ಒಟ್ಟು 154 ಕಡೆಗಳಲ್ಲಿ , 54 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆನು ವಿಠ್ಠಲನ ದಣಿಯ ಪ. ನೋಡಿದೆನು ವಿಠ್ಠಲನ ರೂಪವ ಪಾಡಿದೆನು ಮನದಣಿಯ ಹರುಷವು ಮೂಡಿತಂಗದಿ ಮುಗಿದು ಕೈ ನಾ ಮಾಡಿ ಸಾಷ್ಟಾಂಗ ಬೇಡಿ ಮನಸಿನಭೀಷ್ಟ ಸಂತತ ನೀಡು ನಿನ್ನಯ ಚರಣ ಸ್ಮರಣಿಯ ಪಾಡಿಪೊಗಳುವ ಭಾಗ್ಯಬೇಕೆಂದು ಕಾಡಿದೆನು ಹರಿಯಾ 1 ಪಂಚ ಪಂಚ ಉಷಃ ಕಾಲದೀ ಪಂಚ ಬಾಣನ ಪಿತಗೆ ಆರುತಿ ಮುಂಚಿನೊಸನಗಳೆಲ್ಲ ತೆಗೆಯುತ ತೈಲವೆರೆಯುವರೂ ಪಂಚರೂಪಗೆ ಚಂದ್ರಭಾಗೆಯ ಪಂಚ ಗಂಗೋದಕಗಳೆರೆಯುತ ಅಮೃತ ಸ್ನಾನಗೈಸುವ ಸೊಬಗ ನೋಡಿದೆನು 2 ಬೆಣÉ್ಣ ಬಿಸಿನೀರೆರೆದು ಕೃಷ್ಣಗೆ ಸಣ್ಣ ವಸ್ತ್ರದಿ ವರಸಿ ಮೈಯ್ಯನು ಘನ್ನ ಪೀತಾಂಬರವನುಡಿಸುತ ಜರಿಯ ಶಾಲ್ಹೊದಿಸಿ ಬಣ್ಣದೊಸ್ತ್ರದ ಪಾಗು ಸುತ್ತುತ ಬೆಣ್ಣೆ ಕಳ್ಳಗೆ ಅಂಗಿ ತೊಡಿಸುತ ಸಣ್ಣ್ಣ ಮಲ್ಲಿಗೆ ಹಾರ ಉಪವೀತ ಸಡಗರವ ಕಂಡೆ 3. ಗಂಧ ಅಕ್ಷತೆ ಪುನುಗು ಜವ್ಜಾಜಿ ಛಂದದಾ ಕಸ್ತೂರಿ ತಿಲಕವು ಸುಂದರಾಂಗದ ಮುಖಕೆ ಕನ್ನಡಿ ತೋರಿಸುವರಿಂತೂ ಅಂದದಾ ಪಕ್ವಾನ್ನ ತರುತಲಿ ಇಂದಿರೇಶಗೆ ಅರ್ಪಿಸುತ್ತಲಿ ಒಂದು ಧೂಪಾರತಿಯ ಬೆಳಗಿ ಒಂದು ಏಕಾರ್ತಿ 4 ಮಾಡಿ ಪಂಚಾರ್ತಿಗಳ ವಿಠಲಗೆ ಪಾಡುವರು ಮನದಣಿಯ ಭಕ್ತರು ನೀಡುವರು ಪಂಚಾಮೃತಂಗಳ ಬೇಡುವರು ಹರಿಯ ರೂಢಿಯೊಳು ಪಂಡರಿಯ ಕ್ಷೇತ್ರವ ಬೇಡಿದವರನು ಪೊರೆವ ಗೋಪಾಲಕೃಷ್ಣವಿಠ್ಠಲನು 5
--------------
ಅಂಬಾಬಾಯಿ
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪಾಥೇಯವ ಕಟ್ಟಿರೊ ವೈಕುಂಠಕೆ ಪಯಣ ಸ-ಮ್ಮತವಾದರೆ ಪ. ಮಾತಾಪಿತರುಯೆಂಬೊ ಭಕ್ತಿಚಿತ್ರಾನ್ನವಪಾರ್ಥಸೂತನ ಪಾದಪದ್ಮಪತ್ರವ ಹಾಸಿ ಅ.ಪ. ಹರಿಭಕ್ತಿಹರಿಗೋಲಿಂದ ಮೆಲ್ಲನೆ ನೀವುವಿರಜಾನದಿಯ ದಾಟಿರೊಕರಜಾಗ್ರಗಳಿಂದ ಹಿರಣ್ಯಕನನು ಸೀಳಿದಪರವಾಸುದೇವನ ದರುಶನವಾಹೋದಯ್ಯ 1 ಪ್ರಳಯದ್ಹಾವಳಿಯಿಲ್ಲವೊ ಪೇಳುವುದೇನುಚಳಿ ಮಳೆ ಬಿಸಿಲಿಲ್ಲವೊಬೆಳಸು ಬಿತ್ತಿಲ್ಲದ ಬೇಕಾದ ಸಂಪತ್ತುನಳಿನನಾಭನ ಪುರದೊಳಗೆ ನೆಲಸಿಹುದಯ್ಯ 2 ಶುದ್ಧ ಸಾತ್ವಿಕ ಪುರವು ತಾಮಸರಿಗೆ[ಪೊದ್ದಲಳವಲ್ಲವೊ]ಅಧ್ಯಾತ್ಮ ಅರ್ಜುನಗೆ ನಿರ್ಧಾರ ಪೇಳಿದತದ್ಧಾಮ ಪರಮಂ ಮಮವೆಂಬೊ ಪುರವೊ 3 ಕೂಗಳತೆಗೆ ಕೊಂಚವೊ ಹರಿಯ ಪುರನಾಗರಾಜನ ಸಾಕ್ಷಿಯೊನಾಗಶಯನನಲ್ಲಿ ನಮ್ಮ ಕಂಡರೆಹೋಗಬೇಡಿರೆಂದು ಹುಟ್ಟ ತಡೆವನೊ 4 ಬರವೆಂಬ ಮಾತಿಲ್ಲವೊ ಒಂದುಕಾಸುತೆರಿಗೆಯ ಕೊಡಬ್ಯಾಡಿರೊಪರಮಕರುಣಿ ಹಯವದನ ವೈಕುಂಠದಿಸರುವಮಾನ್ಯವನಿತ್ತು ಶರಣರ ಪೊರೆವನು 5
--------------
ವಾದಿರಾಜ
ಪಾದ ದರುಶನ ಮಾಡಿಉನ್ನತದ ಮಂಟಪದ ಮಧ್ಯಕೈತರುವ 1ಮೃದುತರದ ಹಾಸಿಕೆಯ ಮೇಲೊರಗುಮೂಡೆಯನು ಮುದದಿಂದಲಳವಡಿಸಿ ಪಾದುಕೆಯ ತೊಡಿಸಿಪದುಮನಾಭನ ದಿವ್ಯ ಸಿಂಹಾಸನದ ಮೇಲೆ ಚದುರಿಂದಲಾವಾಹನವ ಮಾಡುವಂತೆ 3ಕೇಳುತಿದೆ ದುಂದುಭಿಯ ಫೋಷ ನಾರದ ವೀಣೆಕೇಳುತಿದೆ ಗಂಧರ್ವನೃತ್ಯರವ ವೀಣಾಕೇಳುತಿದೆ ಗರುಡ ಪಕ್ಷದ ಮಾರುತ ಧ್ವನಿಯು ಕೇಳುತಿದೆ ಶ್ರೀ ಹರಿಯ ಪಾಂಚಜನ್ಯದ ನಾದ4ಬಂದನಿದೆಯಚ್ಯುತನು ಕಂಡಿರೇ ಕಾಂತಿಯನುಚಂದ್ರಶೇಖರ ಸಖನ ಬರವಿದೇಯಹುದೂಬಂದ ನಮ್ಮನು ಸಲಹಬೇಕೆಂಬ ದಯದಿಂದಇಂದು ತಿರುಪತಿಯ ವೆಂಕಟರಮಣನೊಲವಿಂದ 5ಓಂ ಚತುರ್ಭುಜಾತ್ತಚಕ್ರಾಸಿಗದಾ ಶಂಖಾದ್ಯುದಾಯುಧಾಯ ನಮಃ
--------------
ತಿಮ್ಮಪ್ಪದಾಸರು
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣನ ನೋಡಿರೈ ಮುಖ್ಯಪ್ರ್ರಾಣನ ಪಾಡಿರೈ ಪ. ಕ್ಷೋಣಿಯೊಳಗೆ ಎಣೆರಹಿತ ಪಾವನಚರಿತ ಸದ್ಗುಣಭರಿತಅ.ಪ. ಅಂಜನೆ ಸುತನೊ ಮಹಾ ಅದ್ಭ್ಭುತನೊತರÀಣಿ ಮಂಡಲಕೆ ಮುಟ್ಟಿಹಾರಿದ ಬಲದ ಶ್ರುತಿಯೊ ವಿಕ್ರಮಗತಿಯೊಸುರರಾಯುಧ ನೆಗ್ಗಿಸಿದ ಕಪಿಯಗ್ರಣಿಯೊ ವಜ್ರದ ಖಣಿಯೊಶರಣ ವಂದಿತ ಚರಿತ ಮೂರ್ಲೋಕ ಗುರುವೊ ಕಲ್ಪತರುವೊ1 ರಾಮ ಪದಾಂಬುಜ ಬಿಂಬಪರಾಗ ಮಧುಪನೊ ದೇವಾಧಿಪನೊತಾಮಸ ರಾವಣನೆದೆಗೊತ್ತಿದ ಈ ಕರವೊ ಸಿಡಿಲಬ್ಬರವೊಪ್ರೇಮದಿ ರಣದೊಳಗ್ಹಾರಿ ರಥವನೊದ್ದ ಮಾರುತಿಯೊ ಪುಣ್ಯ ಮೂರುತಿಯೊರೋಮಕೆ ಸಿಲ್ಕದ ಹನುಮನ ಬಾಲದ ಸರಳೊ ದೈತ್ಯರಿಗುರುಳೊ 2 ಪಾದ ಪಡೆದಂಥ ಪದವೊ ಸಾಗರ ಮದವೊನೆನೆಯಲು ದುರಿತನಿವಾರಣ ಕರುಣಾವಾರಿಧಿಯೊ ಭಕ್ತರ ಸುಧೆಯೊಅನುದಿನದಲಿ ಹಯವದನನ ನೆನೆಯುವ ದಯವೊ ಗತಿ ಆಶ್ರಯವೊ3
--------------
ವಾದಿರಾಜ
ಬಂದನಿದಕೋ ರಂಗ ಬಂದನಿದಕೋ ಸುಂದರಾಂಗನು ನಮ್ಮ ಮಂದಿರಕೆ ಈಗಾ ಪ. ಮುಗಳುನಗೆ ಮುಖದಲ್ಲಿ ಮುಂಗುರುಳು ನವಿಲುಗರಿ ಕಂಬು ಕಂಠಾ ಝಗ ಝಗಿಪ ಕುಂಡಲವು ಕಸ್ತೂರಿ ತಿಲಕ ಫಣಿ ನಗಧರನು ನಮ್ಮ ಮನಸೂರೆಗೊಂಬುದಕೇ 1 ಕರದಲಿ ಕಂಕಣವು ಬೆರಳಲ್ಲಿ ಉಂಗುರವು ಕೊರಳಲ್ಲಿ ನವರತÀ್ನ ಮುತ್ತಿನಹಾರಗಳೂ ಕಿರುಗೆಜ್ಜೆ ನಡುವಿನಲಿ ವಲಿವೋ ಪೀತಾಂಬರವು ವರ ವೇಣು ವಯ್ಯಾರದಿಂದ ಊದುತಲೀ 2 ಸುರರ ವಂಚನೆಗೈದು ವರ ಋಷಿಗಳನೆ ಜರಿದು ಸಿರಿಗಗೋಚರನೆನಿಸಿ ಪರಮ ಪುರುಷಾ ವರಧಾಮತ್ರಯಗಳನೂ ಮರದೆಮ್ಮ ಗೋಕುಲದಿ ಚರಿಯ ತೋರೀ 3 ಇಂದಿರೇಶನು ನಮ್ಮ ವೃಂದಾವನದೊಳಿಪ್ಪ ಮಂದಿಗಳ ಮನ ಸೆಳೆದು ಮಾರಜನಕಾ ಒಂದೊಂದು ರೂಪಿನಲಿ ಗೋಪಿಕಾ ಸ್ತ್ರೀಯರೊಳು ಬಂದು ಬೆರೆಯುವ ಮದನಕಲೆ ನಿಪುಣ ಚೆಲುವಾ 4 ಗೋವರ್ಧನೋದ್ಧಾರ ಗೋವಳರ ವಡಗೂಡಿ ಗೋಪಿ ಬಾಲಾ ಗೋವಿಂದ ಗೋಪಾಲಕೃಷ್ಣವಿಠಲ ನಮ್ಮ ಪೂರ್ವ ಪುಣ್ಯದ ಫಲದಿ ಭೂವನಿತೆ ಪಾಲಾ 5
--------------
ಅಂಬಾಬಾಯಿ
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಲ್ಲವನಾದರೀ ತಳ್ಳಿಬೇಡ ಅಲ್ಲದ ಪಥವಿದರಾಸೆಯ ಬಿಡು ನೀನು ಪ ಸರ್ಪನ ಪಣೆಯೊಳು ಜೇನುತುಪ್ಪವ ಕಂಡು ಅಪ್ಪನೆ ತಾರೆಂದು ಅಳುತಿರಲು ತುಪ್ಪದ ಸವಿಯನು ಜನರುಂಡು ತೀರಲು ಮುಪ್ಪಾಗಿಯಿರುವುದ ಕಂಡು ಮೂದಲಿಸುವ 1 ನಂಬಿದ ಮನುಜರ ಹಂಬಲ ಮರವದು ಡೊಂಬಿಯವರು ಕಂಡು ತಡೆಯಲಾಗಿ ಅಂಬರವನು ಕಂಡು ನಗುತಿಪ್ಪ ಮನುಜನ 2 ಅಂಬರವಡಗಿಯೆ ಕುಂಭಿನಿ ಜಾರಿಯೆ ನಂಬಿದ ಮನುಜರು ನಡೆವೆಡೆಯ ಕುಂಭದ ನೀರನು ಚೆಲ್ಲುತ್ತ ಮಗುಳಲ್ಲಿ ಕಂಭದ ಹಾಗೆಲ್ಲ ನಿಂತಿಹ ಜನರನು 3 ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ ದುಷ್ಟನೊಬ್ಬನು ಬಂದು ನಿಂತಿಹನು ಇಟ್ಟಿಹ ಬಾಗಿಲ ಕಾಣದೆ ತಾ ಬಂದು ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ 4 ಕಡಹದ ಪಲ್ಲಕ್ಕಿ ಬೆಡಗನ್ನು ಕಾಣುತ್ತ ಮೃಗ ಬಂದು ಕುಳಿತಿರ್ದುದ ಒಡನೆ ಕಟ್ಟಿದ ವಾಹಕರ್ಹದಿನಾರು ಮಂದಿಯು ಕಡಿಮೆಯ ಸಂಬಳ ಕಡವಿಡುವವರನ್ನು 5 ಅಕ್ಕಿಯ ರಾಶಿಯು ತೀರಲು ಕೊಳಗವು ಬೆಕ್ಕನೆ ಬೆರಗಾಗಿ ಕುಳಿತಿಪ್ಪುದು ಬಿಕ್ಕಿದ ಅಕ್ಕಿಯ ಹಕ್ಕಿಯು ಹೆಕ್ಕಿಯೆ ಗಕ್ಕನೆ ಹಾರುವ ಪಕ್ಷಿಯ ನೋಡುತ್ತ 6 ರವಿಶಶಿಯೊಂದಾಗಿ ಇರುತಿಹ ಗಣಿತದಿ ಧರೆಯೊಳು ಸಾವಿರಯೆಲೆ ಬೀಳ್ವುದು ಎರವಿನಾಭರಣವ ಅವರವರೊಯ್ಯಲು ವರಾಹತಿಮ್ಮಪ್ಪನ ಮರೆ ಬೀಳು ಕಂಡ್ಯ 7
--------------
ವರಹತಿಮ್ಮಪ್ಪ
ಬಾರನೇನೆ ಭಾಗ್ಯನಿಧಿ | ಬಡವರ ಮರೆಯದೇ | ಮಾನಿನಿ ಪ ಕಾಲಿಲ್ಲದವನಂತೆ ಕುಳಿತನೇ ಮಧುರಿಲಿ | ನೀಲಾಂಗನಂಗವೆಂತು | ನಿಬ್ಬರವೇ ಮಾನಿನೀ 1 ಮುಂದಕೆ ತಿರುಗಲೊಲ್ಲ ಹಿತಗಜಪಂಚಾನನ | ಮಾನಿನಿ 2 ಮಾನಿನಿ 3 ತಂದೆ ಮಹೀಪತಿ ಪ್ರಭು | ತುರಗವೇರಿ ಬಂದನೆಂದು | ಇಂದು ಹೇಳಿದರಿಷ್ಟಾರ್ಥ ಈವನೆಲ್ಲ ಮಾನಿನಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೆ ದೇವಿ ಭಾಗ್ಯವಂತೆ ಬೇಡಿಕೊಂಬೆ ಬೇಗ ಹಸೆಗೆ ಪ ಸುತ್ತನಾಲ್ಕು ದೀಪಗಳಿಟ್ಟು ಎತ್ತಲೂ ಪ್ರಜ್ವಲಿಸುತಿರ್ಪ ಮುತ್ತುರತ್ನ ಕೆತ್ತಿಸಿರುವ ಉತ್ತಮ ಮಣಿಪೀಠಕೆ 1 ಜಡೆಯಬಂಗಾರವನು ಹಾಕಿ ಬಿಡದೆ ಕಮಲಮಾಲೆಧರಿಸಿ ಮುಡಿದು ಮಲ್ಲಿಗೆ ಸಂಪಗೆಯ ಒಡನೆ ಪೀತಾಂಬರವನುಟ್ಟು 2 ಜಾಜಿಪಟ್ಟಣನರಸಿಯೆ ನೀಂ ರಾಜಿಸು ತನುರಾಗದಿಂ ದೀನ ಜನರಂ ಹರುಷಗೊಳಿಸು ಮಾಜದೇ ನೀ ಮಂಗಳಾಂಗಿ3
--------------
ಶಾಮಶರ್ಮರು
ಬಾರೆ ಬೇಗನೆ ವಾರಿಜಾಮುಖಿ ಚಾರುವೇದಕೆ ನೀ ಬಾ ಬೇಗನೆ ಪ ಕನಕಾಂಬರವನುಟ್ಟು ‌ಘನಕಂಚುಕವ ತೊಟ್ಟು ಹಣೆಗೆ ತಿಲಕವಿಟ್ಟು ವನಜಾಜಿ ಮಲ್ಲಿಗೆಯಾ ಮುಡಿಯುತ ನೀ ಬೇಗನೆ ಬಾ 1 ಲುಲ್ಲ ಪೈಜಣದಿ ಘಿಲ್ಲು ಘಿಲುರೆನುತಲಿ ನಿಲ್ಲದೆ ಉಲ್ಲಾಸದೀಗ | ಬೇಗ ಫುಲ್ಲನಯನೆ ಬಾ 2 ಕಾಮನ ಶಿರೋಮಣಿ ಕಾಮನ ಕರುಣಿ ಶಾಮಸುಂದರನ ರಾಣಿ ನೀ ಬೇಗೆನ ಪ್ರೇಮದಿಂದಲಿ ಬಾ 3
--------------
ಶಾಮಸುಂದರ ವಿಠಲ
ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ಪ ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ ಅ ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ 1 ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ 2 ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ 3
--------------
ಕನಕದಾಸ
ಬೇಕಿಲ್ಲ ಬೇಕಿಲ್ಲ ಇಹಲೋಕಾಡಂಬರವು ಸಾಕೀ ನಿನ್ನನು ಧ್ಯಾನಿಪ ಪರಲೋಕ ಜ್ಞಾನವನು ಪ. ಶ್ರೀಪ ಕರುಣಿಸಿ ನಿನ್ನ ಸ್ವಂತ ಜನರನ್ನೂ ಕಾಪಾಡೊ ದೊರೆಯೆ ಅ.ಪ. ನಿನ್ನ ಭಕ್ತರ ಸಂಗವನ್ನು ಕೃಪೆದೋರಿ ಸಲಹೊ ಚನ್ನ ಕೇಶÀವರಾಯ ಇನ್ನು ಕೃಪೆ ಮಾಡೊ 1 ಯನ್ನಪರಾಧಗಳನ್ನು ಎಣಿಸುವರೆ ದೇವ ಸನ್ನುತ ಚರಿತ ಭಕ್ತ ಸನ್ಮಾನಯುತ ನಿನ್ನ ಮಹಿಮೆಗಳನ್ನು ವರ್ಣಿಸಲಳವೆ ಮುನ್ನ ಶೇಷಾನಿಂದ ಸೇವ್ಯವಾಗಿರಲೂ ಯನ್ನಿಂದಾಡಿಶಿ ನೀನು ಸನ್ಮಾನಕೊಂಡು ನಿನ್ನಾ ಭಕ್ತಳೆಂದು ಸ್ತುತಿಗೊಂಡು ನಲಿನಲಿದೆ 2 ಯೆನ್ನಿಂದೇನಹುದೋ ಮನ್ಮನದೊಡೆಯ ಚನ್ನ ಶೇಷಾದ್ರಿನಿವಾಸ ಘನ್ನ ಶ್ರೀ ಶ್ರೀನಿವಾಸ ನೀನೇ ಆಡಿಸುತ ನೀನೇ ಮಾಡಿಸುತ ದಾಸಿ ನೀನಾಗಿರೆ ನಾನೇನ ಬಲ್ಲೆನೊ 3
--------------
ಸರಸ್ವತಿ ಬಾಯಿ