ಒಟ್ಟು 81 ಕಡೆಗಳಲ್ಲಿ , 36 ದಾಸರು , 73 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಸ್ಮರಿಸಿ ಸೇವಿಸಿ ವೆಂಕಟರಾಯದಾಸರ ಪ ವಾಸರ ಅ.ಪ ನೆನೆದ ಮಾತ್ರಕೆ ನಮ್ಮ ಪರಮ ಗುರುಗಳ ಅನುದಿನ ಪುಷ್ಟಿ ಕರೆವ ವರಗಳ 1 ಧ್ಯಾನಮಾಡಲು ಸುಜ್ಞಾನ ಪಾಲಿಸಿ ತಾನೆ ಒಲಿವನು ಕರುಣಿ ಇದನೆ ಲಾಲಿಸಿ 2 ಕುಂಭಕೋಣದಿ ವಾಸವನ್ನೆ ಮಾಡುತ ಡಂಭ ವೇಷವ ತ್ಯಜಿಸಿ ಹರಿಯ ಪಾಡುತ 3 ಕ್ಷೇತ್ರ ಕ್ಷೇತ್ರವ ಚರಿಸಿ ಬರುತ ಅಲ್ಲಿಹ ಅನುದಿನ 4 ಸುಲಭ ಶ್ರೀಗುರು ವಿಜಯರಾಮಚಂದಿರವಿ ಠಲ ಒಲಿವನು ಭವಾಟವಿಯ ತರಿವನು 5
--------------
ವಿಜಯ ರಾಮಚಂದ್ರವಿಠಲ
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಮಂಗಳ ಪದಗಳು492ಜಯದೇವ ಜಯದೇವ ಜಯ ಸುಬ್ರಹ್ಮಣ್ಯಆರತಿ ಮಾಡುವೆ ನಿನಗೆವರೇಣ್ಯಪ.ಅರಳಿದ ಕಮಲಸನ್ನಿಭಶುಭಚರಣ-ವರಪಂಚಾನನಪೋಲ್ವ ಕಟಿಕಾಂಚ್ಯಾಭರಣಉರುಶಕ್ತಿಕುಕ್ಕುಟಾಭಯವಜ್ರಹಸ್ತಶರಣಾಗತಜನದ ರಿತವಿಧ್ವಸ್ತ 1ಬಲಮುರಿಶಂಖದಂತಿಹ ಚೆಲ್ವಗ್ರೀವಸುಲಲಿತಮಾಣಿಕ್ಯಹಾರದಿಂ ಪೊಳೆವನಲಿವ ಕರ್ಣಕುಂಡಲಗಳ ಶೋಭಜ್ವಲಿತಕಿರೀಟಮಸ್ತಕ ಸೂರ್ಯಾಭ 2ಈ ಕ್ಷಿತಿಯೊಳಗೆ ಪಾವಂಜೇತಿ ನಾಮಸುಕ್ಷೇತ್ರವಾಸ ಸುಜನಜನಪ್ರೇಮಲಕ್ಷ್ಮೀನಾರಾಯಣನ ಪ್ರೀತಿಯ ಪಾತ್ರರಾಕ್ಷಸಾರಣ್ಯದಹನವೀತಿಹೋತ್ರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಯನ ಭಯವಿಲ್ಲ ಮನಕೆ ಪಶ್ರೇಯಸ್ಸು ಸೌಖ್ಯವ ನೀಡೋದು ಜನಕೆ ಅ.ಪನೀನೆ ನೀಡುವಿ ಎಂಬ ಙ್ಞÕನ ದಿಂ -ದನು ಸಂಧಾನ ಮಾಡುತಲಿಪ್ಪನರಗೆ 1ಸತಿಸುತ ಹಿತಜನ ವಿತತವೃತ್ತಿಕ್ಷೇತ್ರವ್ರತತೀಜ ಯುಗಕೀವ ಮತಿಯುಳ್ಳ ನರಗೆ 2ಪಾತಕಕರ್ಮವ ಮಾಡಲೇನುಯಾತನಮಯಭವಪಾಥೋನಿಧಿಯೋಳನೀತಗುರುಜಗನ್ನಾಥವಿಠಲಗತಿಪ್ರೀತನಾದಗುರುದೂತನಾದವಗೆ3
--------------
ಗುರುಜಗನ್ನಾಥದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ಶ್ರೀ ಕೇಶವ ತೀರ್ಥ ಸ್ತೋತ್ರ107ಸೂರಿಪ್ರಾಪ್ಯ ಘೃಣಿಶೌರಿಶ್ರೀರಮಾಪತಿ ಪ್ರಿಯರುಸೂರಿವರ ಬ್ರಹ್ಮಣ್ಯ ತೀರ್ಥ ಆರ್ಯರ ಸುಸರೋಜಕರಜಾತ ಜಗತ್ಖ್ಯಾತ ವ್ಯಾಸರಾಜಾರ್ಯರಹಸ್ತಸುವ್ರತ ನಿಜೋತ್ಪನ್ನ ಕೇಶವ ತೀರ್ಥಾರ್ಯರ್ಗೆ ವಂದೇ ಪಮುಖ್ಯಪ್ರಾಣಪವಮಾನ ಸುರಮಾತರೀಶ್ವಗುರುಪ್ರದ್ಯುಮ್ನ ಅನಿರುದ್ಧ ಪುರುಷ ನರಸಿಂಹ ಶ್ರೀಶಪ್ರಜ್ಯೋತಿರ್ಮಯ ಉಗ್ರವೀರ ವಿಶ್ವವ್ಯಾಪಿ ವಿಷ್ಣುವುಮೃತ್ಯು ಮೃತ್ಯು ಸ್ತಂಭದಿಂ ಬಂದು ಪ್ರಹ್ಲಾದನ್ನ ಪೊರೆದ 1ನರಸಿಂಹನಾಜೆÕಯಿಂ ಪ್ರಹ್ಲಾದ ಸಿಂಹಾಸನವೇರೆನೆರೆದಿದ್ದ ಸುಮನಸರು ಹರಿಭಕ್ತ ಜನರುಸೂರಿಗಳುಆ ವೈಭವ ಕಂಡುಕೇಳಿಜಯಪರಾಕ್ಪರಾಕೆಂಬ ದಿವ್ಯಾನುಭವಜ್ಞಾನಿಕೇಶವ ತೀರ್ಥ2ಹಿಂದಿನ ಪ್ರಹ್ಲಾದಇಂದುವ್ಯಾಸಮುನಿರಾಜರಾಗಿದುಸ್ತರ್ಕ ಧ್ವಂಸಕರ ತರ್ಕತಾಂಡವ ಬೋಧಿಸಿಹಿತಕರ ನ್ಯಾಯ ಪೀಯೂಷವ ಉಣಿಸಿ ಆಹ್ಲಾದಚಂದ್ರಿಕಾಸುಖ ನೀಡಿ ಯತ್ಯಾಶ್ರಮ ಇತ್ತರಿವರ್ಗೆ 3ಶ್ರೀವ್ಯಾಸರಾಯರು ಅನುಗ್ರಹಿಸಿ ಕೇಶವ ತೀರ್ಥದಿವ್ಯ ನಾಮಾಂಕಿತವ ಪ್ರಣವಾದಿ ಮಂತ್ರ ಉಪದೇಶನಿವ್ರ್ಯಾಜ ನಿಶ್ಚಲ ಭಕ್ತಿಮಾನ್ ವಿನಯಸಂಪನ್ನ ಈಶಿಷ್ಯನಿಗೆ ಕೊಟ್ಟದ್ದು ಸಜ್ಜನರು ಹೊಗಳಿದರು 4ಶ್ರೀರಂಗದಲಿ ಉತ್ತರಾರಣ್ಯ ಬೀದಿಯಲ್ಲಿಹಶ್ರೀ ಕೃಷ್ಣಮಂದಿರದಿ ಶ್ರೀವ್ಯಾಸರಾಯ ಮಠದಿಚಾರುತರ ಚತುರ್ವಿಂಶತ್ ವಿಷ್ಣು ಮೂರ್ತಿಗಳುಂಟುತತ್ರಗೋಲಕ ಕ್ರಮದಿ ಶ್ರೀಹರಿಯ ಚಿಂತಿಪರು 5ಬ್ರಹ್ಮ ಗಾಯತ್ರಿ ಮನು ಇಪ್ಪತ್ತು ನಾಲ್ಕಕ್ಷರದಲಿತಂ ಆದಿ ಯಾತ್ ಅಂತ ಒಂದೊಂದರಲಿ ಒಂದುಹರಿಯಅಮಲ ಸುಪೂರ್ಣ ಕೇಶವಾದಿ ಕೃಷ್ಣಾಂತರೂಪಆ ಮೊದಲು ತಂ ಅಲ್ಲಿ ತಾರಕೇಶವನು ಧ್ಯಾತವ್ಯ 6ಬಲದಕೆಳಗಿನ ಕರದಿಪದ್ಮ ಮೇಲೆ ಶಂಖಜ್ವಲಿಪ ಚಕ್ರವು ಮೇಲಿನ ಎಡದ ಹಸ್ತದಲ್ಲಿಕೆಳಗಿನ ಎಡಕರದಿ ಗದೆಯ ಹಿಡಿದಿಹಜಲಜಸಂಭವ ಭವಾದ್ಯರ ಸ್ವಾಮಿ ಕೇಶವನು 7ದಶಪ್ರಮತಿ ಸರಸೀರುಹನಾಭ ನರಹರಿಅಸಮಮಾಧವಅಕ್ಷೋಭ್ಯ ಜಯವಿದ್ಯಾಧಿರಾಜಅಸಚ್ಛಾಸ್ತ್ರಗಿರಿಕುಲಿಶ ರಾಜೇಂದ್ರ ಜಯಧ್ವಜಶ್ರೀಶವಶಿ ಪುರುಷೋತ್ತಮ ಬ್ರಹ್ಮಣ್ಯ ವ್ಯಾಸತೀರ್ಥ 8ಹಂಸವಿಧಿ ಸನಕಾದಿಗಳಾರಭ್ಯ ಸನಾತನಸುಶೀಲ ಈಗುರುಪರಂಪರೆಯಲಿ ವ್ಯಾಸಮುನಿಸರೋಜ ಕರಜಾತ ಕೇಶವ ತೀರ್ಥರು ಹೀಗೆಕೇಶವನ್ನ ಧ್ಯಾನಿಸಿ ಒಲಿಸಿ ಕೊಂಡದ್ದು ಸಹಜ 9ಹರಿಪ್ರೀತಿ ಸಮರ್ಪಕ ಯತ್ಯಾಶ್ರಮ ಧರ್ಮಗಳಚರಿಸುತಗುರುಸೇವಾರತರಾಗಿ ಇರುತಿಹಬರುವ ಶಿಷ್ಯರಿಗೆ ಸೌಲಭ್ಯ ವಾತ್ಸಲ್ಯ ನೀಡುತಸೇರಿದರು ಪರಮತಿ ವೇಲೂರೆಂಬ ಕ್ಷೇತ್ರವನ್ನು 10ಶಲ್ಯ ರಾಜನ್ನ ಜ್ಞಾಪಿಸುವ ಶುಕವನ ಕ್ಷೇತ್ರದಿಂಒಳ್ಳೆಯ ರಸ್ತೆ ಹದಿನೈದು ಕ್ರೋಶ ದೂರದಿ ಇಹುದುಪ್ರಹ್ಲಾದ ವರದ ನಾರಸಿಂಹ ನಾಮಗಿರಿ ದೇವಿಬಲಜ್ಞಾನರೂಪ ಮಾರುತಿ ಇರುವ ನಾಮಕಲ್ಲು 11ನಾಮಶೈಲದಿಂದ ರಂಗ ತಾನೇ ತೋರಿದ ವೇಂಕಟರಮಣ ಪಶುಪತಿಕ್ಷೇತ್ರ ಕರೂರಿಗೆ ಹೋಗುವರಮಣೀಯಮಾರ್ಗಮಧ್ಯದಲ್ಲಿಯೇ ಇರುತಿಹವುಪರಮತಿ ವೇಲೂರು ಸುಪುಣ್ಯ ಕಾವೇರಿಯು 12ಸರ್ವಸುಗುಣಾರ್ಣವನುಅನಘಸರ್ವೋತ್ತಮನುಸರ್ವಕರ್ತಾಗಮೋದಿತನು ಜಿಜ್ಞಾಸ ಜನ್ಯ ಜ್ಞಾನಸಂವೃದ್ಧಿ ಸಾಧನಾನುಕೂಲ ಚತುರ್ವೇದಿ ಮಂಗಳದಿವ್ಯ ಪರಮತಿಯು ಅಲ್ಲಿ ಲೌಕೀಕರೇ ತುಂಬ 13ಸಪರಮತಿ ಸಮೀಪದಲ್ಲೆ ಚನ್ನಕೇಶವ ವೇಲಿಪುರವುಂಟು ಅದನ್ನ ವೇಲೂರೆಂದು ಹೇಳುವರುಪರಮತಿ ವೇಲೂರು ಕಾವೇರಿ ಪೋಷಿತವು ತೀರಪರಮಭಾಗವತಋಷಿ ಸಂಚಾರ ವಾಸಸ್ಥಾನ14ರಸಪೂರಿತ ಮಾವು ತೆಂಗು ಕದಲೀಫಲವೃಕ್ಷಬಿಸಜಮಲ್ಲಿಗೆ ಜಾಜಿಕುಸುಮಪರಿಮಳವುಹಂಸ ಪಾರಾವತ ತಿತ್ತರಾಶುಕ ಇಂಥಾ ಸುಪಕ್ಷಿಶ್ರೀಶನಂಘ್ರಿ ಸಂಬಂಧಿ ವರಜಾಯುಕ್ ಕಾವೇರೀ ಸರಿತ 15ಶ್ರೀಮನೋರಮ ಕೇಶವನ್ನ ಆರಾಧಿಸಿ ಧ್ಯಾನಿಸಲುಈ ಮನೋಹರ ಶಾಂತ ಸುಪವಿತ್ರ ಕ್ಷೇತ್ರವೆಂದುತಮ್ಮಯ ಬಾಹ್ಯ ಚಟುವಟಿಕೆಗಳ ನಿರೋಧಿಸಿಸಮೀರಸ್ಥ ಶ್ರೀಹರಿಯ ಧ್ಯಾನಾದಿರತರಾದರು 16ಯುಕ್ತಕಾಲದಿ ಈ ಸಂನ್ಯಾಸರತ್ನ ಕೇಶವಾರ್ಯರುಭಕ್ತಿವೈರಾಗ್ಯ ಯುಕ್ ಜ್ಞಾನ ಸಂಪನ್ನ ಶ್ರೀಹರಿಯಚಿಂತಿಸುತ ತ್ರಿಧಾಮನ ಪುರವನ್ನ ಯೈದಿದರುವೃಂದಾವನದಲ್ಲಿ ಒಂದಂಶದಲಿ ಇರುತಿಹರು 17ಕಾಲಧೀರ್ಘದಲಿ ಗ್ರಾಮಜನ ಬದಲಾವಣೆಯಿಂಎಲ್ಲಿ ವೃಂದಾವನ ಸ್ಥಾನ ಇದೆ ಎಂದು ಸರಿಯಾಗಿಹೇಳುವವರು ಸುಲಭದಿ ದೊರಕುವುದು ಶ್ರಮತಿಳಿದವರ ಸಹಾಯದಿಂ ಗುರುದಯದಿ ಸಾಧ್ಯ 18ಸದಾಪಾಣಿ ಭೀಮಸೇನ ಆರಾಧ್ಯ ಶ್ರೀಕೃಷ್ಣನು ಮತ್ತುಪದ್ಮಾಲಯಾಪತಿ ಪುಂಡರೀಕಾಕ್ಷನ್ನು ಶ್ರೀವಿಶ್ವನ್ನುಮಧ್ವಸ್ಥ ಪರಮಾತ್ಮನ್ನು ಸ್ಮರಿಸಿ ವೃಂದಾವನವಸಂದರ್ಶನ ಮಾಡಿ ಸೇವಾ ಸ್ವಗುರೂಪದೇಶವಿಧಿ19ಸ್ಮರಣ ದರ್ಶನ ಪ್ರದಕ್ಷಿಣ ನಮನ ಕೀರ್ತನಶಾಸ್ತ್ರಾಧ್ಯಯನ ಪ್ರವಚನ ಭಕ್ತಿಯಿಂದಲಿ ಪೂಜಾಪರಿಶುದ್ಧ ನೈವೇದ್ಯ ಎಷ್ಟೆಷ್ಟು ಸಾಧ್ಯವು ಅಷ್ಟುಹರಿಗುರು ಪಾದೋದಕ ಶುಭದ ಸರ್ವಾಭೀಷ್ಟದ 20ಆದರದಿ ಈ ಸ್ತೋತ್ರ ಪಠನ ಶ್ರವಣ ಮಾಳ್ಪರ್ಗೆಭಕ್ತಿಮೇಧಆಯುಷ್ಯ ಆರೋಗ್ಯ ಸೌಭಾಗ್ಯಗಳೀವಪದ್ಮಜನಪಿತನು ಶ್ರೀ ಪ್ರಸ್ನನ ಶ್ರೀನಿವಾಸನುವಂದೇ ವಿಧಿಮಧ್ವ ವ್ಯಾಸಮುನಿ ಕೇಶವಾರ್ಯಾಂತಸ್ಥ 21|| ಶ್ರೀ ಶ್ರೀ ಕೇಶವ ತೀರ್ಥ ಸ್ತೋತ್ರ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನರಹರಿ ತೀರ್ಥವಿಜಯ99ಪ್ರಥಮ ಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಅಶೇಷ ಗುಣಗಣಾಧಾರ ವಿಭು ಶ್ರೀ ರಮಣಹಂಸ ನಾಮಕ ಪರಮಾತ್ಮನಿಗೆ ನಮಿಪೆಹಂಸ ಬೋಧಿತ ವಿಧಿಗೆ ತತ್ ಶಿಷ್ಯ ಸನಕಾದಿವಂಶಜ ಗುರುಗಳು ಸರ್ವರಿಗು ನಮಿಪೆ 1ಅಚ್ಯುತಪ್ರೇಕ್ಷಾಖ್ಯ ಪುರುಷೋತ್ತಮಾರ್ಯಕರತೋಯಜೋತ್ಪನ್ನ ಆನಂದ ತೀರ್ಥರಿಗೆಕಾಯವಾಙÕನದಿಂದ ಶರಣಾದೆ ಸಂತತತೋಯಜಭವಾಂಡದ ಸಜ್ಜನೋದ್ಧಾರ2ಶ್ರೀವರ ವೇದವ್ಯಾಸನವತಾರಕನುಸರಿಸಿಭಾವಿ ಬ್ರಹ್ಮನು ಮುಖ್ಯ ವಾಯುದೇವದೇವೀಜಯಾಸಂಕರ್ಷಣಾತ್ಮಜನು ಈಭುವಿಯಲ್ಲಿ ತೋರಿಹ ಆನಂದ ತೀರ್ಥ 3ಮಾಲೋಲ ಶ್ರೀ ರಾಮಕೃಷ್ಣ ಪ್ರೀತಿಗಾಗಿಯೇಬಲ ಕಾರ್ಯ ಮಾಡಿದ ಹನುಮಂತ ಭೀಮಕಲಿಯುಗದಿ ಈ ಭೀಮ ಅವತಾರ ಮಾಡಿಹನುಕಲಿಮಲಾಪಹ ಜಗದ್ಗುರು ಮಧ್ವನಾಗಿ4ಶ್ರೀ ಮಧ್ವ ಅನಂತ ತೀರ್ಥಕರ ಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆ ನಮಿಪೆಸುಮನಸಶ್ರೇಷ್ಠರು ಮಹಿಯಲ್ಲಿ ಪುಟ್ಟಿಹರು5ಶ್ರೀ ಮಹಾ ಪುರುಷೋತ್ತಮದಾಸರೆಂದೆನಿಪಶ್ರೀ ಮಧ್ವ ಮುನಿಗಳ ಶಿಷ್ಯ ಸಂತತಿಗೂಸುಮಹಿಮ ಹರಿದಾಸವರ್ಯರು ಸರ್ವರಿಗುಸನ್ಮನದಿ ಆ ನಮಿಪೆ ಸಂತೈಪರೆಮ್ಮ 6ಆ ಸೇತು ಹಿಮಗಿರಿ ಬದರಿಕಾಶ್ರಮಕ್ಷೇತ್ರವಸುಧೆಯ ಸಮಸ್ತಕಡೆ ಪೋಗಿ ಅಲ್ಲಲ್ಲಿದುಸ್ತರ್ಕ ದುರ್ಮತ ಅಟವಿಗಳ ಛೇದಿಸಿದಶಪ್ರಮತಿ ಮಧ್ವಮುನಿ ಒಲಿದರು ಸುಜನರ್ಗೆ 7ಈ ರೀತಿ ದಿಗ್ವಿಜಯ ಮಾರ್ಗದಲಿ ಮಧ್ವರಾಯರ ಸಂಗಡ ವಾದಕ್ಕೆ ನಿಂತು |ಭಾರಿಪಂಡಿತರತ್ನಶೋಭನ ಭಟ್ಟನುಶರಣಾಗಿ ಮಧ್ವರಾಯರ ಶಿಷ್ಯನಾದ 8ಶೋಭನ ಭಟ್ಟಾಖ್ಯ ಈಗುಣಗ್ರಾಹಿಯುಶುಭಪ್ರದೆ ಲೋಕಪಾವನಿವೃದ್ಧ ಗಂಗೆಎಂಬುವ ಗೋದಾವರೀ ತೀರದಲಿ ಮಧ್ವಅಬ್ಜಹಸ್ತದಿಕೊಂಡ ತುರ್ಯಾಶ್ರಮ 9ಸತ್ತತ್ವವಾದದ ಸೊಬಗನ್ನ ಮಧ್ವವದನಾಂಬುಜದಿಂದಕೇಳಿಸುಪವಿತ್ರಪದ್ಮನಾಭತೀರ್ಥಾಖ್ಯ ನಾಮವ ಹೊಂದಿದಮುದದಿಂದ ಈ ಮಹಾತ್ಮನು ಶೋಭನನು 10ಕಳಿಂಗ ರಾಜನ ಮಂತ್ರಿಯ ಕುಮಾರನುಶೀಲತಮ ಹರಿಭಕ್ತಸ್ವಾಮಿ ಶಾಸ್ತ್ರಿಬಾಲ ವಯಸ್ಸಲ್ಲೇವೆ ಸಿರಿತನದಾಮೋಹಾದಿಲೀಲಾವಿನೋದ ಚಟುವಟಿಕೆ ತೊರೆದವನು 11ವಿಧಿಯುಕ್ತ ಉಪನಯನ ಶಾಸ್ತ್ರಾಭ್ಯಾಸವವೇದ ವೇದಾಂತವಿದ್ಯೆಸರ್ವ ಹೊಂದಿಗೋದಾವರಿ ಕ್ಷೇತ್ರ ಎಲ್ಲೆಲ್ಲೂ ಈತನುವಿದ್ವಚ್ಛಿರೋಮಣಿ ಎಂದೆನಿಸಿಕೊಂಡ 12ರಾಮ ಮಹೇಂದ್ರಪುರಪ್ರಾಂತ್ಯಸ್ಥವಾದಿಗಜಸಿಂಹ ಶೋಭನ ಭಟ್ಟನು ಈಗತ್ರಿಜಗದ್ಗುರು ಮಧ್ವರಿಂ ಅನುಗ್ರಹವಕೊಂಡದ್ದುನಿಜ ಹರುಷದಿ ಕೇಳಿದ ಶ್ಯಾಮ ಶಾಸ್ತ್ರಿ 13ಹಿತಕರ ಈಸುದ್ದಿ ಕೇಳಲಿಕ್ಕೇವೆಕಾದಿದ್ದ ಶ್ರೀಮಂತ ಈ ಶ್ಯಾಮ ಶಾಸ್ತ್ರಿಬಂದು ಶ್ರೀಮಧ್ವರಲಿ ಕರಮುಗಿದು ಸನ್ನಮಿಸಿಒದಗಿ ಪಾಲಿಸಿ ಸೇವೆ ಕೊಳ್ಳಬೇಕೆಂದ 14ಉತ್ತಮ ದೇವಾಂಶನು ನಿಜ ಸಹಜ ಭಕ್ತಿಮಾನ್ಸುದೃಢ ಜ್ಞಾನಿಯು ಋಜುಮಾರ್ಗ ಚರಿಪಕ್ಷಿತಿಯಲ್ಲಿ ಜನಿಸಿಹ ವೈರಾಗ್ಯನಿಧಿ ಇವಹೊಂದಿದ ತುರ್ಯಾಶ್ರಮ ಮಧ್ವ ಮುನಿದಯದಿ 15ನರಹರಿ ತೀರ್ಥಾಖ್ಯ ಶುಭತಮನಾಮವಶಾಸ್ತ್ರಿಗೆ ಇತ್ತರು ಆನಂದ ಮುನಿಯುಹರಿಸೇವಾ ಕಾರ್ಯಸಿದ್ಯರ್ಥ ಆದೇಶದಲೆಇರುವುದು ಎಂದರು ಸರ್ವಜÕ ಮುನಿಯು 16ಸಾಮ್ರಾಜ್ಯ ಅಧಿಪತ್ಯ ಕಳಿಂಗ ದೇಶದಲಿಚರಿಸುವ ಕಾಲವು ಬರಲಿಕ್ಕೆ ಇದೆಯುಶ್ರೀರಾಮ ಸೀತಾ ಮೂರ್ತಿಗಳ ಅಲ್ಲಿಂದತರಲಿಕ್ಕೆ ಇರಬೇಕು ಅಲ್ಲಿಯೇ ಎಂದರು 17ಗಜಪತಿ ರಾಜನ ಅರಮನೆಯಲ್ಲಿರಾಜೀವೇಕ್ಷಣ ಮೂಲರಾಮನು ಸೀತಾರಾಜಭಂಡಾರದಲ್ಲಿ ಮಂಜೂಷದಲಿರಾಜಿಸುತ ಇಹರುಮೂರ್ತಿರೂಪದಲಿ18ಕಳಿಂಗದೇಶಾಧಿಪ ಗಜಪತಿಯ ವಂಶದಲಿಬಾಲರಾಜನು ಅವನ ಪ್ರತಿನಿಧಿಯಾಗಿಆಳುವುದು ರಾಜ್ಯವ ಎಂದು ಆಚಾರ್ಯರುಪೇಳಿದರು ನರಹರಿ ತೀರ್ಥ ಆರ್ಯರಿಗೆ 19ಬಾಲರಾಜನು ಯುವಕನಾಗಿ ರಾಜ್ಯವನ್ನುಆಳುವ ಯೋಗ್ಯತೆ ಹೊಂದಿದ ಮೇಲೆಅಲ್ಲಿಂದ ರಾಮ ಸೀತಾ ಮೂರ್ತಿರಾಜನ್ನಕೇಳಿತರಬೇಕು ಎಂದರು ಲೋಕ ಗುರುವು 20ಗೋದಾವರಿ ಕ್ಷೇತ್ರದೇಶ ಸುತ್ತು ಮುತ್ತುಸಾಧುಜನ ಉದ್ಧಾರ ಬೋಧಕ್ಕೆಪದ್ಮನಾಭತೀರ್ಥರ ತತ್ಕಾಲ ನಿಲ್ಲಿರಿಸಿಬಂದರು ಉಡುಪಿಗೆ ಪೂರ್ಣ ಪ್ರಮತಿಗಳು 21ಶ್ರೀ ಮಧ್ವಾಚಾರ್ಯರು ಅರುಹಿದ ಪ್ರಕಾರದಲೇಸಮಯ ಒದಗಿತು ರಾಣಿ ಬಿನ್ನೈಸಿದಳುಸ್ವಾಮಿ ತಾವೇ ರಾಜ್ಯ ಆಳಬೇಕೆಂದಳುಸಮ್ಮತಿಸಿದರು ಶ್ರೀ ನರಹರಿ ಮುನಿಯು 22ಮಂತ್ರಿಪದವಿಪರಂಪರೆ ಪ್ರಾಪ್ತವಾಗಿತಂದೆ ವಹಿಸಿದ್ದರುಅವರಮುಖದಿಂದಹಿಂದೆ ಪೂರ್ವಾಶ್ರಮದಿ ರಾಜ್ಯ ಆಡಳಿತದರೀತಿಯ ಅರಿತವರು ಈ ಹೊಸಯತಿಯು 23ನರಹರಿ ತೀರ್ಥರ ರಾಜ್ಯ ಆಡಳಿತದಲಿಪರಿಪರಿ ರಾಜತಂತ್ರಗಳ ಕೌಶಲ್ಯಸರಿಯಾದ ಧಾರ್ಮಿಕ ರಾಜನೀತಿಯ ದುಷ್ಟಶತ್ರು ನಿಗ್ರಹ ಶಿಷ್ಟಪಾಲನಏನೆಂಬೆ24ದಂಡೆತ್ತಿ ಆಗಾಗ ಬರುತಿದ್ದ ಶಬರಾದಿತುಂಟ ಶತ್ರುಗಳನ್ನ ಜಯಿಸಿ ರಾಜ್ಯವನ್ನಕಂಟಕದುರ್ಮತಿಗಳಿಂದ ಕಾಪಾಡಿದರುಎಂಟು ದಿಕ್ಕಲು ಹಬ್ಬಿತಿವರ ಕೀರ್ತಿ 25ಆಶ್ರಮೋಚಿತನಿತ್ಯಜಪಪೂಜ ಕಾರ್ಯಗಳುಶಿಷ್ಯ ಸಜ್ಜನರಿಗೆ ಉಪದೇಶಾನುಗ್ರಹಲೇಶವೂ ಕೊರತೆ ಇಲ್ಲದೆ ಮುದದಿಈಶನ ಪ್ರೀತಿಗೆ ರಾಜಕಾರ್ಯಗಳ ಮಾಡಿದರು 26ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 27- ಇತಿ ಶ್ರೀ ಪ್ರಸನ್ನ ನರಹರಿತೀರ್ಥವಿಜಯಪ್ರಥಮೋದ್ಯಾಯಃ -ದ್ವಿತೀಯಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಶ್ರೀಕೂರ್ಮಕ್ಷೇತ್ರದಲಿ ಕೂರ್ಮೇಶ್ವರಾಲಯದಿಯೋಗಾನಂದ ನರಸಿಂಹಗೆ ಗುಡಿಯಯೋಗಿವರ ನರಹರಿತೀರ್ಥರು ಕಟ್ಟಿಸಿಯೋಗಾನಂದ ನರಸಿಂಹನ ಸ್ಥಾಪಿಸಿದರು 1ಯುಕ್ತ ಕಾಲದಿ ರಾಜನಿಗೆ ರಾಜ್ಯ ಒಪ್ಪಿಸಲುಕೃತಜÕ ಮನದಿಂದ ಆ ಯುವಕರಾಜಇತ್ತನು ಸನ್ನಮಿಸಿ ನರಹರಿತೀರ್ಥರಿಗೆಸೀತಾರಾಮ ವಿಗ್ರಹದ ಮಂಜೂಷ 2ನರಹರಿತೀರ್ಥರು ಶ್ರೀಮದಾಚಾರ್ಯರಲಿನೇರವಾಗಿ ಪೋಗಿ ಸಮರ್ಪಿಸಲು ಆಗಶ್ರೀರಾಮ ಸೀತಾದೇವಿಯ ಮಧ್ವಮುನಿಕ್ಷೀರಾದಿ ಪಂಚಾಮೃತದಿ ಪೂಜಿಸಿದರು 3ಶ್ರೀರಾಮಸೀತಾ ಪ್ರತಿಮೆಗಳೊಳು ಹರಿರಮಾಆರಾಧನಾರ್ಚನೆ ಮೂರು ತಿಂಗಳು ಹದಿ -ನಾರುದಿನ ತಾಮಾಡಿ ಪದ್ಮನಾಭತೀರ್ಥರುತರುವಾಯ ಪೂಜಿಸಲು ಆಜೆÕ ಮಾಡಿದರು 4ಮೂರನೇಬಾರಿ ಬದರಿಗೆ ಆಚಾರ್ಯರುತೆರಳಲು ಪದ್ಮನಾಭರು ತಾವು ಪೂಜೆಚರಿಸಿ ನಿಯಮನದಂತೆ ಆರು ವರ್ಷ ತರುವಾಯನರಹರಿತೀರ್ಥರಿಗೆ ಇತ್ತರು ಮೂರ್ತಿಗಳ 5ಈ ಮೂರ್ತಿಗಳೊಳ್ ಇರುವ ಸೀತಾರಾಮಾರ್ಚನೆಬ್ರಹ್ಮದೇವರು ಮಾಡಿ ಸೂರ್ಯವಂಶಭೂಮಿಪಾಲಕ ಕೈಯಿಂದ ಪೂಜೆಯ ಕೊಂಡುಕ್ರಮದಿ ದಶರಥರಾಜ ಕರಕೆ ಲಭಿಸಿದವು 6ಶ್ರೀ ರಾಮಚಂದ್ರ ಪ್ರಾದುರ್ಭಾವಕು ಮೊದಲೇದಶರಥ ಆರಾಧಿಸಿದ ತರುವಾಯಶ್ರೀ ರಾಮತಾನೇ ಸ್ವಯಂ ಪೂಜೆ ಮಾಡಿದನುಶಿರಿಸೀತ ತಾ ಕೊಂಡಳು ಪೂಜೆಗಾಗಿ 7ರಾಮಚಂದ್ರನು ಸೇವೆ ಸಾಕ್ಷಾತ್ ಮಾಡುವಸೌಮಿತ್ರಿ ಆ ಮೂರ್ತಿಗಳನ್ನು ತಾನುಸಮ್ಮುದದಿ ತನ್ನ ಅರಮನೆಯಲ್ಲಿಟ್ಟುಕೊಂಡುನೇಮದಿ ಪೂಜಿಸುತ್ತಿದ್ದನು ಬಹುಕಾಲ 8ದ್ವಿಜನರ ಶ್ರೇಷ್ಠನು ರಾಮನಲಿ ಬಹುಭಕ್ತಿನಿಜಭಾವದಲಿ ಮಾಳ್ಪಅನುದಿನಅವನುರಾಜೀವೇಕ್ಷಣ ರಾಮನನ್ನು ತಾ ನೋಡದಲೆಭೋಜನ ಮಾಡಲಾರನು ಅಂಥಭಕ್ತ 9ವಿಪ್ರವರ ಅವಾತ ವೃದ್ಧಾಪ್ಯದಲಿಅರಮನೆ ದರ್ಬಾರ ಮಂಟಪಕೆ ಬಂದಶ್ರೀರಾಮಚಂದ್ರನು ರಾಜಕಾರ್ಯೋದ್ದೇಶಹೊರಗೆ ಹೋಗಿದ್ದನು ಏಳುದಿನ ಹೀಗೆ 10ಏಳು ದಿನವೂ ಆ ವಿಪ್ರೋತ್ತಮ ಊಟಕೊಳ್ಳದೇ ದೇಹಬಲ ಬಹು ಬಹುಕುಗ್ಗಿಮೆಲ್ಲನೆ ಎಂಟನೆ ದಿನ ಬಂದುಕುಳಿತಿದ್ದ ಶ್ರೀ ರಾಮಚಂದ್ರ ಸಭೆಯಲ್ಲಿ 11ಕಣ್ಣಿಗೆ ಏಳುದಿನ ಕಾಣದ ಶ್ರೀರಾಮಆನಂದಮಯಶ್ರೀನಿಧಿಯ ಕಂಡಲ್ಲೇಬ್ರಾಹ್ಮಣನು ಆನಂದ್ರೋದೇಕವು ಉಕ್ಕಿಸನ್ನಮಿಸುವಲ್ಲೇಯೇ ಬಿದ್ದನು ಕೆಳಗೆ 12ಏಳುದಿನ ಉಪವಾಸದಿಂದಲೇ ತನುವಿನಬಲಹೀನತೆ ಹೊಂದಿ ಆ ಬ್ರಾಹ್ಮಣ ಬೀಳೆ ಕೆಳಗೆಕನಕಆಸನದಿಂದಲಿ ರಾಮಇಳಿದುಬಂದು ಆಶ್ವಾಸಿಸಿದ ವಿಪ್ರನÀನ್ನ 13ವಿಪ್ರಶ್ರೇಷ್ಠನ ನಿವ್ರ್ಯಾಜ ಭಕ್ತಿಯ ಮೆಚ್ಚಿಕರುಣಾಬ್ಧಿ ಭಕ್ತವತ್ಸಲ ರಾಮಚಂದ್ರಕ್ಷಿಪ್ರದಲೆ ಲಕ್ಷ್ಮಣನ ಕಡೆಯಿಂದ ಪ್ರತಿಮೆಗಳತರಿಸಿಕೊಟ್ಟನು ಆ ದ್ವಿಜಶ್ರೇಷ್ಠನಿಗೆ 14ಅನುದಿನವೃದ್ಧ ದೆಶೆಯಲ್ಲಿ ಬರಬೇಡವುಅನಾಯಾಸದಿ ತನ್ನ ಪ್ರತಿಮೆಯಲ್ಲಿಕಾಣಬಹುದು ಎಂದು ಶ್ರೀರಾಮ ಪೇಳಿದನುಆನಂದದಿಕೊಂಡಬ್ರಾಹ್ಮಣ ಮೂರ್ತಿಗಳ15ಪ್ರತಿನಿತ್ಯ ವಿಧಿಪೂರ್ವಕ ಅರ್ಚಿಸಿದವಿಪ್ರಯುಕ್ತ ಕಾಲದಿ ತನು ಬಿಡುವ ಸಮಯದಲಿವಾಯುಸುತ ಹನುಮನ ಕೈಯಲ್ಲಿ ಅರ್ಪಿಸಿದಸೀತಾರಾಮ ಪ್ರತಿಮೆಗಳ ಭಕ್ತಿಯಲಿ 16ಸಮಸ್ತ ಜೀವರುಮಾಳ್ಪ ಭಕ್ತಿಗೆ ಅಧಿಕಸುಮಹಾಭಕ್ತಿಯ ಮಾಳ್ಪ ಹನುಮಂತಈ ಮೂರ್ತಿಗಳ ತಾಕೊಂಡು ಮುದದಲಿ ಕುಣಿದಸಮ್ಮುದದಿ ಅರ್ಚಿಸಿದ ಸೀತಾರಾಮನ್ನ 17ಸೌಗಂಧಿಕಾಪುಷ್ಪತರಲು ಭೀಮನು ಪೋಗಿಮಾರ್ಗದಲಿ ತನ್ನಯ ಪ್ರಥಮಾವತಾರಸಾಕೇತರಾಮಪ್ರಿಯತಮ ಅಂಜನಾಸುತನಸಂಗಡವಾದಿಸಿದ ಲೋಕರೀತಿಯಲ್ಲಿ 18ನರಾಧಮರ ಮೋಹಿಸುವ ಸಜ್ಜನರ ಮೋದಿಸುವಚರ್ಯಸಂವಾದ ತೋರಿಸಿ ರೂಪದ್ವಯದಿತರುವಾಯು ಹನುಮನು ಭೀಮನಿಗೆ ಕೊಟ್ಟನುಶ್ರೀರಾಮಸೀತಾ ಮೂಲಪ್ರತಿಮೆಗಳ 19ಭೀಮಸೇನನು ಆನಂದದಿ ಅರ್ಚಿಸಿದಸುಮನೋಹರ ರಾಮಸೀತಾದೇವಿಯನ್ನಈ ಮಹಾಹರಿಭಕ್ತ ಪಾಂಡವರ ವಂಶದಿಕ್ಷೇಮಕ ರಾಜನು ಕಡೆಯಾಗಿ ಬಂದ 20ಮೂಲರಾಮಸೀತೆಯ ಮುದದಿಂದ ಪೂಜಿಸಿದಶೀಲಭಾವದಲಿ ಆ ಕ್ಷೇಮಕಾಂತಮೂಲ ವಿಗ್ರಹಗಳು ತರುವಾಯ ಲಭಿಸಿದವುಕಳಿಂಗ ದೇಶಾಧಿಪ ಭಕ್ತನ ಕೈಯಲ್ಲಿ 21ಆಗಿನಕಾಲದಲ್ಲಿಪೀತಾಪುರವಿಜಯನಗರಎಂಬುವ ಪಟ್ಟಣದ ಮತ್ತುಜಗನ್ನಾಥಕ್ಷೇತ್ರ ದಕ್ಷಿಣ ಕಳಿಂಗಾಧಿಪರುಭಕುತಿ ಬೆಳೆಸಿದರು ಶ್ರೀರಾಮನಲ್ಲಿ 22ಆಗಾಗ ಹಸ್ತಿನಾಪುರ ಪೋಗುತಿದ್ದರುಗಂಗಾದಿಸ್ನಾನ ಕ್ಷೇತ್ರಾಟನ ಮಾಡಿಭಕ್ತಿಯಿಂ ಶ್ರೀರಾಮಚರಿತೆ ಕೇಳುವವರಲ್ಲಿವಿಗ್ರಹಗಳು ಲಭಿಸಿದವು ರಾಮನ ಕೃಪದಿ 23ಕಳಿಂಗದೇಶಾಧಿಪ ಗಜಪತಿ ರಾಜನುಬಲುಶ್ರದ್ಧೆ ಭಕ್ತಿಯಲಿ ಆರಾಧಿಸಿಕಾಲದೀರ್ಘದಿ ಸಂತತಿ ಪೂಜಿಸದಲೆಕೀಲುಹಾಕಿ ರಕ್ಷಿಸಿದರು ಬೊಕ್ಕಸದಿ 24ಹಿಂದೆ ತಾ ಭೀಮಾವತಾರದಲಿ ಪೂಜಿಸಿದ್ದುಎಂದು ಆನಂದಮುನಿಇಂದುವಿಗ್ರಹಗಳಹೊಂದಲು ನರಹರಿ ತೀರ್ಥರ ಕಳಿಂಗದಿನಿಂದಿರಿಸಿ ತರಿಸಿಕೊಂಡರು ಮೂರ್ತಿಗಳನು 25ಶ್ರೀಮದಾಚಾರ್ಯರು ಆರ್ಚಿಸಿ ತರುವಾಯಪದ್ಮನಾಭತೀರ್ಥರು ಆರುವರ್ಷಗಳು ಆರಾಧಿಸಿ ನರಹರಿ ತೀರ್ಥರು ಒಂಭತ್ತು ವರ್ಷಗಳುಮುದದಿಂ ಪೂಜಿಸಿದರು ಮೂಲ ರಾಮನ್ನ 26ಒಂಭತ್ತು ವರ್ಷಗಳು ಒಂದು ತಿಂಗಳು ದಿನಇಪ್ಪತ್ತ ಮೂರು ಈಕಾಲಸಂಸ್ಥಾನಶ್ರೀಪನಿಗೆ ಪ್ರಿಯತರದಿ ಆಡಳಿತ ಮಾಡಿಶ್ರೀಪನ್ನ ಧ್ಯಾನಿಸುತ ಹರಿಪುರ ಐದಿದರು 27ಶಾಲಿಶಕ ಹನ್ನೊಂದು ನೂರು ಮೂವತ್ತಾರುಶೀಲತಮ ಶ್ರೀಮುಖ ಪುಷ್ಯ ಕೃಷ್ಣಏಳನೇ ದಿನದಲ್ಲಿ ಹರಿಪುರ ಯೈದಿದರುಮಾಲೋಲ ಪ್ರಿಯತಮ ನರಹರಿ ತೀರ್ಥರು 28ಮತ್ತೊಂದು ಅಂಶದಲಿ ವೃಂದಾವನದಲಿವೃತತಿಜನಾಭ ತೀರ್ಥರ ಸಮೀಪಉತ್ತುಂಗಮಹಿಮ ತುಂಗಾನದಿ ಚಕ್ರತೀರ್ಥದಹತ್ತಿರ ಕುಳಿತಿಹರು ಸ್ಮರಿಸೆ ರಕ್ಷಿಪರು 29ಶ್ರೀರಾಮನರಹರಿ ಶ್ರೀ ಶ್ರೀನಿವಾಸನುನೇರಲ್ಲಿ ಪ್ರಸನ್ನನಾಗಿ ಈಗ ಈ ನುಡಿಗಳ್ಬರೆಸಿಹನು ಸಜ್ಜನರು ಓದಲು ಕೇಳಲುಗುರುಗಳಂತರ್ಯಾಮಿ ವಾಂಛಿತಗಳೀವ 30ಅರಸಿಕರಿಗೂ ಅಧಮ ಮಂದರಿಗು ಈವಿಜಯಬರೆಯಲಿಕು ಕೇಳಲಿಕು ಅವಕಾಶ ಕೊಡದೆಭಾರಿ ಪಂಡಿತರುಗಳೂ ಸಾಮಾನ್ಯ ಸುಜನರೂಸುಶ್ರಮಣ ಮಾಳ್ಪುದು ಹರಿಪ್ರೀತಿಗಾಗಿ 31ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 32ಶ್ರೀ ನರಹರಿತೀರ್ಥವಿಜಯಸಂಪೂರ್ಣಂ|| ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವಿಜಯದಾಸಾರ್ಯ ಚರಿತ್ರೆ135ಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಅಶೇಷ ಗುಣಗಣಾರ್ಣವಅನಘಶ್ರೀರಮಣಶ್ರೀ ಶ್ರೀನಿವಾಸ ನರಹರಿ ವ್ಯಾಸ ಕೃಷ್ಣಹಂಸ ನಾಮಕ ಪರಂ ಬ್ರಹ್ಮವಿಧಿಸನಕಾದಿದಶಪ್ರಮತಿ ಗುರುವಂಶ ಸರ್ವರಿಗೂ ನಮಿಪೆ 1ವ್ಯಾಸರಾಜರ ಮುಖ ಕಮಲದಿಂದುಪದಿಷ್ಟದಾಸರಾಜರು ಪುರಂದರದಾಸಾರ್ಯವಸುಧೆಯಲ್ಲಿ ನಾರದರೇಪುರಂದರದಾಸರು ಎನಿಸಿಶ್ರೀಶನ್ನ ಸೇವಿಸುತ ಭಕ್ತÀನ್ನ ಕಾಯ್ತಿಹರು 2ಹರಿಸಮೀರರೂ ಸದಾ ಪ್ರಚುರರಾಗಿಹಪುರಂದರದಾಸಾರ್ಯರವರಶಿಷ್ಯರೇವೆಧರೆಯಲ್ಲಿ ಪ್ರಖ್ಯಾತ ವಿಜಯದಾಸಾರ್ಯರುಸುರವೃಂದ ಮಹಾ ಋಷಿಯು ಭೃಗು ಮಹಾ ಮುನಿಯು 3ಋಗ್ ಜಯಾಸಿತ ಯಜುಸ್ ಸಿತ ಯಜುಸ್ಸಾಮಅರ್ಥರ್ವಾಂಗಿರಸಕೆ ಕ್ರಮದಲಿ ಪ್ರವರ್ತಕರುಬಾಗುವೆ ಶಿರ ಪೈಲಗೆ ವೈಶಂಪಾಯನನಿಗೆಅರ್ಕಗೆ ಜೈಮಿನಿಗೆ ಸುಮಂತು ಸಿಂಧುಜಗೆ 4ನಮೋ ಬ್ರಹ್ಮ ವಾಯು ವಿಪ ಫಣಿಪಶುಕಸಂಕ್ರಂದಕಾಮಾರ್ಕ ನಾರದ ಭೃಗು ಸನತ್‍ಕುಮಾರಾದಿಕಾಮಯುಕ್ ಸೂತ ಗಂಧರ್ವನೃಪಶ್ರೇಷ್ಠರಿಗೆಭೂಮಿ ಸುರ ನರರಿಗೆ ಶ್ರೀಶ ಚಲಪ್ರತಿಕ 5ಸ್ವರ್ಣಾಂಡ ಬಹಿರಂತವ್ರ್ಯಾಪ್ತತೇಜಪುಂಜಜ್ಞಾನ ಸುಖ ಪೂರ್ಣ ಶ್ರೀಪತಿ ವೇದ ವ್ಯಾಸಜ್ಞಾನ ಸಂಯುತ ಕರ್ಮಯೋಗ ಪ್ರವರ್ತಿಸುವುದಕೆತಾನೇ ಸೇವಿಸಿದನು ಭೃಗು ಋಷಿಯು ಅಂದು 6ಸುರ ನದಿತೀರದಲಿ ಭೂಸುರರು ಋಷಿಗಳುಸತ್ರಯಾಗ ಎಂಬಂಥ ಜ್ಞಾನಕರ್ಮಚರಿಪೆ ಜಿಜ್ಞಾಸದಲಿ ನಾರದರು ಪ್ರೇರಿಸಿಹೊರಟರು ಭೃಗು ಮುನಿಯು ತತ್ವ ನಿರ್ಣಯಕೆ 7ಶೃತಿಸ್ಮøತಿಪುರಣೇತಿಹಾಸಾದಿಗಳಲ್ಲಿಅದ್ವಿತೀಯನು ಸರ್ವೋತ್ತಮಹರಿಶ್ರೀಶಪದುಮಭವ ರುದ್ರಾದಿಸುರರುತಾರ ತಮ್ಯದಲಿಸದಾ ಅವರಂಬುದನು ಪರಿಕ್ಷೆ ಮಾಡಿದರು 8ನೇರಲ್ಲಿ ತಾ ಪೋಗಿ ಅರಿತು ಪೇಳಿದರುಹರಿಃ ಸರ್ವೋತ್ತಮ ಸಾಕ್ಷಾತ್ ರಮಾದೇವಿ ತzನÀಂತರಸರಸಿಜಾಸನ ವಾಣಿ ರುದ್ರಾದಿಸುರರುತರತಮದಿ ಅವgವÀರು ಸಂಶಯವಿಲ್ಲ ಎಂದು 9ಈ ರೀತಿ ಹಿಂದೆ ಈ ಭೃಗು ಹರಿಯ ನಿಯಮನದಿಅರುಹಿದಂತೆ ಈಗವಿಜಯದಾಸಾರ್ಯನಾರದಪುರಂದರದಾಸಾರ್ಯರನ್ನನುಸರಿಸಿಹರಿಮಹಿಮೆ ಸತ್ ತತ್ವ ಅರುಹಿದರು ಜನಕ್ಕೆ10ವಿಜಯರಾಯರ ಶಿಷ್ಯ ಸೂರಿಗಳೊಳ್ ಪ್ರವರನುಧೂರ್ಜಟೆ ಉಮಾಸುತನುಕ್ಷಿಪ್ರಪ್ರಸಾದಗಜಮುಖನೆ ಗೋಪಾಲ ದಾಸಾರ್ಯರಾಗಿಪ್ರಜ್ವಲಿಸುತಿಹ ನಮೋ ಗುರುವರ್ಯ ಶರಣು 11ಪುರಂದರದಾಸಾರ್ಯರು ವಿಜಯರಾಯರಲ್ಲಿಇರುವರು ಒಂದಂಶದಿಂದ ಜ್ವಲಿಸುತ್ತಬರೆಸಿಹರು ಇಪ್ಪತ್ತು ಮೇಲೈದು ಸಾವಿರಶ್ರೀವರನ ಸಂಸ್ತುತಿ ತತ್ವ ಕವಿತೆಗಳ 12ಕೃತ ತ್ರೇತ ದ್ವಾಪರ ಕಲಿಯುಗ ನಾಲ್ಕಲ್ಲಿಯೂಸುತಪೋನಿಧಿ ಭೃಗು ಮೂಲ ರೂಪದಲುತ್ರೇತಾದಿ ಮೂರಲ್ಲಿಯೂ ಅವತಾರ ರೂಪದಲುಗಾಯತ್ರಿ ನಾಮನ್ನ ಸಂಸೇವಿಸುವರು 13ಪುರಂದರಾರ್ಯರ ಮನೆಯಲ್ಲಿ ಗೋವತ್ಸತರುವಾಯು ಸುಕುಮಾರ ಮಧ್ವಪತಿಯಾಗಿಸರಿದ್ವರ ಶ್ರೀ ತುಂಗಭದ್ರ ತೀರದಿ ಪುನಃಅರಳಿ ನೃಸಿಂಹ ಕ್ಷೇತ್ರದಲಿ ತೋರಿಹರು 14ಅಶ್ವತ್ಥ ನರಸಿಂಹ ಕ್ಷೇತ್ರಕ್ಕೆ ಮತ್ತೊಂದುಹೆಸರುಂಟು ರೂಢಿಯಲಿ ಚೀಕಲಾಪುರಿಯುಕುಸುಮಭವಪಿತಅಂಭ್ರಣಿಪತಿಎನ್ನಪ್ರಶಾಂತ ಚಿತ್ತದಿ ಧ್ಯಾನಿಸೆ ತಕ್ಕ ಸ್ಥಳವು 15ಶ್ರೀಪದ್ಮನಾಭತೀರ್ಥರಕರಕಂಜದಿಂದಉದ್ಭೂತ ಲಕ್ಷ್ಮೀಧರರ ವಂಶಜರುಶ್ರೀಪಾದ ರಾಜರೂ ಈ ಕ್ಷೇತ್ರದಲಿಸ್ಥಾಪಿಸಿದರು ಅಶ್ವತ್ಥÀ ನರಹರಿಯ 16ಹುಂಬೀಜ ಪ್ರತಿಪಾದ್ಯ ಭೂಪತಿಯ ವಕ್ತ್ರದಿಂಸಂಭೂತ ತುಂಗಾ ಸರಿದ್ವರದ ತೀರಗಂಭೀರ ಭೂ ಕಲ್ಪತರುವು ಅಶ್ವತ್ಥ್ಥವುಸಂರಕ್ಷಿಸುವ ನಾರಸಿಂಹ ಭದ್ರದನು 17ನಾರಾಯಣ ಬ್ರಹ್ಮರುದ್ರಾದಿ ದೇವರ್‍ಗಳುಇರುತಿಹರು ಅಶ್ವತ್ಥ್ಥ ಕಲ್ಪ ವೃಕ್ಷದಲಿನಾರಾಯಣ ಶ್ರೀ ನರಸಿಂಹ ಪುರುಷೋತ್ತಮನೆಶರಣಾದೆ ಪೊರೆಯುತಿಹವಾಂಛಿತಪ್ರದನು18ಕಾಶಿ ಬದರಿಯಂತೆ ಇರುವ ಈ ಕ್ಷೇತ್ರದಲಿಭೂಸುರವರರು ಶ್ರೀನಿವಾಸಾಚಾರ್ಯರಲಿಶ್ರೀ ಶ್ರೀನಿವಾಸನ ಪ್ರಸಾದದಿ ಜನಿಸಿಹರುಶ್ರೀಶ ಭಕ್ತಾಗ್ರಣಿ ಈ ಹರಿದಾಸವರರು 19ಕುಸುಮಾಲಯ ಪದ್ಮಾವತಿ ನೆನಪು ಕೊಡುವಕುಸುಮಕೋಮಲ ಮುಖಿ ಆದ ಕಾರಣದಿಕೂಸಮ್ಮ ನೆಂದು ಕರೆಯಲ್ಪಟ್ಟ ಸಾಧ್ವಿಯಈ ಶ್ರೀನಿವಾಸ ಆಚಾರ್ಯಕರಹಿಡಿದರು20ಪತಿವ್ರತಾ ಶಿರೋಮಣಿ ಕೂಸಮ್ಮನ ಗರ್ಭಅಬ್ಧಿಯಿಂ ಹುಟ್ಟಿತು ಉತ್ತಮ ರತ್ನಹತ್ತು ದಿಕ್ಕಲು ಪ್ರಕಾಶಿಸುವ (ದ್ಯುತಿವಂತ) ಕೀರ್ತಿಮಾನ್ಪುತ್ರ ರತ್ನನು ಬೆಳೆದ ದಾಸಪ್ಪ ನಾಮಾ 21ಕೂಸಮ್ಮ ಶ್ರೀನಿವಾಸಪ್ಪ ದಂಪತಿಗೆದಾಸಪ್ಪನಲ್ಲದೆ ಇನ್ನೂ ಕೆಲಪುತ್ರರುಕೇಶವಾನುಗ್ರಹದಿ ಹುಟ್ಟಿ ಸಂಸಾರದಿಈಜಿದರು ಯದೃಚ್ಛಾ ಲಾಭ ತುಷ್ಟಿಯಲಿ 22ಯಾರಲ್ಲೂ ಕೇಳದಲೇ ಅನಪೇಕ್ಷ ದಂಪತಿಯುಹರಿದತ್ತ ಧನದಲ್ಲಿ ತೃಪ್ತರಾಗುತ್ತಅರಳಿ ನೃಸಿಂಹನ್ನ ಸೇವಿಸುತ ಮಕ್ಕಳಲಿಹರಿಮಹಿಮೆ ಹೇಳುತ್ತ ಭಕ್ತಿ ಬೆಳಸಿದರು23ನಮ್ಮ ದಾಸಪ್ಪನಿಗೆ ಹದಿನಾಲ್ಕು ಮಯಸ್ಸಾಗೆಕರ್ಮಸುಳಿಯು ಮೆಲ್ಲ ಮೆಲ್ಲನೆ ತೋರಿಸಮುದ್ರ ಶಯನನ ಅಧೀನವು ಎಲ್ಲ ಎನ್ನುತ್ತಒಮ್ಮೆಗೂ ಲೆಕ್ಕಿಸಲಿಲ್ಲ ಬಡತನವನ್ನ 24ಬದರಮುಖ ಬ್ರಹ್ಮವರ್ಚಸ್ವಿ ದಾಸಪ್ಪಹದಿನಾರುವತ್ಸರದ ಬ್ರಹ್ಮಚಾರಿಮಾಧವನೆ ಹಾದಿ ತೋರುವ ತನಗೆ ಎಂದುಹೋದರು ಪೂರ್ವದಿಕ್ಕಿನ ಕ್ಷೇತ್ರಗಳಿಗೆ 25ಜಲರೂಪಿ ಕೃಷ್ಣನ್ನ ನೆನೆದು ಕೃಷ್ಣಾನದಿಯಲ್ಲಿ ಮಿಂದು ಅಲ್ಲಿಂದ ಮಂತ್ರಾಲಯಅಲ್ಲಿ ಶ್ರೀ ರಾಘವೇಂದ್ರರ ವಾದೀಂದ್ರರ ದಿವ್ಯಜಲಜಪಾದಗಳಿಗೆ ಬಾಗಿದರು ಶಿರವ 26ಆದವಾನಿನಗರನವಾಬನ ಸರ್ಕಾರಅಧಿಕಾರಿ ಡಾಂಭಿಕ ಓರ್ವನ ಗೃಹದಿಮದುವೆ ಪೂರ್ವದ ದೇವರ ಸಮಾರಾಧನೆಯುಹೋದರು ಆ ಮನೆಗೆ ದಾಸಪ್ಪ ಆರ್ಯ 27ಇತ್ತದ್ದು ಹರಿಯೆಂದು ತಂದೆ ಮಾಡುವ ಅತಿಥಿಸತ್ಕಾರ ನೋಡಿದ್ದ ದಾಸಪ್ಪಾರ್ಯನಿಗೆಇಂದುಆದವಾನಿ ಗೃಹಸ್ಥ ದಾಸಪ್ಪನಉದಾಸೀನ ಮಾಡಿದ್ದು ನೂತನಾನುಭವ 28ತೇನ ತ್ಯೆಕ್ತೇನ ಭುಂಜೀಥಾಃ ಮಾಗೃಥೆಃಕಸ್ಯ ಸ್ವಿದ್ಧನಂ ಎಂದು ಮನಸ್ಸಿಗೆ ತಂದುಆದವಾನೀಯಿಂದ ಹೊರಟು ಮಾರ್ಗದಲಿಇದ್ದ ಛಾಗಿ ಎಂಬ ಗ್ರಾಮ ಸೇರಿದರು 29ಉಪೋಷಣದಿ ತನುವು ಬಾಡಿದ್ದರೂ ಮುಖಸ್ವಲ್ಪವೂ ಮ್ಲಾನ ವಿಲ್ಲದೆ ಹರಿಯ ಸ್ಮರಿಸಿಬಪ್ಪ ದಾಸಪ್ಪನ್ನ ನೋಡಿ ಕೇಶವರಾಯಎಂಬ ವಿಪ್ರನು ಕರೆದ ತನ್ನ ಮನೆಗೆ 30ಛಾಗಿ ಗ್ರಾಮದ ಪ್ರಮುಖ ಕೇಶವರಾಯನುಆ ಗೃಹಸ್ಥನ ತಾಯಿ ಕುಟುಂಬಜನರೆಲ್ಲಾಭಗವಂತನ ಶ್ರೇಷ್ಠ ಪ್ರತೀಕ ಇವರೆಂದುಭಾಗಿ ಶಿರ ಆತಿಥ್ಯ ನೀಡಿದರು ಮುದದಿ 31ಆ ಮನೆಯ ದೊಡ್ಡ ಆಕೆಯು ಪಾಕ ಮಾಡಿಶ್ರೀ ಮನೋಹರನಿಗೆ ದಾಸಪ್ಪ ಅದನ್ನಸಂಮುದದಿ ನೈವೇದ್ಯ ಅರ್ಪಿಸಿ ಉಂಡರುರಮಾಪತಿನಿತ್ಯತೃಪ್ತಗೆ ತೃಪ್ತಿ ಆಯ್ತು32ಭಿನ್ನಸ್ವಭಾವಿಗಳು ಭಿನ್ನಜೀವರುಗಳಲಿಭಿನ್ನ ಕರ್ಮವ ಮಾಡಿ ಮಾಡಿಸುವಅನಘಘನ್ನ ಗುಣನಿಧಿ ಸರ್ವ ಜಡಜೀವ ಭಿನ್ನಶ್ರೀನಿಧಿಯ ಸ್ಮರಿಸುತ್ತೆ ಹೊರಟರು ವೇಂಕಟಕೆ 33ಭೂವೈಕುಂಠ ಈ ತಿರುಪತಿ ಕ್ಷೇತ್ರದಲಿದೇವದೇವೋತ್ತಮ ದೇವಶಿಖಾಮಣಿಯಮೂವತ್ತೆರಡು ಮುವತ್ತಾರುಬಾರಿಮೇಲೆಸೇವಿಸಿಹರು ಎಂದು ಕೇಳಿಹೆನು 34ದಾಸಪ್ಪ ನಾಮದಲೂ ವಿಜಯರಾಯರೆನಿಸಿಯೂದೇಶದೇಶದಿ ಹರಿಕ್ಷೇತ್ರ ಪೋಗಿಹರುಕಾಶೀಗೆ ಮೂರು ಸಲ ಪೋಗಿ ಬಂದಿರುವರುಕಾಶಿ ಬದರಿ ನಮಗೆ ಇವರ ಸಂಸ್ಮರಣೆ 35ಪಂಕೇರುಹೇಕ್ಷಣವರಾಹವೆಂಕಟ ಪತಿಯವೇಂಕಟಗಿರಿಯಲ್ಲಿ ಭಕ್ತಿಯಿಂ ಪುನಃತಾ ಕಂಡು ಆನಂದಪುಲಕಾಶ್ರು ಸುರಿಸಿಶಂಕೆಯಿಲ್ಲದೆ ಧನ್ಯ ಮನದಿ ತಿರುಗಿದರು 36ತಿರುಗಿ ಚೀಕಲಪುರಿ ಬಂದು ಹೆತ್ತವರಚರಣಪದ್ಮಗಳಲ್ಲಿ ನಮಿಸಿ ಅಲ್ಲಿನರಹರಿ ಶ್ರೀ ಶ್ರೀನಿವಾಸನ್ನ ಸೇವಿಸುತಪರಿತೋಷಿಸಿದರು ಗಾರ್ಹ ಧರ್ಮದಲಿ 37ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 38-ಇತಿಃ ಪ್ರಥಮಾಧ್ಯಾಯಃ-ದ್ವಿತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪತಿರುಪತಿ ಘಟಿಕಾದ್ರಿ ಕಾಶಿ ಮೊದಲಾದಕ್ಷೇತ್ರಾಟನೆ ಮಾಡಿ ಬಂದ ಪುತ್ರನಿಗೆಭಾರಿಗುಣ ಸಾಧ್ವಿಯ ಮದುವೆ ಮಾಡಿಸಿದರುವಿಪ್ರರ ಮುಂದೆಶುಭಮುಹೂರ್ತದಲಿ ತಂದೆ1ಗುಣರೂಪವಂತಳು ವಧು ಅರಳಿಯಮ್ಮಘನಮಹಾ ಪತಿವ್ರತಾ ಶಿರೋಮಣಿಯು ಈಕೆತನ್ನ ಪತಿಸೇವೆಯ ಪೂರ್ಣ ಭಕ್ತಿಯಲಿಅನವರತಮಾಡುವ ಸೌಭಾಗ್ಯವಂತೆ2ಪುತ್ರೋತ್ಸವಾದಿಶುಭಸಂಭ್ರಮಗಳು ಆದುವುನಿತ್ಯಹರಿತುಳಸೀಗೆ ಪೂಜಾ ವೈಭವವುತ್ರಾತಹರಿ ಸಾನ್ನಿಧ್ಯ ಅನುಭವಕೆ ಬರುತ್ತಿತ್ತುಶ್ರೀದಹರಿವಿಠ್ಠಲನು ತಾನೇವೆ ಒಲಿದ 3ಧನಸಂಪಾದನೆಗಾಗಿ ಅನ್ಯರನು ಕಾಡದೆಅನಪೇಕ್ಷ ಮನದಿಂದ ಹರಿಕೊಟ್ಟದ್ದಲ್ಲೇದಿನಗಳ ಕಳೆದರು ಹೀಗೆ ಇರುವಾಗಫಣಿಪಗಿರಿವೇಂಕಟನು ಮನದಲ್ಲಿ ನಲಿದ 4ನರಹರಿಗೆ ಸನ್ನಮಿಸಿ ಅಪ್ಪಣೆ ಪಡೆದುಹೊರಟರು ವೇಂಕಟನಾಥನ್ನ ನೆನೆದುಸೇರಿದರು ಶೇಷಗಿರಿ ನಮಿಸಿ ಭಕ್ತಿಯಲಿಏರಿದರು ಎರಗಿದರು ನಾರಸಿಂಹನಿಗೆ 5ನರಸಿಂಹನಿಗೆ ಗುಡಿ ಗಾಳಿಗೋಪುರದಲ್ಲಿಕರೆವರು ಬಾಷಿಂಗನರಸಿಂಹನೆಂದುಹರಿದಾಸರಿಗೊಲಿವ ಕಾರುಣ್ಯಮೂರ್ತಿಯುಕರುಣಿಸಿದ ಜಗನ್ನಾಥದಾಸರಿಗೆ ಪೀಠ 6ದಾಸಪ್ಪ ವಿಜಯದಾಸರು ಆದ ತರುವಾಯಈಶಾನುಗ್ರಹವ ಬ್ಯಾಗವಟ್ಟಿಯವರ್ಗೆಶಿಷ್ಯರದ್ವಾರಾ ಒದಗಿ ಜಗನ್ನಾಥದಾಸರಾಗಿ ಮಾಡಿಹರು ಪರಮದಯದಿಂದ 7ನರಸಿಂಹನಪಾದ ಭಜಿಸಿ ಅಲ್ಲಿಂದಗಿರಿ ಅರೋಹಣವನ್ನ ಮುಂದುವರಿಸಿಶ್ರೀ ಶ್ರೀನಿವಾಸನ ಭೇಟಿ ಒದಗಿಸುವಂತೆವರಅಂಜನಾಸೂನು ಹನುಮಗೆರಗಿದರು8ಮಹಾತ್ಮ್ಯೆ ಶ್ರೀ ನಿಧಿ ಶ್ರೀ ಶ್ರೀನಿವಾಸನ್ನಮಹಾದ್ವಾರ ಗೋಪುರದಲ್ಲಿ ಸಂಸ್ಮರಿಸಿಮಹಾದ್ವಾರದಲಿ ಕರಮುಗಿದು ಉತ್ತರದಿಇಹ ಸ್ವಾಮಿತೀರ್ಥದಲಿ ಸ್ನಾನ ಮಾಡಿದರು 9ಭೂರ್ಭುವಃ ಸ್ವಃಪತಿಭೂಧರವರಾಹನ್ನಉದ್ಭಕ್ತಿ ಪೂರ್ವಕದಿ ವಂದಿಸಿ ಸರಸ್ಯಇಭರಾಜವರದನ್ನ ಸ್ಮರಿಸುತ್ತ ಸುತ್ತಿಶುಭಪ್ರದಪ್ರದಕ್ಷಿಣೆ ಮಾಡಿದರು ಮುದದಿ 10ಪ್ರದಕ್ಷಿಣೆಗತಿಯಲ್ಲಿ ಸಾಕ್ಷಿಅಶ್ವತ್ಥನ್ನಭೂಧರನ್ನ ನೋಡುತ್ತ ನಿಂತ ಹನುಮನ್ನವಂದಿಸಿ ಮಹಾದ್ವಾರ ಸೇರಿ ಕೈಮುಗಿದುಇಂದಿರೇಶನ ಆಲಯದೊಳು ಹೋದರು 11ಬಲಿಪೀಠ ಧ್ವಜಸ್ತಂಭ ತತ್ರಸ್ಥ ಹರಿಯನೆನೆದುಬೆಳ್ಳಿ ಬಾಗಿಲದಾಟಿ ಗರುಡಗೆ ನಮಿಸಿಒಳಹೋಗೆ ಅಪ್ಪಣೆ ಜಯವಿಜಯರಕೇಳಿಬಲಗಾಲ ಮುಂದಿಟ್ಟು ಹೋದರು ಒಳಗೆ 12ಬಂಗಾರ ಬಾಗಿಲ ದಾಟಲಾಕ್ಷಣವೇಕಂಗೊಳಿಸುವಂತ ಪ್ರಾಜ್ವಲ್ಯ ಕಿರೀಟಚಂಚಲಿಸುವ ತಟಿನ್ನಿಭಕರ್ಣಕುಂಡಲವಿಟ್ಟಗಂಗಾಜನಕವೆಂಕಟೇಶನ್ನ ನೋಡಿದರು13ಆನಂದಜ್ಞಾನಮಯ ಪಾದಪಂಕಜತತ್ರಸುನೂಪುರ ಉಡಿವಡ್ಯಾಣಕೌಶೇಯಮಿನುಗುವಾಂಬರ ಸಾಲಿಗ್ರಾಮದ ಹಾರಘನಮಹಾ ಹಾರಗಳು ಸರಿಗೆ ವನಮಾಲೆ14ಶ್ರೀವತ್ಸ ಕೌಸ್ತುಭಮಣಿ ವೈಜಯಂತೀದಿವ್ಯ ಪ್ರಜ್ವಲಿಸುವ ಪದಕಂಗಳುಕಿವಿಯಲ್ಲಿ ಮಿಂಚಿನಂದದಿ ಪೊಳೆವಕುಂಡಲಸರ್ವಾಭರಣಗಳ ವರ್ಣಿಸಲು ಅಳವೇ 15ಅಕಳಂಕ ಪೂರ್ಣೇಂದು ಮುಖಮುಗುಳುನಗೆಯುಕಂಗಳುಕಾರುಣ್ಯ ಸುರಿಸುವನೋಟಕಾಕುಇಲ್ಲದ ನೀಟಾದ ಫಣೆ ತಿಲಕವುಚೊಕ್ಕ ಚಿನ್ನದಿ ನವರತ್ನ ಜ್ವಲಿಪ ಕಿರೀಟ 16ಬ್ರಹ್ಮಪೂಜಿತಶ್ರೀ ಶ್ರೀನಿವಾಸನ್ನಮಹಾನಂದದಿ ನೋಡಿ ಸನ್ನಮಿಸಿ ಮುದದಿಬಹಿರದಿ ಬಂದು ಮತ್ತೊಮ್ಮೆ ಪ್ರದಕ್ಷಿಣೆ ಮಾಡಿಮಹಾಪ್ರಾಕಾರದಲಿ ಕೊಂಡರು ಪ್ರಸಾದ 17ಹೇಮಮಯ ಆನಂದನಿಲಯ ವಿಮಾನ ಗೋಪುರದಿಶ್ರೀಮನೋಹರ ಶ್ರೀ ಶ್ರೀನಿವಾಸನ್ನ ಪುನಃನೆಮ್ಮದಿದಿ ನೋಡಿ ಸನ್ನಮಿಸಿ ಶ್ರೀನಾರಸಿಂಹನ್ನ ವಂದಿಸಿ ಹೋದರು ಒಳಗೆ 18ಏಕಾಂತ ಸೇವೆ ಶಯ್ಯೋತ್ಸವವ ನೋಡಿಅಕಳಂಕ ಭಕ್ತಿಯಲಿ ಮನಸಾ ಸ್ತುತಿಸಿಶ್ರೀಕರಾಲಯ ಪ್ರಕಾರ ಮಂಟಪದಲ್ಲಿಭಕುತವತ್ಸಲನ್ನ ನೆನೆದು ಮಲಗಿದರು 19ಬಂಗಾರಬಾಗಿಲು ಅರ್ಧಮಂಟಪವುಪುರಂದರದಾಸಾರ್ಯರುಯೋಗ ನಾರಸಿಂಹನ ಸ್ಥಾನ ಬಲಪಾಶ್ರ್ವಏಕಾಂತ ಮಂಟಪವುಪುರಂದರದಾಸಾರ್ಯರುಶ್ರೀಕರನ ಭಜಿಸುತ್ತಾ ಇರುವರು ಅಲ್ಲಿ 20ಅರ್ಧ ಮಂಟಪ ಹೊರಗೆ ಉತ್ತರ ಪ್ರಾಕಾರದಿಎತ್ತರ ಮಂಟಪದ ಜಗುಲಿಯಲ್ಲೂಆಸ್ಥಾನ ಮಂಟಪಕೆ ಪಶ್ಚಿಮ ಮಂಟಪದಲ್ಲೂಆಸ್ಥಾನ ಶ್ರೇಷ್ಠರು ಕುಳಿತದ್ದು ಉಂಟು 21ಮನುಷ್ಯ ಲೋಕದಿ ಹುಟ್ಟಿ ಮಾನುಷಾನ್ನವನುಂಡುಮಾನುಷಾನ್ನದ ಸೂಕ್ಷ್ಮ ಭಾಗ ಪರಿಣಮಿಸಿಮನಖಿನ್ನನಾದಂತೆ ಇದ್ದ ದಾಸಪ್ಪನಿಗೆಶ್ರೀ ಶ್ರೀನಿವಾಸನು ಬಂದು ತಾ ಒಲಿದ 22ಶ್ರೀನಿಧಿಃ ಶ್ರೀ ಶ್ರೀನಿವಾಸವೇಂಕಟಪತಿಘನದಯದಿ ಸೂಚಿಸಿದ್ದು ತಿಳಕೊಂಡರುಸ್ವಪ್ನದಿ ಭಾಗೀರಥಿಯಪುರಂದರದಾಸಾರ್ಯರಬಿಂದುಮಾಧವ ಅಂಭ್ರಣೀಶನ್ನ ನೋಡಿದರು 23ಭೂವರಾಹವೆಂಕಟರಮಣನ್ನ ಮರುದಿನಸೇವಿಸಿ ಹನುಮಂತನಿಗೆ ನಮಸ್ಕರಿಸಿದೇವಾನುಗ್ರಹದಿ ಐದಿದರು ವಾರಣಾಸಿದೇವ ತಟಿನೀಸ್ನಾನ ಮೂರ್ತೀ ದರ್ಶನವು 24ಜಾಗ್ರತೆ ಅಲ್ಲ ನಿದ್ರೆಯೂ ಅಲ್ಲ ಸಂಧಿಆ ಕಾಲದಲಿ ಆನಂದ ಅನುಭವವುಹೇಗೆಂದರೆ ವಿಠ್ಠಲ ಶ್ರೀನಿವಾಸನುಝಗಿಝಗಿಸಿ ತೋರ್ವನು ವಿಜಯಸಾರಥಿಯು 25ತೃಟಿಮಾತ್ರದಲಿ ಮುಂದೆ ನಿಂತರುಪುರಂದರವಿಟ್ಠಲ ದಾಸರು ಕೃಪೆಯ ಬೀರುತ್ತತಟ್ಟನೇ ಎದ್ದರು ದಾಸಪ್ಪ ಆರ್ಯರುಸಾಷ್ಠಾಂಗ ನಮಿಸಿದರು ಗುರುವರ್ಯರೆಂದು 26ಕರಕೊಂಡು ಹೋದರು ಆಚೆದಡದಲ್ಲಿರುವಕ್ಷೇತ್ರಕ್ಕೆ ಅಲ್ಲಿ ಶ್ರೀಪತಿವ್ಯಾಸನ್ನತೋರಿಸಿದರು ಆ ವ್ಯಾಸ ಮೂರ್ತಿಯಲ್ಲಿಸುಪ್ರಕಾಶಿಪಹರಿರೂಪಗಳ ಕಂಡರು27ವಿಜಯಸಾರಥಿಕೃಷ್ಣ ವಾಶಿಷ್ಠಮಾಧವಅಜಭುಜಗಭೂಷಣಾದಿಗಳಿಂದಸೇವ್ಯರಾಜರಾಜೇಶ್ವರಿ ಶ್ರೀನಿಧಿಯ ಮನದಣಿಯಭಜಿಸಿ ಸ್ತುತಿಸಲು ಯತ್ನಿಸಿದರು ದಾಸಪ್ಪ 28ಸೌದಾಮಿನಿಗಮಿತ ರಂಜಿಸುವ ಜ್ಯೋತಿಯುಬದರೀಶನಿಂ ಪುರಂದರದಾಸರ ದ್ವಾರಬಂದು ನೆಲಸಿತು ದಾಸಪ್ಪನ ಜಿಹ್ವೆಯತುದಿಯಲ್ಲಿ ವಿಜಯಾಖ್ಯ ಸುಶುಭನಾಮ 29ರಾಜೀವಜಾಂಡದೊರೆ ರಾಜೀವಾಲಯಪತಿವಿಜಯವಿಠ್ಠಲ ನಿಮ್ಮ ಹೃದ್‍ರಾಜೀವದಲಿಪ್ರಜ್ವಲಿಸುತಿಹ ಸರ್ವತೋಮುಖನೆಂದುನೈಜವಾತ್ಸಲ್ಯದಿ ಪೇಳಿದರು ಗುರುವು 30ಗುರುಗತುರಗಾಸ್ಯ ವಿಠ್ಯಲವ್ಯಾಸ ತನ್ನ ಹೊರವೊಳುಪ್ರಕಾಶಿಪುದು ಅನುಭವಕೆ ಬಂತುಎರಗಿದರುವಿಜಯದಾಸರು ಪುರಂದರಾರ್ಯರಿಗೆಸರಿ ಏಳು ಎಂದರು ಗುರುವರ್ಯ ಹಿತದಿ 31ಎದ್ದರು ಎಚ್ಚರಿಕೆ ಆಗಿ ವಿಜಯಾರ್ಯರುವೇದ್ಯವಾಯಿತು ಶ್ರೀಯಃಪತಿಯು ಗುರುವುಹಿತದಿ ತಾವೇ ಬಂದು ಅನುಗ್ರಹ ಮಾಡಿದ್ದುಇಂಥ ಭಾಗ್ಯವು ಎಲ್ಲರಿಗೂ ಲಭಿಸುವುದೇ 32ಶ್ರೀಕಾಂತ ಕಪಿಲ ಶ್ರೀ ಶ್ರೀನಿವಾಸನ್ನಹಿಂಕಾರ ಪ್ರತಿಪಾದ್ಯ ಕೃತಿಪತಿ ಪ್ರದ್ಯುಮ್ನಶ್ರೀಕರ ವಿಠ್ಠಲ ವ್ಯಾಸಹಯಮುಖನ್ನ ಸ್ಮರಿಸುತ್ತಗಂಗೆಯ ಸೇರಿದರು ಮಿಂದರು ಮುದದಿ 33ವಿಧಿಪೂರ್ವಕ ಸ್ನಾನ ಅಘ್ರ್ಯಾಧಿಗಳಿತ್ತು ಅಘ್ರ್ಯಾದಿಆ ದೇವತಟನೀಯ ದಡದಲ್ಲಿ ಕುಳಿತುಸದ್ವೈಷ್ಣವಚಿನ್ನಾಲಂಕೃತರು ಜಪಿಸಿದರುಮಧ್ವಸ್ಥ ವಿಜಯವಿಠ್ಠಲಶ್ರೀಪತಿಯ 34ಪದುಮಜನ ಸುತ ಭೃಗುವೆ ಅವನಿಯಲಿ ಅವತರಿಸಿಬಂದಿಹನು ಮಾಧವನು ಒಲಿದಿಹನು ಎಂದುಮಂದಾಕಿನಿವ್ಯಜನಚಾಮರಗಳ್ ಬೀಸುವಂತೆಬಂದು ಪ್ರವಹಿಸಿದಳು ದಾಸರ ಆವರಿಸಿ 35ಜನರೆಲ್ಲ ನೋಡುತಿರೆ ಪ್ರವಾಹವು ಉಕ್ಕಿಪೂರ್ಣ ಆವರಿಸಿತು ವಿಜಯರಾಯರನ್ನಏನು ಅದ್ಭುತ ಇದು ಶಾಂತವಾಗಲು ಕ್ಷಣದಿನೆನೆಯಲಿಲ್ಲ ವಸ್ತ್ರ ಊಧ್ರ್ವ ಪುಂಡ್ರಗಳು 37ಹರಿಆಜೆÕಯಲಿಸುರರುಸಜ್ಜನೋದ್ಧಾರಕ್ಕೂಪ್ರಾರಬ್ಧಕರ್ಮ ಕಳೆಯಲು ಜನಿಪರು ಭುವಿಯೋಳ್ಇರುವುವು ಅಣಿಮಾದಿಗಳು ಶಕ್ತ್ಯಾತ್ಮನಾಗುರುಒಲಿಯೆ ವ್ಯಕ್ತವಾಗುವುವು ಆಗಾಗಾ38ಸುರರುಭೃಗುದಾಸಪ್ಪ ಜಾತಾಪರೋಕ್ಷಿಗೆಪುರಂದರದಾಸ ನಾರದರೊಲಿದ ಮೇಲೆಇರುತ್ತಿದ್ದಅಪರೋಕ್ಷಅಣಿಮಾದಿ ಮಹಿಮೆಯುಸುಪ್ರಕಟವಾದವು ಶ್ರೀಶನ ದಯದಿ 39ವರ್ಣಪ್ರತಿಪಾದ್ಯಹರಿಒಲಿಯೆ ವರ್ಣಂಗಳುಆಮ್ನಾಯನಿಗಮತತಿ ಸತ್‍ತತ್ವಜ್ಞಾನಅನಾಯಸದಿಂದೊದಗಿ ವಿಜಯದಾಸಾರ್ಯರುಅನಿಲಸ್ಥ ಶ್ರೀವರನ್ನ ಸ್ತುತಿಸಿ ಹಾಡಿದರು 40ಜನಗಳು ವಿಜಯದಾಸಾರ್ಯರು ಶ್ರೀಹರಿಯಧ್ಯಾನಿಸಿ ಶ್ರೀಪತಿಯ ರೂಪಕ್ರಿಯೆಗಳನ್ನುಗುಣಗಳನ್ನು ಗಂಗಾದಡದಲ್ಲಿ ಕುಳಿತುಗಾನಮಾಡುವುದನ್ನ ಕೇಳಿದರು ಮುದದಿ 41ಘನಮಹಾತ್ಮರು- ಇವರು ಸಜ್ಜನೋದ್ಧಾರಕರುಶ್ರೀನಿಧಿಯ ಸತ್‍ತತ್ವಜ್ಞಾನ ಪೂರ್ವಕದಿಗಾನಮಾಡಿ ಲೋಕಕ್ಷೇಮಕೆÀ್ಕೂದಗುವರೆಂದುಧನ ದ್ರವ್ಯಕಾಣಿಕೆಇತ್ತರು ಜನರು42ಪೋದಕಡೆ ಎಲ್ಲೆಲ್ಲೂ ಮರ್ಯದೆ ಪೂಜೆಗಳುಸಾಧುಸಜ್ಜನರ ಕೈಯಿಂದ ತಾ ಕೊಂಡುಮಾಧವಮಧ್ವಮುನಿ ಪುರಂದರಾರ್ಯರ ಭಾಗ್ಯಎಂದು ಶ್ರಿ ಕೃಷ್ಣಂದೇ ಸರ್ವವೆಂಬುವರು 43ಭಾರಿ ಬಹು ಬಹುವುಂಟು ವಿಜಯರಾಯರ ಮಹಿಮೆಅರಿಯೆನಾ ಅಲ್ಪಮತಿ ಹೇಗೆ ವರ್ಣಿಸಲಿಹರಿಗೆ ಪ್ರಿಯತರ ಈ ಸುಮಹಾತ್ಮರು ತನಗೆಎರಗಿದವರನ್ನ ಕಾಯ್ವರು ಕೈಬಿಡದೆ 44ವಾರಣಾಸಿರಾಜ ಪೂಜಿಸಿದ ಇವರನ್ನಎರಗಿ ಜನರು ಶಿಷ್ಯ ರಾದರಲ್ಲಲ್ಲಿಊರಿಗೆ ಬರುವಷ್ಟರಲ್ಲೇ ಇವರ ಕೀರ್ತಿಹರಡಿತು ಹರಿದಾಸಜ್ಞಾನಿವರರೆಂದು 45ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 46-ಇತಿಃ ದ್ವಿತಿಯಾಧ್ಯಾಯಃ-ತೃತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಕಾಶಿ ಗಯಾ ಪಿತೃಕಾರ್ಯ ಪೂರೈಸಿ ಬರುವಾಗದೇಶ ದೇಶದಿ ಹರಿಯ ಮಹಿಮೆ ತೋರುತ್ತಾಅಸಚ್ಚಾಸ್ತ್ರ ವಾದಗಳ ಕತ್ತರಿಸಿ ಬಿಸುಡುತ್ತಸುಚ್ಛಾಸ್ತ್ರ ಬೋದಿಸುತ್ತ ಬಂದರು ಮನೆಗೆ 1ಸಕುಟಂಬ ತಿರುಪತಿಗೆ ಪೋಗಿ ಶ್ರೀನಿಧಿಯಭಕುತಿಯಿಂದಲಿ ಸ್ತುತಿಸಿ ಊರಿಗೆ ತಿರುಗಿಶ್ರೀಕರನ ಪ್ರೀತಿಕರ ಶಿಷ್ಯೋದ್ಧಾರಕ್ಕೆಬೇಕಾದ ಯತ್ನಗೈದರು ದಾಸ ಆರ್ಯ 2ಈ ಪುಣ್ಯ ಶ್ಲೋಕರು ಷಷ್ಠ್ಯುಪರಿಸಂಖ್ಯಾಸುಪುಣ್ಯ ಶಿಷ್ಯರಿಗೆ ಬಲುದಯದಿಂದಅಪರೋಕ್ಷಒದಗಲು ಉಪದೇಶವಿತ್ತಿಹರುಅಪವರ್ಗಯೋಗ್ಯರಿಗೆಮಾರ್ಗತೋರಿಹರು3ಮೊದಲು ಗೋಪಾಲ ವೇದವ್ಯಾಸ ಹಯವದನಶ್ರೀದನ ಈ ಮೂರು ಉತ್ಕøಷ್ಠನಾಮಅಂಕಿತವ ನಾಲ್ವರಿಗೆ ವಿಜಯದಾಸಾರ್ಯರುಉತ್ತುಂಗಮಹಿಮರು ಇತ್ತಿಹರು ದಯದಿ 4ಸಾಧುವರ್ಯ ತಮ್ಮನಿಗೆ ಹಯವದನಾಂಕಿತ ನಾಮಉತ್ತನೂರು ಭಾಗಣ್ಣ ರಾಯರ್ಗೆ ಗೋಪಾಲಆದವಾಣಿ ತಿಮ್ಮಣ್ಣರ್ಗೆ ವೇಣುಗೋಪಾಲಆದವಾಣಿಯವರದ್ವಾರಾ ವ್ಯಾಸ ಸುಬ್ಬಣ್ಣರ್ಗೆ 5ಗುರುವರ್ಯ ಗೋಪಾಲದಾಸಾರ್ಯರಚರಣಸರಸಿಜಯುಗ್ಮನಾ ನಂಬಿದೆ ನಿಶ್ಚಯದಿಕಾರುಣ್ಯ ಔದಾರ್ಯ ನಿಧಿಗಳು ಇವರಲ್ಲಿಶರಣಾದೆ ಸಂತತಸ್ಮರಿಸೆ ಪಾಲಿಪರು 6ಗಾಯತ್ರಿಯಲಿ ಕೇಶವಾದಿ ಇಪ್ಪತ್ತನಾಲ್ಕುಹಯಗ್ರೀವರೂಪಗಳು ಆರನ್ನೂ ಸ್ಮರಿಸಿಗಾಯತ್ರಿನಾಮ ಶ್ರೀವೇಂಕಟಕೃಷ್ಣನಿಗೆಪ್ರಿಯಗಾಯತ್ರಿಮಂತ್ರ ಸಿದ್ಧಿಪಡೆದವರು 7ಇಂಥಾ ಮಹಾಭಕ್ತ ಭಾಗಣ್ಣನ ಬಳಿಬಂದು ವಿಜಯಾರ್ಯರು ಇತ್ತರು ದಯದಿಸೌಂದರ್ಯಸಾರ ಗೋಪಾಲವಿಠ್ಠಲ ನಾಮಇಂದಿರಾಪತಿ ಅಖಿಳಪ್ರದನ ಅಂಕಿತವ 8ಆದವಾಣಿಸುಲ್ತಾನನ ಮಂತ್ರಿಯುಸಾಧುಶೀಲನು ತಿಮ್ಮಣ್ಣರಾಯಈತನು ವೀರ ವೈಷ್ಣವಮಾಧ್ವಬ್ರಾಹ್ಮಣನುಭಕ್ತಿಮಾನ್ ಜ್ಞಾನವಾನ್ ವೈರಾಗ್ಯಶಾಲಿ 9ಹಿಂದಿನ ಜನ್ಮದಿ ಆದಿಕೇಶವನನ್ನವಂದಿಸಿ ಸ್ತುತಿಸಿದ ರಾಮಾನುಜೀಯಇಂದುಸದ್ವೈಷ್ಣವಕುಲದಲ್ಲಿ ಹುಟ್ಟಿಹನುಇಂದಿರೇಶನ ನಾಮಾಂಕಿತ ಬೇಡಿದ್ದ ಮೊದಲೇ 10ಮೊದಲೇವೆ ತಾಳೆಂದು ಹೇಳಿ ಈಗ ವಿಜಯಾರ್ಯಇತ್ತರೂ ಶ್ರೀ ವೇಣುಗೋಪಾಲವಿಠ್ಠಲ ಈಉತ್ತಮ ಈ ನಾಮ ಉಪದೇಶ ಮಾಡಿದರುಈ ತಿಮ್ಮಣ್ಣ ರಾಯರಿಗೆ ನಮೋ ನಮೋ ಎಂಬೆ 11ಕಲ್ಲೂರು ಸುಬ್ಬಣ್ಣಾಚಾರ್ಯರು ನ್ಯಾಯಸುಧಾಮಂಗಳ ಅನುವಾದ ಚರಿಸಿ ವಿಜಯಾರ್ಯಅಲ್ಲಿ ಪಾಚಕ ವೇಷದಲಿ ಪೋಗಿ ಮಂಡಿಗೆಗಳಮಾಡಿದರು ಮಧುಸೂದನನ ಪ್ರೀತಿಗೆ12ಸುಬ್ಬಣ್ಣಾಚಾರ್ಯರು ಮಹಾದೊಡ್ಡ ಪಂಡಿತರುಶುಭತಮಸುಧಾಮಂಗಳದ ಅನುವಾದಸಂಭ್ರಮದಿ ಕದಡಿದ್ದ ಬಹು ಬಹು ಮಂದಿಯಸಭೆಯೊಳು ಪ್ರವೇಶಿಸಿದರು ವಿಜಯಾರ್ಯ 13ನೆರೆದಿದ್ದವರಲ್ಲಿ ವಿಜಯರಾಯರ ಮಹಿಮೆಅರಿತಿದ್ದಜನ ನಮ್ರಭಾವದಲಿ ಎದ್ದುಮರ್ಯಾದೆ ಮಾಡಿದರು ಅದನೋಡಿ ಆಚಾರ್ಯಪ್ರಾಕೃತಹಾಡುವವಗೆ ಪೂಜೆಯೇ ಎಂದ14ವ್ಯಾಸಪೀಠದ ಮುಂದೆ ವಿಜಯರಾಯರು ಪೋಗಿವ್ಯಾಸಗೆ ಮಧ್ವಗೆ ಜಯಾರ್ಯಗೆ ನಮಿಸಿಸಂಶಯ ಕಳೆದು ಯಥಾರ್ಥಜ್ಞಾನವನೀವಶ್ರೀಸುಧಾ ಕೇಳುವೆ ಎಂದು ಪೇಳಿದರು 15ಕನ್ನಡ ಕವನಮಾಡುವ ನಿಮಗೆ ಈ ಸುಧಾಘನವಿಷಯಗಳು ತಿಳಿಯಲಿಕೆ ಬೇಕಾದಜ್ಞಾನನಿಮಗೆ ಏನು ಇದೆ ಹೇಳಿ ಎಂದು ಆಚಾರ್ಯತನ್ನ ಪಾಂಡಿತ್ಯದ ಗರ್ವದಿ ಕೇಳಿದನು 16ಸುಬ್ಬಣ್ಣಾಚಾರ್ಯನ ಈ ಮಾತುಕೇಳಿಒಬ್ಬ ಪರಿಚಾರಕನ ಕರೆದು ವಿಜಯಾರ್ಯಅವನಿಗೆ ವಿಧ್ಯಾಭ್ಯಾಸ ಉಂಟೇ ಎನ್ನೆಅಪದ್ಧಅಡದೇ ಅವ ವಿದ್ಯಾಹೀನನೆಂದ17ಸಭ್ಯರು ನೋಡುತಿರೆ ವಿಜಯದಾಸಾರ್ಯರುಕಪಿಲ ಖಪತಿ ಗರುಡಾಸನ ಘರ್ಮಶ್ರೀಪತಿ ಆಜ್ಞಾಸಾರ ವರಾಹನ್ನ ಸ್ಮರಿಸಿದರುಆ ಪರಮದಡ್ಡನ ಶಿರದಿ ಕರವಿಟ್ಟು 18ಕರವಿಡಲು ವಿಜಯರಾಯರ ಜ್ಞಾನಪೀಯೂಷಧಾರೆ ಆ ಪುರುಷನ ಶರೀರದೊಳು ಪೊಕ್ಕುರುಧಿರನಾಳಂಗಳು ತನುನರನಾಡಿ ಶಾಖೆಗಳುತೀವ್ರಸುಪವಿತ್ರವಾದವು ತತ್ಕಾಲ 19ವರ್ಣಾಭಿಮಾನಿಗಳು ಭಾರತೀ ಸಹವಾಯುವರ್ಣಪ್ರತಿಪಾದ್ಯ ಹರಿರಮಾಸಮೇತತನು ಮನವಾಕ್ಕಲ್ಲಿ ಪ್ರಚುರರಾಗಿ ಅವನುಘನತರ ಸುಧಾಪಂಕ್ತಿಗಳ ಒಪ್ಪಿಸಿದನು 20ಅಣುವ್ಯಾಖ್ಯಾನ ಸುಧಾ ನ್ಯಾಯ ರತ್ನಾವಳೀಇನ್ನು ಬಹುಗ್ರಂಥಗಳ ವಾಕ್ಪ್ರವಾಹದಲಿಘನಮಹ ವಿಷಯಗಳಸಂದೇಹಪರಿಹರಿಪಅನುವಾದಮಾಡಿದ ಅದ್ಭುತ ರೀತಿಯಲ್ಲಿ 22ಸುಬ್ಬಣ್ಣಾಚಾರ್ಯರು ದಾಸಾರ್ಯರಲ್ಲಿಉದ್ಭಕ್ತಿಗುರುಭಾವದಿಂದೆದ್ದು ನಿಲ್ಲೆಸೌಭಾಗ್ಯ ಪ್ರದಸುಧಾ ಮಂಗಳವ ಪೂರೈಸುಶುಭೋದಯವು ನಿನಗೆಂದು ಪೇಳಿದರು ದಾಸಾರ್ಯ 23ಮಂಗಳಪ್ರಸಾದವ ಸಭ್ಯರಿಗೆ ಕೊಟ್ಟಮೇಲ್ಕಂಗಳಲಿ ಭಕ್ತಿಸುಖ ಬಾಷ್ಪ ಸುರಿಸುತ್ತಗಂಗಾಜನಕಪ್ರಿಯ ವಿಜಯರಾಯರಪಾದಪಂಕಜದಿ ಶರಣಾದರು ಸುಬ್ಬಣ್ಣಾರ್ಯ 24ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೆ ಶರಣು 25-ಇತಿಃ ತೃತೀಯಾಧ್ಯಾಯಃ-ಚತುರ್ಥ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪರಾಜರು ಸ, ಂಸ್ಥಾನ ಮಂಡಲೇಶ್ವರರೆಲ್ಲವಿಜಯದಾಸಾರ್ಯರಿಗೆ ಎರಗಿ ತಮ್ಮರಾಜಧಾನಿಗೆ ಕರೆದು ಕೃತಕೃತ್ಯರಾದರುವಿಜಯಸಾರಥಿಒಲುಮೆ ಏನೆಂಬೆ ಇವರೊಳ್1ಅಲ್ಲಲ್ಲಿ ಪೋದ ಸ್ಥಳದಲ್ಲಿ ನರಹರಿ ಮಹಿಮೆಎಲ್ಲ ಸಜ್ಜನರಿಗೂ ಕೀರ್ತಿಸಿ ತೋರಿಸಿಕಲಿಕಲ್ಮಷ ಪೀಡಿತ ಜನರ ಕಷ್ಟಗಳಎಲ್ಲವ ಪರಿಹಾರ ಮಾಡಿ ಕಾಯ್ದಿಹರು 2ಹರಿನಾಮಾ ಐನೂರು ಸಾವಿರ ಕೀರ್ತನೆ ಗ್ರಂಥಗಳೊಳುತಾನೇ ಸ್ವತಮಾಡಿದ್ದಲ್ಲದೆ ಮಿಕಿಲಾದ್ದುಇನ್ನೂರೈವತ್ತುನೂರು ವಿಜಯರಾಯರಲಿ ನಿಂತುಪೂರ್ಣ ಮಾಡಿಸಿಹರು ಶ್ರೀ ಪುರಂದರದಾಸಾರ್ಯ 3ಹರಿನಾಮ ಜಿಹ್ವೆಯಲಿ ಭೂತದಯಾ ಮನಸಿನಲ್ಲಿಹರಿಮೂರ್ತಿ ಗುಣರೂಪ ಅಂತಃಕರಣದಲಿಪುರಂದರಾರ್ಯರು ಇವರು ರಚಿಸಲೆ ಬಿಟ್ಟಿದ್ದಭಾರಿ ಸಂಕೀರ್ತನೆಗಳನ್ನ ಹಾಡಿಹರು 4ಪ್ರಿಯತಮ ಶಿಷ್ಯರು ಗೋಪಾಲ ದಾಸರೊಡೆತೋಯಜಾಕ್ಷನ ಸ್ಮರಿಸಿ ನಡಿಯುತಿರುವಾಗಬಾಯಾರಿಕೆ ಪೀಡಿತ ಕತ್ತೇಗೆ ದಯಮಾಡಿತೋಯವನು ಕುಡಿಸಿಹರು ಕಾರುಣ್ಯಶರಧಿ5ಬಹುಕಾಲದ ಹಿಂದೆ ತಾ ಕೇಶವರಾಯನಗೃಹದಲ್ಲಿ ಹುಗ್ಗಿಯ ಉಂಡದ್ದು ನೆನಪಾಗಿಆ ಗೃಹಕ್ಕೆ ಪೋದರು ಗೋಪಾಲ ದಾಸರ ಸಹಹಾಹಾ ಅಲ್ಲಿಸ್ಥಿತಿ ಏನೆಂಬೆ ಆಗ 6ಏಳು ಜನ್ಮದಕರ್ಮಗತಿಸುಳಿಯಲ್ಲಿಸಿಲುಕಿ ಆ ಮನೆಯ ಯುವಕನುಅಸುಬಿಟ್ಟತಲೆ ಸ್ಫೋಟನವಾಗಿ ತಾಕಿ ಬೋದಿಗೆಗೆಅಳುತ್ತಿದ್ದರು ಜನರು ದುಃಖದಲಿ ಮುಳಗಿ 7ಕರುಣಾ ಸಮುದ್ರರು ಭೂತದಯಾ ಪರರುಎರದರು ತಮ್ಮ ಆಯುಷ್ಯದಿ ಮೂರು ವರುಷವರಾಹಭಿಷಕ್ ನರಹರಿಯ ಜಪವನ್ನು ಗೈದುನರಸಿಂಹನ ಸ್ತುತಿಸಿ ಬದಕಿಸಿದರು ಯುವಕನ್ನ 8ಅಳುತ್ತಿದ್ದ ಜನರೆಲ್ಲ ಆನಂದ ಬಾಷ್ಪದಮಳೆ ಸುರಿಸಿ ಬಲು ಕೃತಜÕತೆ ಭಾವದಿಂದಮಾಲೋಲ ಪ್ರಿಯವಿಜಯದಾಸರ ಪದಯುಗಳನಳಿನದಲಿ ನಮಿಸಿದರು ಭಕ್ತಿ ಪೂರ್ವಕದಿ 9ಚೀಕಲ ಪರವಿಯಿಂದಲಿ ನಾಲಕು ಕ್ರೋಶನಗರವು ಮಾನವಿ ಎಂಬುದು ಅಲ್ಲಿಪ್ರಖ್ಯಾತ ಪಂಡಿತನು ಶ್ರೀನಿವಾಸಾಚಾರ್ಯನುಪುಷ್ಕಲ ಶ್ರೀಮಂತ ಬಹು ಶಿಷ್ಯಸೇವ್ಯ10ಸುರಗಂಧರ್ವಾಂಶರು ಬ್ಯಾಗವಟ್ಟೀಯವರುನರಸಿಂಹ ದಾಸರುಅವರಮಗನುಈ ಶ್ರೀನಿವಾಸನು ಕೇಳಿದ್ದ ಮೊದಲೇವೇಹರಿದಾಸವರ್ಯ ವಿಜಯಾರ್ಯರ ಪ್ರಭಾವ 11ಹರಿಭಕ್ತಾಗ್ರಣಿ ಪ್ರಹ್ಲಾದನ ಭ್ರಾತನುಧೀರ ಸಂಹ್ಲಾದನೆ ಈ ಧೀರ ಶ್ರೀನಿವಾಸಭಾರಿ ಸಾಧÀನೆ ಇವಗೆ ಒದಗಿಸ ಬೇಕೆಂದುಹರಿದಾಸವರ್ಯರು ಪೋದರು ಮಾನವಿಗೆ 12ಮಾನವಿಯಲ್ಲಿ ವಿಜಯಾರ್ಯರು ಮುಖಾಂ ಹಾಕಿಜನರಲ್ಲಿ ಹರಿಭಕ್ತಿ ಜ್ಞಾನ ಬೆಳಸುತ್ತದೀನರಿಗೆ ಯೋಗ್ಯ ವಾಂಛಿತವ ಒದಗಿಸುತ್ತಘನಮಹಿಮಹರಿಸೇವೆ ಮಾಡುತ್ತ ಇದ್ದರು13ಶ್ರೀನಿವಾಸಾಚಾರ್ಯನಿಗೆ ಉದ್ಧಾರ ಕಾಲವುಶ್ರೀನಿಧಿಯ ನಿಯಮನದಿ ಬಂದಿಹುದು ಎಂದುಶ್ರೀನಿವಾಸಾಚಾರ್ಯನಲಿ ಪೋಗಿ ವಿಜಯಾರ್ಯರುಬನ್ನಿರಿ ಹರಿಪ್ರಸಾದ ಕೊಳ್ಳಿರಿ ಎಂದರು 14ವಿಜಯದಾಸಾರ್ಯರ ಆಹ್ವಾನ ಲೆಕ್ಕಿಸದೆರಾಜಸದಿ ತಾನು ಪಂಡಿತನೆಂಬ ಗರ್ವದಿವಿಜಯಾರ್ಯರ ಕುರಿತು ಅವಜÕ ಮಾಡಿದನುಬೊಜ್ಜೆಯಲಿ ರೋಗವು ತನ್ನಿಮಿತ್ತ ಬಂತು 15ಸೋತ್ತಮಾಪರಾಧದಿಂ ವ್ಯಾಧಿ ಪೀಡಿತನಾಗಿಸೋತು ತತ್ ಪರಿಹಾರ ಯತ್ನ ಸರ್ವದಲೂಬಂದು ವಿಜಯಾರ್ಯರಲಿ ಶರಣಾಗಿ ಕ್ಷಮಿಸೆನ್ನೆಹಿತದಿಂದ ವಿಜಯಾರ್ಯರು ಕರುಣಿಸಿದರು 16ಗೋಪಾಲ ದಾಸರು ಉದ್ಧರಿಸುವರು ಪೋಗೆಂದುಕೃಪೆಯಿಂದಲಿ ವಿಜಯಾರ್ಯರು ಪೇಳಿ ಶ್ರೀನಿವಾಸಗೋಪಾಲದಾಸರಲಿ ಪೋಗಿ ಶರಣಾಗಲು ದಾಸಾರ್ಯರಲಿಶ್ರೀಪನ್ನ ಸ್ತುತಿಸೆ ಗುರುಗಳು ಒಲಿದರು ಆಗ 17ಗೋಪಾಲವಿಜಯವಿಠ್ಠಲನನ್ನ ವಿಜಯಾರ್ಯಸುಪವಿತ್ರ ಚೀಕಲಪರವಿಯಲಿ ಸ್ತುತಿಸೆಗೋಪಾಲ ದಾಸಾರ್ಯರು ಅರಿತು ಶ್ರೀನಿವಾಸನಿಗೆಉಪದೇಶ ಮಾಡಿದರು ತನ್ನಗುರುಪೇಳ್ದ ರೀತಿ18ಶ್ರೀನಿವಾಸಾಚಾರ್ಯರು ಗೋಪಾಲ ದಾಸಾರ್ಯರ ದಯದಿಪುನರಾರೋಗ್ಯ ಆಯುಷ್ಯವು ಹೊಂದಿಶ್ರೀನಿಧಿ ಭೀಮರತಿ ತೀರಸ್ಥ ವಿಠ್ಠಲನ್ನಸನ್ನಮಿಸಿ ಸಂಸ್ತುತಿಸಿ ಖ್ಯಾತರಾದರು ಜಗನ್ನಾಥ ದಾಸರೆಂದು 19ವಿಜಯನಗರಾದಿ ರಾಜ ಜಮೀನುದಾರಗಳುವಿಜಯರಾಯರನ್ನ ತಮ್ಮ ಸ್ಥಳಕ್ಕೆ ಕರೆತಂದುನಿಜಭಕ್ತಿಯಲಿ ಮರ್ಯಾದೆಗಳ ಮಾಡಿದರುವಿಜಯದಾಸರ ಮಹಿಮೆ ನೇರಲ್ಲಿ ಕಂಡು 20ತಿರುಗಿ ಬರುವಾಗ ಶ್ರೀದಾಸ ಮಹಂತರುಚಕ್ರತೀರ್ಥದಿ ಸತ್ರಯಾಗ ಮಾಡಿದರುಪುರಂದರದಾಸಾರ್ಯರು ಇದ್ದ ಸ್ಥಳ ಈ ಕ್ಷೇತ್ರಹರಿಶಿರಿಗೆ ಹನುಮಗೆ ಶಿವಗೆ ಆನಮಿಪೆ 21ಸತ್ರಯಾಗ ಕಾಲದಲಿ ಒಂದು ದಿನ ರಾತ್ರಿವಿಧವೆ ಓರ್ವಳು ತನ್ನ ಕಜ್ಜಿ ಮಗು ಸಹಿತನದಿಯಲ್ಲಿ ಬೀಳಲು ಯತ್ನಿಸಲು ಅದು ಕಂಡುಇತ್ತು ಅಭಯವ ವಿಜಯಾರ್ಯರು ಕಾಯ್ದರು 22ಭೀಮಪ್ಪನಾಯಕಧನವಂತ ಬ್ರಾಹ್ಮಣನಧರ್ಮಪತ್ನಿಯು ಆಕೆ ಪತಿಯ ಕಳಕೊಂಡ್ಲುತಾಮಸಪ್ರಚುರಮೈದುನ ಬಂದು ಬಹಳ ಕ್ರೂರಹಿಂಸೆ ಕೂಡಲು ನದಿಯೊಳು ಬೀಳೆ ಬಂದಿಹಳು 23ಸಾಧ್ವಿಯೂ ಆಕೆಯೂ ಶಿಶು ಮಹಾಭಾಗವತಎಂದು ಜ್ಞಾನ ದೃಷ್ಟಿಯಲಿ ಅರಿತರು ವಿಜಯಾರ್ಯಎಂಥವರು ಆದರೂ ಆತ್ಮಹತ್ಯೆ ಶಿಶುಹತ್ಯಯತ್ನ ತಡೆದು ರಕ್ಷಿಪುದು ಭೂತದಯವು 24ತಾಯಿಶಿಶು ಈರ್ವರನು ಮಠಕೆ ಕರಕೊಂಡು ಹೋಗಿಭಾರ್ಯೆ ಅರಳಿಯಮ್ಮ ಕೈಲಿ ಒಪ್ಪಿಸಿ ಆಕೆಹಯವದನ ಆಕೆಯ ಮೃತಮಗನ ಪ್ರತಿಯಾಗಿದಯದಿ ಕೊಟ್ಟಿಹ ಶಿಶುವ ಎಂದು ಪೋಷಿಸಿದಳು 25ಔದಾರ್ಯ ಕರುಣದಿ ಶಿಶುವನ್ನು ತಾಯಿಯನ್ನುಆದರಿಸಿ ದಾಸಾರ್ಯೆ ದಂಪತಿಯು ಮಗುವಹಿತದಿ ಮೋಹನನೆಂದು ಹೆಸರಿಟ್ಟು ಆಶಿಸಿಒದಗಿದರು ಇಹಪರಉದ್ಧಾರವಾಗೆ26ಯುಕ್ತ ಕಾಲದಿ ಮುಂಜಿ ಮದುವೆ ಮೋಹ ಮೋಹನನಿಗೆಶ್ರೀಕರನ್ನ ಅನುಗ್ರಹದಿ ಮಾಡಿಸಿ ಹರಿಯುಉತ್ಕøಷ್ಠ ನಾಮಾಂಕಿತ ಮೋಹನ ವಿಠಲ ಎಂದುಕೃಪಾಕರ ದಾಸಾರ್ಯರು ಇತ್ತರು ಮುದದಿ 27ಒಂದು ಸಮಯದಿ ಮೋಹನನಿಗೆ ಅಪಮೃತ್ಯು ಬರಲಿರಲುಶ್ರೀ ದಾಸರಾಯರು ಮೊದಲೇ ಹೇಳಿದರುಶ್ರೀ ಬಿಂದು ಮಾಧವನ್ನು ಸೇವಿಸೆ ಹೋಗಿ ನಾ ಬರುವೆಮೃತನಾದ ದೇಹವ ಕಾಪಾಡು ಹರಿಯ ಸ್ಮರಿಸೆಂದು 28ಅದರಂತೆ ಮೋಹನಗೆ ಅಪಮೃತ್ಯು ಸೋಕಲುಸಾಧ್ವಿಸತಿ ದೇಹವ ಹೊರತಂದು ರಕ್ಷಿಸೆಕದನಗೈದು ಓರ್ವ ಸಾಗಿಸಲು ಯತ್ನಿಸೆಸತಿಯು ವಿಜಯಾರ್ಯರನ್ನು ಸ್ಮರಿಸಿ ಮೊರೆಯಿಟ್ಟಳು 29ಶ್ರಿಬಿಂದುಮಾಧವನ್ನ ಸೇವಿಸಿ ದಾಸಾರ್ಯರುತಾಪೋಗಿ ಧರ್ಮರಾಜನಲಿ ಅರಿಕೆ ಮಾಡಿಕ್ಷಿಪ್ರದಲಿಅಸುತಿರುಗಿ ತÀರಿಸಿ ಬದುಕಿಸಿದರುಆರ್ಭಟದಿ ಬಲುತ್ಕಾರ ಮಾಡಿದವ ಬಿದ್ದ 30ಈ ರೀತಿ ಅಪಮೃತ್ಯು ಪರಿಹರಿಸಿದ್ದನ್ನಕೇಳಿಮೋಹನಭಾರಿ ಕರುಣಾಳು ವಿಜಯಾರ್ಯರ ಸ್ತುತಿಸಿಉತ್ಕøಷ್ಟ ಕೀರ್ತನೆ ಹಾಡಿರುವುದು ಲೋಕಅರಿವುದು ಅದ್ಯಾಪಿ ಹೋಗಳುವರು ಜನರು 31ಶ್ರೀ ವಿಜಯದಾಸರ ಅನುಗ್ರಹದಿ ಮೋಹನಕೋವಿದವರ್ಯನು ಶ್ರುತಿಯುಕ್ತ ಯುತವಾದತತ್ವಬೋಧಕ ಕೀರ್ತನೆಗಳು ಶ್ರೀಹರಿಯಅವತಾರಲೀಲಾನು ವರ್ಣನ ಮಾಡಿಹರು 32ರಾಜೀವಾಸನ ಪಿತ ಪ್ರಸನ್ನ ಶ್ರೀನಿವಾಸ ಶ್ರೀರಾಜೀವಾಲಯ ಪತಿಗೆ ಪ್ರಿಯಕರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣು ಶರಣಾದೆ 33- ಇತಿ ಚತುರ್ಥಾಧ್ಯಾಯ ಸಮಾಪ್ತಿ -ಪಂಚಮ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿವಿನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪವಿಜಯದಾಸಾರ್ಯರು ದೇವ ವೃಂದದವರೆಂದುನಿಜವಾಗಿ ಅರಿವುದಕೆ ಇತಿಹಾಸ ಬಹು ಉಂಟುನಿಜಭಕ್ತರಲ್ಲದೆ ಪಾಮರರು ಸಹ ಅರಿತಸಜ್ಜನರು ಹೊಗಳುವ ಇತಿಹಾಸಕೇಳಿ1ಬಾಲ ವಿಧವೆಯುಕರ್ಮಸುಳಿಯಲ್ಲಿ ಸಿಲುಕಿಬಲು ನೀಚ ವೃತ್ತಿಯವಳಂತೆ ತೋರಿಕಲುಷವಂತಳು ಎಂದು ಬಹಿಷ್ಕøತಳಾದವಳಆಲಯದಿ ವಿಜಯಾರ್ಯ ಕೊಂಡರು ಅವತನವ 2ತಮ್ಮ ಆಹ್ವಾನವ ಲೆಕ್ಕಿಸದೆ ಮೊದಲೇ ಈಆಧಮಳ ಆಹ್ವಾನ ಮನ್ನಣೆÉ ಮಾಡಿಆ ಮನೆಯಲ್ಲಿ ಪೂಜಾನೈವೇದ್ಯ ಮಾಡಿದರೆಂದುಶ್ರೀಮಠದ ಭೂಸುರರು ಕೋಪ ಹೊಂದಿದರು 3ಶ್ರೀವರನು ವಿಧಿವಾಯು ಅಮರ ಶ್ರೇಷ್ಠರ ಸಹಯಾವ ದಾಸಾರ್ಯರಲಿ ಪ್ರಚುರನಾಗಿಹನೋಯಾರನ್ನ ಸ್ಮರಿಸಲು ದುರಿತಹರ ಪುಣ್ಯದವೋಅವರು ಭೋಜನ ಮಾಡುತಿರೆ ನಿಂತಳು ಬಾಲೆ 4ಮಹಾನ್ ದಾಸರಿಗೆ ಆಕೆ ಮಾಡಿಸಿದ ಪೂಜೆಯಿಂದೇಹಜದುರಿತಗಳು ಪರಿಹಾರವಾಗಿಶ್ರೀ ಹರಿಯದಾಸರಿಗೆ ಮನಸಾ ಸನ್ನಮಿಸಿದೇಹೇಂದ್ರಿಯಗಳ ಲಯವ ಚಿಂತಿಸಿದಳು 5ದಾಸಾರ್ಯರು ಭೋಜನವ ಪೂರೈಸಲುಅಸುಆಕೆಗಾತ್ರಬಿಟ್ಟು ಹೊರಟು ಹೋಯಿತುದಾಸವರ್ಯರು ತಾವೇ ಆಕೆಗೆ ಸಂಸ್ಕಾರಶ್ರೀಶಹರಿಪ್ರೀತಿಯಾಗಲಿಕೆ ಮಾಡಿದರು6ದೂಷಿತ ಬಹಿಷ್ಕøತ ಸ್ತ್ರೀ ಮನೆಯಲ್ಲಿ ಉಂಡುದೂಷಣಾರ್ಹ ಕ್ರಿಯಾ ಚರಿಸಿಹರು ಎಂದುದೀಕ್ಷಾ ಪ್ರವರ್ಧಕ ಶ್ರೀ ಮಠಾಧಿಕಾರಿಗಳುಬಹಿಷ್ಕಾರ ಮಾಡಿದರಂತೆ ದಾಸಾರ್ಯರಿಗೆ 7ತಪೋನಿಧಿಗಳುಸೂರಿವರಸ್ವಾಮಿಗಳುಶ್ರೀಪನ್ನ ಪೂಜಿಸಿ ಪ್ರತಿಮೆಯಲ್ಲಿಅಪರೋಕ್ಷಜ್ಞಾನದಿ ಸರ್ವವ ಅರಿತುಶ್ರೀಪ ಪ್ರಿಯ ವಿಜಯಾರ್ಯರನ್ನು ಬರಮಾಡಿದರು 8ಜ್ಞಾನಿವರ್ಯ ದಾಸಾರ್ಯರು ಇದು ಮೊದಲೇ ಅರಿತುತನ್ನ ಶಿಷ್ಯರೊಡೆ ಹೇಳೆ ಆಹ್ವಾನ ಬಂದುತನ್ನವರ ಸಹ ಶ್ರೀ ಮಠಕೆ ಪೋಗಿ ಸ್ವಾಮಿಗಳಅನುಗ್ರಹ ಹೊಂದಿ ಸಂಭಾಷಿಸಿದರು ಮುದದಿ 9ಪ್ರತಿಮೆಯಲಿ ಶ್ರೀಹರಿಯ ಸಾನ್ನಿಧ್ಯ ಲಕ್ಷಣವೇದ್ಯವಾಗುವಿಕೆ ದಾಸಾರ್ಯರು ಒದಗಲಿಕ್ಕೇ ಎಂದುಸುತಪೋನಿಧಿ ಸ್ವಾಮಿಗಳು ಹೇಳಿ ದಾಸಾರ್ಯರುಇಂದಿರೇಶ ಸುಪ್ರಚುರ ವ್ಯಾಪ್ತನೂ ಎಂದರು 10ಪ್ರತಿಮೆಯಲಿ ಹಿಂದಿನ ದಿನಕ್ಕಿಂತ ಆಗಆದಿಯಂತೇವೆಯೇ ಶ್ರೀಯಃಪತಿ ಜ್ವಲಿಸಿಮುದಮನದಿ ಶ್ರೀಗಳು ಪೂಜಾದಿ ಪೂರೈಸಿಕೇಳ್ದರು ದಾಸರನ್ನ ಬಾಲೆಯ ವೃತ್ತಾಂತವ 11ದಾಸವರ್ಯರು ಹೇಳಿದರು ಆ ಬಾಲೆಯುಸುಮನಸವೃಂದದಿ ಓರ್ವಳು ಪೂರ್ವವಸುಧೆಯಲಿ ಪುಟ್ಟುವೆನು ಎನ್ನನುದ್ಧರಿಸಿರಿವಾತ್ಸಲ್ಯದಿ ಎಂದು ಬೇಡಿದ್ದಳೆಂದು 12ತತ್ಕಾಲ ಮುಗಿಯಬೇಕಾದ ಪ್ರಾರಬ್ಧಕರ್ಮಆಕೆಗೆ ಮುಗಿಯುವ ಸಮಯ ವಿಜಯಾರ್ಯಆಕೆ ಮನೆಗೆ ಹೋಗಿ ಸಾಧನ ಸಂಪತ್ತೊದಗಿಆಕೆಗೆ ಗತಿಯ ಕಲ್ಪಿಸಿಹರು ದಯದಿ 13ಪ್ರಾರಬ್ಧ ಕಳೆಯಲಿಕೋ ಶಾಪ ನಿಮಿತ್ತವೋಸುರರುಭುವಿಯಲ್ಲಿ ಪುಟ್ಟಿ ಒಮ್ಮೊಮ್ಮೆ ನಿಷಿದ್ದಕರ್ಮಚರಿಸಿದರೂ ಪಾಪ ಲೇಪವಾಗವುಇತರರಿಗೆ ಲೇಪವುಂಟುಹರಿಪರಾನ್ಮುಖರ್ಗೆ14ಹರಿಗೆ ಪ್ರಿಯಕರ ವಿಜಯರಾಯ ಪ್ರಭಾವತೋರಿಸಿದ ಈವೃತ್ತಾಂತದಿಕ್ಕು ದಿಕ್ಕುಹರಡಿತು ಜನರೆಲ್ಲ ವಿಜಯದಾಸಾರ್ಯರುಸುರರೇವೇ ನರರಲ್ಲೆಂದು ನಿಶ್ಚಯಿಸಿದರು 15ತಿರುಪತಿಯಲ್ಲಿ ಶ್ರೀ ಶ್ರೀನಿವಾಸನ ರಥದಾರಿಯಲ್ಲಿ ನಿಲ್ಲಲು ವಿಜಯದಾಸಾರ್ಯರುಹರಿತತ್ವ ಮಹಿಮೆಯ ಕವನ ರೂಪದಿ ಸ್ತುತಿಸೆಗರುಡ ಗಮನನು ರಥದಿ ಸರಸರನೆ ಬಂದ 16ಮೂರುಬಾರಿಕಾಶಿಗೆ ಹೋದಾಗಲೂ ಗಂಗೆಅರಿತು ಭೃಗುಮುನಿ ಅವತಾರವೆಂದುಹರುಷ ತೋರಿ ಉಕ್ಕಿದಳು ಭೃಗು ವಿಜಯರಾಯರುವರಅತಿಥಿ ಶಿವತಾತ ಪ್ರಿಯರೆಂದು17ವೇದ ವೇದಾಂತ ಪುರಾಣಾರ್ಥ ರಹಸ್ಯಗಳುಸದಾಗಮ ಸರ್ವರ್ಥಗಳ ಸಾರೋದ್ಧಾರವುಈ ದಾಸ ಮಹಂತರ ಗ್ರಂಥ ಸುಳಾದಿಗಳುಓದಿ ಕೇಳ್ವವರಿಗೆ ಇಹಪರಉದ್ಧಾರ18ಇಂದ್ರಾದಿ ಜಗದ್ಗುರು ಸದಾಶಿವನ್ನ ಸೇವಿಸುತ್ತರುದ್ರಾಂತರ್ಯಾಮಿ ನರಹರಿಯ ಅರ್ಚಿಸುತ್ತವಂದಿಸುತ್ತ ಚಿಪ್ಪಗಿರಿ ವಾಸಿಷ್ಠ ವಿಜಯವಿಠ್ಠಲ ಕೃಷ್ಣನ್ನಹೊಂದಿದರು ದಾನವಾಗಿ ಆಕ್ಷೇತ್ರವನ್ನು ಮೂರ್ತಿಯನ್ನು 19ಪಾಲಸಾಗರಪೋಲು ಆ ವಾಪಿ ಸುಪವಿತ್ರತಟದಲ್ಲಿಯೇ ವಾಸಸ್ಥಾನ ಮಾಡಿಕೊಂಡುಅಲ್ಲೇ ಇದ್ದರು ದಾಸಾರ್ಯರು ಪಾಠ ಪ್ರವಚನ ಭಜನೆಮಾಲೋಲ ಸುಪ್ರೀತಿಕರವಾಗಿ ಮಾಡುತ್ತ 20ಮೋದಮಯ ಶ್ರೀ ಶ್ರೀನಿವಾಸನ್ನ ಸೇವಿಸುತಮೇದಿನಿಯಲಿ ಸುಜರನ್ನ ಉದ್ಧರಿಸಿಕಾರ್ತೀಕ ಶುಧ್ಧ ದಶಮಿಯಲ್ಲಿ ಸ್ವಸ್ಥಾನಯೈದಿದರು ಹರಿಪಾದ ಧ್ಯಾನಿಸುತ್ತ ಧೀರ 21ವಿಜಯರಾಯರ ನೆನೆದರೆ ಆಯುಷ್ಯ ಆರೋಗ್ಯಶ್ರೀನಿಜಭಕ್ತಿ ಜ್ಞಾನವುವಿಜಯಎಲ್ಲೆಲ್ಲೂವಿಜಯದಾಸಾಂತಸ್ಥ ಮಧ್ವಾಂತರ್ಗತ ಶ್ರೀಶವಿಜಯಸಾರಥಿ ಶ್ರೀನಿವಾಸನುಈವ22ಧೀರ ಭಕ್ತಾಗ್ರಣಿ ಶ್ರೀಮದ್ ಗುರುವರ್ಯರುಭೂರಿಕರುಣಿಯು ಗೋಪಾಲದಾಸಾರ್ಯಹರಿದಾಸವರ ಹಯವದನ ವಿಠ್ಠಲವಿರಾಗಿ ವೇಣುಗೋಪಾಲ ಜಗನ್ನಾಥದಾಸರು 23ಹರಿದಾಸ ವೃಂದದಿ ಖ್ಯಾತ ಸೂರಿಗಳೆಲ್ಲರೂಗುರುಶ್ರೀಶ ವಿಠ್ಠಲಾಂಕಿತ ಕುಂಠೋಜಿ ಆರ್ಯಶ್ರೀ ರಘುಪತಿ ವಿಠ್ಠಲ ಇಂಥ ಸರ್ವರೂನೂಪರಿಪರಿ ವಿಧದಿ ಸ್ತುತಿಸಿಹರು ವಿಜಯಾರ್ಯರನ್ನ 24ವಿಜಯಾರ್ಯ ರಕ್ಷಿತ ಪೋಷಿತ ಉಪದಿಷ್ಟನಿಜದಾಸವರ್ಯ ಮೋಹನ್ನ ದಾಸಾರ್ಯವಿಜಯದಾಸಾರ್ಯನುಗ್ರಹದಿ ಬಹುಕವನಗಳಭುಜಗಭೂಷಣ ಈಡ್ಯನ್ನ ಸ್ತುತಿಸಿ ರಚಿಸಿಹರು25ಉತ್ತಮಶ್ಲೋಕ ಸ್ತುತಿಶತ ಸಹಕೀರ್ತನೆಗಳ್ಭಕ್ತಿಜ್ಞಾನ ವರ್ಧಿಪುದು ಮಹಾನ್ ಮೋಹನ್ನ ರಚಿಸಿದ್ದುಗ್ರಂಥಗಳುಪಂಡಿತಪಾಮರರಿಗೂ ಸಹ ಸುಬೋಧಕವುಸುಧಾರಸ ಪೋಲು ಹಾಡಿ ರಸಿಕರೇ ಪಠಿಸಿ 26ನಿರ್ಮತ್ಸರ ಸಾತ್ವಿಕನು ಹರಿಭಕ್ತನುವಿಮಲ ಹರಿದಾಸ ಸಾಹಿತ್ಯ ಸೂತ್ರಭಾಷ್ಯಕ್ರಮದಿ ಕಲಿತ ಆನಂದಾಚಾರ್ಯ ಎನ್ನಲಿ ಬಂದುಪ್ರೇಮದಿಂ ಪಠಿಸೆ ನಾಕೇಳಿಸುಖಿಸಿಹೆನು27ಪ್ರಸನ್ನರಾಮ ಶ್ರೀನಿವಾಸಅಖಿಳಸದ್ಗುಣನಿಧಿಯೇದೋಷದೂರನೇ ಗುರಗ ದಯದಿ ಸಲಹೋ ಇವನ್ನದಾಸದೀಕ್ಷೆ ಜ್ಞಾನ ಪ್ರವಚನ ಪಟುತ್ವವೀಯೋಕುಸುಮಭವ ಪಿತ ನಮೋ ಶ್ರೀ ಪ್ರಸನ್ನ ಶ್ರೀನಿವಾಸ 28 ಪ- ಇತಿ ಪಂಚಮೋದ್ಯಾಯ ಸಮಾಪ್ತ-
--------------
ಪ್ರಸನ್ನ ಶ್ರೀನಿವಾಸದಾಸರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು