ಒಟ್ಟು 572 ಕಡೆಗಳಲ್ಲಿ , 56 ದಾಸರು , 281 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರರಿಗೆಲ್ಲಿಯ ಭವಬಂಧ ಜ್ಞಾನಿಗಳಾದನರರಿಗೆಲ್ಲಿಯ ಭವಬಂಧತರಣಿಬಿಂಬವ ತಮಮುಸುಕಲು ಬಲ್ಲುದೆಹರಹರ ಪಾಹಿ ಶಂಕರ ರಾಮೇಶ್ವರನೆಂಬ ಪ ಸರಸಿಜಾಪ್ತನ ಕರಗಳೊಳು ಬಲುಪರಮಾಣುಗಳು ವರ್ತಿಸುವೊಲುಪರಿಪೂರ್ಣಬ್ರಹ್ಮವೊಂದರೊಳು ಬ್ರಹ್ಮಾಂಡಗಳಿರುವವನಂತ ಕೋಟಿಗಳೆಂದು ತಿಳಿದಂಥಾ1 ಬಿಂದಿಗೆ ಬಿಲುಬಿಲೆ(?) ಗಳನಂದುನಬಂದಂತೆ ಸೃಜಿಸಿ ಮತ್ತದನುಪೊಂದಿಸುವಂತೆ ವಿಶ್ವವನು ಪುಟ್ಟಿಸಿ ಲೀಲಾಸ್ಪಂದದಿಂದಡಗಿಪನೀಶನೆಂದರಿದಂಥಾ2 ವಿರುಪ ಕಾಂಚನಮೋರಂತೆ ನಾನಾಪರಿಯ ಆಭರಣವಾದಂತೆಪರಮಾತ್ಮನೋರ್ವನನೇಕನಾಮಂಗಳಧರಿಸಿಹ ಸರ್ವವು ಬ್ರಹ್ಮವೆಂದರಿದಂಥಾ3 ಇರುವುದೀಲೋಕದೊಳೆರಡು ತಮ್ಮ ಸಂಗಡಬರುವುದು ಪರಲೋಕಕೆರಡುಇರುವುದನೇ ಇಟ್ಟು ಬರುವುದು ಬಯಸುತಪರಹಿತಚರಿತದಿ ನಿರುತ ವರ್ತಿಸುವಂಥ4 ಸಾಸಿರದಳ ಕಮಲದೊಳ್ ಇಹಭಾಸುರ ಪ್ರಣವ ಪೀಠದೊಳುಈ ಸಕಲಕೆ ಸಾಕ್ಷಿಕನಾದ ಕೆಳದಿ ಪು-ರೇಶ ರಾಮೇಶನ ನಿರತ ಧ್ಯಾನಿಸುವಂಥಾ5
--------------
ಕೆಳದಿ ವೆಂಕಣ್ಣ ಕವಿ
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನವನೀತ ಚೋರಾ ಪ ಸಹೋದರಿ ಮಾನಸ ಚಕೋರ ಚಂದ್ರ ಚಂದ್ರ ಕುಲಚಂದ್ರ ಚಂದ್ರಮುಖ ಅ.ಪ ಸೂರಿಜನಪ್ರಿಯ ಸುಗುಣನಿಲಯ ಪಾ- ಕಾರಿಗರ್ವಹರ ಕರುಣಾ ಜಲಧೇ1 ಸದ್ವಿಹಾರ ದೇವ ದ್ವಿಜ ಪೋಷಕ 2 ರಾಮಾನುಜ ಭೃಗು ರಾಮತ್ರಿಜಗದಭಿರಾಮಪಾಹಿ ಗುರುರಾಮವಿಠಲ ಜಯ3
--------------
ಗುರುರಾಮವಿಠಲ
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಾರಗಾ ಎನುತಂದು ಸಾರಲಾ ನುಡಿಕೇಳಿ ಆರಯ್ದು ಕಯ್ವಿಡಿದು ಕಾಯ್ದೆ ದ್ವಿಜನ ಗೋವಿಂದ ಪೊರೆ ಎಂದು ಗೋಳಿಟ್ರಗಜರಾಜಗಾ ದಿವ್ಯದರ್ಶನಾನಂದಮಾಯ್ತು ಅಕ್ಷಯನೆ ಕಾಪಿಡೆಂದಾಕ್ಷಣವೆ ಪಾಂಚಾಲಿ ಗಕ್ಷಯಾಂಬರಗಳಿಂ ರಕ್ಷೆಯಾಯ್ತು ಪಾರ್ಥಸೂತನೆ ನಿನ್ನನರ್ಥಿಯಿಂ ಕೆಲಸಾರ್ದು ಪ್ರಾರ್ಥಿಸುತ್ತಿರ್ಪೆನೈ ಪರಮಪುರುಷ ವರಶೇಷಗಿರಿನಿಲಯ ಸುಗುಣವಲಯ ಶರದಿಂದು ನಿಭವದನ ಚತುರವಚನ ದಮನ ಗರುಡಗಮನ ಪರಿಪಾಹಿ ಮಮದೇವ ಸುಪ್ರಭಾವ
--------------
ನಂಜನಗೂಡು ತಿರುಮಲಾಂಬಾ
ನಾರಾಚ ಕೋದಂಡಧರ ಧೀರ ಪಾಹಿ ಪ ಧರಣೀಸುತಾನಂದ ಸುವಿಹಾರಿ ಪಾಹಿ ಅ.ಪ ಸಾಮಿತ್ರಿ ಭರತಾಗ್ರಜಾತ ಮಾಂಪಾಹಿ ಮೌನಿಜನಸಂಪ್ರೀತ ಶ್ರೀಲೋಲ ಪಾಹಿ ಸೇವ್ಯ ಪಾದಾಬ್ಜಪಾಹಿ ಧೀಮಂತ ಘನ ಪುಣ್ಯನಾಮ ಮಾಂಪಾಹಿ 1 ಭುವನಾಭಿರಾಮಾ ತ್ರಿಮುನಿನುತ್ಯಪಾಹಿ ಭವನಾಶ ಸತ್ಕೀರ್ತಿಕಾಮ ಮಾಂಪಾಹಿ ನವಮೋಹನಾಂಗ ರಾವಣವೈರಿ ಪಾಹಿ ಸುವಿಲಾಸದಾತ ಮಾಂಗಿರಿವಾಸ ಪಾಹಿ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಾರಾಯಣ ನಾರದನುತ ಮಾಂಪಾಹಿ ಪ ನೀರೇರುಹನಾಭ ಸತ್ಯ [ಪ್ರೀತ] ನಾರಾಯಣ ಮಾಂಪಾಹಿ ನಾರಾಯಣ ವೇದಾಂತ ನಾರಾಯಣ ಮಾಂಪಾಹಿ ಅ.ಪ ಶರಣಾಗತ ಪರಿಪೂಜಿತ ಸರಸೀರುಹಭವವಂದಿತ ಕರುಣಾಕರ ದಿವ್ಯಶೇಷ ನಾರಾಯಣ ಮುನಿಸೇವಿತ ಸುರನಾಯಕ ನಿತ್ಯವಿನುತ ಮುರಳೀರವ ಪರಿತೋಷಿತ ವರದಾಯಕ ಮಾಂಗಿರೀಶ ಪರಿಪಾಲಯ ಪಾರ್ಥಸೂರಿ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣಾದ್ರಿ ಕೃತವಾಸ ಶರಣು ತೋರಯ್ಯ ತವರೂಪ ರವಿಕೋಟಿಭಾಸ ಪ ಆನತಜನಾಪ್ತ ನೀನೆಂಬೋ ನುಡಿಕೇಳಿ ಮಿಗೆ ಸಾನುರಾಗದಲಿ ನಡೆತಂದೆ ನಿನ್ನ ಬಳಿಗೆ ಮಿನಾಂಕಜನಕ ತವಪದಯುಗಾರ್ಚನೆ ಹೀಗೆ ಜ್ಞಾನ ಪೂರ್ವಕದಿಂದಲೆನಗೆ ದಯದಿ ಪಾನೀಯಜಾಂಬಕನೆ ಪೊರೆಯೆಂದೆ ನಿನಗೆ 1 ವಾಸುಕೀ ತಪಕೆ ಸಲೆಮೆಚ್ಚಿ ಗಿರಿಯಲಿ ನಿಂದೆ ಆ ಸಲಿಲದೊಳು ಮಿಂದು ಕರಿವರ ಕರೆಯೆ ಬಂದೆ ಸ್ವಾಮಿ ವಾಸವಾತ್ಮಜನು ಬಿನ್ನೈಸೆ ನಿನ್ನಯ ಮುಂದೆ ಆ ಸಮರದೊಳಗೊಲಿವನೆಂದೆ ನಿನಗೆ ಪಾಸಟಿ ಯಾರು ನೀರಜಭವನ ತಂದೆ 2 ಸುರರು ನಿನ್ನ ಮಹಿಮಾತಿಶಯ ಬಗೆಯನರಿಯಳು ಲಕುಮಿ ಬದರ ಸನ್ನಿಭಕಾಯ ಮಾನವ ತಿಳಿವನೆನೋ ತಿರುಮಲರಾಯ ಖಗÀರಾಜಗಮನ ಕಮನೀಯ ಪಾಹಿ ಜಗನ್ನಾಥವಿಠಲ ವಿಗತಾಘ ಕವಿಗೇಯ 3
--------------
ಜಗನ್ನಾಥದಾಸರು
ನೀರ ತರಂಗಿಣಿ ತೀರ ನಾರಸಿಂಹ ಪ ಸಾರಿದೆನೊ ತವಪಾದ ಪಂಕಜ ತೋರು ಮನದಲಿ ತವಕದಿ ಅ ನಾರದನುತ ಚಿಚ್ಛರೀರವ ಶ್ರೀ ಭೂದು ರ್ಗಾರಮಣ ದುರಿತಾರಿ ಬ್ರಹ್ಮ ಸ ಮೀರ ಮುಖ ವಿಬುಧಾರ್ಚಿತ ಚಾರು ಚರಣಯುಗ ಕ್ಷೀರಾಬ್ಧಿ ಶಯನ ಮ ದ್ಭಾರ ನಿನ್ನದು ಮೂರು ಲೋಕದ ಸೂರಿಗಮ್ಯ ಸುಖಾತ್ಮಕ 1 ವೇದವೇದ್ಯ ಸಂಸಾರೋದಧಿ ತಾರಕ ಛೇದ ಭೇದ ವಿಷಾದವೇ ಮೊದ ಶ್ರೀದ ಶ್ರೀಶ ಅನಂತ ಆಪ್ತಕಾಮ ಬಾದರಾಯಣ ಭಕ್ತವರ ಪ್ರ ಹ್ಲಾದಪೋಷಕ ಪಾಹಿ ಮಾಂ 2 ಹೋತಹೃದ್ಯ ಜಗನ್ನಾಥವಿಠಲ ನಿನ್ನ ಮಾತು ಮಾತಿಗೆ ಸ್ಮರಿಸುತಿಹ ಸ ಚ್ಚೇತನರನು ನೀ ಸರ್ವದಾ ವೀತಶೋಕ ಭವಭೀತಿ ಬಿಡಿಸಿ ತವ ದೂತರೊಳಗಿಡು ಮಾತರಿಶ್ವಗ ಭೂತಭಾವನ ಭವ್ಯದ3
--------------
ಜಗನ್ನಾಥದಾಸರು
ನೀರಧಿಶಯನ ಮುಕುಂದ ಹರಿನಾರಾಯಣ ಗೋವಿಂದ ಪ ಪ್ರಚಲಿತ ಲಯ ಜಲ ವಿಹರಣ ಶಾಶ್ವತ ಅಚಲೋದ್ಧರಣ ಸಮರ್ಥ ಸದಾಶ್ರಿತ ಪಂಚಾನನ ಪ್ರಖ್ಯಾತ 1 ಮಂದಾಕಿನಿ ಪಿತ ದೇವ ತ್ರಿವಿಕ್ರಮ ನಂದಿತ ಗೋಕುಲ ವೃಂದ ಪರಾಕ್ರಮ ಸಿಂಧುನಿಬಂಧನ ರಾಮಾನಂದದ ಸುಂದರ ಶ್ಯಾಮ 2 ಬುದ್ಧ ಸುವೇಶ ಶ್ರೀಕರ ಕಲ್ಕಿ ಪಾಹಿ ನಿರ್ದೋಷ ಕಾಕೋದರ ಗಿರಿವಾಸ ಜಯ ಶ್ರೀಕಾಂತ ಶ್ರೀ ಶ್ರೀನಿವಾಸ 3
--------------
ಲಕ್ಷ್ಮೀನಾರಯಣರಾಯರು
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ಪಂಚಮುಖ ಹನÀುಮತೇ ಶರಣುಮಾಂಪಾಹಿ ಪ ಜ್ಞಾನ ಬಲ ರೂಪನೇ ಹನುಮ ಮುಖ್ಯಪ್ರಾಣ ಅನಿಮಿಷವೃಂದದಲಿ ಪ್ರವರನೇ ಶರಣು ಅನುಪಮಾನಂದಮಯ ಅನಘ ಸೀತಾಪತಿಯ ಅನುಪಮ ಮಹಾದಾಸ ಹನುಮ ಪಾಲಯಮಾಂ 1 ನಿರುಪಮಮಹಾತೇಜ ಸರ್ವತೋಮುಖ ಉಗ್ರ ವೀರ ಭೀಕರ ಮೃತ್ಯುಮಾರಕ ಮಹಾವಿಷ್ಣು ನರಸಿಂಹ ಶುಭಕರಗೆ ಪ್ರಿಯತಮನೆ ಶರಣಾದೆ ಕರುಣದಿಂದಲಿ ಎನ್ನ ತ್ರುಟಿ ಬಿಡದೆ ಸಲಹೋ 2 ಬಂಗಾರಮಯ ಸುಧಾ ಪೂರ್ಣ ಕುಂಭವುಕರದಿ ಜಂಗಮದ ಸ್ಥಾವರದ ವಿಷಹರ ಅಭಯದ ಖಗರಾಜನಿಗೆ ವರನೆ ತದ್ರೂಪಮುಖಧರನೆ ಗಮನ ಶ್ರೀಕರನ ಒಲಿಸೆನಗೆ 3 ಅರಿ ಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನು ಮನ್ಮನದಿ ಪೊಳೆವಂತೆ ನೀದಯ ಮಾಡೋ 4 ಜ್ಞಾನ ವಿದ್ಯಾಕಾಂತಿ ಪ್ರತಿ ವಾದಿಜಯದಾತ ಮನಬುಧ್ಧಿದೇಹ ದಾರುಢ್ಯ ಸ್ಥೈರ್ಯ ಘನ ಭಕ್ತಿ ಮುಕ್ತಿ ಸಾಧನ ವೀವ ಹಯಶೀರ್ಷ ಪ್ರಸನ್ನ ಶ್ರೀನಿವಾಸನ ಒಲಿಸೆನಗೆ ಗುರುತಮನೇ 5 || ಶ್ರೀ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಪತಿ ಎನಿಪ | ರುದ್ರದೇವನೆ ನಮೋಕಾದ್ರವೇಯನ ಪದ | ಭದ್ರವೋ ನಿನಗೆ ಪ ನಿಟಿಲಾಕ್ಷ | ಶ್ಮಶಾನದಲಿ ದೀಕ್ಷಅಕ್ಷಾರಿ ಪದದೀಕ್ಷ | ಪಕ್ಷಿವಹ ಕೃಪೆ ಈಕ್ಷಾ 1 ವೃಷನಾಭ ವಶದರ್ಪ | ವೃಷ ಋಷಭ ವೃಷಾಂಕವೃಷಶೃಂಗ ವೃಷದ್ವಜನೆ | ವೃಷಭೇಕ್ಷಣಾ |ವೃಷ ಭೂತ ವೃಷ ಶರನೆ | ವೃಷಪತಿ ವೃಷಾ ವರ್ತವೃಷಾಯುಧ ವೃಷೇಶ್ವರನೆ | ವೃಷಭೋದರಪಾಹಿ2 ದೂರ್ವಾಸ ಭೂವನೇಶ | ಸುರಪೇಶ ಉಗ್ರೇಶಗೌರೀಶ ಪ್ರಮಥೇಶ | ಅವ್ಯಕ್ತ ಕೇಶಾ |ಚೀರ ವಾಸ ಸುವಾಸ ಸ್ವರ್ಣಕೇಶ ಭೂತೇಶಈರಪತಿ ಗುರು ಗೋವಿಂದ | ವಿಠಲ ಭಜಕೇಶ 3
--------------
ಗುರುಗೋವಿಂದವಿಠಲರು
ಪತಿ ಪಾಹಿ | ರುದ್ರದೇವ ಪ ರುದ್ರದೇವ ಅದ್ರಿಜೆ ರಮಣನೆ | ಭದ್ರವ ಕೊಟ್ಟುದ್ದರಿಸೆನ್ನ ಅ.ಪ. ಭುಜಗ ಪಾವನಿ | ಗಂಗಾಧರನೇ 1 ದಿನಮಣಿ ಸೋಮ | ಅನಲೇಕ್ಷಣನೆಮನುಜ ಸಿಂಹಾಂಕಿತ | ಅನಘನ ಸೇವಿಪ2 ರಾಮ ತಾರಕ | ಆ ಮಹ ಮಂತ್ರವಭಾಮಿನಿ ಗಿರಿಜೆಗೆ ಪ್ರೇಮದಿಂದೊರೆದೆ 3 ಕುಸುಮ ಕುಸುಮ 5ಭೃಂಗ 4 ಸುರವರೇಣ್ಯ ಗುರು |5ೂೀವಿಂದ ವಿಠಲನಕರುಣವ ದೊರಕಿಸು | ಹರ ಮಹದೇವ 5
--------------
ಗುರುಗೋವಿಂದವಿಠಲರು