ಒಟ್ಟು 770 ಕಡೆಗಳಲ್ಲಿ , 82 ದಾಸರು , 598 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಉ. ಲಕ್ಷ್ಮೀದೇವಿ ಅಂಬಾಬಾಯೇ ನಂಬಿದೆ ಬಾ ಜನನೀ ಪ ಕೋಮಲಾಂಗಿಯೇ ಕಾಮಿತದಾಯಕೆಕರುಣಾವಾರಿಧಿಯೇ ತಾಯೇ 1 ಸಾರಸಾಕ್ಷಳೇ ತೋರಿಸು ಹರಿಯನ್ನುಪೋಷಿಸೆನ್ನ ಮನಸು ತಾಯೇ 2 ಇಂದಿರೇಶನಂಕವಿಹಾರಿಣೀಸುಂದರಾಂಗ ಸುಭಗೇ ತಾಯೇ 3
--------------
ಇಂದಿರೇಶರು
ಉಗಾಭೋಗ ಅಡಿಗಾಧಾರವಿಲ್ಲ ಹಿಡಿವುದಕೆ ಕೊಂಬಿಲ್ಲಕಡೆ ಹಾಯಿಸುವರಿಲ್ಲ ಕಷ್ಟಪಟ್ಟೆನಲ್ಲಕಣ್ಣೀರು ತಪ್ಪಲಿಲ್ಲ ಕಾಯಸುಖಪಡಲಿಲ್ಲಉಣಹೋಗಿ ಬಾಯ ಮರೆತಂತಾಯಿತಲ್ಲಬಡತನವು ಬಿಡಲಿಲ್ಲ ಭಂಗಪಟ್ಟೆನಲ್ಲಗರುಡಸರ್ಪನ ಸ್ನೇಹದಂತಾಯಿತಲ್ಲಎನ್ನ ಮನದುಬ್ಬಸವ ಸ್ವಾಮಿ ಶ್ರೀಹರಿಯೆ ಬಲ್ಲಇನ್ನಾರಿಗುಸುರಲೋ ಶ್ರೀಹಯವದನರಾಯ
--------------
ವಾದಿರಾಜ
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉದ್ಧವನು ಯಮುನೆಗೆ ಪೋಗುವಾಗಗದ್ದಲವ ಕೇಳಿದನು ಗೋಪನಾರಿಯರ ಪ ಎದ್ದು ಗೋಪಿಯರೆಲ್ಲ ಮುದ್ದು ಮುಖವನೆ ತೊಳೆದುತಿದ್ದಿ ತಿಲ್ಕವನಿಟ್ಟು ಬಾಲ್ಯದಲ್ಲೆಶ್ರದ್ಧೆಪೂರ್ವಕ ಹರಿಯ ಪದ್ಮಂಗಳಿಗೆ ನಮಿಸಿಉದ್ಧಾರ ಮಾಡೆಂದು ಪ್ರಾರ್ಥಿಸಿದರು 1 ಅಂಗಳಕೆ ಥಳಿಹಾಕಿ ರಂಗವಾಲಿಯನಿಕ್ಕಿಮಂಗಳಾತ್ಮಕ ದೀಪ ಮನೆಯ ಮುಂದತೆಂಗುಬಾಳೆ ಸ್ತತ್ಥ ಫಲಂಗಳ್ಹೊಸ್ತಲಿಕಿಟ್ಟುರಂಗಗರ್ಪಿತವೆಂದು ನುಡಿದಲಾಗ 2 ವಾಲೆ ಸರಪಣಿಯಾ ಕಿವಿಯಲಿಟ್ಟುಮಂದಹಾಶ್ಯದಿ ಮುಖದಿ ಮುಖರೆನಿಟ್ಟು3 ಕಾಲಿಕಾಲ್ಕಡ್ಗ ರುಳಿಯು ಘಾಲು ಪೈಝಣಕಾಲುಂಗ್ರಗಳು ಪಿಲ್ಲೆ ಕಾಲಿನಲ್ಲೆಸಾಲುಗೆಜ್ಜೆಗಳುಳ್ಳ ಮೇಲೆ ಕಾಂಚಿಯನುಟ್ಟುಮುಕ್ತಮಾಲೆಗಳು ಕೊರಳಲ್ಲೆ ಲೋಲಪದಕ 4 ಕಂಕಣವು ಕರದಲ್ಲಿ ವಂಕಿ ತಾಯಿತ ಭುಜದಿಬಿಂಕದಿಂದಲೆ ಮಂಲಿ ಹೆರಳ್ಹಾಕಿಅಂಕೆಯಿಲ್ಲದ ಸರ್ವಲಂಕಾರಗಳನಿಟ್ಟುಪಂಕಜಾಕ್ಷನ ಮನದಿ ಸ್ಮರಿಸಿದ 5 ಲೋಲಾಕ್ಷಿ ಗೋಪಿಯರು ಭಾಳ ವಸ್ತ್ರಗಳಿಟ್ಟುಲೋಲ ಲತೆಯಂತೆ ಬಳುಕಾಡುತಮಾಲೆ ಹೆಗಲ್ಹಾಡುತಿರೆ ಮೇಲೆ ಸ್ವರಗಳನೆತ್ತಿನೀಲವರ್ಣನ ಮಹಿಮಿ ಪಾಡಿದರು 6 ಬಂಗಾರದ ತಬಕಿನಲಿ ಮಂಗಳಾರುತಿಯೆತ್ತಿಶೃಂಗಾರ ಪದಗಳನೆ ಪಾಡುತಲೆರಂಗು ನೀಲದ ರತ್ನದುಂಗುರವು ಬೆರಳಲ್ಲೆರಂಗಗಾರತಿ ಬೆಳಗಿ ಬೇಡಿದರು 7 ಕಂದರ್ಪ ಶರಾದರತಿ 8 ಘಿಲ್ಲು ಘಿಲುಕೆಂದು ಮೈಯ್ಯಲ್ಲಿ ವಸ್ತ್ರದ ಶಬ್ದಪುಲ್ಲಾಕ್ಷಿಯರು ಕಡಿದ ಮಥನ ಶಬ್ದನಲ್ಲೆರ್ಹಾಡುವ ಕಂಠದಲ್ಲೆ ಗಾಯನದ ಶಬ್ದಎಲ್ಲ ಶಬ್ದವು ಸ್ವರ್ಗ 9 ನಿಂತು ನಿಜಕರದಿಂದ ಮಂತಧಾಮವ ಪಿಡಿದುಕಂತುಪಿತ ಕೃಷ್ಣನ್ನ ಪಾಡುತಲೆಕಾಂತೆರೆಲ್ಲರು ಮಸರು ಕಡೆವ ಶಬ್ದವ ಕೇಳಿಭ್ರಾಂತಿಯಲಿ ಉದ್ಧವನು ನಿಂತನಲ್ಲೆ 10 ಅವರ ಭಕುತಿಯ ನೋಡಿ ಅನುದಿನದಿ ಉದ್ಧವನುಅವರ ಪಾದದ ಧೂಳಿ ಸ್ವೀಕರಿಸಿದಅವರರುಹದೊಳಗೆನ್ನ ಆಗಲುದಯವು ಎಂದಅವರೊಳಗೆ ಅವರಂತೆ ಅನುಕರಿಸಿದ 11 ಇಂಥ ಪರಿಯಲಿ ಗೋಪಕಾಂತೆ ಕಾಲಾಪಗಳುನಿಂತು ನೋಡುತ ತನ್ನ ಮೈಯ್ಯ ಮುರಿದಭ್ರಾಂತನಾಗುತಲೆ ಅವರಂತೆ ಮಥನವ ಮಾಡಿಅವರಂತೆ ಕರಗಳ ಮಾಡಿ ನಲಿದು ಕುಣಿವ 12 ಎರಡು ಸಾಲಲಿ ದೀಪ ಕರಗಳಂಬಾರಗಳುತುರವು ತರಿಸುವ ದನಿಯು ಮಥನ ಶಬ್ದಸರಸಿಜಾಕ್ಷಿಯರೆಲ್ಲ ಗಾಯನ ಮಾಡುವ ಶಬ್ದಬೆರಗಾಗಿ ಕೇಳಿದನು ಪರಿಹರುಷದಿ 13 ಮಂದ ಸುಗಂಧಡಗಿತು 14 ಸರಸಿಜಾಕ್ಷಿಯರೆಲ್ಲ ಪರಮಪುರುಷನ ಸ್ಮರಿಸಿಸುರಿಸುತಲಿ ಕಣ್ಣೀರು ಪರವಶದಲೇನೆರಗು ಬೀಳಲು ಹೊರದೆ ಹೆರಳ ಮಾಲೆಯ ಮರೆದುಬರೆದ ಚಿತ್ರಗಳಂತೆ ಪರಿಯಾದರು 15 ವಾರಿಜಾಕ್ಷಿಯರ್ಹರಿಯ ಧ್ಯಾನಮನದಲಿ ಕೃಷ್ಣಸಾರ ಸುಂದರ ಮೂರ್ತಿಯಳೆ ಕಾಣುತಮದ ಜಾನಕನ ಮಾತನಾಡುತ ಮನದಿಪಾರುಗಾಣದೆ ಸುಖದ ವಾರಿಧಿಯೊಳು 16 ಮನೆಯ ಹಂಬಲವಿಲ್ಲ ಮಾವನಂಕೆಯಿಲ್ಲಮೊದಲೆಯಿಲ್ಲ ಅತ್ತಿ ಪತಿಗಳಂಜಿಕೆಮಾರಜನಕನ ಕೂಡ ಮೈಯ್ಯಕೈಯನ ಮುರಿದುಮಾಧವನೆ ಪಾಲಿಸೆಂದೊದರಿದಾರು 17 ಮಂದಜಾಕ್ಷರು ಮಾಳ್ಪ ನಂದಬಾಲನ ಕಥೆಯಆನಂದದಲಿ ಕೇಳಿ ಉದ್ಧವನುಇಂದಿರೇಶನ ಚರಣ ದ್ವಂದ್ವ ಸ್ಮರಿಸುತಮಧುರೆಲ್ಹಿಂದ ಬಂದ್ಹೇಳಿದನು ನಂದಸುತಗೆ 18
--------------
ಇಂದಿರೇಶರು
ಉಪ್ಪವಡಿಸಯ್ಯ ಉಡುಪಿನ ಕೃಷ್ಣ ಚೆಲ್ವಕಂ-ದÀರ್ಪನಪ್ಪನೆ ಕಣ್ದೆರೆ ಪ. ಸರ್ಪನಂಗದಲಿ ರುಕ್ಮಿಣಿ ಸತ್ಯಭಾಮೆಯರಅಪ್ಪಿಕೊಂಡಿಪ್ಪ ಬಲು ಸುಪ್ರಸಿದ್ಧಅಪ್ರತಿಮ ಗುಣಗಣಾಂಬುಧಿ ಕರುಣಾನಿಧಿಯೆಸುಪ್ರೇಮದಿಂದ ನೋಡಾ ದೇವ 1 ದೇಹಿಗಳ ನಿದ್ರೆಯನು ತಿಳುಹಿಸುವರಾರು ನಿ-ರ್ವಾಹಕನು ನೀನು ನಿದ್ರೆಯ ಕೈಕೊಳೆಆಹುತಿಗಳನುವಾದ ಅನಲಮುಖದಲಿ ನಿನಗೆಶ್ರೀಹರಿಯೆ ದುರಿತಾರಿಯೆ ದೇವ 2 ನಿದ್ರೆಯಂ ತೊರೆದು ಸಿದ್ಧಾಸನದಿ ಕುಳ್ಳಿರ್ದುಸಿದ್ಧರೆಲ್ಲರು ತಮ್ಮ ಹೃದಯಕಮಲಸದ್ಮವನು ಬೆಳಗಿ ನಿನ್ನನೆ ಅರಸುತೈದಾರೆಮುದ್ದುಮೊಗವನು ತೋರಿಸಾ ದೇವ 3 ತುಂಬಿ ಕರೆಯಕಳುಹಿದ ನಿನ್ನಮನೆಯ ಬಾಗಿಲೊಳರಸುತ್ತ ದೇವ 4 ಕಮಲಕೊಬ್ಬಿತು ಸೂರ್ಯನತಿ ಪೆರ್ಮೆಯಂ ಪೊತ್ತಕ್ರಮದಿಂದ ನಿನ್ನ ಪೂರ್ವಜಸೋಮನೊಭ್ರಮೆಗೊಂಡವನ ಪರಿವಾರಕಾಯಿತು ಸೋಲುಸುಮುಖಚಂದ್ರನೆ ಬೆಳಗಿಸಾ ದೇವ 5 ಅಮಲಜಲದಲ್ಲಿ ಮಜ್ಜನವ ಮಾಡುವೆನೆಂದುಕ್ರಮದಿಂದ ತೀರ್ಥಗಳು ಕರೆದು ನಿನ್ನ ರಮಣೀಯ ಮೂರುತಿಯ ಮನದಲ್ಲಿ ನಿಲಿಸುವಶ್ರಮವ ಸಾರ್ಥಕ ಮಾಡೊ ದೇವ 6 ಅತಿಶೀತ ಹರುಷದಿಂ ಪುಳಕ ಶೋಭಿತರಾಗಿಪ್ರತಿಕ್ಷಣದಿ ನಿನ್ನನೇ ನೆನೆದು ನೆನೆದುವ್ರತದಿಂದ ಪೇಳುವ ಶ್ರುತಿ ಪುರಾಣದೊಳಿಪ್ಪಸ್ತುತಿಯನಾಲೈಸಿ ಕೇಳಾ ದೇವ 7 ತನುವ ರಂಜಿಸಿ ಶಂಖ ಚಕ್ರೋಧ್ರ್ವಪುಂಡÀ್ರದಿಂಪ್ರಣಮಮಂ ಪೇಳಿ ಮಂತ್ರಿತ ವಾರಿಯಘನ ಮಹಿಮ ನಿನ್ನ ಹಸ್ತದಲಿ ತರ್ಪಣ ಮಾಡಲನುವಾದರಯ್ಯ ಬುಧರು 8 ಎನಲುಪ್ಪವಡಿಸಿ ಶ್ರೀಕೃಷ್ಣ ಹಯವದನ ತಂ-ಪಿನ ನಾಗಭೋಗ ವಿಸ್ತರದಿ ಕುಳಿತುವನಜಸಂಭವಸಹಿತ ವಿಬುಧರೊಡ್ಡೋಲಗದಿಮುನಿಗಳರ್ಚಿಸಿ ಮೆಚ್ಚಿಸೆ ದೇವ9
--------------
ವಾದಿರಾಜ
ಉಯ್ಯಾಲೆ ಉತ್ಸವಗೀತೆ ಜೊ ಜೊ ಜೊ ಜೊ ಶ್ರೀರಂಗನಾಥ ಜೊ ಜೊ ರಂಗನಾಯಕಿರಮಣನೆ ಭೂಮಿಕಾಂತ ಪ. ಮಂಟಪವನು ಶೃಂಗರಿಸಿದರಂದು ಎಂಟುದಿಕ್ಕಿಗೆ ಪುಷ್ಪಗಳಲಂಕರಿಸಿ ವೈ ಕುಂಠವಾಸನ ಉಯ್ಯಾಲೆಮಂಟಪವನ್ನು ಭಂಟರು ಬಂದು ಶೃಂಗಾರ ಮಾಡಿದರು 1 ಆಶ್ವೀಜ ಮಾಸದ ಶುಕ್ಲಪಕ್ಷದಲ್ಲಿ ಆ ತುಲಾ ಮಾಸದ ಆರುದಿವಸದಲ್ಲಿ ವಾರಿಜಮುಖಿಯರ ಒಡಗೊಂಡು ರಂಗ ವೈ ಯ್ಯಾರದಿಂದಲೆ ಬಂದನು ಮಂಟಪಕೆ 2 ಮತ್ತೆ ಮರುದಿನದೊಳಗಚ್ಚುತನಂತ ಕುತ್ತನಿಅಂಗಿ ಕುಲಾವಿ ಧರಿಸಿ ರತ್ನದ ಪಾನುಪಟ್ಟಿಯು ಅರಳೆಲೆ ಕಟ್ಟಿ ಭಕ್ತವತ್ಸಲನಾಡಿದನುಯ್ಯಾಲೆ 3 ಮೂರುದಿವಸದಲಿ ಮುರವೈರಿ ತಾನು ಭಾರಿ ವಜ್ರದ ಮಕರಕಂಠಿಯಾ ಧರಿಸಿ ನೀರಜನೇತ್ರನು ನಿಗಮಗೋಚರನು ವೈ ಯ್ಯಾರದಿಂದಲಿ ಆಡಿದನುಯ್ಯಾಲೆ 4 ನಾಲ್ಕು ದಿವಸದಲಿ ನಂದನಕಂದ ನವ ರತ್ನದ ಮಕರಕಂಠಿಯಧರಿಸಿ ಧರಿಸಿ ನಾಗಶಯನನಾಡಿದನುಯ್ಯಾಲೆ 5 ಐದು ದಿವಸದಲಿ ಅಕ್ರೂರವರದಗೆ ಕರಿ ದಾದ ಕುಲಾವಿ ಕಲ್ಕಿಯ ತುರಾಯಿ ಗಂಡಭೇರುಂಡಪಕ್ಷಿಯ ಪದಕವನಿಟ್ಟು ಪುಂಡರಿಕಾಕ್ಪನಾಡಿದನುಯ್ಯಾಲೆ 6 ಆರು ದಿವಸದಲಿ ಅಂಗಜನಯ್ಯಗೆ ಕೂರೆ ಕುಲಾವಿ ವೈಯಾರದಿಂಧರಿಸಿ ಹಾರ ಮಾಣಿಕ ರತ್ನ ಸರಗಳಳವಡಿಸಿ ನೀರಜನೇತ್ರನಾಡಿದನುಯ್ಯಾಲೆ 7 ಸಪ್ತದಿವಸದಲಿ ರತ್ನ ಮೌಳಿಯ ಧರಿಸಿ ಹಸ್ತದಿ ರತ್ನಹಾರ ಗಂಧವಿರಿಸಿ ಅರ್ತಿಯಿಂದಲೆ ತನ್ನ ಮಿತ್ರರು ಸಹಿತಲೆ ಬತ್ತವಳಿಸಿ ಬಂದ ಭಕ್ತವತ್ಸಲನು 8 ಓರೆಗೊಂಡೆಯ ವೈಯಾರದಿಂ ಧರಿಸಿ ನಾರಿಯರೆಡಬಲದಲಿ ಕುಳ್ಳಿರಿಸಿ ವಾರಿಜನೇತ್ರನು ನಡುವೆ ಕುಳ್ಳಿರಲು ವಾರಾಂಗನೆಯರೆಲ್ಲ ಪಾಡುತಿರಲು 9 ಅಷ್ಟಮ ದಿವಸದಿ ಅರ್ತಿಯಿಂದಲೆ ಕೃಷ್ಣಮೂರುತಿಗೆ ರಾಜಮುಡಿಯನು ಧರಿಸಿ ಹಿಂದಿನ ತೋಳಿಗೆ ಬಂದಿ ತಾಯಿತನಿಟ್ಟು ಇಂದಿರೆ ರಮಣನಾಡಿದನುಯ್ಯಾಲೆ 10 ಎಡಬಲದಲಿ ಭಕ್ತರು ನಿಂತಿರಲು ಪಿಡಿದು ಚಾಮರ ವ್ಯಜನವ ಬೀಸುತಿರಲು ಬೆಡಗಿನಿಮ್ಮ[ಡಕೆ]ಲೆ ಕರ್ಪೂರದ ಗುಳಿಗೆಯ ಎ ನ್ನೊಡೆಯಗೆ ಭಕ್ತರು ಪಿಡಿದು ನಿಂದಿರಲು 11 ದಾಸರಿಸಂದವು ಧಗಧಗನುರಿಯೆ ಸಹ ಸ್ರ ಸೂರ್ಯನಂತೆ ಪದಕಗಳೊಳೆಯೆ ಲೇಸಾದ ರತ್ನದ ಪಾದುಕೆಯನು ಧರಿಸಿ ವಾಸುದೇವನು ಆಡಿದನುಯ್ಯಾಲೆ 12 ಇಂದಿರೆ ರಮಣ ಒಂಭತ್ತು ದಿನದೊಳು ಚಂದ್ರ ಪುಷ್ಕರಣೀಲಿ ತೀರ್ಥವನ್ನಿತ್ತು ಬಂದು ಮಜ್ಜನವನ್ನು ಮಾಡಿ ವೆಂಕಟರಂಗ ಇಂದಿರೆಸಹಿತಲೆ ನಿಂದ ಹರುಷದಲಿ 13
--------------
ಯದುಗಿರಿಯಮ್ಮ
ಎಂತು ಪೊಗಳಲಳವೇ ದ್ವಾರಾವತಿಯ ದೊರೆಯನ್ನು ಕಂತುಪಿತ ಶ್ರೀಕೃಷ್ಣ ಮೂರುತಿಯಾ ಪ. ಅಂತರಂಗದಲಿ ನಿಂತು ಪೊರೆಯುವ ಏಕಾಂತ ಮೂರುತಿಯ ಕರುಣಾನಿಧಿಯಾ ಅ.ಪ. ಆಲದೆಲೆಯ ಮೇಲೆ ಮಲಗಿದ ಸಿಂಧು ನಲಿಯುತ ಕನಕನ ಕಿಂಡಿಯಲಿ ನಿಂದು ಒಲಿದು ವರಗಳನೀವ ಗುಣಸಿಂಧು 1 ಕಂಠದಲಿ ಮುತ್ತಿನಹಾರ ವಜ್ರದಂಗಿಯ ಅಲಂಕಾರ ಕಂಟೀಪದಕ ವಿಸ್ತಾರ ಕರದಲಿ ವಜ್ರದುಂಗೂರ ಸೊಂಟಪಟ್ಟಿಯ ಕಟ್ಟಿದಾ ಚಂದ ನಾಭೀ ಕಮಲದಾನಂದ 2 ಕಡೆಕಣ್ಣು ಕಂಗಳಾ ನೋಟ ಕಸ್ತೂರಿ ಲಲಾಟ ಕುಡಿಹುಬ್ಬುಗಳ ನೀಟಾ ವಜ್ರಮಾಣಿಕ್ಯದ ಕಿರೀಟ ಪಿಡಿದಿರುವ ಕಡಗೋಲು ಕರದಿ ರುಕ್ಮಿಣೀಶ ವಿಠಲ 3
--------------
ಗುಂಡಮ್ಮ
ಎಂಥಾದಯವಂತನೋ ಸಂತಾರನಾಥನೋ ಪ ಕಂತೂ ಜನಕಾನ ಪ್ರಿಯ್ಯಾನೋ ಆ - ನಂತಾ ನಂತಾ ಮಹಿಮನೋ ಅ.ಪ ರಮ್ಯಾ ಗುಣಾ ಪೂರ್ಣನೋ - ಆ - ಗಮ್ಯಾ ಸಚ್ಚರಿತಾನೋ ನಮ್ಯಾನತರಾ ಪೊರೆವಾನೋ - ಈತ ನಮ್ಯಲ್ಲಾರ ಸಲಹೋನೋ 1 ಪ್ರಾಣಾವೇಶಾಯುತನೋ - ಜಗ - ತ್ರಾಣಾ ತಾನಾಗಿಹನೋ ಕ್ಷ್ಯೋಣೀಯೋಳ್ವಿಖÁ್ಯತಾನೋ - ಎನ್ನ ಪ್ರಾಣಾUಳಿಗೆ ನಾಥನೋ 2 ಕರುಣಾಶಾಲಿ ಎನಿಪಾನೋ - ತನ್ನ ಚರಣಾ ಸೇವಾ ನೀಡುವನೋ ಶರಣಾಬ್ಜ - ತರಣೀ ಸÀಮನೋ - ಅಂತಃ ಕರಣಾದಲ್ಲಿರುವಾನೋ 3 ಜನನೀ ಜನಕಾರೆನಿಪನೋ - ಸಕಲ ಜನರೀಗೆ ಸಮ್ಮತನೋ ಜನುಮಾ ಜನುಮದಲೀತನೋ - ನಿಶ್ಚಯ ಎನಗೆ ತಾತನೋ 4 ಭೂತಾಳದೊಳು ವಿಖ್ಯಾತನೋ ನಿಜ - ದಾತಾ ಜನರಿಗೆ ಪ್ರೀತನೋ ನೀತಾ ಗುರು ಜಗನ್ನಾಥಾ ವಿಠಲ - ಪ್ರೀತಿಯ ತಾಪೊಂದಿಹನೋ 5
--------------
ಗುರುಜಗನ್ನಾಥದಾಸರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಲೆ ಎಲೆ ಎಲೆ ಥೂ ಪರದೇಸಿ ನೀ ಸುಳ್ಳೆ ಸುಳ್ಳೆ ಮಾಡಬೇಡ ಚೌಕಾಸಿ ಪ ತಿಳಕೊಂಡು ನೋಡು ನೀನು ಸುಧಾರಿಸಿ ಬಲವಾಗಿ ಬರದೇನು ಹಿಂಬಾಲಿಸಿ ಅ.ಪ ಎಷ್ಟು ದುಡಿದಿ ಸತಿಸುತರಿಗಾಗಿ ಗಂಟು ಕಟ್ಟಿಕಟ್ಹ್ಹೂಳಿಟ್ಟಿ ಇವರಿಗಾಗಿ ಅಷ್ಟು ಬಿಟ್ಟು ನಡೀತಿದ್ದಿ ಹಾಳಾಗಿ ನಿನ್ನ ಇಟ್ಟು ಬಂದು ಉಣುತಾರೋ ಹೋಳಿಗಿ 1 ಕಣ್ಣು ಮುಚ್ಚ್ಯಾಟವನಾಡುತಿದ್ದಿ ನೀ ಬಣ್ಣಗೆಟ್ಟು ಖರೆಯೆನುತಿದ್ದಿ ಸುಣ್ಣದ್ಹರಳ್ಹೊತ್ತ ಕೋಣ ಹೋಗಿ ಭರದಿ ಕಂಡು ತಣ್ಣೀರಿನೊಳು ಬಿದ್ದು ಸತ್ತ ಗಾದಿ2 ಘಟ ಇದು ಪುಸಿಯು ಬರಿದೆ ಗಾಳಿಯ ಮಟ್ಟ ವಸುಧೇಯೊಳಧಿಕೆಂದು ತೊಡು ನಿಷ್ಠೆ ನಮ್ಮ ಅಸಮ ಶ್ರೀರಾಮನ ಪಾದ್ಹಿಡಿ ಗಟ್ಟಿ 3
--------------
ರಾಮದಾಸರು
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏತಕೆ ಮರುಳಾದೆಯೋ ಆ ಹೆಣ್ಣಿನಿ-ನ್ನೇತಕೆ ಭ್ರಮಿಸಿದೆಯೋಜಾತಿನಾಯಕಿಯರೊಳ್ಕತೆಯೆನುತಲಿ ಬಿ-ಟ್ಟ ತರುಣೀ ಸುಮ್ಮನೇತಕೆ ಮನಸೋತಿನ್ ಏತಕೆ ಪ ರೂಪಿನೊಳಗೆ ಚಂದವೆ ಕಾಮಶಾಸ್ತ್ರ ಕ-ಲಾಪ ಬಲ್ಲವಳೇತಾ ಪತಿವ್ರತೆ ಪರರೆಲ್ಲಾ ಜಾರೆಯರೆನು-ತೀಪತಿ ಬೊಗಳುವ ಪಾಪಿ ಕುರೂಪನೀಂ 1 ಬಣಗು ಭಿಕಾರಿ ನೀಂ 2 ಬರಲಿದಿರೇಳುವಳೆ ಪದವ ತೊಳೆದುಸೆರಗಿನಿಂದೊರಸುವಳೇತರುಣಿಯರುಗಳ ಮನಸ ಕಂಡವರುಂಟೆದುರುಳೆಯೆಂಬುದನೆಲ್ಲಾ ರಾಮೇಶ ಒಲ್ಲ 3
--------------
ಕೆಳದಿ ವೆಂಕಣ್ಣ ಕವಿ
ಏನುಮಾಡಿದಿ ಬಂದು ಈ ನರದೇಹದಿ | ಜ್ಞಾನ ಸಾಧನ ಹೇಳು ಪ ಭವ | ಕಾನನವಿಡಿದೆಲ್ಲೋ ಅ.ಪ ಮಾನವ ಜನುಮದಿ | ನಿನ್ನ ತಂದನಲ್ಲೋ ಪ್ರಾಣೀ | ಪನ್ನಗಶಯನನ ಘನ್ನ ವಿಶ್ವಾಸದ | ಲಿನ್ನು ವಿರಹಿತಾದೆಲ್ಲೋ ಪ್ರಾಣಿ 1 ಕಂಡಪಥಕ ಹರಿದಂಡಲೆಯದೆನೆಲೆ | ಗೊಂಡವರೊಳು ಕೂಡೋ ಪ್ರಾಣಿ | ಖಂಡಿಸಿ ಸಂಶಯ ಪುಂಡರೀಕಾಕ್ಷನ | ಕೊಂಡಾಡುತ ಬಾಳೋ ಪ್ರಾಣಿ 2 ಹಿಂದಿನ ಮರವಿಗೆ ಇಂದಿಗೆ ನೀರೆರಿ | ಮುಂದ ಸ್ವಹಿತ ನೋಡೋ ಪ್ರಾಣಿ | ತಂದೆ ಮಹಿಪತಿ ನಂದನ ಪ್ರಭುದಯ | ದಿಂದ ಸಾರ್ಥಕ ಮಾಡೋ ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು