ನಾರಾಯಣಾದ್ರಿ ಕೃತವಾಸ ಶರಣು
ತೋರಯ್ಯ ತವರೂಪ ರವಿಕೋಟಿಭಾಸ ಪ
ಆನತಜನಾಪ್ತ ನೀನೆಂಬೋ ನುಡಿಕೇಳಿ ಮಿಗೆ
ಸಾನುರಾಗದಲಿ ನಡೆತಂದೆ ನಿನ್ನ ಬಳಿಗೆ
ಮಿನಾಂಕಜನಕ ತವಪದಯುಗಾರ್ಚನೆ ಹೀಗೆ
ಜ್ಞಾನ ಪೂರ್ವಕದಿಂದಲೆನಗೆ ದಯದಿ
ಪಾನೀಯಜಾಂಬಕನೆ ಪೊರೆಯೆಂದೆ ನಿನಗೆ 1
ವಾಸುಕೀ ತಪಕೆ ಸಲೆಮೆಚ್ಚಿ ಗಿರಿಯಲಿ ನಿಂದೆ
ಆ ಸಲಿಲದೊಳು ಮಿಂದು ಕರಿವರ ಕರೆಯೆ ಬಂದೆ ಸ್ವಾಮಿ
ವಾಸವಾತ್ಮಜನು ಬಿನ್ನೈಸೆ ನಿನ್ನಯ ಮುಂದೆ
ಆ ಸಮರದೊಳಗೊಲಿವನೆಂದೆ ನಿನಗೆ
ಪಾಸಟಿ ಯಾರು ನೀರಜಭವನ ತಂದೆ 2
ಸುರರು ನಿನ್ನ ಮಹಿಮಾತಿಶಯ
ಬಗೆಯನರಿಯಳು ಲಕುಮಿ ಬದರ ಸನ್ನಿಭಕಾಯ
ಮಾನವ ತಿಳಿವನೆನೋ ತಿರುಮಲರಾಯ
ಖಗÀರಾಜಗಮನ ಕಮನೀಯ ಪಾಹಿ
ಜಗನ್ನಾಥವಿಠಲ ವಿಗತಾಘ ಕವಿಗೇಯ 3