ಒಟ್ಟು 96 ಕಡೆಗಳಲ್ಲಿ , 34 ದಾಸರು , 90 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸನ ಸೇವೆ ಗೈಯುವ ಜಾಣರೆಲ್ಲರು ಬನ್ನಿರೈ ಪ ಧ್ಯಾನಲಭ್ಯನ ಕಾಣಲಿಚ್ಛಿಪ ಮಾನಿಪರ ಕರತನ್ನಿರೈಅ.ಪ. ಪರಮಪದ ದೊಳಗಿರದೆ- ವೆಂಕಟಗಿರಿಯೊಳಿದರ್Àನು ಪೂರ್ವದಿ ಭರದಿ ವಿಪ್ರಗೆ ವರವನಿತ್ತೀ ಗಿರಿಗೆ ಬಂದನು ಪ್ರೇಮದಿ 1 ದೂರವಲ್ಲ ವಿಚಾರಿಸಲು ಹರಿಣಾರಿ ಭೂಧರಮಿಲ್ಲಿಗೆ ಚಾರುಮೂರ್ತಿಯ ಚರಣಸೇವೆಗೆ ಸಾರುವೆವು ನಾವಲ್ಲಿಗೇ 2 ಚರಣ ಸೇವಕರನ್ನು ಮರೆಯದೆ ಪೊರೆಯು ವನು ಮೋದದಿ ಪರಮ ಪುಲಿಗಿರಿವಾಸ ವೆಂಕಟ ವರದವಿಠಲನೆಲೋಕದಿ 3
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸನ ಸೇವೆಗೈಯ್ಯುವ ಜಾಣರೆಲ್ಲರು ಬನ್ನಿರೈ ಧ್ಯಾನಲಭ್ಯನ ಕಾಣಲಿಚ್ಚಿಪ ಮಾನಿಸರ ಕರತನ್ನಿರೈ ಪ ಪರಮಪದದೊಳಗಿರದೆ ವೆಂಕಟಗಿರಿಯೊಳಿರ್ದನು ಪೂರ್ವದಿ ಭರದಿವಿಪ್ರಗೆ ವರವನಿತ್ರ್ತಿಗಿರಿಗೆ ಬಂದನು ಪ್ರೇಮದಿ 1 ದೂರವಲ್ಲ ವಿಚಾರಿಸಲು ಹರಿದಾಂ ಭೂಧರಮಿಲ್ಲಿಗೆ ಚಾರುಮೂರ್ತಿಯ ಚರಣಸೇವೆಗೆ ಸಾರುವೆವು ನಾವಲ್ಲಿಗೆ 2 ಚರಣಸೇವಕರನ್ನು ಮರೆಯದೆ ಪೊರೆಯುವನು ಮೋದದಿ ಪರಮಪುಲಿಗಿರಿವಸವೆಂಕಟ ವರದ ವಿಠಲನೆ ಲೋಕದಿ 3
--------------
ವೆಂಕಟವರದಾರ್ಯರು
ಶ್ರೀಪತಿ ಭಯಹಾರಿ ರಕ್ಷಿಸು ತಾಪತ್ರಯವಾರಿ ಕೋಪಲೇಶನ ಮನೋನುಪಹಾರಿ ಭೂಪತಿರೂಪವಿಹಾರಿ ಪ. ಅಖಿಳ ಜನನಿ ಭರ್ತಾ ಪಾಲನ ಮಹಾಧುರಧರ್ತಾ ಭಕುತಿಯ ಪಾಲಿಸು ಭಯ ಪರಿಹರ್ತಾ 1 ಕಾಮಿತ ಫಲದಾಯಿ ತುಲಸೀಧಾಮ ಶೇಷಶಾಯಿ ತಾಮರಸಾಸನ ದೇವನ ತಾಯಿ ಶ್ರೀ ಮಹೇಶನೀ ತ್ವರಿತದಿ ಕಾಯಿ2 ನಾಗಭೂಧರೇಶ ಕರುಣಿಸು ಬೇಗದಿ ಸರ್ವೇಶ ರಾಗ ರೋಗ ಗಣ ನೀಗು ನಿನ್ನಡಿಗೆ ಬಾಗುವೆ ಲಕ್ಷ್ಮೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸರಾಗದಿಂದೆನ್ನ ನೀಕ್ಷಿಸೈ ಪರಾಪರೇಶನೆ ಪರಾತ್ವರನೆ ನೀ-ಪರಾಕು ಮಾಡದೆ ಪಾಲಿಸೈ ಪ ವಿರಾಜಮಾನ ಸುವೀರಾಜವಾಹನ ವಿರಾಟ್ಪುರುಷ ವಿಶ್ವಂಭರ ಕರಾರವಿಂದದಿ ಕರಾದಿಗಳ ಪಿಡಿದರಾತಿ ಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹು ಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾ ಭರಣ ಗುಣಭೂಷಣ ಸುರಾರಿ ಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರೀಸುಕೋಮಲ ಶರೀರ ನಿನ್ನದು ಈಪರಿ ಪರಿಯದೆಂತುಟೋ ಕೇಳ್ಹರಿ 4 ಧಯಾನಿಧಿಯೇಧರ್ಮಾತ್ಮನೆ ನಿಯಾಮಿಸುವ ನಿರ್ಮಾಯನೆ 5 ವರೇಣ್ಯಸಜ್ಜನ ಶರಣ್ಯಪುಲಿಗಿರಿಯರಣ್ಯಮಧ್ಯ ವಿರಾಜಿತ ಹಿರಣ್ಯಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ6 ವ್ಯಾಘ್ರನೆಂಬುವತ್ಯುಗ್ರದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪಸುರಾಗ್ರಗಣ್ಯ ಪುಣ್ಯಾತ್ಮನೆ 7 ನಿರುತವು ಸನ್ನುತಿಗೈವರೆ ಪರಿಪರಿ ನಿನ್ನನೆ ಪೊಗಳ್ವರೆ 8 ನೀಜಗದಲ್ಲಿ ಒಲಿದಿರ್ಪೆಯ ನೀ ಕೈಗೊಂಬೆಯ 9 ನಿಜಪರದೊಲುನೀ ನಜಭವಮುಖಸುರವ್ರಜ- ಗೋಚರನಾಗಿಲ್ಲವೈ ತ್ರಿಜಗಕ್ಕೆ ಗೋಚರನಾಗಿಹೈ 10 ನಿತ್ಯತೃಪ್ತನೀನತ್ಯುತ್ತಮ ನಿಜ ಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಫಣಿಭೂಧರದೊಳು ನಿರುತವು ಭಕ್ತರ ಕರುಣದಿ ಪೊರೆಯುವ ಧೊರೆ ಸಿರಿವಲ್ಲಭವರದ ವಿಠಲ ಕರುಣಾಕರ 12
--------------
ಸರಗೂರು ವೆಂಕಟವರದಾರ್ಯರು
ಸರ್ವಸಾರಭೋಕ್ತ ಸಕಲ ಮಂಗಲದಾಯಿ ವೆಂಕಟೇಶ ನಿರ್ವಹಿಸುವವ ನೀನೆ ನಿತ್ಯಕರ್ಮಗಳಿಂದ ವೆಂಕಟೇಶ ಪ. ದೇವರ್ಷಿ ಪಿತೃಗಣರೊಳಗಿದ್ದು ರಾಜಿಪ ವೆಂಕಟೇಶ ಭೂವರರಲ್ಲಿ ವಿಭೂತಿರೂಪನು ನೀನೆ ವೆಂಕಟೇಶ ಸೇವಕ ಜನರನು ಸುಲಭದಿ ಸಲಹುವ ವೆಂಕಟೇಶ ಪಾದ ಪದ್ಮವೆ ಗತಿ ಎಂಬೆ ವೆಂಕಟೇಶ 1 ಇಂದಿರಾಧವ ಯದುನಂದನನೆನಿಸಿದೆ ವೆಂಕಟೇಶ ಸುಂದರ ವಿಗ್ರಹ ಸುಗುಣೇರ ಒಲಿಸಿದೆ ವೆಂಕಟೇಶ ಹಿಂದೆ ಮುನ್ನ ಭವದಂದವನರಿಯೆನು ವೆಂಕಟೇಶ ಮಂದಮತಿಯ ಕರ್ಮಕುಂದನು ಕ್ಷಮಿಸಯ್ಯ ವೆಂಕಟೇಶ 2 ಸ್ವೋದರಗತ ಜಗದಾಧಾರಗುಣನಿಧಿ ವೆಂಕಟೇಶ ಭೂಧರಗಿರಿವರ ಶೋಭಿತ ಮೂರುತಿ ವೆಂಕಟೇಶ ಶ್ರೀಧರಾಕಾಂತ ನಿನ್ನಾಧಾರ ನಂಬಿದೆ ವೆಂಕಟೇಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಸುರಸತಿಯರ ಆರತಿ-ಶೋಭನೆಕಂ|| ಹರೆದುದು ಜನತತಿ ಶ್ರೀಹರಿವರಶಯ್ಯಾಸನದಲಿಪ್ಪ ಸಮಯದಲೆನ್ನಾಪರಿಯನು ಬಿನ್ನವಿಸುವೆ ನಾಂಸಿರಿಚರಣವನೊತ್ತುತೊತ್ತುತೆಮ್ಮರಸನಿಗೇಆದಿತ್ಯವಾರದರ್ಚನೆಯಾದುದು ನಿನ್ನೊಲವಿನಿಂದ ಬಿನ್ನಹವಿದ ನೀನಾದರಿಸಿ ಸಲಹು ತಿರುಪತಿಭೂಧರ ಶುಭದಿವ್ಯಸದನ ವೆಂಕಟರಮಣಾಸಿರಿಧರಣಿಯರೊಡೆವೆರಸಿ ಹರುಷದಿ ವೆಂಕಟಪತಿಯುಇರೆ ಹಂಸತಲ್ಪದೆಡೆಯಲ್ಲಿ ಸುರಸತಿಯರುಕುರುಜಿನಾರತಿಯಾ ಬೆಳಗಿದರು ಶೋಭನವೆ 1ವೇದವನುದ್ಧರಿಸಿದಗೆ ಭೂಧರವನು ತಾಳ್ದವಗೆಮೇದಿನಿಯನೆತ್ತಿ ನಿಲಿಸಿದಗೆ ನಿಲಿಸಿದ ವೆಂಕಟಪತಿಗೆಮೋದದಲಾರತಿಯಾ ಬೆಳಗಿದರು ಶೋಭನವೆ 2ನರಹರಿ ರೂಪಾದವಗೆ ಧರಣಿಯನಳೆದಾ ಹರಿಗೆದುರುಳ ಕ್ಷತ್ರಿಯರಾ ತರಿದವಗೆ ತರಿದಾ ವೆಂಕಟಪತಿಗೆತರುಣಿಯರಾರತಿಯಾ ಬೆಳಗಿದರು ಶೋಭನವೆ 3ಜಾನಕಿಯನು ವರಿಸಿದವಗೆ ಧೇನುಕನನು ಬಡಿದವಗೆಮಾನಿನಿಯರ ವ್ರತವನಳಿದವಗೆ ಅಳಿದಾ ವೆಂಕಟಪತಿಗೆಜಾಣೆಯರಾರತಿಯಾ ಬೆಳಗಿದರು ಶೋಭನವೆ 4ತುರುಗವನೇರಿದ ಹರಿಗೆ ಶರಣಾಗತವತ್ಸಲಗೆತಿರುಪತಿಯ ಕ್ಷೇತ್ರದರಸಗೆ ಅರಸ ವೆಂಕಟಪತಿಗೆಪರಿಪರಿಯಾರತಿಯಾ ಬೆಳಗಿದರು ಶೋಭನವೆ 5ಓಂ ಬರ್ಹಿಬರ್ಹಾವತಂಸಕಾಯ ನಮಃ
--------------
ತಿಮ್ಮಪ್ಪದಾಸರು
ಸೇವಾಂ ದೇಹಿ ಚಂದ್ರಶೇಖರ ಸೇವಾಂ ದೇಹಿ ಸೇವಾಂ ದೇಹಿ ಸದಾವನತಾಖಿಲ ಜೀವ ದುರಿತಹರ ಪ ಪಾವನಚರಿತ ಸುರಾವಳಿ ಮುನಿಗುಣ ಭಾವಿತಚರಣ ಸುಪಾವಕ ನಯನಾ ಅ.ಪ ತುಂಬುರು ಗಾನವಿಡಂಬನ ಸುರಸರಿ ದಂಬುಕ ಭಕ್ತ ಹೃದಂಬುಜ ಭಾನೋ 1 ಪುರಹರ ಮುರಹರಧರ ಕರುಣಾಕರ ನರ ವರದಾಯಕ ನಿರುಪಮ ಹಿಮವದ್ ಗಿರಿವರಚಾಪ ಕು ಧರಜ್ಯಾಕರುಷಣ ಪರಮಕೃಪಾಳೋ 2 ಶಿವ ಶಿವ ಶಂಕರ ಭುವಿಭೂಧರವರ ಶಿವಗಂಗಾಧಿಪ ಭವ ಗಂಗಾಧರ ಅವ ಮಾಂ ಲಕ್ಷ್ಮೀಧವ ವೆಂಕಟ ಸಖದಿವಿಭವ ವಂದ್ಯಾ 3
--------------
ತಿಮ್ಮಪ್ಪದಾಸರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ವಾಮಿಯ ನೋಡುವ ಬನ್ನಿ ನಮ್ಮ ಸುಪ್ರೇಮೀಯ ನೋಡುವ ಬನ್ನಿ ಪ ಎಂಟು ಮೈಯವನಂತೆ ಎಸೆವೈದು ಮುಖವಂತೆ ಯರ್ದಾಂಗಿಯ ಪಡೆದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 1 ಮಾಧವನೆ ಶರವಂತೆ ಭೂಧರನೆ ಧನುವಂತೆ ಭೂಮೀಯೇ ರಥವಂತೆ ಸೊಮ ಸೂರ್ಯರೇ ಗಾಲಿಗಳಂತೆ ಅಂತ ಸ್ವಾಮಿಯ ನೋಡುವ ಬನ್ನಿ 2 ವಾಜಿ ವೇದಗಳಂತೆ ಒದನೊದಗಿ ಬಹವಂತೆ ಅಮೃತ ಶರಧಿಯ ಅಲ್ಲಿ ಬತ್ತಳಕೆಯಂತೆ ಅಂತ ಸ್ವಾಮಿಯ ನೋಡುವ ಬನ್ನಿ 3 ಹರಿಯವರ ಶರವಂತೆ ಅಜನು ಸಾರಧಿಯಂತೆ ದುರುಳ ತಾರಕ ಸುತರ ಪುರವ ಮುರಿದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 4 ಇದುವೆ ಭೂ ಕೈಲಾಸವೆಂದು ತೋಷದಿ ಬಂದು ಸಾಕಾರವಾಗಿಲ್ಲ ನೆಲಸಿಹರಂತೆ ಮುದದಿ ಲೋಕಗಳೆಲ್ಲ ಕೈವಶವಂತೆ ಅಂತಸ್ವಾಮಿಯ ನೋಡುವಬನ್ನಿ 5
--------------
ಕವಿ ಪರಮದೇವದಾಸರು
ಹರಿ ಹರಿ ಕೃಷ್ಣ ಗೋವಿಂದ ಪ ಮಾಧವ ಗೋವಿಂದ ಅ.ಪ ಕೇಶವ ನಾರಾಯಣ ಗೋವಿಂದ ವಾಸುದೇವ ಶ್ರೀ ಗೋವಿಂದ ಶ್ರೀಶ ಜನಾದರ್Àನ ಗೋವಿಂದ | ಹರಿ ದಾಸ ಜನಾವನ ಗೋವಿಂದ1 ವಾಮನ ದಾಮೋದರ ಗೋವಿಂದ ಕಾಮಿಕದಾಯಕ ಗೋವಿಂದ ರಾಮ ರಘೂತ್ತಮ ಗೋವಿಂದ | ಗುಣ ಧಾಮ ದಯಾನಿಧೇ ಗೋವಿಂದ 2 ಶ್ರೀಧರ ಭೂಧರ ಗೋವಿಂದ ಆದಿಮೂಲ ಶ್ರೀ ಗೋವಿಂದ ವೇದ ವೇದ್ಯ ಹರಿ ಗೋವಿಂದ | ನಿಜ ಪಾದ ಭಜಕಪ್ರಿಯ ಗೋವಿಂದ 3 ಪದ್ಮದಳಾಂಬಕ ಗೋವಿಂದ ಪದ್ಮನಾಭ ಶ್ರೀ ಗೋವಿಂದ ಪದ್ಮಿನಿ ಅರಸನೆ ಗೋವಿಂದ | ಕರ ಪದ್ಮದಿ ಪಿಡಿ ಎನ್ನ ಗೋವಿಂದ4 ಕರಿಗಿರೀಶ ನರಹರಿ ಗೋವಿಂದ ಪರತರ ಮುರಹರ ಗೋವಿಂದ ಗರುಡಗಮನ ಶ್ರೀ ಗೋವಿಂದ | ಹರಿ ಹರಿ ಹರಿ ಹರಿ ಹರಿ ಗೋವಿಂದ 5
--------------
ವರಾವಾಣಿರಾಮರಾಯದಾಸರು
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹೆಜ್ಜೆ ನೋಡೋಣ ಬಾರೆ ಗೋಪಾಲಕೃಷ್ಣನಗೆಜ್ಜೆಯ ಕಾಲಿನÀ ಅರ್ಜುನಸಾರಥಿ ಮೂರ್ಜಗದೊಡೆಯನ ಪ. ಮಚ್ಛನಾಗಿ ವೇದವ ತಂದವನಂತೆ ಕೂರ್ಮನಾಗಿ[ಭೂಧರ]ಪೊತ್ತವನಂತೆವರಹ ನರಹರಿಯಾಗಿ ದುರುಳರ ಸೀಳಿದಚೆಲುವ ರೂಪದಿ ದಾನವ ಬೇಡಿ ತುಳಿದ ಪುಟ್ಟ 1 ಸೂರ್ಯಕೋಟಿ ಪ್ರಕಾಶದಿ ಮೆರೆವನಚಂದ್ರಕೋಟಿ ಶೀತಲದಿಂದ ಬರುವನಮಂದೆಯ ಕಾಯುತ ಮೈಯ್ಯೆಲ್ಲ ಧೂಳ್ಗಳುಚೆಂದದಿಂದ ಕೊಳಲನೂದುತ ಬರುತಿಹ2 ಮಾತೃದ್ರೋಹವ ಮಾಡಿದ ಪರಶುರಾಮನಪಿತೃವಾಕ್ಯವ ಸಲಿಸಿದ ಶ್ರೀರಾಮನ ಕೃಷ್ಣಾವತಾರನಬೌದ್ಧ ಸ್ವರೂಪನ ಹಯವÀನೇರಿದ ಕಲ್ಕಿಹಯವದನನ ದಿವ್ಯ 3
--------------
ವಾದಿರಾಜ
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
126-1ದ್ವಿತೀಯಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪವೇಲೂರು ಚಿತ್ತೂರು ಚಂದ್ರಗಿರಿ ಮಾರ್ಗದಲಿಅಲ್ಲಲ್ಲಿ ಪ್ರಮುಖ ಭೂಪಾಲರ ಕೈಯಿಂದಬಲು ಭಕ್ತಿಯುತ ಪೂಜೆ ಮರ್ಯಾದೆಕೊಂಡುವ್ಯಾಳಗಿರಿ ವೇಂಕಟನ ತಿರುಪತಿ ಸೇರಿದರು 1ತಿರುಪತಿಯಲಿ ಹನುಮದಾದಿ ಲಕ್ಷ್ಮಣಸೇವ್ಯಶ್ರೀರಾಮಸೀತಾ ಸಮೇತನಿಗೆ ನಮಿಪೆಉರುಗೇಶಶಯ್ಯ ಶ್ರೀ ಗೋವಿಂದರಾಜನಿಗುಶಿರಬಾಗುವೆ ಶ್ರೀ ಲಕ್ಷ್ಮೀಗೂ ಸತತ 2ಒಂದು ಗಾವುದ ದೂರದೊಳಗೇವೆ ಇರುತಿಹುದುಪದ್ಮ ಸರೋವರವು ತತ್ತೀರದಲ್ಲಿವೇದವಿಗ್ರಹ ಘೃಣಿ ಆದಿತ್ಯ ಸೂರ್ಯನುನಿಂತಿಹನು ಸರ್ವೇಷ್ಟ ಶ್ರೀದವೃಷ್ಟಿದನು 3ಸಮೀಪದಲಿ ದೊಡ್ಡ ಆಲಯವಿಹುದಲ್ಲಿಬೊಮ್ಮದಿ ಸುಮನಸಾರ್ಚಿತ ಕೃಷ್ಣ ಅಣ್ಣರಾಮನ ಸಹಕುಳಿತು ವಂದಿಸುವ ಸಜ್ಜನರಕ್ಷೇಮಲಾಭವ ಸದಾ ಪಾಲಿಸುತಿಹನು 4ದಕ್ಷಪಾಶ್ರ್ವದ ಗುಡಿಯಲ್ಲಿ ಸುಂದರರಾಜಲಕ್ಷ್ಮೀಸಮೇತನು ಕಾರುಣ್ಯಶರಧಿಪಕ್ಷ್ಮಗಳು ಅಕ್ಷಿಗಳ ರಕ್ಷಿಸುವ ತೆರದಲ್ಲಿವಿಷ್ಣು ಭಕ್ತರ ಸದಾಕಾಯುತಿಹನು 5ಕೃಷ್ಣನಾಲಯ ವಾಮಪಾಶ್ರ್ವ ಮಂದಿರದಲ್ಲಿವನಜಆಸನದಲ್ಲಿ ಶ್ರೀ ಪದ್ಮಾವತಿಯುದೀನ ಕರುಣಾಕರಿಯುವರಅಭಯನೀಡುತ್ತಶ್ರೀನಿವಾಸನ ಬದಿಯಲ್ಲಿ ಕುಳಿತಿಹಳು 6ದ್ವಾದಶಾಕ್ಷರ ಕಮಲವಾಸಿನಿ ಮಂತ್ರಪ್ರತಿಪಾದ್ಯಳು ಪದ್ಮಾವತಿ ಕಮಲವಾಸಿನಿಯುಪದ್ಮಲೋಚನೆ ಸರ್ವಾಲಂಕಾರ ಸಂಪನ್ನೆಸದಾಯೆಮ್ಮ ಪಾಲಿಸುವಳಿಗೆ ನಮೋ ಎಂಬೆ 7ವೇಂಕಟಾಚಲದ ಅಡಿವಾರದಲಿ ಇರುತಿದೆಅಕಳಂಕ ಸುಪವಿತ್ರ ಕಪಿಲತೀರ್ಥಲಿಂಗ ಆಕಾರದಲಿ ಕಪಿಲೇಶ್ವರ ಇಹನುಬಾಗುವೆ ಶಿರ ಶಿವಗು ಉಮಾಮಹೇಶ್ವರಿಗೂ 8ಕಪಿಲೇಶ್ವರಾನುಗ್ರಹದಿಂದ ಗಿರಿ ಏರಿಗೋಪುರಾಲಯದಲ್ಲಿ ನೃಸಿಂಹನ ನಮಿಸಿಶ್ರೀಪವರಾಹವೇಂಕಟನ ಕಾಣಿಸುವಂತಆ ಭೇಟಿ ಹನುಮನಿಗೆ ಶರಣು ಶರಣೆಂಬೆ 9ಸ್ವಾಮಿವೇಂಕಟನ ಆಲಯದ ಗೋಪುರಕಂಡುಸ್ಮರಿಸಿದ ಮಾತ್ರದಲೆ ಪಾಪ ನೀಗಿಸುವಸ್ವಾಮಿ ತೀರ್ಥಕು ಭೂರಾಹಕರುಣಾಬ್ಧಿಗೂನಮಿಸುವೆ ಅಶ್ವತ್ಥನಾರಾಯಣಗು 10ಕಪಿಲೇಶ್ವರಾನುಗ್ರಹದಿ ಹನುಮಂತನಅ ಪವನಜನ ದಯದಿ ಭೂಧರಾ ವರಾಹನಪುಷ್ಪಭವ ಪೂಜಿತ ಶ್ರೀ ಶ್ರೀನಿವಾಸನಶ್ರೀ ಪದ್ಮ ಪದಯುಗದಿ ಶರಣು ಶರಣಾದೆ 11ಶ್ರೀವಕ್ಷ ವೇಂಕಟೇಶನ್ನ ಧ್ಯಾನಿಸಿ ನಮಿಪೆದೇವ ದೇವಶಿಖಾಮಣಿಕೃಪಾನಿಧಿ ಸುಹೃದನವರತ್ನ ಖಚಿತ ಆಭರಣ ಕಿರೀಟಿಯುಶಿವದವರಅಭಯಕರಕಟಿ ಚಕ್ರಿಶಂಖಿ12ಭಕ್ತವತ್ಸಲ ದಯಾನಿಧಿ ಶ್ರೀನಿವಾಸನ್ನಸತ್ಯಬೋಧತೀರ್ಥಾರ್ಯರು ವಂದಿಸಿ ಸುತ್ತಿಸಿಆ ದೇವಸ್ಥಾನದಲಿ ಮಾರ್ಯಾದೆಗಳ್ ಕೊಂಡುಪದುಮ ಸರೋವರಾಲಯಗಳ ಐದಿದರು 13ವೇಂಕಟಗಿರಿಯಿಂದ ಕರ್ನೂಲು ಗದ್ವಾಲಪೋಗಿ ಸತ್ತತ್ವ ಸಿದ್ಧಾಂತವ ಬೋಧಿಸಿಭಕುತರಿಗೆ ದರ್ಶನ ಉಪದೇಶ ಕೊಟ್ಟರುಮಾರ್ಗದಲಿ ಹನುಮಂತ ಕ್ಷೇತ್ರ ಇಹುದು 14ಕ್ಷೇತ್ರಗಂಡಿಗ್ರಾಮ ತತ್ರಸ್ಥ ಹನುಮನಿಗೆಶರಣೆಂಬೆ ಸ್ಮರಿಸಲು ಬುದ್ಧಿರ್ಬಲ ಯಶಸ್ಸುಧೈರ್ಯವು ನಿರ್ಭಯತ್ವವು ಆರೋಗ್ಯವುದೊರೆಯುವುದು ನಿಶ್ಚಯ ಆಜಾಡ್ಯ ವಾಕ್ಪಟುತ್ವ 15ಹೇಮಗರ್ಭನತಾತಶ್ರಿಪತಿ ಜಗನ್ನಾಥಅಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 16 ಪ|| ಇತಿ ದ್ವಿತಿಯ ಕೀರ್ತನೆ ||
--------------
ಪ್ರಸನ್ನ ಶ್ರೀನಿವಾಸದಾಸರು
ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ ||ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ ||ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ ||ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ
--------------
ಪ್ರಸನ್ನ ಶ್ರೀನಿವಾಸದಾಸರು