ಒಟ್ಟು 410 ಕಡೆಗಳಲ್ಲಿ , 68 ದಾಸರು , 344 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾದನಾ ವತ್ಸವ ಹರಿ ಕಾದನಾ | ಮಾಧವ ಪ ವೇದವೇದ್ಯ ಸಾಧುವಿನುತÀರಾದಿಕಾ ರಮಣ ಕೃಷ್ಣ ಅ.ಪ. ಎಳೆಯ ಗರಿಕೆ ಇರುವ ಸ್ಥಳದಿ ನೆರೆದು ವತ್ಸಗಳನೆ ನಿಲಿಸಿ || ಕೊಳಲು ಕೈಲಿ ಪಿಡಿದು ಮುರಲಿಗಾನ ಮಾಡುತ್ತಾ 1 ತನ್ನ ಶೆರಗು ತೆಗೆದು ಕೃಷ್ಣ ಕರುಗಳನ್ನೆ ಬೆನ್ನೊರಿಸಿ | ತಿನ್ನು ತಿನ್ನು ಪುಲ್ಲು ಯೆನುತ ಘನ್ನ ಕರುಗಳೊತ್ತುತ್ತ 2 ಉಡುಗಳಂತೆ ಕರಗಳು ನಡುವೆ ಚಂದ್ರ ಧರೆಯೊಳು || ಪೊಡವಿಯೊಳಗೆ ಬೆಳಗಲು ಆ ಮೃಡನು ಕೊಂಡಾಡಲು3 ಒಂದು ತಿಂಗಳ ಕರುಗಳು ಇಂದಿರೇಶನು ಮೇಯಿಸಲು | ಬಂದು ವರುಷ ಕರುಗಳಂತೆ ಆನಂದದಿಂದ ಬೆಳೆದವು 4 ಕನಕ ರಜತ ಸರಪಳಿ ದನಕರುಗಳ ಕೊರಳಲ್ಲಿ | ಇಣಕುವಂತರಳೆಲೆ ಅನೇಕ ನಾದ ಬೆರಳಲಿ ಮಾಡುತ5 ಮರದ ನೆರಳು ವೊಳಗೆ ಕೃಷ್ಣ | ಮೆರೆದು ವತ್ಸಗಳನೇ ನಿಲಿಸಿ | ಕರೆದ ಪಾಲು ಕರದಿ ಪಿಡಿದು ನೆರೆದು ಬಾಯಲುಣಿಸುತ6 ಅಜಗಳ್ಹಾಂಗ ಇದ್ದ ಕರುಗಳು ಗಜಗಳ್ಹಾಂಗ ಆದವು | ತ್ರಿಜಗದೊಡೆಯ ವಿಜಯವಿಠ್ಠಲ ವ್ರಜಕೆ ದೊರೆಯಾಳುವ | 7
--------------
ವಿಜಯದಾಸ
ಕಾಯ ರಾಘವೇಂದ್ರ ರಾಘವೇಂದ್ರ ದುರಿತೌಫ ಪರಿಹರಿಸಿ ರಾಘವೇಷನ ಪಾದಮೌಘ ನುತಿಪ ಗುರು ಪ ಇಂದು ಕಿರಣಪೊಲುವ ಪಾದ ಇಂದು 1 ಸಾಕುವುದು ಎನ್ನನೇಕ ಮಹಿಮ ಗುರು2 ಸಿರಿವಿಜಯವಿಠ್ಠಲ ಪರದೈವವೆ ಯೆಂದು ಸ್ಥಿರವಾಗಿ ಸ್ಥಾಪಿಸಿ ಮೆರೆದ ನಿರ್ಮಳಕಾಯ 3
--------------
ವಿಜಯದಾಸ
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾವದು ಎನ್ನನುದಿನಾ ರಂಗಾ| ಕಾವದು ಕಾವದು ಎನ್ನನುದಿನಾ | ಭಾವಿಕ ಜನರ ನಿಧಾನಾ ಪ ಜಲದಲಿ ಕರಿಯಾ ಪಿಡಿದ ಮಕರಿಯಾ | ಸೀಳಿದ ಯಾದವರಾಯಾ | ಇಳೆಯೊಳು ಗಿರಿಯಾ ಧರಿಸಿದೆ ಗರಿಯಾ | ಕುಲ ಅರಿನಂದನ ಪ್ರೀಯಾ 1 ರಮಣನೆ ಸಿರಿಯಾ ಲಲನೆಗೆ ಸೀರಿಯಾ | ಸಮಯಕ ನಿತ್ತ ಅನೇಕ | ಕಮನೀಯ ಕಾಯಾ ದೇವ ನೀ ಕಾಯಾ | ಜನಕನೇ ವ್ಯಾಪ್ತ ತ್ರಿಲೋಕಾ 2 ಸರಸಿಜನಯನಾ ಸಾಸಿರ ನಯನಾ | ಸೋದರ ದೇವ ದೇವೇಶಾ | ವರಸದ್ವದನಾ ಈ ರೆರಡೊದ ನಾ | ವಂದಿತ ಚರಣಾ ಶ್ರೀಯೀಶಾ3 ಭಕುತರಬಂಧು ಕೈರವ ಬಂಧು ಶೇಖರಧೇಯ ಮುಕುಂದಾ | ಸಕಲಾಧಾರಾ ದಿನೊದ್ಧಾರಾ | ದೇವಕಿ ದೇವಿಯ ಕಂದಾ4 ಸುಜನರ ಪಕ್ಷಾ ಕುಜನ ವಿಪಕ್ಷಾ | ಶ್ರೀ ವತ್ಸಾಂಕಿತ ದೇವಾ | ಗಜವರ ವರದಾ ಯದುಕುಲ ವರದಾ | ನವಮರ್ಧನ ಜಗಜೀವಾ5 ಕಾಳಿಯ ಸರ್ಪಾ ಮದಹರ ಸರ್ಪಾ| ಶನವಾಹನ ಗೋವಿಂದಾ | ಶ್ರೀ ಲಲನೀಯಾ ಸದ್ಭಾವನೀಯಾ | ಪೂರಿತ ಪರಮಾನಂದಾ6 ಸಿಂಧು ಸಿಂಧು | ವಿಗಾಗಿಹೆ ಕುಂಭಜ ನೀನು | ಹರಣ ರಂಗಾ | ಧೀರನೇ ಭಜಕರ ಧೇನು7 ನವನೀತ ಚೋರಾ ನಿಗಮದ ಚೋರಾಂ | ತಕ ಗೋಕುಲ ವಿಹಾರಾ | ಭವ ಪರಿಹಾರಾ ಕೌಸ್ತುಭಧಾರಾ | ಮಹಿಪತಿಸುತ ಮನೋಹಾರಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೃಷ್ಣಾ - ಶ್ರೀಕೃಷ್ಣಾ ಪ ಕೃಷ್ಣ ಕೃಷ್ಣ ಹರಿವೃಷ್ಟಿ ಕುಲೋದ್ಭವಸೃಷ್ಟಿ ಕರ್ತ ಹೃತ್ಪುಷ್ಕರ ನಿಲಯ ಅ.ಪ. ವಲಲ ಸಂರಕ್ಷಕ | ಅಲವ ಭೋದನುತಕಲಿಮಲ ಕಲುಷಹ | ನಳಿನೇಕ್ಷಣಪಾಹಿ 1 ನಂದನ ಕಂದ ಮು | ಕುಂದನೆ ಮಾಧವಸಿಂಧು ಶಯನ ಕೃಷ್ಣ | ಮಂದರೋದ್ಧಾರಿ 2 ಕರ | ಪರಿಗ್ರಹಿಸಿದನೇ 3 ಚಿತ್ತಜಾರಿ ಸಖ | ವಿತ್ತವನೊಲ್ಲೆನೊಭೃತ್ಯನ ಗೈ ಸ | ರ್ವೋತ್ತಮ ದೇವ 4 ಪಾಪಿಯು ಎನೆ ನಾ | ಶ್ರೀಪತಿ ನಿನ್ನನುನಾಪೊಂದಲು ಆ | ಪಾಪೆಲ್ಲಿ ಹುದೋ 5 ಕಾಮಪಿತನೆ ಸ | ದ್ಭೂಮ ಗುಣಾರ್ಣವಪಾಮರ ಮನುಜನ | ಪ್ರೇಮದಿ ಸಲಹೋ6 ಶಿರಿ ಸಹ ಗುರು ಗೋ | ವಿಂದ ವಿಠಲ ಹೃತ್‍ಸರಸಿಜ ಪೀಠದಿ | ದರುಶನ ವೀಯೋ7
--------------
ಗುರುಗೋವಿಂದವಿಠಲರು
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕ್ಷಣದಲಿ ಸೌಖ್ಯ ಕ್ಷಣದಲಿ ದುಃಖ ಬಣಗು ಸಂಸಾರದಿ ಎಣಿಸಿದರೆ ಪ ಕೊಟ್ಟರೆ ತಂದರೆ ಸಂತೋಷ ಬಿಟ್ಟರೆ ಕೊಡದಿರೆ ಬಲುರೋಷ 1 ಎರೆಡು ಘಳಿಗೆ ಬಹಳಾಯಾಸ ಏನು ಇಲ್ಲ ಕೊನೆಗೆ ನಿರಾಶ 2 ತಾನೇಕಾದಶಿ ಪಿಕ್ನಿಕ್‍ವೂಟ ಭಾನುವಾರ ಇಸ್ಪೇಟಾಟ3 ಕೋಟುಷರಟು ಜುಬ್ಬ ಇಜಾರು ನೋಟಕೆ ಮೇಲೆ ಕಾರ್ಬಾರು 4 ಕರುಡು ಕುಂಟ ಮೂಕರು ಮಾತ್ರ ಸತ್ಪಾತ್ರ 5 ಅತಿಜಾರಿಗೆ ಕೆಂಪು ಬೆಂಡೋಲೆ 6 ಹಾದರಗಿತ್ತಿಗೆ ದೂದ್‍ಫೇಢ ಸಾಧುಸ್ತ್ರೀಗನ್ನವು ಬೇಡ 7 ಹಿರಿಯರ ಮಾತಿಗೆ ನಾನ್ಸೆನ್ಸು ದುರುಳರ ಬೋಧೆಗೆ ತಾ ಒಳ್ಳೆಮನಸು 8 ಮೋಕ್ಷವಿದ್ಯೆ ಕೆಲಸಕೆ ಬಾರದು ಕುಕ್ಷಿಂಬರ ವಿದ್ಯೆ ಬಲು ದೊಡ್ಡದು 9 ಹರಿಕಥೆ ಕೇಳ್ವುದು ಬೇಜಾರು ಹರಟೆ ಹರಟುವುದು ಬಲು ಜೋರು 10 ಪರರ ನೋಡಿ ನನ್ನಾಚರಣೆ ಗುರುರಾಮ ವಿಠಲನಲಿಲ್ಲ ಸ್ಮರಣೆ 11
--------------
ಗುರುರಾಮವಿಠಲ
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಕ್ಷೇತ್ರವೆಂದರೆ ಉಡುಪಿ ಕ್ಷೇತ್ರ ಪ ಸೂತ್ರಾಂತರಾತ್ಮ ಹರಿ ಯಾತ್ರೆ ಮಾಳ್ಪನಿಗೆ ಅ.ಪ. ವಾಸುದೇವ ಮುನಿಯು ಪುಟ್ಟಿ ಪಾಜಕದಲ್ಲಿವಾಸುದೇವ ಕೃಷ್ಣನ್ನ ನಿಲ್ಲಿಸಿಹರೋ ||ಕಾಸು ವೀಸಕೆ ವರದನಲ್ಲವೊ ಭಕುತಿಪಾಶಗಳಿಗೇ ಒಲಿವ ಶ್ರೀ ಕೃಷ್ಣ ನಿಲಯಾ 1 ವಟುತನ ದೊಳಾಶ್ರಮ ಸ್ವೀಕರಿಸಿ ಸನ್ಯಾಸಿಅಷ್ಟ ಮಠದವರಿಂದ ಇಷ್ಟ ಪೂಜೆಗಳಾ ||ಸೃಷ್ಟಿಯೊಳಗಪ್ರತಿಮ | ಕೃಷ್ಣಕೊಳ್ಳುತ ಮನಮುಟ್ಟಿ ಭಜಿಸುವರ | ಇಷ್ಟಾರ್ಥಗಳ ಕೊಡುವಾ 2 ದಿನಕನೇಕಲಂಕಾರ | ಅನವರತ ಸಂಪೂಜೆಎಣಿಸಲೆನ್ನಳವಲ್ಲ ರುಕುಮಿಣಿಯನಲ್ಲಾ ||ದೀನನಾಥ ನಾಥ ಗುರು | ಗೋವಿಂದ ವಿಠ್ಠಲನಮನದಣಿಯ ನೋಳ್ಪುದಕೆ | ಘನವಾದ ಸದನಾ 3
--------------
ಗುರುಗೋವಿಂದವಿಠಲರು
ಖಗವರಧ್ವಜ ವಿಠಲ ಪೊರೆಯ ಬೇಕಿವನ ಪ ಭಾಗವತ ಸುಶ್ಲೋಕ್ಯ ಬಗೆಬಗೆಯಲಿಂದಿವನಮಿಗಿಲಾಗಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತಪತಿಯೊಲಿಮೆಗಳು | ಕತ್ತರಿಸಿ ಪೋಗಿ ಕೃತಕೃತ್ಯತಾನೆಂಬ ಉ | ತ್ಕøಷ್ಟಮತಿಯೊದಗೇಕೃತಿವಾಸನ ತಾತ | ಇತ್ತುದಕೆ ಸಂತೃಪ್ತಿಪೊತ್ತು ತವದಾಸ್ಯವನು | ಅರ್ಥಿಸುವ ಹರಿಯೇ 1 ಪೋರನಾ ಮಯಕಳೆದು | ತಾರತಮ್ಯ ಜ್ಞಾನ ಮೂರೆರಡು ಭೇದಗಳ | ಸಾರವನೆ ಅರುಹೀಕಾರಣಿಕ ನೀನೆ ಉ | ದ್ದಾರವನೆ ಮಾಡೊ ಹರಿಬೇಕೊಂದ ಪ್ರಾರ್ಥಿಪೆನೊ | ಕಾರುಣ್ಯ ಮೂರ್ತೇ 2 ಅನೇಕ ಜನ್ಮದಲಿ | ಹೀನಯೋನಿಲಿ ನೊಂದುಜ್ಞಾನ ಸಾಧನ ವಿರದೆ | ದೀನ ನಾದವಗೇಮಾನ ನಿಧಿ ಶಾಸ್ತ್ರ ಸಂ | ಧಾನ ವೀಯುತ ತ್ವರ್ಯಧ್ಯಾನ ಸಾಧನ ವೀಯೊ | ಪ್ರಾಣಾಂತರಾತ್ಮಾ 3 ಲೌಕಿಕವನೆಲ್ಲ ವೈ | ದೀಕ ವೆಂದೆನಿಸೊ ಹರಿಕಾಕು ಸಂಗವ ಕೊಡದೆ | ನೀ ಕೊಡೊ ಸತ್ಸಂಗಏಕಮೇವನೆ ಸ್ವಾಮಿ | ಮಾಕಳತ್ರನೆ ನಿನ್ನ_ನೇಕ ಬಗೆಯಲಿ ತುತಿಪ | ವಾಕ್ಸಿದ್ಧಿ ಈಯೋ 4 ಪದ್ಮನಾಭನೇ ಹೃ | ತ್ಪದ್ಮದಲಿ ತವರೂಪಸಿದ್ಧಿಸುತ ಸಂಚಿತವ | ಪ್ರಧ್ವಂಸ ಗೈದೂಅದ್ವೈತ ತ್ರಯದರಿವು | ಬುದ್ದಿಗೆ ನಿಲುಕಿಸೆನೆಹೃದ್ಯ ಗುರು ಗೋವಿಂದ ವಿಠಲ ಬಿನ್ನವಿಪೇ 5
--------------
ಗುರುಗೋವಿಂದವಿಠಲರು