಕರಾ 3 ಒಂದು ಅರಿಯದಾಕಂದ ಇಂದಿರೆಯು ನಂಬಿಹಳು ಗತಿದಾತನೆಂದು ಸತತ ಅಂತರಂಗದಿ ನಲಿವ ಮಮತೆ ನಾನಿನ್ನ ನಿಜ ದೂತನೆಂದು ಹೌದಾದರವಳ ಮನ ಸೆಳೆದು ನಿನ್ನಲ್ಲಿ ಶ್ರೀಕೃಷ್ಣನಲಿ ಬಿಡು ಅವಳ ವಾಜಿವದನಾರ್ಚಿಶ್ರೀವಾದಿರಾಜ 4 ಜಾಗರ ಭಾರತೀಶ 5
--------------
ಗುರುತಂದೆವರದಗೋಪಾಲವಿಠಲರು
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪ್ರಸನ್ನವಿಠಲ ಪಾಲಿಸಿವನ ಪ ಅಸತ್ಯದಲಿ ಮನವಿಡದೆ ಆಸಕ್ತಿ ನಿನ್ನಲ್ಲಿ ಕೊಟ್ಟು ಅ.ಪ. ದೃಢÀ ನಿನ್ನ ಭಕ್ತರಲಿ ಕೊಡುಭಕ್ತಿ ವಿರಕ್ತಿ ದೃಢ ಜ್ಞಾನ ನಿನ್ನಲ್ಲಿ ಬಿಡದೆ ನಿತ್ಯ ಮಡದಿ ಮಕ್ಕಳ ಕೂಡಿ ನಿನ್ನ ಸೇವೆ ಸಲ್ಲಿಸಲಯ್ಯ ಕಡಲಸುತೆ ಶ್ರೀ ರಮಣ ಬೆಂಬಲನು ನೀನಾಗು 1 ಸಜ್ಜನರ ಪದಧೂಳಿ ಆಗಿರಲಿ ಎಂದೆಂದು ದುರ್ಜನರ ಸಹವಾಸ ಕೊಡಬೇಡವಯ್ಯ ಬೊಜ್ಜೆಯಲಿ ಮೂರ್ಜಗವ ಪೊತ್ತ ಮಹಾತ್ಮ ಇವನ ಹೆಚ್ಚಾಗಿ ಪೊರಿ ಬಿಡದೆ ಅಚ್ಚ ಮಾರ್ಗದಿ ಇಟ್ಟು 2 ನಿನ್ನ ನಾಮಾಮೃತ ಸತತ ಸುಖ ಸವಿಯಲಿ ಸ್ವಾಮಿ ಬನ್ನ ಬಡಿಸಲಿ ಬೇಡ ತರಳನಿವನು ಉನ್ನತೋನ್ನತ ಮಹಿಮ ಜಯೇಶವಿಠಲ ಮನ್ನಿಧಿ ನೀನೆಂದು ಪ್ರಾರ್ಥಿಸುವೆ ಕೈಪಿಡಿದು 3
--------------
ಜಯೇಶವಿಠಲ
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಲು ಚಂದ ಮಹದಾನಂದ ಶ್ರೀಹರಿ ಭಜನೆ ಪ ಬಲು ಚಂದ ಬಲು ಚಂದ ಮಹದಾನಂದ ಜಲಜನಾಭನ ನಾಮ ನಲಿನಲಿದ್ಹೊಗಳ್ವುದು ಅ.ಪ ಬಲಿಯ ಕಾಯ್ದನ ನಾಮ ಬಲು ಚಂದ ಲಲನೆಗೊಲಿದನ ಧ್ಯಾನ ಆನಂದ ಕಲುಷಹರಣ ಕರಿಪಾಲನೆಂದೊದರಲು ಗಳಿಲನೆ ಪರಿಹಾರ ಭವಬಂಧ 1 ಮಾವಮರ್ದನನಾಮ ಬಲು ಚಂದ ಗೋವಳರೊಡೆಯನ ಧ್ಯಾನ ಆನಂದ ಗೋವುಪಾಲನೆಂದು ಭಾವಿಸಿ ಕೂಗಲು ಸಾವು ಹುಟ್ಟು ಇಲ್ಲ ಎಂದೆಂದು 2 ಕಾಮಪಿತನ ನಾಮ ಬಲು ಚಂದ ಕಾಮಿತಾರ್ಥನ ಧ್ಯಾನ ಆನಂದ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪಾದ ನೇಮದಿ ನುಡಿಯೆ ಮುಕ್ತಿಪದ ಆನಂದ 3
--------------
ರಾಮದಾಸರು
ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ಕರುಣಾನಂದದ ಸುಖ ಬೀರುತ ಬಾರೈ ಆತ್ಮಾನುಭವಕೆ ಧ್ರುವ ಕಣ್ಣು ಹಾರುತಿದೆÀ ಬಲದೆನ್ನ ಖೂನದೋರವ್ಹಾಂಗಿಂದು ಚೆನ್ನಾಗ್ಹೊಳಿಯುತಿ ಸುಚಿಹ್ನ ನೀನೊಲಿಯವ್ಹಾಂಗೆ ಬಂದು ಎನ್ನೋಳೀವ್ಹಾಂಗ ಸನಾತನ ಪಾಲಿಸಿದೆನಗೊಂದು ಧನ್ಯಗೈಸುವ ದಯಾಳು ನೀನಹುದೊ ಕೃಪಾಸಿಂಧು 1 ಏನೊಂದರಿಯೆ ಒಂದು ಸಾಧನ ಧ್ಯಾನಮೌನ ಹ್ಯಾಗೆಂದು ಖೂನಬಲ್ಲೆನೊ ನಿಮ್ಮ ಬಿರುದಿನ ದೀನನಾಥ ನೀ ಎಂದು ನ್ಯೂನಾರಿಸದೆನ್ನೊಳಗಿನ ನೀನೆ ಅನಾಥಬಂಧು ಎನಗುಳ್ಳ ಸ್ವಾಮಿ ಸದೋದಿತ ನೀನಹುದೊ ಎಂದೆಂದು 2 ತಾಯಿ ಶಿಶುಸ್ತನಪಾನಕೆ ಬಾಯಿಯೊಳಗಿಡುವ್ಹಾಂಗ ಸಾಯಾಸವಿಲ್ಲದೀಪರಿ ದಯಮಾಡುವದೆನಗೆ ಶ್ರೇಯಸುಖದಾಯಕೊಬ್ಬನು ನೀನೆ ಭಾನುಕೋಟಿ ಎನಗೆ ಅನುದಿನ ದೀನಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ
ಬಿದ್ದೆ ನಿಮ್ಮಯ ಪಾದದಲ್ಲಿ ನಾ ಪ ಮಧ್ವರಾಯರ ಮನದಲ್ಲಿ ಇದ್ದು ವಲಿವ ವೇದವ್ಯಾಸ ಅ.ಪ. ವೇದ ಓದದ ಶುದ್ಧ ಕಳ್ಳನಾ ಮೆದ್ದು ಮೆಲ್ಲುತ ವೃದ್ಧನಾದೆ ಭಲ್ ಗದ್ದ ದಾಸಗೆ ಕರುಣದಿ ತೋರಿ ಉದ್ಧರಿಸುವ ಬಗೆ ಬಲ್ಲೀ 1 ಅನ್ಯದೇವರ ನಾ ನೊಲ್ಲೆ ನಿನ್ನ ಪಾದವ ಬಿಡಲೊಲ್ಲೆ ಘನ್ನಕರುಣಿ ನೀನು ಬಲ್ಲೆ ನಿನ್ನ ಬಿಡಲು ಜಗಕಲ್ಲೇ 2 ಉತ್ತಮೋತ್ತಮ ದೇವ ಸತ್ಯ ಭೃತ್ಯಜೀವನು ಎಂಬೆನಿತ್ಯ ಭಕ್ತ ಪ್ರಥಮ ಪ್ರಾಣನೀನೇ ಮುಕ್ತಿನಿನ್ನಾಧೀನವೇನೇ 3 ವಿಧಿ ಪರಿವಾರ ಎಂದೆಂದಿಗೂ ಭಿನ್ನರೇನೇ ಎಂದೆಂದು ಅಧೀನರೇನೇ 4 ಶ್ರೀಕೃಷ್ಣವಿಠಲ ಏಕ ಸಕಲ ದೋಷ ವಿದೂರ ಪೊರೆಯೋ ಎಂದು ಕೂಗಿ 5
--------------
ಕೃಷ್ಣವಿಠಲದಾಸರು
ಭಕ್ತಿಯಲಿ ತನುಮನವು ಸತತ ಬಗ್ಗಿರಲಯ್ಯ ಭುಕ್ತಿಯೆ ಮಹಾಭಕ್ತಿ ನೀಡು ಎನಗೆ ಪ ಯುಕ್ತಿ ಶಕ್ತಿಗಳೆಲ್ಲ ಬಿಡದಿರಲಿ ತತ್ಪಾದ ಶಕ್ತಿಯನು ಎಂದೆಂದು ಗುಣಪೂರ್ಣ ನಿಧಿಯೆ ಅ.ಪ ಇಹಭೋಗ ಬಿಡಿಸಯ್ಯ ಮಹದಾದಿ ದೇವೇಶ ಗುಹಪಿತನಸಖ ನರನಸೂತ ಬಂಧು ಮುಹುರ್ಮುಹು ಪ್ರಾರ್ಥಿಸುವೆ ಮಹಿದಾಸ್ಯ ಹರಿದಾಸ್ಯ ಮಹಪದವಿ ಕರುಣಿಸಯ್ಯ ಮರುತ ಮಂದಿರ ವಿಭುವೆ 1 ಪಂಚಬೇಧ ಜ್ಞಾನ ಅನುಷ್ಠಾನದಿ ಇರಲಿ ಚಂಚಲಿಲ್ಲದ ಭಕ್ತಿ ಇತ್ತು ಮೆಚ್ಚಿ ವಂಚಿಸದೆ ಸಂಸಾರ ಯಾತ್ರೆಯಲಿ ಒಡನಾಡು ಪಂಚಾತ್ಮ ಜಯೇಶವಿಠಲನೆ ಮದ್ಬಿಂಬ 2
--------------
ಜಯೇಶವಿಠಲ
ಭಜಿಸಿ ನೋಡಿರೋ ಭಾವಭೋಕ್ತನ ಅಜಸುರೊಂದ್ಯ ಸುಜನಪಾಲ ತ್ರಿಜಗದಾತ್ಮನ ಧ್ರುವ ಭಾವಕ ಸುಲಭ ಜೀವದ ನೆಲೆನಿಭ ಕಾವಕರುಣ ದೇವನೀತ ಪ್ರಾಣವಲ್ಲಭ 1 ರಾಜಿಸುತಿಹ್ಯನು ತೇಜೋಮಯದಲಿ ಭಜಕ ಪ್ರಿಯನಾಗಿ ಒಲಿವ ನಿಜಸುಮನದಲಿ 2 ಡಂಭಭಕುತಿಗೆ ಇಂಬದೋರನು ನಂಬಿನಡೆವ ಭಕ್ತಜನರ ಮನೆಯೊಳಿಹ್ಯನು 3 ಭಕುತಿ ಭಾವಕ ನೆಲಿಯುಗೊಂಬನು ಮಕುಟಮಣಿ ಸುಭಾನುಕೋಟಿ ಪ್ರಕಟ ಹೊಳೆವನು 4 ಒಂದು ಮನದಲಿ ಹೊಂದಿ ಸುಖಿಸಿರ್ಯೊ ಎಂದೆಂದು ಬಿಡದೆ ಸಲಹುತಿಹ್ಯ ಮಹಿಪತಿ ಸ್ವಾಮಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು