ಒಟ್ಟು 68 ಕಡೆಗಳಲ್ಲಿ , 33 ದಾಸರು , 64 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಯ ನಿವಾರಣವು ಶ್ರೀ ಹರಿಯ ನಾಮ |ಜಯಪಾಂಡುರಂಗವಿಠಲ ನಿನ್ನ ನಾಮ ಪಧಾರಿಣೀದೇವಿಗಾಧಾರವಾಗಿಹ ನಾಮ |ನಾರದರು ನಲಿನಲಿದು ನೆನೆವ ನಾಮ |ಘೋರಪಾತಕಿ ಅಜಾಮಿಳನ ಸಲಹಿದ ನಾಮ |ತಾರಕವು ಬ್ರಹ್ಮ - ಭವರಿಗೆ ನಿನ್ನ ನಾಮ 1ಮೊರೆಯಲಾಲಿಸಿ ಮುನ್ನ ಗಜವ ಸಲಹಿದ ನಾಮ |ಕರುಣದಿಂ ದ್ರೌಪದಿಯ ಕಾಯ್ದ ನಾಮ |ಮರುಗುತಿಹ ಧ್ರುವನ ಉನ್ನತನ ಮಾಡಿದ ನಾಮ |ಪರತತ್ತ್ವ ಇಹಕಲ್ಲವೇ ನಿನ್ನ ನಾಮ 2ಚರಣದಲಹಲ್ಯೆಯನು ಸೆರೆಯ ಬಿಡಿಸಿದ ನಾಮ |ಕರುಣದಲಿ ಪ್ರಹ್ಲಾದನನು ಕಾಯ್ದ ನಾಮ |ತೊರೆಯಲಕ್ರೂರನಿಗೆ ನಿಜವ ತೋರಿದ ನಾಮ |ಸ್ಮರಿಸ ಜನರಿಗೆ ಸಮಸ್ತವನಿತ್ತ ನಾಮ 3ಚಂದ್ರಶೇಖರ ಗಿರಿಜೆಗೊರೆದ ಸಿರಿಹರಿನಾಮ ||ಬಂದಾ ವಿಭೀಷಣನ ಪಾಲಿಸಿದ ನಾಮ |ಕಂದಮುಚುಕುಂದನಿಗೆ ಕಾಮಿತವನಿತ್ತ ನಾಮ |(ಸಂದ ಪಾಂಡಪಕ್ಷ ಪಾವನವು ನಾಮ ) 4ಅಖಿಳವೇದಪುರಾಣ ಅರಸಿಕಾಣದ ನಾಮ |ಸಕಲಯೋಗಿ - ಜನಕೆ ಸೌಖ್ಯ ನಾಮ ||ಪ್ರಕಟಿಸಲು ಜಗವ ಪಾವನವ ಮಾಡಿದ ನಾಮ |ರುಕುಮಿಣೀಯರಸ ವಿಠಲ ನಿನ್ನ ನಾಮ 5ಭಕ್ತಿಯಲಿ ನೆನೆವರನು ಎತ್ತಿ ಸಲಹುವ ನಾಮ |ಮುಕ್ತಿ ಮಾರ್ಗಕೆ ಯೋಗ್ಯಹರಿ ನಿನ್ನ ನಾಮ |ಎತ್ತರಕೆ ಏರಿಪುದು ಸ್ವಾಮಿ ನಿನ್ನಯ ನಾಮ |ಚಿತ್ತಜನ ಪೆತ್ತ ಶ್ರೀ ಹರಿಯ ನಾಮ 6ವಾರಿಜಾನನೆ ತುಳಸಿಗೊಲಿದ ಹರಿನಾಮ ಕಾ - |ವೇರಿ ಮಧ್ಯದಲಿ ನೆಲಸಿದ ನಿನ್ನ ನಾಮ ||ಕ್ಷೀರಸಾಗರದಲ್ಲಿ ಶಯನವಾಗಿಹ ನಾಮ |ನಾರಾಯಣಾ ಕೃಷ್ಣಹರಿ ನಿನ್ನ ನಾಮ7ಹೊಂದಿದ್ದ ಭಕ್ತವೃಂದವ ಸಲಹಿದಾ ನಾಮ |ತಂದು ಅಮೃತವ ಸುರರಿಗೆರೆದ ನಾಮ ||ಅಂದಂಬರೀಷನನು ಕಾಯ್ದ ಶ್ರೀ ಹರಿನಾಮ |ತಂದೆ ಪುರಂದರವಿಠಲಹರಿ ನಿನ್ನ ನಾಮ8
--------------
ಪುರಂದರದಾಸರು
ವೃಂದಾವನವೇ ಮಂದಿರವಾಗಿಹಇಂದಿರೆಶ್ರೀ ತುಳಸಿ ||ನಂದನಂದನ ಮುಕುಂದಗೆ ಪ್ರಿಯಳಾದ |ಚೆಂದದ ಶ್ರೀ ತುಳಸಿ ಪತುಳಸಿಯ ವನದಲಿ ಹರಿಯಿಹನೆಂಬುದ |ಶ್ರುತಿಸಾರುತಲಿದೆಕೇಳಿ|ತುಳಸೀದರ್ಶನದಿಂದ ದುರಿತಗಳೆಲ್ಲವುದೂರವಾಗುವುವುಕೇಳಿ||ತುಳಸೀ ಸ್ಪರ್ಶವ ಮಾಡೆ ದೇಹ ಪಾವನವೆಂದುತಿಳಿದಿಲ್ಲವೇನು ಪೇಳಿ |ತುಳಸೀಸ್ಮರಣೆ ಮಾಡಿ ಸಕಲೇಷ್ಟಗಳ ಪಡೆದುಸುಖದಿಂದ ನೀವು ಬಾಳಿ 1ಮೂಲಮೃತ್ತಿಕೆಯನು ಮುಖದಲಿ ಧರಿಸಲುಮೂಲೋಕ ವಶವಹುದು |ಮಾಲೆ ಕೊರಳಲಿಟ್ಟ ಮನುಜಗೆ ಮುಕ್ತಿಯಮಾರ್ಗವು ತೋರುವುದು ||ಕಾಲಕಾಲಗಳಲಿ ಮಾಡುವ ದುಷ್ಕರ್ಮಕಳೆದು ಬೀಸಾಡುವುದು |ಕಾಲನ ದೂತರ ಕಳಚಿ ಕೈವಲ್ಯದಲೀಲೆಯ ತೋರುವುದು 2ಧರೆಯೊಳು ಸುಜನರ ಮರೆಯದೆ ಸಲಹುವವರಲಕ್ಷ್ಮಿ ಶ್ರೀ ತುಳಸಿ |ಪರಮಭಕ್ತರ ಪಾಪಗಳನೆಲ್ಲ ತರಿದು ಪಾ-ವನಮಾಡುವಳು ತುಳಸಿ ||ಸಿರಿಆಯು ಪುತ್ರಾದಿ ಸಂಪದಗಳನಿತ್ತುಹರುಷವೀವಳು ತುಳಸಿ |ಪುರಂದರವಿಠಲನಚರಣಕಮಲಗಳಸ್ಮರಣೆಯೀವಳು ತುಳಸಿ 3
--------------
ಪುರಂದರದಾಸರು
ಶ್ರೀತುಳಸಿ162ಶ್ರೀ ತುಳಸಿ ಮಹಿಮೆಯನು ಪೊಗಳಲಳವಲ್ಲ ಶ್ರೀನಾಥ ನಾರಾಯಣನ ಅರ್ಚನೆಗೆ ಸರ್ವದಾಪ್ರೀತಿಕರಳಾಗಿ ರಾಜಿಪಳು ಕಲಿಯುಗದಲ್ಲಿ ನೋಂತವರಭಾಗ್ಯವೆಂತೊ ಪ .ಶ್ರೀಮದಾರ್ಜಿತ ಕ್ಷೀರವಾರಿಧಿಯ ಮಥಿಸುತಿರೆಆ ಮಹಾವಿಷ್ಣುವಿನ ನೇತ್ರದಿಂದಲಿ ಹೊರಟಪ್ರೇಮಜಲದುದ್ಭವಿಸಿ ನಳನಳಿಸಿ ದಿವ್ಯ ಆಮೋದ ಪೂರ್ಣಳಾಗಿಭೂಮಿ ಪಾವನವ ಮಾಡುತಲಿ ಭೂನಿರ್ಜರರಧಾಮಧಾಮಗಳಲ್ಲಿ ವೃಂದಾವನದಿ ನೆಲಸಿಕಾಮಿತ ಫಲವನೀವ ಕಲ್ಯಾಣಿ ಕೃಷ್ಣನಿಗೆ ನೇಮದಿಂ ಪ್ರಿಯಳಾದ 1ಈ ಮನುಜ ದೇಹದಲಿದಾವಪ್ರಾಣಿಯು ಪಿತೃಸ್ತೋಮವನ್ನುದ್ಧರಿಪೆನೆಂದರೆ ಸುಲಭ ಸಾಧ್ಯಕೋಮಲ ದಳವನೊಂದು ತಂದು ಮಾಧವನಚರಣತಾಮರಸಕರ್ಪಿಸುವದುತಾ ಮುನ್ನ ಮಾಡಿದಘ ಪಂಚಕಗಳೋಡಿದವುಸಾಮಾನ್ಯವಲ್ಲ ತುಳಸಿಯ ವನವಸೋಂಕಿಬಂದಾ ಮರುತದಿಂದ ದೇಶ ಗ್ರಾಮಗಳು ಪಾವನವುಧೀಮಂತ ಮಾನ್ಯಳಾದ 2ತುಳಸಿ ನೆಳಲಲ್ಲಿ ಅಂಕುರಗಳೆದ್ದಲ್ಲಿ ಪಿತೃಗಳಿಗನ್ನವಿತ್ತರಕ್ಷಯಫಲವು ಊಧ್ರ್ವಪುಂಡ್ರತಳದ ಮೃತ್ತಿಕೆಯಲಿಟ್ಟರೆ ಕೋಟಿ ತೀರ್ಥಗಳ ಮುಳುಗೆದ್ದಫಲ ಸಿದ್ಧವುನಿಲಯದಲಿ ಪತ್ರಮೃತ್ತಿಕೆಕಾಷ್ಠವಿರಲಲ್ಲಿಕಲಿಮುಟ್ಟಲಂಜಿ ತೊಲಗುವನು ಮಣಿಸರಗಳನುಗಳದೊಳಾಂತರಾಕಲುಷಸಂಹರವು ಸಹ ಸಲೆವಿಷ್ಣುಪದವಿಯನೀವ 3ಶತಸಾಸಿರಪರಾಧವಿರಲಿನ್ನು ಮೃತ್ತಿಕೆಲಿಪಿತ ಕಾಯದನಿಗೆ ಬಹುಜನ ನೋಡೆ ವಿಘ್ನಗಳಗತಿಯುಡುಗಿ ದುಷ್ಟಗ್ರಹಗಳೆಲ್ಲನುಕೂಲಗತಿಯಾದ ಫಲವೀವವುಪ್ರತಿದಿನದಿ ನಾಭಿಕಕರ್ಣದಲಿ ಶಿರದಲ್ಲಿ ಶ್ರೀಪತಿಯ ನಿರ್ಮಾಲ್ಯದಳ ಧರಿಸಿ ಹರಿಪಾದ ತೀರಥವೊಮ್ಮೆ ಸೇವಿಸಿದವರ ಮುಕ್ತಿ ಕರತಳವು ಪತಿತಪಾವನಿಎನಿಸುವಾ 4ದರುಶನದಿ ಸ್ಪರುಶನದಿ ಧ್ಯಾನದಿಂ ಕೀರ್ತನೆಯುನಿರುತ ಪ್ರಣಾಮಗಳು ಸ್ತೋತ್ರದಾರೋಪಣಿಂಪರಮಜಲ ಶೇಚನಾರ್ಚನ ನಿಷ್ಠೆಯಿಂದ ನವ ಪರೀಕ್ಷೆಯನುಮಾಡಲುಹರಿಚರಣ ಕಮಲರತಿ ದೊರಕಿ ಯುಗ ಕೋಟಿ ಸಾಸಿರಕಾಲತಿರುಗಿ ಬಂದರೆ ಸತತ ಮಾಂಗಲ್ಯಹರಿಯ ಮನೆಯಲ್ಲಿ ನಿಜ ಹರುಷವನ್ನುಂಬುವರು ಮುರಾರಿವರದಂತೆ ಪದವ 5ಒಂದೊಂದುದಳಕೋಟಿ ಸ್ವರ್ಣಭಾರಕೆ ಮಿಗಿಲುಎಂದು ವಿಶ್ವಾಸದಲಿ ತಂದು ಸಾಸಿರನಾಮದಿಂದ ಗೋವಿಂದಗರ್ಪಿಸಿದರಿಲ್ಲಿಹ ಭವದಂದುಗವು ಮಾನಿಸರ್ಗೆಸುಂದರ ತುಲಸಿ ಮೂಲವನ್ನು ತೊಡಕಿರ್ದಕಳೆಯಂದೆಗೆದು ಶಾಖೋಪಶಾಖದಿಂ ವೃದ್ಧಿಸಾನಂದವಿತ್ತರಾ ನೂರೊಂದು ಕುಲ ನರಕವನು ಹೊಂದಲೀಸರುಪುಣ್ಯದಾ 6ಶ್ರೀ ವಿಷ್ಣುವಲ್ಲಭೆಯ ಮೂಲದಲಿ ತೀರ್ಥಗಳುಬಾವನ್ನಗಂಧಿಯಳ ಮಧ್ಯದಲಿ ಸುರನಿಕರಪಾವನಿಯಳಾ ಹರಿಯ ಕೊನೆಯಲಿಶ್ರುತಿಸಮೂಹಲಾವಣ್ಯ ಗುಣರಾಸಿಯುಭಾವಶುದ್ಧಿಯಲಿ ಉದಯದಿ ಸ್ಮರಿಸಿ ನಿರುತದಿನಾವ ಕಾರ್ಯಕೆ ಗೆಲುವು ಇಹಪರದ ಸೌಖ್ಯವಿತ್ತಾವ ಕಾಲಕ್ಕೆಹೊರೆವಪ್ರಸನ್ನವೆಂಕಟ ದೇವನಂಗ ದೊಳೊಪ್ಪುವಾ7
--------------
ಪ್ರಸನ್ನವೆಂಕಟದಾಸರು
ಹರಿದಾಸರ ಸಂಗ ದೊರೆಯಿತು ಎನಗೀಗ ಇನ್ನೇನಿನ್ನೇನುವರಗುರು ಉಪದೇಶ ನೆರವಾಯ್ತು ಎನಗೀಗ ಇನ್ನೇನಿನ್ನೇನು ಪಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನುತೋಯಜಾಕ್ಷನ ನಾಮ ಜಿಹ್ವೆಯೊಳ್ನೆಲಸಿತು ಇನ್ನೇನಿನ್ನೇನು 1ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನುಜಲಜನಾಭನ ಧ್ಯಾನ ಹೃದಯದೊಳ್ನೆಲಸಿತು ಇನ್ನೇನಿನ್ನೇನು 2ತಂದೆ ತಾಯೆ ಮುಚುಕುಂದವರದನಾದ ಇನ್ನೇನಿನ್ನೇನುಸಂದೇಹವಿಲ್ಲ ಮುಕುಂದ ದಯಮಾಡಿದ ಇನ್ನೇನಿನ್ನೇನು 3ಏನೆಂದು ಹೇಳಲಿ ಆನಂದಸಂಭ್ರಮಇನ್ನೇನಿನ್ನೇನುಆನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು 4ಎನ್ನವಂಶಗಳೆಲ್ಲ ಪಾವನವಾದುವು ಇನ್ನೇನಿನ್ನೇನುಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು 5
--------------
ಪುರಂದರದಾಸರು