ಒಟ್ಟು 555 ಕಡೆಗಳಲ್ಲಿ , 78 ದಾಸರು , 475 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತ ಅಂಜನೆಸುತನು ಭೀಮರಾಯನು ಪ. ಈತ ರಾಮರ ಬಂಟನು ಈತ ಕೋಟಿಲಿಂಗವನ್ನು ರೋಮರೋಮದಿ ಧರಿಸಿದವನು ಈತ ಲೋಕ ಪ್ರಖ್ಯಾತನು ಭೀಮರಾಯನು ಅ.ಪ. ಪುಟ್ಟಿದಾಗಲೆ ಗಗನಮಂಡಲವನ್ನು ಮುಟ್ಟಿ ರವಿಯನು ತುಡುಕಿ ಹನುಮರಾಯನು 1 ವಂಚನಿಲ್ಲದೆ ಮಾಡಿದ ವನವ ಕಿತ್ತನು ಭೀಮರಾಯನು 2 ಲಂಕಿಣಿಯನೆ ತುಡುಕಿ ಮಾಯಾಜಾಲವ ಶಂಕೆಯಿಲ್ಲದೆ ಗೆಲಿದ ಭೀಮರಾಯನು 3 ವೀರರ ಗೆಲಿದ ಶೂರನು ಭೀಮರಾಯನು 4 ಲೆಕ್ಕವಿಲ್ಲದೆ ಖಳರ ಗೆಲಿದು ಬಂದು ಕೊಕ್ಕನೂರೊಳುನಿಂತನು ಭೀಮರಾಯನು 5
--------------
ಹೆಳವನಕಟ್ಟೆ ಗಿರಿಯಮ್ಮ
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಊರ ದೇವರ ಮಾಡಿ ಊರ ಶಾಂತಿಯಾಗಲಿಊರದೇವತೆ ಗುರು ಚಿದಾನಂದ ತಾನೆನುತ ಪ ಶುದ್ಧ ಸುನಾದವೆನಿಸುವ ಡಂಗುರವ ಸಾರಿಸಾಧು ಶಮೆ ದಮೆ ಎಂಬ ಮೊಳಕೆ ಹೊಯ್ದುವೇದಾಂತವೆಂದೆಂಬ ಹಂದರವನೆ ಹಾಕಿವಾದಾತೀತಾತ್ಮದೇವಿಯ ಎದುರುಗೊಂಡು 1 ಹಲವು ನಾದಗಳೆಂಬ ವಾದ್ಯಗಳನೇ ನುಡಿಸಿಬೆಳಗುತಿಹ ತೇಜಃಪುಂಜಗಳ ಮುಟ್ಟಿಸಿಯೆಹೊಳೆಯುತಿಹ ನಾನಾ ಕಳೆ ಬರಿಸು ಬತ್ತಿಯ ಹಚ್ಚಿಬಳಿಕ ಚಿತ್ಕಳೆ ಎಂಬ ದೇವಿಯನು ಮೆರೆಸುತ್ತ 2 ಅಡ್ಡಾಡುವ ಮನವ ಹಿಡಿ ತಂದು ಕಟ್ಟಿದೊಡ್ಡ ಅಹಂಕಾರದ ಕೋಣವನು ಕಡಿಸಿಹೆಡ್ಡ ಕಾಮವದೆಂಬ ಕುರಿಯ ತಲೆ ಕಡಿಸಿಗೊಡ್ಡು ಗುಣಗಳು ಎಂಬ ಚೆರುಗ ಚೆಲ್ಲಿಸುತ್ತ3 ಸಿದ್ಧ ತಾನೆಂದೆಂಬ ಅಡುಗೆಯದು ಆಗಲುಸಿದ್ಧ ಪುರುಷರು ಎಲ್ಲ ಉಣಲು ಕುಳ್ಳಿರೆಶುದ್ಧ ತೃಪ್ತಿಯು ಎಂಬ ಔತಣವು ಮುಗಿಯಲುಅದ್ದಿಸಿರಿ ಆನಂದದಲಿ ಊರ ಜನರ 4 ಊರೆಂಬುದು ನಿಮ್ಮ ದೇಹವೇ ತಿಳಿಯಿರೋಊರ ದೇವತೆ ನೀನು ನಿಜವನರಿಯೋಊರ ದೇವರ ಮಾಡಿ ಆನಂದಪಡೆಯೋಇದಕೆ ತಾ ಸಾಕ್ಷಿ ಚಿದಾನಂದನರಿಯೋ 5
--------------
ಚಿದಾನಂದ ಅವಧೂತರು
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಚ್ಚರಿಲ್ಲೀ ಮನಕೆ ಯೋಚಿಸಿ ನೋಡದು ಚಿದ್ಫನಕೆ ಧ್ರುವ ನುಡಿದವು ಪರಮಾರ್ಥ ನಡೆಯೊಳಗಿಲ್ಲದೆ ನುಡಿದರ್ಥ ಹಿಡಿದು ವಿಷಯದ ಸ್ವಾರ್ಥಬಡುವುದು ಶ್ರಮತಾನೆ ವ್ಯರ್ಥ 1 ಓದುದು ವೇದಾಂತ ಭೇದಿಸಿ ತಿಳಿಯದೆ ಅದರಂತ ವಾದ ಮಾಡುದು ಭ್ರಾಂತ ಸಾಧಿಸಿ ನೋಡದು ತನ್ನೊಳು ತಾ 2 ಜನಕೇಳುದು ಬುದ್ದಿ ತನಗ ಮಾಡಿಕೊಳ್ಳದು ಸಿದ್ಧಿ ಕಾಣದ್ಹೇಳುದು ಸುದ್ಧಿ ಜ್ಞಾನಕ ಬಾರದು ತಾ ತಿದ್ದಿ 3 ತೊಟ್ಟು ಉತ್ತಮ ವೇಷ ಮುಟ್ಟಿಗಾಣದೆ ಸ್ವಪ್ರಕಾಶ ತುಟ್ಟಿಲಿ ಜಗದೀಶ ಗುಟ್ಟಿಲಿ ಬಲಿವದು ಧನದಾಶೆ 4 ಎಚ್ಚರಿಸಿತು ಖೂನ ನಿಶ್ಚಲ ಮಹಿಪತಿಗೆ ಗುರುಜ್ಞಾನ ಹುಚ್ಚುಗೊಂಡಿತು ಮನ ನೆಚ್ಚಿ ನಿಜಾನಂದದ ಘನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಎಂಥ ಕರುಣಿಯೋ | ಐಕೂರು ಗುರುಗಳೆಂಥ ಸುಗುಣಿಯೋ ಎಂಥ ಪರಮ ಕರುಣಿಯೋ ಇವ ರೆಂಥ ಸುಗುಣ ಶಾಲಿಯೋ ಸು ಸ್ವಾಂತದಿ ಏಕಾಂತದಿ ಶ್ರೀಕಾಂತನ ಪದಕ್ರಾಂತ ಶಾಂತರಂತಃಕರುಣಿಯೋ ಅ.ಪ ವಸುಧಿ ತಳದಲಿ ಶ್ರೀಶನಾಜ್ಞೆಯಿಂದ ಶಶಿಯಮತದಲಿ ಬಂದು | ಸುನಿತ ಮನದಲಿ ವಸುಮತಿ ಸುಶಾಸ್ತ್ರಧರ್ಮ | ನಿಶಿಹಗಲಾಚರಿಸಿ ಶಿಷ್ಯ ಭವ | ಘಸಣೆ ಕರೆದು ಕುಶಲಗರೆದ 1 ನಿತ್ಯ ಉತ್ಕøಷ್ಟ ಭಕುತಿಲಿ ಮುಟ್ಟಿ ಪಾಡಿ ನೋಡಿ ಕುಭವ ದಟ್ಟುಳಿಯನಿಟ್ಟವರು 2 ಜ್ಞಾನ ಶೀಲರು ದಾಸಕವನ | ಗಾನಲೋಲರು ನೆರೆನಂಬಿದಂಥ ದೀನಪಾಲರು ಶ್ರೀನಿಧಿವರ ಶಾಮಸುಂದರ | ಧ್ಯಾನಾಮೃತಪಾನಗೈದು ಕ್ಷೋಣಿ ಮಂಡಲದಿ | ಮದಿಸಿದಾನೆಯೆಂತೆ ಚರಿಸಿದವರು 3
--------------
ಶಾಮಸುಂದರ ವಿಠಲ
ಎಂಥಾ ಭಾಗ್ಯವೆ ಎಂಥಾ ಪುಣ್ಯವೆ ಗೋಪಿ ಪ. ಎಂತು ಸಾಕಲಿಂಥ ದುಷ್ಟನ ಎಂತನಿಂತು ಚಿಂತೆಯಾಂತು ಅ.ಪ. ಪುಟ್ಟಿದೇಳು ದಿವಸದಲ್ಲಿ ದುಷ್ಟಪೂತನಿ ಕೊಂದ ದೇವ ದೃಷ್ಟಿವಂತನೆ ದಿಟ್ಟ ತೃಣ ಕೇಶೀಯರ ಪುಟ್ಟಕಾಲಲಿ ಶಕಟನಳಿದ ಕಟ್ಟಿ ಸಕಲ ದನುಜರನ್ನು ದೃಷ್ಟಿ ತಾಕಿತೆ ಕೃಷ್ಣಗೆನುತ 1 ವಿಪ್ರನು ನಿನ್ನ ಮನೆಗೆ ಬಂದು ಕ್ಷಿಪ್ರದಿ ಪೂಜೆ ಕೃಷ್ಣೆಗೆನಲು ಅಪ್ರಮೇಯನು ವಿಪ್ರನ ಮುಟ್ಟೆ ಕಟ್ಟಿ ಕಂಬಕೆ ಬರಲು ನಿಂದು ಕೃಷ್ಣಗರ್ಪಿಸೆ ನೈವೇದ್ಯವಾಗ ಸುಪ್ರಕಾಶದಿ ತೆಗೆದುಕೊಂಡ ಕೃಷ್ಣನನು ನೀನಪ್ಪಿ ಮುದ್ದಿಸೆ2 ಚಂದಿರನ ನೀ ತೋರು ಎನಲು ಇಂದುವದನ ಕೇಳಲಾಗ ಸುಂದರಾನನನಂದದಿ ಗೋವ ಚಂದದಿಂದ ಕಾದು ಕಾಳಿಂಗನಂದದಿ 3 ಸುರರು ಶ್ರೀ ಶ್ರೀನಿವಾಸನ ಶಿರದಿ ಪುಷ್ಪ ಮಳೆಗೆರೆಯಲು ನೆರೆದು ಗೋಪೇರ ಸೀರೆ ಸೆರಗ ಸೆಳೆದು ವರಳನೆಳೆದು ಮುರಿದು ಮರವ ಗರೆದು ಅಮೃತಸದೃಶ ವಾಣಿ ನೆರೆದು ಗೋಪಿಯರೊಡನೆ ನಾಟ್ಯಗರೆದು ರಾಸವಾಡೆ ರಂಗನಕರೆದೆರೆವೆ ಮಗುವೆನ್ನುವ 4
--------------
ಸರಸ್ವತಿ ಬಾಯಿ
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದು ನಿನ್ನ ದಯವು ಆಗೋದೋ ಇಂದಿರೇಶ ದುರಿತ ಹಿಂದಕ್ಕ್ಹೋಗೋದೊ ಮಂದಬುದ್ಧಿಯಿಂದ ನಾಲಿಗೆ ಹಿಂದೆ ಮುಂದೆ ನೋಡುತಿಹುದು ಸಂದೇಹ ಬಿಟ್ಟು ಗೋವಿಂದನ್ನ ನೆನೆಯಲಿಕ್ಕೆ ಪ ಹರಿಯ ತನಯ ಹರಿಯು ಹರಿಯೆಂದು ಒರೆಯುತಿರಲು ಗಿರಿಯನ್ಹತ್ತಿಸಿ ಉರಿಗೆ ಕೆಡುಹಿದ ಕರುಣವಿಲ್ಲದ ಹಿರಣ್ಯಕನು ಪರಮ ಬಾಧೆ ಬಡಿಸುತಿರಲು ಕರೆಯೆ ಕಂಬದಿ ಬಂದು ನರ- ಹರಿಯ ನಾಮ ಕಾಯ್ತು ಅವನ 1 ಕಂತುಪಿತನೆ ನಿನ್ನ ಭಜಿಸದೆ ದ್ವಿಜನು ಕೆಟ್ಟು ಅಂತ್ಯಜ ಸ್ತ್ರೀಯಳ ಕೂಡಿ ಮೆರೆಯಲು ಅಂತ್ಯಕಾಲದಲ್ಲಿ ಏಕಾಂತದಿಂದ ಮಗನ ಕರೆಯೆ ಕಂತುನಯ್ಯ ನಿನ್ನ ನಾಮ ಎಂಥಗತಿಯ ಕೊಟ್ಟಿತವಗೆ2 ದುಷ್ಟಪತ್ನಿ ನುಡಿಗೆ ಉತ್ತಾನಪಾದ ತನ್ನ ಪುತ್ರನಿಂದ ರಹಿತನಾಗಲು ಅಚ್ಚುತನ ಧ್ಯಾನದಲಾಸಕ್ತನಾಗೆ ಉಗ್ರತಪಕೆ ಮೆಚ್ಚಿಕೊಟ್ಟ ನಮ್ಮ ಸ್ವಾಮಿ ಹೆಚ್ಚಿನ ಲೋಕ ಪದವಿ ಧ್ರುವಗೆ 3 ಬಂದು ಭರದಿ ಮಡುವ ಕಲಕುವೋ ಮದಡಗಜವ ಕಂಡು ಮಕರಿ ಕಾಲು ಹಿಡಿಯಲು ಬಂಧುಗಳಿಂದ ರಹಿತವಾಗಿ ಒಂದು ಸಾವಿರ್ವರುಷ ಬಾಳಲು ಇಂದಿರೇಶ ನಿನ್ನ ಸ್ಮರಣೆಯಿಂದ ಶಾಪ ವಿಮೋಚಿತನಾದ 4 ಸೃಷ್ಟಿಗಧಿಕ ನಿನ್ನ ದಯವಿರೆ ಪಾಂಡುಸುತರ ಪಟ್ಟದ ರಾಣಿ ಸಭೆಗೆ ಎಳೆಯಲು ವಸ್ತ್ರಹರಣ ಕಾಲದಲ್ಲಿ ಭಕ್ತಿಯಲ್ಲಿ ಭೀಮೇಶ- ಕೃಷ್ಣನ ಮುಟ್ಟಿ ಭಜಿಸೆ ಕೃಷ್ಣೆಗಾಕ್ಷಣ ತೃಪ್ತನಾಗಿ ಕೊಟ್ಟೆಯೊ ವಸನ 5
--------------
ಹರಪನಹಳ್ಳಿಭೀಮವ್ವ
ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ಪ ಜನನಿ ಜನಕ ಚಿಕ್ಕತನದಿಂದ ತನಗತಿ ಜನರೊಳು ಘನ ಧರ್ಮ ಧನ ಗಳಿಸಿದರಂತೆ ಅನುಸ್ಮøತಿ ಎನಗಿನ್ನು ಇನಿತಿಲ್ಲವು ಪೇಳೆ 1 ಅಂದಿಂದಾತನ ಮೊಗ ಚಂದಾಗಿ ನೋಡಿಲ್ಲವೆ ಒಂದು ಬಾರೆನ್ನ ತಾನು ಬಂದು ತೋರನೆ ಮಂದಿ ಪೇಳುವದು ಕೇಳ್ಯಾನಂದಿಸುವೆನಲ್ಲದೆ ಮುಂದೇನು ಗತಿಯೆಂದು ಇಂದುಮುಖಿಯೆ ಪೇಳೆ2 ದಿನಗಳೊದಗಿದವೆ ಜನರೆಲ್ಲ ಕಂಡಂತೆ ಬಿನಗು ಮಾತುಗಳನು ಎನಗಂಬರೆ ಎನಗೇನು ಇದರಿಂದ ತನಗೆ ಆ ಕೀರುತಿ ಮನಮುಟ್ಟಿ ನೀ ಪೇಳೆ ವನಜಾಕ್ಷಗೆ ಸಖಿ3 ಪರಿ ಪರಿ ಭೂಷಣ ಸರಿ ಬಂದರೆ ಉಪಚರಿಸುವಂತೆ ದೊರಿಯರ ಸತಿಯರ ನರರ ದೃಷ್ಟಿಯ ಬಾಧೆ ಪರಿಚಾರಕರಿಟ್ಟು ಪರಿಹರಿಸ ಪೇಳೆ 4 ಆ ಸುದತಿಯರನ್ನ ಲೇಸಾಗಿ ಭೋಗಿಸೆ ನಾ ನಸೂಯ ಅದರಿಂದ ಲೇಶ ಮಾಡೆ ವಾಸುದೇವವಿಠಲ ಈ ಸಮಯದಲಿ ಎನ್ನ ತಾ ಸುಮುಖದಿಂದ ನೋಡೆ ನಾ ಸುಖಿ ಸಖಿಯೆ5
--------------
ವ್ಯಾಸತತ್ವಜ್ಞದಾಸರು
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಎಲೆ ಎಲೆ ಮುದಿಮೂಳಿ ನಿನ್ನ ಕಲ್ಮಷ ಇನ್ನು ತೊಳಿವಲ್ಲಿ ಪ ತಿಳಿಯದೆ ಸುಮ್ಮನೆ ಕಳಕೊಂಡಿ ವಯವೆಲ್ಲ ಸುಳ್ಳೆ ಸುಳ್ಳಿಗಾಗಿ ಹೋಗಿ ಮೃತ್ಯುಕೈಲಿ ಅ.ಪ ಹಿಡಿದಿದ್ದಿ ಸುಡುಗಾಡ ಪಥವ ಇನ್ನು ಬಿಡವಲ್ಲಿ ಮಾಯಮತವ ಹೆಡತಲೆಮೃತ್ಯು ನಾಳೆ ಅಡರಿ ಪಿಡಿದು ನಿನ್ನ ಕೆಡ ಕೆಡವಿ ಒದೆವಾಗ ಬಿಡಿಸೊರಾರವ್ವ 1 ಇನತು ನಾಚಿಕಿಲ್ಲ ರೋಗಿ ನೀನು ತಿಣಿತಿಣಿಕಾದಿ ಮುದಿಗೂಗಿ ಕನಿಕರಿಲ್ಲದೆ ಯಮನ ಠೊಣಪರ್ಹಿಡಿದು ನಿನ್ನ ಹೊಗೆರ್ಹೊಣಿಕಿಲ್ಹೇರುವಾಗ ನಿನಗ್ಯಾರೆ ಕಾಗಿ 2 ಹಣವೆಷ್ಟಿರಲು ನಿನ್ನದಲ್ಲ ನಾಳೆ ಮನೆಮಾರು ಬರದು ಹಿಂಬಲ ಮಣಿಕಟ್ಟೆಲವು ಮುರಿದ್ಹಣಿಯುವಾಗ ನಿನ್ನ ತನುಜನುಜರು ಯಾರು ಹಣಿಕ್ಹಾಕುವರಿಲ್ಲ 3 ಎಷ್ಟು ನಿನ್ನಗೆ ಬಡೆದಿದಮ್ಮಾ ನಿನ್ನ ಖೊಟ್ಟಿ ಕಡೆಯಿಲ್ಲಮ್ಮ ಉಟ್ಟ ಸೀರೆಯ ಬಿಡಿಸಿ ಕೊಂಡೊಯ್ದು ನಿನ್ನ ಸುಟ್ಟು ಸುರೆಹೊಯ್ವಾಗ ಆಟ ನೋಡಮ್ಮ 4 ಭಿನ್ನ ಭೇದಗಳನ್ನು ಕಡಿ ನಿನ್ನ ಒಡಲೊಳು ತಿಳಕೊಂಡುನೋಡಿ ಧನ್ಯ ಶ್ರೀರಾಮನ ಉನ್ನತ ಚರಣ ಇನ್ನಾದರು ಮನಮುಟ್ಟಿ ನೆನೆಕಂಡ್ಯ ಖೋಡಿ 5
--------------
ರಾಮದಾಸರು
ಎಲ್ಲಾರಿಗೆಲ್ಲಿಹದು ಫುಲ್ಲನಾಭನ ಸೇವೆ ಸುಲಭವಲ್ಲವಿದು ದುರ್ಲಭ ಸದ್ಗುರು ಮಾರ್ಗ ಧ್ರುವ ಕೋಟ್ಯಾನುಕೋಟಿಗೊಬ್ಬ ಮುಟ್ಟಿ ಕಂಡಿದರಲಿ ನೆಟ್ಟಿಸಿ ತನ್ನೊಳು ತಾ ದೃಷ್ಟಿಸಿ ಗುರುಪಾದ 1 ಮಾತಿನಂತಲ್ಲವಿದು ಜ್ಯೋತಿರ್ಮಯದ ಸುಖ ನೆÉೀತಿನೆÉೀತಿವೆಂಬುದು ಶ್ರುತಿ ಸಾರುತದ ವಾಕ್ಯ 2 ಹರಡಿಸಿರಾಗದು ಮೂರುಲೋಕದೊಳಗ ಕರುಣಿಸಿದರಾಹುದು ಗುರು ಕೃಪೆಯಿಂದ 3 ವರ್ಮ ತಿಳಿಯದೆಂದೆಂದು ಕರ್ಮತಮಂಧರಿಗೆ ಬ್ರಹ್ಮ ಸುಖದೋರುವ ಸ್ವಾಮಿ ಸದ್ಗುರು ಧರ್ಮ 4 ಸೇವೆ ಸೂತ್ರನರಿಯದ ಭಾವಿ ಮಹಿಪತಿಗೆ ಭಾವಭಕ್ತಿಯ ಕೊಟ್ಟು ಪಾವನಗೈಸಿದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು