ಮನವೇ ಚಿಂತಿಸು ಹರಿಯ-ಮುರಾರಿಯ ಪ
ಮಾಯಾ ಯುಗಳನು-ಮನವೇ ಅ.ಪ.
ಸ್ಮರವಿರಿಂಚಿನಯ ಪಿತನ-ಗೌರೀವರ-ಪುರಹೂತರಿಗೆ ತಾತನೆ
ರತಿದೇವಿ-ಸರಸತಿಯರ ಮಾವನ-ಶ್ರೀರಮಣನ
ಸರಸಿಜಾಸನಿಗೆ ಕರುಣೀಸುವೇದವ ಗಿರಿಯ ನೆಗೆಹಿ
ವಿಶ್ವಂಭರೆಯ ದಾಡೆಯೊಳೆತ್ತಿ
ತರಳಗಭಯವನಿತ್ತು ಮೂರಡಿ ಧರೆಯ ಬೇಡುತ
ದುರುಳ ರಾವಣಹರಣ ನೀಲಾಂ-
ಬರನ ಯದುವರ ತುರಗವಾಹನ1
ನಿಗಮಾಂತ ಗೋಚರನ-ನಿತ್ಯಾನಂದ-ಸುಗುಣಗಣಾರ್ಣವನ
ಸಜ್ಜರಿಗೆ-ಸುಗತಿಯಪಾಲಿಪನ ಸುರಪಾಲನ
ನಿಗಮಚೋರನ ಕೊಂದು ನಗವ ಬೆನ್ನೊಳು ಪೊತ್ತು
ಜಗವನುದ್ಧರಿಸಿ ನರಮೃಗದರೂಪವ ತಾಳಿ
ಜಗವ ನಳೆದನ ಭೃಗುಜ ಶಾಖಾ ಮೃಗವ ವಧಿಸಿ ಹಲ
ನೇಗಿಲನು ಪಿಡಿದುಗುರು ಕೊನೆಯಿಂ
ನಗುವನೆ ನೆಗಹಿದ-ನಿಗಮನುತ ಕಲಿಯುಗದ ವೈರಿಯ 2
ಪೂಜೆಯಕೊಂಬನ
ಕುಂಭಜ ಶಾಪ-ಕಲುಷವ ಕಳೆದನ-ವ್ಯಾಘ್ರಾಚಲ
ದಲಿನಿಂತು ಭಕ್ತರ ಸಲಹುವ ಕಾರುಣ್ಯನಿಲಯ
ಸಜ್ಜನ ಮನೋನಿಲಯ ಶ್ರೀನಿವಾಸನ
ಜಲಜಬಾಂಧವ ಕುಲಪವಿತ್ರನ ಜಲಜನೇತ್ರನ
ಜಲಜ ಗಾತ್ರನ ವಿಲಸಿತಾಂಬುಜ
ಮಾಲಭಕ್ತರಿಗೊಲಿವ ಶ್ರೀವರದಾರ್ಯ ವಿಠಲನ 3