ಒಟ್ಟು 800 ಕಡೆಗಳಲ್ಲಿ , 97 ದಾಸರು , 693 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಸೆನೀಗೋ ಹೇಸಿಮನವೆ ಕೇಶವನಂಘ್ರಿ ದಾಸನಾಗೊ ಪ ಸಕಲಭೋಗಭಾಗ್ಯ ಬರುವ ಅಖಿಲ ಸುಖದು:ಖಂಗಳೆಲ್ಲ ಭಕುತಿದಾರ್ಯಗರ್ಪಿಸಿ ಹರಿ ಭಕುತಿಯಿಂದಪಮೃತ್ಯು ಗೆಲಿಯೊ 1 ವಂದನೆ ಸ್ತುತಿ ಮಾನ ಮನ್ನಣೆ ಬಂದು ಕುಂದು ನಿಂದೆಯೆಲ್ಲ ಮಂದರಾದ್ರಿಯ ನಿಲಯಗೆಂದಾ ನಂದದಿಂ ಭವಬಂಧ ಗೆಲಿಯೊ 2 ಪೊಡವಿಸುಖಕೆ ಮೋಹಿಸದೆ ನೀ ಕೆಡುವಕಾಯಮೋಹ ತೊಡೆದು ಒಡೆಯ ಶ್ರೀರಾಮನಂಘ್ರಿ ಕಮಲ ಧೃಢದಿ ಭಜಿಸಿ ಮುಕ್ತಿ ಪಿಡಿಯೊ 3
--------------
ರಾಮದಾಸರು
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇಂದಿಗೆ ಕಡೆಮಾಡು ಎನ್ನ ಮಂದಬುದ್ದಿ ತಂದೆ ಕೇಳಿ ಮರೆಬಿದ್ದೆ ನಿನ್ನವರ ಸುದ್ದಿ ಪ ಒಪ್ಪಿಡ್ಯವಲಕ್ಕಿಗೆ ಒಪ್ಪಿ ಘನ ಬಡತನವ ಕಪ್ಪುಕುಲದವನಿಂಗೆ ತುಪ್ಪ ಸಕ್ಕರೆಯನ್ನು ಗಪ್ಪತ್ತಿಲುಂಡು ಮುಕ್ತಿ ಸಂಪದ1 ವಿದುರನರ್ಧಾಂಗಿಯ ಸದಮಲದ ತವಪಾದ ಸದನಕೈಯಲು ಪದುಮವದನೆ ಮೈ ಮರೆದು ಕದಳಿಫಲ ಮೇಲ್ಭಾಗ ವದನದಿಕ್ಕಲು ಸವಿದು ಸದುಯಾಂಬುಧೊಲಿದಸಮಪದವಿ ದಯಮಾಡ್ದಿ2 ಅಧಮಾಧಮಾಗಿ ದುರ್ಮದದಿಂದ ಮತಿಗೆಟ್ಟು ಸದಮಲ ಕುಲಪದ್ಧತಿ ವಿಧಿಯನ್ನು ಮರೆತು ಅಧಮಕುಲಜಳಿಗೊಲಿದು ಮದುವ್ಯಾದ ಅಜಮಿಳಗೆ ಒದಗಿ ಬಂದಂತ್ಯಕೆ ನಿಜಪದವಿ ಕರುಣಿಸಿದಿ3 ವರಧರ್ಮ ಹಿತಭಕ್ತ ನರನಿವರ ಲೆಕ್ಕಿಸದೆ ಕರುಣದ್ವಿದುರನ ಮನೆಗೆ ಭರದಿ ಬಂದಿಳಿದಿ ಪರಮಪಾವನ ನಿಮ್ಮ ಚರಣಭಕ್ತ್ಯೊಂದೆನಗೆ ಕರುಣಿಸು ಮತ್ತಾವ ಸಿರಿಯ ನಾನೊಲ್ಲೆ 4 ನಿನ್ನ ಎಂಜಲು ಉಣಿಸಿ ನಿನ್ನವರೊಳಾಡಿಸಿ ನಿನ್ನ ಉನ್ನತ ಧ್ಯಾನವನ್ನೆ ದಯಮಾಡಿ ಮನ್ನಿಸಿ ಸಲಹಯ್ಯ ನಿನ್ನ ದಾಸನೆಂದೆನಿಸಿ ಎನ್ನಯ್ಯ ಶ್ರೀರಾಮ ನಿನ್ಹ್ನೊರತನ್ಯರಿಯೆ 5
--------------
ರಾಮದಾಸರು
ಇಂದಿರಾ ಕಾಂತನೆ ಪೊರೆ ಶ್ರೀ ಹರೇ ಪ ನಂದ ನಂದನ ದಿವ್ಯ ಸುಂದರ ಮಂದಾರ ಅ.ಪ. ವಲ್ಲವೀ ಕುಚತಟ ಪಲ್ಲವ ಕುಂಕುಮ ಚೆಲ್ವಕಪೋಲನೆ ಸಲ್ಲಲಿತಾಂಗನೆ 1 ಮನ್ನಿಸು ಭಾಸುರ ರೂಪನೆ 2 ಬಾಲಕ ಧ್ರುವನುತ ಲೀಲಾವಾಮನ ರೂಪ ಬಾಲ ಗೋಪಾಲ ಭೂಲೀಲಾ ವಿಹಾರಿಯೆ 3 ಚಾಪಾ ಪಾಪಾಳಿ ಖಂಡನ ಭೂಪ ನಿರ್ಲೇಪನೆ 4 ಕಂಸವಂಶಾಂತಕ ವಂಶವಿನೋದಿಯೆ ಅಂಶುಕ ಭಾಸುರ ಧೇನುಪುರಾಧೀಪಾ 5
--------------
ಬೇಟೆರಾಯ ದೀಕ್ಷಿತರು
ಇಂದಿರಾದೇವಿ ಕಾಯೆ ಕರುಣಾಂಬುಧಿಯೆ ಪ ಮಾಯೆ ನಾರಾಯಣನ್ನ ಜಾಯೆ ಸತತ ಜ್ಞಾನ | ವೀಯೆ ಭಕ್ತರ ಪ್ರೀಯೇಅಪ ಕನ್ನಾಮಣಿಯೆ ಕಾಮಿನಿ ಮಂಗಳವಾಣಿ | ಸನ್ನುತೆ ಲೋಕ ಜನನಿ | ನಿನ್ನ ಚರಣಯುಗ್ಮ | ವನ್ನೆ ನಂಬಿದೆ ಸುಪ್ರಸನ್ನೆ ಸರ್ವಜೀವರ | ಭಿನ್ನೆ ಭಾಗ್ಯಸಂಪನ್ನೆ || ಮನ್ನಿಸಿ ಮುದದಿಂದ | ಬಿನ್ನಪ ಲಾಲಿಸು | ಚನ್ನೆ ಚಕ್ರ ಪಾಂಚಜನ್ಯ ಧರಾದೇವಿ 1 ಅತಿದಯವಂತೆ ನೀನೆಂದು ಬೇಗದಿ ಬಂದು | ನುತಿಸಿದೆ ದೀನನಾಗಿಂದೂ | ಪತಿತರೊಳಿಡದಲೆ | ಗತಿಗೆ ಸಮ್ಮೊಗಮಾಡು | ತ್ಪತ್ತಿ ಸ್ಥಿತಿ ಲಯಕರ್ತೆ ಅತುಳ ಶೋಭನಮೂರ್ತೆ | ಪತಿಯಲಿ ಜನಿಸಿದೆ| ಪತಿಗೆ ಸತಿಯಾದೆ | ಪತಿಯ ಸಂಗಡ ಜ | ನಿತಳಾದ ಚರಿತೆ2 ಕುಂಕುವರತ ರಾಜಿತೆ ಧವಳಗೀತೆ | ಪಂಕಜಸದನೆ ಖ್ಯಾತೆ | ಲೆಂಕಾ ವತ್ಸಲೆ ಸರ್ವಾಲಂಕಾರ ಮಾಯೆ ರವಿ | ಸಂಕಾಸೆ ಬಹುಕಾಲ | ಸಂಕಟವ ವಿನಾಶೆ | ಕ | ಳಂಕವಾಗದಂತೆ3
--------------
ವಿಜಯದಾಸ
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದಿರೇಶ ದಯದಿಂದಲಿ ತ್ವರಿತದಿ ಬಂದು ಒದಗಿ ಸಲಹೊ ಸುಧೆಯಾನಂದ ಉಣಿಸಿದ ಪ. ಇನ್ನು ನಿರೀಕ್ಷಿಸಲೆನಗೆ ಸಾಧ್ಯವಿಲ್ಲ ಅನ್ಯ ಸಾಧನವಿಲ್ಲ ಮುನ್ನಿನ ಮಾರ್ಗದ ರೀತಿಯ ನೋಡಲು ಮನ್ನಿಪ ಜನರಿಲ್ಲ ಧನ್ಯ ವಿಬುಧ ಗಣ ಮಾನ್ಯ ಮುಕುಂದನೆ ಮಾಧವ 1 ದಾರು ನೀನಲ್ಲದೆ ಮಾರಮಣನೆ ನಿನ್ನ ಸೇರಿದ ಬಳಿಕೀ ಧಾರುಣಿ ಒಳಗೆ ನಿವಾರಣೆಯದೇನೊ ಮೂರು ದೊರೆಗಳಲಿ ವಾರಿಜನಾಭ ನೀ ಪ್ರೇರಕನಾಗಿರೆ ಘೋರವಾವರಿಸುವುದೆ 2 ತಪ್ಪುಗಳೆಲ್ಲವ ಒಪ್ಪಿಕೊಳ್ಳೊಯೆನ್ನಪ್ಪ ನೀ ಕರುಣದಲಿ ಒಪ್ಪಿಸಿ ಪಡದನು ತಪ್ಪದೆ ಮನದೊಳಗಿಪ್ಪ ವ್ಯಸನ ಬಿಡಿಸೊ ಸರ್ಪ ಗಿರೀಂದ್ರನೊಳೊಪ್ಪುವ ಸತ್ಯ ಸಂ- ಕಲ್ಪ ಭಜಕ ನಿಜ ಕಲ್ಪತರುವೆನಿಪ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದು ಪನ್ನಗಶಯನ ಪ ಚೆನ್ನ ಪಾದಂಗಳಲಿ ಚಿನ್ನದಾ ಕಡಗರುಳಿಹನ್ನೆರಡು ನಿರುಗೆಗಳ ಹೊನ್ನ ಪೀತಾಂಬರಕೆರನ್ನಮಯದೊಡ್ಯಾಣವನ್ನು ಸುತ್ತಿದ ನಡುವುಚನ್ನ ಪದಗಳ ಮುಟ್ಟುವನ್ನಕ್ಕ ವನಮಾಲೆ 1 ನನ್ನೀಯಿಂದೆಸೆವ ಕಂಪನ್ನ ಕೌಸ್ತುಭದೆದೆಯುಕನ್ನಿಕೆಯು ಲಕ್ಷುಮಿಯ ಚಿಹ್ನ ಧರಿಸಿದ ವಕ್ಷಘನ್ನ ಚಕ್ಕರ ಶಂಖ ಸನ್ನೆ ಕೌಮೋದಕಿಯುಕನ್ನೈದಿಲೆಯ ವಿಡಿದ ಇನ್ನಂತು ನಾಲ್ಕೈಯು 2 ಪನ್ನೀರು ಬೆರೆತು ಬಾವನ್ನ ಕಂಪಿನ ಮೈಯುಬೆನ್ನಗಲ ಹೆಗಲು ದುಂಡನ್ನ ತೊಳಗುವ ಕೊರಳುಕನ್ನವುರ ಕುಂಡಲಂಗಳನ್ನು ಧರಿಸಿದ ಕಿವಿಯುಜೊನ್ನ ಪಸರಿಪ ನಗೆಯ ಮನ್ನಿಸುವ ಕೆಂದುಟಿಯು 3 ಮುನ್ನೂರು ಕೋಟಿ ರವಿ ಸನ್ನಿಭದ ಚೆಲ್ವ ಮೊಗಕನ್ನೀಲ ಕಣ್ಣು ಚಂದನ್ನ ಎಳಸಿನ ಮೂಗುಉನ್ನತದ ಹಣೆಮೇಲೆ ಸೊನ್ನಿ ಕತ್ತುರಿ ತಿಲಕಸೊನ್ನ ಮುಕುಟವ ಧರಿಸಲಿನ್ನುಳಿದ ಕರಿಗುರುಳು 4 ಮಾನವ ನಾನು ಇನ್ನೆಂತು ಬಣ್ಣಿಸುವೆನಿನ್ನ ಕೃಪೆಯಿಲ್ಲದಿದನೆನ್ನಲಪ್ಪುದೆ ದೇವಚನ್ನ ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಇಂದು ಕಾಯಲಾ ಭಕ್ತವತ್ಸಲಾ ಬಂದು ಒದಗಿ ನಿಂದು ಭಯವ ದೂರ ಮಾಡಲಾ ಧ್ರುವ ಮೊರಿಯು ಕೇಳೆಲಾ ಹರಿಯು ನಿಶ್ಚಲಾ ದುರಿತ ಹರಿಸೆಲಾ 1 ಸುಳವದೋರಲಾ ಹೊಳೆದು ವಿಠ್ಠಲಾ ಖಳರ ಕೈಯ ಸೆಳೆದುಕೊಂಡು ಬಲೆಯ ಬಿಡಿಸೆಲಾ 2 ಬಂಧುಬಳಗ ದೈವ ಕುಲಕೋಟಿ ನೀನೆಲಾ3 ಹಿಂದೆ ಶರಣರ ಬಂದು ಕಾಯ್ದೆಲಾ ಸಂದು ವಿಘ್ನದೊಳು ಬಂದು ರಕ್ಷಿಸಿದೆಲಾ 4 ಅಂದು ಒದಗಿ ನೀ ಬಂದ ಪರಿಯಲಾ ಇಂದು ಅಭಿಮಾನ ಕಾವ ಬಿರುದು ನಿನ್ನದಲ್ಲಾ 5 ದಾತ ನೀನೆಲಾ ಅಣುಗ ನಿನ್ನ ದಾಸನೆಂದು ಪ್ರಾಣನುಳುಹೆಲಾ 6 ಪುಣ್ಯಪ್ರಭೆಯಿಂದಾ ಕಣ್ಣುದೆರಿಯಲಾ ಧನ್ಯಗೈಸಿ ಮಹಿಪತಿ ಮಾತ ಮನ್ನಿಸೆಲಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಮನಿಲಿ ಬ್ರಹ್ಮಾನಂದ ಬಂದು ಭಾವ ಪೂರಿಸಿದ ಮುಕುಂದ ಧ್ರುವ ಎನ್ನಮನಕೆ ಮಾಡಿದ ಮನೋಹರ ಚೆನ್ನಾಗೊಲಿದು ದೋರಿದ ಸಹಕಾರ ಮನ್ನಿಸೆನಗೆ ಬೀರಿದ ನಿಜಸಾರ ಇನ್ನೊಬ್ಬರಿಗ್ಹೇಳುದಲ್ಲೀ ವಿಚಾರ 1 ದಯದಿಂದ ಪಿಡಿದು ಎನ್ನ ಕೈಯ ಶ್ರೇಯ ಸುಖ ನೀಡಿದ ಪ್ರಾಣಪ್ರಿಯ ತ್ರಯ ಗುಣಾತೀತದ ಸುಖಾಶ್ರಯ ತ್ರೈಲೋಕದೊಳೆನಗೆ ವಿಜಯ 2 ಕಣ್ಣು ಪಾರಣಗೈಸಿದೆನ್ನ ನೋಡಿ ಎನ್ನೊಳನುಭವಾಮೃತಸಾರ ನೀಡಿ ಚಿಣ್ಣಮಹಿಪತಿ ಕೈವಶಗೂಡಿ ಧನ್ಯಧನ್ಯಗೈಸಿದ ದಯಮಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ನಿನಗೆ ಧರ್ಮವೇ ಇಂದಿರೇಶ ಬದಿಗ ನೀನಾಗಿದ್ದು ಭೀತಿ ಪಡಿಸುವುದು ಪ ನಿನ್ನ ಗುಣಗಳ ತುತಿಸಿ ನಿನ್ನನ್ನೇ ಹಾರೈಸಿ ನಿನ್ನವರ ಪ್ರೀತಿಯನು ಸಂಪಾದಿಸಿ ಅನ್ಯರನು ಲೆಕ್ಕಿಸದೆ ಚೆನ್ನಾಗಿ ಬಾಳುವ ಮಾನ್ನವರನ ಈ ಪರಿಯ ಬನ್ನಬಡಿಸುವುದು 1 ದುರುಳನಲ್ಲವೊ ನಿನ್ನ ಚರಣ ಸೇವಕರವನೊ ಪರಿಪಾಲಿಸುವುದು ನಿನ್ನ ಪರಮ ಧರ್ಮ ಗುರುಗಳಂತರ್ಯಾಮಿ ಕರಮುಗಿದು ಬಿನ್ನೈಪೆ ಶರಣ ರಕ್ಷಕನೆಂಬೊ ಬಿರಿದು ಸುಳ್ಳಾಗುತಿದೆ 2 ಶೋಕನಾಶಕ ವಿಗತಶೋಕನೆಂಬೋ ನಾಮ ನಾ ಕೇಳಿ ಮೊರೆಹೊಕ್ಕೆ ಲೋಕಬಂಧು ನಿ ರಾಕರಿಸದೆಮ್ಮ ನೀ ಸಾಕಬೇಕನುದಿನವು ವಾಕು ಮನ್ನಿಪುದು ಲೋಕೈಕ ರಕ್ಷಾಮಣಿಯೆ 3 ಗುಣವೆ ನಿನಗಿದು ಬರಿದೆ ದಣಿಸುವುದು ಶರಣರನು ಪ್ರಣತಾರ್ತಿಹರ ವಿಭೀಷಣ ಪಾಲಕ ಕ್ಷಣಕನಂತಪರಾಧವೆಣಿಸುವರೆ ಕಡೆಯುಂಟೆ ಮಣಿದು ಬಿನ್ನಹ ಮಾಳ್ಪೆ ದನುಜದಲ್ಲಣನೆ 4 ನಮೋ ನಮೋ ಬ್ರಹ್ಮಣ್ಯ ದೇವರ ದೇವ ದುರಿತ ನಮೋ ನಮೋ ಕಾರುಣ್ಯ ಶೀಲ ಸಜ್ಜನ ಪಾಲಾ ನಮೋ ನಮೋ ಜಗನ್ನಾಥವಿಠಲ ವಿಖ್ಯಾತ 5
--------------
ಜಗನ್ನಾಥದಾಸರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಇದು ವಿವೇಕವಲ್ಲಾಪ ಸತ್ಸಂಗವಾರೇ ನೀ ಬಯಸುವಿ ಮದಾ | ಮತ್ಸರಗಳಿದಿಲ್ಲಾ 1 ಬೆಲ್ಲೊಳಗಿನ ಕಲ್ಲಿನಂತಂಗದೊಳಗೆ ಖುಳ್ಳತಣವೇವೆಲ್ಲಾ 2 ಮಹಿಪತಿಜನ ನುಡಿಮನ್ನಿಸಿನ್ನಾರೇ | ಅಹಿತವಗುಣ ಸಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು