ಒಟ್ಟು 1005 ಕಡೆಗಳಲ್ಲಿ , 96 ದಾಸರು , 782 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವನೇ ನಿಜಯೋಗಿ | ವಿರಾಗಿ | ಭೋಗಿ 1 ದಾವನ ನೋಟದಲಿ | ಸಮ ವಿಷಮಾ | ಭಾವನೆಗಾಯಿತು ಸೀಮಾ 2 ಮಾಯಾ ಕಲ್ಪಿತದಾ | ಜಗಮರೆತಾ | ನ್ಯಾಯದಿ ಚಿದ್ಘನವರಿತಾ 3 ಮಂದಗೆಡನು ಚರಸೀ | ತಾನಾಗಿ | ಬಂದದನುಂಬನು ತ್ಯಾಗಿ 4 ಬಲ್ಲವಿಕಿಲಿ ಬಿಗಿಯಾ | ದಾವನು | ಎಲ್ಲರಿಗ್ಯಾಗಿಹ ಹರಿಪ್ರಿಯನು5 ಮಹಿಪತಿ ಸುತ ಪ್ರಿಯನಾ | ತಿಳಿವಿಕೆಯಾ | ಸೋಹ್ಯವ ತಿಳಿದನು ನೆಲಿಯಾ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1 ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2 ಭೃತ್ಯ ಅವ ಕ್ರೂರ ಕೃತ್ಯ 3 ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4 ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5
--------------
ಕನಕದಾಸ
ಅಳಿವ ಬಾಳ ನಂಬುತಲೀಗ ತಿಳಿ ತಿಳಿಯೊ ಧೀರನಾಗಿ ಪರಾಶಾಂತಿಯ ಬೇಗ ಪರಾಶಾಂತಿಯಬೇಗ ಪ ದೊರಕುವದೆ ಶಾಂತಿ ಜೀವನೆ ಹೊರಹೊರಗೆ ನೋಡಲು ಅರಿ ನಿನ್ನ ಹೃದಯದೋಳ್ ಸಲೆನಾಸಿಪುದು ತಿಳಿಯಲು ಮೂಲಸ್ವರೂಪ ನಿನ್ನ 1 ಈ ದೇಹ ನಾನು ಎಂಬ ಭ್ರಾಂತಿ ಬೇಗ ತ್ಯಜಿಸುತ ಬಾಧಿಸುತ ಬುದ್ಧಿಯನ್ನು ಬೇರೆಯಾಗಿ ತಿಳಿಯುತ ಬಾಧಾರಹಿತ ನಾ ವಾದ ಪದವೆ ನಾನಿಹೆನೆನುತ 2 ಈ ನಿರ್ವಿಕಲ್ಪವಾದ ಸ್ಥಿತಿಯೇ ತಾನಿಹೆನೆಂದು ಅನುಭವದಿ ತಿಳಿದುಕೊಳ್ಳು ಪರಾಶಾಂತಿಯದೆಂದು ನೀನೇ ಪ್ರಶಾಂತರೂಪನಿರಲು ಶೋಕಿಸಬೇಡ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಆಡಣ್ಣ ನೀನಾಡಣ್ಣ ಅನುಭವದಾಟ ಆಡಣ್ಣ ಪ ರೂಢಿಯೋಳ್ಹರಿಯ ಗಾಢಮಹಿಮೆ ಕೊಂಡಾಡುವರೊಡನಾಟ ಅ.ಪ ಅಳುವರ ಕಂಡರೆ ಅತ್ತಂತೆ ಕಾಣೋ ನಗುವರ ಕಂಡರೆ ನಕ್ಕಂತೆ ಕಾಣೋ ಅಳುವ ನಗುವರಲಿ ಸಿಲುಕಿ ಸಿಲುಕದೆ ನಿ ನ್ನೊಳಗೆ ಮಾಧವನ ತಿಳಿದು ಆನಂದದಿ 1 ಅವರನು ಕಂಡರೆ ಅವರಂತೆ ಇವರನು ಕಂಡರೆ ಇವರಂತೆ ಅವರಿವರಿಗೊಂದೆಸವನೆತೋರಿ ಸಿರಿ ಪಾದ ಮನಭವನದಿಟ್ಟ್ಹಿಗ್ಗುತ 2 ವಾಸನೆ ಪ್ರಥಮ ನಾಶನ ಮಾಡೊ ದಾಸರ ಕಂಡರೆ ಸೇವೆಯ ಮಾಡೋ ಆಶಪಾಶ ನೀಗಿ ಶ್ರೀಶ ಶ್ರೀರಾಮನ ದಾಸನಾಗಿ ನಿಜ ಮುಕ್ತಿಯ ಕೂಡೊ 3
--------------
ರಾಮದಾಸರು
ಆತ್ಮನಿವೇದನಾ ಸ್ತುತಿಗಳು ಅಗಲಿಸದಿರು ಎನ್ನನು ನಿನ್ನ ಬಿಟ್ಟಗಲಿಸದಿರು ಎನ್ನನು ಪ ಅಗಣಿತ ನಿಗಮಗೋಚರ ನಿನ್ನ ಪಾದವ ಬಿಟ್ಟು ಅ.ಪ ವ್ಯಾಕುಲವನು ಬಿಡಿಸಿ ಅನೇಕ ಸೇವೆಗಳಿತ್ತು ಲೋಕನಾಯಕ ಎನ್ನ ಸಾಕಿಸಲಹಿಕೊ 1 ನಿತ್ಯ ಸಂಸಾರವನು ರಂಗಯ್ಯ ನಾ ಸತ್ಯವೆಂದು ತಿಳಿದು ಸತ್ಯಮೂರುತಿ ನಿಮ್ಮ ಪಾದಪದ್ಮದ ಭಕ್ತಿ ಹತ್ತದೆ ಈ ಮನಸು ವ್ಯರ್ಥವಾಯಿತು ದೇವ 2 ತಂದೆತಾಯಿಯು ನೀನೆ ರಂಗಯ್ಯ ಬಂಧುಬಳಗವು ನೀನೆ ಆ ನಂದದಿಂದಲೆ ರಕ್ಷಿಪ ಜಗತ್ಪತಿ ನೀನೇ ಬಂಧನವನು ಬಿಡಿಸಿ ಮುಕ್ತಾನಂದವ ತೋರಿಸು 3 ವಾಸವ ಮಾಡಿಸಿಲ್ಲಿ ರಂಗಯ್ಯ ಘಾಸಿಯ ಪಡಿಸದೆ ಅನಾ ಯಾಸದ ಮರಣವನಿತ್ತು ಎನಗೆ ವಸುದೇವನೆ ನಿಮ್ಮ ಪಾದವಾಸವ ಮಾಡಿಸು 4 ನಿಂದೆನ್ನ ಹೃದಯದೆ ವಾಸಮಾಡಿ ಆ ನಂದದಿಂದಲೆ ರಕ್ಷಿಸು ವೆಂಕಟರಂಗ 5
--------------
ಯದುಗಿರಿಯಮ್ಮ
ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆಯ ಹಾಡುಗಳು ಡಂಭಕದ ಭಕುತಿಯನು ಬಿಡು ಕಂಡ್ಯ ಮನವೆ ಪ ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕು ಅ.ಪ. ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆಅಹಿಕ ಫಲವಲ್ಲದೆ ಮೋಕ್ಷವುಂಟೆ ?ವಿಹಿತಾ ವಿಹಿತವ ತಿಳಿದು ಸತ್ಕರ್ಮ ಕಿಂಚಿತು ಮಾಡೆದಹಿಸುವುದು ಅಘರಾಶಿ ಅಹಿಶಾಯಿ ಒಲಿವ 1 ವರ ವೈಷ್ಣವರು ಬಂದು ನಿಲಲು ವಂದಿಸದಲೆಹರಿ ಪೂಜೆ ಮಾಳ್ಪೆನೆಂದು ಕುಳಿತುಕೊಂಬೆಅರಿಯದ ಊರೊಳಗೆ ಅಗಸರ ಮಾಳಿಯೇಹಿರಿಯ ಮುತ್ತೈದೆಯು ಎಂದು ಕರೆಸುವಂತೆ 2 ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತುತಪಿಸುವೆ ಒಳಗೆ ನೀ ಧನದಾಸೆಯಿಂದೆಕುಪಿತ ಬುದ್ಧಿಯ ಬಿಟ್ಟು ಮೋಹನ್ನ ವಿಠ್ಠಲನಗುಪಿತ ಮಾರ್ಗದಿ ಭಜಿಸಿ ಸುಪಥವನುಸರಿಸೆ 3
--------------
ಮೋಹನದಾಸರು
ಆತ್ಮಶೋಧನೆ ಅನಂತಾನಂತ ಪಾಪ ಮಾಡುವೆ ನಾನು ಪ ಅನಂತದಯಾನಿಧೆ ನೀನೊ ಹಯವದನ ಅ.ಪ ದಾರು ಎನ್ನ ಪಾತಕಕ್ಕೆ ಸರಿಗಾಣಿಸೆನೆಂದರೆ ಪಾಪ ಕ್ಷೋಣಿ ಪರಿಮಾಣುಗಳಿಗೆ 1 ಪೇಳು ಪಾಪವೆಂದಲೆನಲು ಪೇಳಲಿಕ್ಕೆ ಬಲುಲಜ್ಜೆ ಗಳು ಅಂಡಲಿವುತಿದೆ ತಿಳಿದಾತ ನೀನಲ್ಲವೆ 2 ಎನಗೊಂದು ಉಪಾಯವ ಅನಾಯಾಸ ಮಾಡುವಂಥ ನಿನ್ನ ನಾಮಸುಧೆಯನ್ನು ಎನಗೀಯೊ ಮುದದಿಂದ3 ಕಾಲ ಸ್ವಾಮಿ ನೀನು ದಾಸನು ಆಸು ಕಾಲದವನು ವಾಸುದೇವವಿಠಲನೆ ನೀ ಸಡಲ ಬಿಡುವರೇನೊ4
--------------
ವ್ಯಾಸತತ್ವಜ್ಞದಾಸರು
ಆದಿವರಾಹನ ಚೆಲುವಪಾದವ ಕಾಣದೆ ಕಣ್ಣುವೇದನೆಯು ಆಗಿ ಬಲು ಬಾಧಿಸುತ್ತಲಿದೆಯೆನ್ನಈ ಧರೆಯೊಳಗೆ ಶುಕ್ಲನದಿಗೆ ದಕ್ಷಿಣದಲ್ಲಿದ್ದ ಮೇ-ಣ್ ದಾಡೆ ಅತ್ತಿತ್ತಂದ ಪ. ಅಷ್ಟಾ ಸ್ವಯಂ ವ್ಯಕ್ತ ಶ್ರೀಮುಷ್ಣಅಷ್ಟಾಕ್ಷರ ಮಂತ್ರವನ್ನು ಇಷ್ಟುಮಾತ್ರ ತಿಳಿದವರೆಷ್ಟು ಪುಣ್ಯ ಮಾಡಿದಾರೊಸೃಷ್ಟಿಯೊಳಗೆ ಇವರು ಶ್ರೇಷ್ಠರೆಂದು ಅರಿತರೆಕಷ್ಟವು ಬಾರದು ಎಂದೆಂದುಅಷ್ಟದಾರಿದ್ರ್ಯ ಹೋಹುದು ಅಷ್ಟೈಶ್ವರ್ಯವು ಬಾಹುದುಇಷ್ಟು ಮಾತ್ರವಲ್ಲ ಕೇಳೊ ಅಷ್ಟಪುತ್ರರು ಆಹೊರು ದೃಷ್ಟಿಬಾರದಂತೆ ಮನದಿಷ್ಟ್ಟಾರ್ಥವ ಕೊಟ್ಟು ಕಾವಅಷ್ಟದಿಕ್ಕಿನೊಡೆಯನೊಬ್ಬ 1 ವರಾಹ ಅಂಬುಜವಲ್ಲಿ ಚೆಲ್ಲಿತ್ತಾವನದಲ್ಲಿ ಇದ್ದ್ದಾದಿವರಾಹ 3 ಮಂಡೆ ಪೂ ಬಾಡದಿಂದೆನ್ನುಪುಂಡರೀಕಾಕ್ಷ ತಾ ಸವಿದುಂಡು ಮಿಕ್ಕಪ್ರಸಾದವನಾ ಪ್ರ-ಚಂಡ ಹನುಮಂತಗೆ ಕೊಟ್ಟ 4 ಭಾರವ ಮುಗಿಪೋವ್ಯಾಳೆ ಗರುಡನ ಕಂಡು ಈಗಗುರುಮಂತ್ರ ಉಪದೇಶ ಶ್ರೀ-ಹರಿಸ್ಮರಣೆಗಳಿಂದ ನರಕಬಾಧೆÉಗಳ ಇಲ್ಲದಂತೆ ಮಾಡಿ-ದರು ಶ್ರೀಹರಿಯ ವಾಲಗದಿಂದಲಿತಿರುಪತಿ ಸುತ್ತ ಶೇಷಗಿರಿಯ ವಾಸದಲ್ಲಿಪ್ಪವರಾಹ ವೆಂಕಟೇಶನಚರಣಕಮಲವನ್ನು ಹರುಷದಿಂದಲಿ ಕಂಡುಪರಮಸುಖವನಿತ್ತ ಹಯವದನನ ನಂಬಿರೊ 5
--------------
ವಾದಿರಾಜ
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಆನಂದನನಂದನೊಲಿಯೆ ಏನಂದದ್ದೆ ವೇದ ವೃಂದಾ ಪ 'ಅ'ಮೊದಲು 'ಕ'್ಷ ಕಾರಾಂತ ಈ ಮಹಾವರ್ಣಗಳೆಲ್ಲ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ 1 ಪೋಪದು ಬರುತಿಪ್ಪುದು ಕೋಪಶಾಣಿ ಮಾಡುವುದು ರೂಪ ಲಾವಣ್ಯವು ಹರಿವ್ಯಾಪಾರವೆಂದವರಿಗೆ 2 ಪಾವಕ ವಾಯು ತರು ಫಲಪುಷ್ಪ ಬಳ್ಳಿಲಿ ಹರಿ ಒಳಗೆ ವ್ಯಾಪ್ತನೆಂದವಗೆ 3 ತಾರೊ ಬಾರೊ ಬೀರೊ ಸಾರೊ ಮಾರೊ ಕೋರೊ ಹಾರೊ ಹೋರೊ ಸೇರೊ ಕೋರೊದೆಂಬ ದಿಶಾಪ್ರೇರಣೆ ಎಂದವರಿಗೆ 4 ಮಧ್ವಶಾಸ್ತ್ರ ಪ್ರವಚನ ಮುದ್ದುಕೃಷ್ಣನ ದರುಶನ ಸಿದ್ಧ ವಿಜಯವಿಠ್ಠಲನ ಪೊಂದಿ ಕೊಂಡಾಡುವವರಿಗೆ 5
--------------
ವಿಜಯದಾಸ
ಆನಂದಮಯನಾದೆ ನಾನು ದಿವ್ಯ ಜ್ಞಾನಾಮೃತವನುಂಡು ಪೇಳಲಿನ್ನೇನು ಪ ಶರೀರ ಭ್ರಾಂತಿಗಳನೆಲ್ಲ ಕಳೆದು ಕರ್ಮ ದುರಿತ ಸಂಸಾರ ಆಶಾಪಾಶವಳಿದು ನರನೊಳಗೆ ನರನಾಗಿ ಸುಳಿದು ಸರ್ವ ಪರಿಪೂರ್ಣ ಭರಿತ ತಾನೆಂಬುದು ತಿಳಿದು 1 ಗುರುಕಟಾಕ್ಷದ ನೆಲೆ ನೋಡಿ ತಿರುಗಿ ಬರುವ ಹೋಗುವ ಭ್ರಮೆಗಳನೀಡಾಡಿ ಶರಣರ ಸ್ತೋಮದಿ ಕೂಡಿ ಭವ ಶರಧಿಯ ದಾಟಿ ಹಂಸಾತ್ಮಕನೊಳಾಡಿ ಆನಂದ 2 ಗುರುಚರಣಗಳ ಧ್ಯಾನಿಸುತಾ ಒಡನೆ ಎರಕವಾದಂತೆ ಬೇರೂರಿತು ಚಿತ್ತಾ ವರವಿಮಲಾನಂದ ಗುರುದತ್ತಾತ್ತೇಯನ ಕರುಣಾಸಮುದ್ರದೊಳ್ಬೆರೆದು ನಲಿವುತ್ತಾ ಆನಂದ 3
--------------
ಭಟಕಳ ಅಪ್ಪಯ್ಯ
ಆರತಿ ಮಂಗಳಾರತಿ ಆರತಿ ಬೆಳಗಿದೆಆತ್ಮ ಚಿದಾನಂದಗೆ ಪ ಆರು ಸ್ಥಾನವ ತಿಳಿದುಆರನೆ ಸ್ಥಳದಿ ನಿಂತುಆರು ಭ್ರಮೆಯ ಹರಿದುಆರ್ ಮೇಲೆ ಬೆಳಗಿದೆ 1 ಮೂರು ಸ್ಥಾನವ ತಿಳಿದುಮುರನೆಯ ಸ್ಥಳದಿ ನಿಂದುಮೂರು ಗುಣವ ಹರಿದುಮೂರ್ ಮೇಲೆ ಬೆಳಗಿದೆ2 ಎರಡು ಸ್ಥಾನವ ತಿಳಿದುಎರಡನೆಯ ಸ್ಥಳದಿ ನಿಂದುಎರಡನೆ ಚಿದಾನಂದನೊಳುಎರಡಾಗದೆ ಬೆಳಗಿದೆ 3
--------------
ಚಿದಾನಂದ ಅವಧೂತರು
ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನದಲಿ ಸವಿದುಂಬಗಲ್ಲದೆ ಪ ರಜಸು - ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ 1 ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ 2 ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ 3
--------------
ಕನಕದಾಸ