ಒಟ್ಟು 75 ಕಡೆಗಳಲ್ಲಿ , 31 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ನಲಿನಲಿದು ಬಾ ತ್ರಿಜಗದಾಂಬೆ ಪ.ಮಾನಸದೊಳು ಸುಜ್ಞಾನಬೋಧಳಾಗಿಆತನದೇವಕದಂಬೆ ಅ.ಪ.ವಿದ್ಯಾ ಬುದ್ಧಿ ವಿನಯ ಮಂಗಳಗಳಸಾಧ್ವಿ ನಿನ್ನಲಿ ಬೇಡಿಕೊಂಬೆ 1ನಲಿದೆನ್ನಯ ಜಿಹ್ವಾಗ್ರದಿ ನೆಲಸುತಸುಲಭದೋರೆಯೆ ಸುಲಲಿತವ ಶಿವೆ 2ಧೀರ ಲಕ್ಷ್ಮೀನಾರಾಯಣಾಶ್ರಿತೆ-ಪರಮೇಷ್ಠಿಪರಿರಂಭೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪ್ರಸನ್ನ ಗೋಪೀವಲ್ಲಭ ಕೃಷ್ಣ ಅಂಕಿತಪದ144ಪ್ರಸನ್ನ ಗೋಪೀವಲ್ಲಭ ಕೃಷ್ಣ ಶರಣುನೀ ಸಲಹೊ ಇವಳನ್ನು ಸುಹೃದ ಕರುಣಾಳೊ |ಬೇಸರ ವಿಲ್ಲದೆಪತಿಗುರುಸೇವಾ ಸದ್ರತಿಶ್ರೀಶ ನಿನ್ನಲಿ ಭಕ್ತಿ ಸಜ್ಞಾನ ಬೆಳೆಸೊ ಪಪುಟ್ಟಿದಾರಭ್ಯ ಬಹು ಕಷ್ಟಮೋಹದಲ್ಲಿದ್ದುನೆಟ್ಟಗೆ ಬಂದಿಹಳಿಲ್ಲಿ ನಿನ್ನ ದಯದಿಂದ |ವಿಷ್ಣು ಭಕ್ತಿ, ಜ್ಞಾನ, ವೈರಾಗ್ಯ ಆರೋಗ್ಯಇಷ್ಟ ಸಂಪತ್ತುಗಳ ಇತ್ತು ಪಾಲಿಪುದು || ಪ್ರಸನ್ನ||ನೀಪಾಲು ಬೆಣ್ಣೆಯ ಕೊಂಡು ಸುಜನರ ಕಾಯ್ದಿಗೋಪಿಕಾ ಸ್ತ್ರೀಯರ ಭಕ್ತಿಗೆ ವೊಲಿದಿ |ವಿಪ್ರಸತಿ ಪ್ರೇಮದಲಿ ಕಳುಹಿಸಿದ ಅವಲಕ್ಕಿಶ್ರೀಪನೀ ಸ್ವೀಕರಿಸಿ ಸೌಭಾಗ್ಯ ವಿತ್ತಿ 1ಸೌಂದರ್ಯಸಾರನಮೊ ಜಗದೇಕ ವಂದ್ಯ ವಿಭು,ಸತ್ಯಾ ರಕ್ಮಿಣಿಯುತನೆ ಷಣ್ಮಹಿಷಿಸೇವ್ಯ|ನಿರ್ದೋಷಗುಣಗಣಾರ್ಣವ ಸರ್ವೋತ್ತಮನಮೊಪದುಮಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ 2
--------------
ಪ್ರಸನ್ನ ಶ್ರೀನಿವಾಸದಾಸರು
ಮನವು ನಿನ್ನಲಿ ನಿಲ್ಲಲಿಅನುದಿನನಿನ್ನ ನೆನೆದುಮನವು ನಿನ್ನಲಿ ನಿಲ್ಲಲಿ ಪ.ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ 1ನಿನ್ನಗುಣವರ್ಣಿಸುತ ನಿನ್ನವರ ಮನ್ನಿಸುತನಿನ್ನಪಾವನ್ನಲಾವಣ್ಯ ಧ್ಯಾನಿಸೆ2ಸಂತೋಷ ನಿರಂತರವು ಸಂತ ಜನ ಸಹವಾಸವುಶಾಂತತ್ವವಾಂತು ಮಹಾಂತಧೈರ್ಯದಿ 3ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣಚಿತ್ತದೊಳಿತ್ತೆಲ್ಲ ಹೊತ್ತುಹೊತ್ತಿಗೆ4ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನಧೈರ್ಯದಂತರ್ಯ ಗಾಂಭೀರ್ಯ ಭಾವದಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಧವಮಧುಸೂದನ- ಯಾದವಕುಲರನ್ನ ಯ-|ಶೋದೆ ಕರೆದಳು ಬಾರೆಂದು- ಮುದ್ದಿಸಿ ಮಗನ ಪಸಂಗಡಿಗರನೆಲ್ಲ ಬಿಟ್ಟು ಬಾರೈ ಚೆಲುವ |ಮುಂಗೈಯವಾಕು ಬೆರಳ ಹೊನ್ನುಂಗರ ||ಝಂಗಿಪ ಹುರಿಗೆಜ್ಜೆ ಉಡೆದಾರವನು ಕಂಡು |ಅಂಗನೆಯರು ನಿನ್ನನೊಯ್ವರೊ ||ಕಂಗಳ ಸಿರಿಯೆ ನೀ ಕಲ್ಪವೃಕ್ಷವೆ ಎಂದು |ಡಿಂಗರಿಗರು ಕಂಡರೆ ಬಿಡರೊ ನಿ- ||ನ್ನಂಘ್ರಿಯ ಮೇಲೆ ನೊಸಲನಿಡುವೆ ಕೃಷ್ಣ |ಕಂಗಳ ಸಿರಿಯೆ ಬಾರೋ- ರಂಗಯ್ಯ 1ಬಾಲಕರೊಡನಾಟ ಸಾಕು ಬಾ ಬಾರೈಯ |ನೀಲಾಂಗ ನಿನ್ನ ಮುಂದಲೆ ಮುತ್ತಿನರಳೆಲೆ ||ಕೀಲುಮಾಗಾಯಿ- ಮಾಣಿಕ ಪುಲಿಯುಗರ ಕಂಡು |ಸೋಲ್ವರೊ ನಿನಗೇಸೋ ಸೋಗೆಯರು ||ಶ್ರೀಲೋಲ ನಿನ್ನಲಿ ಕಂಸನ ತುಂಬಿದೊ-|ಡ್ಡೋಲಗದೊಳು ರಕ್ಕಸರು ಪಂಥವನಾಡೆ ||ವೀಳ್ಯವ ಪಿಡಿದೆ ಕೊಲುವೆನೆಂದು ನಿನ್ನಯ |ಕಾಲಿಗೆ ಎರಗುವೆ ಬಾರೊ-ರಂಗಯ್ಯ 2ಬೊಮ್ಮದ ಮರಿಯೆ ವಿಶ್ವವನೆಲ್ಲ ಹೃದಯದೊ-|ಳೊಮ್ಮೆ ತೋರುವನೆಂದು ಕಂಡು ನಾ ಬಲ್ಲೆ ||ಎಮ್ಮ ಮನಕೆ ಅಹಲ್ಲಾದನು ನೀನೆ |ಉಮ್ಮಯದಿಂ ಭಾಗವತರ ಪಾಲಿಸುತಿಪ್ಪ-||ಗಮ್ಯಗೋಚರ ಸಿರಿಪುರಂದರವಿಠಲ ತೊರೆ-|ದಮ್ಮೆಯ ಕೊಡುವೆನು ಬಾರೋ-ರಂಗಯ್ಯ 3
--------------
ಪುರಂದರದಾಸರು
ಶ್ರೀ ಧರ್ಮಪುರಿ ಕ್ಷೇತ್ರ ಪರವಾಸುದೇವ ಸ್ತೋತ್ರ61ಶರಣು ಹೊಕ್ಕೆನೋ ನಿನ್ನ |ಪರವಾಸುದೇವನೇ ಪಾಲಿಸೆನ್ನಲಿ ಕೃಷ್ಣ |ಕರಿರಾಜವರದನೇ ಶರಣ ವತ್ಸಲ ಘನ್ನ |ಭಕ್ತಜನ ಪ್ರಸನ್ನ |ಉರುಗುಣಾರ್ಣವ ವೇದವೇದ್ಯನೆ |ಶಿರಿ ಕರಾಂಬುರುಹಾಚೀತಾಂಘ್ರಿ |ಸರೋಜವಿಧಿಶಿವಾದ್ಯಮರ ವಂದ್ಯನೆ ಸರ್ವಕರ್ತಾಶರಣುಹೊಕ್ಕೆನೋ ನಿನ್ನ|| ಪಮೀನಕೂರ್ಮವರಾಹ| ಚಿನ್ಮಾತ್ರವಪುಷವೀರಭದ್ರ ನೃಸಿಂಹ||ಬಲಿರಾಯಗೊಲಿದು ಕೆಡಹಿದೈತ್ಯ ಸಮೂಹ ||ದುಷ್ಟನೃಪರ ಸೀಳಿ ಬಿಸುಟು ಬ್ರಹ್ಮ | ಕುಲವರವಾಯು ಮಹಾರ್ಹಹನುಮಪ್ರಿಯರವಿ ಸುತ ವಿಭೀಷಣರಿಗೆ ನೀ ಅಭಯನೀಡಿ ಪಾಂಡು -ತನಯರು ದ್ರೌಪದೀ ವಿದುರಉದ್ಧವಇನ್ನುಬಹು ಸಜ್ಜನರಿಗೊಲಿದು ||ಜನಜನೆನಿಸಿದಿ ದೈತ್ಯಮೋಹಕ ಸುರಸುಬೋಧಕ ಬುದ್ಧಶರಣು |ಕ್ಷೋಣಿಯಲ್ಲಿ ಚೋರರಾಜರ ಸದೆದು -ಧರ್ಮಸ್ಥಾಪಿಸಿದಿ ಹೇ ಕಲ್ಕಿ ನಮೋ ನಮೋಪಾಹಿಸಂತತ1ಸರ್ವಗತ ಸರ್ವೇಶ | ಸರ್ವೇಶ್ವರನು ನೀನೇ ಕಾಲವಸ್ತುದೇಶ ||ಸರ್ವತ್ರಒಳಹೊರ ವ್ಯಾಪ್ತನಾಗಿಹ ಶ್ರೀಶ ||ಶ್ರೀತತ್ವ ನಿನ್ನಲಿ ಓತಪ್ರೋತಮಹೇಶ | ಅಕರನೇನಿರ್ದೋಷ ||ಸಚ್ಚಿತ್ ಸುಖಮಯ ಆತ್ಮಾಪ್ರೇದಕ್ಕೂ ಅಮಿತ ಸತ್ಕಲ್ಯಾಣಗುಣನಿಧೇ ||ಸರ್ವಜಗಚ್ಚೇಷ್ಟೆಯನು ಗೈಸುತಿ ಸ್ವಪ್ರಯೋಜನ ರಹಿತಸ್ವಾಮಿಯೇ |ಅಜಿತರುಚಿರಾಂಗದನೇ ಸ್ವಾಸ್ಯನೇ ಸರ್ವಭೂತಾಂತರಾತ್ಮನೇ ||ಅಚ್ಯುತನೇ ಸಂಪೂರ್ಣ ಕಾಮನೇ ಅತಿಜ್ಞಾನ ವೈರಾಗ್ಯ ಸಂಪತ್‍ದಾತಕರುಣಿ | ಗುರುವೇಂಕಟ || ಶರಣು || 2ಧರ್ಮಪುರಿಯಲ್ಲಿರುತ್ತಿ | ಶೇಷಶಯನನೇನಮೋ ಪರವಾಸುದೇವ ಪ್ರಮೋದಿ ||ಮದ್ದೋಷ ಕಳೆದು ಸದ್ಧರ್ಮದಲಿ ಇಡು ದಯದಿ |ವೃಷಾತಪಿಯೇ ಕಪಿತನಾಮಕನಮೋ ಆನಂದಿ ನಂದಾ ನಂದನ ನಂಹಿಜಗದಾಧಾರ ಶ್ರೀಕೂರ್ಮನಭ ಅರ್ಕಾದಿ ಧಾರಕ ಶಿಂಶುಮಾರನೇಸಾಗರವು ಭೂಮಿಯನು ನುಂಗದೇ ಹಿಂದೆ ಸೆಳೆದು ಧರೆಯರಕ್ಷಿಪ ||ಸಾಗರದಲ್ಲಿರುವ ವಡವಾವತ್ತಅಗ್ನಿನೀನು ಸವತ್ರ ಹರವು |ಮುಖ್ಯ ರಕ್ಷಕ ವೇಧತಾತ ಪ್ರಸನ್ನ ಶ್ರೀನಿವಾಸ ಶ್ರೀಪತಿಗರುಡಕೇತನಶರಣು ಹೊಕ್ಕೆನೋನಿನ್ನ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸ ಕಲ್ಯಾಣ (ಅಣು)34ಮೇರು ಸುತ ಗಿರಿವಾಸ |ಶರಣಾದೆ ನಿನ್ನಲಿ ವಿಶ್ವಜನ್ಮಾದಿಕರ್ತನಿರ್ದೋಷ|||ಶ್ರೀ ಶ್ರೀನಿವಾಸ ||ವಿಷ್ಣು ಸರ್ವೋತ್ತಮ ಸಾಕ್ಷಾತ್ |ರಮಾದೇವಿ ತದಂತರಾ |ತದಧೌವಿಧಿವಾಣ್ಯೌಚ ತತ್ವವನು ಪ್ರತ್ಯಕ್ಷ ಭೃಗುಗೆ |ತಿಳಿಸಿ ಲಕ್ಷ್ಮಿಯ ಇಳೆಯ ಜನರಿಗೆ ಒಲಿಯೆ ಕಳುಹಿಸಿ |ವ್ಯಾಳಗಿರಿವಲ್ಮೀಕಪೊಕ್ಕಿ ಶ್ರೀವತ್ಸಶರಣು |ಶರಣು ಹೇ ಸರ್ವ ಹೃದ್ಗುಹಾಂತಸ್ಥವಿಶ್ವ ಪವೃಷಭಅಂಜನಶೇಷ|ವೇಂಕಟಾದ್ರಿಯ ನೆನೆಯೆ ಪಾಪವಿನಾಶ |ಶ್ರೀಸ್ವಾಮಿತೀರ್ಥದ ದಕ್ಷಪಾಶ್ರ್ವಪರೇಶ ||| ಶ್ರೀ ಶೇಷಾಚಲೇಶ ||ಅರ್ಚಿಪರ ಸಂರಕ್ಷಿಪುದು ನಿನ್ನಪಣವು ಆದುದರಿಂದ ಗೋಪಾನ |ಆಸಿಯತಲೆಯಲಿ ತಡೆದು ಗೋವನು ಕಾಯ್ದ _ಕರುಣಿಯೆ ಭಕ್ತವತ್ಸಲ |ತುಚ್ಛಗೋಪನು ಭಯದಿ ಅಸುಬಿಡೆಚೋಳರಾಯಗೆ ಶಾಪವಿತ್ತು |ಅಚ್ಚುತನೆ ನೀದೇವ ಗುರುವಿನ ಸೇವೆಕೊಂಡು ನಿನ್ನರೂಪ |ಸ್ವಚ್ಛಚಿನ್ಮಯ ಭೂವರಾಹನ ಸಹವಿನೋದ ಲೀಲೆಮಾಡಿ |ಪ್ರೋಚ್ಚನಂದದಿ ಕ್ಷೇತ್ರ ಸಹಬಕುಳಾ ಯಶೋದೆಯ -ಪಾಕಕಾಗಿ ಸ್ವೀಕರಿಸಿ ಹೇ ದಯಾನಿಧೇ ನಿತ್ಯತೃಪ್ತ 1ಅಸಮ ಸತ್ಯವಾಗೀಶ |ಜಗನ್ಮಾತೆಯೆಂದು ಪೇಳಿದಂತೆ ಆಕಾಶ |ಕಂಡಪದ್ಮದಿ ಪದುಮ ಸುಮುಖವಿಲಾಸ |ಶಿಶುವಕೊಂಡಳು ಧರಣಿ ಬಹು ಸಂತೋಷ ||| ದಿಂದ ವಿಹಿತ ಆಶ ||ಧರಣಿದೇವಿ ಆಕಾಶರಾಜನ ಸುತೆಪದ್ಮಾವತಿಯೆಂಬ ನಾಮದಿ |ಪುರಿಯ ಹೊರಗೆ ಪುಷ್ಪವನದಲಿ ಸಖಿಯರೊಡನೆ ಆಡುವಾಗ |ನಾರದನು ಬಹು ವೃದ್ಧರೂಪದಿ ಬಂದು -ಹಸ್ತರೇಖೆ ನೋಡುತ |ಶ್ರೀರಮಾಲಕ್ಷಣವ ಕಾಣುತ ಬ್ರಹ್ಮದೇವನ ತಾಯಿ ಅಂಗಿಯು |ಮಾರಜನಕನೆ ಪತಿಯು ಎಂದು ಪೇಳಿತೆರಳೆ ಶಿರಿಯ ಸ್ಮರಿಸುತ |ಏರಿ ಕುದುರೆಯ ವನದಿ ಪದ್ಮಾವತಿ ಸಂಗಡ -ಆಟವಾಡಿದಿ ಹೇ ದಯಾನಿಧೇ ಶ್ರೀಶಸ್ವರಮಣ 2ಧರಣಿಯೊಡನೆ ಸಂವಾದ |ಮಾಡೆ ಬಕುಳಾ ಪೋಗೆ ನೀನು ಪುಳಿಂದ |ವಿಧಿವತ್ಸರುದ್ರನು ದಂಡ ಗುಲ್ಮಬ್ರಹ್ಮಾಂಡ |ಹಾರ ಗುಂಜಾಕಂಬುವೇಷದಿ ಪೋದಿಯೋ ಮುದದಿಂದ ||| ಕಣಿಪೇಳ್ವ ಚೆಂದ ||ಧರಣಿಪದ್ಮಗೆ ಕಣಿಯಪೇಳಿ ಮದುವೆ ನಿಶ್ಚಯಮಾಡಿ ಬಂದೆಯೋ |ಭರದಿಶುಕಆಕಾಶರಾಜ ಲಗ್ನಪತ್ರವಕೊಡಲು ಬ್ರಹ್ಮ-ಗರುಡಶೇಷಶಿವಾದಿಸುರ ಮುನಿಜನರ ಬಕುಳಾ ಲಕ್ಷ್ಮೀಸಹ ನೀ |ಪೊರಟುಮಾರ್ಗದಿ ಶುಕಮುನಿಯ ನೈವೇದ್ಯ ಉಂಡು ಜನರತೃಪ್ತಿಸಿ |ಸೇರಿಪುರಿಯ ಅಜರ ಮಂದಿರ ಪೋಲ್ವ -ಮನೆಯಲಿ ಪದ್ಮಾವತಿಗೆ ಮಾಂಗಲ್ಯ ಧರಿಸಿದಿ |ಸರಸಿಜಾಸನತಾತಪ್ರಸನ್ನ ಶ್ರೀನಿವಾಸನೆವಿಶ್ವಪಾಲಕ ಹೇ ದಯಾನಿಧೇ ಶರಣು -ಶರಣು ಹೇ ಸೌಭಾಗ್ಯದಾತಾ ಪ. 3||ಶ್ರೀ ಪ್ರಸನ್ನ ಅಣು ಶ್ರೀನಿವಾಸ ಕಲ್ಯಾಣ ಸಂಪೂರ್ಣ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶೇಷದೇವರು73ಶೇಷದೇವ ಶೇಷದೇವ ವಾರುಣೀಶಪಾಹಿಮಾಂ ಶೇಷದೇವಪಷಡ್ಗುಣೈಶ್ವರ್ಯಪೂರ್ಣ ಕೇವಲಾನಂದರೂಪಜಡಜಾಕ್ಷ ಜಯೇಶನಿಗೆಪರ್ಯಂಕನಮೋ ನಮೋ1ದ್ಯುಭ್ವಾದಿಗಳಿಗಾಧಾರ ವೇದವತೀಶಕೂರ್ಮವಿದ್ಯುನ್ ರಮಣ ಕೂರ್ಮರ ಒಲುಮೆ ನಿನ್ನಲಿ ಸದಾ 2ಗಿರಿಸಿಂಧುಯುತಧರೆ ಬ್ರಹ್ಮಾಂಡ ಸರ್ವವಧರಿಸಿರುವೆ ಫಣಿಯ ಮೇಲೆ ಶರ್ಷಪದಂತೆ ನೀನು 3ಖದ್ರೂಜಾದಿ ವಿಷ ಸರ್ವದೋಷವೆನಗೆ ತಗಲದಂತೆಕರ್ದಮರ ಸುತನಲ್ಲಿ ಭಕ್ತಿಜ್ಞಾನ ಸತತವೀಯೊ 4ಶ್ರಷ್ಟಿಧರ ಶುಕ್ಲವರ್ಣ ಸಹಸ್ರಫಣಿ ನೀಲವಾ¸ Àಸೃಷ್ಟಿಕರ್ತ ವೇಧತಾತ ಪ್ರಸನ್ನ ಶ್ರೀನಿವಾಸನ ತೋರೊ 5
--------------
ಪ್ರಸನ್ನ ಶ್ರೀನಿವಾಸದಾಸರು
ಹೇರೊಡಲ ತವ ಪಾದವಾರಿಜದ್ವಯ ಮನೋ -ನೀರಜಾಲಯದಿ ಭಜಿಪೆÉ ಪಸಾರಿದವರಘಸ್ತೋಮ ದೂರ ಓಡಿಸಿ ಬಯಕಿಪೂರೈಸಿ ಪೊರೆವೊದಾತಾ- ಖ್ಯಾತಾಅ.ಪಪ್ರದ್ಯುಮ್ನ ಪೌತ್ರಸುತ ಮುದ್ದುಗಣರಾಯಾ 1ಮಗ್ನವಾಗಲಿ ಚಿತ್ತ - ಭಗ್ನದಂತನೆ ನಿನ್ನಲಿಲಗ್ನಮನವಿತ್ತು ನಿರ್ವಿಘ್ನಕೃತಿನುಡಿಸೋ 2ಪ್ರೀತಿಯಿಂದಲಿ ಸ್ತುತಿಪೆ ನೀತಗುರುಜಗ -ನ್ನಾಥವಿಠಲ ಪಾದದೂತ ನೀ ಬಹು ಖ್ಯಾತಾ 3
--------------
ಗುರುಜಗನ್ನಾಥದಾಸರು