ಒಟ್ಟು 908 ಕಡೆಗಳಲ್ಲಿ , 94 ದಾಸರು , 779 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಆವಾವಯ್ಯ ಇಹದ ಕುಲಗಳುಆವಾವಯ್ಯ ಇಹದ ಕುಲಗಳುಅಷ್ಟಮದಗಳನ್ನೇ ಗೆದ್ದುಭಾವಶುದ್ಧಿಯಿಂದ ಮುಕ್ತಿಭಾಮಿನಿಯನ್ನು ಸೇರಿದವಗೆ ಪ ಮೂರನಳಿದು ಏಳ ಕಳೆದು ಮೂರ ಖಂಡಿಸಿಏಳ ಮುರಿದು ಆರ ಮೂರ ಮೀರಿದವಗೆ 1 ನಾಕ ಕಳೆದು ಎರಡ ಮರೆತು ನಾಲ್ಕು ಮರೆತು ಎರಡ ತಿಳಿದುನಾಲ್ಕು ಎಂಟು ಎಂಬ ಜರೆದು ನಾಲ್ಕರಲ್ಲಿ ನಿಂತವನೆ2 ಹತ್ತನಟ್ಟಿ ನವವ ಮೆಟ್ಟಿ ಹರಿಯ ಕೋಟಿ ಕಿರಣವೆಂಬತತ್ವ ಚಿದಾನಂದ ತಾನೆ ತಾನೆ ಆದವಗೆ 3
--------------
ಚಿದಾನಂದ ಅವಧೂತರು
ಆವಿರ್ಭವಿಸಿದಳಾಗ ಜಗನ್ಮಾತೆ | ಅಖಿಲಾಂಡ ವಿಖ್ಯಾತೆ ಪ ದೇವದಾನವರು ತಾವೊಡಗೂಡುತ ಲಾವುದಧಿಯಮದಿಸÀುತ್ತಿರಲದರೊಳು ಅ.ಪ ಪೊಳೆವ ಬೆರಳುಂಗುರ ಶೋಭಿತಪಾದ | ಧರಿಸಿದ ಸುರುಚಿರ ರುಳಿಯು ಅಂದಿಗೆ ಗೆಜ್ಜೆಯ ನಾದ | ಕಟಿಯಲಿ ನೋಡೆ ಥಳಥಳವಾದ ಶೃಂಗಾರವಾದ | ಒಡ್ಯಾಣದ ಮೋದ ದಲಿ ತಾನಿಟ್ಟಿಹ ಚಲುವಿಕೆಯಿಂದಲಿ ಸಲೆ ಬೆಳಗುತಲಿ ನಳಿನಲೋಚನೊಳು 1 ಕರಿರಾಜನ ಕರದಂತೆ ಒಪ್ಪುವ ಕರವು | ಬೆರಳಲಿ ನೋಡೆ ಪರಿಶೋಭಿಸುತಿಹ ಮಾಣಿಕ್ಯದುಂಗುರವು | ರಾರಾಜಿಸುವ ಹರಡಿ ಕಂಕಣಗಳು ಬಲು ಸುರುಚಿರವು | ಪರಿಕಿಸೆ ಸುಂದರವು ಪರಿ ಸರಗಳು ಕೊರಳೊಳು ಶೋಭಿಸೆ ತರಣಿ ಕಾಂತಿಯನು ತಿರಸ್ಕರಿಸುತ್ತಲಿ 2 ಮಂದಸ್ಮಿತ ಪರಿಶೋಭಿತ ಶುಭವದನ | ಆನಂದಸದನ ಕುಂದಕುಟ್ಮಲದಂತಿಹ ಸಮರದನ | ಸಂತಾಪಾರ್ದನ ಬಂಧುರ ಚಂಪಕ ನಾಸಿಕದ ಹದನ | ಏಂ ಪೇಳಲಿ ಅದನ ಮಂದರಾದ್ರಿಧರ ಕರಿಗಿರೀಶನ ಎಂದೆಂದಗಲದ ಸುಂದರಾಬ್ಜಮುಖಿ3
--------------
ವರಾವಾಣಿರಾಮರಾಯದಾಸರು
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇದು ಥರವೇ ಥರವೇ ದೇವಾ ಥರವೇ ನಿನ್ನವರ ವಂಚಿಸಿ ನೀ ಮರೆಯಲ್ಲಿ ಇರುವುದು ಥರವೆ ಪ. ಪರಿಪರಿಯಲಿ ಸ್ತುತಿಗೈಯುತಲಿ ನಿನ್ನ ಪರಮ ಮಂಗಳ ಪಾದಗಾಣದೆ ಮರುಗುತಿರುವಾ ವರ ಭಕುತರಿಗೆ ಕರುಣದೋರದೆ ಇರುವೆ ವೆಂಕಟ ಅ.ಪ. ಅಜಭವಾದಿಗಳು ಸ್ತುತಿಸಿ ಪೂಜಿಸಿದ ಪಾದ ತ್ರಿಜಗವಂದಿತ ಕೃಷ್ಣ ನಿನ್ನಪಾದ ಭಜನೆಯನು ಮಾಡುತ ನಿನ್ನ ತ್ಯಜಿಸದನುದಿನ ಸುಜನರೆಲ್ಲರು ಸ್ತುತಿಸಿ ಪಾಡುತಿರೇ ತ್ರಿಜಗ ಪೂಜಿತನಾಗಿ ಭಕುತರ ಭಜನೆ ನಿನಗರಿವಿಲ್ಲೇ ದೇವನೆ ಸ್ವಜನರನು ಪಾಲಿಸುವ ಬಿರುದನು ತ್ಯಜಿಸುವರೆ ಸಿರಿಯರಸ ವೆಂಕಟ 1 ಮಚ್ಛಕೂರ್ಮವರಾಹನಾಗಿ ದೈತ್ಯರ ಸ್ವಚ್ಛಭಕುತರ ಸಲಹೆ ಸಂಹರಿಸಿ ಅಚ್ಛಪ್ರಲ್ಹಾದನಿಗೊಲಿದ ನರಹರಿಯಾಗಿ ಅಚ್ಛವಾಮನನಾಗಿ ಬಲಿಯತಲೆಯತುಳಿದು ಸ್ವಚ್ಛಗಂಗೆಯ ಇಂಬಿಡದೇ ದುಷ್ಟ ರಾಜರನಳಿದ ಭಾರ್ಗವ ದುಷ್ಟ ತಾಟಕಿ ಸಂಹರಿಸಿದನೆ ಕೃಷ್ಣರೂಪದಿ ಗೋಪೆರಿಗ್ವಲಿದನೆ ಉತ್ಕøಷ್ಟ ಬೌದ್ಧ ಕಲ್ಕಿ ವೆಂಕಟ 2 ಪರಮಪುರುಷ ಬಾ ವರದ ಮೂರುತಿ ಬಾ ಪರಿಪರಿ ಸ್ತುತಿಸಿ ವಂದಿಪೆ ಸಿರಿವರದ ಬಾ ಶರಧಿಶಯನ ನಿನ್ನ ಚರಣ ಸ್ಮರಣೆಯೀಯೆ ಶರಣಾಗತ ರಕ್ಷಾಮಣಿ ಬೇಗ ಬಾ ಸಿರಿಗೆ ಪೇಳದೆ ಬಂದು ಕರಿಯ ಪೊರೆದ ದೊರೆ ಶ್ರೀ ಶ್ರೀನಿವಾಸ ಬಾ ಗರುಡ ಗಮನನೆ ಶರಣಜನರನು ಮರೆಯದಲಿ ನೀ ಕರುಣ ವೆಂಕಟ 3
--------------
ಸರಸ್ವತಿ ಬಾಯಿ
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಂದ ಕಂದ ಮುಕ್ಕುಂದನಾ| ಬಂದು ವದಗಿಹ ಬಹಳ ಪುಣ್ಯದಿ ಛಂದವಾಯಿತು ಚಲುವನಂಘ್ರಿಯ ಪ ಬಲಿಗೆ ಭೂಮಿಯ ಬೇಡಿ ಹೆಜ್ಜೆಯಾ| ಅಳತೆಯರಡಲಿ ಅಡಗಿಸಿ| ನಳಿನ ಜಾಂಡಕ ಸಖವ ಸೋಂಕಿಸಿ| ಸುರನದಿ ಪಡೆದ ನಂಘ್ರಿಯಾ 1 ಶಿಲೆಯು ಆಗಿರೆ ಶಾಪದಲಿ ಸೋಂ| ಕಲು ನಿಜಾಂಗದ ಕಾಣಿಸಿ| ನಲಿದು ಕಾಳೀಂದಿಯೊಳುರುಗನಾ| ತಲೆಯಳಾಟದಿ ತುಳಿದ ನಂಘ್ರಿಯಾ 2 ಮುನಿಜನ ಹೃದಯ ಮನೆಯ ದೀಪವು| ಯನಿಪ ಶ್ರೀದೇವಿ ಯರಸನಾ| ಮನದಿಗುರುವರ ಮಹಿಪತಿ ಪ್ರಭು| ನೆನೆವವರೊಳಗೆ ನೆಲೆಸಿಹನ ಪದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇದೇನಿದೇನು ನಿನ್ನ ಪದವ ನಂಬಿದವ ಗೆಡರು ಬಾಧಿಸು ವದೇನು ಪ ಅವನ ಬದಿಯಲಿ ಗರುಡ ಮಣಿಯಿರೆ| ಹಾವಿನ ಗರಳವ ಏರುವದೇ| ಅಮೃತ ಕಲಶ ಮನೆಯೊಳಿರೆ| ಸಾವಿನ ಭಯದಿಂಬಳಲುವರೇ ರಂಗಯ್ಯಾ 1 ಹನುಮನ ಪರಿಚಾರಕರಿಗೆ ಬೆಂಬತ್ತಿ ಬಿನಗು ಭೊತಂಗಳು ತಟ್ಟುವವೇ ಅನಳನ ಹೊರಿಯಲಿ ಕುಳಿತಿರೆ ಹಿಮದಿಂದ ತನುಗುಗ್ಗರಿಸಿ ಬಿದ್ದು ಎರಗುವ ದೇನಯ್ಯಾ 2 ದುರಿತ ಬಂದು| ಕುಂದ ನಿನಗಲ್ಲವೇ ಎನ್ನವ ಗುಣಗಳ ನೋಡದೆ ರಕ್ಷಿಸು ಸನ್ನುತ ಮಹಿಪತಿ ನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದ್ದರೆ ಹೀಗೆ ಇರಬೇಕು ಇಲ್ಲದಿದ್ದರೆ ಕಾಯವ ಬಿಡಬೇಕು ಶುದ್ಧ ಚಿತ್ತವಾಗಿ ಹೃದಯದೊಳಿದ್ದ ವಸ್ತುವನ್ನು ನಿನ್ನ ಬುದ್ಧಿಯಿಂದ ನೀನೆ ತಿಳಿಯುತ್ತಿದ್ದು ಜೀವನ್ಮುಕ್ತನಾಗಿ ಪ ಕಲ್ಲು ಮರಳು ಕಾಷ್ಠತರುಗಳಲ್ಲಿ ಗಿರಿಗಳಲ್ಲಿ ಚರಿಸುವ ಹುಲ್ಲೆ ಕರಡಿ ವ್ಯಾಘ್ರ ಸಿಂಹದಲ್ಲಿ ಪಕ್ಷಿ ನಾನಾಮೃಗ ಗಳಲ್ಲಿ ವಸ್ತುವೊಬ್ಬನಲ್ಲದಿಲ್ಲವೆಂದು ಭಾವಿಸುತ್ತ 1 ದ್ರಷ್ಟವಾಗಿ ತೋರ್ಪುದೆಲ್ಲ ನಷ್ಟವಾಗಿ ಪೋಪುದೆಂದು ದಿಟ್ಟನಾಗಿ ತಿಳಿದುಜ್ಞಾನ ದೃಷ್ಟಿಯಿಂದಲೆ ದುಷ್ಟಜನರ ಸಂಗವನ್ನು ಬಿಟ್ಟು ಅರಿಗಳರುವರನ್ನು ಕುಟ್ಟಿ ಕೆಡಹಿ ಆಶಪಾಶವೆಂಬ ಹಗ್ಗವನ್ನು ಹರಿದು 2 ಗೇರು ಹಣ್ಣಿನ ಬೀಜ ಹೊರಸಾರಿ ಇರ್ದವೊಲು ಸಂ ಸಾರವೆಂಬ ವಾರಿಧಿಯೊಳು ಕಾಲಗಳೆಯುತ ನೀರ ಮೇಲಕಿದ್ದ ನಳಿನದಂತೆ ಹೊರಗೆ ಬಿದ್ದು ಬಕನ ಚಾರು ಚರಣ ಸ್ಮರಣೆಯಿಂದ 3
--------------
ಕವಿ ಪರಮದೇವದಾಸರು
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇನಿಯಗೆನ್ನೊಡನೆ ಪ್ರೀತಿಯೋ ಆ ತರುಣಿಯೊಳ್‍ಘನತರ ಪ್ರೀತಿಯೊ ಪೇಳೆನೆಗೆಕನಕಾಂಗಿಯವನೆನಿಸಿದ ಚಾರಿತ್ರವನಿನಗರುಪುವೆಯದ ತಿಳಿದೆನಗುಸುರೆ ಪ ಸುರಗಿ ಸಂಪಿಗೆ ಮಲ್ಲಿಗೆ ಜಾಜಿ ಮೊದಲಾದಪರಿಪರಿ ಪುಷ್ಪಮಾಲೆಗಳಾಕೆಗೆತರುಣಿ ಕೇಳಲ್ಲಿ ತಾ ಪುಷ್ಪದ ಸರಗಳಕರುಣದಿಂದೆನ್ನ ಬಳಿಗೆ ಕಳುಹಿದ ಮೇಲೆ 1 ನಾನಾ ವಿಧಧ ವಿಚಿತ್ರಾಂಬರಗಳಆ ನಳಿನಾಕ್ಷಿಗೆ ಕಳುಹಿದನೆಮಾನಿನಿಯೊಂದೆ ವರ್ಣದ ವಸ್ತ್ರಗಳ ಸುಮ್ಮಾನದಿಂದೆನ್ನ ಬಳಿಗೆ ಕಳುಹಿದ ಕಾಣೆ 2 ಏಕಾವಳಿ ಪಂಚರತ್ನದ ಸರಗಳನೇಕ ಹಾರಗಳ ಶೃಂಗಾರವಾಕೆಗೆರಾಕೇಂದುಮುಖಿ ನನಗೊಂದೆ ಹಾರವುಯಿದಶ್ರೀ ಕೆಳದಿ ರಾಮೇಶ್ವರ ತಾನೆ ಬಲ್ಲ 3
--------------
ಕೆಳದಿ ವೆಂಕಣ್ಣ ಕವಿ
ಇನ್ಯಾಕೆ ಭವಬಾಧೆ ಇವಗೆ ಪನ್ನಂಗಶಯನನಡಿ ಚೆನ್ನಾಗಿ ಭಜಿಪವಗೆ ಪ ದುರಿತ ದುರ್ಗುಣಗಳನು ತರಿದೊಟ್ಟಿ ನ ಶ್ವರದ ಸಿರಿಯನಾಪೇಕ್ಷಿಸಿದೆ ನಿರುತ ಮಾನಸದಿ ಪರಕೆ ಪರತರವೆನಿಪ ಹರಿಯಂಘ್ರಿ ಎಡೆಬಿಡದೆ ಸ್ಮರಿಸುತ ಮನದೊಳಗೆ ಹರುಷಬರುವವಗೆ 1 ಹೀನಸಂಸಾರದ ನಾನಾ ಸಂಪದವೆಲ್ಲ ಶ್ವಾನನ ಕನಸಿನಂತೇನಿಲ್ಲವೆನುತ ಜ್ಞಾನದೊಳಳವಟ್ಟು ಜಾನಕೀಶನ ಧ್ಯಾನ ಮಾನಸದಿ ಒಲಿಸಿಕೊಂಡಾನಂದಿಸುವವಗೆ 2 ಹೇಸಿಯ ಪ್ರಪಂಚದ್ವಾಸನವನಳುಕಿಸಿ ದಾಸಜನ ಸಂಪದವೆ ಶಾಶ್ವತವೆನುತ ಶ್ರೀಶ ಶ್ರೀರಾಮನ ಸಾಸರನಾಮಗಳ ಧ್ಯಾಸದ್ಹೊಗಳುತ ಸಂತೋಷದಿರುವವಗೆ 3
--------------
ರಾಮದಾಸರು