ಒಟ್ಟು 189 ಕಡೆಗಳಲ್ಲಿ , 53 ದಾಸರು , 180 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ನಂಬಿದವರ ಕಾವ ದೈವ ಅಂಬುಜಾಕ್ಷನೀತನೆಂದು ಧ್ರುವ ನಂಬಿದ ಪ್ರಲ್ಹಾದಗ ತಾಂ ಸ್ತಂಭದೊಳು ಮೂಡಿ ಬಂದು ಹಂಬಲಿಸಿ ದಲ್ಲ್ಯೊದಗಿ ಇಂಬವಾದನೀತನೆಂದು 1 ನಾಮ ನಂಬಬಾರದೆ ನೀ ಕಾಮಧೇನುವೆಂದು ಪೂರ್ಣ ನೇಮದಿಂದ ಸಲಹುತಿಹ್ಯ ಸ್ವಾಮಿ ಸರ್ವೋತ್ತಮನೆಂದು 2 ದೀನ ಮಹಿಪತಿಸ್ವಾಮಿ ಭಾನುಕೋಟಿತೇಜಪೂರ್ಣ ಮನದಪೇಕ್ಷೆ ಪೂರೈಸುವ ಘನಸುಖದಾಯಕನೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮೋ ನಮೋ ನಾರಾಯಣನೇ ಓಂ ನಮೋ ಚನ್ನಕೇಶವನೆ ಪ ಅಚ್ಯುತ ಪಾದದಿ ಸೇರಿಸೊ ಅನಂತ ಅ.ಪ ನಮೋ ನಮೋ ವೆಂಕಟರಮಣನೆ ಸಂಕಟಹರಿಸೋ ಶ್ರೀವರನೆ 1 ನಮೋ ನಮೋ ವರದರಾಜನೆ ವರವ ನೀಡೋ ಪುರುಷೋತ್ತಮನೆ 2 ನಮೋ ನಮೋ ಶ್ರೀರಂಗನಾಥನೆ ಸುರಕ್ಷೆಯ ಕೊಡೊ ಭಕ್ತವತ್ಸಲನೆ 3 ನಮೋ ನಮೋ ಸಂಪತ್ಕುಮಾರನೆ ಸಂಪತ್ತನು ಹರಿಸೋ ಶ್ರೀಹರಿಯೆ 4 ನಮೋ ನಮೋ ಮುದಿಗೆರೆ ರಂಗನೆ ಮುದದಿ ಕಾಪಾಡೋ ಮಾಧವನೆ 5 ನಮೋ ನಮೋ ಯದುಗಿರಿ ಚಲುವನೆ ಸದಯದಿ ಸಲಹೋ ದಾಮೋದರನೆ 6 ನಮೋ ನಮೋ ಜಾಜಿಪುರೀಶನೆ ನೀ ಜೋಪಾನಮಾಡೆನ್ನ ಪರಮಪಾವನನೆ 7
--------------
ನಾರಾಯಣಶರ್ಮರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾಟ್ಯವಾಡಿದ ನಮ್ಮ ನಾರಸಿಂಹನ ಭಕ್ತ ಶಿಷ್ಟೇಷ್ಟ ಜನಪ್ರಿಯ ಶ್ರೀ ಪಾರ್ವತೀಶ ಪ. ಪರಮ ಸಂತೋಷದಲಿ ಉದಯಸ್ತ ಪರಿಯಂತ ಸಿರಿವರ ರಾಮನ ಪರಮ ನಾಮಾಮೃತವ ತರುಣಿ ಗಿರಿಜೆಗೆ ಅರುಹಿ ಮರೆದು ತನುಮನವನ್ನು ಉರುತರದ ಭಕ್ತಿಯಿಂ ಪರಮ ವೈರಾಗ್ಯನಿಧಿ 1 ತರತಮ್ಯ ಜಗಸತ್ಯ ಹರಿಯು ಸರ್ವೋತ್ತಮನು ಸಿರಿಯು ಅನಂತರದಿ ವಾಯು ಜೀವೋತ್ತಮನು ಪರಮ ವೈರಾಗ್ಯ ಹರ ವೈಷ್ಣವೊತ್ತಮನೆನುತ ಉರವಣಿಸಿ ನುಡಿಯುವರ ನುಡಿ ಕೇಳಿ ಹರುಷದಿ 2 ಗೋಪಾಲಕೃಷ್ಣವಿಠಲ ತಾ ಪ್ರೀತಿಯಿಂದಲಿ ಗೋಪತನಯರನೆಲ್ಲ ಸಲಹಲೋಸುಗದಿ ಪಾಪಿ ಕಾಳಿಂಗನ ಫಣೆಯಲ್ಲಿ ಕುಣಿದುದು ಪರಿ ಎಂದೆನುತ ತಾ ಪ್ರೀತಿಯಿಂ ತೋರಿ 3
--------------
ಅಂಬಾಬಾಯಿ
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಪ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಅ.ಪ. ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ 1 ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು ಋಣದ ಭಯವನೆ ಹೊರಿಸು ರಿಕ್ತ ನಾನೆಂದೆನಿಸು ತೃಣದಂತೆ ಮಾಡಿ ನಿಲಿಸು ನಿತ್ಯ ಮನದಿಚ್ಛೆಗಾರನೆ ದಿನ ಪ್ರತಿದಿವಸವಾಗೆ, ದೇವ 2 ಯಾತ್ರೆಯನೆ ಮಾಡಿಸು ಯೋಚನೆಯಲೇ ಇರಿಸು ಪಾತ್ರ ಜನರೊಳು ಪೊಂದಿಸು ಗೋತ್ರ ಉತ್ತಮನೆನಿಸು ಗೋವುಗಳ ಕಾಯಿಸು ಧಾತ್ರಿಯೊಳು ನೀಚನೆನಿಸು ಮೈತ್ರರೊಳು ಕೂಡಿಸು ಮೈಗೆಟ್ಟವನೆನಿಸು ಸ್ತೋತ್ರಕ್ಕೆ ಯೋಗ್ಯನೆನಿಸು ನೇತ್ರ ಮೂರುಳ್ಳವನು ಸ್ತುತಿಸಿದ ಮಹಾಮಹಿಮ ರಾತ್ರಿ ಹಗಲು ಎನ್ನದೆ ದೇವ 3 ಉಪವಾಸದಲ್ಲಿರಿಸು ಉಚಿತ ಭೋಜನ ಉಣಿಸು ಜಪತಪವನೆ ಮಾಡಿಸು ಅಪಹಾಸ್ಯ ಮಾಡಿಸು ಅದ್ಭುತವನೈದಿಸು ಗುಪಿತರೊಳಗಧಿಕನೆನಿಸು ಉಪಕಾರಿ ನರನೆನಿಸು ಉದ್ದಂಡನಿವನೆನಿಸು ವಿಪುಳ ಮತಿಯಲಿ ನಿಲಿಸು ಅಪರಿಮಿತ ಗುಣನಿಧಿಯೆ ಆನಂದ ಮೂರುತಿಯ ಸಫಲಮತಿಯೀವ ದೇವ 4 ವೇದವನು ಓದಿಸು ವೇದಾರ್ಥಗಳ ನುಡಿಸು ಓದಿದರು ದಡ್ಡನೆನಿಸು ಹಾದಿಯನು ತಪ್ಪಿಸು ಹಿತದವರನಗಲಿಸು ಸಾಧು ಮಾರ್ಗವನೆ ಕೊಡಿಸು ಬಾಧೆಗಳನಟ್ಟಿಸು ಭಕುತಿವೆಗ್ಗಳನೆನಿಸು ಉದರಕೋಸುಗ ತಿರುಗಿಸು ಪಾದದಲಿ ಗಂಗೆಯನು ಪೆತ್ತ ಪರಮಾನಂದ ಮೋದ ವಿನೋದವಾಗೆ ದೇವ 5 ಕುಣಿಕುಣಿದಾಡಿಸು ಕಾಶಿಯಲಿ ಪೊಂದಿಸು ಮಣಿ ಭೂಷಣವ ತೊಡಿಸು ಘನ ಕವನ ಪೇಳಿಸು ಕೌತುಕವನೈದಿಸು ವನ ಭುವನದೊಳು ನಿಲಿಸು ಪ್ರಣವ ಮಂತ್ರವ ಜಪಿಸು ಪ್ರಕಟಭಯವನೆ ಬಿಡಿಸು ಬಿನುಗು ವೈರಾಗ್ಯನೆನಿಸು ಜನನಿ ತನುಜರ ಕೂಡೆ ಅನುಸರಿಸಿ ನಡೆವಂತೆ ಎನಗೆ ನೀನೆ ಸದ್ಗತಿ ಸ್ವಾಮಿ 6 ಯಾವುದಾದರು ನೀನು ಇತ್ತುದಕೆ ಎನಗಿಷ್ಟು ನೋವು ಒಂದಾದರಿಲ್ಲ ಜೀವೇಶರೊಂದೆಂಬ ದುರ್ಮತವ ಕೊಡದಿರು ಭಾವದಲಿ ನಾ ಬೇಡುವೆ ಆವಾವ ನರಕದಲಿ ಬಹುಕಾಲವಿಟ್ಟರು ಇಪ್ಪೆ ನಾನೊಲ್ಲೆ ಮಿಥ್ಯಮತವ ಕಾವ ಕರುಣೆ ನಮ್ಮ ವಿಜಯವಿಠ್ಠಲರೇಯ ಪಾವನ್ನ ಮಾಳ್ಪ ಶಕ್ತ ವ್ಯಕ್ತ 7
--------------
ವಿಜಯದಾಸ
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನಿಷ್ಠೆಯಿಂದ ನಿಂತ ಈ ಪುಟ್ಟ ಕಪಿಯ ನೋಡೆ ಪ. ಎಷ್ಟು ಮೌನ ಧರಿಸಿದಂಥ ಪುಟ್ಟ ಕಪಿಯ ನೋಡೆ ಅ.ಪ. ವಾರಿಧಿಯ ದಾಟಿದಂಥ ಪುಟ್ಟ ಕಪಿಯ ನೋಡೆ ಹೀರಿದ ಕುರುಪರ ರಕ್ತ ಪುಟ್ಟ ಕಪಿಯ ನೋಡೆ 1 ತೂರಿದ ಅನ್ಯರ ಮತ ಪುಟ್ಟ ಕಪಿಯ ನೋಡೆ ಸಾರಿ ಹರಿ ಸರ್ವೋತ್ತಮನೆಂದ ಪುಟ್ಟ ಕಪಿಯ ನೋಡೆ2 ಶೌರ್ಯವೆಲ್ಲ ಉಡುಗಿದಂಥ ಪುಟ್ಟ ಕಪಿಯ ನೋಡೆ ಹಾರಿ ಯಂತ್ರದಲ್ಲಿ ಶಿಲ್ಕಿದ ಪುಟ್ಟ ಕಪಿಯ ನೋಡೆ 3 ಮಾನ ಉಳಿಸಿಕೊಳ್ಳಲು ಮೌನದ ಪುಟ್ಟ ಕಪಿಯ ನೋಡೆ ಧ್ಯಾನ ಮುದ್ರಾಂಕಿತದಿ ಶೋಭಿಪ ಪುಟ್ಟ ಕಪಿಯ ನೋಡೆ 4 ಯೋಗಾಸನದಿ ಪದ್ಮಾಸನವು ಪುಟ್ಟ ಕಪಿಯ ನೋಡೆ ವಾಗೀಶನ ಪದಕ್ಹೋಗುವ ತಪದ ಪುಟ್ಟ ಕಪಿಯ ನೋಡೆ 5 ವ್ಯಾಸರಿಗೊಲಿದ ವೇಷಧಾರಕ ಪುಟ್ಟ ಕಪಿಯ ನೋಡೆ ಮೋಸವೊ ಧ್ಯಾನವೊ ಅರಿಯೆ ಪುಟ್ಟ ಕಪಿಯ ನೋಡೆ 6 ಕಷ್ಟದ ಭವಕಟ್ಟು ಬಿಡಿಸುವ ಪುಟ್ಟ ಕಪಿಯ ನೋಡೆ ಕಟ್ಟಿನೊಳ ಸಿಲ್ಕಿ ಗುಟ್ಟು ತಿಳಿಸದ ಪುಟ್ಟ ಕಪಿಯ ನೋಡೆ 7 ಸಿದ್ಧ ಸಾಧನ ಬುದ್ಧಿ ಬಲಿದ ಪುಟ್ಟ ಕಪಿಯ ನೋಡೆ ಉದ್ಧಾರಕ ಪ್ರಸಿದ್ಧ ಪುರುಷ ಪುಟ್ಟ ಕಪಿಯ ನೋಡೆ 8 ಸ್ವಾಪರೋಕ್ಷಿ ಜಗದ್ವ್ಯಾಪಕನಾದ ಪುಟ್ಟ ಕಪಿಯ ನೋಡೆ ಗೋಪಾಲಕೃಷ್ಣವಿಠ್ಠಲನ ದಾಸನೀ ಪುಟ್ಟ ಕಪಿಯ ನೋಡೆ 9
--------------
ಅಂಬಾಬಾಯಿ
ನೀ ಕರುಣದಿಂದ ಪಾಲಿಸದಿದ್ದರೆ ಇನ್ನುನಾ ಕಾಣೆ ಮನ್ನಿಸುವರ ಪ. ಸಾಕಾರ ಮೂರುತಿ ಸರ್ವೋತ್ತಮನೆನೀ ಕಾಯೊ ಪರಾಕುಮಾಡದೆ ಎನ್ನನು ದೇವ ಅ.ಪ. ಗುರುಹಿರಿಯರನು ಕಂಡು ತರಳತನದಲಿ ನಾನುಚರಣಕೆರಗದೆ ತಿರುಗಿದೆವರ ಸಕಲ ಸಂಪದವ ಬೇಡಿ ಬಯಸುತ ನಿನ್ನಸ್ಮರಣೆಯನು ಮರೆತಿದ್ದೆನೊಸ್ಮರನ ಬಾಣಕೆ ಸಿಲುಕಿ ಪರಸತಿಗೆ ಮರುಳಾಗಿದುರ್ಗತಿಗೆ ನೆಲೆಯಾದೆನೊಸಿರಿಯರಸನೆ ನಿನ್ನ ಚರಣವನು ನಂಬಿದೆನೊಕರುಣದಿಂ ಕಡೆಹಾಯಿಸೊ 1 ಆರುಮಂದಿಗಳೆಂಬ ಕ್ರೂರವೈರಿಗಳಿಂದಗಾರಾದೆನವರ ದೆಸೆಗೆಮಾರಿಹಬ್ಬದÀ ಕುರಿಯು ತೋರಣವ ಮೆಲುವಂತೆತೋರುತಿದೆ ಎನ್ನ ಮತಿಗೆಘೋರ ಸಂಸಾರವೆಂಬೋ ವಾರಿಧಿಯ ದಾಟಿಸುವಚಾರುತರ ಬಿರುದು ನಿನಗೆಮಾರನಯ್ಯನೆ ನಿನ್ನ ಚರಣವನು ನಂಬಿದೆನುಪಾರಗಾಣಿಸೊ ಎನ್ನನು 2 ಹಲವು ಜನ್ಮಗಳಲ್ಲಿ ಬಲುನೊಂದು ಬಾಯಾರಿತೊಳತೊಳಲಿ ಬಳಲುತಿಹೆನುಸಲೆ ಉದರ ಪೋಷಣೆಗೆ ತಲೆಹುಳುಕ ನಾಯಂತೆಹಲವು ಮನೆ ತಿರುಗುತಿಹೆನೊಜಲದ ಮೇಲಿನ ಗುಳ್ಳೆಯಂತಿಪ್ಪ ಈ ದೇಹನೆಲೆಯೆಂದು ನೆಚ್ಚುತಿಹೆನೊಜಲಜನಾಭನೆ ನಿಮ್ಮ ಮಹಿಮೆಯನು ಪೊಗಳುವೆನುಚೆಲುವ ಶ್ರೀ ಹಯವದನ ರನ್ನ 3
--------------
ವಾದಿರಾಜ
ನೀ ಕರುಣಿಸದಿರೆ ಸಾಕುವರ್ಯಾರು ದಯಾಕರ ಮೂರುತಿ ರಾಘವೇಂದ್ರ ಪ ಪಾರು ಮಾಡೊ ಸಂಸಾರಭವದಿ ಅ- ಪಾರ ಮಹಿಮ ಗುರು ರಾಘವೇಂದ್ರಾ ದೂರ ನೋಡಿದರೆ ಬಿಡಿಸೋ ತವ ಚರ- ಣಾರವಿಂದಕೆ ಕೊರಳನು ಕಟ್ಟಿಸೊ 1 ಒಡವೆ ವಸ್ತುಗಳ ಮಡದಿ ಮಕ್ಕಳ ಕೊಡು ಎನುತಲಿ ಬೇಡುವುದಿಲ್ಲ ಒಡೆÉಯನೆ ನಿನ್ನಯ ಅಡಿಗಳಲಿ ದೃಢ ಭಕುತಿಯ ಕೊಡದಿರೆ ಬಿಟ್ಟವನಲ್ಲ 2 ನರರ ಸೇವೆಯಾ ಬಿಡಿಸೋ ಹರಿವಾಯುಗಳ ಸೇವೆಯಾ ಹಿಡಿಸೊ ವರದ ಹನುಮೇಶವಿಠಲನಾ ಸರ್ವೋತ್ತಮನೆಂದು ಕರೆದವನೆ 3
--------------
ಹನುಮೇಶವಿಠಲ
ನೀನೆ ಅನಾಥನಾಗಿರಲು ಅನ್ಯರಿಗೆ ಏನು ದಾನವ ನೀ ಮಾಡುವಿಯೊ ಪ ಜ್ಞಾನಪೂರ್ಣ ನೀನೆಂದು ಅರಿತು ನಿನ್ನ ಜ್ಞಾನಲೇಶವನು ಯಾಚಿಸುವೆ ಅ.ಪ ಯಾರು ನಿನ್ನ ತಂದೆ ಯಾರು ನಿನ್ನ ತಾಯಿ ತೋರೆಲೊ ಈರೇಳು ಭುವನದಲಿ ಊರೊಳು ವಾಸಕೆ ಗೃಹವನು ಕಾಣದೆ ವಾರಿಧಿಯೊಳು ನೀನಡಗಿದೆಯೊ ರಂಗ 1 ಎಡಬಿಡದಿಹ ನಿನ್ನ ಮಡದಿಯ ಬಯಸದೆ ಪಡೆದೆಯೊ ನಾಭಿಯೊಳ್ನಾಲ್ಮುಗನ ಅಡಿಯಾಕಾಶವ ಕಾಣದ ಇಂತಹ ದುಡುಕಿನ ಲೋಕೋತ್ತರ ಪುರುಷ 2 ಪೆತ್ತುದನೆಲ್ಲವ ತುತ್ತು ಮಾಡುವುದು ಎತ್ತರ ನಡತೆಯೊ ನಾ ಕಾಣೆ ಪುತ್ಥಲಿ ಗೊಂಬೆಗಳಂದದಿ ಎಲ್ಲರ ಸುತ್ತಿಸುತಿಹೆ ಪುರುಷೋತ್ತಮನೆ 3 ಚಂಚಲಳಾದÀ ಮಡದಿಯು ನಿನ್ನನÀು ವಂಚಿಪಳೆನ್ನುವ ಭಯದಿಂದ ಹೊಂಚು ಕಾಯಲು ನಿನ್ನ ಹೃದಯದಲ್ಲಿ ಪೊತ್ತು ಸಂಚರಿಸುವೆ ವಿಲಕ್ಷಣ ಪುರುಷ 4 ಅಣುವಿನೊಳಗೆ ಅಣು ಮಹತಿನೊಳಗೆ ಮಹ ತೆನಿಪ ವಿರೋಧ ಧರ್ಮಕೆ ಧರ್ಮಿ ಎನ್ನಿಪ ನಿನ್ನಯ ಗುಣವರಿಯಲು ಸಂತತ ಸುಜನ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೆರೆನಂಬಿದವರನ್ನ ಪರಿವೆಮಾಡದೆ ಇನ್ನು ಪೊರೆಯದಿರುವರೆ ಪರಮಪುರುಷನೆ ನರಹರೆ ನಿಮ್ಮ ಚರಣ ಕಮಲವ ಹಾಗೆ ಸ್ಮರಿಸುತಿರುವಂಥ ಪರಮಪುಣ್ಯ ಭಕ್ತಜನ ರನು ಪಾಲಿಸದೆ ಇನ್ನು ಇರುವದುಚಿತವೆ ಪ ಅಮಿತ ಪರಾಕ್ರಮ ಕುಂಡಲಶಯನ ಅಕ್ರೂರ ವಂದ್ಯಾ ಪುಂಡರೀಕಾಕ್ಷನೆ ಪುಣ್ಯ ಪ್ರಭಾವನೆ ಕುಂಡಲಾಧಿಪ ದೇವ ಮಹಾನುಭಾವ ದಂಡಿದಾನವ ಖಂಡಗರ್ವ ಅಖಂಡಮುನಿಮನ ಮಂಡಲ ನಿಲಯ ಕೋದಂಡಧರನೆ ಅಂಡಜ ಗಿರಿವಾಸ ಹರಿಗೋವಿಂದನೆ 1 ಭೂಮಿಜರಮಣ ಸಂಪೂರ್ಣಾನಂದನೆ ಸಾಮಗಾನಲೋಲ ಸರ್ವೇಶನೆ ಕಾಮತಾರ್ಥಗಳೀವ ಕರುಣಾಸಾಗರ ದೇವಾ ಸ್ವಾಮಿ ಜಗನ್ನಾಥ ಸರ್ವೋತ್ತಮನೆ ಕಾಮ ಜನಕ ಸುದಾಮ ರಕ್ಷಕ ಪ್ರೇಮ ಸೀತಾರಾಮ ಜಗತ್ಪತಿ ಶೌರಿ ಶ್ರೀಹರಿ ಕೋಮಲಾಂಗ ಕೃಷ್ಣ ಮೂರುತಿ 2 ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕನಾಗಿ ಸಕಲಭಾರಕರ್ತ ಶ್ರೇಷ್ಠನೆ ನಿಕರದಿ ಸಲಹುವ ನಿಜನಿತ್ಯಾನಂದಾನೆ ಪ್ರಕೃತಾದಿ ಪಾಲಿಸುವ ಪರಮಾತ್ಮನೆ ಸಕಲ ವೈಭವ ಚಿದ್ವಿಲಾಸನೇ ನಿಖರಾರೈ ನಿನ್ನಲಿ ನಮೋ ಭಕುತವತ್ಸಲ ಮುಕುತಿದಾಯಕ ರುಕ್ಮಣಿಯವರ 'ಹೆನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು