ಒಟ್ಟು 115 ಕಡೆಗಳಲ್ಲಿ , 31 ದಾಸರು , 66 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೊಳ್ಳ ಕಳ್ಳೊಟ್ಟೆ ಜಂಬಾಳಗಟ್ಟೆ ಸಂಸಾರ ನೋಡಮ್ಮಲೊಳ್ಳ ಕಳ್ಳೊಟ್ಟೆ ಸರಸನಂಬಲುಗತಿಯದು ಲೊಳ್ಳಟ್ಯಮ್ಮಮ್ಮಪಹೆಂಡಿರು ಮಕ್ಕಳು ತಂದೆ ತಾಯಿಗಳುಭಾಗ್ಯವು ಲೊಳ್ಳಟ್ಯಮ್ಮಮ್ಮಚಂಡ ಯಮದೂತರುಮಂಡೆತಿವಿವಾಗಬಿಡಿಸುವರಾರು ಇಲ್ಲಮ್ಮ1ಶ್ರೇಷ್ಠತೆ ಚೆಲುವಿಕೆ ವಸ್ತ್ರವು ಪ್ರಾಯವುಸಿದ್ಧಿಯು ಲೊಳ್ಳಟ್ಯಮ್ಮಮ್ಮದುಷ್ಟಮದೂತರು ದುಬುದುಬು ಬಡಿವಾಗಬಿಡಿಸುವರಾರು ಇಲ್ಲಮ್ಮ2ವಾರೆ ಮುಂಡಾಸವು ಗೀರು ಗಂಧಗಳುಪೋರತನವು ಲೊಳ್ಳಟ್ಯಮ್ಮಮ್ಮಘೋರ್ಯಮದೂತರು ಘರ್ಜಿಸುತ ಒಯ್ವಾಗಬಿಡಿಸುವರಾರು ಇಲ್ಲಮ್ಮ3ಕನಸಿನ ತೆರವಿದು ಸಂಸಾರವೆಂಬುದುಅನುಮಾನವಿದಕಿಲ್ಲಮ್ಮಮ್ಮಕನಸೆಂದು ನಿಶ್ಚೈಸೆ ಕಾಲನು ಬಾರನುಮನದಲಿ ತಿಳಿದುಕೊ ನೀನಮ್ಮ4ತನ್ನನು ಮರೆತು ಸಂಸಾರ ನೆಚ್ಚಲುತಿರುಗುವ ಜನ್ಮವ ನಮ್ಮಮ್ಮಚೆನ್ನ ಚಿದಾನಂದ ಗುರುವೆಂದು ನಂಬಲುಜನ್ಮವ ಕಳೆವುವು ತಿಳಿಯಮ್ಮ5
--------------
ಚಿದಾನಂದ ಅವಧೂತರು
ವ್ಯಾಪಾರವೆನಗಾಯಿತುಶ್ರೀಪತಿಯ ಪಾದಾರವಿಂದ ಸೇವೆಯೆಂಬ ಪಹರಿಕರುಣವೆಂಬಂಗಿಗುರುಕರುಣಮುಂಡಾಸುಹರಿದಾಸರ ದಯವೆಂಬ ಒಲ್ಲಿ ||ಪರಮಪಾಪಗಳೆಂಬ ಪಾಪೋಸವನೆ ಮೆಟ್ಟಿದುರುಳಾತ್ಮರಾದವರ ಎದೆ ಮೇಲೆ ನಡೆವಂಥ 1ಬಿಳಿಯ ಕಾಗದ ಹೃದಯ ಬಾಯಿ ಕಲಮದಾನಿನಾಲಗೆಯೆಂಬ ಲೆಕ್ಕಣಿಕೆ ||ಶ್ರೀಲೋಲನ ದಿವ್ಯನಾಮವೆಂಬುವ ಲೆಕ್ಕಶೀಲದಿ ಬರೆದು ಶ್ರೀಹರಿಗೆ ಒಪ್ಪಿಸುವಂಥ 2ನುಡಿನುಡಿಗಾನಂದ ಬಾಷ್ಪ ರೋಮಾಂಚನಮುಡುಪಿನೊಳಗೆ ಇಟ್ಟ ಕೈಜೀತವು ||ಕಡಿಮೆ ಸಂಬಳಕೆಲ್ಲ ಮುಕ್ತಿಸಾಧನವನ್ನುಕೊಡುವ ತೆರನಂತೆ ಚೀಟಿ ಬರೆಸಿಕೊಟ್ಟ 3ಹಿಂದಿನ ಸಂಸಾರ ಆಗಮನದ ಭಯಎಂದೆಂದಿಗದರ ಚಿಂತೆಯು ಬಿಟ್ಟಿತು ||ಮುಂದಿನ ಸಂಸಾರ ಸ್ಥಾನ ಭಾರಕೆಲ್ಲಸಂದಾಯವನು ಮಾಡಿ ಕತಬಿ ಹರಿಸಿಕೊಟ್ಟ 4ಕಂಡಕಂಡವರ ಕಾಲುಗಳಿಗೆರಗಿ ನನ್ನಮಂಡೆದಡ್ಡುಗಟ್ಟಿ ಬಳಲಿದೆನೊ ||ಪುಂಡರೀಕಾಕ್ಷಶ್ರೀಪುರಂದರವಿಠಲನುಕಂಡು ವೀಳೆಯ ಕೊಟ್ಟು ತನ್ನ ಸೇವೆಗೆ ಇಟ್ಟ 5
--------------
ಪುರಂದರದಾಸರು
ಶಾರದಾಂಬೆಯೆ ನಾರಿ ಲಕುಮೀಸಾರಸಾಕ್ಷಿ ಮಹೇಶ್ವರಿಘೋರಮಹಿಷಿನಿಶುಂಭ ಮರ್ದಿನಿಧೀರ ಚಂಡಮುಂಡಾರ್ದನಿ ಜಯತು ಜಯತೂ ಪಜ್ವಾಲಿನೀ ಅಕ್ಷಾರ ಮಾಲಿನೀನೀಲಕುಂತಳೆ ಭಾರ್ಗವೀಶೂಲಿನೀ ಹರಿಲೋಲೆ ನೀಗುಣಶೀಲೆ ಗಾಯನ ರಾಣಿ ಜಯತು ಜಯತೂ 1ವಾರಿಜಾಲಯೆ ವೀಣಾಪಾಣಿಯೇಮಾರಹರನ ಅರ್ಧಾಂಗಿಯೇಕ್ಷೀರಸಾಗರಕನ್ಯೆ ಗಿರಿಸುತೆಕೀರವಾಣಿ ಸರಸ್ವತೀ ಜಯತು ಜಯತೂ 2ರಮೆಯೆ ರಕ್ಷಿಸು ಉಮೆಯೆಪಾಲಿಸುಕಮಲಸಂಭವನರಸಿಯೆಅಮಿತ ಮಂಗಲೆ ಅಮರ ದೈವವೆಕಮಲಮುಖಿ ವಾಗ್ದೇವಿಯೆ ಜಯತು ಜಯತೂ 3ಕರವಮುಗಿವೆ ಸ್ಮರಿಸಿ ನಿನ್ನನುಶಿರವ ಚಾಚುವೆ ಚರಣಕೆಕರುಣದಲಿ ಗೋವಿಂದದಾಸನಪರಸಿ ರಕ್ಷಿಸಬೇಹುದು ಜಯತು ಜಯತೂ 4
--------------
ಗೋವಿಂದದಾಸ
ಸುಣ್ಣವಿಲ್ಲ ಭಾಗವತರೆ |ನುಣ್ಣನೆಯ ಗೋಡೆಗೆ ನಿನ್ನ ತೊಡೆದು ಬಿಟ್ಟೆ......... ಪ.ವೀಳೆಯ ಹಾಕುವನಲ್ಲ ವ್ಯಾದಿಷ್ಠ ನನಗಂಡ ||ಬಾಳುಗೇಡಿ ಎನ್ನ ಬಾಯನೋಡಿ ||ಹಾಳಾದ ಮನೆ ಹೊಕ್ಕು ಗೋಳುಗರಿಯತ್ತೇನೆ |ಕೇಳಿದ ಬಳಿಕಿನ್ನು ಹೇಳದೆ ಫಲವೇನು......... 1ಮದ್ದು ಮದ್ದು ತಿಂದು ಮನೆಯೆಲ್ಲ ಬರಿದಾಯ್ತು |ಹೊದ್ದಿತು ಮೂದೇವಿ ಮೈದುನಗೆ ||ಬದ್ಧತನದಿ ಸಂಜೆಭಂಗಿ ಮುಕ್ಕುವಭಾವ |ಒದ್ದು ಕೊಳ್ಳುತಾನೆ ಒಳಗೆ ಕದವನಿಕ್ಕಿ 2ಅನ್ನೆಕಾರಿ ಅತ್ತೆ ತೊನ್ನು ಬಡಕ ಮಾವ |ಗನ್ನ ಘಾತಕಿರಂಡೆಅತ್ತಿಗೆ ಮುಂಡೆ ||ಎನ್ನ ಗೋಳು ತಾಗಿ ಎಂದಿಗೆ ಹೋದಾರು |ಪನ್ನಗಶಯನ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ಸುರತಟನೀಧರನರಸೀ |ಪೊರೆಪಾರ್ವತಿ ದೇವಿಯೇ |ಕರುಣಾಕರೇ ದುರಿತಹರೇ | ಶರಣರ ಸಂಜೀವಿಯೆ 1ಕಂಕಣಕರೆ ಕುಂಕುಮಧರೆ | ಪಂಕಜದಳ ನೇತ್ರೆಯೆ |ಶಂಕರಿ ಭವಬಿಂಕಹರೇ | ಕಿಂಕರನುತಿ ಪಾತ್ರೆಯೇ 2ಚಂಡಿಯೆ ಚಾಮುಂಡಿಯೇ | ಪ್ರಚಂಡಿಯೆ ಓಂಕಾರಿಯೆ |ಚಂಡನ ಖಳಮುಂಡನ ಶಿರÀ | ಖಂಡನೆ ಹ್ರೀಂಕಾರಿಯೇ 3ಜ್ವಾಲಿನಿ ಮಹಮಾಲಿನಿ ದಯೇ | ಶೀಲೆ ನೀ ಶರ್ವಾಣಿಯೆ |ಕಾಳಿನಿ ಮಹಾ ಕಾಳಿನಿರಣ| ಶೂಲಿನೀ ರುದ್ರಾಣಿಯೆ 4ಸುಂದರಿ ಗುಣಮಂಜರಿ ಪೂರ್ಣೇಂದು ಸಂಕಾಶಿಯೇ |ಚಂದದಿ ಗೋವಿಂದನ ದಾಸ| ವಂದಿತೆ ಅಘನಾಶಿಯೆ 5
--------------
ಗೋವಿಂದದಾಸ
ಹುಚ್ಚು ಮುಂಡೆ ನೀನಾಗಬೇಡ ಹೇಳುವೆ ಕೇಳುಹುಚ್ಚು ಮುಂಡೆ ಹುಚ್ಚು ಮುಂಡೆಯು ಅಲ್ಲಬ್ರಹ್ಮವೇ ನೀನಾಗಿಹೆ ಹುಚ್ಚು ಮುಂಡೆಪಸರ್ವದೇಹಕೆ ನರದೇಹವು ಉತ್ತಮ ಹುಚ್ಚು ಮುಂಡೆಇರುವ ದೇಹದಿ ನಿನ್ನ ಸಾರ್ಥಕ ಮಾಡಿಕೋ ಹುಚ್ಚು ಮುಂಡೆಉರ್ವಿಪ್ರಪಂಚವು ಸತ್ಯವೆಂದು ಎನಬೇಡ ಹುಚ್ಚು ಮುಂಡೆತೋರುವುದಿಂದ್ರಜಾಲದ ತೆರದಿ ಸ್ವರ್ಗ ಮತ್ರ್ಯವುಹುಚ್ಚು ಮುಂಡೆ1ಸತಿಸುತರನು ನೀನು ನಂಬಿ ಕೆಡಬೇಡ ಹುಚ್ಚು ಮುಂಡೆಸತಿಯೆಷ್ಟು ಸುತರೆಷ್ಟು ಆದರು ನಿನಗೆ ಹುಚ್ಚು ಮುಂಡೆಮಿತಿಯಿಲ್ಲದ ದೇಹವಾದವು ನಿನಗೆ ಹುಚ್ಚು ಮುಂಡೆಮತಿಗೆಟ್ಟು ಮರೆತು ಜನ್ಮವನಂತವ ತಿರುಗುವರೆ2ಸ್ವಪ್ನದ ಸುಖದಂತೆ ಸಂಸಾರವಿದು ಮೃಷೆ ಹುಚ್ಚು ಮುಂಡೆಇರುವೆನಾಚಂದ್ರಾರ್ಕವೆಂದು ಎಂಬೆಯೋ ಹುಚ್ಚು ಮುಂಡೆಅಪ್ಪಯ್ಯ ಹೋದನು ಮುತ್ತಯ್ಯ ಹೋದನು ಈ ಪರಿಯಿಂದೆ ಹುಚ್ಚು ಮುಂಡೆಮುಪ್ಪಾದೆ ಇಂತು ಭವದ ಸುಳಿಯಲಿ ಬಿದ್ದು ಹುಚ್ಚು ಮುಂಡೆ3ಕಾರ್ಯೋಪಾಧಿ ಯಿಂದ ಹುಚ್ಚು ಮುಂಡೆ ನೀನಾದೆ ಹುಚ್ಚುಮುಂಡೆಕಾರ್ಯಕಾರಣ ಉಪಾಧಿಯು ನಿನಗಿಲ್ಲವು ಹುಚ್ಚು ಮುಂಡೆಕಾರ್ಯಗುಣಗಳಿಂದ ನಿನ್ನ ತಿಳಿವುದು ಕಷ್ಟ ಹುಚ್ಚು ಮುಂಡೆಕಾರಣ ಗುಣದಲ್ಲಿ ತಿಳಿಯೆ ತಿಳಿಸುವೆ ನಿನ್ನ ಹುಚ್ಚು ಮುಂಡೆ4ಹೊಂದು ಸದ್ಗುರುಪಾದ ತಿಳಿ ನಿನ್ನ ಬ್ರಹ್ಮೆಂದು ಹುಚ್ಚು ಮುಂಡೆನಿಂದುನಾಶಿಕಗೊನೆಯ ನೋಡಿ ದೃಷ್ಟಿಯಿಡು ಹುಚ್ಚು ಮುಂಡೆಚಂದ್ರರು ಶತಕೋಟಿ ಬೆಳಗುವರು ತಾವಲ್ಲಿ ಹುಚ್ಚು ಮುಂಡೆಸುಂದರ ಚಿದಾನಂದನಾಗುವೆ ನಿಜದಲ್ಲಿ ಹುಚ್ಚು ಮುಂಡೆ5
--------------
ಚಿದಾನಂದ ಅವಧೂತರು