ಒಟ್ಟು 246 ಕಡೆಗಳಲ್ಲಿ , 60 ದಾಸರು , 232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ಕೊಡು ಕೊಡೋ ವರವಾ ತಡವ್ಯಾಕೋ ದೇವಾ ನೀ ಪ ಒಡೆಯ ನಿನ್ನಯ ಯುಗ ಅಡಿಗಳ ಭಜಿಸುವೋ ಸು ಧೃಢ ಭಕುತಿ ಜ್ಞಾನವನ್ನು ತಡೆಯದೆ ಎನಗೆ ನೀ ಅ.ಪ ಪೊಡವಿ ಪಾಲಕ ನೀನೆಂದು ಭಿಡೆಯವನ್ನು ನಾ ಮಾಡೆ ಕಡಲಶಯನ ಸುಮ್ಮನೆ ಮಡದಿಸಹಿತಾಗಿ ನೀ 1 ಜಡಜಲೋಚನ ದೇವಾ ಹುಡಗ ನೀನೆಂದು ನಾ ನುಡಿದ ಮಾತುಗಳ ನಿ ನ್ನೊಡಲೊಳಗಿಡದೆ ನೀ 2 ಚಟುಲಗುರು ಜಗನ್ನಾಥಾ ವಿಠಲ ನಿನ್ನ ನಾ ಕÀರಾ ಪುಟದಿ ಬೇಡುವೆ ಮಮ ಹೃ ತ್ಪುಟದಿ ತೋರುವೆನಿಂದು ನೀ 3
--------------
ಗುರುಜಗನ್ನಾಥದಾಸರು
ಕೊಡು ವರವಾ ಪಿಡಿ ಕರವಾ ಪ ಜಡಜ ಸದನೆ ಪಾಲ್ಗಡಲ ನಂದನೆ ಪೊಡವಿ ಜನನಿ ನಿಮ್ಮಡಿಗಳಾಂಬುಜವಾ ಧೃಡ ಸುಜ್ಞಾನದಿ ಬಿಡದೆ ಪೂಜಿಸುವೆ 1 ಇಕ್ಷುಶರನ ಪಿತ ವಕ್ಷನಿಲಯೆ | ಕಮ ಲಾಕ್ಷಿ ಕೋಮಲೆ ಮೋಕ್ಷದಾತಳೆ ಲಕ್ಷ್ಮಿಯ ಕರುಣ ಕಟಾಕ್ಷದಿಂದೀಕ್ಷಿಸಿ 2 ಧಿಟ್ಟ ಶಾಮಸುಂದರವಿಠಲನ ನಿಷ್ಟೆಯಿಂದಲಿ ಮನಭಜಿಸೊ ಸುಖ ಕೊಟ್ಟು ಭವ ಕಟ್ಟಿ ಓಡಿಸಿ 3
--------------
ಶಾಮಸುಂದರ ವಿಠಲ
ಕೊಡು ಹರಿಯೇ ದಾಸರ ಸಂಗವನು ಪ ತವ ಮಂಗಳ ಚರಿತಾಮೃತ ದಡಿಯಾ | ಶ್ರವಣದಿ ಸವಿಸವಿದುಂಬುವಿ ರಂಗಾ 1 ಪೊಡವಿಲಿ ಭಜನಿಯ ದಾರಿಯ ದೋರೀ | ಬಿಡಿಸುವರು ಮುನ್ನಿನ ಮನದಂಗಾ 2 ಗುರುಮಹಿಪತಿ ಪ್ರಭು ಧನ್ಯನಾಗುವೆನು | ಪರಿ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೊಡುವುದನೆ ಕೊಡುಮತ್ತೆ ಎಷ್ಟಾದರಭವ ಪ ಅಸುವನೀಗಲು ನಾನ್ಹಸಗೆಟ್ಟು ಬೇಡದ ಅಸಮಶುಚಿಮನ ನೀಡೊ ಕುಸುಮಾಕ್ಷ ಹರಿಯೆ 1 ಅತಿಶಯದ ಬಡತನವು ಸತತ ಪೀಡಿಸಲೆನಗೆ ಗತಿಯಿಲ್ಲದವವೆನುತ ಸತಿಸುತರು ಜರಿಲಿ ಧೃತಿಗುಂದಿ ಮತಿಗೆಟ್ಟು ವ್ಯಥೆಬಡುವ ಸ್ಥಿತಿಯನ್ನು ಹಿತದಿಂದ ತೊಲಗಿಸೈ ರತಿಪತಿಪಿತನೆ 2 ಬಿರುಕಿನೊಳು ಬಂದು ಈ ಮುರುಕು ಕಾಯದ ಇರುವು ಹರಕೊಂಡು ಹೋಗಲಿ ಹರಿ ಕರುಣದೋರೊ ನರಕಿಯೆನಿಸುವ ಮಹ ತಿರಕಿ ಸಂಸಾರದ ಮರುಕವನು ಪರಿಹರಿಸೊ ಪರಕೆ ಪರತರನೆ 3 ಊರು ನಾ ಸೇರಿರಲಿ ಅರಣ್ಯದೊಳಗಿರಲಿ ಮೀರಿದ ರೋಗದಿಂ ಘೋರ ಬಡುತಿರಲಿ ಆರೈಸದಾರನ್ನು ಸಾರಸಾಕ್ಷನೆ ನಿನ್ನ ಪಾರನಾಮದ ಸವಿ ಸುಸಾರ ಎನಗಿರಲಿ 4 ಕೊಡೋಧರ್ಮ ನಿನ್ನದಿದೆ ಬೇಡುವುದು ನನ್ನ ಧರ್ಮ ಕೊಡುವುದಾದರೆ ನೀನೆ ಕೊಡು ಎನಗೆ ಇದನು ಪೊಡವಿಯವರಿಗೆ ಬಾಗಿ ಬೇಡದ ಪದವಿಯನು ಪಿಡಿವೆ ತವಪಾದ ಎನ್ನೊಡೆಯ ಶ್ರೀರಾಮ 5
--------------
ರಾಮದಾಸರು
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ
ಗಂಗಾನದಿ ಮಂಗಳಂ ಜಯತು ಭಾಗೀರಥಿಗೆ ಜಯ ಮಂಗಳಂ ಯಮುನೆ ಸರಸ್ವತಿಗೆ ಪ ವಾಮನರೂಪಿಲಿ ದಾನವ ಬೇಡಿ ಪ್ರೇಮದಿಂ ಪಾದವ ಮೇಲಕ್ಕೆ ನೀಡಲು ನೇಮದಿಂ ತಡೆದು ಬ್ರಹ್ಮಾಂಡದಿಂದ ಸುಮ್ಮಾನದಿಂ ಪೊರಟು ಬಂದ ದೇವಿಗೆ 1 ಹರಿಯ ಪಾದದಲಿ ಉದ್ಭವಿಸಿದ ಗಂಗೆಗೆ ಹರನ ಶಿರದಲ್ಲಿ ವಾಸವಾದವಳಿಗೆ ಧರಿಣಿಗೆ ಇಳಿದು ಬಂದ ದೇವಿಗೆ 2 ಭಾಗೀರಥಿ ಎಂಬೊ ಪೆಸರು ಪೊತ್ತು ಅವನ ಭಾಗಿಗಳಿಗೆ ಮೋಕ್ಷವನಿತ್ತು ಹರುಷದಿ ಯೋಗಿಗಳು ಸ್ತುತಿಪ ಗಂಗಾದೇವಿಗೆ 3 ಜಾಹ್ನವಿ ಎನಿಸಿದೆ ಜಗದೊಳಗೆ ಜನರಿಗೆ ಜನನ ಮರಣ ಕೊಡದೆ ಬಿಡಿಸಿ ಜಾಣತನದಿ ಮುಕ್ತಿ ಕೊಡುವವಳಿಗೆ 4 [ದೃಡದಿ ] ಬಲಭಾಗದಿ ಭಗೀರಥಿ ಬರುತಿರೆ ಯೆಡದ ಭಾಗದಲಿಯಮುನೆ ಬರುತಿರಲು ನಡುವೆ ಸರಸ್ವತಿ ತ್ರಿವೇಣಿಯೆಂದೆನಿಸಿ ಪೊಡವಿಗಧಿಕವಾಗಿ ಮೆರೆಯುವ ದೇವಿಗೆ 5 ಬಂದು ಭಾಗೀರಥಿಗೆ ವಂದನೆಗಳ ಮಾಡಿ ತಂದು ಪುಷ್ಪವ ತುಳಸಿ ಕ್ಷೀರವನು ಚಂದದಿಂ ಪೂಜೆಮಾಡಿ ವೇಣಿಮಾಧವಗೆ ಅಂದು ವಂದಿಸಿದವರಿಗೆ 6 ಸೃಷ್ಟಿಯ ಮೇಲುಳ್ಳ ಜನರೆಲ್ಲರು ಬಂದು ಇಷ್ಟಾರ್ಥಗಳನು ಕೊಡುವೆನೆಂದೆನುತಲೆ ಪಾದ ತೋರಿಸುವಳು 7
--------------
ಯದುಗಿರಿಯಮ್ಮ
ಗಜವÀದನ ಪಾಲಿಸೊಗಜವÀದನ ಪಾಲಿಸೊ ಪತ್ರಿಜಗದೊಡೆಯ ಶ್ರೀ ಭುಜಗಭೂಷಣಗಜವÀದನ ಪಾಲಿಸೊ ಅ ಪಭಕ್ತಿಯೊಳು ಭಜಿಪೆನು ರಕ್ತಾಂಬರಧರಮುಕ್ತಿಪಥವ ತೋರೊ ಶಕ್ತಿ ಸ್ವರೂಪನೇ 1 ವಾಸವ ಪೊಗಳುವೆಲೇಸಪಾಲಿಸೊ ನಿತ್ಯವಾಸವನುತ2 ಪೊಡವಿಯೊಳಗೆ ನಿನ್ನ ಬಿಡುವರ್ಯಾರೊ ಎನ್ನಕಡುಹರುಷದಿ ಕಾಯೋ ವಿಜಯ ವಿಠ್ಠಲದಾಸ 3
--------------
ವಿಜಯದಾಸ
ಗಿI. ಲೋಕ ನೀತಿ ಅಮೃತ ಸುರಿದಂತೆ ಸಜ್ಜನರ ಸಂಗ ಅಮೃತ ಸುರಿದಂತೆ ಪ ಅಮೃತುಂಡಿತಿಹ್ಯ ಸಾಮ್ರಾಜ್ಯದಲಿ ಬಂದು ನಮ್ರತೆಯಿಂದಪಮೃತ್ಯು ಗೆಲಿಸುವಂಥ ಅ.ಪ ಮಾಯ ಮುಸುಕು ತೆಗೆಸಿ ನಿರುತ ಕಾಯಕರ್ಮ ಕೆಡಿಸಿ ಭಾವಶುದ್ಧಮಾಡಿ ಸಾವಧಾನವಿತ್ತು ಸಾವು ಹುಟ್ಟಳುಕಿಸಿ ಪಾವನವೆನಿಸುವ ದಿವ್ಯ 1 ಆಶಪಾಶಕಡಿದು ವಿಷಯ ದ್ವಾಸನೆಯನು ತೊಡೆದು ದೋಷರಾಶಿಗಳ ನಾಶಮಾಡಿ ಭವ ಘಾಸಿ ತಪ್ಪಿಸಿ ಮಹ ಶಾಶ್ವತಪದವೀವ2 ಅಡರಿಕೊಂಡು ಬರುವ ಸಂಸಾರ ತೊಡರು ಕಡಿವ ಪೊಡವಿತ್ರಯಂಗಳ ಒಡೆಯ ಶ್ರೀರಾಮನ ಅಡಿದೃಢವಿತ್ತು ಮುಕ್ತಿಗೊಡೆಯನೆನಿಸುವಂಥ 3
--------------
ರಾಮದಾಸರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗೋಪಿ ಸುಕೃತ ಪ ಸುಕೃತ 1 ಕೌಸ್ತುಭ ಸುಕೃತ 2 ಕಸ್ತೂರಿಯಿಟ್ಟು ಕಂಗಳಿಗೆ ಕಾಡಿಗೆ ಹಚ್ಚಿಮತ್ತೆ ಕದಪಿನಲಿ ಕುಂಕುಮವನೊತ್ತಿಮುತ್ತಿನಂದದೊಳಿರುವ ಬೆವರ ಸೆರಗಿನೊಳೊರೆಸಿಮುತ್ತು ತಾರೈಯೆಂದು ಮುದ್ದಾಡುವೋ ಸುಕೃತ3 ಅಸುರಕುಲ ಹರಣನಿಗೆ ಅಂಗಿಯನು ತೊಡಿಸಿ ಬಲುಕುಶಲದಿ ಪೀತಾಂಬರವನ್ನು ಉಡಿಸಿಪೊಸ ರತುನ ಬಿಗಿದ ಮಣಿಮಯದ ಮಕುಟವ ಮಂಡೆ-ಗೊಸವಿಟ್ಟು ನಲಿ ನಲಿದು ಮುದ್ದಾಡುವೊ ಸುಕೃತ4 ಶಂಖ ಚಕ್ರಾಂಕಿತಗೆ ಭುಜಕೀರ್ತಿಯನೆ ಧರಿಸ್ಯ-ಲಂಕಾರದಲಿ ತಾರೆ ಮಣಿಯ ಕಟ್ಟಿಕಂಕಣವು ಕಡಗ ಥಳಥಳಿಪ ಪವಳದಿ ರಚಿಸಿಬಿಂಕದಲಿ ತೊಟ್ಟಿಲೊಳಗಿಟ್ಟು ತೂಗುವ ಸುಕೃತ5 ಮುಂಗೈಯ ಮುರಿ ಮುತ್ತಿನುಂಗುರವು ಥಳಥಳಿಸೆರಂಗು ಮಾಣಿಕದ ಒಡ್ಯಾಣ ಹೊಳೆಯೆಕಂಗೊಳಿಸುತಿಹ ಕಾಂಚಿದಾಮವಲಂಕರಿಸಿ ಸ-ರ್ವಾಂಗದೊಳು ಗಂಧ ಪರಿಮಳವ ಸೂಸುವ ಸುಕೃತ6 ಕಡಗ ಪೊಂಗೆಜ್ಜೆ ಕನಕದ ಘಂಟೆ ಸರಪಳಿಯಬಿಡದೆ ಶ್ರೀಹರಿಯ ಚರಣದಲ್ಲಿ ಧರಿಸಿಪೊಡವಿಯನು ಅಳೆದ ಶ್ರೀಪುರುಷೋತ್ತಮನಿಗೆ ಮೆ-ಲ್ಲಡಿಯನಿಡು ಎಂದೆನುತ ನಡೆಯ ಕಲಿಸುವ ಸುಕೃತ7 ನೆಲನ ಈರಡಿಮಾಡಿ ಬಲಿಯ ಮೆಟ್ಟಿದ ಪಾದಚೆಲುವ ಚರಣದಿ ಭೂಮಿಯಳೆದ ಪಾದಶಿಲೆಯೆಡಹಿ ಬಾಲೆಯನು ಮಾಡಿದ ದಿವ್ಯವಾದಒಲಿದಿಟ್ಟು ನಡೆಯೆಂದು ನಡೆಯ ಕಲಿಸುವ ಸುಕೃತ8 ಅಂದಿಗೆ ಪಾಯ್ವಟ್ಟು ಕುಂದಣದ ಕಿರುಗೆಜ್ಜೆಸಂದಣಿಸಿ ಕಿರಿಬೆರಳೊಳುಂಗುರಗಳುಚೆಂದದ ಕಡಗ ಪಾಡಗ ಘಂಟೆ ಸರಪಣಿಯುಮಂದಗಮನನ ಪಾದಪದ್ಮಕ್ಕಿಡುವೊ ಸುಕೃತ9 ಸುಕೃತ 10 ದಿನಕರ ನಿಭಾಂಗ ಕೇಶವ ರಾಮಚಂದ್ರ ಮುನಿಸನಕಾದಿವಿನುತ ಕುಣಿದಾಡು ಎನುತತನ್ನ ಕರಗಳಲಿ ತಕ್ಕೈಸಿ ಕೃಷ್ಣನ ದಿವ್ಯಘನ್ನ ಚರಿತೆಯ ಪಾಡಿ ಪೊಗಳುವ ಸುಕೃತ11
--------------
ವ್ಯಾಸರಾಯರು
ಛೀ ಯಾತರ ಬುದ್ಧಿ | ಸೊಕ್ಕಿನ ಮಾತಿಲಿ ಬಲು ನÉೂಂದಿ ಪ ಗುರುಹಿರಯರ ಅನುಸರಿಸದೇ | ಹರಿಚರಣವ ಕೊಂಡಾಡದೇ | ಬರಡಾ ನಾಲಿಗೆ ಮಾಡಿದಿ ಬರಿದೇ 1 ವಳ್ಹವ ಹೊಲ್ಲವರಿಯದೇ | ಯಳ್ಳಿನಿತು ನೀ ವಿಚಾರಿಸದೇ | ನಿಲ್ಲದೇ ಮಾಡುವಿ ಬಗಳುವದೇ 2 ಕೆಂಡವ ಕಂಡು ನೆರೆ | ಮಂಡಿಯಾ ತುರಿಸುವರೆ | ತುಂಡತನ ಗುಣ ಬಿಡು ಇನ್ನಾರೆ 3 ಪೊಡವಿ ದೇವತೆಯ ಕೋಣಾ | ಯಡಬಲ ನೋಡದಿರಲೇನು | ಕಡೆಯಲಿ ಕೆಡುವರು ಒಂದಿನಾ 4 ಮಹಿಪತಿಸುತ ಪ್ರಭು ದಾಸರ ಕೈ | ಅಹುದೆನಿಸಿಕೊಂಬುದೆ ಸ್ವರ್ಗಯ್ಯ | ವಿಹಿತಲ್ಲೆಂಬುದೇ ನರ್ಕದಾಶ್ರಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದೋದ್ದಾರನ ಸಖಿ ಮೊದಲಿಗೆ ಬಲಗೊಂಬೆಮುದದಿಂದ ಮುಯ್ಯ ಗೆಲಿಸೆಂಬೆನಲ್ಲೆ ನಮೋ ಎಂಬೆ ಸುರರ ಎಲ್ಲರ ಬಲಗೊಂಬೆ ಪ. ನಿಗಮ ತಂದವನಿಗೆ ಮುಗಿವೆವು ಕರಗಳನಗವ ಪೊತ್ತವನ ಬಲಗೊಂಬೆ 1 ಜಗವನೆತ್ತಿದವಗೆ ಜಾಣಿ ವಂದಿಸಿಕರುಳು ಬಗೆದ ನರಸಿಂಹನ ಬಲಗೊಂಬೆ 2 ಪೊಡವಿಯನಾಳಿದವಗೆ ಬಿಡದೆ ವಂದಿಸಿಕೊಡಲಿಯ ಪಿಡಿದ ಭಾರ್ಗವನ ಬಲಗೊಂಬೆ 3 ಸೇತುವೆ ಕಟ್ಟಿದವಗೆ ಪ್ರೀತಿಲೆ ನಮಿಸಿಪಾರಿಜಾತ ತಂದವನ ಬಲಗೊಂಬೆ4 ವಸ್ತ್ರ ಹೀನಗೆ ನಾವು ಅತ್ಯಂತ ನಮಿಸಿ ಕುದುರೆಹತ್ತಿದ ರಾಮೇಶನ ಬಲಗೊಂಬೆ 5
--------------
ಗಲಗಲಿಅವ್ವನವರು
ಜನುಮದ ದಿವಸವಿದು ಹನುಮ ನಿನ್ನಜನುಮದ ದಿವಸವಿದೂ ಪ ಅನುದಿನ ನಿನ್ನನುನೆನೆಯುವ ಜನರಿಗೆ ಘನ ಮುದ ಕೊಡುವಂಥ ಅ.ಪ. ಯಾವಾಗಲೂ ಹರಿಯ ಭಕುತಿಯಲಿಸೇವೆಮಾಳ್ಪ ಪರಿಯಭಾವುಕರಿಗೆ ಕಲಿಸುವುದಕೆ ಗಡಜೀವಿಯಾಗಿ ಅವತರಿಸಿದ ನಿನ್ನದೂ 1 ಪೊಡವಿಯ ಮಾತೆಯನು ದನುಜಬ ಚ್ಚಿಡಲವಳಿರುವದನುಹುಡುಕಿ ತೆಗೆಯಲಾ ಕಡಲನೆ ಜಿಗಿಯುವಕಡುಶಕ್ತಿಯ ಗಡ ಪಡೆದ ನಿನ್ನಯ 2 ಧಾರುಣಿನ ಕಾರಣ ಗದುಗಿನವೀರನಾರಾಯಣಚಾರು ಚರಣದಿ ತೋರಿ ಭಕುತಿಯನುಸೂರೆಗೈಯ್ಯೆ ಮೈದೋರಿದ ನಿನ್ನನು 3
--------------
ವೀರನಾರಾಯಣ