ಒಟ್ಟು 331 ಕಡೆಗಳಲ್ಲಿ , 66 ದಾಸರು , 278 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ
ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಪ ಕಾಲ ವಿಪರೀತದಿ ಅ ಅತ್ತೆಯ ಸೊಸೆ ಬಯ್ವಳು - ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ - ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ 1 ನಿತ್ಯ ನೇಮವು ನಿಂತಿತು - ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು 2 ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ ಕ್ರೋಧಗಳುಅನ್ಯಾಯದಿಂದ ಅರ್ಥವ ಗಳಿಸುವರುತನ್ನ ಕಾಂತನ ಬಿಟ್ಟು ಸ್ತ್ರೀಯರುಅನ್ಯರಿಗೆ ಮನವೆರಗಿ ಮೋಹಿಪರುಬಣ್ಣಗೆಟ್ಟಿತು ವರ್ಣ ತಪ್ಪಿತು ಪ್ರ-ಸನ್ನ ಶ್ರೀ ನೆಲೆಯಾದಿಕೇಶವನೆ 3
--------------
ಕನಕದಾಸ
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕಾಣಿ ನಿನ್ನಂಥವಳ ಪ. ಮುದ್ದು ರುಕ್ಮಿಣಿಯು ದೂತೆಗೆ ತಿದ್ದಿ ಮಾತುಗಳ ಹೇಳಿ ಬುದ್ಧಿವಂತಳೆ ರಾಯಗ ಸುದ್ದಿ ಹೇಳಮ್ಮ ಹೋಗಿ1 ಮಾನ ಮಾಡಿ ದೂತೆಗೆ ಆನೆ ಅಂಬಾರಿ ಕೊಟ್ಟುನಾನಾ ಭೂಷಣಗಳಿಟ್ಟು ತಾನು ವಸ್ತ್ರಗಳನೆ ಕೊಟ್ಟು2 ಹರದಿ ರುಕ್ಮಿಣಿಯು ದೂತೆಗೆ ತುರಗ ಬಿರುದುಗಳೆ ಕೊಟ್ಟುಎರಗಿ ಹೇಳಮ್ಮ ಅಷ್ಟು ಹಿರಿತನಗಳಟ್ಟು 3 ರಂಗ ಬಂದಿಳಿದಾನೆಂಬೊ ಮಂಗಳವಾರ್ತೆಯಸಂಗೀತಲೋಲರಾಯನ ತಂಗಿಗ್ಹೇಳಮ್ಮ ಹೋಗಿ 4 ಭರದಿ ದ್ರೌಪತಿಗೆ ಮುಯ್ಯಾ ತಿರುಗಿಸಿ ತಂದಾರೆಂದು ಎರಗಿ ಹೇಳಮ್ಮ ಮೈಯ್ಯ ಮರೆತಿರಬ್ಯಾಡಿರೆಂದು5 ಮಂದಗಮನೆಯರು ಮುಯ್ಯ ತಂದಾರೆ ತಾರಾರೆಂದು ಸಂದೇಹ ಬಿಟ್ಟು ಊಟ ಚಂದಾಗಿ ಮಾಡಿರೆಂದು6 ಧೀರರಾಯಗೆ ಮುಯ್ಯ ನಾರಿಯರು ತಂದಾರೆಂದು ಬಾರಿ ಬಾರಿಗೆ ನಮಿಸಿ ಸಾರಿ ಹೇಳಮ್ಮ ಹೋಗಿ 7 ಧಿಟ್ಟೆಯರು ಮುಯ್ಯ ಉತ್ಕøಷ್ಟದಿ ತಂದಾರೆಂದು ಕೃಷ್ಣರಾಯನ ಬಂದದ್ದಷ್ಟು ಹೇಳಮ್ಮ ಹೋಗಿ8 ಇಂದು ರಾಮೇಶನ ಮಡದಿಯರು ಬಂದರು ದ್ವಾರದಿ ಒಂದೊಂದು ಮಾತುರಾಯಗೆ ಚಂದಾಗಿ ಹೇಳಮ್ಮ ಹೋಗಿ9
--------------
ಗಲಗಲಿಅವ್ವನವರು
ಕಾಪಾಡು ಕಾಪಾಡು | ಕಾಪಾಡು ಗುರುವೇ ಪ ಶ್ರೀ ಪತಿಯ ಪರಮಾತ್ಮ | ಅಪದ್ಹರ ಗುರುವೇ ಅ.ಪ. ಕೃಪಣ ವತ್ಸಲ ಗುರುವೆ | ಕೋಪಸಲ್ಲದು ನಿಮಗೆಕಾಪಥವ ನೈದುವನು | ತವಕೃಪೆ ವಿಹೀನಾ ||ಅಪರಾಧ ವೆಣಿಸದಲೆ | ಕೃಪೆಮಾಡಿ ಕೈ ಪಿಡಿದುಸುಪಥದಲ್ಲಿರಿಸುತ್ತ | ಆಪವರ್ಗದನ ತೋರೊ 1 ತಂದೆ ತಾಯಿಯು ನೀವೆ | ಬಂಧು ಬಳಗವು ನೀವೆಎಂದೆಂದಿಗೂ ಎನಗೆ ಗುರುವು ನೀವೆ ||ಕಂದ ಮಾಡಿದ ತಪ್ಪ | ತಂದೆಯೆಣಿಸುವರೇನೊಪೊಂದಿ ಭಜಿಸುವೆ ಕಾಯೊ | ತಂದೆ ಕೃಪ ಸಾಂದ್ರಾ 2 ತಂದೆ ಮುದ್ದು ಮೋಹನ್ನ | ವಂದಿಸುವೆ ನಿಮ್ಮಡಿಗೆಇಂದು ತವ ದರ್ಶನವ | ಸಂಧಿಸಲಿ ಬೇಕೋ ||ಇಂದಿರಾಪತಿ ಗುರು | ಗೋವಿಂದ ವಿಠ್ಠಲನಛಂದಾಗಿ ಭಜಿಸುವ | ತಂದೆ ಕೈ ಪಿಡಿಯೋ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಮಿನಿಯರು ನೆರದೊಂದಾಗಿಪ್ರೇಮದಿ ಧವಳಾರವ ಪಾಡಲುಶ್ರೀ ಮಹಾಲಕ್ಷ್ಮಿ ಜಯವೆಂದುಜಯವೆಂದುಶ್ರೀಕೃಷ್ಣರಾಯಗೆಹೇಮದಾರತಿಯ ಬೆಳಗಿರೆ 1 ಸಿಂಧುರಗಮನೆಯರತಿ ಹರುಷದಲಿಚಂದದಿ ನಲಿದಾಡುತ ಪಾಡುತಇಂದಿರಾರಮಣ ಜಯವೆಂದುಜಯವೆಂದುಶ್ರೀ ಮಹಾಲಕ್ಷ್ಮಿಗೆಕುಂದಣದಾರತಿಯ ಬೆಳಗಿರೆ 2 ಕರದ ಕಂಕಣ ಝಣಝಣರೆನಲುಗುರುತು ಚವಲುಗಾಡಲು ಮುತ್ತಿನಕೊರಳಹಾರಗಳು ಹೊಳೆಯಲುಹೊಳೆಯಲುಶ್ರೀಕೃಷ್ಣರಾಯಗೆಕುರುಜಿನಾರತಿಯ ಬೆಳಗಿರಿ3 ಹಾರಪದಕ ಕಂಕಣದವರು ವೈ-ಯ್ಯಾರದ ಹೊಸ ಹರೆಯದಂಗನೆಯರುರಾರಾಜಿಪ ಚಂದ್ರಮುಖಿಯರುಮುಖಿಯರುಶ್ರೀ ಮಹಾಲಕ್ಷ್ಮಿಗೆಕುರುಜಿನಾರತಿಯ ಬೆಳಗಿರೆ 4 ಕಸ್ತೂರಿ ತಿಲಕದ ಸೊಬಗಿಯರು ಸು-ವೃತ್ತಸ್ತನತಟದ ಜವ್ವನೆಯರುಆರ್ತಿಯಿಂ ಪಾಡಿ ಪೊಗಳುತಪೊಗಳುತಶ್ರೀ ಕೃಷ್ಣರಾಯಗೆಮುತ್ತಿನಾರತಿಯ ಬೆಳಗಿರೆ5 ಬೆರಳುಂಗುರ ಥಳ ಥಳಥಳಿಸಿಸಿರಿಮೊಗದೊಳು ಕಿರಿಬೆಮರೊಗೆಯಲುಹರುಷದಿ ಪಾಡಿ ಪೊಗಳುತಪೊಗಳುತಲಿಶ್ರೀ ಮಹಾಲಕ್ಷ್ಮಿಗೇಸರಸಿಜದಾರರತಿಯ ಬೆಳಗಿರೆ 6 ಕನ್ನಡಿಗದಪಿನ ಚದುರೆಯರು ಚೊಕ್ಕಚಿನ್ನದ ಸರಪಣಿಯಿಟ್ಟಂಗನೆಯರುಚೆನ್ನಾಗಿ ಪಾಡಿ ಪೊಗಳುತಪೊಗಳುತಕೆಳದಿಯ ಶ್ರೀ ಕೃಷ್ಣಗೆರನ್ನದಾರತಿಯ ಬೆಳಗಿರೆ 7
--------------
ಕೆಳದಿ ವೆಂಕಣ್ಣ ಕವಿ
ಕಾಯ ಬೇಕಿವಳಭಯ ಕೃತು ಭಯನಾಶ | ದಯದೋರೊ ಶ್ರೀಶ ಪ ವಾದೀಭ ಮೃಗರಾಜ | ವಾದಿರಾಜರ ದಯದಿಸಾಧನಕೆ ಹೆದ್ದಾರಿ | ನೀ ದಯದಿ ತೋರೀಮೋದ ತೀರ್ಥರ ಸಮಯ | ಧ್ಹಾದಿಯಲಿ ನಡೆವಂತೆಹೇ ದಯಾಂಬುಧಿ ಚೆನ್ನ | ಆದರಿಸೋ ಘನ್ನ 1 ಚಂದ್ರ ಸಮ ಸಂಕಾಶ | ಸಂಧಿಸಲು ಸ್ವಪ್ನದಲಿಇಂದು ಭಾಗ ನಿವಾಸ | ಸಂದರ್ಶನಿತ್ತೂ ಕಂದಿದ್ದ ಕನ್ಯೆಗೇ | ನಂದ ದಾಯಕನಾಗಿಸುಂದರನೆ ನರರೂಪಿ | ಸಂಧಿಸಿದೆ ಭಾಗ್ಯ 2 ಚಂದ್ರ ವದನೆಯು ಲಕುಮಿ | ಮಂದಿರಕೆ ಬರುತಲ್ಲೆನಿಂದಿರಲು ಸೌಭಾಗ್ಯ | ಸಂಧಿಸದೆ ಇಹುದೇಇಂದಿರಾರಾಧವಪದ | ಮಂದಸ್ಮಿತಾನನನೆಮಂದಿಯೊಳಗೀ ಶಿಶುವ | ಛಂದಾಗಿ ಸಲಹೋ 3 ಹರಿಗುರು ಸದ್ಭಕ್ತಿ | ಪರತತ್ವ ಸುಜ್ಞಾನ ಕರುಣಿಸುತ್ತ ಸಂತೈಸು | ಸುರ ವರೇಣ್ಯಾ |ಮರುತಾಂತರಾತ್ಮ ನಿ | ನ್ಹೊರತು ಅನ್ಯರ ಕಾಣೆಪರಿ ಹರಿಸೊ ಪ್ರಾಚೀನ | ಕರ್ಮಾಂಧ ಕೂಪಾ 4 ಭಾವಜ್ಞ ನೀನಾಗಿ | ಭಾವದೊಳು ಮೈದೋರೊಗೋವಿದಾಂ ಪತಿಯೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಕಾಯವ ನೆರೆನಂಬಿ ಕೆಡದಿರು ಮಾಯೆಯ ತಿಳಿದೇಳು ಪ. ನ್ಯಾಯವನರಿಯದೆ ನೀ ಮಾಯಾಮೋಹವೆ ಹೇಯಕಾರ್ಯರಿದೊಳಪಾಯದಿ ನರಳುವ ಅ.ಪ. ತನುಮನಕನಕವಿದು ನಿತ್ಯದಿ ತನದಾಗಿಹುದೆಂದು ಹೊನ್ನು ಮಣ್ಣು ಹೆಣ್ಣೆಂಬೀ ಮೂರರ ಬಣ್ಣದೆ ಬಗೆಗೆಟ್ಟು ಕಣ್ಣು ಕಾಣದೆ ಮುಂಬರುತಿಹ ಭಿನ್ನವನೆಣಿಸದೆಯೆ ಸಣ್ಣತನದಿ ಜೀವನ ವ್ಯರ್ಥವೆನಿಸುವ 1 ಸುಜನರ ಸಂಗತಿ ತ್ಯಜಿಸಿ ಮದದಲಿ ಕುಜನರ ಕೂಟವ ಬಯಸಿ ಋಜುಮಾರ್ಗವ ತೊರೆದು ಕಾಲವ ಅಜಗರನಂದದಿ ಕಳೆದು ಗಜಪತಿ ವರದನ ಪದಪಂಕಜ ಮಹಿಮೆಯ ನಿಜವರಿಯದೆ ದುರ್ಜೀವನವೆನಿಸುವ 2 ನೀರಗುಳ್ಳೆಯ ತೆರದಿ ಕರಗುವ ಸಾರವಿಲ್ಲದ ಭವದಿ ಮೂರುದಿನದ ಬಾಳೆಂದು ನೆನೆಯದೆ ಹಾರಾಡುವರೇ ನಿಂದು ಮಾರಪಿತನ ಪದಸಾರಸವನು ನೆನೆ [ನೆನೆದು] ನೀರ ಶೇಷಗಿರಿವರನೆÀ ಗತಿಯೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಲ ಕಳೆವರೆ ಮನವೆ ಪ ಖಲಜನಸಂಗದಲಿ ಸದಾ ಕಲ್ಮಶಭಾಜನನಾಗುತ ಹಲಧರಾನುಜನ ಶ್ರೀ ಪದ ಜಲಜಯುಗಳವ ಸುಜ್ಞಾನದಿ ಅ.ಪ ಇಂದ್ರಿಯಗಳ ಬಂಧಿಸಿ ಮನ- ಸೊಂದಾಗಿ ನಿಲಿಸಿ ಒಳಗೆ ಮು- ಮಂದಬುದ್ಧಿಯಾಗಿ ನೀನು 1 ಯಮನವರೋಡಿ ಬರುತ ನಿ- ಸಮಯದಿ ಭ್ರಮೆಯಿಂದಲ್ಲಿ ಕಾಲ್ಗೆರಗಲು ಬಿಡುವರೆ ನಿನ್ನ 2 ತಾಮಸನಾಗುತ ಶ್ರೀಗುರು- ರಾಮವಿಠಲ ಶರಣೆನ್ನದೆ ಕಾಮಿಸುತಲಿ ಸೊಕ್ಕುತ ನೀ 3
--------------
ಗುರುರಾಮವಿಠಲ
ಕೃಷ್ಣನು ನೆಲಸಿರಲು ನಾಕದ ಸಿರಿಯ ನಿರಾಕರಿಸುವ ಸಿರಿತಾಹರ್ಷದೊಳು1 ಮೋಹಿಸಿ ಮನದಿ ಪತಿ ಭಾವದಿ ನೋಡುತ ಭರದಿ 2 ಕಾಮಿಸಿ ಕಾಡಲು ಕಾಕುತ್ಸ್ಥನು ಬಲರಾಮ ಸಹಜನವತಾರದಲಿ ಕಾಮಿತವಹದೆನೆ ಕಾಮಿನಿ ರಾಧಾ ನಾಮದಿ ಜನಿಸಿರೆ ಗೋಕುಲದಿ 3 ಒಂದಾನೊಂದಿನ ನಂದಾದಿಗಳಾ ನಂದಾನ್ವಿತಮತಿ ವೃತ್ತಿಯಲಿ ಒಂದಾಗಿ ಧರಾ ವೃಂದಾರಕರನುವಿಂದಾರಾಧಿಪ ಭಕ್ತಿಯಲಿ 4 ಬಂದರು ವರಕಾಳಿಂದಿಯ ತೀರದಿ ನಂದನದಂತಿಹ ವನದೆಡೆಗೆ ಮುಕುಂದನ ಧ್ಯಾನಿಸುತಡಿಗಡಿಗೆ 5 ಗೋಧನ ದಾನದಲ್ಲಿ ಬಲ್ಲಿದ ಭೋಜನದಲ್ಲಿ ದಣಿಸಿ ಸುಖದಲ್ಲಿರುತಿರಲಾಸಮಯದಲಿ 6 ಸುಜನ ಸ್ತುತದಿನಕರ ನೈದಿರಲು ನಿಸ್ತುಲತಮದಿ ಸಮಸ್ತರದೃಷ್ಟಿಗಳಸ್ತಗೊಳಿಸೆ ಜನಭಯಗೊಳಲು 7 ರಾಧೆಯತಾನೋಡಿ ಕಂದನ ನೀನೇ ಮಂದಿರಕೈದಿಸು ಎಂದರೆ ಬಂದಳು ನಗೆಗೂಡಿ 8 ಬಾ ಕಮಲಾಸನನ ತೊರುವೆ ಶಶಿವದನಾ 9 ನೀನೊಲಿದುದನು ಬೇಡನಿನ್ನನೆ ಕೂಡಿಹೆನು 10 ತನ್ನಯಮನದೊಳಗೆ ಚರಿತ್ರನು ಕಾಮಿನಿಗೆ11 ಬಲು ಸಡಗರದಿ ವೃತ್ತಕುಚಗಳಿಂದೊತ್ತಿಮನೊಭವನರ್ಥಿಗೆ ಸೊಕ್ಕುವ ಕಾತರದಿ 12 ಕರುಣನಾದೊಡೀಗಲೇ ಬೆರೆದು ಬರುತಿರ್ದಳು ನಲಿದು 13
--------------
ಸರಗೂರು ವೆಂಕಟವರದಾರ್ಯರು
ಕೊಡುವವನು ನೀನು ಕೊಂಬುವನು ನಾನು ಪ ಬಡಮನದ ಮನುಜನ ಬೇಡಿ ಫಲವೇನುಅ.ಪ ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ 1 ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ದುರುಳ ಮತ್ತೇನು ಕೊಡಬಲ್ಲ ಹರಿಯೆ 2 ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ 3
--------------
ವಿಜಯದಾಸ
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೋಲ ಕೋಲೆನ್ನ ಕೋಲಕೋಲೆಂದು ಪಾಡುವರೆಷ್ಟು ಕೇಳ ವಯ್ಯಾರಿ ಪ. ಚಿತ್ರ ವಿಚಿತ್ರದ ಮುತ್ತು ಮಾಣಿಕ ಎಸವೋಛತ್ರÀ ಹಿಡಿದವರೆಷ್ಟ ಕೇಳ ವೈಯಾರಿ 1 ಶ್ವೇತ ಛತ್ರವುಕೋಟಿ ಪ್ರೀತಿಲಿ ಹಿಡಿದವರೆಷ್ಟ ಕೇಳವಯ್ಯಾರಿ2 ಸೂರ್ಯ ಪಾನವುಕೋಟಿಸಾರೆ ಹಿಡಿದವರೆಷ್ಟ ಕೇಳ ವಯ್ಯಾರಿ3 ಎಡಬಲ ಚಾಮರ ಹಿಡಿಕೆ ನವರತ್ನ ಹೊಳೆವ ಹಿಡಿದು ಬೀಸುವರವರೆಷ್ಟ ಕೇಳ ವಯ್ಯಾರಿ 4 ರತ್ನ ಮಾಣಿಕ ಬಿಗಿದ ಬೀಸಣಿಕೆಯ ಹಿಡಿದುಚೆನ್ನಾಗಿ ಬೀಸುವವರೆಷ್ಟ ಕೇಳ ವಯ್ಯಾರಿ 5 ಚಲುವ ರಂಗನ ಮುಂದೆ ನಲಿಯುತ ನವಿಲಗÀರಿಯಸುಳಿಸುವವರೆಷ್ಟ ಕೇಳ ವಯ್ಯಾರಿ 6 ಅಚ್ಚ ಜರತಾರಿ ವಸ್ತ್ರ ಜತ್ತಾಗಿ ನಿರಿ ಹೊಯ್ದುಬಿಚ್ಚಿಹಾರಿಸುವರೆಷ್ಟ ಕೇಳ ವೈಯ್ಯಾರಿ 7 ಫುಲ್ಲನಾಭನ ಮುಂದೆ ಮಲ್ಲ ಮುಷ್ಠಿಕರುತಮ್ಮೆಲ್ಲವಿದ್ಯೆಯನು ತೋರಿಸುವರೆಷ್ಟ ಕೇಳ ವೈಯಾರಿ 8 ಬಂದಿಗಳು ರಾಮೇಶನ ಒಂದೊಂದು ಗುಣ ರಚಿಸಿಚಂದಾಗಿ ಹೊಗಳುವರೆಷ್ಟ ಕೇಳ ವೈಯ್ಯಾರಿ9
--------------
ಗಲಗಲಿಅವ್ವನವರು
ಕೋಲೆಂದು ಪಾಡಿರೆ ಕೋಮಲೆಯರೆಲ್ಲ ಅಮ್ಮಯ್ಯಬಾಲೆಯರು ಅರಿಷಿಣ ಕುಂಕುಮ ಹಚ್ಚಿಹೊಯಿದಾರಮ್ಮಯ್ಯ ಕೋಲ ಹೊಯಿದಾರಮ್ಮಯ್ಯ ಪ. ಹಿಂಡು ನಾರಿಯರೆಲ್ಲ ಕೂಡಿ ದುಂಡು ಗಟ್ಟುತ ಕೊಂಡಾಡಿ ಕೃಷ್ಣನ ಕೋ¯ ಹೊಯಿದಾರಮ್ಮಯ್ಯ 1 ಹಸ್ತ ಕಡಗ ಹರಡಿ ದೋರೆ ಹವಳ ಕಂಕಣಹಸ್ತಿಗಮನೆಯರು ಎತ್ತಿ ಕೋಲ ಹೊಯಿದಾರಮ್ಮಯ್ಯ 2 ವಾಲೆ ಮೂಗುತಿ ಮುದ್ದು ಸುರಿಯುತ್ತಜತ್ತಾಗಿ ಜಾಣೆಯರು ಕೋಲ ಹೊಯಿದಾರಮ್ಮಯ್ಯ 3 ನಳಿನ ಮುಖಿಯರಿಟ್ಟ ಕೋಲ ಹೊಯಿದಾರಮ್ಮಯ್ಯ 4 ಮಲ್ಲಿಗೆ ಸಂಪಿಗೆ ಮುಡಿದ ನಲ್ಲೆಯರೆಲ್ಲರುನಮ್ಮ ಫುಲ್ಲನಾಭನ ಪಾಡಿ ಕೋಲ ಹೊಯಿದಾರಮ್ಮಯ್ಯ5 ಚವರಿ ರಾಗಟೆ ಚಲ್ವಗೊಂಡ್ಯ ಛಂದಾಗಿ ಒಪ್ಪುತಚದುರೆಯರು ಛಂದಾಗಿ ಕೋಲ ಹೊಯಿದಾರಮ್ಮಯ್ಯ 6 ಭಾರ ಧರಿಸುತ ರಘುವೀರನ ಕೊಂಡಾಡಿ ಕೋಲ ಹೊಯಿದಾರಮ್ಮಯ್ಯ 7 ನಡುವಿಗೆ ಒಡ್ಯಾಣವಿಟ್ಟು ನಾರಿಯರೆಲ್ಲರು ತಮ್ಮ ಬಡನಡಬಳುಕುತ ಕೋಲ ಹೊಯಿದಾರಮ್ಮಯ್ಯ8 ಉಟ್ಟ ಪೀತಾಂಬರ ಕಾಲಿಗಿಟ್ಟ ಗೆಜ್ಜೆಯುನಮ್ಮ ಧಿಟ್ಟರಮಿಅರಸನೆಂದು ಕೋಲ ಹೊಯಿದಾರಮ್ಮಯ್ಯ9
--------------
ಗಲಗಲಿಅವ್ವನವರು