ಒಟ್ಟು 169 ಕಡೆಗಳಲ್ಲಿ , 52 ದಾಸರು , 143 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ನೋಡಿದೆನು ಕೃಷ್ಣನ್ನ | ದಣಿಯ ನೋಡಿದೆನು ಕೃಷ್ಣನ್ನ | ಮನದಣಿಯ ಪ. ಪಾಡಿದೆನು ವದನದಲಿ ಗುಣಗಳ ಮಾಡುತಲಿ ಸಾಷ್ಟಾಂಗ ಕಡು ಕೃಪೆ ಬೇಡಿದೆನು ಹರಿಯ ಅ.ಪ. ಅರುಣ ಉದಯದ ಮುನ್ನ ಯತಿಗಳೂ ಶರಣವತ್ಸಲನನ್ನು ಪೂಜಿಸಿ ಕರದಿ ಕಡಗೋಲನ್ನು ಪಿಡಿದಿಹ ಬಾಲರೂಪನಿಗೆ ತರತರದ ನೇವೇದ್ಯವರ್ಪಿಸಿ ತುರುಕರುಗಳಾರತಿ ಗೈಯ್ಯುತ ಪರಮಪುರುಷಗೆ ವಂದಿಸಲು ಈ ಚರಿತ ಮತ್ಸ್ಯನ್ನಾ 1 ಮಧ್ವರಾಯರ ಹೃದಯವಾಸಗೆ ಮುದ್ದು ಯತಿ ಪಂಚಾಮೃತಂಗಳ ಶುದ್ಧ ಗಂಗೋದಕದ ಸ್ನಾನವಗೈಸಿ ಸಡಗರದಿ ಮಧ್ಯೆ ಮಧ್ಯೆ ನೈವೇದ್ಯವರ್ಪಿಸಿ ಮುದ್ದು ತರಳರಿಗ್ಹೆಜ್ಜೆ ಪಂಕ್ತಿಯು ಅಗಣಿತ ಕೂರ್ಮರೂಪನ್ನಾ2 ಉದಯಕಾಲದಿ ಸರ್ವ ಜನಗಳು ಮುದದಿ ಮಧ್ವ ಸರೋವರದೊಳು ವಿಧಿಯಪೂರ್ವಕ ಸ್ನಾನ ಜಪ ತಪವಗೈದು ಮಾಧವನಾ ಉದಯದಾಲಂಕಾರ ದರ್ಶನ ಪದುಮನಾಭಗೆ ನಮನಗೈವರು ವಿಧಿಕುಲಕೆ ಉದ್ಧಾರಕರ್ತನು ವರಹನೆಂದಿವನಾ 3 ಪಾಲಿಸಲು ಬಾಲನ ಶ್ರೀ ಗೋ ಪಾಲಕೃಷ್ಣನು ಕಂಭದಲಿ ಲೀಲೆಯಿಂದಲಿ ಉದಿಸಿ ಖೂಳನ ಸೀಳೀ ತೊಡೆಯಲ್ಲಿ ಬಾಲೆಯನು ಕುಳ್ಳಿರಿಸಿಕೊಂಡಘ ಜಾಲಗಳ ಸುಡುವಂಥ ದೇವನು ಬಾಲರೂಪವ ಧರಿಸಿ ನಿಂತಿಹ ಲೋಲ ನರಹರಿಯ 4 ಅದಿತಿ ದ್ವಾದಶವರ್ಷ ತಪಸಿಗೆ ವಿಧಿ ಜನಕ ತಾ ಕುವರನಾದನು ಅದರ ತೆರದಲಿ ವ್ರತವ ಗೈದ ವೇದವತಿಗಿನ್ನು ಚದುರ ತನಯನ ವರವನಿತ್ತನು ಯದುಕುಲಾಗ್ರಣಿ ಅವರ ಭಕ್ತಿಗೆ ಒದಗಿ ಬಂದ ಮೂರ್ತಿವಾಮನನೆಂಬ ವಟುವರನ5 ದುಷ್ಟ ಕ್ಷತ್ರಿಯರನ್ನೆ ಕೊಲ್ಲುತ ಅಷ್ಟು ಭೂಮಿಯ ದಾನಗೈಯುತ ದಿಟ್ಟ ತಾನೆಲ್ಲಿರಲಿ ಎಂಬುವ ಯೋಚನೆಯ ತಳೆದು ಅಟ್ಟಿ ಅಬ್ಧಿಯ ಪುರವ ನಿರ್ಮಿಸಿ ಪುಟ್ಟ ರೂಪವ ತಾಳಿ ಬರುತಲಿ ಮೆಟ್ಟಿ ನಿಂತಿಹ ರಜತ ಪೀಠದಿ ಶ್ರೇಷ್ಠ ಭಾರ್ಗವನ 6 ಪಿತನ ಆಜ್ಞೆಯ ಪೊತ್ತು ಶಿರದಲಿ ಸತಿ ಅನುಜ ಸಹಿತದಿ ಜತನದಲಿ ವನವಾಸ ಮುಗಿಸುತ ದಶಶಿರನ ಕೊಂದ ಅತಿ ಸಹಾಯವ ಗೈದ ಶರಧಿಗೆ ಪ್ರತಿಯುಪಕಾರವನು ಕಾಣದೆ ಜತನದಲಿ ತಾ ನಿಲ್ಲೆ ನೆಲಸಿದ ಜಾನಕೀಪತಿಯ7 ಗೋಪಿಯರ ಉಪಟಳಕೆ ಸಹಿಸದೆ ಗೋಪನಂದನರೊಡನೆ ಕಾದುತ ತಾಪಪಡಿಸುವ ಕಂಸರನುಚರರಿಂದ ಕಳದೋಡಿ ಗೋಪಿ ಮೊಲೆ ಕೊಡುತರ್ದದಲಿ ಬಿಡೆ ಈ ಪರಿಯ ತಾಪಗಳ ಸಹಿಸದೆ ತಾಪಸರ ಪೂಜೆಗಳ ಬಯಸುತ ಬಂದ ಗೋಪತಿಯ 8 ವೇದ ಬಾಹಿರರಾದ ದುರುಳರು ವೇದ ಮಾರ್ಗವ ಪಿಡಿಯೆ ಸುರತತಿ ನೀ ದಯದಿ ಸಲಹೆಂದು ಪ್ರಾರ್ಥಿಸೆ ಜಿನ ವಿಮೋಹಕನೂ ವೇದರ್ಥವ ಗುಪ್ತದಲಿ ತಾ ಬೋಧಿಸುತ ಮೋಹಕವ ಕಲ್ಪಸಿ ಬುದ್ಧ ಪ್ರಮೋದನೆಂಬುವನಾ 9 ಚತುರ ಪಾದವು ಕಳದು ಧರ್ಮವು ಅತಿಮಲಿನವಾಗುತಲಿ ಕಲಿಜನ ಚತುರ ಜಾತಿಯ ಕಲೆತು ಕಂಗೆಡೆ ಭಕ್ತವರ್ಗಗಳು ಗತಿಯು ನೀನೆ ಪೊರೆಯೊ ಎಂದೆನೆ ಸತಿಯ ಹೆಗಲೇರುತಲಿ ಖಡ್ಗದಿ ಹತವಗೈಯ್ಯುತ ಖಳರ ಸುಜನರ ಪೊರೆದ ಕಲ್ಕಿಯನು10 ನೋಡಿದೆನು ವರ ಮಚ್ಛ ಕೂರ್ಮನ ನೋಡಿದೆನು ಧರಣೀಶ ನೃಹರಿಯ ನೋಡಿದೆನು ವಾಮನನ ಭಾರ್ಗವ ರಾಮಚಂದ್ರನನೂ ನೋಡಿದೆನು ಕಡಗೋಲ ಕೃಷ್ಣನ ಬುದ್ಧ ಕಲ್ಕಿಯ ನೋಡಿದೆನು ಗುರು ವರದ ಗೋಪಾಲಕೃಷ್ಣವಿಠ್ಠಲನ 11
--------------
ಅಂಬಾಬಾಯಿ
ನೋಡಿದೆನು ಯಾದವ ಕೃಷ್ಣನ | ಪಾಡಿದೆನೊ ಮನದಣಿಯ ವರಗಳ | ಬೇಡಿದಾಕ್ಷಣ ಕೊಡುವ ಜಗತ್ರಯ | ವಾಡಿಸುವ ವಾಗೀಶ ಜನಕನ ಪ ಮೇದಿನಿ ಪ್ರ | ಹ್ಲಾದ ಸುರಪನ ಕಾದ ವಂಶವ | ಛೇದ ಸಾಗರ | ಹಾದಿ ಬಿಗಿದ ಗೋಯಿದ ಬತ್ತಲೆ | ಯಾದ ತುರಗವ | ಬೀದಿ ವದಿಸಿದನೀತ ಹಯಮೊಗ | ಬಾದರಾಯಣ ದತ್ತ ವೈಕುಂಠ | ಬೋಧ ಮೂರುತಿ ಕಪಿಲ ನಾನಾ ವಿ | ನೋದ ರೂಪದ ಆದಿ ದೈವವ 1 ಜನನಿಗಾಟವ ತೋರಿ ಕಡಗೋ | ಲನು ನೇಣರು ಕರದಲಿ ಪಿಡಿದು | ರು ಕ್ಮಿಣಿಯ ಕೈಯಿಂದ ಪೂಜೆಗೊಂಡರ್ಜು | ಗೋಪಿ ಚಂ | ದನದೊಳಡಗಿ ಅಲ್ಲಿಂದ ಆನಂದ | ಮುನಿಗೊಲಿದು ಬಲು ವೇಗ ಪಡುವಣ | ವನಧಿ ತೀರದಲಿಪ್ಪನಂತಾಸನ ಬಳಿಯ ನಿಂದಿದ್ದ ಚಲುವ 2 ಸುತ್ತ ಯೋಜನ ಕ್ಷೇತ್ರವಿದರೊಳು | ಉತ್ತಮ ವಿಮಾನ ವೇದ ಪ | ರ್ವತಗಳು ಅಲ್ಲೆಲ್ಲಿ ಸರೋವರ | ಕತ್ತಲಿಗಭಿಮಾನಿನಿ ದುರ್ಗಾ | ದುರಿತ ಪರಿಹರ | ಸೋತ್ತಮರಿಗಿದು ಸಿದ್ಧ ಸರ್ವದ | ತತ್ತಳಿಪ ಪರತತ್ವ ಹರಿಯ3 ತಂತ್ರ ಸಾರೋಕ್ತದಲಿ ಪೂಜೆ ನಿ | ರಂತರದಿ ಕೈಗೊಂಬ ಬಲು ಗುಣ | ವಂತ ನೀತನ ಹೊಳವು ಪೊಗಳಿದ | ರಂತ ಗಾಣವು ಶ್ರುತಿ ಪುರಾಣಗ | ಳೆಂತು ಪೇಳಲಿ ಮೆರೆವ ವೈಭವ | ಸಂತರಿಗೆ ಅತಿ ಪ್ರಿಯನಾಗಿಪ್ಪ | ನಿತ್ಯ ಸ್ವಾತಂತ್ರ ಪುರುಷನ 4 ಮಕರ ತಿಂಗಳು ಮೊದಲು ಪಕ್ಷದ | ಲಕುಮಿರಮಣನ ದಿವಸದಲ್ಲೀಗ | ಭಕುತಿಯಿಂದಲಿ ಬಂದು ವಂದಿಸಿ | ಅಕುಟಿಲರ ವೊಡಗೊಡಿ | ನಿಂದು ಗೋ | ಳಕವ ಚಿಂತಿಸಿ ಸ್ನಾನ ಒಂದೆ | ಸುಖ ತೀರ್ಥ ಸರೋವರದಲಿ ಮಾಡೆ | ಮುಕುತರೊಳು ಪೊಂದಿಸುವ ದಾತನ 5 ಶುಕ್ರವಾರದ ಪೂಜೆ ನೋಡಲು | ವಕ್ರಗತಿಗಳು ಮುಟ್ಟಲಂಜೊವು | ಚಕ್ರವರ್ತಿ ತಾನಾಗಿ | ಸಕಲ ಪರಾಕ್ರಮದಲಿ ಚರಿಸಿ ಜಗದೊಳು | ಶುಕ್ರ ದೇವಸ್ಥಾನದೊಳು ಕಾ | ಲಕ್ರಮಣ ಮಾಡೆ | ಗೋತ್ರದೊಡನೆ ಪೂ ರ್ಣ ಕ್ರೀಡೆÀಯಾಡಿಸುತ ಸಲಹುವ | ಚಕ್ರಧರ ಅಕ್ರೂರ ವರದನ 6 ಕಣಿಸಿ ಉಡಿಸುವ ಕುಣಿಸಿ ನೋಡುವ | ಕನಸಿನೊಳಗಾವಾಗ ತನ್ನನು | ಮನಸಿನಲಿ ಕ್ಷಣ ಬಿಡದೆ ಗುಣಗಳ | ಎಣಿಸಿ ಮೈ ಮರೆದಡಿಗಡಿಗೆ ಈ | ತನುವೆ ನಿನ್ನಾಧೀನವೆಂದಾ | ಜನರಿಗಪವಾದ ಬರಲೀಸನು | ದನುಜದಲ್ಲಣ ವಿಜಯವಿಠ್ಠಲನ್ನ 7
--------------
ವಿಜಯದಾಸ
ನೋಡಿದೆನು ವಿಠ್ಠಲನ ದಣಿಯ ಪ. ನೋಡಿದೆನು ವಿಠ್ಠಲನ ರೂಪವ ಪಾಡಿದೆನು ಮನದಣಿಯ ಹರುಷವು ಮೂಡಿತಂಗದಿ ಮುಗಿದು ಕೈ ನಾ ಮಾಡಿ ಸಾಷ್ಟಾಂಗ ಬೇಡಿ ಮನಸಿನಭೀಷ್ಟ ಸಂತತ ನೀಡು ನಿನ್ನಯ ಚರಣ ಸ್ಮರಣಿಯ ಪಾಡಿಪೊಗಳುವ ಭಾಗ್ಯಬೇಕೆಂದು ಕಾಡಿದೆನು ಹರಿಯಾ 1 ಪಂಚ ಪಂಚ ಉಷಃ ಕಾಲದೀ ಪಂಚ ಬಾಣನ ಪಿತಗೆ ಆರುತಿ ಮುಂಚಿನೊಸನಗಳೆಲ್ಲ ತೆಗೆಯುತ ತೈಲವೆರೆಯುವರೂ ಪಂಚರೂಪಗೆ ಚಂದ್ರಭಾಗೆಯ ಪಂಚ ಗಂಗೋದಕಗಳೆರೆಯುತ ಅಮೃತ ಸ್ನಾನಗೈಸುವ ಸೊಬಗ ನೋಡಿದೆನು 2 ಬೆಣÉ್ಣ ಬಿಸಿನೀರೆರೆದು ಕೃಷ್ಣಗೆ ಸಣ್ಣ ವಸ್ತ್ರದಿ ವರಸಿ ಮೈಯ್ಯನು ಘನ್ನ ಪೀತಾಂಬರವನುಡಿಸುತ ಜರಿಯ ಶಾಲ್ಹೊದಿಸಿ ಬಣ್ಣದೊಸ್ತ್ರದ ಪಾಗು ಸುತ್ತುತ ಬೆಣ್ಣೆ ಕಳ್ಳಗೆ ಅಂಗಿ ತೊಡಿಸುತ ಸಣ್ಣ್ಣ ಮಲ್ಲಿಗೆ ಹಾರ ಉಪವೀತ ಸಡಗರವ ಕಂಡೆ 3. ಗಂಧ ಅಕ್ಷತೆ ಪುನುಗು ಜವ್ಜಾಜಿ ಛಂದದಾ ಕಸ್ತೂರಿ ತಿಲಕವು ಸುಂದರಾಂಗದ ಮುಖಕೆ ಕನ್ನಡಿ ತೋರಿಸುವರಿಂತೂ ಅಂದದಾ ಪಕ್ವಾನ್ನ ತರುತಲಿ ಇಂದಿರೇಶಗೆ ಅರ್ಪಿಸುತ್ತಲಿ ಒಂದು ಧೂಪಾರತಿಯ ಬೆಳಗಿ ಒಂದು ಏಕಾರ್ತಿ 4 ಮಾಡಿ ಪಂಚಾರ್ತಿಗಳ ವಿಠಲಗೆ ಪಾಡುವರು ಮನದಣಿಯ ಭಕ್ತರು ನೀಡುವರು ಪಂಚಾಮೃತಂಗಳ ಬೇಡುವರು ಹರಿಯ ರೂಢಿಯೊಳು ಪಂಡರಿಯ ಕ್ಷೇತ್ರವ ಬೇಡಿದವರನು ಪೊರೆವ ಗೋಪಾಲಕೃಷ್ಣವಿಠ್ಠಲನು 5
--------------
ಅಂಬಾಬಾಯಿ
ನೋಡಿದೆನೊ ಮನದಣಿಯ ನಳಿನಭವಾದ್ಯರ ಕ್ರೀಡಾಮೃಗವನೆ ಮಾಡಿ ಆಡಿಸುವ ವಿಚಿತ್ರ ಮಹಿಮ ಗೋಪಾಲಗ ಈಡುಗಾಣೆನೊ ಎಲ್ಲೆಲ್ಲಿ ಆವಲ್ಲಿ ಪ ಕಾಲಲಂದಿಗೆ ಗೆಜ್ಜೆ ಸರಪಳಿ ಉಡುದಾರ ಮೇಲು ಕಿರಿಗೆಜ್ಜೆ ಘಂಟೆ ತೋಳು ರಕ್ಷಾಮಣಿ ನಾಗ ಮುರಿಗೆ ಬಂದಿ ಸಾಲು ತಾಯಿತ ಕಟ್ಟಿರೆ ವಜ್ರ ಉಂಗುರದ ಬೆರಳು ಸು ಫಾಲದಲಿಯಿಟ್ಟ ತಿಲಕಾ ಲಾಲಿಸುವ ಬಾಲಕರೂಪದಿಂದಲಿ ಪ್ರಾತಃ ಇಂದು 1 ಮುಂಗೈ ಮುರಾರಿ ಪವಳದ ಬುಲಿಗೆಜ್ಜೆ ಬಂಗಾರ ಕೊರಳಲ್ಲಿ ಹಾ ರಂಗಳನು ಶೋಭಿಸುವ ಮಾಗಾಯಿ ಕರ್ಣದಲಿ ಉರ ಕೌಸ್ತಭ ಕಂಗೊಳಿಪ ಎಣೆನೂಲು ಹುಲಿಯುಗುರು ತಾಳಿಸರ ಹಿಂಗದಲೆ ಪಚ್ಚೆ ಪದಕಾ ಶೃಂಗಾರದರಳೆಲೆ ಶಿರದಿ ಜಾವಳ ಜಡೆ ಇಂದು 2 ಮಕರ ಕಡಗೋಲ ನೇಣನ್ನೆ ಕರದಲಿ ಪಿಡಿದು ಉರ ಪಾಣಿಗಳು ಬೆಣ್ಣೆ ಮೊಸರಿಲಿ ತೋದಿರೆ ಚನ್ನನಾಸಾ ಮಣಿತೂಗೆ ಅದರ ಭಾಗ್ಯ ಬಣ್ಣಿಪಲರಿದು ತಿಳಿದು ಚಿನ್ಮಯ ವಿಜಯವಿಠ್ಠಲ ವಿಶ್ವರೂಪ ಪಾ ಇಂದು 3
--------------
ವಿಜಯದಾಸ
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು
ನೋಡು ನೋಡು ನಾರೀಮಣಿಯೆ ಪ ನೋಡು ನೋಡು ನಿನ್ನಾ ಕಣ್ಮನ ದಣಿಯಾ ಅ.ಪ. ಮುದ್ದು ಸೂಸುವ ಸಲೆ ಮುಗುಳ್ನಗೆ ಮೊಗವಾ ತಿದ್ದಿದ ಕಸ್ತೂರಿ ತಿಲಕದ ಫಣಿಯಾ 1 ಸಾರ ಗಂಭೀರ ಶೃಂಗಾರ ವಿಹಾರಾ ಚಾರು ಸೌಂದರ್ಯವೈಯ್ಯಾರ ಸುಗುಣಿಯಾ 2 ಶ್ರೀದವಿಠ್ಠಲ ಸಾಕ್ಷಾತ್ತ್ರಿಜಗನ್ಮಯಾ ಇಂದ್ರಶರಾ ಜಗನ್ಮೋಹನ ಖಣಿಯಾ 3
--------------
ಶ್ರೀದವಿಠಲರು
ನೋಡೆ ಕಣ್‍ದಣಿಯಾ ಪ ಪಾಡುವೆ ಪೊಗಳುವೆ ನೋಡುತ ನಲಿಯುವೆ ನೋಡೆ ಕಣ್‍ದಣಿಯಾ ಅ.ಪ ನೋಡೆ ಕಣ್‍ದಣಿಯಾ ನೋಡೆ ಕಣ್‍ದಣಿಯಾ 1 ನೋಡೆ ಕಣ್ ದಣಿಯಾ ನೋಡೆ ಕಣ್ ದಣಿಯಾ 2 ನೋಡೆ ಕಣ್ ದಣಿಯಾ ನೋಡೇ ಕಣ್ ದಣಿಯಾ 3 ನೋಡೆ ಕಣ್‍ದಣಿಯಾ ನೋಡೇ ಕಣ್ ದಣಿಯಾ 4 ನಾರದವಂದ್ಯನ ನೀರಜಪಾದಕೆ ಮಾಡೆ ವಂದನೆಯ ನೀರಜನೇತ್ರ ಮಾಂಗಿರಿಯ ರಂಗಯ್ಯನ ಪಾಡೆ | ಮನದಣಿಯಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾನವ ಮಾಡುವೆನು ನಾಮನದಣಿಯ ನಾಮಾಮೃತವ ಪಾನವ ಮಾಡುವೆನು ಪ. ಶ್ರೀನಿವಾಸನ ನಾಮಸುಧಾರಸಏನುರುಚಿಯೋ ಕಾಣೆ ಜೇನುತುಪ್ಪದಂತೆ1 ಸಕ್ಕರೆ ಬೆರೆಸಿದ ಚೊಕ್ಕಪಾನಕವನ್ನುಮಿಕ್ಕು ಮೀರುತಲಿದೆ ರಕ್ಕಸಾರಿಯ ಧ್ಯಾನ 2 ಕದಳಿ ಖರ್ಜುರ ದ್ರಾಕ್ಷಿ ಅಡಕೆಯಿಮ್ಮಿಗಿಲಾಗಿಮುದಕೊಡುವುದು ಜಿಹ್ವೆಗೊದಗಿದ ತತ್‍ಕ್ಷಣ 3 ಕಾಸಿದ ಕೆನೆಹಾಲ ದೂಷಿಸುವಂತಿದೆಏಸುರುಚಿಯೋ ಹರಿದಾಸರೆ ಬಲ್ಲರು 4 ಹಯವದನನ ನಿರ್ಭಯದಿಂ ಭಜಿಸಲುದಯಮಾಡುವ ಸಾಯುಜ್ಯಪದವನಿತ್ತು5
--------------
ವಾದಿರಾಜ
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಬಂದನೊ ಸುಜನರ ಸಂದಣಿಯೊಳಗತಿಸುಂದರ ರಥವೇರಿ ಗುರುವರ ಬಂದನೊ ಪ ಬಂದಿ ಜನರು ಮುದದಿಂದ ಬಹುಪರಾಕೆಂದು ನುಡಿಯಲಾನಂದ ಬೀರುತ ಬಂದನೊ ಅ.ಪ. ಕ್ಷಿತಿ ಸುರಪತಿ ಶುಭಮತಿ ಬಲ್ಮತದವರೊಯತಿ ಪರರತಿಶಯ ದಶಮತಿ ಸಂ-ಸ್ಕøತ ಭಾಷಣದವರೊ ಭಯಹರಣನೆಂಬೊ ವಾ-ರುತಿಯ ಕೀರುತಿಯ ಪೂರುತಿಯ ಕೇ-ಳುತ ಮಹಿಮಾಂಗಣಕಥಿಸುತ ಗ್ರಂಥಿಸುತ ತುತಿಶುತನುತಿಸಿ ಯತಿ ಶಿರೋಮಣಿಗೆರತುನ ಖಚಿತವಾದಾರುತಿಯ ಬೆಳಗಿರೆ 1 ಸುರತರು ಶುಭ ಧೊರೆಯೋ ವಾಗ್ಝರಿಯೋಸರಸಾರ್ತಿ ಜನಗಳ ನೆರೆಸುತಾದರಿಸುತಾಬಲು ಸುಖ ಸುರಿಸುತಾ ದರಿದ್ರವ ತರಿದುಪೊರೆದೂ ಕರೆದವರಿಗೆ ಕೈ-ಶರೆಯಾಗುವೆನೆಂಧರುಷದಿ ಗುರುವರ ಬಂದನೊ 2 ವಾಲಗ ಘೊರ್ಮಿಡೆ ಭಟರುಗಳ ಹೆಗಲ ಮ್ಯಾಲೆಝಗ ಝಗಿಸುವ ಛಡಿಗಳೊ ಕುಣಿಕುಣಿದಾಡುವವರಹಿ ವೇಣಿಗಳೋ ವಾಣಿಗಳು ಶ್ರೀಣಿಗಳು ಶೋಭಿಸೆಸುಜನರು ಕೈ ಮುಗಿವರು ನಗುವರುಸಂಭ್ರಮದಿಂದ ಬಿಗಿವರು ದೃಗಾರೋಢನದಿಜಿಗಿದು ಅಘದೂರೊಗೆದ ಜನರೊಳುವೆಗ್ಗಳದಲಿಂದಿರೇಶನ ಭಕುತಾಗ್ರಣಿ ಬಂದನೊ 3 ಇಲ್ಲಿ ವರ್ಣಿತವಾದ ಯತಿಗಳು ಯಾರೆಂದು ತಿಳಿಯದು.
--------------
ಇಂದಿರೇಶರು
ಬರಿದೆ ದಣಿಯಬೇಡಿ | ಬಯಲ ಸಾಧನ ಕೂಡಿ | ನೆರೆ ಮಾಡಿ ಸಾಧು ಸಂತರಾ | ದಯವಂತರಾ ಪ ಏನು ಓದಿದರೇನು | ಏನು ಕೇಳಿದರೇನು | ಜ್ಞಾನಿಗಳೊಡನಾಡದೇ | ಅನುಭವವಾಗುದೇ 1 ಬುಡದಲಿ ಫಲವಿದೆ | ತುದಿಮರನೇರುವರೇ | ಬಿಡು ಬಿಡು ನಾನಾ ಸಾಯಸಾ | ಭ್ರಾಂತಿ ವೇಷಾ 2 ಗುರು ಮಹಿಪತಿ ನುಡಿ | ಸಾರಿದ ನಂದ ನೋಡಿ | ಮರೆಯದೆ ಮಾಡಿ ಸಾಧನಾ | ಹರುಷ ನಿಧಾನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಹುದೂರ ಮುಕ್ತಿಪಥದಿ ನಡೆದು ನೀವುಹೋಗಲದನಳವಡಿಸಿಕೊಳ್ಳಿರೊ ಪ. ಸಂಸಾರವೆಂಬಡವಿಯ ಸುತ್ತ ಸುಳಿವಸಂಕಟವ ಕಳೆವರೆಕಂಸಾರಿ ತ್ರಿವಿಕ್ರಮನಿಗೆ ಸೇವೆಯಅಂಶುಪ್ರದಕ್ಷಿಣವ ಮಾಡಿರೊ 1 ಏಕಂ ವಿನಾಯಕೇ ಕುರ್ಯಾದ್ವೇ ಸೂರ್ಯೇನತ್ರೀಣೆ ಶಂಕರೆಚತ್ವಾರಿ ಕೇಶವೇ ಕುರ್ಯಾತ್ ಸಪ್ತಶ್ವತ್ಥಪ್ರದಕ್ಷಿಣವ ಮಾಡಿರೊ 2 ಬ್ರಹ್ಮತ್ಯವೆಂಬ ಪಾಪವ ಕಳೆವರೆಬ್ರಹ್ಮಪಿತನ ಪಟ್ಟದರಸಿಗೆಒಮ್ಮನದಲೊಮ್ಮೆ ಪ್ರದಕ್ಷಿಣವಮಾಡಿನಿರ್ಮಲ ಸುಖವ ಪಡೆಯಿರೊ3 ತೀರ್ಥಯಾತ್ರೆಗಳು ಬೇಡ ನೀವು ಗಳಿಸಿದರ್ಥವ್ಯರ್ಥವ ಕೆಡಿಸಬೇಡಚಿತ್ತದಲ್ಲಿ ಹರಿಯ ಚರಣವನು ಕೂಡಿಸತ್ಸುಖವನುಂಬುದು ಕಾಣಿರೊ4 ಅಸ್ವಸ್ಥರಾದ ಜನರು ಬಿಡದೆ ನಮ್ಮ-ಶ್ವತ್ಥ ನಾರಾಯಣನಿಗೆದಾಸ್ಯಮಂ ಪಡೆದು ಭಕ್ತಿಯಿಂತುತತ್ಸುಖವನುಂಬುದು ಕಾಣಿರೊ 5 ಇಂತು ಪ್ರದಕ್ಷಿಣವ ಮಾಡಿ ಲಕ್ಷ್ಮೀಕಾಂತನ ಕೃಪೆಯ ಪಡೆವರೆಚಿಂತೆಗಳ ಕಳೆದಮೇಲೆ ಮುಕ್ತಿಯಲಿಸಂತೋಷದಲಿ ಸುಖಿಪರು6 ಹಯವದನನೆಂಬ ಗುರುಕೊಟ್ಟಮಂತ್ರದಿಭಯವೆಂಬ ಭುಜಂಗನ ಜಯಿಸಿ ಮೂರು ಬಾರಿ ಸುತ್ತಿ ಹÀರಿಯ ಪದದಣಿಯ ಕಟ್ಟಿ ನಡೆಯಿರೊ 7
--------------
ವಾದಿರಾಜ