ಒಟ್ಟು 5292 ಕಡೆಗಳಲ್ಲಿ , 123 ದಾಸರು , 3484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಶಿಲೆಯಲ್ಲಿ ಮಮತೆಯೇ ಸಿದ್ಧ ಪುರುಷ ಇಳೆಮೂರು ವ್ಯಾಪಕಗೆ ಈ ಮುನಿಯ ಬಳಿಯಾ ಪ. ದಶರಥಾತ್ಮಜ ಸೇತು ಬಂಧನವ ಗೈಯಲೂ ಅಸಮ ಸಾಹಸದಿ ಗಿರಿಗಳನೆ ತಂದೇ ಹಸನಾದ ಶಿಲೆಯೊಂದರಲಿ ರೂಪ ಮೂಡುವಡೆ ವಸುಧಿ ಸುತೆಪತಿ ಬೇಡವೆನುತಿರ್ದನೇನೈ 1 ನಡುಗೆ ಹುಲಿ ಘರ್ಜನೆಗೆ ಪಡೆದವಳ ಕೈ ಜಾರೆ ವಡೆದು ಶತವಾಗಲಾ ಗಿರಿಯಲ್ಲಿ ಮಮತೇ ವಡಮೂಡದವಗೆ ಈ ವಡೆದ ಪ್ರತೀಕದಲಿ ಇಡುತ ಅಭಿಮಾನವನು ಕಡು ಪೂಜೆಗೊಂಬೇ 2 ಧರೆಯಲ್ಲಿ ಚರಿಸಿ ಸದ್ಭಕ್ತರ ಜ್ಞಾನವನು ಹರಿಸಿ ಸಧ್ಗ್ರಂಥ ಕನ್ನಡಿಯ ತೋರಿ ಗಿರಿ ಏರುವಾಗ ಬೇಕೆನಲು ಶಿಲೆ ಇರಲಿಲ್ಲೆ ಬಿರುಕಾದ ಕಲ್ಲಿನಲ್ಲಿ ನೆಲಸಿರುವದೇನೈ 3 ಶಿಲೆಯೆ ನೀನೆನ್ನಲು ಅಜ್ಞಾನಿ ನುಡಿಯಹುದು ಶಿಲೆಯಲ್ಲಿ ನೀನೆಲು ಮತ್ತೊಂದು ಶಿಗದೇ ಬಲು ಛಿದ್ರ ತಂತಿಯಲಿ ಬಿಗಿಸಿ ಪೂಜೆಯಗೊಂಬ ಬಲವಂತದಾ ಮಹಿಮೆ ತಿಳಿಯಲಳವಲ್ಲಾ 4 ತಾಪಸರ ಪೂಜೆ ಸತ್ವವ ತೋರ್ವ ವೈಭವವೋ ಆಪನ್ನರನೆ ಕಾಯ್ವ ಆನಂದವೋ ಶ್ರೀ ಪರಮಹಂಸ ಪ್ರದ್ಯುಮ್ನತೀರ್ಥರಿಗೊಲಿದೆ ಗೋಪಾಲಕೃಷ್ಣವಿಠ್ಠಲನ ನಿಜದಾಸ 5
--------------
ಅಂಬಾಬಾಯಿ
* ಸತ್ಯವಂತನೊ ನೀನು ಸರಸಿಜಾಕ್ಷ ಸಿರಿ ನಿತ್ಯಾವಿಯೋಗ ಪ. ಶ್ರೀನಿವಾಸನೆ ಕೃಷ್ಣ ಭಾನು ಪ್ರಕಾಶ ಹರಿ ಏನೆಂಬೆ ನಿನ್ನ ಪ್ರಭಾವವನ್ನು ನಾನಾ ವಿಧದಿಂದ ಭಕ್ತರ ಕಾಯ್ವ ನರಹರಿಯೆ ಮಾನವಂತರ ಕಾಯ್ವ ದಾನವಾಂತಕನೆ 1 ಕೃಷ್ಣಮೂರುತಿ ನಿನ್ನ ದರುಶನದ ಕಾರಣದಿ ಕ್ಲೇಶ ತಂದೊಡ್ಡಿ ಇಷ್ಟು ಪರಿಯಲಿ ಎನ್ನ ಮನವ ಶೋಧಿಸಿ ನೋಡಿ ಕಷ್ಟ ಕಳೆದೆಯೊ ಈಗ ಕರುಣಾಳು ದೇವ 2 ಗುರುಗಳಿಗೆ ಬಂದಂಥ ರೋಗವನೆ ಪರಿಹರಿಸಿ ಕರುಣಿಸಿದೆ ಮನಕೆ ಬಹು ಆನಂದವನ್ನು ಪರತರನೆ ಇದರಂತೆ ಭವರೋಗವನೆ ಹರಿಸಿ ನಿರುತ ನಿನ್ನಯ ಪಾದಸ್ಥಾನ ನೀಡೆನಗೆ 3 ಸುರಪನಿಗೆ ಬಂದಂಥ ಪರಿಪರಿಯ ಕಷ್ಟದಿಂ ಹರಿಯೆ ನಿನ್ನಾಜ್ಞೆಯಿಂದೆಲ್ಲರೂ ಕೂಡಿ ಶರಧಿ ಮಥಿಸುತಲಿರಲು ಕರುಣೆಯಿಂದಲಿ ಸುಧೆಯ ಕಲಶ ತಂದವನೆ4 ವಂಚನೆಯ ಪೆಣ್ಣಾಗಿ ವಂಚಿಸಿ ದೈತ್ಯರನು ಅಮೃತ ಸುರರಿಗುಣಿಸಿ ಪಂಚಬಾಣನ ಪಿತನೆ ಸುರರ ರಕ್ಷಕನಾದೆ ವಂಚಿಸದೆ ಎಮ್ಮಗಳ ನೀನೀಗ ಕಾಯೊ 5 ಅಮೃತಹಸ್ತನೆ ಕೃಷ್ಣ ಅಮೃತವಿತ್ತು ಕಾಯೊ ಅಮೃತರಲ್ಲವೆ ನಿನ್ನ ಪಟ್ಟಣದ ಜನರು ಅಮೃತ ಕಿರಣಾಂತರ್ಯಾಮಿಯೆ ಶಾಂತ ಧನ್ವಂತ್ರಿ ಅಮೃತರಾಗುವರೈಯ್ಯ ನಿನ್ನ ನಂಬಿದರೆ 6 ಸಚ್ಚಿದಾನಂದ ಸರ್ವೋತ್ತಮನೆ ಶ್ರೀ ಕೃಷ್ಣ ಬಿಚ್ಚಿ ಸಲಹಯ್ಯ ಎನ್ನಜ್ಞಾನ ಬಂಧ ಅಚ್ಚುತಾನಂತ ಶ್ರೀ ಗುರುಗಳಂತರ್ಯಾಮಿ ಅಚ್ಚವೈಷ್ಣಣವ ಪ್ರಿಯ ಗೋಪಾಲಕೃಷ್ಣವಿಠ್ಠಲ 7
--------------
ಅಂಬಾಬಾಯಿ
* ಹರಿಗುರು ಕರುಣದಿ ದೊರಕಿದುದೆನಗೀ ಪರಮ ಪಾವನ ತಂಬೂರಿ ಪ. ನರÀಹರಿ ಭಕ್ತರು ಒಲಿದೆನಗಿತ್ತರು ಸುಲಲಿತ ನಾದದ ತಂಬೂರಿ ಅ.ಪ. ತಂದೆ ಮುದ್ದುಮೋಹನರು ಸ್ವಪ್ನದಿ ತಂದು ತೋರಿದಂಥ ತಂಬೂರಿ ನಂದ ಕಂದನ ಗುಣ ಅಂದದಿ ಸ್ತುತಿಸೆ ಆ- ನಂದವ ತೋರುವ ತಂಬೂರಿ ಇಂದಿರೇಶನ ಭಕ್ತರಂದದಿ ಧರಿಸುವ ರೆಂದೆಂದಿಗು ಈ ತಂಬೂರಿ ನೊಂದು ಭವದೊಳು ತಪ್ತರಾದವರಿಗೆ ಬಂಧನ ಬಿಡಿಸುವ ತಂಬೂರಿ 1 ಅಂತರಭಕ್ತರು ಹರುಷದಿ ನುಡಿಸುವ ಕಂತುಪಿತಗೆ ಪ್ರೀತಿ ತಂಬೂರಿ ಸಂತತ ಮಾನಾಭಿಮಾನವ ತೊರೆದು ಏ- ಕಾಂತದಿ ಸುಖಿಸುವ ತಂಬೂರಿ ಶಾಂತದಿ ನಾರದಾದಿಗಳು ವೈಕುಂಠದಿ ನಿಂತು ನುಡಿಸುವಂಥ ತಂಬೂರಿ ಪಂಥದಿ ಹರಿಪಾದಂಗಳ ಭಜಿಸೆ ನಿ- ಶ್ಚಿಂತೆಯ ಮಾಳ್ಪಂಥ ತಂಬೂರಿ2 ಬಲು ಬಲು ಪರಿಯಲಿ ಹರಿದಾಸತ್ವಕೆ ಬರುವಂತೆ ಮಾಡಿದ ತಂಬೂರಿ ಛಲದಿಂದಲಿ ಶ್ರೀ ಹರಿ ತಾನಿಡ್ಹಿಸಿದ ಒಲುಮೆಯಿಂದಲಿ ಈ ತಂಬೂರಿ ನೆಲೆಯಾದೆನು ಹರಿದಾಸರ ಮಾರ್ಗದಿ ಕಲುಷವ ಕಳೆದಿತು ತಂಬೂರಿ ಸುಲಭದಿಂದ ಶ್ರೀ ಗುರುಗಳು ಕರುಣಿಸಿ ನೆಲೆಗೆ ನಿಲಿಸಿದಂಥ ತಂಬೂರಿ 3 ಶ್ರೀನಿವಾಸನು ತಾ ಕೊಡಿಸಿದನು ಏನೆಂಬೆನು ಈ ತಂಬೂರಿ ಮಾನಾಭಿಮಾನವ ತೊಲಗಿಸುವುದಕೆ ಕಾರಣವಾಗಿಹ ತಂಬೂರಿ ಶ್ರೀನಿಧಿ ಸೊಸೆ ಬಹು ಆನಂದದಲಿ ತಾ ನುಡಿಸುವಳೀ ತಂಬೂರಿ ಗಾನಲೋಲ ಕೃಷ್ಣ ತಾನೊಲಿವುದಕೆ ಕಾರಣ ಮಾಡಿಹ ತಂಬೂರಿ 4 ಬೆಟ್ಟದೊಡೆಯ ತಾನಿಷ್ಟು ಹಟವ ಮಾಡಿ ಕೊಟ್ಟೀ ಕೊಟ್ಟನು ತಂಬೂರಿ ಎಷ್ಟು ನಾಚಿಕೆಪಟ್ಟರು ಬಿಡದಲೆ ಕಷ್ಟ ಕಳೆಯಲಿತ್ತ ತಂಬೂರಿ ಭವ ಕಟ್ಟು ಇಂದೆನ್ನನು ಮುಟ್ಟಿಸಿತ್ಹರಿಪುರ ತಂಬೂರಿ ಎಷ್ಟು ಹೇಳಲಿ ಶ್ರೀನಿಧಿ ಗೋಪಾಲ ಕೃಷ್ಣವಿಠ್ಠಲನಿತ್ತ ತಂಬೂರಿ 5
--------------
ಅಂಬಾಬಾಯಿ
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉಪದೇಶಾತ್ಮಕ ಪದಗಳು ನೀಚವೃತ್ತಿಯ ಬಿಟ್ಟು ಸೋಚಿತ ಕರ್ಮವನೇ ಯೋಚನೆ ಮಾಡುತಾ ಪ ನೀಚ ಜನರುನು ಯಾಚಿಸದೆ ಸವ್ಯ ಸಾಚಿಯ ಸಖನ ಭಜಿಸೋ ಪ್ರಾಣೀ ಸರಸ ಸಲ್ಲಾಪ ಶ್ರೀ ಹರಿಕಥಾ ಶ್ರವಣ ನೀ ಪರಮಭಕ್ತರ ಸಂಗವಾ ನಿರುತದಲಿ ನೀ ಮಾಡಿ ಹರುಷ ಮನವನು ತಾಳಿ ಚರಿಸೊ ಈ ಧರಣಿ ಮಂಡಲಾ ಅರಸಿಗಾದರು ಒಮ್ಮೆ ಶಿರಸುಬಾಗದಲೆ ಶ್ರೀ ಹರಿದಾಸರಾ ಚರಣಕೆ ಎರಗ್ಯವರ ಮನಿದ್ವಾರಪರಿಚರನು ಎಂದೆನಿಸಿ ಭರದಿಂದ ಬಾಳಿ ಬದಕೋ ಇದಕೋ 1 ಅಲ್ಪ ಆಶೆಯ ಮಾಡಿ ಅಲ್ಪ ಮಾನವನಾಗಿ ಕಲ್ಪನೀಯನು ಮಾಡದೆ ಸ್ವಲ್ಪ ಫಲದಲಿ ಮನಸು ಕಲ್ಪಿಸಿ ಪ್ರಿತಿದಿನವ ನಲ್ಪ ಜನರನು ನಿಂದಿಸೀ ಅಲ್ಪನಾರೇರು ಮಾಳ್ಪ ಒಲ್ಪಿಗೆ ಮರುಳಾಗಿ ಪಲ್ಕಿಸಿದು ಬಾಯ್ದೆರೆಯದೆ ಸ್ವಲ್ಪಗಾಲದಲಹಿತಲ್ಪ ಪದಪದುಮಗಳ ಕಿಂ - ಜಲ್ಕ ನೀನಾಸ್ವಾದಿಸೋ ಲೇಸೋ2 ಪೊಡವಿ ಮೊದಲಾದ ಈ ಮಡದಿ ಮಕ್ಕಳು ಗೇಹ ವಡವಿ ವಸನವ ಬಯಸದೆ ಪೊಡವಿಮಂಡಲದಿ ಬಹು ಬಡವ ನಾನೆನುತಲೀ ಪೊಡವಿ ಪಾಲರ ಸೇವೆಯಾ ಧೃಢಮನದಿ ನೀ ಮಾಡೆ ಕೊಡರೊಂದು ದುಗ್ಗಾಣಿ ಕಡುಮೂರ್S ಎಲೊ ಪಾಪಿಯೇ ಬಿಡದೆ ದೈನ್ಯದಿ ನೀನು ಜಡಜನಾಭನ ಪಾದ ಬಿಡದೆ ಸೇವಿಸಲು ಫಲವ ಕೂಡುವಾ 3 ನಾ ಮಾಡೋ ವ್ಯಾಪಾರ ನೀ ಮಾಡಿಸುವಿ ಎಂಬ ಈ ಮಹಾಙÁ್ಞನ ಮಾರ್ಗ ನೇಮವಾಗಿ ತಿಳಿದು ಗ್ರಾಮ ಗ್ರಾಮದಲ್ಲಿದ್ದ ಪಾಮರೋತ್ತಮ ಜನರಿಗೆ ಧಾಮನಾಗಿಹ ನಮ್ಮ ರಾಮದೇವನ ಪಾದ ತಾಮರಸ ಕೊಂಡಾಡುತಾ ಪ್ರೇಮ ಹರುಷಾಮರ್ಷ ಯಾಮಯಾಮಕೆ ಬರಲು ಕಾಮಿಪುದು ನಿನಗೆ ಸಲ್ಲಾ ಖುಲ್ಲಾ 4 ನಗುವ ಜನರಾ ಕಂಡು ನಗುವುದೇ ಲೇಸೆಂದು ಸಿಗದೆ ಜನರೊಳು ತಿರುಗುತಾ ಬಗೆ ಬಗೆಯ ಮಾತುಗಳ ಬೊಗಳುವಾ ಜನರಿಗೆ ಹಗಲಿರಳು ಹರಿ ಕಾಯಲೀ ನಿಗಮ ವಂದಿತನ ಪ್ರತಿ ಮೆಗಳು ಇವು ಎಂದು ತಿಳಿಯೇ ನಗುತ ಹರುಷವ ಕೊಡುವ ಸುಗುಣಪೂರಣ ಗುರು ಜಗನ್ನಾಥವಿಠಲರಾಯಾ ಮರೆಯಾ 5
--------------
ಗುರುಜಗನ್ನಾಥದಾಸರು
ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
ಕಮಲಾಕ್ಷ ಶ್ರೀಹರಿ ಪ ನೊಂದೆನೊ ಭವಬಂಧದೊಳಗೆ ಸಿಂಧುಶಯನ ಪೊರೆಯೊ ಜಗದ್ವಂದ್ಯ ಪಾದಕೆರಗಿ ನಮಿಸುವೆ 1 ಸುಂದರಾಂಗ ಹರಿಯೆ ಭಕ್ತವೃಂದ ಪೊರೆದು ಕಾಯ್ವ ದೇವ ಸಿಂಧುಶಯನ ಶ್ರೀ ಮುಕುಂದನೆ 2 ಪಾಲಿಸೆನ್ನ ಪವನನಯ್ಯ ಪಾದಕೆರಗಿ ಮುಗಿವೆಕಯ್ಯ ಲೋಲಲೋಚನೆಯರ ಪ್ರಿಯನೆ 3 ರಂಗನೆ ಉತ್ತುಂಗ ಮಹಿಮ ಮಂಗಳರೂಪ ಪಾಂಡುರಂಗ ಕೃಪಾಪಾಂಗ ಶ್ರೀಹರಿ4 ಪಾಹಿ ಪಾಹಿ ಪಂಕಜಾಕ್ಷಿ ಪಾಹಿ ಲಕ್ಷ್ಮೀರಮಣ ಶ್ರೀಶ ಪಾಹಿ ಕಮಲನಾಭ ವಿಠ್ಠಲನೆ 5
--------------
ನಿಡಗುರುಕಿ ಜೀವೂಬಾಯಿ
ಗಣೇಶ ಪ್ರಾರ್ಥನೆ ವಂದಿಸುವೆ ನಾನಿಮ್ಮ ನನುದಿನ ವಂದಿಸುವೆ ಗಣನಾಥನೆ ವಂದೆ ಮಾನಸದಿಂದಲಿ ಪ ಭುಜಗಭೂಷಣ ಪಾರ್ವತೀಶನ ಪುತ್ರನೆನಿಸಿದ ದೇವನೆ ಆದಿಪೂಜೆಯ ಗೊಂಬನೆ 1 ಮೇಲ್ ಮಾಡಿದನೆ ಕೋಮಲಾಂಗನೇ 2 ಬೇಡುತಿಹ ಭಕ್ತರಿಗೆ ವಿದ್ಯಾವೃಷ್ಟಿಯನು ಕೊಡುತಿರುವನೆ ಪಾಲಿಸೆನಗೆ ಮತಿಯನು 3 ಅಂಗಭೇದ ವಿನೋದನಾದನೆ ಆರುಮುಖದವನಣ್ಣನೆ ಮಾನದಲಿ ಕಡೆ ಹಾಯಿಸು 4 ಗುಳಗಿ ಗಡುಬಿನಪ್ರಿಯನೆ ನಲಿಯುವವನೆ
--------------
ಹೆನ್ನೆರಂಗದಾಸರು
ಗಣೇಶ ಪ್ರಾರ್ಥನೆ ಸ್ಮರಿಸುವೆ ನಿನ್ನ ಚರಣ ಪ ಪರಮಪಾವನ|ಸುರವರ ಸುಗುಣ|| ಸ್ಮರಿಸುವೆ ನಿನ್ನ ಚರಣಅ.ಪ ಚರಣವ ಸ್ಮರಿಸುವೆ | ಅನವರತ ಶರಣನ ಮೊರೆಯನು|ಕರುಣದೊಳಾಲಾಲಿಸು |ಗೌರಿಜಾತ ಪ್ರೀತ 1 ವಾಹನ ಪಾಶಾಂಕುಶಧರ | ಪಾವನ ಚರಿತ || ಈಶಜಾತ ಖ್ಯಾತ 2 | ರಕ್ತವಸ್ತ್ರ ತವ| ಭಕ್ತರ ಪೊರೆವ || ಶಕ್ತನೆ ನೀ ಶಿವ | ಶಕ್ತಿ ಕುಮಾರನೆ | ಭಕ್ತದಾತ ಪ್ರೀತ 3 ಮತಿಯನು ನೀಡೈ| ಹಿತದಾಯಕನೆ|| ಕಾಣಿಸು ಭೂತನಾಥ ಜಾತ 4
--------------
ವೆಂಕಟ್‍ರಾವ್
ಚಂದ್ರಶೇಖರ ಸುಮನಸೇಂದ್ರ ಪೂಜಿತ ಚರಣಾ ಹೀಂದ್ರ ಪದಯೋಗ್ಯ ವೈರಾಗ್ಯ | ವೈರಾಗ್ಯಾ ಪಾಲಿಸಮ ರೇಂದ್ರ ನಿನ್ನಡಿಗೆ ಶರಣೆಂಬೆ 1 327ನಂದಿವಾಹನ ವಿಮಲ ಮಂದಾಕಿನೀಧರನೆ ವೃಂದಾರಕೇಂದ್ರ ಗುಣಸಾಂದ್ರ | ಗುಣಸಾಂದ್ರ ಎನ್ನ ಮನ ಮಂದಿರದಿ ನೆಲೆಸಿ ಸುಖವೀಯೊ 2 328ಕೃತ್ತಿವಾಸನೆ ನಿನ್ನ ಭೃತ್ಯಾನುಭೃತ್ಯ ಎ ನ್ನತ್ತ ನೋಡಯ್ಯ ಶುಭಕಾಯ ಭಕ್ತರಪ ಮೃತ್ಯು ಪರಿಹರಿಸಿ ಸಲಹಯ್ಯ 3 329 ನೀಲಕಂಧರ ರುಂಡಮಾಲಿ ಮೃಗವರಪಾಣಿ ಶೈಲಜಾರಮಣ ಶಿವರೂಪಿ | ಶಿವರೂಪಿ ನಿನ್ನವರ ನಿತ್ಯ ಪರಮಾಪ್ತ 4 330ತ್ರಿಪುರಾರಿ ನಿತ್ಯವೆನ್ನಪರಾಧಗಳ ನೋಡಿ ಕುಪಿತನಾಗದಲೆ ಸಲಹಯ್ಯ | ಸಲಹಯ್ಯ ಬಿನ್ನೈಪೆ ಕೃಪಣವತ್ಸಲನೆ ಕೃಪೆಯಿಂದ 5 331ಪಂಚಾಸ್ಯ ಮನ್ಮನದ ಚಂಚಲವ ಪರಿಹರಿಸಿ ಸಂಚಿತಾಗಾಮಿ ಪ್ರಾರಬ್ಧ | ಪ್ರಾರಬ್ಧ ದಾಟಸು ವಿ ರಿಂಚಿಸಂಭವನೆ ಕೃತಯೋಗ 6 332 ಮಾನುಷಾನ್ನವನುಂಡು ಜ್ಞಾನ ಶೂನ್ಯನು ಆದೆ ಅನುದಿನ | ಅನುದಿನದಿ ನಾ ನಿನ್ನ ಧೀನದವನಯ್ಯ ಪ್ರಮಥೇಶ 7 333 ಅಷ್ಟಮೂತ್ರ್ಯಾತ್ಮಕನೆ ವೃಷ್ಟಿವರ್ಯನ ಹೃದಯಾ ಧಿಷ್ಠಾನದಲ್ಲಿ ಇರದೋರು | ಇರದೋರು ನೀ ದಯಾ ದೃಷ್ಟಿಯಲಿ ನೋಡೊ ಮಹದೇವ 8 334 ಪಾರ್ವತಿರಮಣ ಶುಕ ದೂರ್ವಾಸ ರೂಪದಲ್ಲಿ ಉರ್ವಿಯೊಳಗುಳ್ಳ ಭಕುತರ | ಭಕುತರ ಸಲಹು ಸುರ ಸಾರ್ವಭೌಮತ್ವ ವೈದಿದೆ 9 335 ಭಾಗಿಥಿಧರನೆ ಭಾಗವತ ಜನರ ಹೃ ದ್ರೋಗ ಪರಿಹರಿಸಿ ನಿನ್ನಲ್ಲಿ | ನಿನ್ನಲ್ಲಿ ಭಕ್ತಿ ಚೆ ನ್ನಾಗಿ ಕೊಡು ಎನಗೆ ಮರೆಯಾದೆ 10 336 ಮೃಡದೇವ ಎನ್ನ ಕೈಪಿಡಿಯೊ ನಿನ್ನವನೆಂದು ಬಡವ ನಿನ್ನಡಿಗೆ ಬಿನ್ನೈಪೆ | ಬಿನ್ನೈಪೆನೆನ್ನ ಮನ ದೃಢವಾಗಿ ಇರಲಿ ಹರಿಯಲ್ಲಿ 11 337 ವ್ಯೋಮ ಕೇಶನೆ ತ್ರಿಗುಣನಾಮ ದೇವೋತ್ತಮ ಉ ವಿರುಪಾಕ್ಷ ಮಮ ಗುರು ಸ್ವಾಮಿ ಎಮಗೆ ದಯವಾಗೊ 12 338 ಅಷ್ಟ ಪ್ರಕೃತಿಗನೆ ಸರ್ವೇಷ್ಟ ದಾಯಕನೆ ಪರ ಮೇಷ್ಟಿ ಸಂಭವನೆ ಪಂಮಾಪ್ತ | ಪರಮಾಪ್ತ ಎನ್ನದಯ ದೃಷ್ಟಿಯಿಂದ ನೋಡಿ ಸಲಹಯ್ಯ 13 339ಪಂಚಾಸ್ಯ ದೈತ್ಯಕುಲ ವಂಚಕನೆ ಭಾವಿ ವಿ ರಿಂಚಿ ಶೇಷನಲಿ ಜನಿಸಿದೆ | ಜನಿಸಿದೆ ಲೋಕತ್ರಯದಿ ಸಂಚಾರ ಮಾಳ್ಪೆ ಸಲಹಯ್ಯ 14 340 ಉಗ್ರತಪ ನಾ ನಿನ್ನನುಗ್ರಹದಿ ಜನಿಸಿದೆ ಪ ಸಂತೈಸಿ ಇಂದ್ರಿಯವ ನಿಗ್ರಹಿಪ ಶಕ್ತಿ ಕರುಣೀಸೊ 15 341 ಲೋಚನತ್ರಯ ನಿನ್ನ ಯಾಚಿಸುವೆ ಸಂತತವು ಗುಣರೂಪ ಕ್ರಿಯೆಗಳಾ ಲೋಚನೆಯ ಕೊಟ್ಟು ಸಲಹಯ್ಯ16 342ಮಾತಂಗ ಷಣ್ಮುಖರ ತಾತ ಸಂತತ ಜಗ ನ್ನಾಥ ವಿಠ್ಠಲನ ಮಹಿಮೆಯ | ಮಹಿಮೆಯನು ತಿಳಿಸು ಪ್ರೀತಿಯಿಂದಲೆಮಗೆ ಅಮರೇಶ 17 343 ಭೂತನಾಥನ ಗುಣ ಪ್ರಭಾತ ಕಾಲದಲೆದ್ದು ಪ್ರೀತಿಪೂರ್ವಕದಿ ಪಠಿಸುವ | ಪಠಿಸುವರ ಜಗ ನ್ನಾಥವಿಠಲನು ಸಲಹುವ 18
--------------
ಜಗನ್ನಾಥದಾಸರು
ತತ್ವವಿವೇಚನೆ ಅಂತರಂಗದ ಕದವು ತೆರೆಯಿತಿಂದು ಪ ಎಂತು ಪುಣ್ಯದ ಫಲವು ಪ್ರಾಪ್ತಿ ದೊರಕಿತೊ ಎನಗೆ ಅ.ಪ ಏಸುದಿನವಾಯಿತೊ ಬೀಗಮುದ್ರೆಯ ಮಾಡಿ | ವಾಸವಾಗಿದ್ದರೋ ದುರುಳರಿಲ್ಲಿ || ಮೋಸವಾಯಿತು ಇಂದಿನ ತನಕ ತಮಸಿನ | ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ 1 ಹರಿಕರುಣವೆಂಬಂಥ ಕೀಲಿ ಕೈ ದೊರಕಿತು | ಗುರುಕರುಣವೆಂಬಂಥ ಶಕ್ತಿಯಿಂದ || ಪರಮ ಭಾಗವತರ ಸಹವಾಸದಲಿ ಪೋಗಿ | ಹರಿ ಸ್ಮರಣೆಯಿಂದಲ್ಲಿ ಬೀಗಮುದ್ರೆಯ ತೆಗೆದೆ 2 ಸುತ್ತಲಿದ್ದವರೆಲ್ಲ ಪಲಾಯನವಾದರು | ಭಕ್ತಿಕಕ್ಕಡವೆಂಬ ಜ್ಞಾನದೀಪ || ಜತ್ತಾಗಿ ಹಿಡಿಕೊಂಡು ದ್ವಾರದೊಳಗೆ ಪೊಕ್ಕೆ | ಎತ್ತನೋಡಿದರತ್ತ ಶೃಂಗಾರಸದನ 3 ಹೊರಗೆ ದ್ವಾರವು ನಾಲ್ಕು ಒಳಗೈದು ದ್ವಾರಗಳು | ಪರ ದಾರಿಗೆ ಪ್ರಾಣ ಜಯವಿಜಯರು || ಮಿರುಗುವ ಮಧ್ಯಮಂಟಪ ಕೋಟಿರವಿಯಂತೆ | ಸರಸಿಜನಾಭನ ಅರಮನೆಯ ಸೊಬಗು 4 ಸ್ವಮೂರ್ತಿಗಣ ಮಧ್ಯ ಸಚ್ಚಿದಾನಂದೈಕ | ರಮೆಧರೆಯರಿಂದಲಾಲಿಂಗಿತ್ವದಿ || ಕಮಲಜಾದಿಗಳಿಂದ ತುತಿಸಿಕೊಳ್ಳುತ ಹೃದಯ- | ಕಮಲದೊಳಗಿರುವ ಶ್ರೀ ವಿಜಯವಿಠ್ಠಲನ ಕಂಡೆ 5
--------------
ವಿಜಯದಾಸ
ಧ್ರುವ ತಾಳ ದಾಸ ನಿನಗೆ ನಾನು ಲೇಸಿನವನೆಂದು ಆಶೆಯಿಂದಲಿ ಗತಿ ಬೇಡಲಿಲ್ಲ ದಾಸತನ ಎನಗೆಲ್ಲಿಹುದು ಶ್ರೀನಿ- ವಾಸನೆ ಅನಂತ ಕಲ್ಪದಲ್ಲಿ ನಾಶನ ಮಾಡಿಕೊಂಬ ದಾಸ ನಾನು ದಾಸನೆನಿಸಿಕೊಂಡು ತಿರುಗುವ ಜನಕ್ಕೆ ಲೇಸಾಗಿ ದಂಡಿಸಿ ಮೆದಿಯ ಬೇಕು ಕೇಶವ ವಿಜಯವಿಠ್ಠಲನೆ ನಿನ್ನ ಮರೆದು ಗ್ರಾಸಕ್ಕೆ ತಿರುಗುವ ಭಾಸಮಾನ ದಾಸ 1 ಮಟ್ಟತಾಳ ತಿರಕದಾಸ ನಾನು ಹರಕ ದಾಸ ನಾನು ಕರಕರಿಯನು ಮಾಡಿ ಪರರ ಪೀಡಿಸಿ, ಉ- ದರ ಪೊರೆವ ದಾಸನು ನಾನು, ಬರಿಯ ದಾಸ ನಾನು ಅರಿಮರ್ದನ ಹರಿ ವಿಜಯವಿಠ್ಠಲ ನಿನ್ನ ಪರಮ ಭಕ್ತನೆಂದು ತಿರಿದುಣ್ಣ ಮೆಚ್ಚಿದೆನು 2 ತ್ರಿವಿಡಿ ತಾಳ ಕೊಟ್ಟರೆ ಹರಸುವೆನು, ಕೊಡದಿದ್ದರೆ, ಬೆರ ಳಿಟ್ಟು ಬಗಳುವಂಥ ಭ್ರಷ್ಟ ದಾಸನು ನಾನು ಸೃಷ್ಟಿಯೊಳಗೆ ಬಹು ಧನವಂತರ ಮನೆಯ ಮೆಟ್ಟು ಕಂಡರೆ ಬಿಡದಿಪ್ಪ ದಾಸ ನಾನು ನಷ್ಟ ವಾಗಿದ್ದ ಉಚ್ಛಿಷ್ಟ ದಾಸನು ನಾನು ದೃಷ್ಟಿಯಿಂದಲಿ ನೋಡೊ, ವಿಜಯವಿಠ್ಠಲ ಕೇಳೊ ಎಷ್ಟೊ ಕಾಲದ ಪಾಪಿಷ್ಠ ದಾಸನು ನಾನು 3 ಅಟ್ಟತಾಳ ಕುರುಡ ದಾಸನು ನಾನು ಕುಂಟ ದಾಸನು ನಾನು ಹುರಡಿಗೆ ಮಾಡುವ ಹುರಳಿಲ್ಲದ ದಾಸ ಸರಿಯವರನು ಕಂಡು ಮರಗುವ ದಾಸನು ಎರಡು ಕಡೆ ಕೆಟ್ಟ ಭರಡಿ ದಾಸನು ನಾನು ಗರಕೆ ಕರದಾರೆ ಹಿಗ್ಗುವ ದಾಸನು ನಾನು 4 ಆದಿತಾಳ ಹೀನ ದಾಸನು ನಾನು, ನೀಚ ದಾಸನು ನಾನು ಹಾನಿವೃದ್ಧಿಗಳೆಲ್ಲ ತಿಳಿಯದ ದಾಸನು ನಾನಾ ದುಷ್ಕರ್ಮ ಮಾಳ್ಪ ದಾಸನೊ ನಾನು ಮಾನವಿಲ್ಲದೆ ಅಪಮಾನ ದಾಸ ನಾನು ದಾನ ಧರ್ಮವಿಲ್ಲದ ಹೀನ ದಾಸನು ನಾನು ಅನಂತ ಜನನಕ್ಕೆ ಹೊಲೆದಾಸನು ನಾನು ಶ್ರೀನಿವಾಸ ತಿರುಮಲೇಶ ವಿಜಯವಿಠ್ಠಲ ಬ್ಯಾನೆ ಇದ್ದಲ್ಲಿ ಬಿಡುವ ಬಕ್ಕದಾಸನು ನಾನು 5 ಜತೆ ಹೊಟ್ಟೆಕಿಚ್ಚಿನ ದಾಸ-ಹಲುಬಿ ಪೋಗುವ ದಾಸ ದಟ್ಟದಾರಿದ್ರ ದಾಸನು ವಿಜಯವಿಠ್ಠಲರೇಯ 6
--------------
ವಿಜಯದಾಸ
ನಂಬಿದೆನು ಸರ್ವೇಶಾ ಸ್ಮರಣೆಯೆ ಉಲ್ಲಾಸಾ 1 ಮಾಡಲಿಬೇಡ ಇನ್ನಾ ಇಚ್ಛಿಸುವೆ ಭಕ್ತಿರನ್ನಾ | ಯನಗೆ ಪ್ರತ್ಯಕ್ಷನಾಗೂಯತಿರನ್ನಾ 2 ಎಂಥೆಂಥವರನು ಪೊರೆದೇ | ಯನ್ನಂಥವರು ನಿನಗೆ ಹಿರಿದೇ ಚಿಂತೆಯನೀ ತರಿದೇ 3 ನಿನ್ನ ಮೆಚ್ಚಿಸಲೆನಗೆ ಶಕ್ತಿ | ಘನ್ನ ಮಹಿಮನೇಕೊಡು ಭಕ್ತಿ ಚೆನ್ನಾಗಿ ಪಾಲಿಸು ಮುಕ್ತೀ 4 ಪ್ರಥಮದಲಿ ಪ್ರಹ್ಲಾದನಾಗೇ | ಅಲ್ಲಿದಿತಿವಂಶದಲಿ ನೀ ಪೋಗೇ ಹತ ಮಾಡದೆ ಅವನೀಗೇ | ಪಿತಗೆ ಸದ್ಗತಿಯಿತ್ತೆಯೋಗೀ 5 ಮೂರ್ತಿ ಲೋಕದಲಿ ಪ್ರಖ್ಯಾತಿ ಏನೆಂಧೆÉೀಳಲಿ ವಾರ್ತೀ | ರಾಶಿರಾಶಿತುಂಬಿದವು ನಿನ್ನ ಕೀರ್ತೀ 6 ಮನಸಿಗೆ ಪ್ರೀಯಾ ಬಂದು ಪಿಡಿಕೈಯಾ 7 ಸತ್ಯ ಸಂಧರು ನೀವೆನಿಸೀ | ದೊಡ್ಡ ಉತ್ತರಾದಿ ಮಠದಿ ಜನಿಸೀ ಭಕ್ತರನೆಲ್ಲಾ ಸ್ವೀಕರಿಸೀ | ಮಧ್ವಮತವನುದ್ಧರಿಸೀ 8 ಬಿದ್ದೆ ನಿನ್ನ ಪಾದಕೈಯಾ | ಎನ್ನ ವುದ್ಧಾರ ಮಾಡುಜೀಯಾ ವಿದ್ವಾಂಸರಿಗೆ ನೀ ಘೇಯಾ | ಬೇಗ ಎದ್ದು ಬಂದು ಪಿಡಿಕಯ್ಯಾ 9 ನರಸಿಂಹ ವಿಠಲನ ಪ್ರೀಯಾ | ಕರೆಸಿದ್ದು ನೀ ಎನ್ನ ಖರೆಯಾ ಮಹರಾಯಾ 10
--------------
ಓರಬಾಯಿ ಲಕ್ಷ್ಮೀದೇವಮ್ಮ
ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ