ಒಟ್ಟು 203 ಕಡೆಗಳಲ್ಲಿ , 64 ದಾಸರು , 176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು
ನಂದಪುತ್ರನ ಆಜ್ಞೆಯಿಂದಲುದ್ಧವ ಬ್ಯಾಗ ಬಂದು ಗೋಕುಲ ಹೊಕ್ಕಾನಂದದಿಂದಲಿ 1 ಬಾಲನ್ವಾರ್ತೆಯ ಕೇಳೆಶೋದ ಗೋಪನು ಕೊಂ- ಡಾಡಿ ಗುಣಗಳ ಮನಕೆ ತಾಳಿದರ್ಹರುಷವ 2 ತಾಪ ಬಿಡದಲೆ ಅಗಲಿ ಶ್ರೀಪತಿ ಕಾಣದೆ ಸಂತಾಪದಿಂದಿರೆ 3 ಸತಿಯರೆಲ್ಲರು ಗೋಪಿಸುತನ ಪಾಡುತ ದಧಿಯ ಮಥಿಸಿ ಕದವನೆ ತೆಗೆಯೆ ರಥವ ಕಂಡರು 4 ದಾವ ಕಾರಣ ನಮ್ಮ ಭಾವಭಕ್ತಿಗೆ ಸ್ವಾಮಿ ತಾನೆ ಬಂದಾನೋ ತನ್ನಕ್ರೂರನ ಕಳಿಸ್ಯಾನೊ 5 ಭದ್ರೆರೆಲ್ಲರೂ ಕೂಡಿ ಎದ್ದು ಬರುತಿರೆ ಮಧ್ಯಮಾರ್ಗದಿ ಅಲ್ಲುದ್ಧವನ ಕಂಡರು 6 ಕಾಂತೇರೆಲ್ಲರು ಕೂಡೇಕಾಂತ ಸ್ಥಳದಲ್ಲಿ ನಿಂತು ಕಂತುನಯ್ಯನು ಲಕ್ಷ್ಮೀಕಾಂತ ಕ್ಷೇಮವೆ 7 ಇಂದಿರೇಶನ ಬಿಟ್ಟಗಲಿ ವ್ರಜದೊಳು ಕಾಲ ಹಿಂದೆ ಕಳೆವೋದ್ಹ್ಯಾಗಿನ್ನ ್ಹಗಲು ಇರುಳನೆ 8 ಮುಂದೆ ಕಾಣದೆ ನೇತ್ರ ಅಂಧಕರಂದದಿ ಮು- ಕ್ಕುಂದನಿಂದಲಿ ರಹಿತರೆಂದಿಗಾದೆವೊ 9 ತೊಡಿಗೆ ಬಂಗಾರ ಶಿರದಿ ಮುಡಿವೊ ಮಲ್ಲಿಗೆ ದೇಹ- ಕ್ಕುಡಿಗೆ ಭಾರವೊ ಬಿಟ್ಟು ಪೊಡವಿಗೊಡೆಯನ 10 ಉದ್ಧವ ನಾವು ಜಾಳು ಸ್ತ್ರೀಯರು ಒಲ್ಲದೆ ಕಾಳಿಮರ್ದನ ಕಾಲಲೊದ್ದು ಪೋದನು 11 ಜಾರಸ್ತ್ರೀಯರುಯೆಂದು ನಗದಿರುದ್ಧವ ಬಿಗಿದ ಮೋಹಪಾಶದಿ ಈ ವಿಚಾರ ಮಾಡಿದ 12 ಬಲೆಯಗಾರಗೆ ಸಿಕ್ಕು ಬಳಲಿದಾಕ್ಷಣ ಅದರ ಕೊ- ರಳ ಕೊಯ್ಯದೆ ಅವಗೆ ಕರುಣ ಬರುವುದೆ 13 ಎಷ್ಟು ಹೇಳಲೊ ಅವನ ಗಟ್ಟಿಯೆದೆಗಳ ಒಲ್ಲದೆ ಬಿಟ್ಟು ನಮ್ಮನು ಮಧುರಾಪಟ್ಟಣ ಸೇರಿದ 14 ಭ್ರಮರಕುಂತಳೆ ಒಂದು ಭ್ರಮರಕಾಣುತ ಬ್ಯಾಡ ಕಮಲನಾಭನ ವಾರ್ತೆ ಕಿವಿಗೆ ಸೊಗಸದು 15 ಮದನಮೋಹನ ಹೋಗಿ ಮಧುರಾಪುರಿಯಲಿ ಅಲ್ಲಿ ಚÉದುರೆರಿಂದಲಿ ಅವಗೆ ಸೊಗಸು ಸಮ್ಮತ 16 ಕ್ರೂರನೆನ್ನದೆ ಇವಗಕ್ರೂರನೆನುತಲಿ ದಾರ್ಹೆಸರಿಟ್ಟರೋ ನಮಗೆ ತೋರಿಸೊ ಅವರನು 17 ಯಾತಕ್ಹೇಳುವಿ ಅವನ ವಾರ್ತೆ ಸೊಗಸದು ಹರಿಯು ಪ್ರೀತಿ ವಿಷಯನು ನಮಗೆ ಘಾತಕನೆನಿಸಿದ 18 ಜಲನ ಭೇದಿಸಿ ಹಯನ ಕೊಂದು ವೇದವ ಹ್ಯಾಗೆ ಹರಣ ಮಾಡಿದ 19 ಕ್ಷೀರ ಮಥನವ ಮಾಡಿ ಸ್ತ್ರೀಯರೂಪದಿಂದಸುರರ ಮೋಹಿಸಿದ್ವಂಚನೆ ನಮಗೆ ಪೂರ್ಣ ತಿಳಿಸಿದ 20 ಭೂಮಿ ಬಗಿದನು ತನ್ನ ಕ್ವಾರೆಯಿಂದಲಿ ನಮ್ಮನ್ನು ಸೀಳಿ ಪೋದರೆ ಇನ್ನೀ ಘೋರ ತಪ್ಪುವುದು21 ಕಂದ ಕರೆಯಲು ಕಂಬದಿ ಬಂದು ಸಲಹಿದನೆಂದು ನಂಬಿ ಕೆಟ್ಟೆವೊ ಇನ್ನಿವನ ಹಂಬಲ ಸಾಕಯ್ಯ 22 ಕೊಟ್ಟ ದಾನವ ಬಲಿಯ ಕಟ್ಟಿ ಪಾಶದಿಂದವನ ಮೆಟ್ಟಿದ ಪಾತಾಳಕಿಂಥಾಕೃತ್ಯಮರುಂಟೇನೊ 23 ಕೊಡಲಿ ಕೈಯ್ಯೊಳು ಪಿಡಿದು ಹಡೆದ ಮಾತೆಯ ಶಿರವ ಕಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 24 ಬಂದ ಸತಿಯಳ ಮೋರೆ ಅಂಗ ಕೆಡಿಸಿದ ತ- ನ್ನಂಗನೆ ಕಾಣದೆ ತಿರುಗಲೆಮಗೆ ಸನ್ಮತ 25 ಪತಿಯ ಸುತರನೆ ಬಿಟ್ಟೆವಶನ ವಸನವ ಅಗಲಿದ್ವಸುನಂದನಗೆ ನಮ್ಮೆಲ್ಲರುಸುರು ಮುಟ್ಟಲ್ಯೊ 26 ಬೌದ್ಧರೂಪದಿ ಸ್ತ್ರೀಯರ ಲಜ್ಜೆಗೆಡಿಸಿದನೆಂಬೊ ಸುದ್ದಿ ಬಲ್ಲೆವೊ ನಾವಿಲ್ಲಿದ್ದವರುದ್ಧವ 27 ಕಲಿಯ ಮನಸಿರೆ ಇವಗೆ ಕಲ್ಕ್ಯನೆಂಬೋರೊ ಕತ್ತಿ ಪಿಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 28 ಬ್ಯಾಡವೆನುತಲಿ ಅವಗೆ ಬೇಡಿಕೊಂಡೆವೊ ಗಾಡಿಕಾರನು ನಮ್ಮ ನೋಡದ್ಹೋದನು 29 ನಮ್ಮ ವಚನವ ಹೋಗಿ ಮನ್ನಿಸುದ್ಧವ ಪನ್ನಂಗಶಯನನ ಪಾದಕ್ಕಿನ್ನು ನಮಿಸೆವೊ 30 ಬಿಟ್ಹ್ಯಾಗಿರುವೊಣೋ ಭೀಮೇಶಕೃಷ್ಣನ ನಮ್ಮ ದೃಷ್ಟಿಗೆ ತೋರಿಸೊ ಮುಕ್ತಿ ಕೊಡುವೊ ದಾತನ31
--------------
ಹರಪನಹಳ್ಳಿಭೀಮವ್ವ
ನಂದಿಯನೇರಿ ಬರುತಿಹ ಸುಂದರನ್ಯಾರೆ ಪೇಳಮ್ಮಯ್ಯ ಪ. ಚಂದ್ರಚೂಡ ಗಂಗಾಧರ ಶಂಕರ ಸುಂದರ ಗೌರೀರಮಣ ಕಣಮ್ಮಾ ಅ.ಪ. ಕರದಿ ತ್ರಿಶೂಲ ಧರಿಸಿದನಾರೆ ಪೇಳಮ್ಮಯ್ಯ ವರ ಡಮರುಕಪಾಲ ಪಿಡಿದಿಹನಾರೆ ಪೇಳಮ್ಮಯ್ಯಾ ಕರುಣವ ತೋರುತ ಸಕಲರ ಮನ ಮಂದಿರದಲಿ ಪೊಳೆಯುವ ಗಿರಿಜಾ ರಮಣ ಕಣಮ್ಮ 1 ಗಜ ಚರ್ಮಾಂಬರ ಧರಿಸಿಹನಾರೆ ಪೇಳಮ್ಮಯ್ಯ ತ್ರಿಜUನ್ಮೂರುತಿ ನೊಸಲಿಗೆ ಭಸ್ಮವ ಧರಿಸಿಹನಾರೆ ಪೇಳಮ್ಮಯ್ಯ ಋಜುಗುಣದೊಡೆಯಗೆ ರಜತಾದ್ರಿನಿಲಯ ನಿಜ ಪಾರ್ವತೀರಮಣ ಕಣಮ್ಮಾ 2 ಶೇಷನಾಭರಣವ ಧರಿಶಿಹನಾರೆ ಪೇಳಮ್ಮಯ್ಯ ಸೋಸೀಲಿ ಮೂಗಣ್ಣವನಾರೆ ಪೇಳಮ್ಮಯ್ಯ ವಾಸುಕಿಶಯನ ಶ್ರೀ ಶ್ರೀನಿವಾಸನ ವಾಸ ಶಂಭೋ ಶಂಕರನು ಕಣಮ್ಮಾ 3
--------------
ಸರಸ್ವತಿ ಬಾಯಿ
ನಾನು ತಿಳಿದವನಲ್ಲ ನೀ ಕಾಯ್ದೆ ಶ್ರೀ ಕೃಷ್ಣ ನಾನರಿಯದಿರ್ದಡಿದ ನೀನರಿಯದವನೇ ಪ ಒಂದು ದಿನ ನಿನ್ನ ಧ್ಯಾನದಿ ನಡೆದು ಬರುತಿರಲು ಕೊಂದು ಚೂತದ ನೆಳಲಸಾರಿ ನಾನು ಒಂದು ನಿಮಿಷಮ ನೀರ ತಡಿಯಲಿ ಸಂಚರಿಸುತಿರ ಲೊಂದು ತಕ್ಷಕ ಬಂದು ವನವ ಹೊಕ್ಕಿರಲು 1 ಮಲ ಮೂತ್ರದುಪಹತಿಯ ಪರಿಹರಿಸಿ ಕೈಗಳನು ಜಲಮೃತ್ತಿಕೆಗಳಿಂದ ತೊಳೆದು ತೊಳೆದು ಎಳೆ ಬಿಸಿಲ ಸೇವಿಸುತ ದಂತಧಾವನ ಗೈದು ಸಲಿಲವನೆ ಮುಕ್ಕುಳಿಸಿ ಕೇಲದೊಳುಗಿದು 2 ನಿಂತು ಕಾಲ್ಮೊಗ ದೊಳೆದು ಆಚಮಿಸಿ ಆದಿತ್ಯ ನಂತಿ ಕಕೆ ಸಲಿಲಮಂತಿದ್ದಿ ಜಪವಾ ಅಂತ ರಂಗದಿ ಜಪಿಸಿ ಮುಗಿಸಿ ವಸ್ತ್ರಗಳಿಟ್ಟು ಗೊಂತಿಗೈತಂದವನು ಮರಳಿಧರಿಸಿ 3 ಹಚ್ಚಡವ ಹೊದ್ದು ಮುಂದಕೆ ನಡೆದು ಬರುತಿರ ಲಾಶ್ಚರ್ಯವೆನಿಸಿ ಬದಿಯೊಳಗುಮ್ಮಲು ಸ್ವಚ್ಚವಲ್ಲವಿದೆಂದು ಕಿಮುಚಿನಾ ನೋಡಿ ಬಲು ಬೆಚ್ಚಿ ಹಚ್ಚಡ ಬಿಸುಡೆ ಬಿಚ್ಚೆ ಪೆಡೆಯಲು ಕಂಡೆ 4 ನೀ ಕೊಲುವ ಕಾಲದೊಳು ಕೊಲುವರಿಲ್ಲ ಲೋಕೈಕನಾಥ ಚಿಪ್ಪಳಿ ವೇಣುಗೋಪಾಲ ನೀ ಕರುಣದಿಂ ಕಾಯ್ದೆ ಎನ್ನಸುವನು 5
--------------
ಕವಿ ಪರಮದೇವದಾಸರು
ನಿಮ್ಮ ನುಡಿಗಳ ಕೇಳಲೆನಗೆ ಹೊತ್ತೆಲ್ಲಿಯದುನಮ್ಮ ಗೃಹಕೃತ್ಯಗಳು ಬಹಳವಾಗಿಹವೊ ಪನಮ್ಮಯ್ಯನೊಂದು ಗ್ರಾಮವನೇಕಸ್ವಾಮ್ಯದಲಿತಮ್ಮ ದಂಪತಿಗಳುಪಭೋಗಕೆಂದುತಮ್ಮಲ್ಲಿ ತಾವೆ ಸಂವಾದಿಸಿದರವರಲ್ಲಿಹಮ್ಮು ಕಡೆಯಾದ ಹದಿಮೂವರುದಿಸಿದರೂ 1 ಕ್ಲೇಶ ಬಡಿಸುವರು 2ಸ್ತ್ರೀ ಕಾಮನೆ ರಾಗ ಪ್ರತಿಕೂಲದಿಂ ದ್ವೇಷ ಬೇಕೆಂಬದನೆಕಾದುನುಳಿಯೆ ಕ್ರೋಧಾಆಕ್ರಮಿಸಿ ಸಕಲವನು ಬಚ್ಚಿಡುವನವ ಲೋಭಸಾಕು ಗುರುಹಿರಿಯರೆಂಬವರರಿಯೆ ಮೋಹಾ 3ನಿತ್ಯವಲ್ಲದ ಸಿರಿಯ ನಂಬಿ ಬೆರೆತಿಹಮದನುಉತ್ತಮರ ಕೂಡೆ ಸೆಣೆಸುವನು ಮತ್ಸರನುಮತ್ತೆ ಈಷ್ರ್ಯನು ದುಃಖನನ್ಯರಿಗೆ ಬಗೆಯುತಿಹವ್ಯರ್ಥದಿಂ ಬಸವಳಿಯುತಿಹನಸೂಯಕನು 4ದಂಭವನೆಂಬವನಲ್ಲಿ ಪುರುಷಾರ್ಥವಿಸಿಕಿಲ್ಲಹಂಬಲಿಸುತಿಹ ದರ್ಪಕೊಬ್ಬಿ ಬರಿದೆಉಂಬರೊಬ್ಬರಿಗಿಲ್ಲ ಸಕಲವೂ ನನಗೆಂದುದೊಂಬಿಯಲಿ ನಾ ಸಿಕ್ಕಿ ಬಳಲುತಿಹೆನಾಗಿ 5ವೃತ್ತಿಯೆರಡದರಲ್ಲಿ ಫಲವೆರಡು ಜನ್ಮಕ್ಕೆಬಿತ್ತಿ ಬೆಳೆವರೆ ಚೌಳು ಜಲವ ಕಾಣೆಒತ್ತರಿಸಿ ಬರುತಿರುವ ಜ್ಞಾತಿಗಳ ಬೆಂಕಿಯಲಿಹೊತ್ತು ಹೊತ್ತಿಗೆ ಬರಿದೆ ದಹಿಸುತಿಹೆನಾಗೀ 6ಬರಿಯ ಭ್ರಾಂತಿನ ಬಲೆಯ ಬೀಸಿ ನೋಡುತ್ತಿರುವತಿರುಪತಿಯ ವೆಂಕಟನ ಚರಣಗಳನುಕರಗಳಲಿ ಬಿಗಿಯಪ್ಪಿ ಶಿರವೆರಗಿ ಗುರುಮುಖದಿಅರುಪಿದುದ ನಿಲಿಸೆಂದು ಬೇಡಿಕೊಳುತಿಹೆನು 7ಕಂ||ತನುವಿನೊಳಭಿಮಾನವಿರಲೀಘನತರ ಸಂಸಾರ ದುಃಖ ತೊಲಗದು ಸತ್ಯತನು ನಿತ್ಯತೆದೋರ್ದಕಾರಣಮನದೊಡನಿಂತೆಂದು ಜೀವನನು ವಾದಿಸಿದಂ
--------------
ತಿಮ್ಮಪ್ಪದಾಸರು
ನಿರುತದಿಂದಿಳೆಯೊಳು ಅರಸಿ ನೋಡಲು ಕಾಣೆ ಗುರು ಸತ್ಯಜ್ಞಾನರಿಗೆ ಪ ಸರಿ ಇಲ್ಲಿವರ ಚರಣಕಮಲವ ನಿತ್ಯ ದುರಿತ ಹರಿಪರ ಅ.ಪ ಸತ್ಯ ಜ್ಞಾನ ಗುರೋ ನೀ ಗತಿ ಎಂದವರ ನಿತ್ಯದಿ ಬಿಡದೆ ಕಾಯ್ವ ಅತ್ಯಾದರದಿ ಮಧ್ವಮತ ಸ್ಥಾಪಕರಾಗಿ ಮಿಥ್ಯಾ ಜ್ಞಾನಗಳಳಿದ | ಮೆರೆದ 1 ಸತ್ಯಧೀರರಿಂದ ಯತ್ಯಾಶ್ರಮ ಪಡೆದು ರತ್ಯಾದಿ ವಿಷಯವ ಬಿಟ್ಟು ಯತ್ಯಾಶ್ರಮೋಕ್ತ ಕೋಪತ್ಯಾಗಾದಿಗಳನು ವ್ಯತ್ಯಾಸಿಲ್ಲದೆ ನಡೆಸಿ | ಶೋಭಿಸಿ2 ಗುರು ಆರಾಧನಿ ದಿನ ತೀರ್ಥವ ಕೊಡುತಿರೆ ವರ ಸುವಾಸಿನಿ ಒಬ್ಬಳೂ ಕರವ ನೀಡಲು ಬಂದು ಅರಿತು ವಿಧವತ್ವ ನೆರಪೇಳ್ದರಪರೋಕ್ಷದಿ | ಭೂತಳದಿ 3 ಭರದಿಂದ ಸುರಿಯುತ್ತಿರೆ ಮೊರೆಯಿಡೆ ಎಡಬಲದವರು ಅದನು ಕೇಳೆ ದೂರಸ್ಥಳಿಹಳೆಂದ್ಹೇಳಿರು | ಪಂಕ್ತಿಯಲಿ 4 ಈ ರೀತಿಯಿಂದಲಿ ತೋರಿಸಿ ಮಹಿಮೆಯ ಇರಿಸೆ ಮಂತ್ರಿಸಿ ಫಲವ ಭರದಿ ಸುರಿವ ಮಳೆ ತ್ವರಿತದಿ ನಿಲ್ಲಲು ಅರಿತು ವಿಚಾರಿಸಲು | ನಿಜವಿರಲು5 ಪತಿ ಪೂಜೆ ಸಾವಧಾನದಿ ಮಾಡಲು ಇವರ ಮನೋಧಾರಡ್ಯ ಜವದಿ ಜಯಾಮುನಿ ಅವನಿಗರುಹಬೇಕೆಂದು | ತಾ ಬಂದು 6 ಬರುತಿರೆ ಉರಗಾಕಾರದಿಂದಲಿ ಬಂದು ಅರಿಯದ ಜನರು ಕೂಗೆ ಮಾರಮಣನ ಧ್ಯಾನ ಜರಿಯದೆ ಅವರಿಗೆ ತೋರಿದರಭಯವನು | ವಿಚಿತ್ರವನು 7 ಭೂವೈಕುಂಠದಿ ವಿಶ್ವರೂಪದರ್ಶನಕ್ಹೋಗೆ ಮಾರ್ಗವ ಕೊಡದಿರಲು ಭಾವದಿ ಧ್ಯಾನಿಸೆ ಶ್ರೀ ವಲ್ಲಭನಾಮ ಧರಿಸದೀರಾಧರಿಸೇ | ಧರಿಸಿ 8 ಈ ವಿಧ ಮಹಿಮೆಯ ತೋರಿಸಿ ಜಗದೊಳು ಗೋದಾತೀರದಿ ಶೋಭಿಪ ಅವನಿಪ ಮಹೇಂದ್ರ ಭುವನ ಶ್ರೀ ನರ ಹರಿ ನಿನ್ನ ಮಾಘಸಿತದಿ | ಸ್ಮರಿಸಿದ9
--------------
ಪ್ರದ್ಯುಮ್ನತೀರ್ಥರು
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪಾರ್ವಟೆ ಉತ್ಸವಗೀತೆ ನೋಡಿದೆ ನೋಡಿದೆ ಪಾರ್ವಟೆ ಉತ್ಸವವ ರೂಢಿಗೊಡೆಯ ರಂಗನ ಪರಮಸಂಭ್ರಮವ ಪ. ಮುದದಿ ವಿಜಯದಶಮಿಯಲಿ ಭುಜಗಶಯನ ರಂಗ ವಿಧವಿಧವಾದ ಆಭರಣ ವಸ್ತ್ರಗ[ಳಿಂದ] ಮದನನಯ್ಯನು ತಾನು ಶೃಂಗಾರವಾಗಿ ಒದಗಿ ಪಲ್ಲಕ್ಕಿ ಏರಿ ಬರುವ ವೈಭೋಗವ 1 ಮುತ್ತಿನಕಿರೀಟ ಮುಗುಳುನಗೆಯ ನೋಟ ರತ್ನದ ಪದಕಗಳ ಹತ್ತುಅಳವಟ್ಟು ಬಟ್ಟಲಲಿ ಭಕ್ತರು ಬಿಟ್ಟ ಉಭಯವನ್ನೆಲ್ಲ ಗ್ರಹಿ ಸುತ್ತ ನರಸಿಂಹನಪುರದ ಮಂಟಪದಲ್ಲಿ 2 ಅಂಬುಮಾಲೆ ಆನೆಮೇಲೆ ನೇಮದಿಂದಲೆ ತಂದು ನೀಲವರ್ಣಗೆ ಕೊಡಲು ಪೂಜೆಯನು ಮಾಡಿ ಅಂಬು ನಾಗಶಯನ ಬಹರಿನೇರಿ ಲೀಲೆಯಿಂದ ಬರುವ ಪರಮವೈಭೋಗವ 3 ಶರಧಿಯಂತೆ ಪುರುಷೆ ಭೋರ್ಗರೆಯುತ ಬರುತಿರೆ ಮುರುಜ ಮೃದಂಗ ಭೇರಿವಾದ್ಯ ಘೋಷಗಳು ಗಜ ಸಿಂಹ ವೃಷಭ ಶಾರ್ದೂಲನಡೆಯಿಂದ ಬಂದ ವಸುದೇವಪುತ್ರನ 4 ಬಂದು ಅಶ್ವವನಿಳಿದು ಅರ್ಥಿಯಿಂದಲೆ ನಿಂದು ಗಾಯಿತ್ರಿಮಂಟಪದಲ್ಲಿ ಮಿತ್ರರು ಸಹಿತ ಇಂದಿರೆ ಸಹಿತಲೆ ನಿಂದ ವೆಂಕಟರಂಗ ಮಂದಿರದೊಳಗೆ 5
--------------
ಯದುಗಿರಿಯಮ್ಮ
ಪಾರ್ವತಿ ದೇವಿ ಉಮಾ - ನಿನಗೆ ಸರಿಯಾರೇಕಮ್ಮಗೋಲ್ವೈರಿಯ ಪ್ರೇಮ ಪಾತ್ರಳಾದ ಪ ಆಡೂವ ನುಡಿಗಳ - ಜೋಡಿಸಿ ಹರಿಯಲಿಮಾಡೀಸು ಸತ್ಸಾಧನಾ ||ಬೇಡಿಕೊಂಬೆನು ದೇವಿ - ರೂಢಿಗೊಡೆಯನ ತಡಮಾಡದೆ ತುತಿಪಂಥ - ಜೋಡಿಸು ಮನಾ 1 ಸುರಪಾದಿ ದೇವತೆ ಕರಗಳ ಜೋಡಿಸಿಶರಣೆಂದು ಪೇಳುವರೇ ||ಹರ್ಯಕ್ಷ ಯಕ್ಷನ ಈಕ್ಷಿಸಿ ಬರುತಿರೆಹರಿ ಪೇಳೆ ಸುರಪಗೆ ಬೋಧಿಸಿದೆ 2 ಸತಿ - ವ್ಯತ್ಯಸ್ತ ಮನವನುಸತ್ಯಾತ್ಮನಲಿ ನಿಲಿಸೇ ||ಅರ್ಥೀಲಿ ಹರಿಯ - ಅತ್ಯರ್ಥ ಪ್ರಸಾದಕ್ಕೆಪಾತ್ರನೆಂದೆನಿಸಿ - ಪಾಲಿಸೇ 3 ಪ್ರಾಣಂಗೆ ಪ್ರಾಣನ - ಗಾನ ಮಾಡಲು ಗುಣಶ್ರೇಣಿಗಳ ಜೋಡಿಸೇ ||ಗಾನ ವಿನೋದಿ - ಪ್ರ - ದಾನ ಪುರೂಷನಮಾಣದೆನಗೆ ತೋರಿಸೇ 4 ಹಿಮಗಿರಿಸುತೆತವ - ವಿಮಲಪದಾಬ್ಜಕೆನಮಿಸುವೆ ನೀ ಪಾಲಿಸೇ ||ಅಮಿತಾರ್ಕ ನಿಭ ಗುರು ಗೋವಿಂದ ವಿಠಲನಕಮನೀಯ ಪದ ಕಾಣಿಸೇ 5
--------------
ಗುರುಗೋವಿಂದವಿಠಲರು
ಪಾಲಿಸೆನ್ನ ಪಾಲಿಸೋ ಎನ್ನಾ ಪ ಪಾಲಿಸೆನ್ನ ಗುರು ಫಾಲನಯನಾಸುರಪಾಲನ ಪಿತ ಶ್ರೀ ಪಾರ್ವತಿರಮಣಅ.ಪ. ಲಿಂಗವೇರಿ ಸುರರಂಗದಿ ಚರಿಸುವ ಶಿರಿರಂಗನ ಪದ ಪವನನ ಭೃಂಗಾ 1 ಕವಿ ವಿನುತ ಪರರಾಳಿಯ ಪ್ರಿಯಬಾಲಾ 2 ನವಿಲನೇರಿ ಬರುತಿಪ್ಪನ ಪಿತತಂದೆವರದಗೋಪಾಲವಿಠಲನ ಆಪ್ತಾ 3
--------------
ತಂದೆವರದಗೋಪಾಲವಿಠಲರು
ಪಾಲಿಸೈ ವಿಶಾಲಗುಣಭರಿತ ನಿನ್ನಯ ಚರಿತ ಕಾಲಭೈರವ ನುತಿಪೆ ನಾ ಸತತ ಕಾಲಕಲ್ಪಿತ ಲೀಲೆಯರಿತು ಸು- ಶೀಲತನವನು ಮೆರೆಯಲೋಸುಗ ಸ್ಥೂಲಸೂಕ್ಷ್ಮಾಕೃತಿಯ ಧರಿಸಿದ ಮೂಲಿಕಾ ಶ್ರೀನಿವಾಸ ಭೈರವ 1 ಪರಮಪಾವನ ಕ್ಷೇತ್ರದಲ್ಲಿರುತ ಐತಂದು ಮತ್ತಾ- ವೀರ ಶ್ರೀರಾಮನ ಸೇತು ನೋಡುತ್ತ ಧರೆಯ ಸಂಚರಿಸುತ್ತ ಬರುತಿರೆ ಮಿರುಪ ಶೇಷಾಚಲ ನಿರೀಕ್ಷಿಸಿ ಭರದಿ ಗಿರಿಮೇಲಡರಿ ಶ್ರೀಶನ ಚರಣಕಾನತನಾಗಿ ಸ್ತುತಿಸಿದೆ 2 ಸುರವರೇಶನು ನಿನಗೆ ಪ್ರೀತಿಯಲಿ ಮಂತ್ರತ್ವದಲ್ಲಿ ಇರಿಸಿ ಮೆರೆಸಿದೆ ಕೀರ್ತಿಕರವಲ್ಲಿ ತ್ವರಿತದಿಂ ನೀನೆಲ್ಲ ದೇಶದ ಪರಿಪರಿಯ ಕಾಣಿಕೆಯ ತರಿಸುತ ಹರಿಯ ದರುಶನಗೈವ ಮೊದಲೆ ಹರುಷದಿಂದಲಿ ಪೂಜೆಗೊಂಬುವೆ 3 ಶರಣರನು ನೀ ಕಾಯ್ವೆ ಮಮತೆಯಲಿ ಅಲ್ಲಲ್ಲಿರುತಲಿ ಧರಿಸಿ ಮೃದುತರವಾದ ವಾಕ್ಯದಲಿ ಕರೆಸಿ ಒಬ್ಬೊಬ್ಬರ ವಿಚಾರಿಸಿ ಸರಸದಿಂದಲಿ ಪೊಗಳಿಕೊಳ್ಳುತ ನರರ್ಗೆ ಸೋಂಕಿದೆ ಭೂತಪ್ರೇತದ ಭಯಗಳನು ಪರಿಹರಿಸಿ ಪಾಲಿಪೆ 4 ಭೂತಳದೊಳಧಿಕವಾಗಿರ್ಪ ಕಾರ್ಕಳಕಧಿಪ ಖ್ಯಾತ ವೆಂಕಟಪತಿಗೆ ಸಖಿಯಷ್ಪ ಖ್ಯಾತಿಯಿಂ ದೊರೆಯಿದಿರಿನಲಿ ಸಂ- ನಿಧಿಸನ್ನುತನಾಗಿ ಮೆರೆದಿಹೆ ಓತು ಕರುಣದೊಳೊಲಿದು ಪಾಲಿಪ ದಾತ ಲಕ್ಷ್ಮೀನಾರಾಯಣಾಪ್ತನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೋ ಗಂಗಾಧರ ಪಾಲಿಸೋ ಪ. ಪಾಲಿಸೊ ಗಂಗಾಧರನೆ | ಮಧ್ಯ ಫಾಲದಿ ನಯನ ಉಳ್ಳವನೆ | ಆಹ ಶ್ರೀಲೋಲನ ಗುಣಜಾಲವ ಸ್ಮರಿಸುತ್ತ ಲೀಲೆಯಿಂ ಭಕ್ತರ ಪಾಲಿಸುತಿಪ್ಪನೆ ಅ.ಪ. ಬ್ರಹ್ಮನ ಭ್ರೂಮಧ್ಯೆ ಜನಿಸಿ | ಬಹು ದುರ್ಮತಿಗಳನೆ ಮೋಹಿಸಿ | ಕು ಧರ್ಮದ ಶಾಸ್ತ್ರವ ರಚಿಸಿ | ಅಂ ಧತಮ್ಮಸಿಗವರ ಕಳಿಸಿ | ಆಹ ನಿರ್ಮಲ ಮನದಲ್ಲಿ ಬೊಮ್ಮನಯ್ಯನ ಭಜಿಸಿ ನಿತ್ಯ ರಮಿಸುತಲಿಪ್ಪನೆ 1 ಕಂಜನಾಭನ ಮೊಮ್ಮಗನೆ | ಖಳರ ಭಂಜಿಸುವಂಥ ಬಲಯುತನೆ | ಮನ ರಂಜನ ರೂಪಾಕೃತನೆ | ಖಳ ಗಂಜಿ ಹರಿಯಿಂದ ರಕ್ಷಿತನೆ | ಆಹ ಅಮೃತ ಮಥಿಸುವಾಗ ನಂಜುದ್ಭವಿಸೆ ಕುಡಿದು ನಂಜುಂಡನೆನಿಸಿದೆ 2 ಕಪಿಲನದಿ ತೀರದಲ್ಲಿ | ಬಹು ತಪಸಿಗಳಿಗೆ ಒಲಿಯುತಲಿ | ಭಕ್ತ ರಪರಿಮಿತ ಬರುತಿಲ್ಲಿ | ನಿತ್ಯ ಜಪಿಸುತ್ತ ನಿನ್ನ ಸ್ತೋತ್ರದಲಿ | ಆಹ ಗುಪಿತದಿಂದ್ಹರಿ ಭಕ್ತರಪವರ್ಗದೊಡೆಯ ನಿನ್ನ ಲ್ಲಿಪ್ಪನೆಂತೆಂದು ಜಪಿಸುತ್ತಲಿಪ್ಪರೊ3 ಗಂಗಾಧರನೆನಿಸಿದನೆ | ಅಂತ ರಂಗದಿ ಹರಿಯ ತೋರುವನೆ | ಉಮೆ ಕಂಗಳಿಗಾನಂದಪ್ರದನೆ | ನಿತ್ಯ ರಂಗನಾಥನ ಪೂಜಿಸುವನೆ | ಆಹ ಜಂಗಮ ಜೀವರ ಮನದಭಿಮಾನಿಯೆ ಲಿಂಗರೂಪದಿ ಜನರ ಕಂಗಳರಂಜನೆ4 ಅಪಾರ ಮಹಿಮನ ಗುಣವ | ಬಹು ರೂಪಗಳನೆ ನೋಡುತಿರುವ | ನಿತ್ಯ ಶ್ರೀಪತಿ ನರಹರಿಯ ನೆನೆವ | ಮುಂದಿ ನಾ ಪದವಿಗೆ ಶೇಷನಾಗ್ವ | ಆಹ ಪರಿ ಪರಿ ಗೋಪಾಲಕೃಷ್ಣವಿಠ್ಠಲನ ಧ್ಯಾನವ ನೀಡೊ5
--------------
ಅಂಬಾಬಾಯಿ